Connect with us

ಬಹಿರಂಗ

ಸಂಶೋಧಕ ‘ಡಾ. ಎಂ.ಎಂ. ಕಲಬುರ್ಗಿ’ ಅವರ ಕಿರು ಪರಿಚಯ

Published

on

ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ
  • ಇಂದು ನವೆಂಬರ್ 28. ಸಂಶೋಧಕ,ಚಿಂತಕ ಡಾ.ಎಂ.ಎಂ.ಕಲಬುರ್ಗಿ ಅವರು ಹುಟ್ಟಿದ ದಿನ. ಈ ಸಂದರ್ಭದಲ್ಲಿ ಅವರ ಕಿರುಪರಿಚಯ ನಮ್ಮ ‘ಸುದ್ದಿದಿನ‘ ಓದುಗರಿಗಾಗಿ.

ನಿನಗೆ ಕೇಡಿಲ್ಲವಾಗಿ ಆನು ಒಲಿದಂತೆ ಹಾಡುವೆ” ಎಂಬ ಬಸವಣ್ಣನವರ ಮಾತು ನಿಜವಾದ ಸಂಶೋಧಕನಿಗೆ ಮಾರ್ಗದರ್ಶಿಯಾಗಿದೆ. ಅಂದರೆ, ಆತ ಸತ್ಯಕ್ಕೆ ಕೇಡು ಒದಗದಂತೆ, ತನ್ನ ಸ್ವಾತಂತ್ರ್ಯಕ್ಕೆ ಭಂಗ ಬರದಂತೆ ಸಂಶೋಧನ ವ್ರತವನ್ನು ಮುಂದುವರಿಸಬೇಕು. ಗತಿಸಿದ ಪರಂಪರೆಯ ಪ್ರಕಟನೆಯ ಹೊರೆ ತನ್ನ ಮೇಲಿದೆ ಎಂಬ ಎಚ್ಚರ ಅವನಲ್ಲಿ ಮನೆಮಾಡಿರಬೇಕು. ಪರಂಪರೆಯನ್ನು ವ್ಯತ್ಯಸ್ತಗೊಳಿಸುವ, ಮುಚ್ಚಿ ಹಾಕುವ ಪಾಪಕಾರ್ಯ ಅವನ ಕೈಯಿಂದ ಜರುಗಬಾರದು. ಆದುದರಿಂದ, ಆತ ಆಕರಸಾಮಗ್ರಿಯನ್ನು ಅವಲಂಬಿಸಿ ಸತ್ಯವನ್ನು, ಅದು ಸಾಧ್ಯವಾಗದಿದ್ದರೆ ಸಂಭಾವ್ಯತೆಯನ್ನು ಸ್ಥಾಪಿಸಬೇಕಾಗುತ್ತದೆ. ಮುಂದಿನವರು ಈ ಸಂಭಾವ್ಯತೆಯನ್ನು ಹೊಸ ಆಕರಗಳಿಂದ ನಿಜಗೊಳಿಸಬಹುದಾಗಿದೆ. ಅದಕ್ಕಾಗಿಯೇ ” ಸಂಶೋಧನೆಯೆನ್ನುವುದು ಅಲ್ಪ ವಿರಾಮ, ಅರ್ಧವಿರಾಮಗಳ ಮೂಲಕ ಪೂರ್ಣವಿರಾಮಕ್ಕೆ ಸಾಗುವ ಕ್ರಿಯೆಯಾಗಿದೆ ” ಎನ್ನುವ ಸಂಶೋಧಕ ಡಾ || ಎಂ. ಎಂ. ಕಲಬುರ್ಗಿ ಅವರು ಈ ನಾಡು ಕಂಡ ಶ್ರೇಷ್ಠ ಚಿಂತಕರು.

ಶ್ರಮ ಸಂಸ್ಕೃತಿಯ ಒಕ್ಕಲುತನ ಮನೆತನ ಮತ್ತು ಮಧ್ಯಮವರ್ಗದ ಸುಸಂಸ್ಕೃತ ಅವಿಭಕ್ತ ಕುಟುಂಬದಲ್ಲಿ 28ನವೆಂಬರ್ 1938 ರಲ್ಲಿಹುಟ್ಟಿದ ಕಲಬುರ್ಗಿಯವರು ಶ್ರಮಮೌಲ್ಯದ ಆರಾಧಕರಾಗಿ ಅನುಷ್ಠಾನನಿಷ್ಠರಾಗಿ ಅರಳಿದವರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮ ಯರಗಲ್ಲದಲ್ಲಿ, ಮಾಧ್ಯಮಿಕ ಶಿಕ್ಷಣವನ್ನು ಸಿಂದಗಿಯಲ್ಲಿ ಪೂರೈಸಿದರು. ವಿಜಯಪುರದ ವಿಜಯ ಕಾಲೇಜಿನಿಂದ ಬಿ. ಎ. ಪದವಿಯನ್ನು, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದಿಂದ ಎಂ. ಎ. ಪದವಿಯನ್ನು ಪ್ರಥಮ ಶ್ರೇಣಿಯಲ್ಲಿ ಪ್ರಶಸ್ತಿಸಹಿತ ಗಳಿಸಿದ ಶ್ರೀಯುತರು ” ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ” ಎಂಬ ವಿಷಯದ ಮೇಲೆ ಪಿಎಚ್. ಡಿ ಸಂಪಾದಿಸಿದರು. ತಮ್ಮ ಗುರುಗಳಾದ ಶ್ರೀ ಬಿ. ಟಿ. ಸಾಸನೂರರ ಮತ್ತು ಡಾ || ಆರ್. ಸಿ. ಹಿರೇಮಠರ ನೆರಳಿನಲ್ಲಿ ದೃಢವಾದ ಹೆಜ್ಜೆಯಿಟ್ಟರು. “ದುಡಿಯುವವನ ಮನಸ್ಸು ಸ್ವಚ್ಛವಿರುತ್ತದೆ” ಎಂಬ ಡಾ|| ಫ. ಗು. ಹಳಕಟ್ಟಿಯವರ ವಾಕ್ಯ ಇವರ ಎಳೆಯ ಮನಸ್ಸನ್ನು ಪ್ರಭಾವಿಸಿದ್ದಿತು. “ಜನಮೆಚ್ಚಿನಡೆಕೊಂಡರೇನುಂಟು ಲೋಕದಿ ಮನಮೆಚ್ಚಿನಡೆಕೊಂಬುದೇ ಚೆಂದವು” ಎಂದು ಮುನ್ನಡೆದು ಮಹಾಮಾರ್ಗ ಕ್ರಮಿಸಿದ ಕ್ರಿಯಾಶೀಲ ವಿದ್ವಾಂಸರು, ಡಾ. ಕಲಬುರ್ಗಿಯವರು.

ಡಾ. ಎಂ. ಎಂ. ಕಲಬುರ್ಗಿ ಅವರದು ಬಹುಮುಖ ವ್ಯಕ್ತಿತ್ವ ; ಬಹುಮುಖ ಪ್ರತಿಭೆ ; ಬಹುಮುಖ ಕಾರ್ಯಯೋಜನೆ. ಕನ್ನಡದ ಶ್ರೇಷ್ಠ ಪ್ರಾಧ್ಯಾಪಕರಾಗಿ, ಉನ್ನತಶ್ರೇಣಿಯ ಸಂಶೋಧಕರಾಗಿ, ಸಮರ್ಥ ಸಂಶೋಧನ ಮಾರ್ಗದರ್ಶಕರಾಗಿ, ವಿಭಾಗದ ದಕ್ಷ ಅಧ್ಯಕ್ಷರಾಗಿ, ಕನ್ನಡ ವಿಶ್ವವಿದ್ಯಾಲಯದ ಮಾದರಿ ಕುಲಪತಿಗಳಾಗಿ, ಅನೇಕ ವಿನೂತನ ಯೋಜನೆಗಳ ಯೋಜಕರಾಗಿ, ಹಲವಾರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಸಂಘ-ಸಂಸ್ಥೆಗಳ ನಿರ್ದೇಶಕರಾಗಿ ಅವರು ಮಾಡಿದ ಕಾರ್ಯಚಟುವಟಿಕೆಗಳು ಅಚ್ಚರಿ ಮೂಡಿಸುವಂತಿವೆ. ಡಾ || ಕಲಬುರ್ಗಿಯವರದು ‘ಸತ್ಯಶೋಧನೆ’ ಗೆ ಮತ್ತೊಂದು ಹೆಸರು. “ಭಾರತದ ಭಾವನಿಷ್ಠ ರಾಷ್ಟ್ರದಲ್ಲಿ ಸಂಶೋಧನೆ ಸರಳ ದಾರಿಯಲ್ಲ, ಕಹಿಸತ್ಯ ಹೇಳಬಾರದು ಎಂಬ ಸಂಪ್ರದಾಯದ ವಾರಸುದಾರರಾದ ಭಾರತೀಯರಿಗೆ ಅಂಥ ಸತ್ಯ ಸಹಜವಾಗಿಯೇ ಸಿಹಿ ಎನಿಸುವುದಿಲ್ಲ. ಹೀಗಾಗಿ ಈ ರಾಷ್ಟ್ರದಲ್ಲಿ ಸಂಶೋಧಕ ಆಗಾಗ ಸಣ್ಣ ಸಣ್ಣ ಶಿಲುಬೆಗಳನ್ನೇರಬೇಕಾಗುತ್ತದೆ. ‘ಮುಗ್ಧ’ರೊಂದಿಗೆ ‘ಜಾಣ’ರೂ ಕೆಲವೊಮ್ಮೆ ಕೈಗೂಡಿಸಿ ಸಂಶೋಧಕನನ್ನು ಅಂದರೆ ಸತ್ಯವನ್ನು ಹಿಂಸಿಸುವಲ್ಲಿ ತೃಪ್ತಿಪಡುತ್ತಾರೆ. ಇಂಥ ಪ್ರಸಂಗಗಳಿಂದಾಗಿ ಭಾರತೀಯ ಸಂಶೋಧಕ ಅನೇಕ ಅಗ್ನಿಕುಂಡಗಳನ್ನು ದಾಟಬೇಕಾಗುತ್ತದೆ. ‘ ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಬಹುಶಃ ನನ್ನ ತಲೆಮಾರಿನ ಇತರ ಸಂಶೋಧಕರಿಗಿಂತ ಪರಿಸರವು ನನ್ನ ಕಾಲ ಕೆಳಗೆ ತೋಡಿದ ಅಗ್ನಿಕುಂಡಗಳೇ ದೊಡ್ಡವೆಂದು ತೋರುತ್ತದೆ. ಆದರೆ ಕಾಲ ಕೆಳಗಿನ ಬೆಂಕಿಗಿಂತ ಕಣ್ಣ ಮುಂದಿನ ಬೆಳಕು ದೊಡ್ಡದೆಂಬ ನಂಬಿಕೆ ನನ್ನನ್ನು ಈವರೆಗೆ ಉಳಿಸಿದೆ, ಬೆಳೆಸಿದೆಯೆಂದು ನಂಬಿದ್ದೇನೆ”. ಇಂಥ ಆತ್ಮವಿಶ್ವಾಸ, ಸತ್ಯನಿಷ್ಠುರ ಪ್ರೀಯರಾದ ಕಲಬುರ್ಗಿಯವರು ಸಂಶೋಧಕರ ಮಿತ್ರ, ಸೌಜನ್ಯದ ಸಾಕಾರಮೂರ್ತಿ, ಶಿಷ್ಯಾನುರಾಗಿ, ಮಾರ್ಗಕಾರ ಪ್ರತಿಭಾ ಸಂಪನ್ನ, ಸಾಹಿತ್ಯ ಸಂಸ್ಕೃತಿಯ ಧ್ವನಿ ಎಂದೆಲ್ಲಾ ಗುರುತಿಸಲ್ಪಟ್ಟಿದ್ದಾರೆ, ಗೌರವಿಸಲ್ಪಟ್ಟಿದ್ದಾರೆ.

ಡಾ || ಎಂ. ಎಂ. ಕಲಬುರ್ಗಿ ಅವರ ಸಂಶೋಧನ ಕ್ಷೇತ್ರಗಳ – ವಿಷಯಗಳ ಹರವು ತುಂಬ ವಿಸ್ತಾರ, ವ್ಯಾಪ್ತಿ ಬಲು ದೊಡ್ಡದು. ಅವರು ನಿರಂತರವಾಗಿ ಕೈಕೊಂಡ ಸಂಶೋಧನೆಯ ಫಲವಾಗಿ ನೂರಕ್ಕೂ ಹೆಚ್ಚು ಕೃತಿಗಳು ಹಾಗೂ ‘ಮಾರ್ಗ’ ಹೆಸರಿನ ಎಂಟು ಸಂಪುಟಗಳಲ್ಲಿ ಏಳುನೂರಕ್ಕೂ ಹೆಚ್ಚು ಸಂಶೋಧನ ಸಂಪ್ರಬಂಧಗಳು ಪ್ರಕಟವಾಗಿವೆ. ಅವರ ಕನ್ನಡ ಸಂಶೋಧನಾ ಶಾಸ್ತ್ರ, ಕನ್ನಡ ನಾಮ ವಿಜ್ಞಾನ, ಕರ್ನಾಟಕದ ಕೈಫಿಯತ್ತುಗಳು, ಇಮ್ಮಡಿ ಚಿಕ್ಕ ಭೊಪಾಲನ ಸಾಂಗತ್ಯ, ಶಾಸನ ವ್ಯಾಸಂಗ ಮೊದಲಾದ ಕೃತಿಗಳು ಆಯಾ ಕ್ಷೇತ್ರಗಳಲ್ಲಿ ಸಂಶೋಧನೆ ಕೈಕೊಳ್ಳುವವರಿಗೆ ಮಾರ್ಗದರ್ಶಿಯಾಗಿವೆ. ಡಾ. ಕಲಬುರ್ಗಿಯವರು ಯೋಜನೆಗಳ ಬಹುದೊಡ್ಡ ನಿಕ್ಷೇಪವಾಗಿದ್ದರು. ಅವರ ತಲೆಯೊಂದು ಯೋಜನೆಗಳ ಭಂಡಾರವಾಗಿತ್ತು. ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿದ್ದಾಗ ಅವರು ಕೈಕೊಂಡ ವೈಯಕ್ತಿಕ ನೆಲೆಯ ಯುಜಿಸಿ ಅನುದಾನಿತ ಯೋಜನೆಗಳು, ಬಸವಪೀಠದ ಪ್ರಾಧ್ಯಾಪಕರಾಗಿದ್ದಾಗ, ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದಾಗ ಹಾಕಿಕೊಂಡ ಸಾಂಘಿಕ ಯೋಜನೆಗಳು ಅವರ ಶೈಕ್ಷಣಿಕ ಸಾಧನೆಗೆ ಸಾಕ್ಷಿಯಂತಿದ್ದರೆ, ಸಮಗ್ರ ವಚನ ಸಾಹಿತ್ಯ ಪ್ರಕಟನ ಯೋಜನೆ, ಸಮಗ್ರ ದಾಸಸಾಹಿತ್ಯ ಪ್ರಕಟನ ಯೋಜನೆ, ಪ್ರಾಚೀನ ಅಪ್ರಕಟಿತ ಕನ್ನಡ ಸಾಹಿತ್ಯ ಪ್ರಕಟನ ಯೋಜನೆ, ಡಾ ಫ. ಗು. ಹಳಕಟ್ಟಿ ಸಮಗ್ರ ಸಾಹಿತ್ಯ ಪ್ರಕಟನ ಯೋಜನೆ, ಬಸವರಾಜ ಕಟ್ಟಿಮನಿ ಸಮಗ್ರ ಸಾಹಿತ್ಯ ಪ್ರಕಟನ ಯೋಜನೆ, ಆದಿಲ್ ಶಾಹಿ ಸಾಹಿತ್ಯ ಅನುವಾದ ಯೋಜನೆ, ಬಹುಭಾಷಾ ವಚನ ಅನುವಾದ ಯೋಜನೆ ಮೊದಲಾದವು ಅವರ ಸಾಂಸ್ಕೃತಿಕ, ಸಾರಸ್ವತ ಪ್ರೀತಿಯ ದ್ಯೋತಕವೆನಿಸಿವೆ.

ಕನ್ನಡದ ಕೆಲಸಕ್ಕೆ ಎಷ್ಟು ಸಂಸ್ಥೆಗಳಿದ್ದರೂ ಸಾಲದು ಎನ್ನುತ್ತಿದ್ದ ಕಲಬುರ್ಗಿಯವರು ಜಾತಿ, ಪ್ರದೇಶ ಇತ್ಯಾದಿಗಳನ್ನು ಮೀರಿ ಕನ್ನಡ ಕೆಲಸಕ್ಕೆ ಮುಂದು ಬರುವ ಸಂಸ್ಥೆಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ಅವುಗಳಲ್ಲಿ ಗದುಗಿನ ತೋಂಟದಾರ್ಯ ಮಠ, ಮೈಸೂರಿನ ಸುತ್ತೂರು ಮಠ, ವಿಜಯಪುರದ ಬಿ. ಎಲ್. ಡಿ. ಇ ಸಂಸ್ಥೆ, ಬೆಳಗಾವಿಯ ಕೆ. ಎಲ್. ಇ ಸಂಸ್ಥೆ ಮುಂತಾದವುಗಳು ಡಾ. ಕಲಬುರ್ಗಿಯವರು ಹಾಕಿಕೊಟ್ಟ ಯೋಜನೆಗಳ ಮೂಲಕ ವಿಶೇಷ ಪ್ರಸಿದ್ಧಿಗೆ ಪಾತ್ರವಾಗಿವೆ. ಅವರು ಯಾವುದೇ ಸಂಸ್ಥೆಯ ಅಧಿಕಾರವನ್ನು ವಹಿಸಿಕೊಳ್ಳಲಿ ಅದಕ್ಕೆ ತಮ್ಮನ್ನು ಸಂಪೂರ್ಣವಾಗಿ ಸಮರ್ಪಿಸಿಕೊಳ್ಳುತ್ತಿದ್ದರು. ಡಾ. ಕಲಬುರ್ಗಿಯವರ ಪರಿಶ್ರಮಕ್ಕೆ ತಕ್ಕಂತೆ ಅನೇಕ ಉನ್ನತ ಪ್ರಶಸ್ತಿ – ಗೌರವಗಳು ಅವರಿಗೆ ಲಭಿಸಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ, ನೃಪತುಂಗ ಪ್ರಶಸ್ತಿ, ಪಂಪ ಪ್ರಶಸ್ತಿ, ರನ್ನ ಪ್ರಶಸ್ತಿ, ರಾಷ್ಟ್ರೀಯ ಬಸವ ಪ್ರಶಸ್ತಿ ಮುಂತಾದವುಗಳು ಅವರ ಮುಡಿಗೇರಿದವು. ಆದರೆ ಈ ಯಾವ ಗೌರವ-ಪ್ರಶಸ್ತಿಗಳೂ ಅವರ ತಲೆ ತಿರುಗಿಸಲಿಲ್ಲ. “ಅಂಬಲಿ ಕಂಬಳಿ ಆಸ್ತಿ ಮಿಕ್ಕಿದ್ದೆಲ್ಲ ಜಾಸ್ತಿ” ಎಂಬ ತಮ್ಮ ತಂದೆಯವರ ಆದರ್ಶಕ್ಕೆ ಅವರು ಕಟಿಬದ್ಧರಾಗಿದ್ದರು. ಕೆಲಸ ಮಾಡುವುದೊಂದೆ ನನ್ನ ಕರ್ತವ್ಯವೆಂದು ಅವರು ಬದುಕಿನುದ್ದಕ್ಕೂ ವಿನಯದಿಂದ ಬಾಗಿ ನಡೆದರು.

ಡಾ. ಎಂ. ಎಂ. ಕಲಬುರ್ಗಿಯವರು ಅನೇಕ ಸಂಘ – ಸಂಸ್ಥೆಗಳಿಗೆ ಸಾಹಿತ್ಯಿಕವಾಗಿ, ಸಾಮಾಜಿಕವಾಗಿ ಮಾರ್ಗದರ್ಶನ ನೀಡುವುದರ ಜೊತೆಗೆ ಶರಣರು ಕಂಡ ಸಮಾನತೆಯ – ಸದಾಚಾರದ ಸ್ವಸ್ಥಸಮಾಜ ನಿರ್ಮಾಣವಾಗಬೇಕೆಂದು ಬಯಸಿ, ಭಾಷಣ – ಬರಹಗಳ ಮೂಲಕ ಅಸತ್ಯ, ಅನ್ಯಾಯ, ಮೂಢಾಚಾರಗಳನ್ನು ಖಂಡಿಸುತ್ತ ಸಾಮಾಜಿಕರಲ್ಲಿ ಜಾಗೃತಿಯನ್ನು ಮೂಡಿಸುವ ಕಾರ್ಯದಲ್ಲಿ ಅವ್ಯಾಹತವಾಗಿ ತೊಡಗಿಕೊಂಡರು. ಸ್ಥಾವರಗೊಂಡ ವ್ಯವಸ್ಥೆಯನ್ನು ಚಲನಶೀಲಗೊಳಿಸಬೇಕು, ಜಂಗಮಗೊಳಿಸಬೇಕು ಎಂದು ಸಮಾಜ ಶುದ್ಧಿಯ ಕಾರ್ಯದಲ್ಲಿ ನಿರಂತರ ನಿರತರಾಗಿದ್ದರು. ಅವರ ಪ್ರಖರ ವಿಚಾರಗಳು, ವೈಚಾರಿಕ ನಿಲುವುಗಳು, ನಿಷ್ಠುರ ಸತ್ಯಗಳು ಪಟ್ಟಭದ್ರ ಹಿತಾಸಕ್ತಿಗಳಿಗೆ, ಸಂಕುಚಿತ ಭಾವದ ಸನಾತನಿಗಳಿಗೆ ಅಪಥ್ಯವೆನಿಸಿದವು. ಹೀಗಾಗಿ ಸತ್ಯಶೋಧಕರಾದ ಇವರು ೩೦-೦೮-೨೦೧೫ ರಂದು ದುಷ್ಟಶಕ್ತಿಗಳ ಗುಂಡೇಟಿಗೆ ಬಲಿಯಾಗಬೇಕಾಯಿತು, ಕರ್ನಾಟಕದ ಇತಿಹಾಸದಲ್ಲಿ ಅದೊಂದು ಕರಾಳ ದಿನವೆನಿಸಿತು.

“ನನ್ನ ಬಲ, ನನ್ನ ಛಲ ನೀರು ಗೊಬ್ಬರ ನನಗೆ.
ನಾನು ಹುಟ್ಟಿದ್ದು ಸಾಯಲಿಕ್ಕೆ ಅಲ್ಲ,
ಸೂರ್ಯ ಚಂದ್ರರ ಕೂಡ ಬದುಕಲಿಕ್ಕೆ”
ಎನ್ನುವ ಡಾ. ಕಲಬುರ್ಗಿಯವರು ನಿಜವಾಗಿಯೂ ಸಾಯಲಿಕ್ಕೆ ಹುಟ್ಟಲಿಲ್ಲ, ‘ಸತ್ಯ-ಸತ್ವ-ತತ್ವ’ಗಳನ್ನು ಬದುಕಲಿಕ್ಕೆ ಹುಟ್ಟಿದವರು. ಹೀಗಾಗಿ ಡಾ. ಕಲಬುರ್ಗಿಯವರೆಂದರೆ ಎಲ್ಲರಿಗೂ ಒಂದು ಅಚ್ಚರಿ, ವಿಸ್ಮಯ, ಬೆರಗು, ಎಚ್ಚರ.

ಕೃಪೆ : ಡಾ. ಎಂ. ಎಂ. ಕಲಬುರ್ಗಿ “ಜಗಜ್ಜಾಲ ಸಂಚಿಕೆ”

‘ವಿಶ್ವ ಪೂಜಾರ’ ಅವರ ಫೇಸ್‌ಬುಕ್‌ ವಾಲ್ ನಿಂದ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending