ದಿನದ ಸುದ್ದಿ
ಮಹಿಳೆ ಸಂಸಾರದ ಅಡಿಗಲ್ಲು : ಡಾ. ಶಶಿಕಲಾ ಕೃಷ್ಣಮೂರ್ತಿ
ಸುದ್ದಿದಿನ,ದಾವಣಗೆರೆ: ‘ಕನ್ನಡ ಕಲಿತವನು ಜ್ಞಾನಿ, ಕನ್ನಡ ಕಲಿಸುವವನು ದಾನಿ’ ಎನ್ನುವ ಮಾತಿನಂತೆ ನಾವೆಲ್ಲರು ಸೇರಿ ಕನ್ನಡವನ್ನು ಉಳಿಸೊಣ, ಪೋಷಿಸೋಣ, ಬೆಳೆಸೋಣ ಎಂದು ನಗರದ ಖ್ಯಾತ ವೈಧ್ಯೆ ಹಾಗು ಸಾಹಿತಿಗಳಾದ ಡಾ. ಶಶಿಕಲಾ ಕೃಷ್ಣಮೂರ್ತಿಯವರು ಕನ್ನಡಾಭಿಮಾನಿಗಳಿಗೆ ಕರೆ ನೀಡಿದರು.
ದಾವಣಗೆರೆ ತಾಲ್ಲೂಕು ಕ ಸಾ ಪ ದ ವತಿಯಿಂದ ಅಂತರ್ಜಾಲದ ಮೂಲಕ ಕನ್ನಡ ನುಡಿ-ಹಬ್ಬ ದ 5 ನೇ ದಿನದ ಉಪನ್ಯಾಸ ನೀಡುತ್ತಾ ಅವರು “ಮಹಿಳೆ ಮತ್ತು ಆರೋಗ್ಯ” ಎಂಬ ವಿಷಯದ ಕುರಿತಾಗಿ ಮಾತನಾಡಿದರು.
ಮಹಿಳೆ ಮತ್ತು ಆರೋಗ್ಯಕ್ಕೆ ನಿಕಟವಾದ ಸಂಬಂಧಂವಿದೆ. ಏಕೆಂದರೆ “ರೈತ ದೇಶದ ಬೆನ್ನಲುಬು” ಎಂದಾದರೆ ಮಹಿಳೆ ಪ್ರತಿ ಕುಟುಂಬಕ್ಕೆ ಪ್ರತಿ ಸಂಸಾರಕ್ಕೆ ಬೆನ್ನಲುಬು ಹೆಣ್ಣು ಸಂಸಾರದ ಕಣ್ಣು. ಮಹಿಳೆ ಸಂಸಾರದ ಅಡಿಗಲ್ಲು. ಸಂಸಾರದ ಆರೋಗ್ಯ ಪಾಲನೆ ಪೋಷಣೆ ಮಾಡುತ್ತಿದ್ದು ಅವಳನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕೆಂದು ತಿಳಿಸಿದರು.
ಮುಂದುವರೆದು ಹೆಣ್ಣು ತಾಯಿಯಾಗಿ, ಹೆಂಡತಿಯಾಗಿ, ಮಗಳಾಗಿ, ಸೊಸೆಯಾಗಿ, ದಾದಿಯಾಗಿ, ವೈದ್ಯಳಾಗಿ ಸಲಹೆಗಾರಳಾಗಿ ಹೀಗೆ ಏಷ್ಟೊಂದು ಕೆಲಸ ಮಾಡುತ್ತಿದ್ದು ಅವಳ ಕಣ್ಣು ಆನಂದ ಬಾಷ್ಪದಂತಹ ಕಣ್ಣೀರಿನ ಹೊರತು ಬೇರೆ ರೀತಿಯಲ್ಲಿ ನೋಡದಂತೆ ಅವಳ ಬಗ್ಗೆ ಕಾಳಜಿ ವಹಿಸಬೇಕು.
ಹೆಣ್ಣು ಭಗವಂತನ ವಿಶೇಷವಾದ ಸೃಷ್ಟಿ. ಆದರೂ ಅವಳು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾಳೆ. ಅವಳಿಗೂ ಆರೋಗ್ಯ ಬೇಕು. ಅವಳು ಆರೋಗ್ಯದಿಂದಿದ್ದರೆ ಸಂಸಾರ ಆರೋಗ್ಯ ಪೂರ್ಣವಾಗಿರುತ್ತದೆ ಎಂದರು.
ಮುಖ್ಯವಾಗಿ ಹೆಣ್ಣಿಗೆ ಬರುವ ಕಾಯಿಲೆಗಳು ಹಾಗೂ ಅವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನೋಡುವುದಾದರೆ ; ಭಾರತದ ಮಹಿಳೆ ಮುಖ್ಯವಾಗಿ ಐದು ಸಮಸ್ಯೆಗಳನ್ನು ಎದುರಿಸುತ್ತಿದ್ದಾಳೆ. ಅವೆಂದರೆ
ಕನ್ನಡ ಮೊದಲ ಅಕ್ಷರ “ಅ” ದಿಂದ ಶುರುವಾಗುವ ಕಾಯಿಲೆಗಳು ಬಹಳ ಭಯಾನಕ.
ಅವುಗಳಲ್ಲಿ ಅನಿಮಿಯಾ (ರಕ್ತ ಕೊರತೆ/ ರಕ್ತ ಹೀನತೆ), ಅರ್ಬುದ ರೋಗ (ಕ್ಯಾನ್ಸರ್), ಗರ್ಭಕೋಶ ಮತ್ತು ಸ್ಥನ ಕ್ಯಾನ್ಸರ್, ಗರ್ಭಕೋಶದ ಒಳಪದರ (ಎಂಡೋಮೆಟ್ರಿಯಂ) ಇವುಗಳ ಜೊತೆಗೆ ಪುರುಷರ ಹಾಗೆ ಹೃದಯ ಸಂಬಂಧಿ ರೋಗಗಳನ್ನು ಅವಳು ಎದುರಿಸುತ್ತಿದ್ದಾಳೆ.
ಅವಳು ಸಹ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾಳೆ. ಇತ್ತೀಚಿನ ದಿನಗಳಲ್ಲಿ ತುಂಬಾ ನೋವಿನ ಸಂಗತಿ ಎಂದರೆ ಸ್ಥನದ ಕ್ಯಾನ್ಸರ್ ಹಾಗೂ ಗರ್ಭಕೋಶದ ಕೊರಳಿನ ಕ್ಯಾನ್ಸರ್. ಇದು ಸಾಮಾನ್ಯವಾಗಿ 30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಬರುತ್ತದೆ. ಪ್ರತಿ ದಿನದ ಅಂಕಿ ಅಂಶಗಳ ಪ್ರಕಾರ185 ಮಹಿಳೆಯರು ಗರ್ಭಕೋಶದ ಕ್ಯಾನ್ಸರ್ನಿಂದ ಸಾವನಪ್ಪುತ್ತಿದ್ದಾರೆ. ಇದು ತಡೆಗಟ್ಟ ಬಹುದಾದಂತಹ ಒಂದು ರೋಗ. ಇದನ್ನು ಪ್ರಾರಂಭಿಕ ಹಂತದಲ್ಲಿ ಗುರುತಿಸಿದರೆ ಚಿಕಿತ್ಸೆ ಫಲಕಾರಿಯಾಗುತ್ತದೆ ಎಂದು ಭರವಸೆ ನೀಡಿದರು.
ಇಂದು ಜನರಿಗೆ ಬಹುಮುಖ್ಯವಾದ ಅರಿವಿನ ಕೊರತೆ, ಜ್ಞಾನದ ಕೊರತೆ, ವೈಧ್ಯರ ಬಳಿ ಬೇಗ ಹೋಗದಿರುವುದು, ಸಂಕೋಚ, ಹೀಗೆ ಹಲವು ನಕಾರಾತ್ಮಕವಾದ ವಿಚಾರಗಳಿಂದ ಕಾಯಿಲೆಗಳಿಗೆ ಬೇಗ ತುತ್ತಾಗುತ್ತಿದ್ದಾರೆ. ಆದ್ದರಿಂದ ಆರೋಗ್ಯದ ಬಗ್ಗೆ ಜಾಗೃತರಾಗಿರಬೇಕು. ಕೂಡಲೇ ವೈಧ್ಯರ ಸಲಹೆ-ಮಾರ್ಗದರ್ಶನ, ಚಿಕಿತ್ಸೆ ಪಡೆಯುವ ಮೂಲಕ ಸಾಕಷ್ಟು ಪ್ರಮಾಣದಲ್ಲಿ ರೋಗಗಳನ್ನು ತಡೆಗಟ್ಟಬಹುದು ಎಂದು ತಿಳಿಸಿದರು.
ಈ ದೇಹ ಒಂದು ಆಲಯವಿದ್ದಂತೆ ಇದನ್ನು ತುಂಬಾ ಚೆನ್ನಾಗಿ ಕಾಪಾಡಿಕೊಳ್ಳಬೇಕು ಎಂದು ಹೇಳುತ್ತಾ ಹಣ್ಣು ತರಕಾರಿಗಳನ್ನು ಸರಿಯಾದ ರೀತಿಯಲ್ಲಿ ಸೇವಿಸುವುದು ಬಹಳ ಮುಖ್ಯವೆಂದು ತಮ್ಮ ಉಪನ್ಯಾಸದಲ್ಲಿ ಸಲಹೆ ನೀಡಿದರು.
ಅಧ್ಯಕ್ಷೀಯ ನುಡಿಗಳನ್ನು ಆಡುತ್ತಾ ಭಾರತೀಯ ಪಾರಂಪರೀಕ ವೈಧ್ಯ ಪದ್ದತಿ ಪ್ರಾಚೀನ ಕಾಲದಿಂದಲೂ ಇಡೀ ವಿಶ್ವಕ್ಕೆ ಮಾದರಿಯಾಗಿದ್ದು. ಅಪಾರ ಕೊಡುಗೆಗಳನ್ನು ನೀಡುತ್ತಾ ಬಂದಿದೆ.
ಪ್ರಾಚೀನ ವೈಧ್ಯರುಗಳಾದ ಚರಕ ಮತ್ತು ಸುಶ್ರುತರು ಕೊಟ್ಟಿರುವ ಕೊಡುಗೆ ಅಪಾರವಾದುದ್ದು.
ಈ ನಿಟ್ಟಿನಲ್ಲಿ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದ ಪೂಜ್ಯ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಶಾಂತಿವನದಲ್ಲಿ ಚರಕ ಮತ್ತು ಸುಶ್ರುತರ ಶಿಲಾ-ವಿಗ್ರಹಗಳನ್ನು ಸ್ಥಾಪಿಸಿ ಅನೇಕ ಗಿಡಮೂಲಿಕೆ ಸಸ್ಯಗಳನ್ನು ಬೆಳೆಸಿರುವುದು ಅತ್ಯಂತ ಶ್ಲಾಘನೀಯ ಎಂಬುದಾಗಿ ತಾಲ್ಲೂಕು ಕ ಸಾ ಪ ಅಧ್ಯಕ್ಷ ಬಿ. ವಾಮದೇವಪ್ಪ ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಬಣ್ಣಿಸಿದರು.
ಆರಂಭದಲ್ಲಿ ತಾಲ್ಲೂಕು ಕ ಸಾ ಪ ದ ನಿರ್ದೇಶಕರಾದ ಶ್ರೀಮತಿ ಎಸ್.ಎಂ ಮಲ್ಲಮ್ಮನವರು ಸ್ವಾಗತಿಸಿದರು.
ಬೆಳಕು ಜಾನಪದ ಕಲಾ ತಂಡದ ಶ್ರೀಮತಿ ರುದ್ರಾಕ್ಷಿ ಬಾಯಿ ಪುಟ್ಟನಾಯ್ಕ ಮತ್ತು ತಂಡದವರು ಸುಗಮ ಸಂಗೀತವನ್ನು ನೆರವೇರಿಸಿದರು.
ವರದಿ: ಸಿ.ಜಿ ಜಗದೀಶ್ ಕೂಲಂಬಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?