Connect with us

ದಿನದ ಸುದ್ದಿ

‘ಸರಕಾರ’ ಬಡವನ ಬುತ್ತಿಯಿಂದ ರೊಟ್ಟಿಕಸಿಯುವ ನಾಯಿಯಾಗಬಾರದು

Published

on

  • ಬಿ.ಪೀರ್ ಬಾಷ

ಮುಖ್ಯಮಂತ್ರಿ, ಸಾರಿಗೆ ಮಂತ್ರಿಗಳೇ;
ಹಣಗಳಿಸಲು ಸರಕಾರದಿಂದ ಬೇರೆ ವ್ಯಾಪಾರ ನಡೆಸಿ, ಬಡವರ ಒಡಲಿಗೆ ಬೆಂಕಿ ಇಡಬೇಡಿ.

ಕರೊನಾ ಎಂಬ ಸಿರಿವಂತರು ಹುಟ್ಡಿಸಿದ ಮಾರಿಬೇನೆಗೆ ಬಡವರು ಒಡಲು ಬೆಂದು ಹೋಗುತ್ತಿದೆ. ಹಾಗೆ ದುಡುತ್ತಿರುವ ಒಡಲಿಗೆ ಕೊಳ್ಳಿ ತಿವಿಯುವ ಕೆಲಸ ಬಹುಶಃ ಕಳ್ಳನೂ, ಕಟುಕನೂ, ಕಡುಪಾಪಿಯೂ ಮಾಡಲಾರ. ಆದರೆ ನಮ್ಮ ಸರಕಾರ ಏನು ಮಾಡುತ್ತಿದೆ?

ಎರಡು ಹೊತ್ತಿನ ತುತ್ತನ್ನು ಗಳಿಸಿಕೊಳ್ಳಲು ಬೆಂಗಳೂರಿಗೆ ಬಂದು, ಕಂಡಲ್ಲಿ ಜೋಪಡಿ ಕಟ್ಟಿಕೊಂಡು, ಕಲ್ಲು ಹೂಡಿ ಒಲೆಮಾಡಿ ಅನ್ನದಕಾಳು ಕುಚ್ಚಿಕೊಂಡು ಉಂಡು ಮಲಗುತ್ತಿದ್ದ ಕೂಲಿ ಸಾವಿರಾರು ಕಾರ್ಮಿಕರು ಲಾಕ್‌ಡೌನ್ ಆದ ಕ್ಷಣದಿಂದ ತತ್ತರಿಸಿಹೋಗಿದ್ದಾರೆ. ಅವರವರ ಹಳ್ಳಿಗಳಲ್ಲಿದ್ದಿದ್ದರೆ ಗಂಜಿ ಕುಡಿದು ಅಂಗಳದಲ್ಲಾದರೂ ಮಲಗುವ ಸಮಾಧಾನವಾದರೂ ಇರುತ್ತಿತ್ತು. ಇಲ್ಲಿ ಈ ಶಹರದಲ್ಲಿ, ಹಗಲು ಕೂಲಿಯಿಲ್ಲವೆಂದರೆ ರಾತ್ರಿ ಊಟವಿಲ್ಲ, ಇಂತಹ ಸ್ಥಿತಿಯಿರುವಾಗ ಕಳೆದ ಸು. ಒಂದೂವರೆ ತಿಂಗಳಿನಿಂದ ಅದು ಹೇಗೆ ಬದುಕಿರಬಹುದು? ಅವರ ಕಣ್ಣುಗಳಿಂದ ಅದೆಷ್ಟು ನೀರು ಹರಿದಿರಬಹುದು? ಹಸಿದು ಅಳುವ ಮಕ್ಕಳನ್ನು ಹೇಗೆ ಸುಮ್ಮನಿರಿಸಿರಬಹುದು?

ಹೇಗಾದರೂ ಮಾಡಿ ಊರು ಮುಟ್ಟಿದರೆ ಸಾಕೆಂದು, ಲೆಕ್ಕಹಾಕಿ ಸರಿಯಾಗಿ ಬಸ್ ಚಾರ್ಜ್ ಗೆ ಆಗುವಷ್ಟು ಹಣವನ್ನು ಸೀರೆ ಸೆರಗಿನಲ್ಲಿ, ಸೊಂಟದ ಮಡಿಕೆಯಲ್ಲಿ ಗಂಟು ಗಂಟಿಕೊಂಡು ಊರಿಗೆ ಹೋಗಬಹುದು ಎಂಬ ಸುದ್ದಿ ಕೇಳುತ್ತಲೇ ಬಸ್ಟ್ಯಾಂಡಿಗೆ ಬಂದರೆ ಇಲ್ಲಿ ದುಪ್ಪಟ್ಟು, ಮೂರುಪಟ್ಟು ಬಸ್ ಚಾರ್ಜ್ ಎಂದು ಹೇಳಿದರೆ ಅವರಿಗೆ ಎಷ್ಟು ಸಂಕಟವಾಗಿರಲಿಕ್ಕಿಲ್ಲ. ಬೆಳಗಾವಿಗೆ 800ಬಾಗಲಕೋಟೆಗೆ 700 ರೂ ಇದ್ದ ಬಸ್ ಚಾರ್ಜು, ಏಕಾಏಕಿ ಬೆಳಗಾವಿಗೆ1478 ಬಾಗಲಕೋಟೆಗೆ 1311ಎಂದರೆ ಇದು, ಹಸಿದ ಬಡವನ ಬುತ್ತಿಯಿಂದ ರೊಟ್ಟಿಕಸಿಯುವ ನಾಯಿಗಿಂತಲೂ ಕೀಳಾದ ಕೆಲಸವಲ್ಲವೇ?

ಆನಂದ್ ಸಿಂಗ್ ರಂತಹ ಧಣಿಗಳು ವಿಮಾನವನ್ನೇ ಬಾಡಿಗೆಗೆ ಪಡೆದು ವಿದೇಶದಲ್ಲಿದ್ದ ಮಕ್ಕಳನ್ನು ಕರೆದುಕೊಂಡು ಬಂದರು. ದೇಶದ ಸರಕಾರವೂ ಲಕ್ಷಾಂತರ ಸಂಬಳ ಪಡೆಯುವವರನ್ನು, ಕೋಟ್ಯಾಂತರ ತೆರಿಗೆ ಕಟ್ಟುವವರನ್ನು ವಿಶೇಷ ವಿಮಾನಗಳಿಂದ ಕರೆತರುವ ಪ್ರಯತ್ನವನ್ನೂ ಮಾಡೀತು? ಆದರೆ ಈ ಬಡಜೀವಿಗಳ ಇವರಿಗ್ಯಾವ ಲೆಕ್ಕ? ಸತ್ತರೆ ಮರ್ಯಾದೆ ಹೋದೀತೆಂಬ ಕಾರಣಕ್ಕೆ ಅಗ್ಗದ ರೇಷನನ್ನು ಕೊಡುವಂತೆ ಮಾಡಿ ಫೋಟೋ ತೆಗೆದಿಕೊಂಡರೆ ಸಾಕು ಜನೋಪಕಾರಿಯೆಂದು ಹೇಳಿಕೊಳ್ಳಲು. ಇನ್ನು ಬೆಂಗಳೂರೆಂಬ ಮಾಯಾನಗರದಲ್ಲಿ ಬದುಕೆಂಬ ಬದುಕೇ ಮೂರಾಬಟ್ಟೆಯಾಗಿ ಬಿಸಿಲಲ್ಲಿ ಬಾಡಿ ಗಾಳಿಪಾಲಾಗಿ ಕಸದಗುಂಟ ಹರಿದು ಹಂಚಿಹೋಗಿರುವ ಹೊತ್ತು ಮುಖ್ಯಮಂತ್ರಿ, ಪ್ರಧಾನ ಮಂತ್ರಿಗಳಿಗೆ ಇಂಥವರ ಬಗ್ಗೆ ಖಬರು ಇಲ್ಲವೆಂದರೆ ಏನು ಮಾಡಬೇಕು?

ಇಂಥ ಕೂಲಿ ಕಾರ್ಮಿಕರ ಸಂಖ್ಯೆ ಈಗ ದೇಶದಲ್ಲಿ ಹದಿನೈದಿಪ್ಪತ್ತು ಕೋಟಿಗೂ ಹೆಚ್ಚು. ಇವರು ಈಗ ಟಿ.ವಿ.ಚಾನೆಲುಗಳಿಗೆ ಸುದ್ದಿಯ ವಸ್ತುವಲ್ಲ. ಅವರಿಗಿರುವ ಉಮೇದಿಯೇ ಬೇರೆ. ಇನ್ನು ಸರಕಾರಗಳಿಗೆ ಕಾಪಾಡಬೇಕಿರುವುದು ಯಾರ ಹಿತಾಸಕ್ತಿಯನ್ನು? ಅದೂ ಆಗಿಯೇ ಹೋಯಿತು! ಸಾವಿರಾರು ಕೋಟಿ ಲೂಟಿಯೂ ಮಾಫ್ ಆಯಿತು!!

ಆದರೆ ಇಂಥ ವಿಶ್ವಜಗದ್ಗುರು ಮಹಾನುಭಾವರು ಅವರ ಪಟಾಲಂಗಳ ಸರಕಾರಗಳಿಗೆ ಕೂಲಿಕಾರ್ಮಿಕರನ್ನು ಉಚಿತವಾಗಿ ಅವರವರ ಮನೆಗಳಿಗೆ ಸರಕಾರಿ ಬಸ್ಸಿನಲ್ಲಿ ಮನೆ ಸೇರಿಸುವ ಯೋಗ್ಯತೆಯೂ ಇಲ್ಲದಾಯಿತೇ? ನಾಚಿಕೆಗೇಡು! ಅದು ಹೋಗಲಿ, ಇಂತಹ ಹೊತ್ತಿನಲ್ಲಿ ಬಸ್ ಚಾರ್ಜ್ ಪಡೆದು ಬಸ್ ಹತ್ತಿಸಿಕೊಂಡರೂ ನಾಚಿಕೆಗೇಡೇ ಆದರೂ ಇನ್ನು ಡಬಲ್ ತ್ರಿಪಲ್ ಚಾರ್ಜು ಪೀಕುತ್ತಾರೆ ಎಂದರೆ ಇದೊಂದು ಸರಕಾರವಾ ಅಥವಾ ? ಮನುಷ್ಯತ್ವ ಇರುವ ಯಾರಿಗಾದರೂ ಸಿಟ್ಟು ಬರದೇ ಇದ್ದೀತೇ?

ಹಸಿದು ಅಳುವ ಕೂಸಿಗೆ ನಾಲ್ಕು ರೂಪಾಯಿಯ ಬಿಸ್ಕೀಟು ಕೊಡಿಸಲು ಕಣ್ಣೀರು ತಂದುಕೊಳ್ಳುತ್ತಿರುವ ತಂದೆತಾಯಿಗಳು ಅಂತಹ ಆರೇಳು ವರ್ಷದ ಮಕ್ಕಳಿಗೂ ಸಾವಿರಾರು ರೂಪಾಯಿ ಬಸ್ ಚಾರ್ಜು ಕೊಡಬೇಕು ಎಂದರೆ…ಎದೆಯೊಡೆಯದಿದ್ದೀತೇ? ಹಣವೇ ಇಲ್ಲದವರು ಏನು ಮಾಡಬೇಕು? ಅವರವರ ಊರ ಮುಖ ನೋಡದೇ ಬೀದಿ ಹೆಣವಾಗಬೇಕೇ? ಏನಾಗಿದೆ ಈ ಸರ್ಕಾರಕ್ಕೆ? ಏನು ತುಂಬಿದೆ ಈ ಅಧಿಕಾರಿಗಳ ತಲೆಯಲ್ಲಿ? ಸಾವಿರಾರು ಕೋಟಿ ಆಗಬೇಕಾದಲ್ಲಿ ಆಗಿದೆ. ಆದರೆ ಈ ನಷ್ಟವನ್ನು ಬಡವರ ಬುತ್ತಿಗಂಟು ಕಸಿದು ಭರ್ತಿ ಮಾಡಿಕೊಳ್ಳಬೇಕೇ?

ಕೊಲ್ಲುವುದಷ್ಟೇ ಅಲ್ಲ, ಸಾವೇ ಸುಖ ಎಂಬಷ್ಟು ಕಷ್ಟ ಕೊಡುವುದು ಕೊಲೆಗಿಂತಲೂ ಕ್ರೂರ ನಡವಳಿಕೆ. ಇಂತಹ ಸ್ಥಾನದಲ್ಲಿ ಈಗ ಸರಕಾರಗಳೇ ಇವೆ ಎಂಬುದು ನಿಜಕ್ಕೂ ಮಾರಿಬೇನೆಗಿಂತಲೂ ಭೀಕರ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending