Connect with us

ಬಹಿರಂಗ

ಆರ್ಥಿಕ ಸಂಕಟಗಳ ಜತೆ ಈಗ ಬೆಲೆಯೇರಿಕೆಯ ಹೊರೆ

Published

on

  • ನವ-ಉದಾರವಾದಿ ಧೋರಣೆಗಳಿಂದ ಉಂಟಾಗಿರುವ ಕೆಟ್ಟಪರಿಸ್ಥಿತಿ ನೋಟುರದ್ಧತಿ ಮತ್ತು ಕೆಟ್ಟದಾಗಿ ರೂಪಿಸಿ, ಜಾರಿಗೊಳಿಸಿದ ಜಿಎಸ್‌ಟಿಯಿಂದಾಗಿ ಮತ್ತಷ್ಟು ಉಲ್ಬಣಗೊಂಡು ಆರ್ಥಿಕ ಬೆಳವಣಿಗೆ ಕುಸಿಯುವಂತೆ ಮಾಡಿದೆ. ಈಗ ಅದಕ್ಕೆ ಜೀವನಾವಶ್ಯಕ ಸಾಮಗ್ರಿಗಳಲ್ಲಿ ತೀವ್ರ ಹಣದುಬ್ಬರದ ಸಮಸ್ಯೆಯೂ ಸೇರಿಕೊಂಡಿದೆ. ಜನಸಾಮಾನ್ಯರು ಒಂದೆಡೆಯಲ್ಲಿ, ಇಳಿಯುತ್ತಿರುವ ಕೂಲಿ-ಸಂಬಳಗಳು ಮತ್ತು ಏರುತ್ತಿರುವ ನಿರುದ್ಯೋಗ, ಇನ್ನೊಂದೆಡೆಯಲ್ಲಿ ಆಹಾರ ಸಾಮಗ್ರಿಗಳು ಮತ್ತು ಇತರ ಆವಶ್ಯಕ ಸರಕುಗಳ ಬೆಲೆಯೇರಿಕೆಗಳ ಎರಡೆರಡು ಹೊರೆಗಳನ್ನು ಹೊರಬೇಕಾಗಿ ಬಂದಿದೆ. ಮೋದಿ ಸರಕಾರದ ಹಾನಿಕಾರಕ ಧೋರಣೆಗಳಿಗೆ ಜನಗಳ ಪ್ರತಿರೋಧವನ್ನು ಕಟ್ಟಿ ಬೆಳೆಸುವುದು ಮತ್ತು ವರ್ಗ ಹಾಗೂ ಸಾಮೂಹಿಕ ಹೋರಾಟಗಳನ್ನು ತೀವ್ರಗೊಳಿಸುವುದಲ್ಲದೆ ಈಗ ಬೇರೆ ಯಾವ ಮಾರ್ಗವೂ ಇಲ್ಲವಾಗಿದೆ.

-ಪ್ರಕಾಶ ಕಾರಟ್

ಭಾರತೀಯ ಅರ್ಥವ್ಯವಸ್ಥೆ ಭೀಷಣ ಇಕ್ಕಟ್ಟಿನಲ್ಲಿ ಸಿಲುಕಿದೆ. ಸರಕಾರ 2019-20ರಲ್ಲಿ ಜಿಡಿಪಿ ಬೆಳವಣಿಗೆ ದರ 5% ಇರಬಹುದು ಎಂದು ಲೆಕ್ಕ ಹಾಕಿ ಹೇಳಿದೆ. ಇದು ಜುಲೈ 2019ರಲ್ಲಿ ಮಂಡಿಸಿದ ಬಜೆಟಿನಲ್ಲಿ ಅಂದಾಜು ಮಾಡಿದ್ದ ದರಕ್ಕಿಂತ ಪೂರ್ಣ 2%ದಷ್ಟು ಕಡಿಮೆ. ಬಹುಶಃ ವಾಸ್ತವ ಜಿಡಿಪಿ ದರ ಇನ್ನೂ ಕೆಟ್ಟದಾಗಿರಬಹುದು, ಏಕೆಂದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯ ಬೆಳವಣಿಗೆ ದರ 4.6% ಇರಬಹುದು ಎಂಬ ಅಂದಾಜಿಗೆ ಬಂದಿದೆ. ಆದರೆ ಆರ್ಥಿಕ ರಂಗದಲ್ಲಿನ ಮೋದಿ ಅನಾಹುತದ ಕತೆ ಇಲ್ಲಿಗೇ ಮುಗಿಯುವುದಿಲ್ಲ.

ಇತ್ತೀಚಿನ ಸುದ್ದಿ ಎಂದರೆ ಹಣದುಬ್ಬರ ದರ ಡಿಸೆಂಬರ್ 2019ರಲ್ಲಿ 7.35%ಕ್ಕೆ ಏರಿದೆ. ಇದು ಜುಲೈ 2014ರ ನಂತರದ ಅತಿ ಹೆಚ್ಚಿನ ಹಣದುಬ್ಬರ ದರ. ಬಳಕೆದಾರ ಸೂಚ್ಯಂಕ ಈ ದರದಲ್ಲಿ ಏರಿದ್ದರೆ, ಆಹಾರ ಸಾಮಗ್ರಿಗಳ ಸೂಚ್ಯಂಕ ಇನ್ನೂ ಹೆಚ್ಚು, 14.12% ದಷ್ಟು. ಈರುಳ್ಳಿ, ಆಲೂಗಡ್ಡೆ, ತರಕಾರಿಗಳು ಹಾಗೂ ಬೇಳೆಕಾಳುಗಳ ಬೆಲೆಗಳಲ್ಲಿ ತೀವ್ರ ಏರಿಕೆ ಉಂಟಾಗಿದೆ. ಸಗಟು ಬೆಲೆ ಸೂಚ್ಯಂಕ ಡಿಸೆಂಬರ್‌ನಲ್ಲಿ 2.6%ಕ್ಕೇರಿದೆ.

ಇದು ಕೂಡ ಕಳೆದ ಏಳು ತಿಂಗಳಲ್ಲೇ ಅತಿ ಹೆಚ್ಚಿನ ದರ. ಪೆಟ್ರೋಲ್ ಮತ್ತು ಡಿಸೆಲ್ ದರಗಳು 2019ರ ಇಡೀ ವರ್ಷದಲ್ಲಿ ಸತತವಾಗಿ ಏರುತ್ತ ಬಂದಿವೆ, ಡೀಸೆಲ್ ಬೆಲೆಯಲ್ಲಿ ಲೀಟರಿಗೆ ರೂ.5.10 ಮತ್ತು ಪೆಟ್ರೋಲ್ ಬೆಲೆಗಳಲ್ಲಿ ರೂ.6.30 ಏರಿಕೆಯಾಗಿದೆ. ಇದು ಹಣದುಬ್ಬರವನ್ನು ಹೆಚ್ಚಿಸಿದೆ. ಮಧ್ಯ-ಪ್ರಾಚ್ಯ ಪ್ರದೇಶದಲ್ಲಿ ಇರಾನ್ ಬಗ್ಗೆ ಅಮೆರಿಕಾದ ಆಕ್ರಮಣಕಾರೀ ನಿಲುವಿನಿಂದಾಗಿ ಉಂಟಾಗಿರುವ ಸೆಳೆತಗಳನ್ನು ನೋಡಿದರೆ, ಈ ವಿಷಯದಲ್ಲಿಯೂ ಪರಿಸ್ಥಿತಿ ಸುಧಾರಿಸುವ ಸಾಧ್ಯತೆಗಳು ಕಾಣುತ್ತಿಲ್ಲ.

ಭಾರತೀಯ ಅರ್ಥವ್ಯವಸ್ಥೆ ಒಂದು ಸ್ಥಗಿತತೆಯತ್ತ ಜಾರುತ್ತಿದೆಯಷ್ಟೇ ಅಲ್ಲ, ಅದೇ ವೇಳೆಗೆ ಹಣದುಬ್ಬರವನ್ನೂ ಎದುರಿಸುತ್ತಿದೆ ಎಂದು ಹಲವು ಆರ್ಥಿಕ ತಜ್ಞರು ಗಮನಿಸಿದ್ದಾರೆ. ಅಂದರೆ, ಭಾರತದ ಅರ್ಥವ್ಯವಸ್ಥೆ ಈಗ ಸ್ಥಗಿತುಬ್ಬರ(ಸ್ಟಾಗ್‌ಫ್ಲೇಶನ್)ವನ್ನು ಅನುಭವಿಸುತ್ತಿದೆ- ಬೆಲೆಗಳು ಏರುತ್ತಿವೆ ಮತ್ತು ಉತ್ಪಾದನೆಯ ಬೆಳವಣಿಗೆ ನಿಧಾನಗೊಳ್ಳುತ್ತಿದೆ.

ಹಣಕಾಸು ಮಂತ್ರಿಗಳು ಜುಲೈ 2019ರಲ್ಲಿ ಮಂಡಿಸಿದ ಬಜೆಟ್ ಚಿಂದಿಯಾಗಿ ಬಿಟ್ಟಿದೆ. ಅದರಲ್ಲಿ ಪ್ರಸ್ತುತ ಪಡಿಸಿದ ಅಂಕೆ-ಸಂಖ್ಯೆಗಳೆಲ್ಲವೂ ಸಂಪೂರ್ಣವಾಗಿ ಏರುಪೇರಾಗಿವೆ- ಅಲ್ಲಿ ಹೇಳಿರುವ ಮೊತ್ತಕ್ಕೂ ಈಗ ಕಾಣುತ್ತಿರುವ ಮೊತ್ತಕ್ಕೂ ಅಪಾರ ಅಂತರ ಉಂಟಾಗಿದೆ. ಸರಕಾರ, ಅರ್ಥವ್ಯವಸ್ಥೆ ನಿಧಾನಗೊಳ್ಳುತ್ತಿದೆ ಎಂದು ಅಧಿಕೃತವಾಗಿ ಒಪ್ಪಿಕೊಳ್ಳದಿದ್ದರೂ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸಲಿಕ್ಕೆಂದು ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಹೇಳುತ್ತಿದೆ.

ಆದರೆ ಅವೆಲ್ಲವೂ ಭಾರತೀಯ ದೊಡ್ಡ ಬಂಡವಳಿಗರು ಮತ್ತು ವಿದೇಶಿ ಹಣಕಾಸು ಬಂಡವಾಳಕ್ಕೆ ಅಪಾರ ತೆರಿಗೆ ರಿಯಾಯ್ತಿಗಳನ್ನು ಒದಗಿಸುವ ಕ್ರಮಗಳಷ್ಟೇ. ಅದು ಕೈಗೊಂಡ ಮೊದಲ ಕ್ರಮವೆಂದರೆ ಬಜೆಟಿನಲ್ಲಿ ವಿಧಿಸಿದ್ದ ಬಂಡವಾಳ ಗಳಿಕೆ ತೆರಿಗೆಯ ಮೇಲಿನ ಸರ್ಚಾರ್ಜನ್ನು ತೆಗೆದು ವಿದೇಶಿ ಹೂಡಿಕೆದಾರರನ್ನು ಸಮಾಧಾನಗೊಳಿಸುವುದು. ನಂತರ, ರಫ್ತುಗಳಿಗೆ 50,000ಕೋಟಿ ರೂ.ಗಳ ಮತ್ತು ರಿಯಲ್ ಎಸ್ಟೇಟ್ ಮತ್ತು ವಸತಿ ವಲಯಕ್ಕೆ 20,000 ಕೋಟಿ ರೂ.ಗಳ ಸಬ್ಸಿಡಿಗಳ ಪ್ರಕಟಣೆ ಮಾಡಲಾಯಿತು.

ಅರ್ಥವ್ಯವಸ್ಥೆ ಏನೇನೂ ಉತ್ತಮಗೊಳ್ಳದಿದ್ದಾಗ, ಕಾರ್ಪೊರೇಟ್ ತೆರಿಗೆ ದರವನ್ನು 22%ಕ್ಕೆ ಇಳಿಸಿ ಕಾರ್ಪೊರೇಟ್ ವಲಯಕ್ಕೆ 1.45 ಲಕ್ಷ ಕೋಟಿ ರೂ.ಗಳ ಭಾರೀ ಕೊಡುಗೆಯನ್ನು ನೀಡಲಾಯಿತು. ಇದಕ್ಕೆ ಮೊದಲು 400 ಕೋಟಿ ರೂ,ಗಳಿಗಿಂತ ಹೆಚ್ಚಿನ ವಹಿವಾಟು ಇದ್ದ ಕಂಪನಿಗಳಿಗೆ 30% ಮತ್ತು ಇತರೆಲ್ಲ ಕಂಪನಿಗಳಿಗೆ 25% ಕಾರ್ಪೊರೇಟ್ ತೆರಿಗೆ ಇತ್ತು. ಇದರ ಫಲಿತಾಂಶವೆಂದರೆ, ರಿಝರ್ವ್ ಬ್ಯಾಂಕ್‌ನ್ನು ದಬಾಯಿಸಿ ಅದರ ಗಳಿಕೆಯ 1.76ಲಕ್ಷ ಕೋಟಿ ರೂ.ಗಳನ್ನು ಪಡೆದುಕೊಂಡ ನಂತರವೂ ಸರಕಾರದ ಹಣಕಾಸು ಕೊರತೆ ಮತ್ತಷ್ಟು ಹೆಚ್ಚುವಂತಾಗಿದೆ.

ಅರ್ಥವ್ಯವಸ್ಥೆ ನಿಧಾನಗೊಳ್ಳುತ್ತಿರುವುದರಿಮದಾಗಿ ತೆರಿಗೆ ಸಂಗ್ರಹಗಳೂ ಬಜೆಟಿನಲ್ಲಿ ಅಂದಾಜು ಮಾಡಿದ್ದಕ್ಕಿಂತ ಬಹಳ ಕೆಳಮಟ್ಟದಲ್ಲಿವೆ. ಇದು ಮುಖ್ಯವಾಗಿ ರಾಜ್ಯಗಳನ್ನು ಬಾಧಿಸಿದೆ, ಏಕೆಂದರೆ ಇದರಿಂದಾಗಿ ಅವುಗಳಿಗೆ ಕೇಂದ್ರ ಸರಕಾರ ತಾನು ಕೊಡಬೇಕಾಗಿರುವ ಜಿಎಸ್‌ಟಿ ಪರಿಹಾರ ಪಾವತಿಗಳನ್ನು ಮುಂದೂಡಿದೆ. ಸರಕಾರದ ಕ್ರಮಗಳು ಅರ್ಥವ್ಯವಸ್ಥೆಯಲ್ಲಿನ ಬೇಡಿಕೆಯ ಬಿಕ್ಕಟ್ಟನ್ನು ನಿಭಾಯಿಸಲು ಏನೂ ಮಾಡಲಿಲ್ಲ, ಆದರೆ ಸರಕಾರದ ಆದಾಯಗಳನ್ನು ಮಾತ್ರ ಇಳಿಸಿತು.

ಮನರೇಗ ಯೋಜನೆಗೆ ಹಣಕಾಸು ನೀಡಿಕೆಯನ್ನು ವಿಸ್ತರಿಸುವುದು, ಕೃಷಿ, ಗ್ರಾಮೀಣ ಮೂಲರಚನೆ ಮತ್ತು ಸಾಮಾಜಿಕ ವಲಯಗಳಲ್ಲಿ ಸಾರ್ವಜನಿಕ ಹೂಡಿಕೆಗಳನ್ನು ಹೆಚ್ಚಿಸುವುದು ಮತ್ತು ನಗರಪ್ರದೇಶಗಳಲ್ಲೂ ಒಂದು ಉದ್ಯೋಗ ಖಾತ್ರಿ ಯೋಜನೆಯನ್ನು ಆರಂಭಿಸುವುದು ಮುಂತಾದ ಜನಗಳ ಕೈಗಳಲ್ಲಿ ಹಣವನ್ನು ಇಡಬಹುದಾಗಿದ್ದ ಕ್ರಮಗಳನ್ನು ಅನುಸರಿಸುವ ಬದಲು, ಆಮೂಲಕ ಕೃಷಿಯ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸುವ ಬದಲು, ಸರಕಾರ ಈ ಎಲ್ಲ ವಲಯಗಳಲ್ಲೂ ಹಣನೀಡಿಕೆಯಲ್ಲಿ ಕಡಿತ ಮಾಡುತ್ತಿದೆ.

ಮುಂದಿನ ಆರು ವರ್ಷಗಳಲ್ಲಿ ಮೂಲರಚನೆಯಲ್ಲಿ 102 ಲಕ್ಷ ಕೋಟಿ ರೂ.ಗಳನ್ನು ಹೂಡಲಾಗುವುದು ಎಂದು ಬಹಳಷ್ಟು ಪ್ರಚಾರ ಮಾಡಲಾಯಿತು. ಆದರೆ ಐದು ವರ್ಷಗಳಲ್ಲಿ ಹಾಗೆ ಮಾಡುವ ವಚನ ದುರ್ಬಲಗೊಂಡಿದೆ, ಮಾತ್ರವಲ್ಲ, ಅದು ಪ್ರಚಾರ ಮಾಡಿದ ಪ್ರಮಾಣದ ಹತ್ತಿರವೂ ಬರುವಂತೆ ಕಾಣುತ್ತಿಲ್ಲ. ಇದಕ್ಕೆ 39% ಮಾತ್ರ ಭಾರತ ಸರಕಾರದಿಂದ ಬರುತ್ತದೆ, 39% ಎಲ್ಲ ರಾಜ್ಯಗಳಿಂದ ಬರುತ್ತದೆ ಮತ್ತು ಉಳಿದ 22% ಖಾಸಗಿ ವಲಯದಿಂದ ಬರುತ್ತದೆ ಎಂದು ಕೇಂದ್ರ ಸರಕಾರ ಹೇಳುತ್ತಿದೆ.

ಆದರೆ ಈಗ ನೋಟುರದ್ಧತಿ, ಜಿಎಸ್‌ಟಿಯ ಒಡ್ಡೊಡ್ಡಾದ ಜಾರಿ ಮತ್ತು ಕಾರ್ಪೊರೇಟ್‌ಗಳಿಗೆ ಕೇಂದ್ರ ಸರಕಾರದ ತೆರಿಗೆ ಬಕ್ಷೀಸುಗಳು ರಾಜ್ಯಗಳ ಹಣಕಾಸು ಪರಿಸ್ಥಿತಿಯನ್ನು ಸಂಪೂರ್ಣವಾಗಿ ಬಿಗಡಾಯಿಸಿರುವಾಗ, ಮತ್ತು ಆರ್ಥಿಕ ಸ್ಥಗಿತತೆಯ ಅಂಚಿನಲ್ಲಿ ಬಂದು ನಿಂತಿರುವಾಗ ಹಾಗೂ ಸ್ಥಗಿತುಬ್ಬರವನ್ನು ಅನುಭವಿಸುತ್ತಿರುವಾಗ, ಈ ದೊಡ್ಡ ಯೋಜನೆಯ ಪ್ರಕಟಣೆ ಬಹುಮಟ್ಟಿಗೆ ಟೊಳ್ಳು ಬಡಾಯಿಯೇ ಆಗಿದೆ.

ಸರಕಾರ ಈಗ ಸಾರ್ವಜನಿಕ ವಲಯದ ಉದ್ದಿಮೆಗಳಲ್ಲಿ ತನ್ನ ಪಾಲನ್ನು ಬೃಹತ್ ಪ್ರಮಾಣದಲ್ಲಿ ಮತ್ತು ಅತ್ಯಂತ ಕಡಿಮೆ ಬೆಲೆಗಳಲ್ಲಿ ಮಾರಿಕೊಳ್ಳಲು ಮುಂದಾಗಿದೆ. ಹಲವು ಲಾಭದಾಯಕ ಉದ್ದಿಮೆಗಳನ್ನು ಕಡಿದು ಹಾಕಿ ದೇಶಕ್ಕೆ ಸದ್ಯದಲ್ಲೂ ಮತ್ತು ಭವಿಷ್ಯದಲ್ಲೂ ಅಪಾರ ಹಾನಿಗಳನ್ನು ತರುತ್ತಿದೆ. ಇದನ್ನು ಯಾವ ರೀತಿಯಲ್ಲೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ.

ಸರಕಾರದ ಮಾಹಿತಿಗಳೇ ಬೃಹತ್ ಪ್ರಮಾಣದ ನಿರುದ್ಯೋಗ ಇದೆ, ಕೃಷಿ ಸಂಕಟ ಮುಂದುವರೆಯುತ್ತಿದೆ ಮತ್ತು ತಲಾಬಳಕೆ ಖರ್ಚು ಇಳಿಮುಖಗೊಂಡಿದೆ, ಗ್ರಾಮೀಣ ಭಾರತದಲ್ಲಿ 2011-12ರಿಂದ 2017-18ರ ನಡುವೆ 8.8% ದಷ್ಟು ಇಳಿದಿದೆ ಎಂದು ತೋರಿಸುತ್ತಿವೆ. ಪ್ರಥಮತಃ ನವ-ಉದಾರವಾದಿ ಧೋರಣೆಗಳಿಂದ ಉಂಟಾಗಿರುವ ಇಂತಹ ಕೆಟ್ಟಪರಿಸ್ಥಿತಿ ನೋಟುರದ್ಧತಿ ಮತ್ತು ಕೆಟ್ಟದಾಗಿ ರೂಪಿಸಿ, ಜಾರಿಗೊಳಿಸಿದ ಜಿಎಸ್‌ಟಿಯಿಂದಾಗಿ ಮತ್ತಷ್ಟು ಉಲ್ಬಣಗೊಂಡು ಆರ್ಥಿಕ ಬೆಳವಣಿಗೆ ಕುಸಿಯುವಂತೆ ಮಾಡಿದೆ.

ಈಗ ಅದಕ್ಕೆ ಜೀವನಾವಶ್ಯಕ ಸಾಮಗ್ರಿಗಳಲ್ಲಿ ತೀವ್ರ ಹಣದುಬ್ಬರದ ಸಮಸ್ಯೆಯೂ ಸೇರಿಕೊಂಡಿದೆ. ಈ ಸರಕಾರ ತನ್ನ ಸ್ವಭಾವದಿಂದಾಗಿ, ಇಂತಹ ಧೋರಣೆಗಳನ್ನು ಕೈಬಿಟ್ಟು, ಅರ್ಥವ್ಯವಸ್ಥೆಯಲ್ಲಿ ಬೇಡಿಕೆಯನ್ನು ಸ್ಫುರಿಸುವ ಹಾಗೂ ಬೃಹತ್‌ಪ್ರಮಾಣದಲ್ಲಿ ಸಾರ್ವಜನಿಕ ಹೂಡಿಕೆಗಳ ಮೂಲಕ ಪೂರೈಕೆಯ ಮೂಲರಚನೆಗಳನ್ನು ಉತ್ತಮ ಪಡಿಸಬೇಕು ಎನ್ನುವ ಸಲಹೆಗಳಿಗೆ ಕಿವಿಗೊಡುವುದಿಲ್ಲ. ತದ್ವಿರುದ್ಧವಾಗಿ ಅದು ಅಂತರ್ರಾಷ್ಟ್ರೀಯ ಹಣಕಾಸು ಬಂಡವಾಳ ಮತ್ತು ದೇಶೀ ಗುತ್ತೇದಾರಿ ಬಂಡವಾಳದ ಆಗ್ರಹದಂತೆ ಶ್ರಮ ಮಾರುಕಟ್ಟೆ ಹಾಗೂ ಭೂಮಿ ಮಾರುಕಟ್ಟೆಯನ್ನು ಮತ್ತಷ್ಟು ಉದಾರೀಕರಿಸುವ ಪ್ರಯತ್ನವನ್ನೇ ಮಾಡುತ್ತದೆ.

ಜನಸಾಮಾನ್ಯರು ಒಂದೆಡೆಯಲ್ಲಿ, ಇಳಿಯುತ್ತಿರುವ ಕೂಲಿ-ಸಂಬಳಗಳು ಮತ್ತು ಏರುತ್ತಿರುವ ನಿರುದ್ಯೋಗ, ಇನ್ನೊಂದೆಡೆಯಲ್ಲಿ ಆಹಾರ ಸಾಮಗ್ರಿಗಳು ಮತ್ತು ಇತರ ಆವಶ್ಯಕ ಸರಕುಗಳ ಬೆಲೆಯೇರಿಕೆಗಳ ಎರಡೆರಡು ಹೊರೆಗಳನ್ನು ಹೊರಬೇಕಾಗಿ ಬಂದಿದೆ.

ಮೋದಿ ಸರಕಾರದ ಹಾನಿಕಾರಕ ಧೋರಣೆಗಳಿಗೆ ಜನಗಳ ಪ್ರತಿರೋಧವನ್ನು ಕಟ್ಟಿ ಬೆಳೆಸುವುದು ಮತ್ತು ವರ್ಗ ಹಾಗೂ ಸಾಮೂಹಿಕ ಹೋರಾಟಗಳನ್ನು ತೀವ್ರಗೊಳಿಸುವುದಲ್ಲದೆ ಈಗ ಬೇರೆ ಯಾವ ಮಾರ್ಗವೂ ಇಲ್ಲವಾಗಿದೆ.

(ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending