ದಿನದ ಸುದ್ದಿ
ಹೃದ್ರೋಗದ ಮದ್ದು ಈ ‘ಹೆಸರು ಬೇಳೆಯ ಪಾನೀಯ’
ಹೆಸರು ಬೇಳೆ ಪಾನೀಯವು ದೇಹಕ್ಕೆ ತಂಪು, ಸುಲಭವಾಗಿ ಜೀರ್ಣವಾಗುತ್ತದೆ. ಕೂದಲಿನ ಆರೋಗ್ಯಕ್ಕೆ ಹೆಸರು ಕಾಳು ಮಹತ್ವದ್ದು. ಇದರಲ್ಲಿ ಅಮಿನೋ ಆ್ಯಸಿಡ್ ಹೇರಳವಾಗಿರುವುದರಿಂದಾಗಿ ಇದು ಹೃದ್ರೋಗಕ್ಕೆ ಒಳ್ಳೆಯ ಮದ್ದು. ಹಸಿರು ಬಣ್ಣದಲ್ಲಿ ಗುಂಡಗಿರುವ ಹೆಸರುಕಾಳಿನ ಸಿಪ್ಪೆ ನಮ್ಮ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಹೆಸರು ಕಾಳಿನಲ್ಲಿರುವ antioxidant ಚರ್ಮಕ್ಕೆ ಹೊಳಪು ನಿಡುವುದಲ್ಲದೆ ಇದರಲ್ಲಿರುವ ವಿಟಮಿನ್ ಸಿ ಚರ್ಮದ ಕೋಶವನ್ನು ರಕ್ಷಿಸುವ ಸಾಮರ್ಥ್ಯ ಹೊಂದಿರುವುದರಿಂದ ಮುಪ್ಪಾಗುದನ್ನು ನಿಧಾನಗೊಳಿಸುತ್ತದೆ.
ಬೇಕಾಗುವ ಸಾಮಗ್ರಿಗಳು
- ಒಂದು ಕಪ್ ಹೆಸಿರು ಬೇಳೆ
- ಮುಕ್ಕಾಲು ಕಪ್ ಬೆಲ್ಲಾ
ಮಾಡುವ ವಿಧಾನ
ದಪ್ಪ ತಳದ ಬಾಣಲೆಯಲ್ಲಿ ಹೆಸರು ಬೇಳೆಯನ್ನು ಸ್ವಲ್ಪ ಘಮ್ಮನೆ ಪರಿಮಳ ಬರುವ ವರೆಗೆ ಹುರಿಯಿರಿ. ಹುರಿದ ಬೇಳೆಯನ್ನು ಮೂರು ಬಾರಿ ಚೆನ್ನಾಗಿ ತೊಳೆದು ಮಿಕ್ಸಿಗೆ ಹಾಕಿ ಮೊದಲಿಗೆ ಕಾಲು ಕಪ್ ನೀರಿನೊಂದಿಗೆ ರುಬ್ಬಿಕೊಳ್ಳಿ. ಬೇಳೆ ಸರಿಯಾಗಿ ನುಣ್ಣಗೆ ಆಗಲು ಮತ್ತೊಂದಿಷ್ಟು ಕಾಲು ಕಪ್ ನೀರು ಸೇರಿಸಿ ರುಬ್ಬಿ. ಹಾಗೆ ನುಣ್ಣಗೆ ರುಬ್ಬಿದ ಪೇಸ್ಟ್ ನ್ನು ಮಿಕ್ಸರ್ ನಿಂದ ತೆಗೆದು ಒಂದು ಪಾತ್ರೆಗೆ ಹಾಕಿ ಅದಕ್ಕೆ ಬೆಲ್ಲಾವನ್ನು ಸೇರಿಸಿ. ಅದಕ್ಕೆ ಕುಡಿಯುವ ಎರಡು ಲೋಟ ನೀರು ಸೇರಿಸಿ ಹದಿನೈದು ನಿಮಿಷ ಫ್ರೀಜ್ ನಲ್ಲಿ ಇಟ್ಟು ತೆಗೆದು ಕುಡಿದರೆ ಬೇಸಿಗೆಯ ದಣಿವು ಆಯಾಸವೆಲ್ಲಾ ಇಂಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243