ದಿನದ ಸುದ್ದಿ
ಪೊಲೀಸರಿಂದ ಕಾನೂನಿನ ಅತ್ಯಾಚಾರ
- ದಿನೇಶ್ ಅಮಿನ್ ಮಟ್ಟು
ಹತ್ರಾಸ್ ನಲ್ಲಿ ಮೇಲ್ಜಾತಿಯ ದುರುಳರಿಂದ ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಯುವತಿಯ ಅಂತ್ಯಕ್ರಿಯೆಯನ್ನು ಪೊಲೀಸರು ತಂದೆ-ತಾಯಿಗೆ ಮಗಳ ಮುಖವನ್ನೂ ನೋಡಲು ಅವಕಾಶ ನೀಡದೆ ಅವಸರದಲ್ಲಿ ನಡುರಾತ್ರಿಯೇ ಅಂತ್ಯಕ್ರಿಯೆಯನ್ನು ಮುಗಿಸಿದರು. ಯಾಕೆ?
ನಮ್ಮ ಭವ್ಯಭಾರತದಲ್ಲಿ ಅತ್ಯಾಚಾರದ ನೂರು ಪ್ರಕರಣಗಳಲ್ಲಿ ಕೇವಲ 27 ಪ್ರಕರಣಗಳಲ್ಲಿ ಮಾತ್ರ ಅಪರಾಧಿಗಳಿಗೆ ಶಿಕ್ಷೆಯಾಗುತ್ತದೆ. 2018ರಲ್ಲಿ ಪೊಲೀಸ್ ಇಲಾಖೆಯಲ್ಲಿ ದಾಖಲಾಗಿದ್ದು 1,56,327 ರೇಪ್ ಪ್ರಕರಣಗಳು.
ಅವುಗಳಲ್ಲಿ ವಿಚಾರಣೆ ಪೂರ್ಣಗೊಂಡ ಪ್ರಕರಣಗಳು 17,313 ಮಾತ್ರ. ಇವುಗಳಲ್ಲಿ 11,133 ಪ್ರಕರಣಗಳ ಆರೋಪ ಪಟ್ಟಿ ಸಲ್ಲಿಕೆಯಾಗುವ ಮೊದಲೇ ಆರೋಪಿಗಳು ಬಿಡುಗಡೆಯಾಗಿದ್ದರು, 1472 ಪ್ರಕರಣಗಳಲ್ಲಿ ಆರೋಪಿಗಳು ವಿಚಾರಣೆ ನಡೆದು ದೋಷಮುಕ್ತರಾಗಿದ್ದರು.
ಆರೋಪಿಗಳು ದೋಷಮುಕ್ತರಾಗಲು ಒಂದು ಕಾರಣ ಏನೆನ್ನುವುದು ಬುಧವಾರ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ನೋಡಿದವರಿಗೆ ಮನವರಿಕೆಯಾಗಿರಬಹುದು. ಇನ್ನೊಂದು ಪ್ರಮುಖ ಕಾರಣ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸುವ ಆರೋಪಪಟ್ಟಿಯಲ್ಲಿನ ದೋಷಗಳು.
ಅತ್ಯಾಚಾರದಂತಹ ಪ್ರಕರಣಗಳಲ್ಲಿ ಶೇಕಡಾ 90ರಷ್ಟು ಪ್ರಕರಣಗಳು ಪೊಲೀಸ್ ಇಲಾಖೆಯಲ್ಲಿ ಎಫ್ ಐ ಆರ್ ದಾಖಲಾಗಿ ಆರೋಪ ಪಟ್ಟಿ ಸಿದ್ದಗೊಂಡು ನ್ಯಾಯಾಲಯಕ್ಕೆ ಸಲ್ಲಿಸುವ ಹಂತದಲ್ಲಿ ಸತ್ತು ಹೋಗಿರುತ್ತವೆ.
ಸರ್ಕಾರ ವಿಶೇಷ ಆಸಕ್ತಿ ವಹಿಸಿದರೆ, ಪಬ್ಲಿಕ್ ಪ್ರಾಸಿಕ್ಯೂಟರ್ ಗಳೇನಾದರೂ ಕಸಬುದಾರ ವಕೀಲರಂತೆ ವೃತ್ತಿನಿಷ್ಠೆಯಿಂದ ಕಾರ್ಯನಿರ್ವಹಿಸಿದರೆ ಸತ್ತುಹೋಗಿರುವ ಒಂದಷ್ಟು ಪ್ರಕರಣಗಳಿಗೆ ಜೀವ ತುಂಬಬಹುದು. ಅವರೂ ವ್ಯವಸ್ಥೆಯ ಜೊತೆ ಷಾಮೀಲಾಗಿದ್ದರೆ ಆತನೂ ಸೇರ್ಕೊಂಡು ಉಳಿದ ಪ್ರಕರಣಗಳನ್ನು ಮುಗಿಸಿಬಿಡುತ್ತಾರೆ.
ಅಪರಾಧಿಗಳನ್ನು ರಕ್ಷಿಸಲು ಪೊಲೀಸರು ನಿರ್ಧರಿಸಿದರೆ ಅವರು ಮೊದಲು ಸಾಕ್ಷ್ಯ ನಾಶಕ್ಕೆ ಇಳಿಯುತ್ತಾರೆ. ಹತ್ರಾಸ್ ನಲ್ಲಿ ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ದಲಿತ ಯುವತಿಯ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ.
ಸೆಪ್ಟೆಂಬರ್ ಹದಿನಾಲ್ಕರಂದು ತನ್ನ ಮನೆ ಸಮೀಪದ ಕಾಡಲ್ಲಿ ಈ ದಲಿತ ಯುವತಿಯ ಮೇಲೆ ಊರಿನ ಮೇಲ್ಜಾತಿಯ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರ ಎಸಗುತ್ತಾರೆ.
ಅಲ್ಲಿಂದಲೇ ಸಾಕ್ಷ್ಯ ನಾಶದ ಕೆಲಸ ಪ್ರಾರಂಭವಾಗುತ್ತದೆ. ಆ ಯುವತಿ ಒಂದೆರಡು ವರ್ಷ ಮಾತ್ರ ಶಾಲೆಗೆ ಹೋಗಿದ್ದಳಂತೆ. ಓದಲು ಬರೆಯಲು ಗೊತ್ತಿದ್ದ ಹಾಗೆ ಕಾಣುತ್ತಿಲ್ಲ. ಇದರಿಂದಾಗಿ ಮೌಖಿಕ ಹೇಳಿಕೆಯನ್ನಷ್ಟೇ ನೀಡಲು ಸಾಧ್ಯವಿತ್ತು. ಅದಕ್ಕಾಗಿ ನಾಲಗೆಯನ್ನು ಕತ್ತರಿಸಲಾಗಿತ್ತು.
ಅಲ್ಲಿಂದ ಪೊಲೀಸರ ಪ್ರವೇಶವಾಗುತ್ತದೆ. ಅಷ್ಟರಲ್ಲಿ ಯುವತಿ ಅಪರಾಧಿಗಳ ಹೆಸರನ್ನು ಹೇಳಿರುತ್ತಾಳೆ, ನಾಲ್ವರ ಬಂಧನವೂ ಆಗಿರುತ್ತದೆ. ಮಾಧ್ಯಮಗಳಲ್ಲಿ ವರದಿ ಬರತೊಡಗುತ್ತದೆ. ಇದೇನು ಕೈಮೀರಿ ಹೋಗುತ್ತಿದೆ ಎಂದನಿಸಿದಾಗ ಹೆತ್ತವರಿಗೆ ಮನವರಿಕೆ ಮಾಡಿ ಸ್ಥಳೀಯ ಆಸ್ಪತ್ರೆಯಲ್ಲಿದ್ದ ಆಕೆಯನ್ನು ದಿಡೀರನೆ ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ಸಾಗಿಸುತ್ತಾರೆ. ಹೋಗುವ ಮೊದಲು ಆಕೆ ತಾಯಿಯ ಜೊತೆ, ಹುಷಾರಾಗಿ ಬರ್ತೇನೆ ಎಂದು ಹೇಳಿ ಹೋಗಿದ್ದಳಂತೆ.
ಹದಿನಾಲ್ಕು ದಿನ ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದ ಯುವತಿ ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆ ಸೇರಿದ ಹದಿನೈದು ಗಂಟೆಗಳಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆಯುತ್ತಾಳೆ. ತಕ್ಷಣ ಹತ್ರಾಸ್ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಸ್ಪತ್ರೆಗೆ ಧಾವಿಸುತ್ತಾರೆ. ಹೆತ್ತವರಿಗೆ ಸಾವಿನ ಸುದ್ದಿ ತಿಳಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಅದರ ನಂತರ ಹೆತ್ತವರನ್ನು ದೂರ ಇಟ್ಟು ಯುವತಿಯ ಅಂತ್ಯಕ್ರಿಯೆ ನಡೆಸಲಾಗುತ್ತದೆ.
ಗಮನಿಸಬೇಕಾದ ಸಂಗತಿ ಎಂದರೆ ಇಲ್ಲಿಯ ವರೆಗೆ ಪೊಲೀಸರು ಹೆತ್ತವರಿಗೆ ಯುವತಿಯ ಮೃತದೇಹದ ಮರಣೋತ್ತರ ಪರೀಕ್ಷೆಯ ವರದಿಯನ್ನು ನೀಡಿಲ್ಲ. ಇಷ್ಟೆಲ್ಲ ತಂತ್ರ-ಕುತಂತ್ರಗಳನ್ನು ನಡೆಸಿದವರು ತ ಮರಣೋತ್ತರ ಪರೀಕ್ಷೆಯಲ್ಲಿಯೂ ಕೈಯಾಡಿಸಿರುವ ಸಾಧ್ಯತೆಗಳು ಖಂಡಿತ ಇದೆ. ಸಂಶಯಗೊಂಡು ಹೆತ್ತವರು ಮರು ಮರಣೋತ್ತರ ಪರೀಕ್ಷೆಗೆ ಒತ್ತಾಯಿಸಬಾರದೆಂದೇ ಅವಸರದಲ್ಲಿ ಅಂತ್ಯಕ್ರಿಯೆ ನಡೆಸಿ ಅಳಿದುಳಿದ ಸಾಕ್ಷ್ಯಗಳನ್ನು ನಾಶ ಮಾಡಲಾಗಿದೆ.
ಸಾಮಾನ್ಯವಾಗಿ ಮೆಡಿಕೋ-ಲೀಗಲ್ ಪ್ರಕರಣಗಳಲ್ಲಿ ಮೃತದೇಹದ ಅಂತ್ಯಕ್ರಿಯೆಯನ್ನು ಹೇಗೆ ಮಾಡಬೇಕೆಂಬುದನ್ನು ಹೆತ್ತವರು/ಪೋಷಕರು ನಿರ್ಧರಿಸಬೇಕು. ಈ ಪ್ರಕರಣದಲ್ಲಿ ಮರಣೋತ್ತರ ಪರೀಕ್ಷೆಗೆ ಮೊದಲು ಪೊಲೀಸರು ಒಂದಷ್ಟು ಕಾಗದಪತ್ರಗಳಿಗೆ ಯುವತಿಯ ತಂದೆಯ ಸಹಿಹಾಕಿಸಿದ್ದಾರೆ.
ಅನಕ್ಷರಸ್ಥ ತಂದೆ ಹೇಳಿಕೆಯನ್ನು ಖಂಡಿತ ಓದಿರುವುದಿಲ್ಲ, ಪೊಲೀಸರು ಓದಿ ಹೇಳಿದ್ದನ್ನು ಒಪ್ಪಿಕೊಂಡಿರಬಹುದು. ಅದರಲ್ಲಿ ಮಗಳ ಮೃತದೇಹವನ್ನು ಸುಡಲು ಒಪ್ಪಿಗೆ ನೀಡಿದ್ದ ಪತ್ರಕ್ಕೂ ಅವರು ಸಹಿಹಾಕಿರಬಹುದು. ಅದನ್ನೇ ಪೊಲೀಸರು ಈಗ ‘’ ತಂದೆಯ ಒಪ್ಪಿಗೆಯ ಮೇಲೆಯೇ ಮೃತದೇಹದ ಅಂತ್ಯಕ್ರಿಯೆ ನಡೆಸಲಾಗಿದೆ’ ಎಂದು ಹೇಳುತ್ತಿರುವುದು.
ಈಗಾಗಲೇ ಪೊಲೀಸರ ಹೇಳಿಕೆಗಳ ಧಾಟಿ ಬದಲಾಗಿದೆ. ಮೊದಲನೆಯದಾಗಿ ಯುವತಿಯ ಮೇಲೆ ರೇಪ್ ನಡೆದಿಲ್ಲ, ರೇಪ್ ಗೆ ಪ್ರಯತ್ನಿಸಲಾಗಿದೆ ಎಂದು ಹೇಳತೊಡಗಿದ್ದಾರೆ, ಇದರ ಜೊತೆಗೆ ಯುವತಿಯ ನಾಲಗೆ ಕತ್ತರಿಸಲಾಗಿಲ್ಲ ಎಂದೂ ಹೇಳತೊಡಗಿದ್ದಾರೆ. ಪೊಲೀಸರು ನಾಳೆ ಅಧಿಕೃತವಾಗಿ ಈ ಹೇಳಿಕೆ ನೀಡಿದರೆ ಇದು ಸುಳ್ಳೆಂದು ಸಾಬೀತುಪಡಿಸುವುದು ಹೇಗೆ? ಮೃತದೇಹ ಸುಟ್ಟು ಬೂದಿಯಾಗಿದೆ.
ಇದನ್ನೇ “ ಪೊಲೀಸರಿಂದ ಕಾನೂನಿನ ಅತ್ಯಾಚಾರ” ಎಂದು ಹೇಳಲಾಗುತ್ತಿದೆ.ಯುಪಿ ಪೊಲೀಸರು ಈ ಕಲೆಯಲ್ಲಿ ವರ್ಷದಿಂದ ಪಳಗಿ ಬಿಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243