ದಿನದ ಸುದ್ದಿ
ದಾವಣಗೆರೆ | ಸೋಮವಾರದಿಂದ ಲಾಕ್ಡೌನ್ ನಲ್ಲಿ ಮತ್ತಷ್ಟು ರಿಯಾಯಿತಿ : ಡಿಸಿ ಮಹಾಂತೇಶ್ ಬೀಳಗಿ ಆದೇಶ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.5 ರೊಳಗೆ ಬಂದಿರುವುದರಿಂದ ರಾಜ್ಯ ಸರ್ಕಾರ ದಾವಣಗೆರೆ ಜಿಲ್ಲೆಯನ್ನು ‘ಎ’ ವರ್ಗಕ್ಕೆ ಸೇರಿಸಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಧಿಕಾರಿ ಲಾಕ್ಡೌನ್ ಅಲ್ಲಿ ಮತ್ತಷ್ಟು ರಿಯಾಯಿತಿಯನ್ನು ಸೇರ್ಪಡೆಮಾಡಿ ಆದೇಶ ಹೊರಡಿಸಿದ್ದಾರೆ. ಅದರಂತೆ ಎಲ್ಲ ಅಂಗಡಿಗಳು ಹಾಗೂ ಹೋಟೆಲ್ಗಳು ಜು.5 ರವರೆಗೆ ಅನ್ವಯವಾಗುವಂತೆ ಬೆಳಿಗ್ಗೆ 6 ರಿಂದ ಸಂಜೆ 5 ಗಂಟೆಯವರೆಗೆ ವಹಿವಾಟು ನಡೆಸಬಹುದು. ಆದರೆ, ಹವಾನಿಯಂತ್ರಿತ ಶಾಪಿಂಗ್ ಕಾಂಪ್ಲೆಕ್ಸ್, ಮಾಲ್ಗಳಿಗೆ ಅನುಮತಿ ನಿಂಡಿಲ್ಲ.
ಜುಲೈ 5 ರ ಬೆಳಿಗ್ಗೆ 5 ಗಂಟೆಯವರೆಗೆ ಲಾಕ್ಡೌನ್ ಮುಂದುವರೆಯಲಿದ್ದು ಕೋವಿಡ್-19 ರ ಮಾರ್ಗಸೂಚಿಗಳ ಪಾಲನೆಯ ಷರತ್ತಿಗೆ ಒಳಪಟ್ಟು ಬಸ್ಗಳ ಆಸನದ ಗರಿಷ್ಠ ಶೇ.50 ರ ಸಾಮರ್ಥ್ಯದೊಂದಿಗೆ ಬಸ್ ಸಂಚಾರಕ್ಕೆ ಅನುಮತಿಸಿದೆ. ಪ್ರಯಾಣಿಕರು ಬಸ್ಗಳಲ್ಲಿ ನಿಂತು ಪ್ರಯಾಣಿಸಲು ಅವಕಾಶವಿರುವುದಿಲ್ಲ.
ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಆದರೆ, ಸರಕು ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಅವಕಾಶವಿರುವ ಹಿನ್ನೆಲೆಯಲ್ಲಿ ವಾಹನಗಳು ಸರಕುಗಳನ್ನು ರಶೀದಿಯಲ್ಲಿ ನಮೂಧಿತ ವಿಳಾಸದ ಅಂಗಡಿ ಮತ್ತು ಗೋದಾಮುಗಳಲ್ಲಿ ಇಳಿಸಲು ಮತ್ತು ತೆಗೆದುಕೊಂಡು ಹೋಗಲು ಮಾತ್ರ ದಿನಪೂರ್ತಿ ಅವಕಾಶ ನೀಡಲಾಗಿದೆ.
ಎಲ್ಲಾ ವಿಧದ ಉತ್ಪಾದಿತ ಘಟಕಗಳು ,ಸಂಸ್ಥೆಗಳು, ಕೈಗಾರಿಕೆಗಳು, ಕೋವಿಡ್ ನಿಯಮಾವಳಿಯ ಮೇಲೆ ಶೇ.50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು. ಹಾಗೂ ಗಾರ್ಮೆಂಟ್ಸ್ ಗಳಲ್ಲಿ ಶೇ.30 ರ ಸಿಬ್ಬಂದಿಯೊAದಿಗೆ ಕೋವಿಡ್ ಕ್ರಮವನ್ನು ಅನುಸರಿಸಿ ಕಾರ್ಯನಿರ್ವಹಿಸಬಹುದಾಗಿದೆ.
ಸಾರ್ವಜನಿಕರು ಹೊರಗಡೆ ಓಡಾಡುವುದನ್ನು ನಿಯಂತ್ರಿಸುವುದಕ್ಕಾಗಿ ಕೋವಿಡ್-19 ನಿರ್ವಹಣೆಯ ಕಾರ್ಯಾಚರಣೆಗಳನ್ನು ರಾಷ್ಟ್ರೀಯ ನಿರ್ದೇಶನಗಳಿಗೆ ಒಳಪಟ್ಟು ಎಲ್ಲಾ ಅವಶ್ಯಕ ವಸ್ತುಗಳನ್ನು ಮನೆ ಮನೆಗೆ 24*7 ಅವಧಿಯಲ್ಲಿ ಪೂರೈಸಲು ಅನುಮತಿಸಲಾಗಿದೆ.
ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಬಾರ್ ಹಾಗೂ ಕ್ಲಬ್ಗಳು ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಶೇ.50 ರ ಸಾಮರ್ಥ್ಯದಲ್ಲಿ ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ಸಲ್ಲಿಸಲು ಅನುಮತಿ ನೀಡಲಾಗಿದೆ. ಆದರೆ, ಊಟದ ಜೊತೆಗೆ ಮದ್ಯವನ್ನು ಪೂರೈಸುವಂತಿಲ್ಲ. ಹವಾನಿಯಂತ್ರಿತ ಹೋಟೆಲ್ ಇತ್ಯಾದಿಗಳು ಕಾರ್ಯನಿರ್ವಹಿಸುವಂತಿಲ್ಲ.
ಲಾಡ್ಜ್, ರೆಸಾರ್ಟ್ ಇತ್ಯಾದಿಗಳು ಶೇ.50 ರ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಪ್ರೇಕ್ಷಕರ ರಹಿತವಾಗಿ ಎಲ್ಲಾ ಹೊರಾಂಗಣ ಕ್ರೀಡಾ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.
ಆರೋಗ್ಯ ಕ್ಷೇತ್ರದ ಕೌಶಲ್ಯ ತರಬೇತಿ ಹಾಗೂ ಘನತ್ಯಾಜ್ಯ ನಿರ್ವಹಣೆ ಸಂಬAಧಿತ ತರಬೇತಿಗೆ ಅವಕಾಶ. ಗರಿಷ್ಠ ಇಬ್ಬರು ಪ್ರಯಾಣಿಕರ ಸಾಮರ್ಥ್ಯದೊಂದಿಗೆ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಸಂಚರಿಸಲು ಅನುಮತಿಸಿದೆ. ವಾಕಿಂಗ್ ಮತ್ತು ಜಾಗಿಂಗ್ ಉದ್ದೇಶಕ್ಕಾಗಿ ಮಾತ್ರ ಉದ್ಯಾನವನಗಳನ್ನು ಬೆಳಿಗ್ಗೆ 5 ರಿಂದ ಸಂಜೆ 6 ರವರೆಗೆ ಮಾತ್ರ ತೆರೆಯಲು ಅನುಮತಿಸಿದೆ. ಆದರೆ, ಯಾವುದೇ ಗುಂಪು ಚಟುವಟಿಕೆಗಳಿಗೆ ಅವಕಾಶವಿಲ್ಲ.
ಎಲ್ಲ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಇಗೆ ಸಿಬ್ಬಂದಿಯ ಶೇ.50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಆರೋಗ್ಯ ವಲಯಕ್ಕೆ ಸಂಬAಧಿಸಿದ ಕೌಶಲ್ಯ ತರಬೇತಿಗಳಿಗೆ ಅನುಮತಿಸಿದೆ. ಕೋವಿಡ್-19 ಮಾರ್ಗಸೂಚಿಯನ್ವಯ ಹೊರಾಂಗಣ ಚಿತ್ರಿಕರಣಕ್ಕೆ ಹಾಗೂ ಸೀರಿಯಲ್ಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಶನಿವಾರ ಮತ್ತು ಭಾನುವಾರ ವಾರಂತ್ಯದ ಕರ್ಫ್ಯೂ ಇರುವುದರಿಂದ ಸೋಮವಾರದಿಂದ ವಿನಾಯಿತಿಗಳು ದೊರೆಯಲಿವೆ. ವಾರಂತ್ಯದ ಕಫ್ಯೂ ಅವಧಿಯಲ್ಲಿ ಆಹಾರ, ದಿನಸಿ, ಹಣ್ಣು, ತರಕಾರಿ, ಮಾಂಸ, ಮೀನು, ಹಾಲು, ಕಾಲಿನ ಬೂತ್ಗಳು ಮತ್ತು ಜಾನುವಾರು ಮೇವಿನ ಅಂಗಡಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಕಾರ್ಯ ನಿರ್ವಹಿಸಬಹುದು. ಮದ್ಯದ ಅಂಗಡಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಪಾರ್ಸೆಲ್ ನೀಡಬಹುದು.
ತುರ್ತು ಹಾಗೂ ಅಗತ್ಯ ಸೇವೆಗಳಿಗೆ ಹಿಂದಿನಂತೆಯೇ ಅನುಮತಿ ಇದೆ. ಬಸ್, ರೈಲು ಹಾಗೂ ವಿಮಾನಯಾನಗಳಿಗೆ ಅನುಮತಿ ಇದೆ. ನಿಗದಿಯಾದ ಮದುವೆಗಳು ಹಾಗೂ ಅಂತ್ಯಕ್ರಿಯೆಗಳಿಗೆ ನಿರ್ಬಂಧಿತ ಅನುಮತಿ ಇದೆ.
ಈ ಮೇಲೆ ತಿಳಿಸಿದ ಮಾರ್ಗಸೂಚಿ ಅಥವಾ ನಿಬಂಧನೆಗಳನ್ನು ಉಲ್ಲಂಘಿಸಿದ ಪಕ್ಷದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243