ರಾಜಕೀಯ
ಬರಿದಾಗುತ್ತಿದೆ ಕರ್ನಾಟಕದ ಖಜಾನೆ
- ವಿವೇಕಾನಂದ ಹೆಚ್.ಕೆ
ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ. ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ ಸಂಸಾರದಂತಾಗಿದೆ. ಮೈನಸ್ ಬಜೆಟ್ ಆಗಿ ಮುಂದುವರಿಯುತ್ತಿದೆ. ಹೇಗೋ ಕಷ್ಟ ಪಟ್ಟು ತೂಗಿಸಿಕೊಂಡು ಹೋಗುವಂತಾಗಿದೆ.
ಕರ್ನಾಟಕ ಮೂಲದ ವಿಪ್ರೋ, ಇನ್ಫೋಸಿಸ್, ಬಯೋಕಾನ್ ಮುಂತಾದ ಖಾಸಗಿ ಸಂಸ್ಥೆಗಳು ಏರು ಮುಖದ ಪ್ರಗತಿ ದಾಖಲಿಸುತ್ತಿವೆ. ಸರ್ಕಾರದ ಲೆಕ್ಕವೂ ಏರು ಮುಖದಲ್ಲಿದೆ ಆದರೆ ಸಾಲ ಮತ್ತು ಬಡ್ಡಿಯ ಲೆಕ್ಕದಲ್ಲಿ. ಇದಕ್ಕೆ ಕೇವಲ ಒಂದು ಪಕ್ಷ, ಸರ್ಕಾರ ಅಥವಾ ವ್ಯಕ್ತಿ ಕಾರಣವಲ್ಲ. ಇಡೀ ಸರ್ಕಾರಿ ವ್ಯವಸ್ಥೆಯ ಇತಿಹಾಸ ಕಾರಣವಾಗಿದೆ. ಇದೇನು ಆಶ್ಚರ್ಯಪಡುವಂತಹ ವಿಷಯವಲ್ಲ. ಸರ್ಕಾರದ ಆದಾಯ ಖರ್ಚು ಲೆಕ್ಕಗಳನ್ನು ಸೂಕ್ಷ್ಮವಾಗಿ ಮತ್ತು ಕೂಲಂಕಷವಾಗಿ ಪರಿಶೀಲಿಸಿದರೆ ಎಲ್ಲರಿಗೂ ಅರ್ಥವಾಗುತ್ತದೆ.
ಸರ್ಕಾರವೆಂಬುದು ಆಳುವ ಪಕ್ಷಗಳಿಗೆ ಬಾಡಿಗೆ ಮನೆ ಇದ್ದಂತೆ. ಅದು ಯಾವತ್ತಿಗೂ ತಾತ್ಕಾಲಿಕ ಎಂಬ ಅರಿವು ಅಧಿಕಾರಸ್ಥರಿಗೆ ತಿಳಿದಿರುತ್ತದೆ. ಆದ್ದರಿಂದ ಅವರು ಎಷ್ಟು ಸಾಧ್ಯವೋ ಅಷ್ಟು ತಮ್ಮ ಹಿತಾಸಕ್ತಿಗೆ ಅನುಕೂಲಕರ ಕೆಲಸಗಳನ್ನು ಮಾಡಿ ತಕ್ಷಣದ ಲಾಭಗಳನ್ನು ಮಾಡಿಕೊಂಡು ದೀರ್ಘಕಾಲದಲ್ಲಿ ಅದರ ಪರಿಣಾಮಗಳನ್ನು ನಿರ್ಲಕ್ಷಿಸುತ್ತಾರೆ.
ಅದರಿಂದಾಗಿಯೇ ಇವತ್ತಿನ ಖಜಾನೆಯ ಪರಿಸ್ಥಿತಿ. ಇದು ತಾತ್ಕಾಲಿಕವೇ ಇರಬಹುದು. ಮುಂದೆ ಸರಿ ಹೋಗಬಹುದು. ಆದರೆ ಸರ್ಕಾರದ ಮಟ್ಟದಲ್ಲಿ ಈ ಸ್ಥಿತಿ ಒಳ್ಳೆಯದಲ್ಲ. ಒಬ್ಬ ವ್ಯಕ್ತಿ ಅಥವಾ ಒಂದು ಖಾಸಗಿ ಸಂಸ್ಥೆಯ ಏರಿಳಿತಗಳು ಸಹಜ ಮತ್ತು ಅದರ ಪರಿಣಾಮ ಕಡಿಮೆ ಪ್ರಮಾಣದಲ್ಲಿ ಇರುತ್ತದೆ. ಆದರೆ ಶಾಸಕಾಂಗ ಕಾರ್ಯಾಂಗ ನ್ಯಾಯಾಂಗಗಳ ಹದ್ದಿನ ಕಣ್ಣಿನಲ್ಲಿ, ಅಂಕಗಳ ದೃಷ್ಟಿಯಿಂದ ಅತಿ ಬುದ್ದಿವಂತರಾದವರು ಇದನ್ನು ನಿರ್ವಹಿಸುತ್ತಿರುತ್ತಾರೆ. ರಾಜ್ಯದ ಎಲ್ಲಾ ಅಧಿಕಾರ ಮತ್ತು ಸಂಪನ್ಮೂಲಗಳು ಅವರ ನಿಯಂತ್ರಣದಲ್ಲಿಯೇ ಇರುತ್ತವೆ. ಅಲ್ಲದೆ ಇಡೀ ರಾಜ್ಯದ ಜನರ ಬದುಕಿನ ಪ್ರಶ್ನೆ ಅಡಗಿರುತ್ತದೆ. ಆದ್ದರಿಂದ ತುಂಬಾ ತುಂಬಾ ಜವಾಬ್ದಾರಿಯುತವಾಗಿ ಆರ್ಥಿಕ ಪರಿಸ್ಥಿತಿ ನಿಭಾಯಿಸಬೇಕಾಗುತ್ತದೆ.
ಕೇವಲ ಇಷ್ಟೇ ಅಲ್ಲ. ಈ ಸರ್ಕಾರ ನಡೆಸಲು ರಾಜ್ಯ ಆದಾಯದ ಅತಿದೊಡ್ಡ ಭಾಗ ಅದರ ನಿರ್ವಹಣೆಗೇ ಹೋಗುತ್ತದೆ. ಹೀಗಿದ್ದರೂ ಅವ್ಯವಸ್ಥೆ ಇದೆ ಎಂದರೆ ಸರ್ಕಾರದ ಅದಕ್ಷತೆಗೆ ಇದಕ್ಕಿಂತ ಉದಾಹರಣೆ ಬೇಕಿಲ್ಲ.
ಹಾಗಾದರೆ, ಕರ್ನಾಟಕ ಭಾರತದಲ್ಲಿ ಬಡ ರಾಜ್ಯವೇ ? ಇಲ್ಲಿನ ಆದಾಯ ಕಡಿಮೆಯಾಗುತ್ತಿದೆಯೇ ? ಸಂಪನ್ಮೂಲಗಳು ಬರಿದಾಗಿವೆಯೇ ?ಖಂಡಿತ ಇಲ್ಲ. ಹಣವೇ ಅಭಿವೃದ್ಧಿ ಎಂದು ಭಾವಿಸಿರುವ ಈ ಆಧುನಿಕ ಕಾಲದಲ್ಲಿ, ಮಾಹಿತಿ ತಂತ್ರಜ್ಞಾನದ ಸೇವೆಯಲ್ಲಿ ಬೆಂಗಳೂರು ವಿಶ್ವದ ಒಂದೋ ಎರಡನೆಯದೋ ಅತಿ ಹೆಚ್ಚು ಹಣ ಸಂಪಾದನೆಯ ನಗರವಾಗಿದೆ. ಶಿಕ್ಷಣ, ಆರೋಗ್ಯ ವಿಷಯದಲ್ಲೂ ಮುಂಚೂಣಿಯಲ್ಲಿದೆ. ಪ್ರವಾಸೋದ್ಯಮದಲ್ಲಿ ಮೈಸೂರು, ರೇಷ್ಮೆ ಬೆಳೆಯಲ್ಲಿ ರಾಮನಗರ, ಮತ್ಸೋದ್ಯಮದಲ್ಲಿ ಕರಾವಳಿ ಕರ್ನಾಟಕ, ಅಡಿಕೆ ಕಾಫಿ ಉತ್ಪಾದನೆಯಲ್ಲಿ ಮಲೆನಾಡು, ವಾಣಿಜ್ಯ ನಗರಗಳಾಗಿ ಹುಬ್ಬಳ್ಳಿ ಬೆಳಗಾವಿ, ದ್ರಾಕ್ಷಿ ದಾಳಿಂಬೆ ತರಕಾರಿ ಕೃಷಿಯಲ್ಲಿ ಬಿಜಾಪುರ ಯಾದಗಿರಿ, ಸಿದ್ದ ಉಡುಪು ಕ್ಷೇತ್ರದಲ್ಲಿ ದಾವಣಗೆರೆ ಮುಂತಾದ ಲಾಭದಾಯಕ ಪ್ರದೇಶಗಳನ್ನು ಕರ್ನಾಟಕ ಒಳಗೊಂಡಿದೆ. ಆದರೂ ಈ ಪರಿಸ್ಥಿತಿ ಏಕೆ ?
ವಾಸ್ತವದಲ್ಲಿ ಸರ್ಕಾರದ ಆದಾಯ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ. ಆದರೆ ಅದನ್ನು ಖರ್ಚು ಮಾಡುವ ರೀತಿ ಅಸಮರ್ಪಕವಾಗಿದೆ. ಮುಖ್ಯವಾಗಿ ಭ್ರಷ್ಟಾಚಾರ ಮತ್ತು ದುಂದು ವೆಚ್ಚ ಇದಕ್ಕೆ ಅತಿಮುಖ್ಯ ಕಾರಣವಾಗಿದೆ. ಉದಾಹರಣೆಗೆ 100 ರೂಪಾಯಿ ಖರ್ಚು ಮಾಡುವ ಅವಶ್ಯಕತೆ ಇರುವಲ್ಲಿ ಸುಮಾರು 500 ರಷ್ಟು ರೂಪಾಯಿ ಅಧಿಕೃತವಾಗಿಯೇ ಖರ್ಚಾಗುತ್ತದೆ. ಪಾರದರ್ಶಕ ಕಾನೂನು, ಟೆಂಡರ್ ಪ್ರಕ್ರಿಯೆ ಎಲ್ಲಾ ಇದ್ದರೂ ಆ ನಿಯಮಗಳನ್ನು ಸಹ ವಂಚಿಸಲಾಗುತ್ತದೆ.
ಈ ಅವ್ಯವಸ್ಥೆ ತಡೆಯಲು ನಮ್ಮಲ್ಲಿ ಕಂಟ್ರೋಲರ್ ಅಂಡ್ ಆಡಿಟರ್ ಜನರಲ್ ಎಂಬ ಲೆಕ್ಕ ಪತ್ರ ಇಲಾಖೆಯಿದೆ. ರಿಸರ್ವ್ ಬ್ಯಾಂಕ್, ಚುನಾವಣಾ ಆಯೋಗ, ತೆರಿಗೆ ಇಲಾಖೆಯ ರೀತಿ ಇದೂ ಸಹ ಸರ್ಕಾರದ ನಿಯಂತ್ರಣದಲ್ಲಿ ಇಲ್ಲದ ಸ್ವಾಯುತ್ತ ಸಂಸ್ಥೆ. ಸರ್ಕಾರದ ಪ್ರತಿ 1 ರೂಪಾಯಿ ಖರ್ಚು ವೆಚ್ಚ ಮತ್ತು ಅದರ ಸದುಪಯೋಗದ ಮೇಲೆ ನಿಗಾ ಇಡುವ ಸಂಸ್ಥೆ ಇದು. ಆದರೂ ವ್ಯವಸ್ಥೆಯ ಮೇಲೆ ನಿಯಂತ್ರಣ ಸಾಧ್ಯವಾಗುತ್ತಿಲ್ಲ.
ಸಾಮಾನ್ಯ ಪರಿಸ್ಥಿತಿಯಲ್ಲಿಯೇ ಹಣದ ಕೊರತೆಯ ವಿಷಯದಲ್ಲಿ ಎದುಸಿರು ಬಿಡುತ್ತಿರುವಾಗ ಇನ್ನು ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಭೀಕರತೆ ಎದುರಾಗದೆ ಇರುತ್ತದೆಯೇ ? ಸರ್ಕಾರಗಳು ಓಟಿನ ರಾಜಕೀಯದಲ್ಲಿ ತಮಗೆ ಇಷ್ಟ ಬಂದಂತೆ ಯೋಜನೆಗಳನ್ನು ಘೋಷಿಸುತ್ತಾರೆ. ಯಾವುದೇ ಪೂರ್ವ ತಯಾರಿ, ಹಣಕಾಸಿನ ನಿರ್ಧಿಷ್ಟ ಮಾನದಂಡ ಇರುವುದಿಲ್ಲ. ಹೇಗೋ ಮುಂದೆ ನೋಡೋಣ. ಈಗ ಜನ ಮೆಚ್ಚಿದರೆ ಸಾಕು ಎಂದು ಧೋರಣೆ ಇವರದು. ಜನರೂ ಸಹ ತಾತ್ಕಾಲಿಕ ಲಾಭಕ್ಕೆ ಹೆಚ್ಚು ಕಾತುರರಾಗಿರುತ್ತಾರೆ. ಆ ಎಲ್ಲದರ ಪರಿಣಾಮ ಸದ್ಯಕ್ಕೆ ದಿವಾಳಿಯತ್ತ ಕರ್ನಾಟಕ ಸರ್ಕಾರದ ಆರ್ಥಿಕ ಪರಿಸ್ಥಿತಿ.
ಭಯ ಪಡುವ ಅವಶ್ಯಕತೆ ಇಲ್ಲ. ಕರ್ನಾಟಕ ನಿಜಕ್ಕೂ ಸಂಪದ್ಭರಿತ ರಾಜ್ಯ. ಆದರೆ ಇತ್ತೀಚಿನ ಸಮ್ಮಿಶ್ರ ಸರ್ಕಾರಗಳ ಬ್ಲ್ಯಾಕ್ ಮೇಲ್ ರಾಜಕೀಯದಲ್ಲಿ, ಜಾತಿ ಅಭಿಮಾನದಲ್ಲಿ, ಮತ್ತು ಒಟ್ಟು ವ್ಯವಸ್ಥೆಯ ಭ್ರಷ್ಟಾಚಾರದಲ್ಲಿ ನಲುಗುತ್ತಿದೆ. ಜನರು ಚುನಾವಣಾ ವ್ಯವಸ್ಥೆಯಲ್ಲಿ ಜಾಗೃತರಾದರೆ ಇದಕ್ಕೆ ಪರಿಹಾರ ಖಂಡಿತ ಸಿಗುತ್ತದೆ. ಅಲ್ಲಿಯವರೆಗೂ ಜನರನ್ನು ಪ್ರಬುದ್ದರಾಗಿಸುವ ಕೆಲಸ ನಾವು ಮಾಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ಮಸ್ಕಿ ಬಿಜೆಪಿ ಅಭ್ಯರ್ಥಿ ಪರ ಇಂದು ಸಿಂಗರ್ ಮಂಗ್ಲಿ ಪ್ರಚಾರ

ಸುದ್ದಿದಿನ,ರಾಯಚೂರು: ರಾಬರ್ಟ್ ಸಿನೆಮಾ ‘ಕಣ್ಣೆ ಅದಿರಿಂದಿ’ ಹಾಡಿನ ಮೂಲಕ ಭಾರೀ ಸದ್ದು ಮಾಡಿದ ಗಾಯಕಿ ಮಂಗ್ಲಿ ಮಸ್ಕಿ ಉಪ ಚುನಾವಣಾ ಅಖಾಡದಲ್ಲಿ ಮಂಗಳವಾರ ಬಿಜೆಪಿ ಪರವಾಗಿ ಪ್ರಚಾರ ಮಾಡಲಿದ್ದಾರೆ.
ಬಿಜೆಪಿಯು ಗಾಯಕಿ ಮಂಗ್ಲಿ ಅವರನ್ನ ಪ್ರಚಾರಕ್ಕೆ ಆಹ್ವಾನಿಸಿದ್ದು, ಇಂದು ಮಸ್ಕಿ ಕೆಲ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಮತಯಾಚಿಸಲಿದ್ದಾರೆ. ಆದರೆ ಚುನಾವಣಾ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.
ಇದೇ 17 ರಂದು ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೂರು ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಗೆಲುವಿಗೆ ಭರ್ಜರಿ ರಣತಂತ್ರವನ್ನು ಹೂಡಿದ್ದಾರೆ.
ಇದನ್ನೂ ಓದಿ | ಕವಿತೆ | ಅವಳು ಮಸಣ ಕಾಯುವ ಪಾರ್ವತಿ..! -ಪದ್ಮಶ್ರೀ ಗೋವಿಂದರಾಜು,ಭದ್ರಾವತಿ
ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದ ಸಿಎಂ ಯಡಿಯೂರಪ್ಪ ಅವರು, ಕಾಂಗ್ರೆಸ್ ನೆಲಸವಾಗುವುದು ನಿಶ್ಚಿತ. 3 ಕ್ಷೇತ್ರಗಳಲ್ಲೂ ದೊಡ್ಡ ಮತಗಳ ಅಂತರದಲ್ಲಿ ನಾವೇ ಗೆಲ್ಲುತ್ತೇವೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು. ಇತ್ತ ಮೂರು ಪಕ್ಷಗಳ ಮತಯಾಚನೆಯ ಕಾವು ಏರುತ್ತಲೇ ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಿ.ಜೆ.ಪಿ ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ ಮಾಡಲಿದೆ : ಸಿದ್ದರಾಮಯ್ಯ ಆಕ್ರೋಶ

ಸುದ್ದಿದಿನ, ಬೆಳಗಾವಿ: ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಳಗಾವಿ ಲೋಕಸಭೆ ಕ್ಷೇತ್ರದ ಸವದತ್ತಿಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರ ಪರ ಮತಪ್ರಚಾರ ನಡೆಸಿದ ಅವರು ಮಾತನಾಡಿದರು.
ಕೇಂದ್ರದ ರೈತ ಶತ್ರು ನರೇಂದ್ರ ಮೋದಿ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. 60 ರಷ್ಟು ಹೆಚ್ಚಿಸಿದೆ. ಡಿ.ಎ.ಪಿ ಗೊಬ್ಬರ ಏಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗುತ್ತಿದೆ. ಇದುವರೆಗೆ 2400 ರೂಪಾಯಿಗಳಿದ್ದ ಬೆಲೆ ಈಗ 3800 ರೂ ಗಳಾಗುತ್ತಿದೆ ಎಂದರು.
ಸಾರಜನಕ, ರಂಜಕ ಮತ್ತು ಪೊಟ್ಯಾಷ್ಗಳ ಮೇಲಿನ ಬೆಲೆ ಕ್ವಿಂಟಾಲ್ ಗೆ ರೂ.1250 ಹೆಚ್ಚಿಸಿದ್ದಾರೆ. ರೂ.2350 ಗೆ ಸಿಗುತ್ತಿದ್ದ ಗೊಬ್ಬರ ಈಗ ರೂ.3600ರಷ್ಟಾಗಿದ್ದು ರೈತರು ನಿಸ್ಸಂಶಯವಾಗಿ ದಿವಾಳಿಯಾಗಲಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಜಾಸ್ತಿಯಾಗಿದೆ, ಅದಕ್ಕೆ ಬೆಲೆ ಜಾಸ್ತಿ ಮಾಡಿದ್ದೇವೆ ಎಂಬ ಕೇಂದ್ರ ಸರ್ಕಾರದ ಸಬೂಬು ಶುದ್ಧ ಸುಳ್ಳು. ಕಳೆದ ವರ್ಷ ರೂ.1,33,947 ಕೋಟಿ ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು. ಈಗ ಅದು ರೂ.79,530 ಕೋಟಿಗೆ ಇಳಿಸಿದ್ದಾರೆ. ಆದ್ದರಿಂದಲೇ ಏಪ್ರಿಲ್ 1 ರಿಂದ ಬೆಲೆ ಹೆಚ್ಚಾಗಿದೆ.
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಬಿ.ಜೆ.ಪಿ ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ ಮಾಡಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ @BJP4Karnataka ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ @BJP4India ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ ಮಾಡಲಿದೆ.
5/5 #ಬೆಲೆಯೇರಿಕೆ— Siddaramaiah (@siddaramaiah) April 9, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಸಾರಿಗೆ ನೌಕರರಿಗೆ ವೇತನ ಭತ್ಯೆ ನೀಡಲು ಸಾಧ್ಯವಿಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ

ಸುದ್ದಿದಿನ, ಬೆಂಗಳೂರು : ’ರಾಜ್ಯದ ಒಟ್ಟು ಆದಾಯದ ಶೇ. 85 ರಷ್ಟು, ವೇತನ, ಭತ್ಯೆ, ಪಿಂಚಣಿ ಮತ್ತಿತರ ಯೋಜನೇತರ ವೆಚ್ಚಗಳಿಗೆ ವ್ಯಯವಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅಲ್ಪ ಆದಾಯ ಲಭ್ಯವಿರುತ್ತದೆ ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಲಿಂಕ್ ಮೇಲೆ ಕ್ಲಿಕ್ ಮಾಡಿ : ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ : ಯಡಿಯೂರಪ್ಪ ಫೇಸ್ ಬುಕ್ ಪೋಸ್ಟ್
ಬಜೆಟ್ ಅಧಿವೇಶನದಲ್ಲಿ ವಿಪಕ್ಷ ನಾಯಕರು ಪ್ರಸ್ತಾಪಿಸಿದ್ದಂತೆ, ಯೋಜನೇತರ ವೆಚ್ಚ ಈಗಾಗಲೇ ಅಧಿಕವಾಗಿದೆ. ಪ್ರಸಕ್ತ ಸಂದರ್ಭಗಳಲ್ಲಿ ಮತ್ತಷ್ಟು ಹೆಚ್ಚು ಅನುದಾನವನ್ನು ಯೋಜನೇತರ ವೆಚ್ಚಗಳಿಗೆ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.
ಜೊತೆಗೆ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಸಾರಿಗೆ ನೌಕರರ ಹಿತರಕ್ಷಣೆ ದೃಷ್ಟಿಯಿಂದ ಅವರಿಗೆ ವೇತನ ನೀಡಲು, ಸರ್ಕಾರ 2,300 ಕೋಟಿ ರೂ. ಗಳ ಅನುದಾನ ನೀಡಿದೆ. ಸವಾಲಿನ ಸಂದರ್ಭಗಳಲ್ಲಿಯೂ ಸಹ ಸಾರಿಗೆ ಸಂಸ್ಥೆಗಳ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಸರ್ಕಾರ ಈಗಾಗಲೇ ಈಡೇರಿಸಿದ್ದು, 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಭತ್ಯೆ ನೀಡಲು ಸಾಧ್ಯವಿರುವುದಿಲ್ಲ. ಆದ್ದರಿಂದ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ’. ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ6 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ಬಹಿರಂಗ6 days ago
ಜ್ಯೋತಿಬಾ ಎಂಬ ದೀವಿಗೆ ತೋರಿದ ದಾರಿ ನಮ್ಮದಾಗಲಿ
-
ದಿನದ ಸುದ್ದಿ6 days ago
ಸಾರಿಗೆ ಮುಷ್ಕರ –ಕಾರ್ಮಿಕರ ಬದುಕು ಘನತೆಯ ಪ್ರಶ್ನೆ
-
ಬಹಿರಂಗ5 days ago
ಸಂವಿಧಾನ ನಿತ್ಯದ ಪಾಠವಾಗಲಿ..!
-
ನಿತ್ಯ ಭವಿಷ್ಯ6 days ago
ಈ ರಾಶಿಯವರಿಗೆ ಇನ್ಮುಂದೆ ಕಹಿ ಗಿಂತ ಸಿಹಿಯೇ ಹೆಚ್ಚಾಗಲಿದೆ..! ಮಂಗಳವಾರ-ಏಪ್ರಿಲ್-13,2021
-
ಅಂತರಂಗ5 days ago
ಮಹಾ ಮಾನವತಾವಾದಿ ಅಂಬೇಡ್ಕರ್ ನೆನಪಿನಲ್ಲಿ..!
-
ಲೈಫ್ ಸ್ಟೈಲ್3 days ago
ತರಕಾರಿ ಸಿಪ್ಪೆಯಿಂದ ಪೇಪರ್ ತಯಾರಿಸಿದ ಹತ್ತರ ಬಾಲೆ ಮಾನ್ಯ ಹರ್ಷ..!
-
ನಿತ್ಯ ಭವಿಷ್ಯ5 days ago
ಈ ರಾಶಿಯವರಿಗೆ ಶುಭಕಾರ್ಯ ನೆರವೇರಲಿದೆ..! ಬುಧವಾರ- ರಾಶಿ ಭವಿಷ್ಯ ಏಪ್ರಿಲ್-14,2021