ಬಹಿರಂಗ
ಪ್ರತಿರೋಧದ ದನಿಗಳು ಸರ್ವಾಧಿಕಾರಕ್ಕೆ ಸದಾ ಅಪಥ್ಯವೇ
- ನಾ ದಿವಾಕರ
ಒಂದು ಸ್ವಸ್ಥ ಸಮಾಜ ತನ್ನ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು, ಮುಂದಿನ ಪೀಳಿಗೆಗೆ ಆರೋಗ್ಯಕರ ನೆಲೆಗಳನ್ನು ಬಿಟ್ಟುಹೋಗಲು ಬಯಸುವುದು ಸಹಜ. ಮಾನವ ಸಮಾಜದ ಅಭ್ಯುದಯದ ಹಾದಿಯಲ್ಲಿ ಈ ಸ್ವಾಸ್ಥ್ಯ ಸಂರಕ್ಷಣೆಯ ಪ್ರಯತ್ನಗಳು ನಡೆಯುತ್ತಾ ಬಂದಿರುವುದರಿಂದಲೇ ಮನುಕುಲ ಇಂದಿಗೂ ಸಹ ಮಾನವೀಯ ಮೌಲ್ಯಗಳನ್ನು ಉಳಿಸಿಕೊಂಡುಬಂದಿದೆ. ಒಬ್ಬ ಹಿಟ್ಲರಿಗೆ ನೂರಾರು ಗಾಂಧಿ ಮಂಡೇಲಾಗಳು ಹುಟ್ಟಿಕೊಳ್ಳುತ್ತಾ ಬಂದಿದ್ದಾರೆ. ಒಬ್ಬ ಮುಸೋಲಿನಿಗೆ ನೂರಾರು ಅಂಬೇಡ್ಕರುಗಳು ಉದಯಿಸುತ್ತಾ ಬಂದಿದ್ದಾರೆ.
ಮತಾಂಧನೊಬ್ಬನಿಂದ ಹತ್ಯೆಗೀಡಾದರೂ ಗಾಂಧಿ ಬೌದ್ಧಿಕವಾಗಿ ನಮ್ಮ ನಡುವೆ ಇದ್ದಾರೆ. ಭಾರತದ ಮೇಲ್ಜಾತಿ ಮನಸುಗಳಿಂದ ಬಹಿಷ್ಕೃತರಾಗಿದ್ದರೂ ಪೆರಿಯಾರ್, ಅಂಬೇಡ್ಕರ್ ಇಂದು ಭಾರತೀಯ ಸಮಾಜದ ಅಂತಃಸತ್ವದ ಬುನಾದಿಯಾಗುತ್ತಾರೆ. ಸಾಂಸ್ಕೃತಿಕ ರಾಜಕಾರಣದ ರಾಯಭಾರಿಗಳ ಗುಂಡೇಟಿಗೆ ಬಲಿಯಾದರೂ ಧಬೋಲ್ಕರ್, ಪನ್ಸಾರೆ, ಗೌರಿ, ಕಲಬುರ್ಗಿ ನಮ್ಮ ನಡುವೆ ಚಿಂತನೆಗಳ ರೂಪದಲ್ಲಿ ಜೀವಂತಿಕೆಯಿಂದಿದ್ದಾರೆ.
ಸಮಾಜದಲ್ಲಿ ಅಂತರ್ಗತವಾಗಿರುವ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಉಳಿಸಿ ಬೆಳೆಸಲು ಈ ಚಿಂತಕರ ಚಿಂತನೆಗಳು, ಬೋಧನೆಗಳು ಸುಭದ್ರ ಬುನಾದಿಯನ್ನು ನಿರ್ಮಿಸುತ್ತವೆ. ಶತಮಾನಗಳ ಹಿಂದೆ ಭಾರತೀಯ ಸಮಾಜದಲ್ಲಿ ಅಂತರ್ಗತವಾಗಿದ್ದ ಅಸಮಾನತೆ, ಅಸಹಿಷ್ಣುತೆ ಮತ್ತು ಜಾತಿ ಶ್ರೇಷ್ಠತೆಯ ಚಿಂತನೆಗಳಿಗೆ ಪ್ರತಿರೋಧದ ರೂಪದಲ್ಲೇ ಭಾರತದಲ್ಲಿ ಜೈನ, ಬೌದ್ಧ, ಸಿಖ್ ಧರ್ಮಗಳು ಉದಯಿಸಿದ್ದವು.
ಸಾಂಪ್ರದಾಯಿಕ ಸಮಾಜದ, ವೈದಿಕ ಪರಂಪರೆಯ ಡಂಭಾಚಾರ, ಶೋಷಣೆ, ಕಂದಾಚಾರಗಳ ವಿರುದ್ಧ ಭಕ್ತಿ ಪಂಥ, ಸೂಫಿ ಪರಂಪರೆಗಳು ಹುಟ್ಟಿಕೊಂಡಿದ್ದವು. ಈ ಪ್ರತಿರೋಧದ ದನಿಗಳು ಇಂದಿಗೂ ನಮ್ಮ ನಡುವೆ ಜೀವಂತವಾಗಿದ್ದರೆ ಅದರ ಹಿಂದೆ ಅನೇಕ ಸಮಕಾಲೀನ ಚಿಂತಕರ, ಸಾಹಿತಿಗಳ ಮತ್ತು ಸಮಾಜ ಸುಧಾರಕರ ಪರಿಶ್ರಮ ಇದೆ.
ಬುದ್ಧನಿಂದ ಗಾಂಧಿ ಅಂಬೇಡ್ಕರ್ ವರೆಗೆ ಈ ಚಿಂತನಾ ವಾಹಿನಿಗಳು ಭಾರತೀಯ ಸಮಾಜಕ್ಕೆ ಮಾರ್ಗದರ್ಶಿ ಸೂತ್ರಗಳನ್ನು ಒದಗಿಸಿವೆ. ಸಾವಿರಾರು ಭಾಷೆಗಳು, ನೂರಾರು ಸಂಸ್ಕೃತಿಗಳು ಭಾರತೀಯ ಸಮಾಜದ ವೈವಿಧ್ಯತೆಯನ್ನು, ಬಹುಸಂಸ್ಕೃತಿಯ ನೆಲೆಗಳನ್ನು ಕಾಪಾಡಿಕೊಂಡು ಬಂದಿದ್ದರೆ ಅದಕ್ಕೆ ಕಾರಣ ಈ ಮಹಾನ್ ಚಿಂತಕರು ಬಿಟ್ಟುಹೋಗಿರುವ, ಕೊಟ್ಟುಹೋಗಿರುವ ಟೂಲ್ಕಿಿಟ್ಗದಳು.
ಭಾರತದ ಫ್ಯಾಸಿಸ್ಟ್ ಆಡಳಿತ ವ್ಯವಸ್ಥೆಯ ದೃಷ್ಟಿಯಲ್ಲಿ, ವಂದಿಮಾಗಧ ಸುದ್ದಿಮನೆಗಳ ದೃಷ್ಟಿಯಲ್ಲಿ ರಾಜದ್ರೋಹದ ಅಸ್ತ್ರದಂತೆ ಕಾಣುವ ಒಂದು ಸಾಧಾರಣ ಟೂಲ್ಕಿ ಟ್ ದಿಶಾ ರವಿ ಎಂಬ 21 ವರ್ಷದ ಪರಿಸರವಾದಿಯನ್ನು ದೇಶದ್ರೋಹಿಯನ್ನಾಗಿ ಮಾಡುತ್ತದೆ. ಆದರೆ ಇಂತಹ ನೂರಾರು ಟೂಲ್ಕಿಷಟ್ಗರಳೇ ಭಾರತದಲ್ಲಿ ಪ್ರಜಾತಂತ್ರ ಮೌಲ್ಯಗಳನ್ನು ಸಂರಕ್ಷಿಸಿಕೊಂಡುಬಂದಿದೆ.
ದೆಹಲಿಯಲ್ಲಿ ನಡೆಯುತ್ತಿರುವ ರೈತ ಮುಷ್ಕರವನ್ನು ಬೆಂಬಲಿಸುವ ಒಂದು ಟೂಲ್ಕಿ ಟ್ 136 ಕೋಟಿ ಜನತೆಯನ್ನು ಪ್ರತಿನಿಧಿಸುವ ಒಂದು ಚುನಾಯಿತ ಸರ್ಕಾರವನ್ನು ವಿಚಲಿತಗೊಳಿಸುತ್ತದೆ ಎಂದರೆ ನಮ್ಮನ್ನು ಆಳುವ ವ್ಯವಸ್ಥೆ ಎಷ್ಟು ದುರ್ಬಲವಾಗಿದೆ ಎನ್ನುವುದು ಸ್ಪಷ್ಟವಾಗುತ್ತದೆ. ದೆಹಲಿಯ ಪೊಲೀಸರು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿದ್ದ ಒಬ್ಬ ಹೋರಾಟಗಾರ್ತಿಯನ್ನು ರಾತ್ರೋರಾತ್ರಿ ಬಂಧಿಸುತ್ತಾರೆ, ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಯಾವುದೇ ಸುಳಿವು ನೀಡದೆ ಆಕೆಯನ್ನು ದೆಹಲಿಗೆ ಕರೆದೊಯ್ಯುತ್ತಾರೆ. ಒಂದು ಒಕ್ಕೂಟ ವ್ಯವಸ್ಥೆಯಲ್ಲಿ, ಗಣತಂತ್ರದ ಚೌಕಟ್ಟಿನಲ್ಲಿ ಇದು ಹೇಗೆ ಸಾಧ್ಯ ಎಂಬ ಪ್ರಶ್ನೆ ನಮ್ಮನ್ನು ಕಾಡದೆ ಹೋದರೆ ನಾವು ಪ್ರಜ್ಞಾಶೂನ್ಯರಾಗಿದ್ದೇವೆ ಎಂದೇ ಭಾವಿಸಬೇಕಾಗುತ್ತದೆ.
ದೆಹಲಿಯಲ್ಲಿ ನಡೆಯುತ್ತಿರುವ ರೈತರ ಮುಷ್ಕರ ಮೂರು ತಿಂಗಳು ಪೂರೈಸಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇಷ್ಟು ದೀರ್ಘಕಾಲಿಕ ಮುಷ್ಕರ ಈವರೆಗೂ ಕಂಡಿರಲಿಲ್ಲ. ಹಾಗೆಯೇ ಮುಷ್ಕರನಿರತರಲ್ಲಿನ ಈ ಪ್ರಮಾಣದ ಬದ್ಧತೆ ಮತ್ತು ಆತ್ಮಸ್ಥೈರ್ಯವನ್ನೂ ಭಾರತ ಕಂಡಿರಲಿಲ್ಲ. ಮತ್ತೊಂದು ಮಜಲಿನಲ್ಲಿ ನೋಡಿದಾಗ ಭಾರತದ ಗಣತಂತ್ರ ವ್ಯವಸ್ಥೆಯಲ್ಲಿ ಈ ರೀತಿಯ ನಿಷ್ಕ್ರಿಯ, ನಿರ್ದಯಿ ಮತ್ತು ನಿರ್ಲಕ್ಷ್ಯ ಸರ್ಕಾರವನ್ನೂ ಈವರೆಗೂ ನಾವು ಕಂಡಿರಲಿಲ್ಲ. ಇವೆಲ್ಲದರ ನಡುವೆ ಕೇಂದ್ರ ಸರ್ಕಾರ ರೈತ ಮುಷ್ಕರದ ನೈತಿಕ ಉದ್ದೇಶವನ್ನೇ ಪ್ರಶ್ನಿಸುತ್ತಿದ್ದು ಸರ್ಕಾರ ಜಾರಿಗೊಳಿಸಿರುವ ಅಸಾಂವಿಧಾನಿಕ ಕರಾಳ ಮರಣ ಶಾಸನಗಳನ್ನು ವಿರೋಧಿಸುವುದನ್ನೇ ರಾಜದ್ರೋಹ ಎಂದು ಪರಿಗಣಿಸುತ್ತಿದೆ. ಮುಷ್ಕರವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಅನುಸರಿಸಿದ ಕ್ರೂರ, ಅಸಾಂವಿಧಾನಿಕ ಕುಟಿಲೋಪಾಯಗಳು ವಿಫಲವಾದ ನಂತರ ಈಗ ಈ ಮುಷ್ಕರವನ್ನು ಬೆಂಬಲಿಸುವ ದನಿಗಳನ್ನೇ ಶಾಶ್ವತವಾಗಿ ಅಡಗಿಸುವ ಪ್ರಯತ್ನಗಳು ನಡೆಯುತ್ತಿವೆ. ದಿಶಾರವಿ ಇಂತಹ ಕುತಂತ್ರಕ್ಕೆ ಬಲಿಯಾದ ಪರಿಸರ ಹೋರಾಟಗಾರ್ತಿ.
ಕೆನಡಾದಲ್ಲಿ 2020ರ ಮಾರ್ಚ್ ತಿಂಗಳಲ್ಲಿ ಸ್ಥಾಪಿಸಲಾದ ಪೋಯೆಟಿಕ್ ಜಸ್ಟಿಸ್ ಫೌಂಡೇಷನ್ ಮೂಲತಃ ಜಗತ್ತಿನಾದ್ಯಂತ ನಡೆಯುವ ಜನಾಂದೋಲನಗಳನ್ನು, ಪರಿಸರ ಹೋರಾಟಗಳನ್ನು ಮತ್ತು ಹಕ್ಕೊತ್ತಾಯಗಳ ಹೋರಾಟಗಳನ್ನು ಬೆಂಬಲಿಸುವ ಒಂದು ಸಂಸ್ಥೆ. ದೆಹಲಿ ಪೊಲೀಸರು ಆರೋಪಿಸಿರುವಂತೆ ಇದು ಖಲಿಸ್ತಾನಿ ಬೆಂಬಲಿಗ ಸಂಘಟನೆ ಎಂದು ನಿರೂಪಿಸಲು ಯಾವುದೇ ಪುರಾವೆಗಳಿಲ್ಲ. ಸಾಮಾಜಿಕ ಮಾಧ್ಯಮಗಳು ಹೆಚ್ಚು ಪ್ರಚಲಿತವಾದ ನಂತರ ಇಂತಹ ಜಾಗತಿಕ ವೇದಿಕೆಗಳು ವಿಶ್ವದಾದ್ಯಂತ ನಡೆಯುವ ಜನಾಂದೋಲನಗಳಿಗೆ ಪ್ರೋತ್ಸಾಹ, ಬೆಂಬಲ ವ್ಯಕ್ತಪಡಿಸಲು ಕೆಲವು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸುತ್ತವೆ. ಈ ಸೂತ್ರಗಳ ಮೂಲಕ ಹೋರಾಟಗಳನ್ನು ಹೇಗೆ ಮುನ್ನಡೆಸಬೇಕು, ಜನರನ್ನು ಹೇಗೆ ಕ್ರೋಢೀಕರಿಸಬೇಕು ಎಂದು ಸೂಚಿಸಲಾಗುತ್ತದೆ. ಇದನ್ನು ಟೂಲ್ಕಿೆಟ್ ಎಂದು ಕರೆಯಲಾಗುತ್ತದೆ. ಅಂದರೆ ಹೋರಾಟದ ಅಸ್ತ್ರಗಳನ್ನೊಳಗೊಂಡ ಒಂದು ಆಕರ. ಇಲ್ಲಿ ಮೌಖಿಕ, ಲಿಖಿತ, ಸಾಂಕೇತಿಕ ಸೂಚನೆಗಳಿರುತ್ತವೆಯೇ ಹೊರತು ಶಸ್ತ್ರಾಸ್ತ್ರಗಳ ಸುಳಿವೂ ಇರುವುದಿಲ್ಲ.
ಭಾರತದಲ್ಲಿ ನಡೆಯುತ್ತಿರುವ ರೈತ ಮುಷ್ಕರದ ಬಗ್ಗೆಯೂ ಸಹ ಇಂತಹುದೇ ಟೂಲ್ಕಿೇಟ್ ಒಂದನ್ನು ಸಿದ್ಧಪಡಿಸಲಾಗಿದ್ದು ಇದರಲ್ಲಿ ಮುಷ್ಕರ ನಿರತ ರೈತರು ಅನುಸರಿಸಬೇಕಾದ ಅಹಿಂಸಾತ್ಮಕ ಕಾರ್ಯ ಚಟುವಟಿಕೆಗಳನ್ನು ಸೂಚಿಸಲಾಗಿದೆ. ಟ್ವೀಟ್ಗ ಳ ಮೂಲಕ ಪ್ರತಿಭಟಿಸುವುದು, ಅರ್ಜಿಗಳನ್ನು ಸಲ್ಲಿಸುವುದು, ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಧರಣಿ ನಡೆಸುವುದು ಹೀಗೆ ಹಲವು ಸೂಚನೆಗಳನ್ನು ನೀಡಲಾಗಿದೆ. ಭಾರತದ ಎಂಬೆಸಿ ಕಚೇರಿಯ ಮುಂದೆ ಧರಣಿ ನಡೆಸಲು ಸೂಚಿಸುವುದು , ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸಲು ಸೂಚಿಸುವುದು ಸಂವಿಧಾನವಿರೋಧಿಯೂ ಆಗುವುದಿಲ್ಲ, ದೇಶದ್ರೋಹವೂ ಆಗುವುದಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸಾರ್ವಭೌಮ ಪ್ರಜೆಗಳಿಗೆ ಈ ಹಕ್ಕು ಇರುತ್ತದೆ ಎನ್ನುವುದನ್ನು ನಾವು ಗಮನಿಸಬೇಕು.
ಜನವರಿ 26ರಂದು ರೈತರ ಟ್ರಾಕ್ಟರ್ ಪರೇಡ್ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಟೂಲ್ಕಿಟಟ್ ಮತ್ತು ಇತರ ಸಂಘಟಕರನ್ನು ಅನುಮಾನಾಸ್ಪದವಾಗಿ ನೋಡುತ್ತಿದೆ. ಆದರೆ ಕೆಂಪುಕೋಟೆಯಲ್ಲಿ ನಡೆದ ಘಟನೆ ಯಾವುದೇ ಒಂದು ಬೃಹತ್ ಜನಾಂದೋಲನದ ಸಂದರ್ಭದಲ್ಲಿ ಸಹಜವಾಗಿ ನಡೆಯುವಂತಹುದೇ ಆಗಿದ್ದು, ಭಾರತದ ರಾಷ್ಟ್ರಧ್ವಜಕ್ಕೆ ಅವಮಾನವಾಗಿದೆ ಎನ್ನುವ ಆರೋಪಗಳೂ ಸಹ ಹುಸಿ ಎಂದು ಸಾಬೀತಾಗಿದೆ.
ರೈತ ಮುಷ್ಕರವನ್ನು ಸಾರ್ವಜನಿಕರ ದೃಷ್ಟಿಯಲ್ಲಿ ತಪ್ಪಾಗಿ ತೋರಿಸುವ ಒಂದು ಹುನ್ನಾರವನ್ನೂ ಈ ಘಟನೆಗಳಲ್ಲಿ ಕಾಣಬಹುದಾಗಿದೆ. ಆದರೆ ಈ ಘಟನೆಗಳನ್ನು ನೆಪವಾಗಿಟ್ಟುಕೊಂಡೇ ಕೇಂದ್ರ ಸರ್ಕಾರ ರೈತ ಮುಷ್ಕರದ ಪರ ವಹಿಸುವ ಪ್ರಜಾಸತ್ತಾತ್ಮಕ ದನಿಗಳನ್ನು ಅಡಗಿಸಲು ಪ್ರಯತ್ನಿಸುತ್ತಿದೆ. ದಿಶಾ ರವಿ ಪ್ರಕರಣದಲ್ಲಿ ಇದರ ಉದ್ದೇಶ ಸ್ಪಷ್ಟವಾಗಿ ಕಾಣುತ್ತದೆ.
ಫ್ರೈಡೇಸ್ ಫಾರ್ ಫ್ಯೂಚರ್ ಪ್ರಚಾರಾಂದೋಲನ ಎನ್ನುವ ಒಂದು ಟೂಲ್ಕಿುಟ್ ಸಂಪಾದಿಸುವಲ್ಲಿ ದಿಶಾರವಿ ಪಾತ್ರವಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ. ಈ ಟೂಲ್ಕಿಲಟ್ ಸಿದ್ಧಪಡಿಸಿದ ಖ್ಯಾತ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬಪರ್ಗ್ ಜಾಗತಿಕ ಮಟ್ಟದಲ್ಲೇ ಭಾರತದ ರೈತರ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇವರು ಸಿದ್ಧಪಡಿಸಿರುವ ಟೂಲ್ಕಿರಟ್ ಸಾರ್ವಜನಿಕ ಓದಿಗೂ ಲಭ್ಯವಿದ್ದು, ಅದರಲ್ಲಿ ಹೋರಾಟದ ರೂಪುರೇಷೆಗಳನ್ನು ಹೊರತುಪಡಿಸಿ ಮತ್ತಾವುದೇ ಸಂವಿಧಾನವಿರೋಧಿ ಸಂದೇಶಗಳಿಲ್ಲ ಎನ್ನುವುದು ಸ್ಪಷ್ಟವಾಗಿದೆ.
ಈ ಟೂಲ್ಕಿಾಟ್ನಿಲ್ಲಿನ ಕೆಲವು ಅಂಶಗಳನ್ನು ತಾನು ಸಂಪಾದಿಸಿರುವುದಾಗಿ ದಿಶಾರವಿ ಒಪ್ಪಿಕೊಂಡಿದ್ದಾರೆ ಆದರೆ ಈ ಚಟುವಟಿಕೆಯನ್ನೇ ಆಧರಿಸಿ ಆಕೆಯನ್ನು ರಾಜದ್ರೋಹದ ಕಾಯ್ದೆಯಡಿ ಬಂಧಿಸುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ಒಂದು ವೇಳೆ ಇಡೀ ಟೂಲ್ ಕಿಟ್ ದಿಶಾ ರವಿ ಅವರಿಂದಲೇ ರಚಿಸಲ್ಪಟ್ಟಿದ್ದರೂ ಅಪರಾಧವೇನೂ ಆಗುವುದಿಲ್ಲ.
ಟೂಲ್ ಕಿಟ್ ನಲ್ಲಿ ಏನಿದೆ ?
ಭಾರತದಲ್ಲಿ ನಡೆಯುತ್ತಿರುವ ರೈತ ಮುಷ್ಕರಕ್ಕೆ ಬೆಂಬಲ ಸೂಚಿಸಲು ಗ್ರೇಟಾ ಥನ್ಬದರ್ಗ್ ಸಿದ್ಧಪಡಿಸಿರುವ ಟೂಲ್ಕಿಬಟ್ನಲಲ್ಲಿ ಭಾರತ ಸರ್ಕಾರದ ಹೊಸ ಕೃಷಿ ಮಸೂದೆಗಳನ್ನು ರೈತ ವಿರೋಧಿ ಎಂದು ಗುರುತಿಸಲಾಗಿದ್ದು, ಈ ಕಾಯ್ದೆಗಳು ನವ ಉದಾರವಾದಿ ಆರ್ಥಿಕ ನೀತಿಗಳ ಪರಿಣಾಮವಾಗಿ ಮೂಡಿಬಂದಿರುವುದನ್ನು ಸ್ಪಷ್ಟಪಡಿಸಲಾಗಿದೆ. ರೈತರನ್ನು ಸಂಪರ್ಕಿಸದೆ, ಸಂಸತ್ತಿನಲ್ಲಿ ಚರ್ಚೆ ನಡೆಸದೆ ಈ ಕಾಯ್ದೆಗಳನ್ನು ಜಾರಿಗೊಳಿಸಿರುವುದನ್ನೂ ಟೂಲ್ಕಿಪಟ್ನನಲ್ಲಿ ಉಲ್ಲೇಖಿಸಲಾಗಿದೆ.
ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್ ಉದ್ಯಮಿಗಳಿಗೆ ವಹಿಸುವುದರಿಂದ ಪರಿಸರ ವಿನಾಶಕ್ಕೂ ದಾರಿಮಾಡಿಕೊಟ್ಟಂತಾಗುತ್ತದೆ ಎನ್ನುವ ಅಂಶವನ್ನೂ ಉಲ್ಲೇಖಿಸಲಾಗಿದೆ. ಈ ನಿಟ್ಟಿನಲ್ಲಿ ರೈತ ಮುಷ್ಕರಕ್ಕೆ ಭಾರತದ ಜನತೆ ಮತ್ತು ವಿಶ್ವದ ಇತರ ರಾಷ್ಟ್ರಗಳ ಜನತೆ ಹೇಗೆ ಪ್ರತಿಕ್ರಯಿಸಬೇಕು ಎನ್ನುವುದನ್ನು ಟೂಲ್ಕಿ್ಟ್ನಷಲ್ಲಿ ವಿವರಿಸಲಾಗಿದೆ. ರೈತರಿಗೆ ಬೆಂಬಲಿಸಿ ಟ್ವೀಟ್ ಮಾಡುವುದು, ಹ್ಯಾಷ್ಟ್ಯಾ ಗ್ ಮೂಲಕ ಸಾಮಾಜಿಕ ಮಾಧ್ಯಮಗಳಲ್ಲಿ ಬೆಂಬಲ ವ್ಯಕ್ತಪಡಿಸುವುದು, ಸರ್ಕಾರದ ಪ್ರತಿನಿಧಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಇ ಮೇಲ್ ಕಳಿಸುವುದು, ಫೆಬ್ರವರಿ 13-14ರಂದು ಭಾರತೀಯ ರಾಯಭಾರ ಕಚೇರಿಯ ಮುಂದೆ, ಸ್ಥಳೀಯ ಸರ್ಕಾರಿ ಕಚೇರಿಗಳ ಮುಂದೆ ಧರಣಿ ನಡೆಸುವುದು, ಸತತ ಟ್ವೀಟ್ ಮಾಡುವುದು, ಮುಖ್ಯ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದು ಹೀಗೆ ಹಲವು ಸೂಚನೆಗಳನ್ನು ನೀಡಲಾಗಿದೆ. ಇದರ ಪೂರ್ಣ ವಿವರಗಳು ಇಲ್ಲಿ ಲಭ್ಯವಿದೆ :Farming and its Crisis
ಈ ಟೂಲ್ ಕಿಟ್ ಆಧಾರದಲ್ಲೇ ದಿಶಾ ರವಿ ಅವರನ್ನು ಬಂಧಿಸಲಾಗಿದ್ದು ಇದೀಗ ದೆಹಲಿಯ ಪಟಿಯಾಲಾ ನ್ಯಾಯಾಲಯದಲ್ಲಿ ಆಕೆಗೆ ಜಾಮೀನು ನೀಡುವ ಸಂದರ್ಭದಲ್ಲಿ ನ್ಯಾಯಮೂರ್ತಿ ಧರ್ಮೇಂದ್ರ ರಾಣಾ ಅವರು ವ್ಯಕ್ತಪಡಿಸಿರುವ ಕೆಲವು ಅಭಿಪ್ರಾಯಗಳು ಇಂದಿನ ಸಂದರ್ಭದಲ್ಲಿ ಬಹಳ ಮುಖ್ಯವಾಗುತ್ತದೆ. ಎಲ್ಗಾರ್ ಪರಿಷತ್ ಮತ್ತು ಭೀಮಾ ಕೊರೆಗಾಂವ್ ಘಟನೆಯ ಹಿನ್ನೆಲೆಯಲ್ಲಿ ಹಲವಾರು ವಕೀಲರನ್ನು, ಬರಹಗಾರರನ್ನು, ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಇವರ ವಿರುದ್ಧ ಯುಎಪಿಎ ಕಾಯ್ದೆಯಡಿ ಮೊಕದ್ದಮೆ ದಾಖಲಿಸಲಾಗಿದೆ. ರಾಜದ್ರೋಹ ಕಾಯ್ದೆ ಸೆಕ್ಷನ್ 124ಎ ಮತ್ತು ಯುಎಪಿಎ, ಈ ಎರಡು ಕರಾಳ ಶಾಸನಗಳು ಪ್ರತಿರೋಧದ ದನಿಗಳನ್ನು ಅಡಗಿಸುವ ಅಸ್ತ್ರಗಳಾಗಿ ಪರಿಣಮಿಸಿರುವುದು ಭಾರತೀಯ ಪ್ರಜಾತಂತ್ರದ ದುರಂತ.
ದಿಶಾ ರವಿಯವರ ಬಂಧನದ ಹಿಂದೆ ದೇಶದ ಯುವ ಸಮುದಾಯದ ಜಾಗೃತ ಪ್ರಜ್ಞೆಯನ್ನು ಕುಡಿಯಲ್ಲೇ ಚಿವುಟುವ ಹುನ್ನಾರವನ್ನೂ ಗುರುತಿಸಬಹುದಾಗಿದೆ. ಇಂದು ದೇಶ ಎದುರಿಸುತ್ತಿರುವ ಅನೇಕ ಜ್ವಲಂತ ಸಮಸ್ಯೆಗಳಿಗೆ ಮೋದಿ ಸರ್ಕಾರದ ಆಡಳಿತ ನೀತಿಗಳೇ ಕಾರಣ ಎನ್ನುವುದು ದಿನದಿಂದ ದಿನಕ್ಕೆ ಸ್ಪಷ್ಟವಾಗುತ್ತಿದೆ. ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ, ಉತ್ಪಾದನೆಯ ಕೊರತೆ, ಅಭಿವೃದ್ಧಿ ಸೂಚ್ಯಂಕದಲ್ಲಿ ಕುಸಿತ, ಉದ್ಯೋಗ ಸೃಷ್ಟಿಯಲ್ಲಿನ ವೈಫಲ್ಯ, ತೈಲ ಮತ್ತು ಅವಶ್ಯ ವಸ್ತುಗಳ ಬೆಲೆ ಏರಿಕೆ, ಕೃಷಿ ಬಿಕ್ಕಟ್ಟು ಮತ್ತು ಹಣಕಾಸು ಬಿಕ್ಕಟ್ಟು ಜನಸಾಮಾನ್ಯರನ್ನು ಬಾಧಿಸುತ್ತಿದೆ.
ಈ ಗಂಭೀರ ಸಮಸ್ಯೆಗಳ ನಡುವೆಯೂ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಯಥಾಸ್ಥಿತಿಯಲ್ಲಿದ್ದರೆ ಅದಕ್ಕೆ ಕಾರಣ ಯುವ ಸಮುದಾಯವನ್ನು ಆವರಿಸಿರುವ ಸಮೂಹ ಸನ್ನಿ ಮತ್ತು ಮಧ್ಯಮ, ಮೇಲ್ ಮಧ್ಯಮ ವರ್ಗವನ್ನು ಆವರಿಸಿರುವ ಅಂಧ ಶ್ರದ್ಧೆ.
ಈ ಸಮೂಹ ಸನ್ನಿಗೊಳಗಾಗಿರುವ ಯುವಸಮುದಾಯದ ಒಂದು ವರ್ಗ ಇತ್ತೀಚಿನ ದಿನಗಳಲ್ಲಿ ಜಾಗೃತವಾಗುತ್ತಿದೆ. ರೈತ ಮುಷ್ಕರದ ಹಿನ್ನೆಲೆಯಲ್ಲಿ ಉತ್ತರದ ಹಲವು ರಾಜ್ಯಗಳಲ್ಲಿ ಜನಾಭಿಪ್ರಾಯ ಬದಲಾಗುತ್ತಿದೆ. ಭ್ರಮನಿರಸನಗೊಂಡ ಯುವ ಸಮುದಾಯ ಭಿನ್ನ ನೆಲೆಯಲ್ಲಿ ಯೋಚಿಸಲಾರಂಭಿಸಿದೆ. ಈ ಜಾಗೃತ ಮನಸುಗಳನ್ನು ಪುನಃ ಪರಿವರ್ತಿಸುವುದು ಇಂದಿನ ದುಸ್ಥಿತಿಯಲ್ಲಿ ಕಷ್ಟ ಎನ್ನುವುದೂ ಮೋದಿ ಸರ್ಕಾರಕ್ಕೆ ತಿಳಿದಿದೆ.
ಹಾಗಾಗಿ ಯುವ ಮನಸುಗಳಲ್ಲಿ ಭೀತಿ ಉಂಟುಮಾಡುವ ಉದ್ದೇಶದಿಂದಲೇ 21 ವರ್ಷದ ಪರಿಸರ ಹೋರಾಟಗಾರ್ತಿ ದಿಶಾರವಿ ವಿರುದ್ಧ ರಾಜದ್ರೋಹದಂತಹ ಗಂಭೀರ ಆರೋಪ ಹೊರಿಸಿ ಬಂಧಿಸಲಾಗುತ್ತದೆ. ಇದು ಜನಸಾಮಾನ್ಯರಲ್ಲಿ ಭೀತಿ ಸೃಷ್ಟಿಸಿ ಜಾಗೃತಿಗೆ ಧಕ್ಕೆ ಉಂಟುಮಾಡುವ ತಂತ್ರಗಾರಿಕೆ ಎನ್ನುವುದು ಸುಸ್ಪಷ್ಟ.
ಸ್ವತಂತ್ರ ಆಲೋಚನೆಗೆ ಅವಕಾಶವೇ ನೀಡದೆ ಅಧಿಪತ್ಯ ರಾಜಕಾರಣವನ್ನು ಬಲಪಡಿಸುವ ನಿಟ್ಟಿನಲ್ಲಿ ಮೋದಿ-ಶಾ ಜೋಡಿ ಹಲವು ವ್ಯೂಹಗಳನ್ನು ರಚಿಸುತ್ತಿದ್ದು, ದಿಶಾರವಿಯ ಪ್ರಕರಣವೂ ಇಂತಹುದೇ ಪ್ರಯತ್ನವಾಗಿದೆ. ಮಾಧ್ಯಮಗಳು ವಂದಿಮಾಗಧ ಸಂಸ್ಕೃತಿಯ ಶಿಖರ ತಲುಪಿರುವ ಹೊತ್ತಿನಲ್ಲಿ ಸರ್ಕಾರದ ತಪ್ಪುಒಪ್ಪುಗಳನ್ನು ಪರಾಮರ್ಶಿಸುವ ಅವಕಾಶವೇ ಇಲ್ಲವಾಗಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿ ಯುವ ಸಮುದಾಯದ ಸ್ವತಂತ್ರ ಆಲೋಚನೆ ಪ್ರಜಾತಂತ್ರ ಮೌಲ್ಯಗಳ ರಕ್ಷಣೆಗೆ ಅತ್ಯವಶ್ಯವಾಗಿರುತ್ತದೆ.
ಈ ಬೆಳವಣಿಗೆಗೆ ಅವಕಾಶ ನೀಡದಿರಲು ಸರ್ಕಾರ ಕರಾಳ ಶಾಸನಗಳ ಮೊರೆ ಹೋಗುತ್ತಿದೆ. ಭಾರತದ ಬಹುತ್ವ ಸಂಸ್ಕೃತಿಯನ್ನು ಮತ್ತು ಬಹುಮುಖೀ ಸಾಂಸ್ಕೃತಿಕ ನೆಲೆಗಳನ್ನು ಸಮರ್ಪಕವಾಗಿ ಅರ್ಥಮಾಡಿಕೊಂಡು ಮುಂದಿನ ಪೀಳಿಗೆಗೆ ರವಾನಿಸುವ ಗುರುತರ ಹೊಣೆ ಹೊತ್ತಿರುವ ಯುವ ಸಮುದಾಯದ ಮೇಲೆ ಕರಾಳ ಶಾಸನಗಳ ಪ್ರಹಾರದ ಮೂಲಕ ಒತ್ತಡ ಹೇರುವ ತಂತ್ರವನ್ನು ನಾವಿಂದು ನೋಡುತ್ತಿದ್ದೇವೆ.
ಈ ಹಿನ್ನೆಲೆಯಲ್ಲಿ ದಿಶಾರವಿ ಜಾಮೀನು ತೀರ್ಪಿನಲ್ಲಿ ಪಟಿಯಾಲಾ ನ್ಯಾಯಾಲಯದ ನ್ಯಾಯಮೂರ್ತಿ ಧರ್ಮೇಂದ್ರರಾಣಾ ವ್ಯಕ್ತಪಡಿಸಿರುವ ಅಭಿಪ್ರಾಯಗಳು ಸಾರ್ವಕಾಲಿಕ ಮಾನ್ಯತೆ ಪಡೆಯುತ್ತವೆ. ಇದೇ ನ್ಯಾಯಮೂರ್ತಿಗಳು ಈ ಹಿಂದೆ ಜೆಎನ್ಯುಕ ವಿದ್ಯಾರ್ಥಿನಿ ಸಫೂರ ಜರ್ಗರ್ ಪ್ರಕರಣದಲ್ಲಿ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ದಿಶಾರವಿ ಪ್ರಕರಣದ ತೀರ್ಪು ಇಂದಿನ ಸಂದರ್ಭದಲ್ಲಿ ಸ್ವಾಗತಾರ್ಹ ಎನಿಸುತ್ತದೆ.
ನ್ಯಾ ಧರ್ಮೇಂದ್ರ ರಾಣಾ ತಮ್ಮ ತೀರ್ಪಿನಲ್ಲಿ ಹೀಗೆ ಹೇಳಿದ್ದಾರೆ:-“ ಒಬ್ಬ ವ್ಯಕ್ತಿಯು ಕೆಲವು ಸಂಶಯಾಸ್ಪದ ವ್ಯಕ್ತಿಗಳ ಜೊತೆಗೆ ಸಂಪರ್ಕದಲ್ಲಿದ್ದ ಮಾತ್ರಕ್ಕೆ ಆ ವ್ಯಕ್ತಿಯ ಎಲ್ಲ ಚಟುವಟಿಕೆಗಳನ್ನೂ ಸಂಶಯಾಸ್ಪದವಾಗಿ ನೋಡುವ ಅಗತ್ಯವಿಲ್ಲ , ಕಾನೂನಿನ ಚೌಕಟ್ಟಿನೊಳಗೆ ನಡೆಸುವ ಚಟುವಟಿಕೆಗಳನ್ನು ಆಧರಿಸಿ ಕಳಂಕ ಹೊರಿಸುವುದು ಸಮರ್ಥನೀಯವಲ್ಲ. ಸರ್ಕಾರ ಜಾರಿಗೊಳಿಸಿರುವ ಒಂದು ಶಾಸನವನ್ನು ವಿರೋಧಿಸುವ ವೇದಿಕೆ ಅಥವಾ ಸಂಘಟನೆಯನ್ನು ಬೆಂಬಲಿಸದ ಮಾತ್ರಕ್ಕೆ ಊಹಾಪೋಹಗಳನ್ನು ಆಧರಿಸಿ ಯಾರನ್ನೂ ಭಯೋತ್ಪಾದಕರಂತೆ ನೋಡುವುದು ತರವಲ್ಲ.
ಭಾರತದ ಸಂವಿಧಾನ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಹೆಚ್ಚಿನ ಮನ್ನಣೆ ನೀಡಿದ್ದು, ಇದಕ್ಕೆ ಯಾವುದೇ ಭೌಗೋಳಿಕ ಚೌಕಟ್ಟು, ಗಡಿರೇಖೆ ಇರುವುದಿಲ್ಲ, ಜಾಗತಿಕ ಅಭಿಪ್ರಾಯ ಮೂಡಿಸಲೂ ಸಹ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಬಳಸಬಹುದು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸರ್ಕಾರದ ಕೆಲವು ಯೋಜನೆಗಳನ್ನು, ನೀತಿಗಳನ್ನು ವಿರೋಧಿಸುವುದೇ ರಾಜದ್ರೋಹ ಎನಿಸಿಕೊಳ್ಳುವುದಿಲ್ಲ, ಈ ಕಾರಣಕ್ಕಾಗಿ ಪ್ರಜೆಗಳನ್ನು ಜೈಲಿಗೆ ತಳ್ಳುವುದು, ಮತ್ತು ಘಾಸಿಗೊಂಡ ಸರ್ಕಾರದ ದುರಭಿಮಾನವನ್ನು ತಣಿಸಲು ರಾಜದ್ರೋಹ ಪ್ರಕರಣ ದಾಖಲಿಸುವುದು ನ್ಯಾಯಯುತವಲ್ಲ. ಭಾರತ ಸಾವಿರಾರು ವರ್ಷಗಳಿಂದ ಹಲವಾರು ಭಿನ್ನ ಚಿಂತನೆಗಳನ್ನು, ಅಭಿಪ್ರಾಯಗಳನ್ನು ಗೌರವಿಸುತ್ತಲೇ ಬಂದಿದೆ ಎಂದು ಹೇಳುತ್ತಾ ಋಗ್ವೇದದ ವಾಕ್ಯವೊಂದನ್ನು ಉದ್ಧರಿಸಿರುವ ನ್ಯಾಯಮೂರ್ತಿಗಳು, ವಾಟ್ಸಾಪ್ ಗುಂಪು ರಚಿಸುವುದು, ಟೂಲ್ ಕಿಟ್ ಸಿದ್ಧಪಡಿಸುವುದು ಶಿಕ್ಷಾರ್ಹ ಅಪರಾಧವಾಗುವುದಿಲ್ಲ ”
ರಾಜದ್ರೋಹ ಕಾಯ್ದೆಯನ್ನು ಸಂತೆಯ ಸರಕಿನಂತೆ ಬಳಸುತ್ತಿರುವ ಕೇಂದ್ರ ಸರ್ಕಾರ, ಆಡಳಿತ ನೀತಿಯ ವಿರುದ್ಧ ಮಾತನಾಡುವುದನ್ನೇ ಅಪರಾಧ ಎಂದು ಭಾವಿಸುತ್ತಿದೆ. ಸರ್ಕಾರದ ವಿರುದ್ಧ ಮಾತನಾಡುವುದನ್ನೇ ದೇಶದ್ರೋಹ ಎಂದು ಪರಿಗಣಿಸುತ್ತಿದೆ. 2010ರ ನಂತರ ದೇಶದಲ್ಲಿ 11 ಸಾವಿರ ಜನರ ವಿರುದ್ಧ 816 ರಾಜದ್ರೋಹ ಮೊಕದ್ದಮೆಗಳು ದಾಖಲಾಗಿವೆ. ಪತ್ರಕರ್ತರು, ವಿದ್ಯಾರ್ಥಿಗಳು, ವಿರೋಧಪಕ್ಷ ನಾಯಕರು, ಲೇಖಕರು, ಬೋಧಕರು, ಕಲಾವಿದರು ಈ ಕರಾಳ ಶಾಸನದಡಿ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ.
2010 ರಿಂದ 2014ರ ಯುಪಿಎ ಅವಧಿಯಲ್ಲಿ 279 ಪ್ರಕರಣಗಳು ದಾಖಲಾಗಿದ್ದರೆ, 2014ರ ನಂತರ 519 ರಾಜದ್ರೋಹ ಮೊಕದ್ದಮೆಗಳು ದಾಖಲಾಗಿವೆ. ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ 144 ಜನರು ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಿದ 149 ಮಂದಿಯ ವಿರುದ್ಧ ರಾಜದ್ರೋಹ ಪ್ರಕರಣಗಳು ದಾಖಲಾಗಿವೆ.
ಈ ಹಿನ್ನೆಲೆಯಲ್ಲಿ ದಿಶಾ ರವಿ ಪ್ರಕರಣ ಪ್ರಭುತ್ವದ ದಮನಕಾರಿ ನೀತಿಯ ಒಂದು ಆಯಾಮವಾಗಿದ್ದರೆ, ಪಟಿಯಾಲ ನ್ಯಾಯಾಲಯದ ಮಹತ್ವದ ತೀರ್ಪು ನ್ಯಾಯ ವ್ಯವಸ್ಥೆಗೆ ಚುರುಕುಮುಟ್ಟಿಸುವಂತಿದೆ. ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದಂತೆಯೂ ಇದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರಜೆಗಳ ದನಿಯೇ ಅಂತಿಮ ಎನ್ನುವ ಸತ್ಯವನ್ನು ಸರ್ಕಾರಕ್ಕಿಂತಲೂ ಹೆಚ್ಚಾಗಿ ಜನಸಾಮಾನ್ಯರು ಅರ್ಥಮಾಡಿಕೊಳ್ಳಬೇಕಿದೆ. ಆಗಲಾದರೂ ಭಾರತದ ಯುವ ಸಮುದಾಯ ಸಮೂಹ ಸನ್ನಿಯಿಂದ ಮುಕ್ತವಾಗಿ ಸ್ವತಂತ್ರವಾಗಿ ಆಲೋಚಿಸುವ ಶಕ್ತಿಯನ್ನು ಬೆಳೆಸಿಕೊಳ್ಳಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಭಾರತದ ಜನಸಂಖ್ಯೆ ವರವೋ..? ಶಾಪವೋ..?
- ಅಂಬಿಕಾ. ಕೆ
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಬೆಂಗಳೂರು ವಿಶ್ವವಿದ್ಯಾಲಯ
ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.
ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.
ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.
ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.
ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.
ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ
- ವೆನ್ನೆಲಾ ಕೆ.
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು
ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.
ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.
ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.
ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.
ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.
ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಬಹಿರಂಗ
ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!
- ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ ಚಿಂತಕರು, ಬೆಂಗಳೂರು
ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.
ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.
ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.
ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.
ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.
ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.
ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243