Connect with us

ದಿನದ ಸುದ್ದಿ

ಕೋವಿಡ್ -19 | ಲಾಕ್ ಡೌನ್ ನಿಂದ ಉಂಟಾಗುವ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳ ಮುನ್ನೋಟ..!

Published

on

  • ಕ್ರಾಂತಿರಾಜ್ ಒಡೆಯರ್ ಎಂ, ಸಹಾಯಕ ಪ್ರಾಧ್ಯಾಪಕರು, ಮೈಸೂರು

ಸಂದರ್ಭ 1

ಬೇರೆ ಬೇರೆ ರಾಜ್ಯಗಳಿಂದ ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದಿದ್ದ ವಲಸೆ ಕಾರ್ಮಿಕರು ಕೋವಿಡ್ 19 ಲಾಕ್ ಡೌನ್ ನಿಂದ ಕೆಲಸವಿಲ್ಲದೇ ಜೀವನೋಪಾಯ ಕಷ್ಟವಾಗಿ, ತಮ್ಮ ತಮ್ಮ ಊರುಗಳಿಗೆ ಹೊರಡಲು ರೈಲ್ವೆ ಹಾಗು ಬಸ್ಸು ನಿಲ್ದಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ಸೇರಿದ್ದ ವಲಸೆ ಕಾರ್ಮಿಕರ ಕುರಿತು ನಮ್ಮ ರಾಜ್ಯದ ಮುಖ್ಯಮಂತ್ರಿ ಯೆಡಿಯೂರಪ್ಪನವರು, ಕಾರ್ಮಿಕರು ವಾಪಸು ಹೋಗದಂತೆ ಕಳಕಳಿಯ ಮನವಿ ಮಾಡಿಕೊಂಡರೂ, ಮುಖ್ಯಮಂತ್ರಿಗಳ ಮನವಿಗೆ ಸ್ಪಂಧಿಸದ ವಲಸೆ ಕಾರ್ಮಿಕರು, ತಾವು 2 ತಿಂಗಳಿನಿಂದ ಅನುಭವಿಸುತ್ತಿರುವ ಯಾತನೆ ಸಾಕು.

ಈಗಲಾದರೂ ತಮ್ಮ ತಮ್ಮ ಊರುಗಳಿಗೆ ಸೇರಿಕೊಳ್ಳೋಣ ಎಂದು ಕೆಲವರು ಈಗಾಗಲೇ ತಮ್ಮ ಊರು ಸೇರಿಕೊಂಡಿದ್ದರೆ, ಹಲವರು ತಮ್ಮ ಗೂಡು ಸೇರಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.

ಸಂದರ್ಭ 2

ಒಂದು ವಾರದ ಹಿಂದೆ ಟಿ ವಿ ಯಲ್ಲಿ ನೋಡಿದ್ದು. ಮುಂಬೈಯಿಂದ ಉತ್ತರ ಪ್ರದೇಶಕ್ಕೆ ಕಾಲ್ನಡಿಗೆಯಲ್ಲಿ ಹೊರಟಿದ್ದ ವಲಸೆ ಕಾರ್ಮಿಕನಿಗೆ ಪತ್ರಕರ್ತ ಕೇಳಿದ ಪ್ರಶ್ನೆ, “ಸರ್ಕಾರ ನಿಮಗಾಗಿ ರೈಲಿನ ವ್ಯವಸ್ಥೆ ಮಾಡಿದೆ.

ನೀವು ಏಕೆ ನಡೆದು ಹೋಗ್ತಿದ್ದೀರಾ? ಲಾಕ್ ಡೌನ್ ಮುಗಿದ ಮೇಲೆ ವಾಪಸ್ ಇಲ್ಲಿಗೆ ಬರುತ್ತೀರಾ?” ಎಂಬ ಹಲವಾರು ಪ್ರಶ್ನೆಗಳಿಗೆ ವಲಸೆ ಕಾರ್ಮಿಕ ಕೊಟ್ಟ ಉತ್ತರ, “ನಮಗೆ ಅಕ್ಷರ ಜ್ಞಾನ ಇಲ್ಲ, ಈ ಮೊಬೈಲ್ ಬಳಸಲು ಸಹ ಬರಲ್ಲ, ಅವರ ಇವರ ಬಳಿ ಕಾಡಿ ಬೇಡಿ ಅನ್ ಲೈನ್ ಅರ್ಜಿ ಸಲ್ಲಿಸಿದ್ದೆ ಅದು ರಿಜೆಕ್ಟ್ ಆಗಿದೆ, ಮತ್ತೆ ಯಾರು ಅರ್ಜಿ ಹಾಕಲು ಸಹಾಯ ಮಾಡಲಿಲ್ಲ, ಅದಕ್ಕೆ ನಡೆದುಕೊಂಡೆ ಹೋಗ್ತಿದ್ದಿನಿ.ಊರಲ್ಲಿ ಅಪ್ಪನಿಗೆ ವ್ಯವಸಾಯಕ್ಕೆ ಸಹಾಯ ಮಾಡಿಕೊಂಡು ಇರ್ತೀನಿ ವಿನಾ ಇಲ್ಲಿ ಬಂದು ಇನ್ನೊಮ್ಮೆ ನರಕಯಾತನೆ ಅನುಭವಿಸಲು ಇಷ್ಟ ಇಲ್ಲ”.

ಸಂದರ್ಭ 3

ಮೈಸೂರಿನ ಹೆಮ್ಮೆಯ ಉದ್ದಿಮೆಗಳಾದ ಸಥರನ್ ಸ್ಟಾರ್ ಹೋಟೆಲ್ ಹಾಗು ರೀಡ್ ಅಂಡ್ ಟೇಲರ್ ಕಂಪನಿಗಳು ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದು, ದೇಶದ ಆರ್ಥಿಕ ಸ್ಥಿತಿಗತಿಯು ಅನಿಶ್ಚಿತತೆಯಿಂದ ಕೂಡಿದ್ದು, ಮುಂದೇನು ಮಾಡಬೇಕೆಂಬ ದಾರಿ ತೋಚದೆ, ಉದ್ದಿಮೆಗಳನ್ನು ಮುಚ್ಚಿದ್ದು, ಸುಮಾರು 2000 ಕಾರ್ಮಿಕರು ಬೀದಿಪಾಲಾದಂತಾಗಿದೆ.

ಈ ಸಮಸ್ಯೆ ಕೇವಲ ವಲಸೆ ಕಾರ್ಮಿಕರು ಹಾಗು ಕೆಲವು ಕಂಪೆನಿಗಳದ್ದಲ್ಲ. ದೇಶದ ಎಲ್ಲ ಆರ್ಥಿಕ ವಲಯಗಳಿಗೂ ಹರಡಿರುವ ಸಮಸ್ಯೆ. ಭಾರತದಲ್ಲಿ ಸರಿ ಸುಮಾರು 67% ರಷ್ಟು ಜನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಹಲವು ಸಂಸ್ಥೆಗಳ ಸಮೀಕ್ಷೆಗಳು ಹೇಳುತ್ತವೆ.

ಈ ಸಂದರ್ಭದಲ್ಲಿ ಆಗಿರುವ ಬದಲಾವಣೆಗಳಿಂದ ದೇಶದಲ್ಲಿ ದೊಡ್ಡ ಮಟ್ಟದ ಆರ್ಥಿಕ ಹಾಗು ಸಾಮಾಜಿಕ ಸಮಸ್ಯೆಗಳು ಉಂಟಾಗಲಿದ್ದು, ನಮ್ಮ ಆಡಳಿತ ವ್ಯವಸ್ಥೆಯು ಸಮಸ್ಯೆ ಹೋಗಲಾಡಿಸಲು ಸರಿಯಾದ ಮಾರ್ಗೋಪಾಯಗಳನ್ನು ಕಂಡುಕೊಳ್ಳದ್ದಿದ್ದರೆ, ದೇಶವು ಸರಿಪಡಿಸಲಾಗದ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಲಿದೆ. ಕೋವಿಡ್ 19 ಲಾಕ್ ಡೌನ್ ನಿಂದ ದೇಶದ ಆರ್ಥಿಕ ವಲಯಗಳ ಮೇಲೆ ಉಂಟಾಗುವ ಸಾಮಾಜಿಕ ಹಾಗು ಆರ್ಥಿಕ ಪರಿಣಾಮಗಳನ್ನು ಅವಲೋಕಿಸುವುದಾದರೆ..

ಸಣ್ಣ, ಮಧ್ಯಮ ಹಾಗು ಬೃಹತ್ ಉದ್ದಿಮೆಗಳ ಮೇಲೆ ಉಂಟಾಗುವ ಪರಿಣಾಮ

ಲಾಕ್ ಡೌನ್ ನಿಂದ ಉದ್ದಿಮೆಗಳು ಸಂಪೂರ್ಣ ಮುಚ್ಚಿದ್ದು, ಐಟಿ, ಬಿಟಿ ವಲಯಗಳೇನೋ ಕಾರ್ಮಿಕರಿಗೆ ಮನೆಯಿಂದಲೇ ಕೆಲಸ ನಿರ್ವಹಿಸುವ ಸೌಲಭ್ಯವನ್ನು ಕಲ್ಪಿಸಿದ್ದು, ಈ ವ್ಯವಸ್ಥೆ ಇನ್ನೂ 6 ತಿಂಗಳು ಮುಂದುವರೆಯುವ ಮುನ್ಸೂಚನೆಯನ್ನು ಹಲವು ಕಂಪನಿಗಳು ನೀಡಿವೆ.

ಆದರೆ ಉತ್ಪಾದನಾ ವಲಯವು ಬೇಡಿಕೆ ಇಲ್ಲದೇ, ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿದ್ದು, ಈ ವಲಯದ ಮುಂದಿನ ದಿನಗಳು ಅನಿಶ್ಚಿತತೆಯಿಂದ ಕೂಡಿದೆ. ಕೆಲಸ ಕಳೆದುಕೊಂಡ ಕಾರ್ಮಿಕರಲ್ಲಿ ಹಲವರು ಈಗಾಗಲೇ ತಮ್ಮ ತಮ್ಮ ಊರುಗಳನ್ನು ಸೇರಿಕೊಂಡಿದ್ದು, ಇನ್ನೂ ಹಲವರು ತಮ್ಮ ಊರು ಸೇರಿಕೊಳ್ಳುವ ಪ್ರಕ್ರಿಯೆಯಲ್ಲಿದ್ದು, ತಮ್ಮ ಜೀವನೋಪಾಯಕ್ಕೆ ತಮ್ಮ ತಮ್ಮ ಹಳ್ಳಿಗಳಲ್ಲೇ ಹಲವು ಆರ್ಥಿಕ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದು, ಮುಂದೊಂದು ದಿನ ದೇಶದ ಆರ್ಥಿಕ ವ್ಯವಸ್ಥೆ ಸರಿಹೋದರೂ, ಇವರು ತಮ್ಮ ಹಳೇ ಕೆಲಸಗಳಿಗೆ ಮರಳುವುದು ಕಷ್ಟಸಾಧ್ಯ.

ಇದರಿಂದ ಈ ವಲಯಕ್ಕೆ ಕಾರ್ಮಿಕರ ಕೊರತೆ ಉಂಟಾಗಲಿದ್ದು, ಉದ್ದಿಮೆಗಳಿಗೆ ತಗಲುವ ಕಾರ್ಮಿಕರ ವೆಚ್ಚ ಹೆಚ್ಚಾಗಲಿದ್ದು, ಇದರಿಂದ ಈ ವಲಯ ತಯಾರಿಸುವ ಉತ್ಪನ್ನಗಳ ಬೆಲೆ ಹೆಚ್ಚಾಗಲಿದ್ದು, ಗ್ರಾಹಕರ ಮೇಲೆ ಬೆಲೆ ಏರಿಕೆಯ ಬರೆ ಬೀಳುವುದು ಗ್ಯಾರಂಟಿ. ಮತ್ತೊಂದು ಸಮಸ್ಯೆ ಎಂದರೆ, ಕಾರ್ಖಾನೆಗಳ ಮಾಲೀಕರು ಈಗಾಗಲೇ ಅನುಭವಿಸಿರುವ ನಷ್ಟವನ್ನು ಸರಿದೂಗಿಸಿಕೊಳ್ಳಲು, ಬೇರೆ ದಾರಿ ತೋಚದೆ ಇದೇ ಕೆಲಸದಲ್ಲಿ ಉಳಿಯುವ ಕಾರ್ಮಿಕರಿಂದ ಕಡಿಮೆ ಸಂಬಳಕ್ಕೆ ಹೆಚ್ಚು ಕೆಲಸ ಮಾಡಿಸಿ ಶೋಷಣೆ ಮಾಡುವ ದಿನಗಳನ್ನು ಶೀಘ್ರದಲ್ಲೇ ನೋಡುತ್ತೇವೆ.

ಶಿಕ್ಷಣ ವಲಯದ ಮೇಲೆ ಉಂಟಾಗುವ ಪರಿಣಾಮ

ನಮ್ಮ ದೇಶದ ಆರ್ಥಿಕ ವ್ಯವಸ್ಥೆಯಲ್ಲಿನ ಬೇಡಿಕೆ ಕುಂಠಿತದಿಂದಾಗಿ ಉದ್ದಿಮೆಗಳು ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುತ್ತಿದ್ದು, ಬೇಡಿಕೆ ಮರಳಲು ಇನ್ನೂ 3 ರಿಂದ 4 ವರ್ಷಗಳು ಬೇಕಾಗಬಹುದು. ಈ ಸಂದರ್ಭದಲ್ಲಿ, ಪ್ರಸ್ತುತ ವರ್ಷದಲ್ಲಿ ಹಾಗೂ ಮುಂದಿನ ಕೆಲವು ವರ್ಷಗಳಲ್ಲಿ ಪದವಿ ಪಡೆದು ಉದ್ಯೋಗದ ಕನಸು ಕಟ್ಟಿಕೊಳ್ಳುವ ವಿದ್ಯಾರ್ಥಿಗಳನ್ನು ನೆನೆಸಿಕೊಂಡರೆ ಅಯ್ಯೋ ಎನಿಸುತ್ತದೆ. ಇವರು ಉದ್ಯೋಗ ಪಡೆದು ಜೀವನದಲ್ಲಿ ನೆಲೆಯೂರುವ ದಿನಗಳು ಮುಂದೆ ಹೋದಷ್ಟು, ಇವರ ಸ್ವಾಭಿಮಾನದ ಜೀವನದ ಕನಸು, ಮದುವೆ ಆಸೆಗಳು ಮುಂದೂಡಲಾಗಿ, ಜೀವನದ ಸಹಜ ಪ್ರಕ್ರಿಯೆಗಳಿಗೆ ಹಾಗು ಹಣಕಾಸಿನ ಸಂಪಾದನೆಗೆ ಅಡ್ಡದಾರಿಯನ್ನು ಹಿಡಿಯಬಹುದಾದ ಸಂದರ್ಭ ಬರಬಹುದು.

ಸರ್ಕಾರ ನಿರ್ವಹಿಸಬೇಕಾದ ಪಾತ್ರ

ಜಾನ್ ಮೇನಾರ್ಡ್ ಕೇನ್ಸ್ ಎಂಬ ಇಂಗ್ಲೆಂಡ್ ದೇಶದ ಶ್ರೇಷ್ಠ ಆರ್ಥಿಕ ತಜ್ಞ ಅವನ The theory of Empolyment, Interest and Money ಹಾಗೂ The Role of the Government ಎನ್ನುವ ಪುಸ್ತಕದಲ್ಲಿ ದೇಶಗಳು ಆರ್ಥಿಕ ಸಂಕಷ್ಟದಲ್ಲಿ ಯಾವ ರೀತಿಯ ಆರ್ಥಿಕ ನೀತಿಗಳನ್ನು ರೂಪಿಸಬೇಕು ಎಂದು ಹೇಳುತ್ತಾ, “ಆರ್ಥಿಕ ದುಸ್ಥಿತಿಯಲ್ಲಿ ಆಳುವ ಸರ್ಕಾರಗಳು, ಯಾವುದಾದರೂ ಮೂಲಗಳಿಂದ ಹಣವನ್ನು ತಂದು ಆರ್ಥಿಕ ವ್ಯವಸ್ಥೆಯ ತಳ ಪದರಕ್ಕೆ (ಕುಟುಂಬಗಳಿಗೆ ಹಾಗು ಕಾರ್ಮಿಕ ಸಮೂಹ) ನೇರ ಹಂಚಬೇಕು.ಇದರಿಂದ ಕಾರ್ಮಿಕರನ್ನು ಅವರವರ ಕೆಲಸಗಳಲ್ಲಿ ಜೀವಂತವಾಗಿಟ್ಟುಕೊಳ್ಳುವುದಲ್ಲದೇ, ಉತ್ಪನ್ನಗಳಿಗೆ ಬೇಡಿಕೆಯನ್ನೂ ಹುಟ್ಟಿಸಬಹುದಾಗಿದ್ದು, ದೊಡ್ಡಮಟ್ಟದ ಆರ್ಥಿಕ ಕುಸಿತದಿಂದ ದೇಶವನ್ನು ರಕ್ಷಿಸಬಹುದು” ಎಂದು ಹೇಳುತ್ತಾನೆ. ಇಂದಿನ ಸಂದರ್ಭದಲ್ಲಿ ಜಾನ್ ಮೇನಾರ್ಡ್ ಕೇನ್ಸ್ ನ ಆರ್ಥಿಕ ಸಿದ್ಧಾಂತವು ಪ್ರಸ್ತುತವೆನಿಸುತ್ತದೆ.

ಆದರೆ ನಮ್ಮ ಸರ್ಕಾರದ ಆರ್ಥಿಕ ಪ್ಯಾಕೇಜ್ ನೋಡಿದಾಗ, ಕಡಿಮೆ ಪ್ರಮಾಣದ ಹಣಕಾಸಿನ ಪ್ಯಾಕೇಜ್ ಆರ್ಥಿಕ ವ್ಯವಸ್ಥೆಯ ಕೆಳಸ್ತರಕ್ಕೆ ಮೀಸಲಿಟ್ಟಿದ್ದು, ದೊಡ್ಡ ಮಟ್ಟದ ಹಣ ಮೇಲಿನ ಸ್ತರಕ್ಕೆ ಮೀಸಲಿಟ್ಟಿದೆ.

ಇದರಿಂದ ಇಂದಿನ ಆರ್ಥಿಕ ಸಮಸ್ಯೆ ಬಗೆಹರಿಯದು ಎಂಬುದು ನನ್ನ ಅನಿಸಿಕೆ. ಇಂದು ನಮಗೆ ಬೇಕಿರುವುದು “BOTTOM TO TOP ECONOMIC APPROACH” ಹೊರತು “TOP TO BOTTOM ECONOMIC APPROACH” ಅಲ್ಲ. ಆಳುವ ಸರ್ಕಾರಗಳು ಲಭ್ಯವಿರುವ ಆರ್ಥಿಕ ಸಿದ್ದಾಂತಗಳನ್ನು ಅಧ್ಯಯಿಸಿ ಸಂದರ್ಭಕ್ಕೆ ಸರಿಯಾದ ಆರ್ಥಿಕ ನೀತಿಗಳನ್ನು ರೂಪಿಸಬೇಕೆಂಬುದು ನನ್ನ ಅನಿಸಿಕೆ.

(ಲೇಖಕರು :ಕ್ರಾಂತಿರಾಜ್ ಒಡೆಯರ್ ಎಂ
ಸಹಾಯಕ ಪ್ರಾಧ್ಯಾಪಕರು
ವ್ಯವಹಾರ ನಿರ್ವಹಣಾ ವಿಭಾಗ
ಸೇಪಿಯೆಂಟ್ ಕಾಲೇಜು
ಮೈಸೂರು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending