Connect with us

ದಿನದ ಸುದ್ದಿ

ಸೋಬೆರಾನ್ ಬೆಳಗಿದ ಜ್ಯೋತಿ..! : ಕಸದ ರಾಶಿಯಲ್ಲಿ ಸಿಕ್ಕ ಹೆಣ್ಣು ಮಗುವೀಗ ‘ಕಮೀಷನರ್’..!

Published

on

  • ಪಂಜು ಗಂಗೊಳ್ಳಿ, ವ್ಯಂಗ್ಯಚಿತ್ರಕಾರರು, ಮುಂಬೈ

ಸ್ಸಾಮಿನ ತಿನ್ಸುಖಿಯಾ ಎಂಬಲ್ಲಿನ ಫುಟ್ ಪಾತ್ ತರಕಾರಿ ವ್ಯಾಪಾರಿ 30 ವರ್ಷ ಪ್ರಾಯದ ಸೋಬೆರಾನ್ ಎಂದಿನಂತೆ ಅಂದು ತರಕಾರಿ ಮಾರಿ ಗಾಡಿ ತಳ್ಳಿಕೊಂಡು ಮನೆಗೆ ವಾಪಾಸಾಗುತ್ತಿದ್ದ. ದಿನವಿಡೀ ನಿಂತು ವ್ಯಾಪಾರ ಮಾಡಿ ದಣಿದ ಅವನ ದೇಹ, ಮನಸ್ಸು ಎರಡೂ ವಿಶ್ರಾಂತಿಗೆ ಹಾತೊರೆಯುತ್ತಿದ್ದವು.

ಆದಷ್ಟು ಬೇಗ ಮನೆ ತಲುಪಿ ಅಡುಗೆ ಮಾಡಿಕೊಂಡು ಉಂಡು ಅಡ್ಡ ಬೀಳಬೇಕು ಎಂದು ಆಲೋಚಿಸುತ್ತ ಬರಬೇಕಾದರೆ ಅತ್ತಲೆಲ್ಲಿಂದಲೋ ಮಗುವೊಂದರ ಅಳುವಿನ ದನಿ ಕೇಳಿತು. ದನಿಯ ಜಾಡನ್ನು ಅರಸಿ ಹೋಗಿ ನೋಡಿದರೆ ಕಸದ ರಾಶಿಯಲ್ಲಿ ನವಜಾತ ಹೆಣ್ಣು ಮಗುವೊಂದು ಅಳುತ್ತಿತ್ತು! ಆ ಮಗುವಿನ ತಾಯಿ ಹತ್ತಿರದೆಲ್ಲೆಲ್ಲಾದರೂ ಇರಬಹುದೋ ಎಂದು ಸುತ್ತ ಮುತ್ತ ಹುಡುಕಾಡಿದರೆ ಯಾರೂ ಕಣ್ಣಿಗೆ ಬೀಳಲಿಲ್ಲ.

ಅಲ್ಲೇ ನಿಂತು ಮಗುವಿಗೆ ಸಂಬಂಧಪಟ್ಟವರ್ಯಾರಾದರೂ ಬರಬಹುದೋ ಎಂದು ಕಾದರೆ ಯಾರೂ ಬರಲಿಲ್ಲ. ಏನು ಮಾಡಲೀ ಎಂದು ಆಲೋಚಿಸಿದ ಸೋಬೆರಾನ್ ಆಗುವುದಾಗಲೀ ತಾನೇ ಆ ಮಗುವನ್ನು ಸಾಕುತ್ತೇನೆ ಎಂದು ತೀರ್ಮಾನಿಸಿ ಅದನ್ನೆತ್ತಿಕೊಂಡು ಮನೆಗೆ ಬಂದನು.

ಇದು ಮೂವತ್ತು ವರ್ಷಗಳ ಹಿಂದೆ ನಡೆದ ಘಟನೆ. ಮನೆಗೆ ತಂದ ಮಗುವಿಗೆ ಜ್ಯೋತಿ ಎಂದು ನಾಮಕರಣ ಮಾಡಿದನು. ಅವಿವಾಹಿತನಾದ ಸೋಬೆರಾನ್ ಜ್ಯೋತಿಗೆ ಅಪ್ಪನಾದನು. ಅದೂ ಎಂತಹ ಅಪ್ಪ ಅಂತೀರಿ! ಇಷ್ಟರ ತನಕ ಒಂದೇ ಹೊಟ್ಟೆಯನ್ನು ತುಂಬಿಸುತ್ತಿದ್ದವನ ಹೆಗಲ ಮೇಲೆ ಈಗ ಎರಡು ಹೊಟ್ಟೆಗಳ ಜವಾಬ್ದಾರಿ ಬಿತ್ತು.

ಅದಕ್ಕಾಗಿ ಮೊದಲಿಗಿಂತ ಹೆಚ್ಚು ಕಷ್ಟಪಡಬೇಕಾಯಿತು. ಜ್ಯೋತಿ ದೊಡ್ಡವಳಾದ ಮೇಲೆ ಅವಳನ್ನು ಶಾಲೆಗೆ ಸೇರಿಸಿದನು. ಆ ಬಡತನದಲ್ಲೂ ಅವಳಿಗೆ ಏನೊಂದೂ ಕೊರತೆಯಾಗದಂತೆ ನೋಡಿಕೊಂಡನು. ಎಷ್ಟೋ ಬಾರಿ ತಾನು ಉಪವಾಸವಿದ್ದು ಅವಳ ಹೊಟ್ಟೆ ತುಂಬುವಂತೆ ನೋಡಿಕೊಂಡನು.

ಜ್ಯೋತಿ ಅಪ್ಪನನ್ನೂ ಮೀರಿಸಿದ ಮಗಳು. 2013 ರಲ್ಲಿ ಅವಳು ಕಂಪ್ಯೂಟರ್ ಸಯನ್ಸ್ ಡಿಗ್ರಿ ಪಡೆದಳು. 2014 ರಲ್ಲಿ ಅಸ್ಸಾಂ ಪಬ್ಲಿಕ್ ಸರ್ವೀಸ್ ಪರೀಕ್ಷೆ ಪಾಸು ಮಾಡಿ ‘ಅಸಿಸ್ಟಂಟ್ ಇನ್ಕಮ್ ಟ್ಯಾಕ್ಸ್ ಕಮಿಷನರ್’ ಅಧಿಕಾರಿಯಾದಳು. ಕಸದ ತೊಟ್ಟಿಯಲ್ಲಿ ಬಿದ್ದು ಇನ್ನೆಂತಹದೋ ದುರಂತದ ಬದುಕನ್ನು ಕಾಣಬೇಕಾಗಿದ್ದ ಜೀವವೊಂದು ತನ್ನನ್ನು ಎತ್ತಿ ತಂದು ಬೆಚ್ಚಗಿನ ಮಡಿಲಲ್ಲಿಟ್ಟು ಸಾಕಿ ಬೆಳೆಸಿದ ಕೈಗಳಿಗೆ ಕೊಟ್ಟ ಈ ಕಾಣಿಕೆ ಸಾಮಾನ್ಯದಾದುದಲ್ಲ!

ತಾನು ಮದುವೆಯಾದಾರೆ ಬರುವವಳು ಜ್ಯೋತಿಯನ್ನು ಹೇಗೆ ಕಾಣುತ್ತಾಳೋ ಎಂಬ ಕಾರಣಕ್ಕೆ ಸೋಬೆರಾನ್ ಮದುವೆಯಾಗಲಿಲ್ಲ. ಅವನ ಬದುಕಿನ ಸರ್ವಸ್ವವೇ ಜ್ಯೋತಿಯಾಗಿದ್ದಾಳೆ. ಜ್ಯೊತಿಯೂ ತನ್ನ ಅಪ್ಪನಿಗೆ ಯಾವುದಕ್ಕೂ ಕೊರತೆಯಾಗದಂತೆ ನೋಡಿಕೊಳ್ಳುತ್ತಿದ್ದಾಳೆ. ಅವಳು ಅವನಿಗೆ ಮಗಳಲ್ಲದೆ ಅವನ ತಾಯಿಯೂ ಆಗಿದ್ದಾಳೆ! ‘ನೀನಿನ್ನೂ ತರಕಾರಿ ಏಕೆ ಮಾರಬೇಕು, ಮನೆಯಲ್ಲಿದ್ದು ವಿಶ್ರಾಂತಿ ಪಡೆ. ನಾನಿದ್ದೇನೆಲ್ಲ’ ಎಂದು ಅಪ್ಪನಿಗೆ ಹೇಳುತ್ತಾಳೆ. ಆದರೆ, ಸೋಬೆರಾನ್ ಈಗ ತಾನೊಬ್ಬ ಸರ್ಕಾರಿ ಅಧಿಕಾರಿಯೊಬ್ಬಳ ಅಪ್ಪನಾದರೂ ತರಕಾರಿ ಮಾರುವುದನ್ನು ಇನ್ನೂ ನಿಲ್ಲಿಸಿಲ್ಲ.

“ನಾನು ಅಂದು ಆ ಕಸದ ರಾಶಿಯಿಂದ ಎತ್ತಿ ತಂದುದು ಒಂದು ಹೆಣ್ಣು ಮಗುವಲ್ಲ, ನನ್ನ ಬದುಕನ್ನು ಬೆಳಗಿದ ಅಮೂಲ್ಯವಾದ ಒಂದು ರತ್ನವನ್ನು” ಎಂದು ಹೇಳುವಾಗ ಸೋಬೆರಾನ್ ನ ಎದೆ ಹೆಮ್ಮೆಯಿಂದ ಉಬ್ಬುತ್ತದೆ!

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending