ದಿನದ ಸುದ್ದಿ
ಸ್ವಗತ : ಇದು ಸೂಳೆಕೆರೆ ಕೂಗು !
ಭಾಗ -1 : ‘ನಮ್ಮ ಸೂಳೆಕೆರೆ ಉಳಿಸಿ ಅಭಿಯಾನ’
ನಾನು ಶಾಂತಿಸಾಗರ. ನನ್ನ ಸೂಳಕೆರೆ ಎಂತಲೂ ಕೆರೆಯುತ್ತಾರೆ. ಶತಮಾನಗಳ ಕಾಲ ಜೀವ ಕುಲದ ದಾಹ ನೀಗಿಸಿದ ನಾನು ಇಂದು ಕುಬ್ಜವಾಗಿದ್ದೇನೆ. ನನ್ನ ಸಂಕಟ ಅದುವಲ್ಲ. ಬದುಕಿನ ಭವಿಷ್ಯ ಅರಿಯದ ಮಾನವ ಯಾವುದೋ ಆಸೆಗೆ ಬಲಿಯಾಗಿ ಒತ್ತುವರಿ ಮಾಡಿದ್ದಾನೆ. ಜೀವ ಜಲ ನೀಡಿದ ನನ್ನ ರಕ್ಷಣೆ ಕುರಿತು ತೀರಾ ನಿರ್ಲಕ್ಷ್ಯ ವಹಿಸಿದ್ದಾನೆ. ಅದು ಆತನ ಅಜ್ಞಾನ ಎಂದು ನಾನು ಕ್ಷಮಿಸಿ ಬಿಡುವ ಉದಾರತೆ ನನ್ನೊಳೆಗೆ ಇದೆ. ಆದರೆ ಭವಿಷ್ಯ ಆತನನ್ನು ಕ್ಷಮಿಸುವುದಿಲ್ಲ. ಹಲವು ದಾಳಿಯಿಂದ ಸೊರಗಿರುವ ನಾನು ದಿನದಿಂದ ದಿನಕ್ಕೆ ಶಕ್ತಿ ಕಳೆದುಕೊಳ್ಳುತ್ತಿದ್ದೇನೆ. ಆದರೆ ಅದರ ಪರಿವೇ ಇಲ್ಲದ ಮಾನವ ಮಾತ್ರ ತನ್ನ ಅಜ್ಞಾನ ಮುಂದುವರಿಸಿದ್ದಾನೆ. ಇದರಿಂದ ಕೇವಲ ಆತನಿಗಲ್ಲ, ಇಡೀ ಜೀವಕುಲ ಸಂಕಷ್ಟ ಅನುಭವಿಸುವ ದಿನಗಳು ಎದುರಾಗುತ್ತಿವೆ. ಇದು ನನ್ನನ್ನು ಅಕ್ಷರಶಃ ನೋವಿಸುತ್ತಿವೆ.
ನನ್ನ ಉದ್ದ – 8 ಕಿಲೋ ಮೀಟರ್ ಗಳಿಗೂ ಹೆಚ್ಚು, ನನ್ನ ಅಗಲ – ಸರಾಸರಿ 4 ಕಿಲೋ ಮೀಟರ್ . ಹಿಂದೆ ನನ್ನ ವಿಸ್ತಾರ 6650 ಎಕರೆ. ಇದು ನಾನು ಈ ಭೂಮಿ ಮೇಲೆ ಜನ್ಮ ತಾಳಿದಾಗ ಇದ್ದ ನನ್ನ ದೇಹದ ವಿಸ್ತಾರ. ಆದರೆ ಇಂದಿನ ವಿಸ್ತಾರ – 5000 ಎಕರೆ ಮಾತ್ರ. ಕೆಲವರ ಆಸೆಗೆ ಬಲಿಯಾದ ನಾನು ನನ್ನ ಹಲವು ಭಾಗ ಕಳೆದುಕೊಂಡಿದ್ದೇನೆ. ಮುಂದಿನ ಅಪಾಯ ಅರಿಯದೇ ಕೆಲವರು 1500 ಎಕರೆ ನನ್ನ ದೇಹವನ್ನು ಭಾಗ ಮಾಡಿದ್ದಾರೆ.
ಜೀವ ಕುಲಕ್ಕೆ ಬದುಕಲು ರಕ್ತದಂತೆ ನೀರು ಕೂಡ ಅಷ್ಟೇ ಮುಖ್ಯ. ಹಿಂದೆ ನಾನು 3 ರಿಂದ 4 ಅಡಿ ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. ಆದರೆ ಇಂದು ಒಂದು ಟಿಎಂಸಿ ಅಡಿ ನೀರು ಸಂಗ್ರಹಿಸುವ ಕಸುವು ಹೊಂದಿದ್ದೇನೆ. ನನ್ನ ನಂಬಿ ಬದುಕುತ್ತಿರುವ ಅಸಂಖ್ಯಾತ ಜೀವಕುಲದ ದಾಹವನ್ನು ನಿರಂತರವಾಗಿ ನೀಗಿಸಬೇಕು ಎಂಬುದು ನನ್ನ ಆಸೆ. ಇದಕ್ಕೆ ಪ್ರಜ್ಞಾವಂತರಾದ ನಿಮ್ಮ ಸಹಕಾರ ಬೇಕು. ನಾನು ಪರಿ ಪರಿಯಾಗಿ ಬೇಡಿಕೊಳ್ಳುವೆ. ನನ್ನ ರಕ್ಷಣೆಗೆ ನೀನು ಧ್ವನಿ ಎತ್ತು ನಿನ್ನ ಕೊನೆಗಾಲದವರಿಗೂ ನಾನು ದಾಹ ನೀಗಿಸುತ್ತೇನೆ. ಅರಿತೋ, ಅರಿಯದೆಯೋ ನನ್ನ ಮೇಲೆ ಅಕ್ರಮಣ ಮಾಡಿದವರ ಅಜ್ಞಾನವನ್ನು ದೂರ ಮಾಡು. ಇಗೋ ಮಾನವ ನಾನು ಬದುಕಬೇಕು. ಏಕೆಂದರೆ ನನ್ನ ನಂಬಿ ಜೀವಕೋಟಿ ಇದೆ. ಅದಕ್ಕಾಗಿ….
ನನ್ನ ರಕ್ಷಣೆಯ ನಿರೀಕ್ಷೆಯಲ್ಲಿ
ಇಂತಿ
ಸೂಳಕೆರೆ (ಶಾಂತಿಸಾಗರ)
ಈ ನಿಟ್ಟಿನಲ್ಲಿ ‘ಸುದ್ದಿದಿನ.ಕಾಂ’ ಕೂಡಾ ‘ನಮ್ಮ ಸೂಳೆಕೆರೆ ಉಳಿಸಿ ಅಭಿಯಾನ’ವನ್ನು ಆರಂಭಿಸಿದೆ. ಇದಕ್ಕೆ ಯುವಸಮೂಹ, ಪರಿಸರ ಪ್ರೇಮಿಗಳು, ನಾಗರೀಕರು ಸೂಳೆಕೆರೆಯ ಬಗೆಗಿನ ಅನಿಸಿಕೆ, ಮಾಹಿತಿಯನ್ನು ಸುದ್ದಿದಿನದ | 9986715401 ಈ ವಾಟ್ಸಾಪ್ ನಂಬರ್ ಇಲ್ಲಿ ಹಂಚಿಕೊಳ್ಳಬಹುದು.
ಹಾಗೇ ‘ಖಡ್ಗ ಸ್ವಯಂ ಸೇವಕರ ಸಂಘ(ರಿ)- ಕರ್ನಾಟಕ’ ದ
ರಘು.ಬಿ.ಆರ್ ಹೊನ್ನೆಮರದಳ್ಳಿ|997241414251
ಕೆ.ಸಿ.ಬಸವರಾಜ್ ಬೆಳ್ಳೂಡಿ| 9606781310
ಬಿ. ಕುಬೇಂದ್ರ ಚನ್ನಗಿರಿ | 9900437357 ಗೆ
ಇವರನ್ನು ಸಂಪರ್ಕಿಸುವುದರ ಮೂಲಕ ಹೋರಾಟದ ಬಗೆಗಿನ ಮಾಹಿತಿಯನ್ನು ಪಡೆಯಬಹುದು.
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ