ದಿನದ ಸುದ್ದಿ
ರೈತರಿಗೆ ನೀರು ಕೊರತೆ ಆಗದಂತೆ ಕ್ರಮವಹಿಸಬೇಕು: ಸಚಿವ ಸಿ.ಎಸ್.ಪುಟ್ಟರಾಜು
ಸುದ್ದಿದಿನ, ಮಂಡ್ಯ: ರೈತರಿಗೆ ಅನಾನುಕೂಲವಾಗದಂತೆ ಅಗತ್ಯವಾದ ನೀರನ್ನು ನೀಡಲು ನೀರಾವರಿ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಥಮ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಳವಳ್ಳಿ ಹಾಗೂ ಮದ್ದೂರು ಭಾಗದ ವಿ.ಸಿ.ನಾಲೆ ವ್ಯಾಪ್ತಿಯ ಕಡೇ ಭಾಗಕ್ಕೆ ಕನ್ನಂಬಾಡಿ ಅಣೆಕಟ್ಟೆಯ ನೀರು ತಲುಪದ ಹಿನ್ನೆಲೆ ಯಲ್ಲಿ ನೀರಾವರಿ ಇಲಾಖೆಯ ಅಧಿಕಾರಿಗಳ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದ ಸಚಿವರು ನೀರಾವರಿ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಇಂಜಿನಿಯರ್ ಮತ್ತು ಸವಡೆಗಳ ನಡುವಿನ ಸಮನ್ವಯ ಹಾಗೂ ಹೊಂದಾಣಿಕೆ ಇಲ್ಲದೆ ರೈತರು ಪರಿತಪಿಸುವಂತಾಗಿದೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಳವಳ್ಳಿ ಶಾಸಕರಾದ ಡಾ.ಅನ್ನದಾನಿ ಅವರು ಮಳವಳ್ಳಿ ಕ್ಷೇತ್ರದ ವಿ.ಸಿ.ನಾಲೆ ಕಡೇ ಭಾಗಗಳಿಗೆ ಇದುವರೆಗೂ ನೀರು ಹರಿದಿಲ್ಲ. ರೈತರು ಭತ್ತ ಅಥವಾ ರಾಗಿ ನಾಟಿ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
ಇದಕ್ಕೆ ಸ್ಪಂದಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಹೇಮಾವತಿ ನಾಲೆ ಆಧುನೀಕರಣ ಹಾಗೂ ಅಕ್ವಿಡೆಟ್ ಅಗಲೀಕರಣದಿಂದ ಆ ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸಲು ವಿಳಂಬವಾಗಿದೆ. ರಾಜ್ಯದ 30 ಸಾವಿರ ಕೆರೆಗಳು ನನ್ನ ವ್ಯಾಪ್ತಿಯ ಸಣ್ಣ ನೀರಾವರಿ ಇಲಾಖೆಗೆ ಒಳಪಟ್ಟಿವೆ. ಕನ್ನಂಬಾಡಿಯಲ್ಲಿ ಅಪಾರ ನೀರಿದ್ದರೂ ನಾಲೆಗಳ ಸಾಮಥ್ರ್ಯಕ್ಕೆ ತಕ್ಕಂತೆ ನೀರು ಹರಿಸಬೇಕಿದೆ. ಕೆರೆಗಳನ್ನು ತುಂಬಿಸಲು ಕಾರ್ಯೋನ್ಮುಖರಾಗಿದ್ದರೂ ಪ್ರಗತಿ ಸಾಧ್ಯವಾಗಿಲ್ಲ. ಇದಕ್ಕೆ ಮಳೆ ವೈಫಲ್ಯವೂ ಕಾರಣವಾಗಿದೆ. ತತ್ಕ್ಷಣ ನೀರಾವರಿ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಇಲಾಖೆಯ ಸಹಕಾರ ಪಡೆದು, ಹೇಮಾವತಿ ವ್ಯಾಪ್ತಿಯ ಬಸರಾಳು, ದುದ್ದ ಹಾಗೂ ನಾಗಮಂಗಲ ವ್ಯಾಪ್ತಿಗೆ ನೀರು ತುಂಬಿಸಬೇಕೆಂದು ಸೂಚಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ ಅವರು ಬರಗಾಲದ ಅವಧಿಯಲ್ಲೂ 2000 ರಲ್ಲಿ ನೀರು ಹರಿಸಲಾಗಿತ್ತು. ಸ್ಥಳೀಯ ಪರಿಸ್ಥಿತಿಯನ್ನು ಅರಿತಿರುವ ಇಂಜಿನಿಯರ್ಗಳು ಅಲಭ್ಯರಾಗಿದ್ದಾರೆ. ಮೇಲ್ಭಾಗದ ರೈತರಿಗೆ ಮಿತ ನೀರು ನೀಡಿ, ನಿಗದಿತವಾಗಿ ಕೆಳ ಭಾಗಕ್ಕೆ ನೀರು ಹರಿಸಬೇಕು. ಅಧಿಕಾರಿಗಳ ನಡುವೆ ಸಮನ್ವಯತೆ ಕಡಿಮೆಯಾಗಿದೆ. ಈ ಬಗ್ಗೆ ನೀರಾವರಿ ಸಚಿವರು ಅಗತ್ಯ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕೆಂದರು.
ಈ ಸಮಸ್ಯೆಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದ ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ಅವರು ನೀರು ನಿರ್ವಹಣೆ ಬಗ್ಗೆ ಈಗಾಗಲೇ ಜಾಗೃತ ಪಡೆ ರಚಿಸಲಾಗಿದೆ. ನೀರಾವರಿ ಇಲಾಖೆ ಅಧಿಕಾರಿಗಳು ಪೊಲೀಸ್ ಹಾಗೂ ಕಂದಾಯ ಇಲಾಖೆಯ ಸಹಕಾರ ಪಡೆದು ಕಡೇ ಭಾಗದ ಕೆರೆಗಳನ್ನು ತುಂಬಿಸಲು ಮತ್ತು ನಾಲೆಗಳಿಗೆ ನೀರು ಹರಿಸಲು ನೀರಾವರಿ ಇಲಾಖೆಯ ಕಾರ್ಯ ಪ್ರವೃತ್ತರಾಗಬೇಕೆಂದು ಸೂಚಿಸಿದರು.
ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಶ್ರೀನಿವಾಸ್, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ವಿಧಾನ ಪರಿಷತ್ ಶಾಸಕರಾದ ಎನ್.ಅಪ್ಪಾಜಿಗೌಡ, ಕೆ.ಟಿ.ಶ್ರೀಂಠೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಾಗರತ್ನ ಸ್ವಾಮಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಗಾಯಿತ್ರಿ, ಉಸ್ತುವಾರಿ ಕಾರ್ಯದರ್ಶಿ ಜಾವೇದ್ ಆಖ್ತರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಯಾಲಕ್ಕಿಗೌಡ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?