ದಿನದ ಸುದ್ದಿ
ಮಂಗನಕಾಯಿಲೆ : ಮಂಕುಬೂದಿ ಎರಚುವ ತಂತ್ರ ಯಾರ ರಕ್ಷಣೆಗಾಗಿ?
ಮಂಗನಕಾಯಿಲೆ ಇದೀಗ ಜಿಲ್ಲೆಯಾದ್ಯಂತ ವ್ಯಾಪಿಸಿರುವುದು ಅಧಿಕೃತವಾಗಿದೆ.ಈ ಹಿಂದೆ ಯಾವುದೋ ಒಂದು ಗ್ರಾಮ, ಪಂಚಾಯ್ತಿ ವ್ಯಾಪ್ತಿಯಲ್ಲಿ ರೋಗ ಕಾಣಿಸಿಕೊಳ್ಳುತ್ತಲೇ ಆರೋಗ್ಯ, ಅರಣ್ಯ ಮುಂತಾದ ಸಂಬಂಧಪಟ್ಟ ಇಲಾಖೆ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ನೀಡಿ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ರೋಗ ತಡೆಯಲಾಗುತ್ತಿತ್ತು. ಅಂತಹ ಹೊಣೆಗಾರಿಕೆಯನ್ನು ಜಿಲ್ಲಾಡಳಿತ ಸಕಾಲದಲ್ಲಿ ನಿರ್ವಹಿಸುವ ಮೂಲಕ ಜೀವಹಾನಿ ತಡೆಯಲಾಗುತ್ತಿತ್ತು.
ಆದರೆ ಈ ಬಾರಿ ಕಳೆದ ಸರಿಸುಮಾರು ಮೂರು ತಿಂಗಳಿನಿಂದ ರೋಗ ತಡೆರಹಿತವಾಗಿ ಹಬ್ಬುತ್ತಲೇ ಇದೆ. ಇತ್ತೀಚಿನ ವರ್ಷಗಳಲ್ಲಿ ಕಂಡರಿಯದ ಪ್ರಮಾಣದಲ್ಲಿ ಸಾವು ಸಂಭವಿಸಿವೆ. ಈಗಲೂ ದಿನಂಪ್ರತಿ ಹತ್ತಾರು ಜನರು ಗಂಭೀರ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ನೂರಾರು ಮಂದಿ ವಿವಿಧ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಂದರೆ ರೋಗ ತಡೆ ಮತ್ತು ಮುಂಜಾಗ್ರತಾ ಕ್ರಮಗಳಲ್ಲಿ ಗಂಭೀರ ಲೋಪಗಳಾಗಿವೆ. ಆರಂಭದಲ್ಲಿ ಎಲ್ಲಾ ಇಲಾಖೆಗಳೂ ರೋಗವನ್ನು ನಿರ್ಲಕ್ಷಿಸಿದ್ದರೂ ಆರು ಸಾವುಗಳ ಬಳಿಕ ಸಾರ್ವಜನಿಕ ಒತ್ತಡದ ಹಿನ್ನೆಲೆಯಲ್ಲಿ ಸ್ಥಳೀಯ ಪಂಚಾಯ್ತಿಗಳ ಕಾಳಜಿಯ ಕಾರಣದಿಂದ ಇದೀಗ ಸ್ಥಳೀಯ ಸಿಬ್ಬಂದಿ ಸಾಕಷ್ಟು ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ.
ಆದರೆ ಆರಂಭದಲ್ಲಿ ಪದ್ಮಾ ಕೋಮರಾಜ್(ಮೊದಲ ಪ್ರಕರಣ) ಸೇರಿದಂತೆ ಶ್ವೇತಾ ಜೈನ್ ಅವರ ಪ್ರಕರಣಗಳಲ್ಲಿ ಸಂಪೂರ್ಣ ಲೋಪ ಅಗಿರುವುದು ತಾಲೂಕು ಆಸ್ಪತ್ರೆ ಮತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗಳಲ್ಲಿ. ಆಸ್ಪತ್ರೆಗಳಲ್ಲಿ ಅದು ಮಂಗನಕಾಯಿಲೆ ಎಂಬುದು ದೃಢಪಟ್ಟ ಬಳಿಕ ಕೂಡ ಅಗತ್ಯ ಚಿಕಿತ್ಸೆ ಮತ್ತು ಕಾಳಜಿ ತೋರುವಲ್ಲಿ ಗಂಭೀರ ಲೋಪವಾಗಿ ಅಮೂಲ್ಯ ಜೀವಗಳು ಬಲಿಯಾದವು.
ಈ ಆಸ್ಪತ್ರೆಗಳಲ್ಲಿ; ಸಾಗರ ಸಾರ್ವಜನಿಕ ಆಸ್ಪತ್ರೆ ಆಡಳಿತ ಹೊಣೆಗಾರಿಕೆ ಅಲ್ಲಿನ ವೈದ್ಯಾಧಿಕಾರಿ ಡಾ ಬೋಸ್ಲೆ ಅವರದ್ದಾದರೆ, ಮೆಗ್ಗಾನ್ ಆಸ್ಪತ್ರೆಯ ಹೊಣೆಗಾರಿಕೆ ನೇರವಾಗಿ ಅದರ ನಿರ್ದೇಶಕ ಡಾ ಲೇಪಾಕ್ಷಿ ಅವರದ್ದು. ಅಂತಿಮವಾಗಿ ಈ ಎರಡೂ ಆಸ್ಪತ್ರೆಗಳು ಜಿಲ್ಲಾಧಿಕಾರಿಗಳ ಅಧಿಕಾರ ವ್ಯಾಪ್ತಿಯಲ್ಲೇ ಇವೆ.
ಅಲ್ಲದೆ ಶ್ವೇತಾ ಜೈನ್ ಸಾವು ಸಂಭವಿಸುವವರೆಗೂ, ಅರಳಗೋಡು ಜನ ಆಕೆಯ ಶವ ಇಟ್ಟುಕೊಂಡು ಪ್ರತಿಭಟನೆ ನಡೆಸುವವರೆಗೂ ಸ್ವತಃ ಜಿಲ್ಲಾಧಿಕಾರಿಗಳೇ, ಮಂಗನಕಾಯಿಲೆ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ಹೋಗದಂತೆ ಮತ್ತು ಮೆಗ್ಗಾನ್ ಸೇರಿದಂತೆ ಸರ್ಕಾರಿ ಅಸ್ಪತ್ರೆಗಳಲ್ಲೇ ದಾಖಲಾಗುವಂತೆ ಬಹಿರಂಗ ಸೂಚನೆ ನೀಡಿದ್ದರು.
ಹಾಗಾದರೆ, ನಿರ್ಲಕ್ಷ್ಯ, ಹೊಣೆಗೇಡಿತನದಿಂದಾಗಿ ಸಂಭವಿಸಿರುವ ಸರಣಿ ಸಾವುಗಳ ಹೊಣೆಗಾರಿಕೆ ಹೊರಬೇಕಾದವರು ಸಾಗರದ ತಾಲೂಕು, ಮೆಗ್ಗಾನ್ ಆಸ್ಪತ್ರೆಗಳ ಆಡಳಿತಾಧಿಕಾರಿಗಳು ಮತ್ತು ಅಂತಿಮವಾಗಿ ಜಿಲ್ಲಾಧಿಕಾರಿಗಳೇ ಅಲ್ಲವಾ?
ಆದರೆ ಆರೋಗ್ಯ ಇಲಾಖೆ ಡಿಎಚ್ಒ ಮತ್ತು ಕೆಎಫ್ಡಿ ವಿಭಾಗದ ವೈದ್ಯರ ತಲೆದಂಡ ನೀಡಿ ತಿಪ್ಪೆಸಾರಿಸುವ ಪ್ರಯತ್ನ ಮಾಡಿದೆ. ನಿಜವಾದ ತಪ್ಪಿತಸ್ಥರನ್ನು ರಕ್ಷಿಸುವ ಮತ್ತು ಅದೇ ಹೊತ್ತಿಗೆ ಜನರಕಣ್ಣಿಗೆ ಮಂಕುಬೂದಿ ಎರಚಿ ಜನರನ್ನು ಮಂಗಮಾಡುವ ಪ್ರಯತ್ನಗಳನ್ನು ಅರ್ಥಮಾಡಿಕೊಳ್ಳಬೇಕಿದೆ.
–ಶಶಿ ಸಂಪಳ್ಳಿ
(ಇವರ ಗಮನಕ್ಕೆ : ಕೆಎಫ್ ಡಿ ಜನಜಾಗೃತಿ ಒಕ್ಕೂಟ,Chief Minister of Karnataka chief secretary of Karnataka, NHRCB, Bjp Shivamogga KPCCPresident, Kpcc Dinesh Gundu Rao)
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ