ದಿನದ ಸುದ್ದಿ
ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖಾಂಶಗಳು

ಸುದ್ದಿದಿನ,ದೆಹಲಿ : ಸಾರ್ವಕಾಲಿಕ ಶ್ರೇಷ್ಟ ಪ್ರಣಾಳಿಕೆಯನ್ನ ಅಳೆದು ತೂಗಿ ರೂಪಿಸಿದ್ದೇವೆ. ನಾವು ಆಡಿರುವ ಮಾತಿಗೆ ಬದ್ದರಿದ್ದೇವೆ. ನುಡಿದಂತೆ ನಡೆಯುತ್ತೇವೆ ಎಂದು ಕಾಂಗ್ರಸ್ ಮಂಗಳವಾರ ದೆಹಲಿಯಲ್ಲಿ ತನ್ನ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದೆ.
ಪ್ರಣಾಳಿಕೆಯ ಪ್ರಮುಖಾಂಶಗಳು ಹೀಗಿವೆ
- ನ್ಯಾಯ್ ಯೋಜನೆಯಿಂದ ಬಡತನ ರೇಖೆಗಿಂತ ಕೆಳಗಿರುವ ಜನರನ್ನ ಆರ್ಥಿಕ ಸಮಾನತೆಯತ್ತ ಕೊಂಡೊಯ್ಯಲಾಗುವದು.
- ಮಹಿಳೆಯ ಆರ್ಥಿಕ ಸ್ವಾತಂತ್ರ್ಯ ಮೂಡಿಸುವ ನಿಟ್ಟಿನಲ್ಲಿ #ನ್ಯಾಯ್ ಯೋಜನೆಯಡಿ ನೀಡಲಿರುವ 72,000/- ಕುಟುಂಬದ ಮಹಿಳೆಯ ಖಾತೆಗೆ ಜಮಾ ಮಾಡಲಾಗುವದು.
- ಜಲ ಸಂರಕ್ಷಣೆ, ಖರಾಬು ಜಮೀನು ಸುಧಾರಣೆ ಮಿಶನ್ ಅಡಿಯಲ್ಲಿ 3ವರ್ಷದಲ್ಲಿ 1ಕೋಟಿ ಉದ್ಯೋಗ ಸೃಷ್ಟಿಸಲಾಗುವದು.
- ‘ಮೇಕ್ ಪಾರ್ ದಿ ವರ್ಲ್ಡ್’
ರಪ್ತು ಹೆಚ್ಚಾಗಿಸುವ ನಿಟ್ಟಿನಲ್ಲಿ ರೂಪಿಸಲಿರುವ ಯೋಜನೆ. - ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಸದ್ಯದ 100 ದಿನ ಉದ್ಯೋಗವನ್ನ 150 ದಿನಕ್ಕೆ ಏರಿಸಲಾಗುವದು.
- ರೈಲ್ವೇಗೆ ಇರುವಂತೆ ಕೃಷಿ ಮತ್ತು ರೈತರಿಗಾಗಿ ವಿಶೇಷ ಬಜೆಟ್ ಮಂಡಿಸಲಾಗುವದು.
- 2020 ಮಾರ್ಚ್ ಒಳಗೆ ಕೇಂದ್ರಸರ್ಕಾರದಲ್ಲಿರುವ 4ಲಕ್ಷ ಹುದ್ದೆ,ಸ್ಥಳೀಯ ಸಂಸ್ಥೆಗಳಲ್ಲಿರುವ 10 ಲಕ್ಷ ಹುದ್ದೆ ಭರಿಸಲಾಗುವದು.
- ಸ್ಲಮ್ ಸುಧಾರಣೆ ಯೋಜನೆಯಡಿ ಶುದ್ದ ನೀರು, ವಿದ್ಯುತ್, ನೈರ್ಮಲ್ಯಕ್ಕೆ, ಪಕ್ಕಾ ಮನೆ ನಿರ್ಮಿಸಲಾಗುವದು.
- ‘ಮನರೇಗಾ’ ವನ್ನ ಸಾರ್ವಜನಿಕ ಆಸ್ತಿಗಳಾದ ಗ್ರಂಥಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲಾ ಕೊಠಡಿ ನಿರ್ಮಾಣಕ್ಕೆ ಬಳಸಲಾಗುವದು.
- ಮನರೇಗಾ 3.0, ಪ್ರಮುಖವಾಗಿ ರೈತರಿಗೆ ತಲೆನೋವಾಗಿರುವ ಜಲ ಸಂರಕ್ಷಣೆ, ಮಣ್ಣಿನ ಸಂರಕ್ಷಣೆಗಾಗಿ ಪರಿಚಯಿಸಲಾಗುವದು.
- ಸ್ವಂತ ಮನೆ ಹಕ್ಕಿನಡಿ ನಗರ ವಾಸಿ ಬಡವರ ಮೇಲೆ ನಡೆವ ಸ್ವೆಚ್ಚಾಚಾರದ ತೆರವುಗೊಳಿಸುವಿಕೆ ನಿಲ್ಲಿಸಲಾಗುವದು.
- ಸ್ಲಮ್ ಸುಧಾರಣೆ ಯೋಜನೆಯಡಿ ಶುದ್ದ ನೀರು, ವಿದ್ಯುತ್, ನೈರ್ಮಲ್ಯಕ್ಕೆ, ಪಕ್ಕಾ ಮನೆ ನಿರ್ಮಿಸಲಾಗುವದು.
- ಸ್ಥಳೀಯ ಸಂಸ್ಥೆಗಳ ಮೇಯರ್ ಮತ್ತು ಪ್ರತಿನಿಧಿಗಳಿಗೆ ಅಧಿಕಾರ ನೀಡುವ ಮೂಲಕ ನಗರಗಳ ಮೂಲಭೂತ ಸೌಕರ್ಯ ಸುಧಾರಣೆ.
- ಪ್ರಸ್ತುತ ಖಾಲಿ ಬಿದ್ದಿರುವ 22 ಲಕ್ಷ ಸರಕಾರಿ ಹುದ್ದೆಗಳನ್ನ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ತುಂಬಲಿದ್ದೇವೆ.
ಕಾಂಗ್ರೇಸ್ ಕೈ ಬಲಪಡಿಸಿ. - ಅಸಂಘಟಿತ ವಲಯದ ಕಾರ್ಮಿಕರಿಗೂ ಕನಿಷ್ಟ ವೇತನ ಸಿಗುವಂತೆ ನಿಯಮ ರೂಪಿಸಲಾಗುವದು.
- ‘ಸಣ್ಣ ಹಿಡಯವಳಿದಾರರು&ಕೃಷಿ ಕಾರ್ಮಿಕರ ಆಯೋಗ’ವನ್ನ ಸಂಪ್ರದಾಯಿಕ ಕೃಷಿಯೇತರ ಚಟುವಟಿಕೆದಾರರಿಗೆ ಅನುಕೂಲವಾಗುವಂತೆ ರೂಪಿಸಲಾಗುವದು.
- ‘ರಾಷ್ಟ್ರೀಯ ಕೃಷಿ ಬೆಳವಣಿಗೆ ಮತ್ತು ಯೋಜನಾ ಆಯೋಗ’ ವನ್ನು ರೈತರಿಗೆ ನೆರವಾಗಲು ರೂಪಿಸಲಾಗುವದು.
- ಕಾಂಗ್ರೇಸ್ ಅಧಿಕಾರಕ್ಕೆ ಏರುತ್ತಿದ್ದಂತೆ ರೈತರ ಸಾಲ ಮನ್ನಾ ಮಾಡಲಾಗುವದು.
- 3 ತಿಂಗಳಲ್ಲಿ ಹೂಡಿಕೆಗೆ ಅಡೆತಡೆಯಾಗಿರುವ ಎಲ್ಲ ಕಾಯಿದೆಗಳನ್ನು ತೆಗೆದಾಕಿ, ಹೂಡಿಕೆದಾರ ಸ್ನೇಹಿ ನೀತಿ ರೂಪಿಸಲಾಗುವದು.
- ವಿಮಾ ಕಂಪನಿಗಳನ್ನ ಬೆಳೆಸಿದ ಬಿಜೆಪಿಯ ‘ಫಸಲ್ ವಿಮಾ ಯೋಜನೆ’ಯನ್ನ, ತಿದ್ದುಪಡಿ ಮಾಡಿ ರೈತರಿಗೆ ಸಹಾಯ ಆಗುವಂತೆ ರೂಪಿಸಲಾಗುವದು.
- ಸಾಲದಿಂದ ಮುಕ್ತಿ’ ಯೋಜನೆಯಡಿಯಲ್ಲಿ ಅನ್ನದಾತನಿಗೆ ಉಳುಮೆಗೆ ಕಾಲಾನುಸಾರ ಬೇಕಾಗುವ ಅವಶ್ಯಕತೆ ನೀಡಲಾಗುವದು.
- 2500 ಕ್ಕೂ ಜನಸಂಖ್ಯೆ ಇರುವ ಗ್ರಾಮಗಳಿಗೆ ಕಡ್ಡಾಯವಾಗಿ ಆಶಾ ಕಾರ್ಯಕರ್ತೆಯರನ್ನ ನೇಮಿಸಲಾಗುವದು.
- ಎಲ್ಲ ಸರಕಾರಿ ಹುದ್ದೆಗಳ ಆಯ್ಕೆ ಪರೀಕ್ಷೆಗೆ ಇರುವ ಶುಲ್ಕವನ್ನು ಸಂಪೂರ್ಣವಾಗಿ ತೆಗೆಯಲಾಗುವದು
- ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಕಾರ್ಯಕರ್ತರ ಬಾಕಿ ಇರುವ ಸಂಬಳವನ್ನ ಅಧಿಕಾರಕ್ಕೆ ಬರುತ್ತಿದ್ದಂತೆ ನೀಡಲಾಗುವದು.
- ಜಿ ಎಸ್ ಟಿ 2.0- ಸರಳ ಸುಲಭ ಹೊರೆಯಾಗದಂತೆ ತೆರಿಗೆ ಪದ್ದತಿ ರೂಪಿಸಲಾಗುವದು.
- ಜಿ ಎಸ್ ಟಿ 2.0-ಅಡಿಯಲ್ಲಿ ಪೆಟ್ರೋಲ್ ಡೀಸೆಲ್, ತಂಬಾಕು ಉತ್ಪನ್ನ, ಸರಾಯಿ, ರಿಯಲ್ ಎಸ್ಟೇಟ್ ಗಳನ್ನ ತರಲಾಗುವದು.
- ರಫ್ತಾಗುವ ವಸ್ತು ತಯಾರಿಕೆ ಘಟಕಗಳಿಕೆ ತೆರಿಗೆ ವಿನಾಯ್ತಿ ಮೂಲಕ ಸರಕಾರದಿಂದ ನೆರವು.
- ಮೀನುಗಾರಿಕೆ ಮತ್ತು ಮೀನುಗಾರರ ಕಲ್ಯಾಣಕ್ಕೆ ಪ್ರತ್ಯೇಕ ಸಚಿವರನ್ನ ನೇಮಿಸಲಾಗುವದು.
- ಜಿ ಡಿ ಪಿಯ 2% ನ್ನು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ವಿನಿಯೋಗಿಸಲಾಗುವದು.
- ನೊಂದಾಯಿತವಲ್ಲದ ಉದ್ಯಮಗಳ ಉತ್ಪನ್ನಗಳಿಗೆ ಖರೀದಿದಾರರ ತೆರಿಗೆ ಹಾಕಿದ್ದನ್ನು ತೆಗೆದು ಹಾಕಲಾಗುವದು.
- ರಫಾಲೆ ಡೀಲ್ ತನಿಖೆ, ಮತ್ತು 5 ವರ್ಷದಲ್ಲಿ ಬಿಜೆಪಿಯವರು ಮಾಡಿರುವ ಭ್ರಷ್ಟಾಚಾರದ ತನಿಖೆ ಮಾಡಲಾಗುವದು
- ನೊಂದಾಯಿತವಲ್ಲದ ಉದ್ಯಮಗಳ ಉತ್ಪನ್ನಗಳಿಗೆ ಖರೀದಿದಾರರ ತೆರಿಗೆ ಹಾಕಿದ್ದನ್ನು ತೆಗೆದು ಹಾಕಲಾಗುವದು.
- ಲೋಕಪಾಲ್ ನೇಮಕ ಮಾಡಲಾಗುವದು.
- ಐಪಿಸಿ ಸೆಕ್ಷನ್ 499ನ್ನು ತೆಗೆದು ಹಾಕಿ, ಮಾನನಷ್ಟ ಮೊಕದ್ದಮೆಯನ್ನು ಸಿವಿಲ್ ಅಪಕೃತ್ಯ ಎಂದು ಮಾಡಲಾಗುವದು.
- ಹಳಿ ತಪ್ಪಿಸಿರುವ ಗೊಂದಲಮಯ ‘ನೀತಿ ಆಯೋಗ’ ವನ್ನು ಕಿತ್ತೆಸೆದು ಹೊಸದಾದ ಯೋಜನಾ ಆಯೋಗವನ್ನ ರೂಪಿಸಲಾಗುವದು
- ಲೋಕಸಭೆ ಮತ್ತು ವಿಧಾನ ಸಭೆಗಳಲ್ಲಿ ಮಹಿಳಾ ಪ್ರಾತಿನಿದ್ಯ ಹೆಚ್ಚಿಸಲು ಮಹಿಳೆಯರಿಗೆ 33% ಮೀಸಲಾತಿಯನ್ನ ಮೊದಲ ಸಭೆಯಲ್ಲಿ ಮಂಡಿಸಲಾಗುವದು.
- ಕೇಂದ್ರ ಸರಕಾರದ ಹುದ್ದೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಲಾಗುವದು.
- ಪ.ಜಾ ಪ.ಪಂ & ಹಿಂದುಳಿದ ವರ್ಗಗಳ ಮೀಸಲಾತಿ ಸಂಬಂಧಿಸಿದಂತೆ ‘ಸಮಾನ ಅವಕಾಶಗಳ ಆಯೋಗ’ವನ್ನ ರಚಿಸಲಾಗುವದು.
- ಪ.ಜಾ ಪ.ಪಂ ಮತ್ತು ಹಿಂದುಳಿದ ವರ್ಗಗಳಿಗೆ ಖಾಸಗಿ ವಿದ್ಯಾ ಸಂಸ್ಥೆಗಳಲ್ಲು ಮೀಸಲಾತಿಯನ್ನ ಕಲ್ಪಿಸಲಾಗುವದು.
- ಸರಕಾರಿ ಟೆಂಡರುಗಳಲ್ಲಿ ಪ.ಜಾ ಪ.ಪಂ&ಹಿಂದುಳಿದವರಿಗೆ ನ್ಯಾಯಯುತ ಭಾಗ ನೀಡಲಾಗುವದು.
- ಸರಕಾರಿ ಟೆಂಡರುಗಳಲ್ಲಿ ಪ.ಜಾ ಪ.ಪಂ&ಹಿಂದುಳಿದವರಿಗೆ ನ್ಯಾಯಯುತ ಭಾಗ ನೀಡಲಾಗುವದು.
- ಅಲಿಗರ್, ಜಾಮಿಯಾ ಇಸ್ಲಮಿಯಾ ವಿಶ್ವವಿದ್ಯಾಲಯಗಳ ಮೂಲ ಉದ್ದೇಶವನ್ನ ರಕ್ಷಿಸಲಾಗುವದು.
- ವಕ್ಪ್ ಮಸೂದೆ 2014 ನ್ನು ಮತ್ತೊಮ್ಮೆ ಪರಿಚಯಿಸಿ, ವಕ್ಪ್ ಆಸ್ತಿಯನ್ನ ನ್ಯಾಯಯುತ ಟ್ರಸ್ಟಿಗಳಿಗೆ ನೀಡಲಾಗುವದು.
- ಮಾಬ್ ಲಿಂಚಿಂಗ್ ಮತ್ತು ಹೇಟ್ ಕ್ರೈಮ್ ತಡಗಟ್ಟಲು ಮೊದಲ ಸಭೆಯಲ್ಲಿಯೆ ಕಾಯಿದೆ ರೂಪಿಸಲಾಗುವದು.
Delhi: Congress party releases their election manifesto for #LokSabhaElections2019 pic.twitter.com/fccNKOuSqZ
— ANI (@ANI) April 2, 2019
Rahul Gandhi at Congress' election manifesto release: When we started this process about a year back, I spoke to Mr Chidamabaram, Mr Gowda & gave 2 instructions. I said this is not a manifesto to be made in closed rooms but this should reflect the wishes of the people of India. pic.twitter.com/gXII8TSHmx
— ANI (@ANI) April 2, 2019
Rahul Gandhi at Congress' election manifesto release: I also said that whatever is going to be in this manifesto has to be truthful, I do not want a single thing in this manifesto that is a lie because we have been hearing large number of lies spoken everyday by our PM. https://t.co/qpK73RZNal
— ANI (@ANI) April 2, 2019
Congress President Rahul Gandhi: PM had spoken about MGNREGA. He mocked and said it is a bogus and useless scheme. Today everyone knows how much it helped the country. So now we want to guarantee jobs for 150 days, instead of 100 days, under the scheme. pic.twitter.com/dgzAekiJ3y
— ANI (@ANI) April 2, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ-ಇತರೆ ಸೌಲಭ್ಯ ಅರ್ಜಿ ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ :2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಸಲು ಏ.20 ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು. ಇದೀಗ ಈ ಅವಧಿಯನ್ನು ಏ.30 ರವರಗೆ ವಿಸ್ತರಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ವೆಬ್ಸೈಟ್ www.ssp.postmatric.karnataka.gov.in ,ಕಾರ್ಯಕ್ರಮದ ವಿವರ, ಹಾಗೂ ಹೆಚ್ಚಿನ ವಿವರಗಳಿಗೆ https://bcwd.karnataka.gov.in : [email protected] ತಂತ್ರಾಂಶ ದೋಷಗಳು ಮತ್ತು ಇತರೆ ಮಾಹಿತಿಗೆ[email protected]
ದೂರವಾಣಿ ಸಂಖ್ಯೆ 8050770005/8050770004/ 080-35254757 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಸ್.ಆರ್.ಗಂಗಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ| ವಾಟ್ಸಾಪ್ | 9980346243

ದಿನದ ಸುದ್ದಿ
ಹಳೇ ಕುಂದುವಾಡ ಮನಾ ಯುವ ಬ್ರಿಗೇಡ್, ಜರವೇ ನಾಲ್ಕನೇ ವಾರ್ಷಿಕೋತ್ಸವ | ಯುವಕರ ಸಮಾಜ ಮುಖಿ ಕೆಲಸಗಳು ಉತ್ತಮ ನಾಯಕತ್ವಕ್ಕೆ ಬುನಾದಿ : ಮೇಯರ್ ಎಸ್.ಟಿ.ವೀರೇಶ್

ಸುದ್ದಿದಿನ,ದಾವಣಗೆರೆ : ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಂಡರೆ ಉತ್ತಮ ನಾಯಕರು ಆಗಲು ಅದು ಬುನಾದಿ ಆಗುತ್ತದೆ ಎಂದು ಮೇಯರ್ ಎಸ್ ಟಿ ವೀರೇಶ್ ತಿಳಿಸಿದರು.
ನಗರದ ಹಳೇ ಕುಂದುವಾಡದಲ್ಲಿ ಮನಾ ಯುವ ಬ್ರಿಗೇಡ್, ಜರವೇ ನಾಲ್ಕನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಾಧಕರಿಗೆ ಸನ್ಮಾನ, ಕುಂದುವಾಡ ಯುವ ರತ್ನ ಪ್ರಶಸ್ತಿ, ಕೆಎಪಿಎಲ್ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದಿನ ಸಮಯದಲ್ಲಿ ಯುವಕರು ಬೇರೆ ಬೇರೆ ದಾರಿ ಕಡೇ, ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ, ಸಾಮಾಜಿಕ ಸೇವೆಗಳು, ಸಹಾಯ ಹಸ್ತ ಚಾಚುವಂತ ಯುವ ಮನಸ್ಸುಗಳು ಸಿಗುವುದೇ ವಿರಳವಾಗಿದೆ.
ಇಂತಹ ಕಾಲದಲ್ಲಿ ಮನಾ ಯುವ ಬ್ರಿಗೇಡ್ ಯುವಕರು, 44 ನೇ ವಾರ್ಡಿನಲ್ಲಿ ಅತ್ಯುತ್ತಮ ಸಾಮಾಜಿಕ ಸೇವೆ ಮಾಡುವ ಮೂಲಕ ಜವಾಬ್ದಾರಿ ಹೆಚ್ಚಿಸಿಕೊಂಡಿದ್ದಾರೆ.. ಯಾವುದೇ ಸಮಾಜ ಸೇವೆಗಳು ಮಾಡಬೇಕೆಂದರು ಸವಾಲುಗಳು ಜಾಸ್ತಿ, ಎಲ್ಲಾ ಸವಾಲು ಮೆಟ್ಟಿನಿಂತು ಯುವಕರು ಸಮಾಜ ಸೇವೆಗಳಲ್ಲಿ ತೊಡಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ದಿ. ಜೆಎಂ ಹನುಮಂತಪ್ಪ ಅವರಿಗೆ ಮರಣೋತ್ತರ ಕುಂದುವಾಡ ರತ್ನ ಪ್ರಶಸ್ತಿ ಹಾಗೂ ಸಿಆರ್ ಪಿಎಫ್ ಯೋಧ ಆನಂದ್ ಎಸ್ ಎಚ್, ಎಸ್ ಎಸ್ ಬಿ ಯೋಧ ಭರ್ಮಪ್ಪ, ಸಮಾಜ ಸೇವಕ ರಾಜು ಕರೂರು ಅವರಿಗೆ ಕುಂದುವಾಡ ಯುವ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮಾಜ ಸೇವಕರಿಗೆ ಸನ್ಮಾನಿಸಿ ಗೌರವಿಸಲಾಯಿತು, ಕೆಪಿಎಲ್ ಚಾಂಪಿಯನ್ ಪವರ್ ಫೈಟರ್ಸ್ ತಂಡಕ್ಕೆ ಟ್ರೋಫಿ ವಿತರಿಸಲಾಯಿತು..
ಈ ಸಂದರ್ಭದಲ್ಲಿ ವರ್ತಕರಾದ ರಾಘವೇಂದ್ರ ಎನ್ ದಿವಾಕರ್, ಪಾಲಿಕೆ ಮಾಜಿ ಸದಸ್ಯ ಹೆಚ್ ತಿಪ್ಪಣ್ಣ, ಮುಖಂಡರಾದ ಬಾಡದ ಆನಂದರಾಜ್, ನಾಗಭೂಷಣ್ ವಾಣಿ, ಮಿಟ್ಲಕಟ್ಟೆ ಚಂದ್ರಪ್ಪ, ಶಿವಪ್ಪ, ಜೆಸಿ ದೇವರಾಜ್, ಎನ್ ಟಿ ನಾಗರಾಜ್, ಸಣ್ಣಿಂಗಪ್ಪ, ಮಂಜಪ್ಪ, ಗಿರೀಶ್ ದೇವರಮನೆ, ಪತ್ರಕರ್ತ ಮಧುನಾಗರಾಜ್ ಕುಂದುವಾಡ ಸೇರಿದಂತೆ ಮತ್ತಿತರರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ನಿಧನ

ಸುದ್ದಿದಿನ, ಬೆಂಗಳೂರು : ನಾಡಿನ ಖ್ಯಾತ ಸಂಶೋದಕ, ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸೋಮವಾರ ರಾತ್ರಿ 1.15 ರ ವೇಳೆಗೆ ತಮ್ಮ ವಯೋ ಸಹಜ ಕಾರಣಗಳಿಂದ 108 ನೇ ವಯಸ್ಸಿನಲ್ಲಿ ನಿಧನರಾದರು.
ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ ಪ್ರಾಧ್ಯಾಪಕರು. ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸುವರ್ಣ ಪದಕದೊಡನೆ ಎಂ.ಎ. ಪದವಿ, ನಂತರ ಬಿ.ಟಿ. ಪದವಿ ಗಳಿಕೆ. ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿಯನ್ನು ಆರಂಭಿಸಿ, ನಂತರ ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಿನ್ಸಿಪಾಲರಾಗಿ, ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಕೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಶ್ರೀಯುತರದು.
ನಡೆದಾಡುವ ನಿಘಂಟು, ಶಬ್ಧ ಬ್ರಹ್ಮ ಎಂದು ಜನಜನಿತರಾಗಿರುವ ಶ್ರೀಯುತರು ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಕೆ. 50ಪುಸ್ತಕಗಳನ್ನು, 14 ನಿಘಂಟುಗಳನ್ನು ಪ್ರಕಟಗೊಳಿಸಿರುವುದಲ್ಲದೆ ‘ಇಗೋ ಕನ್ನಡ’ ಎಂಬ ಅಂಕಣದಿಂದ ನಾಡಿನಲ್ಲಿ ಮನೆಮಾತಾಗಿದ್ದಾರೆ.
ನಿಘಂಟು ಪರಿವಾರ, ಅಕ್ರೂರ ಚರಿತ್ರೆ (ಸಂಪಾದನೆ), ಇಗೋ ಕನ್ನಡ (ಸಾಮಾಜಿಕ ನಿಘಂಟು), ಗತಿ ಪ್ರಜ್ಞೆ, ಕನ್ನಡವನ್ನು ಉಳಿಸಿ ಬೆಳೆಸಿದವರು, ಅನುಕಲ್ಪನೆ, ಕರ್ಣ ಕರ್ಣಾಮೃತ ಮುಂತಾದವು ಪ್ರಮುಖ ಕೃತಿಗಳು. ಹಲವಾರು ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಆಹ್ವಾನಿತ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಶ್ರೀಯುತರ ಪಾಂಡಿತ್ಯಕ್ಕೆ ಸಂದ ಪ್ರಶಸ್ತಿ ಪುರಸ್ಕಾರಗಳು ಹಲವಾರು.
ಅವುಗಳಲ್ಲಿ ವಿದ್ಯಾಲಂಕಾರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಂಬಾ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ, ಕಾಯಕ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ವಿಶೇಷ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಪ್ರಶಸ್ತಿ, ಅಂತರಾಷ್ಟ್ರೀಯ ನಿಘಂಟು ಸಮ್ಮೇಳನಗಳಿಗೆ ಆಹ್ವಾನ ಮುಂತಾದವು ಮುಖ್ಯವಾದವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಬಹಿರಂಗ7 days ago
ಸಂವಿಧಾನ ನಿತ್ಯದ ಪಾಠವಾಗಲಿ..!
-
ಅಂತರಂಗ7 days ago
ಮಹಾ ಮಾನವತಾವಾದಿ ಅಂಬೇಡ್ಕರ್ ನೆನಪಿನಲ್ಲಿ..!
-
ಭಾವ ಭೈರಾಗಿ6 days ago
ಕವಿತೆ | ಯುಗಾದಿ ಪುರುಷ
-
ಲೈಫ್ ಸ್ಟೈಲ್5 days ago
ತರಕಾರಿ ಸಿಪ್ಪೆಯಿಂದ ಪೇಪರ್ ತಯಾರಿಸಿದ ಹತ್ತರ ಬಾಲೆ ಮಾನ್ಯ ಹರ್ಷ..!
-
ನಿತ್ಯ ಭವಿಷ್ಯ7 days ago
ಈ ರಾಶಿಯವರಿಗೆ ಶುಭಕಾರ್ಯ ನೆರವೇರಲಿದೆ..! ಬುಧವಾರ- ರಾಶಿ ಭವಿಷ್ಯ ಏಪ್ರಿಲ್-14,2021
-
ನಿತ್ಯ ಭವಿಷ್ಯ7 days ago
ಜನ್ಮ ಕುಂಡಲಿಯಲ್ಲಿ ಈ ಗ್ರಹಗಳು ಇದ್ದರೆ ಆಗರ್ಭ ಶ್ರೀಮಂತರು ; ಧನ ಯೋಗ ಪ್ರಾಪ್ತಿ
-
ನಿತ್ಯ ಭವಿಷ್ಯ6 days ago
ಈ ರಾಶಿಯವರು ಹೊಸ ಮನೆ ನಿರ್ಮಾಣ ಮಾಡಿ,ಮದುವೆ ಕಾರ್ಯ ಮಾಡುವಿರಿ..! ಗುರುವಾರ- ರಾಶಿ ಭವಿಷ್ಯ ಏಪ್ರಿಲ್-15,2021
-
ನಿತ್ಯ ಭವಿಷ್ಯ5 days ago
ಈ ರಾಶಿಯವರು ಕುಟುಂಬ ಸದಸ್ಯರೊಂದಿಗೆ “ಸಂತಾನದ” ಸಿಹಿಸುದ್ದಿ ಕೇಳಿ ಸಂತಸ ಹಂಚಿಕೊಳ್ಳುವಿರಿ! ಶುಕ್ರವಾರ-ಏಪ್ರಿಲ್-16,2021