ದಿನದ ಸುದ್ದಿ
ಕೊಡಗು ಪ್ರವಾಹ | ನಿರಾಶ್ರಿತರಿಗೆ ಧೈರ್ಯ ತುಂಬಿದ ಎಚ್.ಡಿ.ಕೆ

ಸುದ್ದಿದಿನ, ಮಡಿಕೇರಿ | ನಗರದ ಮೈತ್ರಿ ಭವನದಲ್ಲಿನ ಗಂಜಿ ಕೇಂದ್ರದಲ್ಲಿರುವ ನಿರಾಶ್ರಿತರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಭೇಟಿ ಮಾಡಿ ಧೈರ್ಯ ತುಂಬಿದರು.
ಬಳಿಕ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು ನಿರಾಶ್ರಿತರು ಹೊಸ ಜೀವನ ನಡೆಸಲು ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದ್ದು, ಯಾರೂ ಸಹ ಆತಂಕಪಡಬಾರದು ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ತಿಳಿಸಿದರು.
ಮನೆ ಕಳೆದು ಕೊಂಡವರಿಗೆ ಮನೆ ನಿರ್ಮಿಸಿಕೊಡಲಾಗುವುದು, ನಿರಾಶ್ರಿತರಿಗೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯ ನೀಡಲಿದ್ದು, ಸರ್ಕಾರವೇ ಜವಾಬ್ದಾರಿ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ನಿರಾಶ್ರಿತರಿಗೆ ಗಂಜಿ ಕೇಂದ್ರದಲ್ಲಿ ತಾತ್ಕಾಲಿಕ ಸೌಲಭ್ಯ ಕಲ್ಪಿಸಲಾಗುತ್ತಿದೆ. ನಿರಾಶ್ರಿತರ ನೋವು ಸರ್ಕಾರಕ್ಕೆ ಅರ್ಥವಾಗುತ್ತಿದೆ. ತುಂಬಾ ಕಷ್ಟದಲ್ಲಿರುವ ನಿರಾಶ್ರಿತರೆಲ್ಲರಿಗೂ ಬದುಕು ಕಟ್ಟಿಕೊಳ್ಳಲು ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಅವರು ವಿವರಿಸಿದರು.
ಎರಡು ಮೂರು ದಿನದಲ್ಲಿ ಕೊಡಗಿನ ಜಿಲ್ಲೆಗೆ ಮತ್ತೆ ಆಗಮಿಸಿ ಒಂದು ದಿನ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಕೊಡಗಿನ ಜನತೆಯ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.
ಪ್ರಕೃತಿಯ ಅವಕೃಪೆಗೆ ತುತ್ತಾದವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಸರ್ಕಾರ ನಿಮ್ಮ ಜೊತೆಗಿದೆ. ನಿರಾಶ್ರಿತರು ನೊಂದುಕೊಳ್ಳಬೇಡಿ. ಧೈರ್ಯವಾಗಿರಿ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಈ ಸಂಧರ್ಭದಲ್ಲಿ ಮಕ್ಕಂದೂರು ಗ್ರಾಮದ ನಿರಾಶ್ರಿತರೊಬ್ಬರು ಜೀವನ ನಡೆಸಲು ಅಗತ್ಯ ವ್ಯವಸ್ಥೆ ಮಾಡುವುದಕ್ಕೆ ಮುಖ್ಯಮಂತ್ರಿ ಅವರಲ್ಲಿ ಕೋರಿದರು.
ಮುಕ್ಕೋಡ್ಲು, 2ನೇ ಮೊಣ್ಣಂಗೇರಿ, ಜೋಡುಪಾಲ ಮತ್ತಿತರ ಕಡೆಗಳಲ್ಲಿ ಭೂಕುಸಿತ ಉಂಟಾಗಿ ಸಾಕಷ್ಟು ನಷ್ಟ ಉಂಟಾಗಿದೆ. ನಿರಾಶ್ರಿತರಿಗೆ ಹೊಸ ಜೀವನ ಮಾಡಲು ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸುವಂತೆ ಅವರು ಮನವಿ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್ ಹಾಗೂ ಸರ್ಕಾರದ ಕಾರ್ಯದರ್ಶಿಗಳಾದ ಸೆಲ್ವ ಕುಮಾರ್, ಗಂಗಾರಾಮ್ ಬಡೇರಿಯಾ, ಪೊಲೀಸ್ ಉನ್ನತ ಅಧಿಕಾರಿಗಳಾದ ಕಮಲ್ ಪಂಥ್, ಭಾಸ್ಕರ್ ರಾವ್ ಇತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಅಶ್ಲೀಲ ಸಿಡಿ ವೈರಲ್ | ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ; ಆರೋಪ ಮುಕ್ತನಾದ ಮೇಲೆ ಸಚಿವ ಸ್ಥಾನ ನೀಡಿ

ಸುದ್ದಿದಿನ, ಬೆಂಗಳೂರು : ಅಶ್ಲೀಲ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮುಜುಗರ ಆಗಬಾರದೆಂದು ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಅವರಿಗೆ ರವಾನೆ ಮಾಡಿದ್ದು ತಮ್ಮ ನಿಲುವನ್ನು ತಿಳಿಸಿದ್ದಾರೆ.
ಇದನ್ನೂ ಓದಿ | ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್; ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ
ಅಶ್ಲೀಲ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮುಜುಗರ ತಪ್ಪಿಸಲು, ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪ್ರಕರಣದಲ್ಲಿ ನಾನು ಆರೋಪ ಮುಕ್ತನಾದ ಬಳಿಕ ನನಗೆ ಸಚಿವ ಸ್ಥಾನ ನೀಡಿ ಎಂದು ಸಿಎಂಬಿ.ಎಸ್.ಯಡಿಯೂರಪ್ಪಗೆ ರವಾನಿಸಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್;ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ

ಸುದ್ದಿದಿನ,ದಾವಣಗೆರೆ:ಇತ್ತೀಚಿನ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಕೊಟ್ಟ ಮಾತಿನಂತೆ ನಡೆದ ಚಿತ್ರ ನಟ ದರ್ಶನ್ ಅವರು ಮಂಗಳವಾರ ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಕುದುರೆಯ ತಡಿ ನೀಡುವ ಮೂಲಕ ಕೃತಜ್ಞತೆ ಸಲ್ಲಿಸಿದರು.
ಹುಬ್ಬಳ್ಳಿಯಲ್ಲಿ ರಾಬರ್ಟ್ ಸಿನಿಮಾದ ಪ್ರೀ ರಿಲೀಸಿಂಗ್ ಇವೆಂಟ್ ಮುಗಿಸಿದ ನಟ ದರ್ಶನ್ ದಾವಣಗೆರೆಗೆ ಭೇಟಿ ನೀಡಿ ಮಲ್ಲಿಕಾರ್ಜುನ ಅವರನ್ನು ಸೌಹಾರ್ದ ಮಾತುಕತೆ ನಡೆಸಿದರು.
ಕಾಂಗ್ರೆಸ್ ನಾಯಕ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಒಡೆತನದ ಬಾಪೂಜಿ ಅತಿಥಿ ಗೃಹಕ್ಕೆ ತೆರಳಿದ ವೇಳೆ ನಟರಾದ ಚಿಕ್ಕಣ್ಣ, ವಿನೋದ್ ಪ್ರಭಾಕರ್, ರವಿಶಂಕರ್ ಕೂಡ ಜೊತೆಗಿದ್ದರು.
ಮೊದಲಿನಿಂದಲೂ ಎಸ್.ಎಸ್.ಮಲ್ಲಿಕಾರ್ಜುನ್ಗೆ ನಟ ದರ್ಶನ್ ಆಪ್ತರಾಗಿದ್ದು, ಕಳೆದ ಬಾರಿ ದರ್ಶನ್ಗೆ ಮಲ್ಲಿಕಾರ್ಜುನ್ ಕುದುರೆಯೊಂದನ್ನ ಉಡುಗೊರೆಯಾಗಿ ನೀಡಿದ್ದರು.
ಅಮೇರಿಕಾದಿಂದ ತಂದ್ದಿದ ಕುದುರೆಯ ತಡಿ (ಜೀನ್ )ನನ್ನು ಉಡುಗೊರೆಯಾಗಿ ನೀಡಿದರು.ನಂತರ ಮಲ್ಲಿಕಾರ್ಜುನ್ ರವರ ಒಡೆತನದ ಮುದೋಳದ ಸಕ್ಕರೆ ಕಾರ್ಖಾನೆಯಲ್ಲಿ ಪ್ರಸಕ್ತ ಹಂಗಾಮಿನಲ್ಲಿ 20 ಲಕ್ಷ ಟನ್ ಕಬ್ಬ ಅರೆದಿದ್ದು, ಮಲ್ಲಿಕಾರ್ಜುನ ಅವರನ್ನು ದರ್ಶನ್ ಅವರು ರೈತರ ಪರವಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯ ಜಿ.ಎಸ್.ಮಂಜುನಾಥ್ ಗಡಿಗುಡಾಳ್, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ಬಿ.ಕೆ.ಪರಶುರಾಮ ಸೇರಿದಂತೆ ಮಲ್ಲಿಕಾರ್ಜುನ ಮತ್ತು ದರ್ಶನ್ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆಂಗಾಪುರ | ಮಾ.12 ರಂದು ಶ್ರೀ ರಾಮಲಿಂಗೇಶ್ವರ ಮಹಾ ಸ್ವಾಮಿಯವರ 45 ನೇ ಮುಳ್ಳುಗದ್ದಿಗೆ ; ಉಚಿತ ಸಾಮೂಹಿಕ ವಿವಾಹ ಮಹೋತ್ಸವ

ಸುದ್ದಿದಿನ, ಚನ್ನಗಿರಿ : ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ರಾಮಲಿಂಗೇಶ್ವರ ಮಹಾ ಸ್ವಾಮಿಯವರ 45 ನೇ ಮುಳ್ಳು ಗದ್ದಿಗೆ ಮಹೋತ್ಸವವು ಸುಕ್ಷೇತ್ರ ಚನ್ನಗಿರಿ ತಾಲೂಕಿನ ಕೆಂಗಾಪುರ ಗ್ರಾಮದಲ್ಲಿ ಮಾ.12 ರಂದು ನಡೆಯಲಿದೆ.
ಇದನ್ನೂ ಓದಿ | ದಾವಣಗೆರೆ | ಶ್ರೀ ಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಸೇವಾಸಮಿತಿಯಿಂದ ಪಾದಯಾತ್ರೆ ಆರಂಭ
ಈ ಮಹೋತ್ಸವದಲ್ಲಿ ಕುಂಭಾಭಿಷೇಕ ಮತ್ತು 101 ಉಚಿತ ಸಾಮೂಹಿಕ ವಿವಾಹವು ಜರುಗಲಿದ್ದು ವಧು-ವರರಿಗೆ ತಾಳಿ-ಬಟ್ಟೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಶ್ರೀ ಮಠದ ಆಡಳಿತ ಮಂಡಳಿಯವರು ಹಾಗೂ ಶ್ರೀಮಠದ ವಿದ್ಯಾಸಂಸ್ಥೆಯ ಪಿಯು ವಿಭಾಗದ ಪ್ರಾಂಶುಪಾಲರಾದ ಟಿ.ಎಂ.ದಾದಾಪೀರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ರಾಜಕೀಯ7 days ago
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
-
ರಾಜಕೀಯ6 days ago
ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್
-
ರಾಜಕೀಯ7 days ago
ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ : ಮೇಯರ್ ಆಗಿ ಎಸ್.ಟಿ.ವೀರೇಶ್, ಉಪಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್
-
ಬಹಿರಂಗ6 days ago
ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದೇ ಮೊದಲ ತಪ್ಪು..!
-
ಕ್ರೀಡೆ6 days ago
ಅತಿ ಕಡಿಮೆ ಪಂದ್ಯ ; 400 ವಿಕೆಟ್ : ದಾಖಲೆ ಬರೆದ ಸ್ಪಿನ್ನರ್ ಆರ್ ಅಶ್ವಿನ್
-
ಲೈಫ್ ಸ್ಟೈಲ್5 days ago
ರೆಸಿಪಿ | ಖರ್ಜೂರದ ಹೋಳಿಗೆ ಮಾಡೋದು ಹೇಗೆ ಗೊತ್ತಾ..?
-
ಕ್ರೀಡೆ6 days ago
ರಾಜ್ಯದ ಕ್ರೀಡಾ ವಿಜ್ಞಾನ ಸಂಸ್ಥೆಯಿಂದ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ
-
ದಿನದ ಸುದ್ದಿ5 days ago
ಅಸ್ಸಾಂ | ಅಥ್ಲೀಟ್ ಹಿಮಾ ದಾಸ್ ಡಿಎಸ್ಪಿಯಾಗಿ ನೇಮಕ ; ನನ್ನ ಮತ್ತು ತಾಯಿಯ ಕನಸು ನನಸಾದ ದಿನವಿದು : ಹಿಮಾ ಭಾವುಕ ನುಡಿ