Connect with us

ದಿನದ ಸುದ್ದಿ

ಉಳ್ಳವರ ಭಾರತದಲ್ಲಿ ನರಳುತ್ತಿರುವ ಬಡ ಭಾರತ

Published

on

  • ಜಗದೀಶ್ ಕೊಪ್ಪ

ಮ್ಮ ನಡುವಿನ ಪ್ರಸಿದ್ಧ ಅರ್ಥಶಾಸ್ತ್ರಜ್ಞ ಹಾಗೂ ಮಾನವೀಯ ಮುಖದ ಹೃದಯವಂತ ಅಮಾರ್ತ್ಯ ಸೇನ್ ದಶಕದ ಹಿಂದೆ ಭಾರತದ ಅಭಿವೃದ್ಧಿಯನ್ನು ವ್ಯಾಖ್ಯಾನಿಸುತ್ತಾ, “ ಭಾರತದಲ್ಲಿ ಎರಡು ಭಾರತಗಳಿವೆ, ಒಂದು ಉಳ್ಳವರ ಭಾರತ, ಇನ್ನೊಂದು ನರಳುವವರ ಭಾರತ” ಎಂದು ಹೇಳಿದ್ದರು. ಅವರ ಮಾತು ಇಂದಿನ ಭಾರತಕ್ಕೆ ಯಾವುದೇ ಅನುಮಾನವಿಲ್ಲದೆ ಅನ್ವಯಿಸಬಹುದಾಗಿದೆ.

ಜಗತ್ತಿನಾದ್ಯಂತ ಸುನಾಮಿಯಂತೆ ಅಪ್ಪಳಿಸಿರುವ ಕೋವಿಡ್-19 ಅಥವಾ ಕೊರನಾ ವೈರಸ್ ಹಾವಳಿಗೆ ಇದೀಗ ಭಾರತದಲ್ಲಿ ಶ್ರೀಮಂತರು ಅಥವಾ ಮಧ್ಯಮ ವರ್ಗದವರಿಗಿಂತ ಬಡವರನ್ನು ಬಲಿಕೊಡಲಾಗುತ್ತದೆ. ಒಂದು ದೇಶದ ಪ್ರಧಾನಿಯಾದ ವ್ಯಕ್ತಿಗೆ ಈ ದೇಶದ ಆರ್ಥಿಕ ಚಟುವಟಿಕೆಗಳ ಬಗ್ಗೆಯಾಗಲಿ, ದೇಶದ ಬಹುದೊಡ್ಡ ಅಸಂಘಟಿತ ವಲಯವಾದ ಕಾರ್ಮಿಕರ ಕುರಿತಂತೆ ಕಿಂಚಿತ್ತೂ ಕಾಳಜಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಮಧ್ಯ ಚೀನಾದ ವುಹಾನ್ ನಗರದಲ್ಲಿ ಅತಿ ದೊಡ್ಡ ಕಸಾಯಿಖಾನೆ ಕೇಂದ್ರಗಳಿದ್ದು ಈ ನಗರದಿಂದ ಪ್ರಥಮ ಬಾರಿಗೆ ಕಳೆದ ವರ್ಷದ ಕೊನೆಯಲ್ಲಿ ವುಹಾನ್ ನಗರದಲ್ಲಿ ಕೊರನಾ ವೈರಸ್ ಹಾವಳಿ ಕಾಣಿಸಿಕೊಂಡಿತು. ಅದನ್ನು ಅಲ್ಲಿಯ ಸರ್ಕಾರ ಸಮರ್ಥವಾಗಿ ಹಿಮ್ಮೆಟ್ಟಿಸಿತು. ಜೊತೆಗೆ ಅಲ್ಲಿದ್ದ ವಿದೇಶಿ ಪ್ರಜೆಗಳ ಮೂಲಕ ಜಗತ್ತಿನ ಇತರೆ ರಾಷ್ಟ್ರಗಳಿಗೂ ಹರಡಿ ಈಗ ಚೀನಾ ಕಣ್ಮುಚ್ಚಿ ಕುಳಿತಿದೆ.

ಈ ವೈರಸ್ ನ ಬಗ್ಗೆ ಹಾಗೂ ಅವರ ಗುಣ ಲಕ್ಷಣಗಳ ಕುರಿತಂತೆ ವಿಶ್ವ ಆರೋಗ್ಯ ಸಂಸ್ಥೆ ತಮ್ಮ ವೆಬ್ ಸೈಟ್ ನಲ್ಲಿ ವಿವರವಾಗಿ ಪ್ರಕಟಿಸಿದ್ದರೂ ಕೂಡ ಇಲ್ಲಿನ ಆಳುವ ವರ್ಗ ಪುಂಖಾನುಪುಂಖವಾಗಿ ಕಟ್ಟು ಕಥೆಯನ್ನು ಹುಟ್ಟು ಹಾಕಿ ಜನತೆಯಲ್ಲಿ ಭಯ ಮತ್ತು ಭೀತಿಯನ್ನು ಹುಟ್ಟು ಹಾಕಿತು.

ಬ್ಯಾಕ್ಟಿರಿಯಾಗಿಂತ ಅತಿ ಸಣ್ಣ ಹಾಗೂ ಸೂಕ್ಮವಾಗಿರುವ ಈ ವೈರಾಣಣು ಜೀವಕೋಶಗಳ ನೆರವಿಲ್ಲದೆ ವಾತಾವರಣದಲ್ಲಿ ಹೆಚ್ಚು ಕಾಲ ಬದುಕಿರುವುದಿಲ್ಲ. ಯಾವುದೇ ವಸ್ತುವಿನ ಮೇಲೆ ಇದ್ದರೂ ಸಹ ಕೇವಲ ನಾಲ್ಕು ಗಂಟೆಯ ಅವಧಿಯಲ್ಲಿ ಇದು ಸಾಯುತ್ತದೆ ಎಂದು ವಿಶ್ಸಸಂಸ್ಥೆಯ ವರದಿಯನ್ನು ಉಲ್ಲೇಖಿಸಿ ಬೆಂಗಳೂರಿನ ಮಾನಸಿಕ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಗಿರೀಶ್ ಉಪಾಧ್ಯಾಯ ವಿವರಿಸಿದ್ದಾರೆ. ಈ ವೈರಾಣು ಬಾಯಿ ಅಥವಾ ಮೂಗಿನ ಉಸಿರಾಟದ ಮೂಲಕ ಮನುಷ್ಯನೊಳಗೆ ಪ್ರವೇಶ ಪಡೆಯುವ ಸಾಧ್ಯತೆ ಇದ್ದು, ನಿರ್ಧಿಷ್ಟ ಅಂತರ ಕಾಪಾಡಿಕೊಳ್ಳಬೇಕು ಮತ್ತು ಕೈಗಳನ್ನು ಶುಚಿಯಾಗಿಟ್ಟುಕೊಳ್ಳಬೇಕು ಎಂದು ಮುನ್ನಚ್ಚೆರಿಕೆಯ ಕ್ರಮಗಳನ್ನು ವಿವರಿಸಿದ್ದಾರೆ.

ಭಾರತಕ್ಕೆ ಈ ವೈರಾಣು ಪ್ರವೇಶ ಪಡೆದದ್ದು ವಿದೇಶಗಳಲ್ಲಿದ್ದು ಭಾರತಕ್ಕೆ ಹಿಂತಿರುಗಿದ ಭಾರತೀಯರಿಂದ, ಈ ಕುರಿತಂತೆ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ತಪಾಸಣೆಯನ್ನು ಕಳೆದ ಜನವರಿಯಲ್ಲಿ ಜಾರಿಗೆ ತರಬಹುದಿತ್ತು. ಆದರೆ, ಹೆದರಿದವರ ಮೇಲೆ ಸತ್ತ ಹಾವನ್ನು ಎಸೆದರು ಎಂಬ ಗಾದೆಯಂತೆ ಸಿರಿವಂತರನ್ನು ನಿಯಂತ್ರಿಸಲಾರದ ಪ್ರಧಾನಿಯೆಂಬ ಮಹಾನ್ ನಟರು ದೇಶದ ಎಲ್ಲಾ ಪ್ರಜೆಗಳ ಮೇಲೆ ಬರೆ ಎಳೆದರು.

ಶ್ರೀಮಂತರು ಮತ್ತು ಅವರ ಮಕ್ಕಳನ್ನು ವಿದೇಶದಿಂದ ಕರೆತರಲು ವಿಮಾನ ಯಾನ, ವಿಶೇಷ ವಿಮಾನ ವ್ಯವಸ್ಥೆ ಮಾಡಿದ ಪ್ರಧಾನಿಗೆ ದೇಶಾದ್ಯಂತ ಜಾರಿಗೆ ತಂದ ಲಾಕ್ ಡೌನ್ ವ್ಯವಸ್ಥೆಗೆ ಮುನ್ನ ದೇಶದ ಮಹಾನ್ ನಗರಗಳಲ್ಲಿ ಕಟ್ಟಡ, ರಸ್ತೆ, ಹೋಟೆಲ್ ಇತ್ಯಾದಿ ವಲಯಗಳಲ್ಲಿ ದುಡಿಯುತ್ತಿರುವ ಸೂರಿಲ್ಲದ ಬಡ ಕಾರ್ಮಿಕರಿಗೆ ಕನಿಷ್ಠ ರೈಲುಗಳ ಮೂಲಕ ಅವರನ್ನು ಊರಿಗೆ ತಲುಪಿಸುವ ಯೋಚನೆ ಹೊಳೆಯಲಿಲ್ಲ.

ಎಂತಹ ಅಯೋಗ್ಯರು ಮತ್ತು ಮುಠಾಳರು ಕೇಂದ್ರ ಸಚಿವ ಸಂಪುಟದಲ್ಲಿ ಇದ್ದಾರೆ ಎಂದರೆ, ಹಳೆಯ ರಾಮಾಯಣ, ಮಹಾಭಾರತ ಧಾರವಾಹಿಗಳನ್ನು ದೂರದರ್ಶನದಲ್ಲಿ ಮರು ಪ್ರಸಾರ ಮಾಡುತ್ತಿದ್ದೇವೆ ನೋಡಿ ಎಂದು ಪ್ರಕಾಶ್ ಜಾವೇದ್ಡ್ಕರ್ ಎಂಬ ಸಚಿವ ಹೇಳಿಕೆ ನೀಡುತ್ತಾನೆ. ಈ ಅವಿವೇಕಿಗೆ ವಲಸೆ ಕಾರ್ಮಿಕರು ಬದುಕುವ ಸೂರಿನಡಿ, ವಿದ್ಯುತ್ ಅಥವಾ ಟಿ.ವಿ. ಇಲ್ಲ ಎಂಬ ಕನಿಷ್ಠ ವಿವೇಕವೂ ಇಲ್ಲ.

ದೇಹಲಿಯಲ್ಲೇ ಇರುವ ಪ್ರಧಾನಿ ಮತ್ತು ಅವರ ನಲವತ್ತು ಮಂದಿ ಸಚಿವ ಸಂಪುಟದ ಮೂರ್ಖ ಸಚಿವರು ದೆಹಲಿಯ ಕಾಶ್ಮೀರಿ ಗೇಟ್, ಜಾಮೀಯ ಮಸೀದಿ ಪ್ರದೇಶ, ಕರೋಲ್ ಬಾಗ್ ಹಾಗೂ ಕನಾಟ್ ಸರ್ಕಲ್ ಪ್ರದೇಶಗಳಲ್ಲಿ ರಾತ್ರಿ ವೇಳೆ ಸಂಚರಿಸಿದ್ದರೆ, ವಲಸೆ ಕಾರ್ಮಿಕರು ಭೂಮಿಯನ್ನು ಹಾಸಿಗೆ ಮಾಡಿಕೊಂಡು, ಆಕಾಶವನ್ನು ಹೊದಿಕೆಯನ್ನಾಗಿಸಿಕೊಂಡು ಮಲಗಿರುವ ದೃಶ್ಯ ಕಾಣುತ್ತಿತ್ತು. ಬಡವರ ಕಷ್ಟ ಅರಿವಾಗುತ್ತಿತ್ತು. ದೇಶದ ಬಹುತೇಕ ಮಹಾನಗರಗಳಲ್ಲಿ ಲಕ್ಷಾಂತರ ಮಂದಿ ಇಂತಹ ದುಸ್ಥಿತಿಯಲ್ಲಿ ಬದುಕು ಕಟ್ಟಿಕೊಂಡಿದ್ದಾರೆ.ಇಂತಹವರು, ಹಣ್ಣು, ತರಕಾರಿ, ಸೊಪ್ಪು ಮಾರುವವರು ಮತ್ತು ರೈತರ ಬವಣೆಗಳನ್ನು ಗಣನೆಗೆ ತೆಗೆದುಕೊಳ್ಳದೆ, ಪೊಲೀಸರಿಗೆ ಅಧಿಕಾರ ನೀಡಲಾಯಿತು.

ಕೈಯಲ್ಲಿ ಸುತ್ತಿಗೆ ಹಿಡಿದವನಿಗೆ ಜಗತ್ತಿನಲ್ಲಿರುವ ವಸ್ತುಗಳು ಮೊಳೆಯಂತೆ ಕಾಣುತ್ತವೆ ಎಂಬ ಮಾತಿನಂತೆ ಪೊಲೀಸರು ಕೈಯಲ್ಲಿ ಲಾಠಿ ಹಿಡಿದು ಎಲ್ಲರ ಮೇಲೆ ಬೀಸುತ್ತಾ, ತಮ್ಮ ರಾಕ್ಷಸತನವನ್ನು ಮೆರೆಯುತ್ತಿದ್ದಾರೆ. ಮೈಸೂರಿನ ಚೆಲುವಾಂಬ ಎಂಬ ಮಕ್ಕಳ ಹಾಗೂ ಹೆರಿಗೆ ಆಸ್ಪತ್ರೆ ಹಾಗೂ ಕೆ.ಆರ್. ಆಸ್ಪತ್ರೆ ಬಳಿ ರೋಗಿಗಳಿಗೆ ತಿನ್ನಲು ಹಣ್ಣುಗಳು ದೊರೆಯುತ್ತಿಲ್ಲ. ಕುಡಿಯಲು ಒಂದು ಲೋಟ ಬಿಸಿ ಹಾಲು ಅಥವಾ ಬಿಸಿ ಬ್ರೆಡ್ ಸಿಗುತ್ತಿಲ್ಲ. ಮೈಸೂರಿನಲ್ಲಿ ಒಂದೂವರೆ ಸಾವಿರ ವಿದೇಶಿ ಪ್ರವಾಸಿಗಳು ಉಳಿದುಕೊಂಡಿದ್ದು ಅವರು ಉಪಯೋಗಿಸುವ ಲಘು ಆಹಾರವಾದ ಹಣ್ಣು, ಬ್ರೆಡ್, ಕೇಕ್, ಬಿಸ್ಕೆಟ್, ಇತ್ಯಾದಿ ವಸ್ತುಗಳಿಗಾಗಿ ಬೀದಿ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ.. ಇದು ವ್ಯಸ್ಥೆಯ ಕ್ರೌರ್ಯವಲ್ಲದೆ ಇನ್ನೇನು?

ರೋಗ ನಿಯಂತ್ರಣಕ್ಕೆ ಸಭೆ, ಸಮಾರಂಭ, ಸಿನಿಮಾ ಹಾಲ್, ಬೃಹತ್ ಮಾಲ್ ಗಳನ್ನು ಮುಚ್ಚಿಸಿ, ನಿಗದಿತ ಮಾರ್ಗದಲ್ಲಿ ತಪಾಸಣೆ ಮಾಡಿ ಸ್ಥಳಿಯರ ಓಡಾಟಕ್ಕೆ ಅನುವು ಮಾಡಿಕೊಡಬಹುದಿತ್ತು. ಅದೇ ರೀತಿ ದಿನಸಿ ಅಂಗಡಿ ವಸ್ತುಗಳನ್ನು ಸರಬರಾಜು ಮಾಡುವ ಮಂಡಿಗಳಿಗೆ ನಿಗದಿತ ಅವಧಿಗೆ ಅವಕಾಶ ನೀಡಬಹುದಿತ್ತು., ಇವೆಲ್ಲವನ್ನೂ ಬದಿಗೆ ಸರಿಸಿ ತರಕಾರಿ, ಮತ್ತು ಹಣ್ಣಿನ ಮಾರುಕಟ್ಟೆಗಳನ್ನು ಮುಚ್ಚಿಸಿ, ಕಾರ್ಮಿಕರ ಜೊತೆಗೆ ರೈತರಿಗೂ ಈ ಸರ್ಕಾರ ಬರೆ ಎಳಿಯಿತು.

ಕೇವಲ ಅವದೂತನಂತೆ ಅವತರಿಸಿ ರೇಡಿಯೊ ಮತ್ತು ಟಿ.ವಿಗಳಲ್ಲಿ ಭಾಷಣ ಮಾಡುವ ಪ್ರಧಾನಿಗೆ ರಾಜ್ಯ ಸರ್ಕಾರಗಳಿಗೆ ಯಾವುದೇ ಆರ್ಥಿಕ ನೆರವು ನೀಡುವ ಮನಸ್ಸಿಲ್ಲ, ಕಳೆದ ಆಗಸ್ಟ್ ನಲ್ಲಿ ಕರ್ನಾಟಕದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ 50 ಸಾವಿರ ಕೋಟಿ ಪರಿಹಾರಕ್ಕೆ ಮನವಿ ಸಲ್ಲಿಸಿದರೆ, ಕೇಂದ್ರದಿಂದ ದೊರೆತ ಪರಿಹಾರ ಎರಡು ಕಂತುಗಳಲ್ಲಿ ( 600+1200) ಬರ ಪರಿಹಾರವೂ ಸೇರಿ ಕೇವಲ 1800 ಕೋಟಿ ರೂಪಾಯಿಗಳು ಮಾತ್ರ. ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಇಪ್ಪತ್ತೈದು ಬಿ.ಜೆ.ಪಿ. ಸಂಸದರು ಬಾಯಿಗೆ ಬಗನಿ ಗೂಟ ಜಡಿದುಕೊಂಡು ಮೌನವಾಗಿದ್ದಾರೆ.

ಇಡೀ ದೇಶದಲ್ಲಿ ಕೊರನಾ ಸೊಂಕಿನಲ್ಲಿ ಮೂರನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ ಪರಿಹಾರ ಸಿಕ್ಕಿಲ್ಲಿ. ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೇಂದ್ರ ಸರ್ಕಾರ ಏನೂ ಕೊಡದಿದ್ದರೂ ಚಿಂತೆ ಇಲ್ಲ, ಅವರನ್ನು ಅಧಿಕಾರದ ಕುರ್ಚಿಯಿಂದ ಕದಲಿಸದಿದ್ದರೆ ಸಾಕು ಎಂಬ ಮನಸ್ಥಿತಿಯಲ್ಲಿದ್ದಾರೆ. ಇಂತಹವರನ್ನ ಆಯ್ಕೆ ಮಾಡಿಕಳಿಸಿದ ಗೋಮೂತ್ರ, ಸಗಣಿ, ಶಂಖ ಮತ್ತು ಜಾಗಟೆಯ ಗಿರಾಕಿಗಳು ಒಮ್ಮೆ ಎದೆಮುಟ್ಟಿಕೊಂಡು ತಮ್ಮ ಆತ್ಮಸಾಕ್ಷಿಯನ್ನು ಪರೀಕ್ಷಿಸಿಕೊಳ್ಳಬೇಕು.

ಬಿ.ಎಲ್. ಸಂತೋಷ್ ಎಂಬ ಅವಿವೇಕಿಯೊಬ್ಬನನ್ನು ಬಿ.ಜೆ.ಪಿ. ಪಕ್ಷದ ರಾಷ್ಟ್ರಮಟ್ಟದ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಈತ ಎಂತಹ ವಿಕೃತ ಮನಸ್ಥಿತಿಯವನು ಎಂದರೆ, ಬೆಂಗಳೂರು ಬಳಿಯ ಅತ್ತಿಬೆಲೆಯ ಗಡಿಯಿಂದ ತಮಿಳುನಾಡಿನ ಚೆನ್ನೈ ನಗರ ಕೇವಲ ನೂರು ಕಿಲೊಮೀಟರ್ ಗಿಂತಲೂ ಕಡಿಮೆಯಿದೆ, ಕಾರ್ಮಿಕರು ನಡೆದುಕೊಂಡು ಹೋಗಲಿ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾನೆ.

ಈ ದುರಂಕಾರಿಗೆ ಬೆಂಗಳೂರು-ಚೆನ್ನೈ ನಡುವಿನ ಅಂತರ 347 ಕಿ.ಮಿ. ಎಂಬ ಕನಿಷ್ಠ ಜ್ಞಾನವೂ ಇಲ್ಲ. ಭೌಗೂಳಿಕ ಜ್ಞಾನವಿಲ್ಲದ ಇಂತಹ ಜಾತಿಯ ಕ್ರಿಮಿಗಳು ಈಗ ರಾಷ್ಟ್ರ ಮಟ್ಟದಲ್ಲಿ ನಾಯಕರಾಗಿ ಬೆಳೆಯುತ್ತಿದ್ದಾರೆ. ಇವುಗಳನ್ನು ಪ್ರಶ್ನಿಸಬೇಕಾದ ಮಾಧ್ಯಮಗಳು ಈಗ ಆರ್.ಎಸ್.ಎಸ್, ನ ಶಾಖಾಮಠಗಳಾಗಿರುವ ಕಾರಣ ದಿವ್ಯ ಮೌನಕ್ಕೆ ಶರಣಾಗಿವೆ.

ಕಾಲ್ನಡಿಗೆಯಲ್ಲಿ ಹುಟ್ಟಿದ ಊರಿನತ್ತ ಪ್ರಯಾಣ ಹೊರಟ ನತದೃಷ್ಟರು, ಆಹಾರ, ನೀರು ಇಲ್ಲದೆ, ನಡುರಸ್ತೆಯಲ್ಲಿ ಬಸವಳಿಯುತ್ತಾ ಸಾಗುತ್ತಿದ್ದಾರೆ. ನಾವು ಮೌನ ಸಾಕ್ಷಿಗಳಾಗಿದ್ದೇವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending