Connect with us

ಬಹಿರಂಗ

ಮನುವಾದ ಮತ್ತು ಸಂವಿಧಾನ : ಹೆಣ್ಣಿನ ಅಸ್ಮಿತೆಯ ಪ್ರಶ್ನೆ

Published

on

  • ಮಂಜುಳಾ.ಟಿ, ಉಪನ್ಯಾಸಕರು, ದಾವಣಗೆರೆ

ಭಾರತೀಯ ಸಂಸ್ಕøತಿಯಲ್ಲಿ ಹೆಣ್ಣಿಗೆ ನೀಡಿರುವ ಗೌರವ ಹಾಗೂ ಉನ್ನತ ಸ್ಥಾನವನ್ನು ಜಗತ್ತಿನ ಯಾವುದೇ ಸಂಸ್ಕøತಿಯಲ್ಲಿ ನೀಡಿರಲಿಕ್ಕೆ ಸಾಧ್ಯವಿಲ್ಲ. ಇಲ್ಲಿ ಹೆಣ್ಣನ್ನು ಭೂಮಿ, ಲಕ್ಷ್ಮೀ, ಸರಸ್ವತಿ, ನದಿ, ಪ್ರಕೃತಿಯ ಪ್ರತಿರೂಪವಾಗಿ ಆರಾಧಿಸಲಾಗಿದೆ. ಹಾಗೆಯೇ ‘ಎಲ್ಲಿ ಹೆಣ್ಣನ್ನು ಪೂಜಿಸಲಾಗುತ್ತದೆಯೋ ಅಲ್ಲಿ ಸಕಲ ದೇವಾನುದೇವತೆಗಳು ನೆಲೆಸಿರುತ್ತಾರೆ’ ಎಂಬ ವಾಕ್ಯವನ್ನು ಪರಿಪಾಲಿಸಿಕೊಂಡು ಬರಲಾಗಿದೆ.

ಇಷ್ಟೊಂದು ಉನ್ನತವಾದ ಸ್ಥಾನಮಾನವನ್ನು ನೀಡಿರುವ ಭಾರತೀಯ ಸಂಸ್ಕøತಿಯಲ್ಲಿಯೇ ಹೆಣ್ಣನ್ನು ಧಾರ್ಮಿಕ ಚೌಕಟ್ಟಿನ ಅಡಿಯಲ್ಲಿ ನಿರಂತವಾಗಿ ಬಂಧಿಸಲಾಗಿದೆ. ಹೆಣ್ಣಿಗೆ ಇರಬೇಕಾದ ಪ್ರಕೃತಿ ಸಹಜವಾಗಿ ಲಭಿಸಬೇಕಾಗ ಸಮಾನ ಅವಕಾಶಗಳನ್ನು ವಂಚಿಸಲಾಗಿದೆ. ಹೆಣ್ಣನ್ನು ಲಿಂಗತಾರತಮ್ಯದ ನೆಲೆಯಲ್ಲಿ ಅವಕಾಶ ವಂಚಿತಳನ್ನಾಗಿಸಲು ‘ಮನು’ ಎಂಬ ಹಿಂದುತ್ವದ ಪ್ರತಿಪಾದಕ ಹಗಲಿರುಳು ಶ್ರಮಿಸಿರುವುದಕ್ಕೆ ‘ಮನುಧರ್ಮಶಾಸ್ತ್ರ’ವು ಜೀವಂತ ಸಾಕ್ಷಿಯಾಗಿ ಕಂಡುಬರುತ್ತದೆ.

ಮನುವಾದವು ಭಾರತೀಯ ಸಂಸ್ಕøತಿಯಲ್ಲಿ ಹೆಣ್ಣನ್ನು ಧಾರ್ಮಿಕ ಕಟ್ಟುಪಾಡುಗಳ ಅಡಿಯಲ್ಲಿ ಬಂಧಿಸುವುದಕ್ಕೆ ಒಂದು ಪ್ರಬಲ ಅಸ್ತ್ರವಾಗಿ ಕಾರ್ಯನಿರ್ವಹಿಸುತ್ತ ಬಂದಿದೆ. ಹೆಣ್ಣನ್ನು ಅಧಿಕಾರ ಹಾಗೂ ಹಕ್ಕುಗಳಿಂದ ವಂಚಿಸುವುದಕ್ಕೆ ರೂಪಿಸಿದಂತಹ ಶ್ಲೋಕದ ಮಾದರಿಯೊಂದು ಹೀಗಿದೆ;

ಅಸ್ವತಂತ್ರಾಃ ಸ್ತ್ರಿಯಃ ಕಾರ್ಯಾಃ ಪುರಸೈಃ ಸೈರ್ದಿವಾನಿಶಂ|
ವಿಷಯೇಷು ಚ ಸಜ್ಜಂತ್ಯಃ ಸಂಸ್ಥಾಪ್ಯಾ ಆತ್ಮನೋ ವಶೇ|| (ಮನುಸ್ಮøತಿ ಶ್ಲೋಕ-9.2)

ಮನುವಿನ ಈ ಧಾರ್ಮಿಕ ಶ್ಲೋಕದ ಆಶಯವೆಂದರೆ, “ಅಸ್ವತಂತ್ರ್ಯ ಅಂದರೆ ಸ್ವಾತಂತ್ರ್ಯವಿಲ್ಲದಿರುವುದೆ ಹೆಣ್ಣಿನ ಕಾರ್ಯಪ್ರವೃತ್ತಿಯಾಗಿದ್ದು, ಆಕೆ ಸ್ವಾತಂತ್ರ್ಯವನ್ನು ಬಯಸಬಾರದು. ಪುರುಷ ವಂಶವನ್ನು ಮುಂದುವರೆಸುವ ಕಾರ್ಯವು ಹೆಣ್ಣಿನ ಜವಬ್ದಾರಿಯಾಗಿದೆ. ಹೆಣ್ಣು ಈ ಹೊರೆಯನ್ನು ಯಶಸ್ವಿಯಾಗಿ ನಿರ್ವಹಿಸಬೇಕಾದರೆ ಗಂಡಿನ ವಶದಲ್ಲಿಯೇ ಇರಬೇಕು” ಎಂಬುದನ್ನು ಇದು ಪ್ರತಿಪಾದಿಸುತ್ತದೆ.

ಇಲ್ಲಿ ರಾಜಕೀಯ ಅಧಿಕಾರ, ಉದ್ಯೋಗ, ಧನಾರ್ಜನೆಗಳಿಗಿಂತ ಪುರುಷ ಸಂತತಿಯ ಪಾಲನೆ ಮತ್ತು ಪೋಷಣೆ ಹೆಣ್ಣಿನ ಕರ್ತವ್ಯವೆಂದು ಆರೋಪಿಸಲಾಗಿದೆ. ಹೆಣ್ಣು ಸ್ವಾತಂತ್ರ್ಯ ಪಡೆದು ಸಾಧನೆ ಮಾರ್ಗವನ್ನು ತುಳಿದರೆ ಪುರುಷನಿಗೆ ಯಾವುದೇ ಅಸ್ತಿತ್ವವಿರುವುದಿಲ್ಲ. “ಗಾಳಿಗೆ ಹಾರಿಹೋಗುವ ಬೀಜ ಒಂದು ಹೆಮ್ಮರವಾಗಿ ಬೆಳೆದು ನೂರಾರು ಪಕ್ಷಿಗಳಿಗೆ ಆಶ್ರಯ ತಾಣವಾಗುತ್ತದೆ. ಹೆಣ್ಣು ಅಂತಹ ಶಕ್ತಿಯೊಂದಿಗೆ ತನ್ನನ್ನು ಆರೋಪಿಸಿಕೊಂಡು ಹೆಮ್ಮರವಾಗಿ ಬೆಳೆಯುವ ಸಂಕಲ್ಪ ಮಾಡುವುದು ಪುರುಷನ ಉದ್ದೇಶಿತ ಗುರಿ ಸಾಧನೆಗೆ ಆತಂಕಕಾರಿ”.

ಜೀವನದಂತೆ ಸದಾ ಚಲನೆಯನ್ನು ಒಮ್ಮುಖವಾಗಿ ಮಾಡಿಕೊಂಡಿರುವ ಹಾಗೂ ತನ್ನ ಹರಿವಿನ ಪಾತ್ರದುದ್ದಕ್ಕೂ ಸಾವಿರಾರು ಜೀವರಾಶಿಗೆ ಜೀವನದ ಉಸಿರಾಗಿರುವ ಜೀವಂತ ನದಿ ಹೆಣ್ಣಿನ ಅದಮ್ಯ ಅಂತಸ್ಥ ಶಕ್ತಿಯನ್ನು ಚಿಗುರಿಸಿಬಿಟ್ಟರೆ ಪುರುಷನ ಅಧೀನದಲ್ಲಿ ಉಳಿಯುವುದು ಸಾಧ್ಯವಿಲ್ಲ. ಬೆಟ್ಟ, ಗುಡ್ಡ, ಪರ್ವತಗಳ ಅಚಲ ಮತ್ತು ಗಟ್ಟಿತನದ ಮನಸ್ಸಿನವಳಾಗಿ ಹೆಣ್ಣು ರೂಪ ತಳೆದುಬಿಟ್ಟರೆ ಗಂಡಸ್ಸಿನ ಪ್ರಾಬಲ್ಯ ಉಳಿಯುವುದಿಲ್ಲ.

ತನ್ನ ವಂಶ ಪರಂಪರೆಯ ಸ್ಥಾಪನೆ ಹಾಗೂ ಈ ಮೂಲಕ ತಾನು ಸಾಧಿಸಬೇಕಿರುವ ಪುರುಷಾರ್ಥ ಸಾಧನೆಗೆ ಬಲಿಷ್ಠನಾದ ಶ್ರಮ ಸಂಸ್ಕøತಿಯಲ್ಲಿ ಹುಟ್ಟಿದವನ ಶಕ್ತಿ ನಿಜವಾಗಿಯೂ ತೊಡರುಗಾಲಾಗಿ ಮಣಿಸಲಾಗದಂಥ ಸವಾಲಾಗಿತ್ತು. ಮನುವಿಗೆ ಇಂಥವರ ಹೆಸರು ಪಡೆದ ತನ್ನ ವೈರಿ ಪಡೆಯಂತೆಯೇ ಹೆಣ್ಣು ಬಲಿಷ್ಠಳಾಗಿ ತನ್ನ ಮನಸ್ಸನ್ನು ಬೆಳೆಸಿಕೊಂಡ ಪಕ್ಷದಲ್ಲಿ ಪುರುಷನು ತನ್ನ ಉದ್ದೇಶ ಸಾಧಿಸಲಾಗುವುದಿಲ್ಲ.” (ಅನಸೂಯ. ಎಂ. ಕದಂ, ಮಹಿಳಾ ಶೋಷಣೆಯ ನೆಲೆಗಳು, ಪು-110, 111) ಆದ್ದರಿಂದ ಹೆಣ್ಣು ಯಾವಾಗಲೂ ಪುರುಷನ ಅಧೀನದಲ್ಲಿಯೇ ಬಾಳಬೇಕು ಎಂಬುದು ಮನುವಿನ ನಿಲುವಾಗಿದೆ. ಆದ ಕಾರಣ ಹೆಣ್ಣನ್ನು ಬಂಧಿಸುವ ಅವೈಜ್ಞಾನಿಕ ಕಟ್ಟುಪಾಡುಗಳನ್ನು ಧಾರ್ಮಿಕ ನೆಲೆಗಟ್ಟಿನಲ್ಲಿ ಪ್ರತಿಪಾದಿಸಿದ ಕೀರ್ತಿ ಮನುವಿಗೆ ಸಲ್ಲುತ್ತದೆ.

ಸಾವಿರಾರು ವರ್ಷಗಳಿಂದ ಮನುವಿನ ‘ಧರ್ಮಶಾಸ್ತ್ರ’ವು ಹೆಣ್ಣಿನ ಸ್ವಾಭಿಮಾನದ ಬದುಕನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾಯಿತು. ಈ ಧರ್ಮಶಾಸ್ತ್ರದ ಚೌಕಟ್ಟುಗಳನ್ನು ಮೀರಿದವರನ್ನು ರಾಕ್ಷಸಿ, ವೇಶ್ಯೆ ಎಂಬಿತ್ಯಾದಿಯಾದ ಪಟ್ಟಗಳನ್ನು ಕಟ್ಟುವ ಮೂಲಕ ಮನುವಾದವನ್ನು ಕಾಪಾಡಿಕೊಂಡು ಬರಲಾಯಿತು. ಆದರೆ ಭಾರತಕ್ಕೆ ಬಂದ ಬ್ರಿಟಿಷರಿಂದಾಗಿ ಮನುವಿನ ಧರ್ಮಶಾಸ್ತ್ರದ ಕಟ್ಟುಪಾಡುಗಳಿಗೆ ಧಕ್ಕೆ ಉಂಟಾಯಿತು. ಭಾರತದ ಮೇಲೆ ರಾಜಕೀಯ ಹಿಡಿತ ಸಾಧಿಸಲು ಮುಂದಾದ ಬ್ರಿಟಿಷರಿಗೆ ಇಲ್ಲಿನ ಸಾಂಸ್ಕøತಿಕ ಆಯಾಮಗಳನ್ನು ಸೂಕ್ಷ್ಮವಾಗಿ ಗ್ರಹಿಸಿದರು.

ಇಂತಹ ಸಂದರ್ಭದಲ್ಲಿ ಹೆಣ್ಣನ್ನು ‘ಕೀಳಾಗಿ’ ನಡೆಸಿಕೊಳ್ಳುತ್ತಿರುವ ಅಂಶಗಳ ಬದಲಾವಣೆಗಾಗಿ ಶ್ರಮಿಸಿದರು. ಇದರ ಫಲವಾಗಿಯೇ ಹೆಣ್ಣಿಗೆ ಶಿಕ್ಷಣ ನೀಡುವಂತಹ ಮಹತ್ವದ ಯೋಜನೆಗೆ ಮುಂದಾದರು. ಹಾಗೆಯೇ ಸತಿ ಪದ್ಧತಿ, ವಿಧವಾ ಪದ್ಧತಿಯಂತ ಅಮಾನವೀಯ ಸಂಪ್ರದಾಯಗಳನ್ನು ತೀವ್ರವಾಗಿ ವಿರೋಧಿಸಿದರು. ಇದರ ಫಲವಾಗಿ ಹೆಣ್ಣಿಗೆ ಒಂದಿಷ್ಟು ಮುಕ್ತವಾದ ಅವಕಾಶಗಳು ಲಭಿಸಿದವು. “ಸ್ವಾತಂತ್ರ್ಯಪೂರ್ವ ಕಾಲಘಟ್ಟದಲ್ಲಿ ಮಹಿಳೆಯರ ಪರವಾಗಿ ರೂಪುಗೊಳ್ಳುತ್ತಿದ್ದ ಈ ತಾತ್ವಿಕತೆಗಳು ಭಾರತೀಯ ಸಮಾಜ ಮತ್ತು ಸಂಸ್ಕøತಿಯಲ್ಲಿ ಅಪಾರವಾದ ಬದಲಾವಣೆಯನ್ನು ಉಂಟುಮಾಡಿದವು ಎನ್ನುವುದು ನಿಜ.

ಮಹಿಳೆಯರು ಶಿಕ್ಷಣ ಪಡೆಯಲಾರಂಭಿಸಿದರು, ಬರೆಯಲಾರಂಭಿಸಿದರು, ಕನ್ನಡದಲ್ಲಿ ತಿರುಮಲಾಂಬ ಅವರಂಥವರು ಪತ್ರಿಕೆಗಳನ್ನು ಪ್ರಾರಂಭಿಸಿ, ಮಹಿಳೆಯರ ಪರ ದನಿ ಎತ್ತಲಾರಂಭಿಸಿದರು. ಮುಖ್ಯವಾಹಿನಿಯತ್ತ ಮಹಿಳೆಯರು ಹೀಗೆ ಚಲಿಸುತ್ತಿರುವ ಸಂದರ್ಭದಲ್ಲಿಯೇ, ಈ ಹಾದಿಯಲ್ಲಿಯೇ ಅವರಿಗೆ ಎರಡನ್ನುಂಟು ಮಾಡುವಂಥ ಏರು ತಗ್ಗುಗಳಿದ್ದವು ಎನ್ನುವುದು ನಿಧಾನವಾಗಿ ಅವರ ಅರಿವಿಗೆ ಬರ ತೊಡಗಿತು.” (ಮಹಿಳಾ ಸಬಲೀಕರಣವೆಂಬುದೇ ರಾಜಕಾರಣ (ಸಂ), ಎಚ್.ಡಿ.ಪ್ರಶಾಂತ್, ಪು-2) ಹೀಗೆ ಪ್ರಾರಂಭವಾದ ಮಹಿಳೆಯರ ಅಸ್ತಿತ್ವದ ಪಯಣವು ಮುಂದೆ ಸ್ವಾಭಿಮಾನದೆಡೆಗೆ ಸಾಗಿತು.

ಮಹಿಳೆಯರು ಸಂಘ ಸಂಸ್ಥೆಗಳನ್ನು ಕಟ್ಟಿಕೊಂಡು ತಮ್ಮ ಬದುಕಿನ ಬದಲಾವಣೆಗಾಗಿ ಹೋರಾಟ ನಡೆಸಿದರು. ಈ ಸಂದರ್ಭದಲ್ಲಿ ಸಾಂಪ್ರದಾಯಿಕ ಬದುಕಿನ ಮೌಲ್ಯಗಳು ಹಾಗೂ ಆಧುನಿಕತೆಯ ನಡುವೆ ಸಮತೋಲವನ್ನು ಕಾಯ್ದುಕೊಳ್ಳುವ ಮೂಲಕ ವಿಕಾಸದೆಡೆಗೆ ಸಾಗಬೇಕಾದ ಜವಬ್ದಾರಿಯು ಮಹಿಳೆಯರ ಮೇಲಿತ್ತು.

ಸ್ವಾತಂತ್ರ್ಯಪೂರ್ವ ಕಾಲಘಟ್ಟದ ಮಹಿಳೆಯರಿಗಿಂತ ಸ್ವಾತಂತ್ರ್ಯೋತ್ತರ ಕಾಲದ ಮಹಿಳೆಯರ ಬದುಕಿನಲ್ಲಿ ಹೊಸ ಸಂಚಲನವೊಂದು ಮೂಡಿತು. “ಸ್ವಾತಂತ್ರ್ಯೋತ್ತರ ಕಾಲದಲ್ಲಿ ಮಹಿಳೆಯರಲ್ಲಿ ಭರವಸೆಯನ್ನು ಉಂಟುಮಾಡಿದ ಎರಡು ಮುಖ್ಯವಾದ ಬೆಳವಣಿಗೆಗಳನ್ನು ಗುರುತಿಸಬಹುದು. ಒಂದು- ಪ್ರಜಾಸತ್ತಾತ್ಮಕವಾದ ಆಡಳಿತ. ಇದು ಮಹಿಳೆಯರಿಗೆ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ನೀಡುವುದರೊಂದಿಗೆ ಅದನ್ನು ಮೂಲಭೂತ ಹಕ್ಕನ್ನಾಗಿಸಿದ ಸಂವಿಧಾನವನ್ನೂ ಕಟ್ಟಿತು.

ಎರಡನೆಯದಾಗಿ, ಸಂವಿಧಾನದಲ್ಲಿ ಮಂಡಿಸಲಾದ ‘ಯೂನಿಫಾರಂ ಸಿವಿಲ್ ಕೋಡ್’ ಹಲವರ ಗಮನವನ್ನು ಸೆಳೆದರೂ, ಭಾರತದ ಸಾಂಪ್ರದಾಯಿಕ ಸಮಾಜಕ್ಕೆ ಅದನ್ನು ಅರಗಿಸಿಕೊಳ್ಳಲು ಆಗಲಿಲ್ಲ; ಆದ್ದರಿಂದ ಅದರ ಚರ್ಚೆಗಳು ಮುಂದಕ್ಕೆ ಹಾಕಲ್ಪಟ್ಟವು.” (ಮಹಿಳಾ ಸಬಲೀಕರಣವೆಂಬುದೇ ರಾಜಕಾರಣ (ಸಂ), ಎಚ್.ಡಿ.ಪ್ರಶಾಂತ್, ಪು-3) ಮಹಿಳೆಯರ ಪರವಾದ ಇಂತಹ ಮಾನವೀಯ ಅಂಶಗಳನ್ನು ಸಹಿಸಿಕೊಳ್ಳುವುದು ಸನಾತನವಾದಿ ಮನಸ್ಸುಗಳಿಗೆ ಕಷ್ಟವಾಗಿತ್ತು.

ಡಾ.ಬಿ.ಆರ್.ಅಂಬೇಡ್ಕರ್ ಅವರು ಮಹಿಳೆಯರ ಪ್ರಗತಿಯಿಂದ ಮಾತ್ರ ದೇಶದ ಅಭಿವೃದ್ದಿಯಾಗಲು ಸಾಧ್ಯ ಎಂದು ನಂಬಿದವರು. ಜಗತ್ತಿನ ಯಾವ ದೇಶ ಹೆಣ್ಣನ್ನು ನಿಕೃಷ್ಟವಾಗಿ ನಡೆಸಿಕೊಂಡಿದೆಯೋ ಆ ರಾಷ್ಟ್ರವು ಪ್ರಗತಿಯಲ್ಲಿ ಹಿನ್ನಡೆಯನ್ನು ಕಂಡುಕೊಂಡಿದೆ ಎಂಬುದಾಗಿ ಅರಿತವರು. ಈ ಕಾರಣಕ್ಕಾಗಿಯೇ ಅವರು ಮಹಿಳೆಯರನ್ನು ಸಮಾನವಾಗಿ ಕಾಣುವಂತಹ ‘ಹಿಂದೂ ಕೋಡ್‍ಬಿಲ್’ ಎನ್ನುವಂತಹ ಹೊಸ ಮಸೂದೆಯನ್ನು ಮಂಡಿಸಿದಾಗ ಸಾಕಷ್ಟು ವಿರೋಧಗಳು ಕೇಳಿಬಂದವು. ‘ಯೂನಿಫಾರಂ ಸಿವಿಲ್ ಕೋಡ್’ ಅನ್ನು ಸಂವಿಧಾನ ಸಭೆಯಲ್ಲಿ ಮಂಡಿಸಿದಾಗ ಅದು ಎಷ್ಟು ತೀವ್ರವಾದ ವಿರೋಧವನ್ನು ಪಡೆದುಕೊಂಡಿತೆಂದರೆ, ಸಭೆಯಲ್ಲಿದ್ದ ಮಹಿಳೆಯರು ಕೂಡ ಅದರ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

ಶತಮಾನಗಳ ಕಾಲ ದಾಸ್ಯದಿಂದ ಬಳಲುತ್ತಿದ್ದ ಬ್ರಾಹ್ಮಣ ವರ್ಗದಿಂದ ಅಸ್ಪøಶ್ಯ ಸಮುದಾಯದವರೆಗಿನ ಎಲ್ಲ ಹೆಣ್ಣಿಗೂ ಸ್ವಾಭಿಮಾನ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿದ್ದು ಸಂವಿಧಾನ. ಭಾರತೀಯ ಸ್ತ್ರೀ ಕುಲವೇ ಸಂವಿಧಾನಕ್ಕೆ ಮತ್ತು ಸಂವಿಧಾನದ ನಿರ್ಮಾತೃವಿಗೆ ಋಣಿಗಳಾಗಿರಬೇಕು. “ಸ್ವಾತಂತ್ರ್ಯಾನಂತರವೂ ಮಹಿಳೆಯರು ಘನತೆ ಮತ್ತು ಸ್ವಾತಂತ್ರ್ಯದಿಂದ ಬದುಕಲು ದಿನನಿತ್ಯ ಹೋರಾಡಬೇಕಾಗಿದೆ. ದೈಹಿಕವಾಗಿ, ಮಾನಸಿಕವಾಗಿ ಎಲ್ಲ ಹಂತಗಳಲ್ಲೂ ಸೆಣಸಬೇಕಾಗಿದೆ.

ನಮ್ಮ ಸಂವಿಧಾನದ ಪೀಠಿಕಾ ಭಾಗದಲ್ಲಿ, ರಾಜ್ಯ ನಿರ್ದೇಶಕ ತತ್ವಗಳಲ್ಲಿ, ಮೂಲಭೂತ ಹಕ್ಕುಗಳಲ್ಲಿ ಮತ್ತು ಕಾನೂನಾತ್ಮಕವಾಗಿ ನೀಡಲ್ಪಟ್ಟ ಅವಕಾಶಗಳಲ್ಲಿ ಭಾರತೀಯ ಮಹಿಳೆಯರು ಎದುರಿಸುವ ತಾರತಮ್ಯ, ಅವಕಾಶಹೀನತೆಗೆ ಪರಿಹಾರಗಳಿವೆ. ಅದು ಮಹಿಳೆಯರನ್ನುಸಶಕ್ತೀಕರಣಗೊಳಿಸುವುದಲ್ಲದೆ, ಅವಶ್ಯ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಅಧಿಕಾರವನ್ನೂ ನೀಡಿದೆ.” (ಸಂವಿಧಾನ ಮತ್ತು ಮಹಿಳೆ, ಎಚ್.ಎಸ್.ಅನುಪಮಾ, ಪು-50) ಆ ಮೂಲಕ ದಾಸ್ಯಕ್ಕೆ ಒಳಗಾದ ಪುರುಷ ಪ್ರಧಾನ ಸಮಾಜದಲ್ಲಿ ಸ್ವಾಭಿಮಾನದ ವೇದಿಕೆಯನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ.

ಭಾರತೀಯ ಸಂವಿಧಾನದಲ್ಲಿ ಮಹಿಳೆಯ ಅಸ್ತಿತ್ವ ಹಾಗೂ ಸಬಲೀಕರಣಕ್ಕಾಗಿಯೇ ರೂಪಿತವಾಗಿರುವ ಸಂವಿಧಾನಾತ್ಮಕ ಹಕ್ಕುಗಳು ಈ ಮುಂದಿನಂತಿವೆ.

  1. ಅನುಚ್ಚೇದ-14, ಇದು ಭಾರತೀಯ ಪ್ರಜೆಗಳೆಲ್ಲರೂ ಸಮಾನರು ಎಂಬುದನ್ನು ಎತ್ತಿಹಿಡಿದಿದೆ.
  2. ಅನುಚ್ಚೇದ-15, ಸಾಮಾಜಿಕ ನ್ಯಾಯ ಮತ್ತು ಸಾರ್ವಜನಿಕ ಸ್ಥಳಗಳಿಗೆ ಮುಕ್ತವಾದ ಅವಕಾಶ ನೀಡಿದೆ. ಆದರೆ ಇಂದಿಗೂ ಧಾರ್ಮಿಕತೆಯ ನೆಪದಲ್ಲಿ ಕೆಲವೊಂದು ಪ್ರದೇಶಗಳಿಗೆ ಅವಕಾಶವನ್ನು ನಿರಾಕರಿಸಲಾಗಿದೆ.
  3. ಅನುಚ್ಚೇದ-16(2), ಇದು ಲಿಂಗದ ಕಾರಣಕ್ಕಾಗಿ ಯಾರಿಗೂ ಉದ್ಯೋಗ ನಿರಾಕರಣೆ, ಉದ್ಯೋಗದಲ್ಲಿ ತಾರತಮ್ಯ ಮಾಡುವಂತಿಲ್ಲ ಎಂಬುದಾಗಿ ಪ್ರತಿಪಾದಿಸುತ್ತದೆ.ಆದರೆ ಈ ಲಿಂಗ ತಾರತಮ್ಯದ ಬೇರುಗಳನ್ನು ಇಂದಿಗೂ ಕೀಳಲು ಸಾಧ್ಯವಾಗುತ್ತಿಲ್ಲ. ಈ ತಾರತಮ್ಯದ ಫಲವಾಗಿ ಇಂದಿಗೂ ಹೆಣ್ಣುಶಿಶುಗಳು ಹತ್ಯೆ ನಿರಂತರವಾಗಿ ನಡೆಯುತ್ತಿದೆ.
  4. ಅನುಚ್ಚೇದ-19, ಇದು ಸ್ವಾತಂತ್ರ್ಯದ ಹಕ್ಕುಗಳನ್ನು ಕಲ್ಪಿಸಿಕೊಟ್ಟಿದೆ. ಇಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ, ಓಡಾಡುವ ಸ್ವಾತಂತ್ರ್ಯ, ವ್ಯಾಪಾರ, ವೃತ್ತಿ ನಡೆಸುವ ಸ್ವಾತಂತ್ರ್ಯವನ್ನು ಎಲ್ಲರಿಗೂ ಮುಕ್ತವಾಗಿ ಕಲ್ಪಿಸಲಾಗಿದೆ. ಆದರೆ ಭಾರತೀಯ ಸಾಂಪ್ರದಾಯಿಕ ವ್ಯವಸ್ಥೆಯಲ್ಲಿ ಹೆಣ್ಣು ಎಂಬ ಕಾರಣಕ್ಕಾಗಿ ಈ ಎಲ್ಲಾ ಸ್ವಾತಂತ್ರ್ಯಗಳನ್ನು ಇಂದಿಗೂ ಹತ್ತಿಕ್ಕುವಂತಹ ಸಂದರ್ಭಗಳು ನಮ್ಮ ಮುಂದಿವೆ.
  5. ಅನುಚ್ಚೇದ-21, ಇದು ಸ್ತ್ರೀ ಪುರುಷರೆಲ್ಲರಿಗೂ ವೈಯಕ್ತಿಕ ಸ್ವಾತಂತ್ರ್ಯ ಹಾಗೂ ಘನತೆಯಿಂದ ಬದುಕುವ ಸಮಾನ ಹಕ್ಕುಗಳನ್ನು ಪ್ರತಿಪಾದಿಸುತ್ತದೆ.
  6. ಅನುಚ್ಚೇದ-32, ತನ್ನ ಹಕ್ಕಿಗೆ ಚ್ಯುತಿ ಬಂದರೆ ಸುಪ್ರಿಂಕೋರ್ಟಿಗೆ ಸಂವಿಧಾನಿಕ ಪರಿಹಾರಕ್ಕಾಗಿ ಮೊರೆ ಹೋಗುವ ಅವಕಾಶ ನೀಡಿದೆ.
  7. ಅನುಚ್ಚೇದ-39(ಎ.ಡಿ.ಇ), ಇವು ಸ್ತ್ರೀ ಪುರುಷರು ಸಮಾನವಾಗಿ ಬದುಕುವ ಅವಕಾಶ, ಸಮಾನ ಕೆಲಸಕ್ಕೆ ಸಮಾನ ವೇತನ, ಮಹಿಳಾ ಉದ್ಯೋಗಿಗಳ ಆರೋಗ್ಯ ಮತ್ತು ಸಾಮಥ್ರ್ಯ ಕುಂದುವಂತಹ ಅತಿಕೆಲಸ ಹಾಗೂ ಆರ್ಥಿಕ ಅವಶ್ಯಕತೆಯ ಕಾರಣವಾಗಿ ತಮ್ಮ ಸಾಮಥ್ರ್ಯಕ್ಕೆ ಹೊಂದದ ಉದ್ಯೋಗ ಮಾಡುವುದು ಅನಿವಾರ್ಯ ಆಗದಂತೆ ಪ್ರಭುತ್ವ ನೋಡಿಕೊಳ್ಳಬೇಕು ಎಂಬುದಾಗಿ ಪ್ರತಿಪಾದಿಸುತ್ತದೆ.
  8. ಅನುಚ್ಚೇದ-42, ಇದು ಮಹಿಳಾ ಉದ್ಯೋಗಿಗಳಿಗೆ ಬಾಣಂತಿ ಸವಲತ್ತು ಒದಗಿಸುವುದು, ಉದ್ಯೋಗ ಸ್ಥಳದಲ್ಲಿ ನ್ಯಾಯಯುತ, ಮಾನವೀಯ ಪರಿಸರ ಇರುವಂತೆ ನೋಡಿಕೊಳ್ಳುವುದಾಗಿ ನಿಯಮ ರೂಪಿಸಿದೆ.
  9. ಅನುಚ್ಚೇದ-243, ಇದರ ಅಡಿಯಲ್ಲಿ ಮಹಿಳೆಯರ ರಾಜಕೀಯ ಮೀಸಲಾತಿಯನ್ನು ಕುರಿತಂತೆ ಕಾನೂನು ರೂಪಿಸಲಾಗಿದೆ. ಹಾಗೆಯೇ ಮಹಿಳೆಯರ ಸ್ವಾಭಿಮಾನದ ಬದುಕಿಗೆ ಪೂರಕವಾದ ಹಲವಾರು ಕಾನೂನುಗಳು ಕೂಡ ಸಂವಿಧಾನಾತ್ಮಕವಾಗಿ ರೂಪಿಸಲ್ಪಟ್ಟಿವೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರ ಪರಿಶ್ರಮದ ಫಲವಾಗಿ ಮೂಡಿದ ಸಂವಿಧಾನದ ಅಡಿಯಲ್ಲಿ ಶತಮಾನಗಳ ಕಾಲ ಸ್ವಾಭಿಮಾನ ಮತ್ತು ಸ್ವಾತಂತ್ಯದಿಂದ ವಂಚಿತವಾಗಿದ್ದ ಸ್ತ್ರೀ ಸಮೂಹಕ್ಕೆ ವಿಮೋಚನೆ ಲಭಿಸಿತು. ಆದರೆ ಈ ಸಮಾನತೆಯನ್ನು ಸಹಿಸದ ಮನುವಾದಿ ಮನಸ್ಸುಗಳು ನಿರಂತರವಾಗಿ ಅಸಮಾನತೆಯನ್ನು ಎತ್ತಿಹಿಡಿಯುವ ಮನುವಾದವನ್ನು ಮತ್ತೇ ಪ್ರತಿಪಾದಿಸಲು ಹೆಣಗಾಡುತ್ತಿವೆ.

ಲಿಂಗ ತಾರತಮ್ಯದ ಪ್ರತೀಕವಾಗಿದ್ದ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಪ್ರವೇಶಕ್ಕೆ ಸುಪ್ರಿಂಕೋರ್ಟ್ ಮೊರೆ ಹೋಗಿ ನ್ಯಾಯ ಪಡೆದುಕೊಂಡಾಗಲೂ ಭಾರತೀಯ ಸನತನವಾದಿಗಳು ಸಂವಿಧಾನ ವಿರೋಧಿ ಚಟುವಟಿಕೆಗಳ ಮೂಲಕ ಲಿಂಗ ತಾರತಮ್ಯವನ್ನು ಮೆರೆಯುತ್ತಿದ್ದಾರೆ. ಧರ್ಮದ ಹೆಸರಿನಲ್ಲಿ ಮಾನವೀಯ ಮೌಲ್ಯಗಳನ್ನು ಕಡೆಗಣಿಸುತ್ತಿದ್ದಾರೆ.

ಶಬರಿಮಲೆಗೆ ಹೋಗಬಾರದೆಂದು ಯಾವ ಶಾಸ್ತ್ರ ವಿಧಿಸದಿದ್ದರೂ ಸನಾತವಾದಿಗಳು ದೇವಸ್ಥಾನದ ಬಾಗಿಲ ಬಳಿ ಮಾರಕಾಸ್ತ್ರಗಳನ್ನು ಹಿಡಿದು ತಮ್ಮ ಪುಂಡಾಟಿಕೆಯನ್ನು ಮೆರೆದಿದ್ದಾರೆ. ಸ್ವಾಭಿಮಾನದಿಂದ ಪೋಲಿಸರ ರಕ್ಷಣೆಯೊಂದಿಗೆ ದೇವಸ್ಥಾನ ಪ್ರವೇಶ ಮಾಡಿದ ಮಹಿಳೆಯರ ಮೇಲೆ ಹಲ್ಲೆ ಮತ್ತು ದೌರ್ಜನ್ಯಗಳನ್ನು ನಡೆಸಿದ್ದಾರೆ. ಸ್ವತಃ ಮಹಿಳೆಯರೇ ನಾವು ಹೋಗುವುದು ಬೇಡವೆಂದು ತಮ್ಮನ್ನು ತುಳಿಯುತ್ತಿರುವ ಮೌಢ್ಯತೆಯ ರಕ್ಷಕರಾಗಿ ನಿಂತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending