ಬಹಿರಂಗ
ಬಡತನಕ್ಕೆ ಬಾಯಿಲ್ಲವಾಗಿ
- ಜಗದೀಶ್ ಕೊಪ್ಪ
ಕಳೆದ ಮೂವತ್ತು ವರ್ಷಗಳಿಂದ ಜಾಗತಿಕ ತಾಪಮಾನ ಮತ್ತು ಹವಾಮಾನ ಬದಲಾವಣೆಯಿಂದಾಗಿ ಎಂದೂ ಕೇಳರಿಯದ ರೋಗರುಜಿನಗಳು ಮತ್ತು ವೈರಸ್ ಗಳು ಆಧುನಿಕ ಜಗತ್ತನ್ನು ಕಾಡುತ್ತಿವೆ. ಇದರಿಂದಾಗಿ, ಭೂಮಂಡಲದ ಮನುಕುಲ ಮಾತ್ರವಲ್ಲದೆ, ನಾವು ಬೆಳೆಯುತ್ತಿರುವ ಬೆಳೆಗಳು ಮತ್ತು ಪ್ರಾಣಿ ಪಕ್ಷಿಗಳ ಮೇಲೆ ಅಗಾಧವಾದ ಪರಿಣಾವುಂಟಾಗಿದೆ. ಇದರ ಮೂಲ ಕಾರಣ ಮನುಷ್ಯನ ಅಪರಿತ ಆಸೆ ಮತ್ತು ಭೋಗ ಜಗತ್ತಿನ ಮೋಹ ಎಂಬ ವಾಸ್ತವ ಸತ್ಯವನ್ನು ಅರಿಯಲಾರದ ವಿಸ್ಮೃತಿಗೆ ನಾವು ದೂಡಲ್ಪಟ್ಟಿದ್ದೇವೆ.
ಮಹಾತ್ಮ ಗಾಂಧೀಜಿಯವರು “ಪ್ರಕೃತಿ ಇರುವುದು ಮನುಷ್ಯನ ಮಿತವಾದ ಬೇಡಿಕೆಗಳನ್ನು ಪೂರೈಸುವುದಕ್ಕೆ ಮಾತ್ರ, ದುರಾಸೆಗಳನ್ನು ಈಡೇರಿಸುವುದಕ್ಕೆ ಅಲ್ಲ” ಎಂದು ಶತಮಾನದ ಹಿಂದೆ ಹೇಳಿದ ಮಾತನ್ನು ಮರೆತು ನಾವು ವಿನಾಶದತ್ತ ದಾಪುಗಾಲು ಇಡುತ್ತಿದ್ದೇವೆ.
ಈಗ ಭಾರತವನ್ನು ಮಾತ್ರವಲ್ಲದೆ, ವಿಶ್ವವನ್ನು ಕಾಡುತ್ತಿರುವ ಕೊರನಾ ಅಥವಾ ಕೋವಿಡ್ 19 ಎಂಬ ವೈರಸ್ ನ ಸಮಸ್ಯೆಗೆ ಕಾರಣ ಮನುಷ್ಯನೇ ಹೊರತು ಪ್ರಕೃತಿಯಲ್ಲ. ಇದರ ನಿರ್ಮೂಲನೆ ಸ್ವಯಂ ನಿಯಂತ್ರಣ ಅತ್ಯಗತ್ಯ. ಆದರೆ, ಭಾರತದಲ್ಲಿ ಎತ್ತಿಗೆ ಜ್ವರ ಬಂದರೆ, ಎಮ್ಮೆಗೆ ಬರೆ ಹಾಕಿದರು ಎಂಬಂತೆ ಹೇರಲಾಗುತ್ತಿರುವ ಸರ್ಕಾರಿ ಪ್ರಾಯೋಜಿತ ನಿರ್ಬಂಧಗಳು ಬಡವರನ್ನು, ದೀನ ದಲಿತರನ್ನು ಸಂಕಷ್ಟಕ್ಕೆ ಗುರಿಮಾಡಿವೆ.
ಈ ದೇಶದ ಪ್ರಧಾನಿ, ನಡುರಾತ್ರಿ ಪಾಕಿಸ್ತಾನದ ಮೇಲೆನಡೆಸಿದ ಸರ್ಜಿಕಲ್ ದಾಳಿಯ ಮಾದರಿಯಲ್ಲಿ ಮತ್ತು ರಾತ್ರೋರಾತ್ರಿ ನೋಟು ನಿಷೇಧ ಹೇರಿದ ರೀರಿಯಲ್ಲಿ ಕೊರನಾ ನಿಯಂತ್ರಣಕ್ಕೆ ಹೊಸ ಹೊಸ ನಿಯಮ ಜಾರಿಗೆ ತರುತ್ತಿದ್ದಾರೆ. ಭಾರತದಂತಹ ಪ್ರಜಾಪ್ರಭುತ್ವ ವ್ಯವಸ್ಥೆಯ ರಾಷ್ಟ್ರದಲ್ಲಿ ಗಣ ರಾಜ್ಯಗಳ ಮುಖ್ಯಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಅವರ ಸಲಹೆ ಕೇಳದೆ, ಅವತಾರ ಪುರುಷನ ಹಾಗೆ ದಿಡೀರ್ ಟಿ.ವಿ ಯಲ್ಲಿ ಕಾಣಿಸಿಕೊಂಡು ಉಪದೇಶ ಮತ್ತು ನಿರ್ದೇಶನಗಳನ್ನು ಜಾರಿ ಮಾಡುತ್ತಿದ್ದಾರೆ.
ಯಾವುದೇ ಮುನ್ಸೂಚನೆ ನೀಡದೆ ದೇಶಾದ್ಯಂತ ರೈಲು ಮತ್ತು ವಿಮಾನ ಸಂಚಾರ ರದ್ದುಪಡಿಸಿದ್ದು ಅಲ್ಲದೆ, ರಾಜ್ಯಗಳ ನಡುವಿನ ಗಡಿಗಳನ್ನು ಬಂದ್ ಮಾಡಿ ಸಾರಿಗೆ ಸಂಚಾರವನ್ನು ರದ್ದುಗೊಳಿಸಲಾಯಿತು. ದಕ್ಷಿಣ ಭಾರತದಿಂದ ಉತ್ತರ ಭಾರತಕ್ಕೆ ಮತ್ತು ಉತ್ತರದಿಂದ ದಕ್ಷಿಣ ಭಾರತದ ತೀರ್ಥಕ್ಷೇತ್ರಗಳಿಗೆ ಪ್ರವಾಸ ಹೋದ ಯಾತ್ರಿಕರು, ಪ್ರವಾಸಿಗರು ಇದೀಗ ಊಟ, ವಸತಿ ಇಲ್ಲದೆ ಅತಂತ್ರರಾಗಿ ಹಲವು ನಗರಗಳ ಬಸ್ ಮತ್ತು ರೈಲು ನಿಲ್ದಾಣದಲ್ಲಿ ಅಲೆಮಾರಿಗಳಂತೆ, ನಿರ್ಗತಿಕರಂತೆ ಜೀವಿಸುವಂತಾಗಿದೆ.
ಪ್ರದಾನಿ ನರೇಂದ್ರ ಮೋದಿಯವರು ಕೈ ಚಪ್ಪಾಳೆ ತಟ್ಟಿ ಕೋರನಾ ವೈರಸ್ ನಿರ್ಮೂಲಕ್ಕೆ ಶ್ರಮಿಸುತ್ತರಿವ ವೈದ್ಯರನ್ನು ಮತ್ತು ಸ್ವಯಂ ಸೇವಕರಿಗೆ ಗೌರವ ಸೂಚಿಸಿ ಎಂದು ಕರೆ ನೀಡಿದರೆ, ಈ ದೇಶದ ಪ್ರಜ್ಞಾವಂತ ನಾಗರೀಕರೆನಿಸಿಕೊಂಡ ಜನ ಗಂಟೆ, ಜಾಗಟೆ, ತಟ್ಟೆ, ಲೋಟ ಬಾರಿಸುತ್ತಾ ಬೀದಿಗಳಿದರು.ಇಂತಹ ಅನಾಗರೀಕರ ಭಾರತವನ್ನು ಏನೆಂದು ಕರೆಯೋಣ? ಬಾಯಿ ಬಡಿದುಕೊಳ್ಳಿ ಎಂದರೆ, ತಿಕ ಬಡಿದುಕೊಳ್ಳುವ ನಾಗರೀಕರನ್ನು ತಿದ್ದಲು 21 ನೇ ಶತಮಾನವಲ್ಲ, 71 ನೇ ಶತಮಾನ ಬಂದರೂ ಸಾಧ್ಯವಿಲ್ಲ.
ನಾಗರೀಕರಲ್ಲಿ ಅನಗತ್ಯ ಭಯ ಉಂಟು ಮಾಡಿ, ಬೀದಿಯಲ್ಲಿ ಓಡಾಡಿದರೆ, ಕೇಸ್ ಹಾಕುವುದು, ಲಾಠಿ ಪ್ರಯೋಗ ಮಾಡುವುದು, ಅಗತ್ಯ ವಸ್ತುಗಳು ದೊರೆಯದ ಹಾಗೆ ಮಾಡಿ, ಕಾಳಸಂತೆಯ ದರೋಡೆಕೋರರಿಗೆ ಅನುವು ಮಾಡಿಕೊಡುವುದು ಯಾವ ನ್ಯಾಯ?
ಭಾರತಕ್ಕೆ ಅಥವಾ ಪೂರ್ವ ಜಗತ್ತಿನ ರಾಷ್ಟ್ರಗಳಿಗೆ ಇಂತಹ ಪಿಡುಗುಗಳು ಹೊಸತೇನಲ್ಲ. ಈ ದೇಶದಲ್ಲಿ ರೋಗಕ್ಕೆ ಬಲಿಯಾದವರಿಗಿಂತ ಹಸಿವಿನಿಂದ ಸತ್ತ ಬಡವರ ಸಂಖ್ಯೆ ಅಧಿಕವಾಗಿದೆ. ಆದರೆ, ಬಡವರ ಸಾವು, ನೋವು ಇಲ್ಲಿ ಯಾವುದಕ್ಕೂ ಲೆಕ್ಕವಿಲ್ಲ. ಬಡವರು ಈ ದೇಶದಲ್ಲಿ ಬದುಕಿರುವುದು ಓಟು ಒತ್ತುವ ಮತಯಂತ್ರಗಳಾಗಿ ಮಾತ್ರ. ಇದು ಪ್ರತಿಯೊಂದ ರಾಜಕೀಯ ಪಕ್ಷದ ಅಥವಾ ನೇತಾರನ ದೃಢ ನಂಬಿಕೆಯಾಗಿದೆ.
1943 ರಲ್ಲಿ ಬಂಗಾಳ ಪ್ರಾಂತ್ಯದಲ್ಲಿ ಅಂದರೆ, ಈಗಿನ ಪಶ್ಚಿಮ ಬಂಗಾಳ, ಬಂಗ್ಲಾ ದೇಶ ಮತ್ತು ಬಿಹಾರ ರಾಜ್ಯಗಳನ್ನು ಒಳಗೊಂಡ ಪ್ರದೇಶದ ಒಟ್ಟು ಆರು ಕೋಟಿ ಜನಸಂಖ್ಯೆಯಲ್ಲಿ ಮುವತ್ತು ಲಕ್ಷ ಜನತೆ ಹಸಿವು ಮತ್ತು ಸಾಂಕ್ರಾಮಿಕ ರೋಗದಿಂದ ಸತ್ತರು.
ಎರಡನೆಯ ಮಹಾಯುದ್ಧ ನಡೆಯುತ್ತಿದ್ದ ಆ ಸಂದರ್ಭದಲ್ಲಿ ಜಪಾನ್ ಸೇನೆ ನಮ್ಮ ನೆರೆಯ ಬರ್ಮಾ ದೇಶಕ್ಕೆ ಕಾಲಿಟ್ಟಿತ್ತು. ಬಿಟೀಷ್ ಆಧಿಪತ್ಯಕ್ಕೆ ಒಳಪಟ್ಟಿದ್ದ ಭಾರತದ ಮೇಲೆ ಅಂದಿನ ಬ್ರಿಟನ್ ಪ್ರಧಾನಿ ಚರ್ಚಿ ಕೆಲವು ಅಮಾನವೀಯ ನಿರ್ಧಾರಗಳನ್ನು ಕೈ ಗೊಂಡನು.
ಅವುಗಳಲ್ಲಿ ಪ್ರಮುಖವಾದ ನಿರ್ಧಾರವೆಂದರೆ, ಬರ್ಮಾ ದೇಶಕ್ಕೆ ಯಾವುದೇ ಪಡಿತರ ಹೋಗಭಾರದೆಂದು ಕೊಲ್ಕತ್ತ ನಗರದ ಎಲ್ಲಾ ಸಗಟು ದಿನಿಸಿ ಮಾರಾಟದ ಅಂಗಡಿಗಳನ್ನು ಬಂದ್ ಮಾಡಿಸಿದನು. ಜೊತೆಗೆ ಬಂಗಾಳದ ಗೋದಾಮುಗಳಲ್ಲಿ ದಾಸ್ತಾನು ಇಟ್ಟಿದ್ದ ಅಕ್ಕಿ ಮತ್ತು ಗೋಧಿಯನ್ನು ಬಿಡುಗಡೆ ಮಾಡದೆ, ಬ್ರಿಟಿಷ್ ಸೈನಿಕರಿಗೆ ಮೀಸಲಿಟ್ಟನು. ಅಲ್ಲಿನ ಜನತೆ ಒಣಗಿದ ತರಗೆಲೆಗಳಂತೆ ಭೂಮಿಗೆ ಉದುರಿ ಹೋದರು.
ಇಂತಹ ಅನೇಕ ಸಂಕಷ್ಟಗಳನ್ನು, ಕಾಲರಾ, ಸಿಡುಬು, ಮಲೇರಿಯಾ, ಏಡ್ಸ್ ನಂತಹ ಮಹಾಮಾರಿ ಕಾಯಿಲೆಗಳನ್ನು ಎದುರುಸಿರುವ ಭಾರತದ ಜನತೆಗೆ ಕೋವಿಡ್-19 ವೈರಸ್ ಕುರಿತಂತೆ ಈ ರೀತಿ ಅನಗತ್ಯ ಭಯ ಉಂಟು ಮಾಡುವ ಅಗತ್ಯವಿರಲಿಲ್ಲ.
ಸರ್ಕಾರದ ವತಿಯಿಂದ ಏನು ವ್ಯವಸ್ಥೆಯಾಗಿದೆ ಮತ್ತು ಸರ್ಕಾರ ಸೋಂಕನ್ನು ತಡೆಗಟ್ಟಲು ಯಾವ ರೀತಿ ಸಜ್ಜಾಗಿದೆ ಎಂದು ನೋಡಿದರೆ, ಎಲ್ಲವೂ ಶೂನ್ಯ.ಹೋಬಳಿ ಮಟ್ಟದಲ್ಲಿ ಮತ್ತು ನಗರದ ಬಡಾವಣೆಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಳೆದ ಐದಾರು ವರ್ಷಗಳಿಂದ ವೈದ್ಯರಿಲ್ಲ. ಕೊರನಾ ವೈರಸ್ ಕುರಿತು ಸ್ಪೃಷ್ಟ ಮಾಹಿಯಿಲ್ಲ. ಜನರನ್ನು ಗೃಹ ಬಂಧನದಲ್ಲಿ ಇರಿಸಿದರೆ. ಮಾತ್ರ. ರೋಗ ನಿಯಂತ್ರಿಸಬಹುದು ಎಂಬ ನಂಬಿಕೆ ಇಲ್ಲಿ ಚಾಲ್ತಿಯಲ್ಲಿದೆ.
ಈ ದೇಶದ ಶೇಕಡ 52 ಮಂದಿ ದಿನ ನಿತ್ಯದ ದುಡಿಮೆಯ ಮೇಲೆ ಬೀದಿ ಬದಿಯ ಸೊಪ್ಪು, ತರಕಾರಿ, ಹಣ್ಣು, ಮಾರುವವರು, ಕೃಷಿ ಮತ್ತು ಕೂಲಿ ಕಾರ್ಮಿಕರು, ಸೈಕಲ್ ರಿಕ್ಷಾ, ಆಟೋರಿಕ್ಷಾ, ಕೈಗಾಡಿ ತಳ್ಳುವವರು ಇವರ ಕುರಿತು ನಮ್ಮನ್ನಾಳುವ ಸರ್ಕಾರಗಳು ಯೋಚಿಸಲೇ ಇಲ್ಲ.
ಇಂತಹ ಜ್ವಲಂತ ಸಮಸ್ಯೆಗಳತ್ತ ಗಮನ ಹರಿಸಬೇಕಾದ ನಮ್ಮ ಮುದ್ರಣ ಮತ್ತು ದೃಶ್ಯ ಮಾಧ್ಯಮಗಳು ಸಿನಿಮಾ ನಟ, ನಟಿಯರ ಬೆನ್ನು ಹತ್ತಿವೆ. ಯಾವ ನಟ ಅಥವಾ ನಟಿ ಏನು ತಿಂದರು? ಹೇಗೆ ವಿಸರ್ಜಿಸಿದರು. ಮನೆಯಲ್ಲಿ ಹೇಗೆ ವ್ಯಾಯಾಮ ಮಾಡುತ್ತಿದ್ದಾರೆ ಇಂತಹ ಸುದ್ದಿಯನ್ನು ಲದ್ದಿಯ ರೂಪದಲ್ಲಿ ನಮ್ಮ ಮನೆ ಬಾಗಿಲಿಗೆ ತಲುಪಿಸುವಲ್ಲಿ ನಿರತವಾಗಿವೆ.
ರಾಜಕೀಯ ಪಕ್ಷಗಳು ಮತ್ತು ಕಾರ್ಪೋರೇಟ್ ಜಗತ್ತಿನ ಎದುರು ಕಾಲಿಗೆ ಗೆಜ್ಜೆ ಕಟ್ಟಿಕೊಂಡು ಬೆತ್ತಲೆಯಾಗಿ ಕುಣಿಯುತ್ತಿರುವ ಮಾಧ್ಯಮ ಸಂಸ್ಥೆಗಳಲ್ಲಿ ದುಡಿಯುವ ಜೀತದಾಳುಗಳಿಗೆ ಕನಿಷ್ಟ ಮಾನವೀಯತೆ ಇದ್ದರೆ, ಬಡವರ ಕೇರಿಗಳಿಗೆ ಮತ್ತು ಬಡಾವಣೆಗಳಿಗೆ ಹೋಗಬಹುದಿತ್ತು. ಆದರೆ, ಸಿನಿಮಾ ನಟ, ನಟಿ ಮತ್ತು ಕ್ರಿಕೇಟ್ ತಾರೆಯರಿಂದ ಈ ಜಗತ್ತು ಬದುಕಿದೆ ಮತ್ತು ಬೆಳಕಾಗುತ್ತಿದೆ ಎಂದು ನಂಬಿರುವ ಬೃಹಸ್ಪತಿಗಳಿಗೆ ಜ್ಞಾನೋದಯವಾಗುವ ಸಂಭವ ತೀರಾ ಕಡಿಮೆ.
ಇನ್ನು ಹೊಟ್ಟೆ ತುಂಬಿದ ನಮ್ಮ ಕೆಲವು ಬುದ್ದಿ ಜೀವಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ದಿನಕ್ಕೊಂದು ಉಪದೇಶ ಹೊರಡಿಸುತ್ತಿದ್ದಾರೆ. ತಣ್ಣನೆಯ ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು, ಸ್ಕಾಚ್ ವಿಸ್ಕಿ ಹೀರುತ್ತಾ, ಗೋಡಂಬಿ ಮೆಲ್ಲುತ್ತಾ ಪ್ರಧಾನಿಯವರ ಆದೇಶವನ್ನು ಪಾಲಿಸೋಣ ಎನ್ನುವ ಮಹನೀಯರಿಗೆ ನನ್ನದೊಂದು ಕಿವಿಮಾತು.
ದಯವಿಟ್ಟು ನಿಮ್ಮ ಎ.ಸಿ.ಯನ್ನು ಸ್ವಿಚ್ ಆಫ್ ಮಾಡಿ. ಮನೆಯ ಕಿಟಕಿ, ಬಾಗಿಲು ತೆರೆದು ಹೊರ ಜಗತ್ತನ್ನು ನೋಡಿ, ನಿಮ್ಮ ಮನೆಯಾಚೆಯ ಗುಡಿಸಲಿನಲ್ಲಿ ಹೊಲೆ ಉರಿಯದೆ ಇರುವುದು, ದೀಪ ಬೆಳಗದೆ ಇರುವುದನ್ನು ಗಮನಿಸಿ. ಹಸಿವಿನಿಂದ ಅಳುತ್ತಿರುವ ಕಂದಮ್ಮಗಳ ಆಕ್ರಂದನ ನಿಮಗೆ ಕೇಳಿಸದಿದ್ದರೆ, ಆ ಕ್ಷಣದಲ್ಲಿ ನೀವು ಮನುಷ್ಯರಲ್ಲ ಎಂದು ತೀರ್ಮಾನಿಸಿಕೊಳ್ಳಿ, ಏಕೆಂದರೆ, ನೀವು ನಮ್ಮ ನಡುವಿನ ನಕಲಿ ದೇವ ಮಾನವರಂತೆ ಒಣ ವೇದಾಂತದ ಉಪದೇಶ ಮಾಡುವುದಕ್ಕೆ ಮಾತ್ರ ಲಾಯಕ್ಕು.
ಇದರಾಚೆಗೆ ನಿಮ್ಮಿಂದ ಏನನ್ನು ನಿರೀಕ್ಷಿಸಲಾಗದು. “ನೊಂದವರ ನೋವ ನೋಯದವರೆತ್ತ ಬಲ್ಲರೋ?” ಎಂದು ಅಕ್ಕ ಮಾಹಾದೇವಿ ಹಾಡಿರುವುದು ನಿಮಗಾಗಿ ಎಂದು ಈಗಲಾದರೂ ಅರ್ಥ ಮಾಡಿಕೊಳ್ಳಿ. ನಮಸ್ತೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಭಾರತದ ಜನಸಂಖ್ಯೆ ವರವೋ..? ಶಾಪವೋ..?
- ಅಂಬಿಕಾ. ಕೆ
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಬೆಂಗಳೂರು ವಿಶ್ವವಿದ್ಯಾಲಯ
ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.
ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.
ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.
ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.
ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.
ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ
- ವೆನ್ನೆಲಾ ಕೆ.
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು
ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.
ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.
ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.
ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.
ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.
ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಬಹಿರಂಗ
ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!
- ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ ಚಿಂತಕರು, ಬೆಂಗಳೂರು
ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.
ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.
ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.
ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.
ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.
ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.
ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243