ದಿನದ ಸುದ್ದಿ
ಸಾಹಿತ್ಯ ವಿವೇಕವನ್ನು ಜಾಗೃತಗೊಳಿಸಬೇಕು : ಸಾಹಿತಿ ಡಾ. ನಿಂಗಪ್ಪ ಮುದೇನೂರು
ಸುದ್ದಿದಿನ,ದಾವಣಗೆರೆ : ವಿವೇಕವನ್ನು ಜಾಗೃತಿಗೊಳಿಸಿ ಪ್ರಜ್ಞಾಪೂರ್ವಕ ಬದುಕನ್ನು ಕಟ್ಟಿಕೊಡುವುದೇ ನಿಜವಾದ ಸಾಹಿತ್ಯ ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ, ಸಾಹಿತಿ ಡಾ. ನಿಂಗಪ್ಪ ಮುದೇನೂರು ವ್ಯಾಖ್ಯಾನಿಸಿದರು.
ದಾವಣಗೆರೆ ತಿಂಗಳ ಅಂಗಳ ಸಾಹಿತ್ಯ – ಸಾಂಸ್ಕೃತಿಕ ಬಳಗದ ವತಿಯಿಂದ ದಿನಾಂಕ : 16.07.2021 ರ ಶುಕ್ರವಾರ ಸಂಜೆ 6.30ಕ್ಕೆ ಆಯೋಜಿಸಲಾಗಿದ್ದ ಆನ್ ಲೈನ್ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ತಮ್ಮ ಸ್ವರಚಿತ ಕವನದ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಮನಸ್ಸನ್ನು ಅರಳಿಸಿ ಬದುಕಿನ ವಿಕಸನಕ್ಕೆ ಪ್ರೇರಪಣೆ ನೀಡುವುದೇ ಸಾಹಿತ್ಯದ ಮೂಲ ಉದ್ದೇಶ ಎಂದು ಅಭಿಪ್ರಾಯಿಸಿದರು.
ನಮ್ಮ ಜಾನಪದ, ವಚನ, ದಾಸ ಸಾಹಿತ್ಯದಂತಹ ಪ್ರಮುಖ ಪ್ರಕಾರಗಳು ಇಂದಿಗೂ ಜೀವಂತವಾಗಿರುವುದಕ್ಕೆ ಕಾರಣ ಅದರೊಳಗಿನ ಮಾನವೀಯ ಸೆಲೆಯೇ ಆಗಿದೆ. ಅಂತಃಕರಣವನ್ನು ಮುಟ್ಟುವ ಸಾಹಿತ್ಯ ಮಾತ್ರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆಯುತ್ತದೆ. ಆ ಸಾಮಾಜಿಕ ಪ್ರಜ್ಞೆಯ ನೆಲೆಗಟ್ಟಲ್ಲಿ ಸಾಹಿತ್ಯ ಸೃಜಿಸುವ ಇಂಗಿತ ರಚನೆಕಾರರಿಗೆ ಅವಶ್ಯ ಎಂದು ನುಡಿದರು.
ಕಾವ್ಯದ ನೆಲೆಗಳು ವಿಷಯ ಕುರಿತು ಮಾತನಾಡಿದ ಸಾಹಿತಿ ಡಾ. ಆನಂದ್ ಋಗ್ವೇದಿ ಅವರು ಮಾನವೀಯ ಪ್ರೀತಿ ಮತ್ತು ಅದರ ಅವಕಾಶದ ಹುಡುಕಾಟದಲ್ಲಿ ಕಾವ್ಯದ ನೆಲೆ ಅಡಗಿದೆ. ಆ ಹುಡುಕಾಟದ ತವಕ ಇದ್ದವರಿಂದ ಮಾತ್ರ ಒಳನೋಟದ ಸಾಹಿತ್ಯ ರಚನೆಯನ್ನು ನಿರೀಕ್ಷಿಸಬಹುದು ಎಂದರು.
ಆನ್ ಲೈನ್ ಕಾರ್ಯಕ್ರಮವನ್ನು ನಿರ್ವಹಿಸಿ, ಸರ್ವರನ್ನು ಸ್ವಾಗತಿಸಿ, ವಂದನೆ ಸಲ್ಲಿಸಿದ ಬಳಗದ ಸಂಚಾಲಕ ಗಂಗಾಧರ ಬಿ ಎಲ್ ನಿಟ್ಟೂರ್ ಮನೆ – ಮನೆಯಂಗಳದಲ್ಲಿ ಹಬ್ಬದ ವಾತಾವರಣವನ್ನು ಕಟ್ಟಿಕೊಟ್ಟಿದ್ದ ತಿಂಗಳ ಅಂಗಳದ ಕಾವ್ಯ ಮಲ್ಲಿಗೆ ಆನ್ ಲೈನ್ ಮೂಲಕವೂ ಮನದಂಗಳ ತಲುಪಿ ಸುವಾಸನೆ ಬೀರಲು ಅಣಿಯಾಗಿದೆ. ಈ ನಿಟ್ಟಿನಲ್ಲಿ ದಾವಣಗೆರೆ ಸಾಹಿತ್ಯ ವಲಯ ನೀಡುತ್ತಿರುವ ಬೆಂಬಲ ಮತ್ತು ಹಿರಿಯ ಸಾಹಿತಿಗಳ ಮಾರ್ಗದರ್ಶನ ಅಪಾರ ಎಂದು ಸ್ಮರಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ಲೇಖಕಿ ಶ್ರೀಮತಿ ಮಲ್ಲಮ್ಮ ನಾಗರಾಜ್ ಸಾಹಿತ್ಯ ಹರಿಯುವ ನೀರಿನಂತೆ. ಆ ನೀರು ಸದಾ ತಿಳಿಯಾಗಿ, ಸ್ವಚ್ಛ, ಶುದ್ಧವಾಗಿ ಹರಿಯುತ್ತಲೇ ಇರಬೇಕು. ಆಗ ಸಮಾಜ ಹಸಿರಾಗಿ, ಸುಂದರವಾಗಿರಲು ಸಾಧ್ಯ. ಆ ದಿಸೆಯಲ್ಲಿ ಹಿರಿಯರು ಬೆನ್ನು ತಟ್ಟಿದಾಗ ಯುವಪೀಳಿಗೆ ಮೂಲಕ ಆ ಪ್ರಕ್ರಿಯೆ ನಿತ್ಯ, ನಿರಂತರ ಮುಂದುವರಿಯುತ್ತದೆ. ತಿಂಗಳ ಅಂಗಳ ಬಳಗದ ಕಾರ್ಯ ಇದಕ್ಕೆ ಮಾದರಿ ಎಂದು ಶ್ಲಾಘಿಸಿದರು.
ಸಾಹಿತಿ ಮಹಾಂತೇಶ್ ಬಿ ನಿಟ್ಟೂರು ಆಶಯ ನುಡಿಯಾಡಿದರು. ಜೀವರಾಜ್ ಛತ್ರದ, ಬ್ಯಾಡಗಿ, ಸಂತೆಬೆನ್ನೂರು ಫೈಜ್ನಟ್ರಾಜ್, ರಾಜೇಂದ್ರ ಪ್ರಸಾದ್ ನೀಲಗುಂದ, ಶ್ರೀಮತಿ ಅನ್ನಪೂರ್ಣ ಪಾಟೀಲ್, ಮಂಜುನಾಥ ಚಿತ್ರದುರ್ಗ ಅವರು ಕವನ ವಾಚಿಸಿದರು.
ಹಿರಿಯ ಕವಯಿತ್ರಿಯರಾದ ಶ್ರೀಮತಿ ಅರುಂಧತಿ ರಮೇಶ್, ಶ್ರೀಮತಿ ಸುಭಾಷಿಣಿ ಮಂಜುನಾಥ್, ಶ್ರೀಮತಿ ಜಯಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು