Connect with us

ಸಿನಿ ಸುದ್ದಿ

ಸಂದರ್ಶನ: ನೀವು ಅರಿಯದ ತುಳಸಿ ಪ್ರಸಾದ್ !

ತುಳಸಿ ಪ್ರಸಾದ್ ಅವರನ್ನು ಸುದ್ದಿದಿನ ಸಂಪರ್ಕಿಸಿದ್ದು, ಅವರು ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ.

Published

on

Tulasi_prasad funny_dubsmash
ಸುದ್ದಿದಿನ ಸಂದರ್ಶನ ( June 26) : ತನ್ನ ಹಾಡಿನ ಧಾಟಿಯಿಂದಾಗಿ ನೆಗಟಿವ್ ಕಮೆಂಟ್‍ಗಳಿಂದಲೇ ಖ್ಯಾತಿ ಪಡೆದಿರುವ ಹಾಸನ ಮೂಲದ ತುಳಸಿ ಪ್ರಸಾದ್ ಅವರನ್ನು ಸುದ್ದಿದಿನ ಸಂಪರ್ಕಿಸಿದ್ದು, ಅವರು ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ.
ನನ್ನ ಹಾಡುಗಳ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುವವರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಕೇಳಲು ಚೆನ್ನಾಗಿಲ್ಲವೆಂದರೆ ಬಯ್ಯುವುದು ಅವರ ಹಕ್ಕು. ಹಾಗೆಯೇ ಹಾಡುವುದು ನನ್ನ ಹಕ್ಕು ಅದನ್ನು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನನಗೆ ಖಾಸಗಿಯಾಗಿ ಯಾವೊಬ್ಬ ನಟ, ಗಾಯಕರಿಗೂ ಅವಮಾನ ಮಾಡುವ ಉದ್ದೇಶವಿಲ್ಲ. ಹಾಡುವುದು ನನ್ನ ಅಭಿರುಚಿ. ಹಾಡಿ ಅದನ್ನು ಪ್ರಕಟಿಸುತ್ತಿದ್ದೇನೆ. ನಾನು ಹುಟ್ಟುತ್ತಲೇ ಇಂಥ ವಾಯ್ಸ್ ಬೇಕೆಂದು ಕೇಳಿಕೊಂಡು ಬಂದಿರಲಿಲ್ಲ. ನನ್ನ ಧ್ವನಿ ಚೆನ್ನಾಗಿಲ್ಲ ಎಂದು ಕೇಳುಗರಿಗೆ ಅನಿಸಬಹುದು. ಆದರೆ, ನನಗೆ ಚೆನ್ನಾಗಿದೆ ಅನ್ನಿಸುತ್ತಿದೆ ಅದಕ್ಕಾಗಿ ನಾನು ದೃಢ ಸಂಕಲ್ಪ ಮಾಡಿ ಇನ್ನಷ್ಟು ಹಾಡುಗಳನ್ನು ಪ್ರಕಟಿಸುತ್ತಲೇ ಇದ್ದೇನೆ ಎನ್ನುತ್ತಾರೆ ತುಳಸಿ.

ಚಂದನ್ ಶೆಟ್ಟಿ ಪ್ರೇರಣೆ

ಗಾಯನ ಎಂದರೆ ನನಗೆ ಮೊದಲು ನೆನಪಾಗುವುದು ಚಂದನ್ ಶೆಟ್ಟಿ. ಅವರೇ ನನಗೆ ಪ್ರೇರಣೆ. ಮೊದಲು ಅವರು ಮಾಡುತ್ತಿದ್ದ ಆಲ್ಬಂಗಳನ್ನು ಕೇಳಿ ಏನಿದು ಕಿರಿಕಿರಿ ಅನಿಸುತ್ತಿತ್ತು. ಬರುಬರುತ್ತಾ ಅವರು ಎಲ್ಲರಿಗೂ ಇಷ್ಟವಾದರು. ನಾನು ಮೊದಲು ಹಾಡಿದಾಗ ಎಲ್ಲ ಬೈದರು. ಈಗ ಬೆಂಬಲಕ್ಕೆ ನಿಂತಿದ್ದಾರೆ ಬಯ್ಯುವವರ ಬಗ್ಗೆ ನನಗೆ ಬೇಸರವಿಲ್ಲ ಎಂದು ಅವರು ಪುನರುಚ್ಚರಿಸಿದರು.

ಡಿಪ್ರೆಶನ್ ನಲ್ಲಿದ್ದೆ

ಜೀವನದಲ್ಲಿ ಏನೂ ಸಾಧಿಸಲಿಲ್ಲ ಎಂಬ ಡಿಪ್ರೆಶನ್‍ನಲ್ಲಿದ್ದ ನನಗೆ ಕಲೆ ಕ್ಷೇತ್ರದಲ್ಲೇ ಮುಂದುವರಿಯಬೇಕೆಂಬ ಹಂಬಲ ಇತ್ತು. ಇದಕ್ಕಾಗಿಯೇ ನಾನು ಕಿರು ಚಿತ್ರಗಳನ್ನು ನಿರ್ಮಿಸಲು ಪ್ರಯತ್ನಿಸಿದೆ. ಮೂರು ಕಿರುಚಿತ್ರಗಳನ್ನು ನಿರ್ಮಿಸಿದೆ. ಕ್ಯಾಮೆರಾಮೆನ್ ಮಾತ್ರ ಇದ್ದರು. ಮಿಕ್ಕ ಎಲ್ಲವನ್ನು ನಾನೇ ಮಾಡಿಕೊಳ್ಳುತ್ತಿದ್ದೆ. ರಾತ್ರಿಯೆಲ್ಲ ನಿದ್ದೆಗೆಟ್ಟು ಎಡಿಟ್ ಮಾಡುತ್ತಿದ್ದೆವು. ಅಷ್ಟೆಲ್ಲ ಶ್ರಮ ಹಾಕಿದರೂ ನನ್ನ ಬಗ್ಗೆ ಯಾರೊಬ್ಬರೂ ಒಳ್ಳೆಯ ಮಾತನಾಡುತ್ತಿರಲಿಲ್ಲ. ಸ್ನೇಹಿತರು ಬೆಂಬಲಕ್ಕೆ ನಿಂತಿದ್ದರು.

ಬಿಟ್ಟುಬಿಡು ನಿಂಗ್ಯಾಕೊ ಇದಲ್ಲ ಎಂದರು

ತುಳಸಿ ಪ್ರಸಾದ್ ಅವರ ಹಾಡುಗಳ ಬಗ್ಗೆ ವ್ಯಕ್ತವಾಗುತ್ತಿದ್ದ ಕಮೆಂಟ್‍ಗಳನ್ನು ಗಮನಿಸಿದ ಮನೆಯವರು ಹಾಗೂ ನೆಂಟರಿಷ್ಟರು ನಿಂಗ್ಯಾಕೊ ಇದೆಲ್ಲ ಬಿಟ್ಟುಬಿಡಪ್ಪ ಎಂದಿದ್ದರಂತೆ. ಇದಕ್ಕೆಲ್ಲ ಸೊಪ್ಪು ಹಾಕದ ಅವರು ತಮ್ಮ ಛಲವನ್ನು ಎಂದಿಗೂ ಬಿಟ್ಟುಕೊಟ್ಟಿಲ್ಲ.

ತುಳಸಿ ಪ್ರಸಾದ್ ಕುರಿತ ಕೆಲವು ಕುತೂಹಲಕಾರಿ ಅಂಶಗಳು

ಫೇಸ್‍ಬುಕ್, ಯೂಟ್ಯೂಬ್‍ನಲ್ಲಿ ಹವಾ ಎಬ್ಬಿಸಿರುವ ತುಳಸಿ ಪರಸಾದ್ ಬಗ್ಗೆ ಈಗ ಎಲ್ಲರಿಗೂ ಚಿರಪರಿಚಿತ. ಫೇಸ್‍ಬುಕ್‍ನಲ್ಲಿ ನೆಗಟೀವ್ ಪಾತ್ರವಾಗಿ ಚಿತ್ರಿಸಲಾಗಿರುವ ತುಳಸಿ ಪ್ರಸಾದ್ ಕುರಿತ ಕೆಲವು ಕುತೂಹಲಕಾರಿ ಅಂಶಗಳು ಇಲ್ಲಿವೆ.
  • ತುಳಸಿಪ್ರಸಾದ್ ಮೂಲತಃ ಹಾಸನದವರು. ಆದಿ ಚುಂಚನಗಿರಿಯಲ್ಲಿ ವಿದ್ಯಾಭ್ಯಾಸ. ಮನೆಯಲ್ಲಿ, ಸ್ನೇಹಿತರು, ನೆಂಟರಿಷ್ಟರ ಪಾಲಿಗೆ ಒಬ್ಬ ಅಮಾಯಕ ಹುಡುಗ.
  • ಓದು ಮುಗಿದ ನಂತರ ಕಲೆ ಅವರನ್ನು ಕೈ ಬೀಸಿ ಕರೆಯಿತು. ಆಗ ಅವರು ಆಯ್ದುಕೊಂಡದ್ದು ಕಿರು ಚಿತ್ರ ನಿರ್ಮಾಣ ಕ್ಷೇತ್ರ.
  • ತುಳಸಿ ಪರಸಾದ್ ರಚಿಸಿ, ನಿರ್ಮಾಣ ಮಾಡಿ, ಅಭಿನಯಿಸಿರುವ ಎರಡು ಕಿರುಚಿತ್ರಗಳು ಈಗಲೂ ಫೇಸ್ಬುಕ್ ನಲ್ಲಿ ಲಭ್ಯವಿದೆ.
  • ನಿಗೂಢ ಹೂಮಳೆ ಕಿರಚಿತ್ರ ತುಳಸಿ ಅವರಿಗೆ ಹೆಸರು ತಂದುಕೊಟ್ಟಿತು. ಹೂವಿನ ಲೋಕ ಹಾಗೂ ದೇಶಪ್ರೇಮಿ ಎಂಬ ಕಿರು ಚಿತ್ರಗಳನ್ನೂ ಅವರು ನಿರ್ಮಿಸಿದ್ದಾರೆ.
  • ತುಳಸಿ ಅವರು ನಿರ್ಮಿಸಿರುವ ನಿಗೂಢ ಹೂಮಳೆ ಕಿರು ಚಿತ್ರ ಸಾಕಷ್ಟು ಹೆಸರು ತಂದುಕೊಟ್ಟಿತು. ಎರಡು ವರ್ಷಗಳ ಹಿಂದೆಯೇ ಅವರ ಬೆಂಬಲಿಗರ ಸಂಖ್ಯೆ ಹೆಚ್ಚಾಯಿತು.
  • ಮಿಕ್ಕ ಚಿತ್ರಗಳಲ್ಲಿ ಧ್ವನಿ ಸಂಗ್ರಹ ಸಮಸ್ಯೆಯಾದ ಕಾರಣ ಅವೆಲ್ಲವುಗಳಿಗೆ ಸರಿಯಾದ ಪ್ರಚಾರ ಸಿಗಲಿಲ್ಲ.
  • ಡೈನೋಸರ್ ಕುರಿತ ಫ್ಯಾಂಟಸಿ ಸಿನಿಮಾವೊಂದರ ನಿರ್ಮಾಣಕ್ಕೂ ಅವರು ಕೈ ಹಾಕಿದ್ದರು.
  • ಡೈನೊಸರ್ ಸಿನಿಮಾದ ಟೀಸರ್ ಸಹ ಬಿಡುಗಡೆ ಮಾಡಿದ್ದರು.
  • ತುಳಸಿ ಪ್ರಸಾದ್ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪಕ್ಕಾ ಅಭಿಮಾನಿ.
  • ಫೇಸ್ ಬುಕ್‍ನಲ್ಲಿ ತುಳಸಿ ಕುರಿತು ಋಣಾತ್ಮಕ ಪ್ರತಿಕ್ರಿಯೆಗಳು ಕೇಳಿಬರುತ್ತಿದ್ದರೂ ರವಿಚಂದ್ರನ್ ಅಭಿಮಾನಿಗಳ ಸಂಘ ಅವರ ಬೆಂಬಲಕ್ಕೆ ನಿಂತಿದೆಯಂತೆ.
  • ಗಾಯನಕ್ಕಿಂತ ನಟನೆ, ನಿರ್ದೇಶನದ ಮೇಲೆ ತುಳಸಿ ಅವರಿಗೆ ಹೆಚ್ಚು ಪ್ರೇಮ ಇದೆಯಂತೆ.
  • ಫೇಸ್ ಬುಕ್‍ನಲ್ಲಿ ಕೇಳಿಬರುತ್ತಿದ್ದ ನೆಗಟಿವ್ ಕಮೆಂಟ್‍ಗಳಿಂದ ನೊಂದಿದ್ದ ತುಳಸಿ ಅವರು ಬಿಟಿವಿಯಲ್ಲಿ ಸಂದರ್ಶನಕ್ಕೆ ಹೋಗುವ ಎರಡು ವಾರಗಳ ಮುನ್ನ ತಮ್ಮ ಎಫ್‍ಬಿ ಪುಟವನ್ನು ಡಿಲಿಟ್ ಮಾಡಲು ಚಿಂತಿಸಿದ್ದರಂತೆ.
  • ನೆಗಟೀವ್ ಕಮೆಂಟ್ ಹಾಕುವವರಿಂದ ದೂರ ಇರುವ ಸಲುವಾಗಿ ತುಳಸಿ ಪ್ರಸಾದ್ ಎಂದಿದ್ದ ಎಫ್ ಬಿ ಪುಟವನ್ನು ರವಿ ಪ್ರಸಾದ್ ಎಂದು ಬದಲಿಸಿಕೊಂಡಿದ್ದಾರೆ.

ಅದೃಷ್ಟದ ಬಾಗಿಲು ತೆರೆದಾಗ !

ತುಳಸಿ ಪ್ರಸಾದ್ ಅವರಿಗೆ ಬಿಗ್‍ಬಾಸ್ ರಿಯಾಲಿಟಿ ಶೋನಲ್ಲಿ ಭಾಗವಹಿಸುವ ಅವಕಾಶ ಹುಡುಕಿಕೊಂಡು ಬಂದಿದೆ. ಶತಾಯ ಗತಾಯ ಸಿನಿಮಾದ ನಿರ್ದೇಶಕರು ತಮ್ಮ ಮುಂದಿನ ಚಿತ್ರದಲ್ಲಿ ಒಂದು ಪಾತ್ರ ನೀಡುವುದಾಗಿ ಭರವಸೆ ನೀಡಿದ್ದಾರೆ.  ಇನ್ನಷ್ಟು ಕಿರು ಚಿತ್ರಗಳ ನಿರ್ಮಾಣಕ್ಕೆ ತುಳಸಿ ಪ್ರಸಾದ್ ಕೈ ಹಾಕಲು ನಿರ್ಧರಿಸಿದ್ದಾರೆ.

 

ಕ್ರೀಡೆ

ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು

Published

on

ಮದ್ಯಾಹ್ನದ ಸುದ್ದಿಮುಖ್ಯಾಂಶಗಳು

  1. ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
  2. ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
  3. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  4. ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
  5. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
  6. ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ಹಾಲಿವುಡ್‌ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
  7. ಐಸಿಸಿ ವಿಶ್ವ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್‌ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
  8. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

Published

on

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.

ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್‍ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್‍ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್‍, ಅಚ್ಯುತ್‍ ಕುಮಾರ್‍, ರಮೇಶ್‍ ಅರವಿಂದ್‍ ಮುಂತಾದವರು ನಟಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

Published

on

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್‍ ಮತ್ತು ಸುಮಲತಾ ಅಂಬರೀಷ್‍ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್‍, ಅಭಿ ಬೆನ್ನಿಗೆ ‘ನಿಮ್ಮ‌ಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.

“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್‍ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್‍ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ17 hours ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ5 days ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ1 week ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ1 week ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ1 week ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ1 week ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending