ದಿನದ ಸುದ್ದಿ
ಸ್ವಾತಂತ್ರ್ಯದ ಕೂಗಿಗಿಂತ ಜೈಲಿನ ಗೋಡೆಗಳು ಎತ್ತರವಿಲ್ಲ..! : “ಪ್ರಧಾನ ಜೈಲರ್”ಗೆ ಹಿರಿಯ ಪತ್ರಕರ್ತನ ಎಚ್ಚರಿಕೆಯ ಪತ್ರ..!
- ರವೀಶ್ ಕುಮಾರ್, ಎನ್ ಡಿಟಿವಿ ಸಂಪಾದಕ, ಕನ್ನಡಕ್ಕೆ : ನವೀನ್ ಸೂರಿಂಜೆ, ಪತ್ರಕರ್ತ
ಮಂದೀಪ್ ಪುನಿಯಾ ಅವರ ಬಂಧನ ನನ್ನನ್ನು ಬಹಳ ಕಾಡುತ್ತಿದೆ. ಹತ್ರಾಸ್ ಪ್ರಕರಣದಲ್ಲಿ ಸಿದ್ದೀಕ್ ಕಪ್ಪನ್ ವಿಚಾರ ಏನಾಯ್ತು ಎಂಬುದೇ ಗೊತ್ತಾಗುತ್ತಿಲ್ಲ. ಕಾನ್ಪುರದ ಪತ್ರಕರ್ತ ಅಮಿತ್ ಸಿಂಗ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಈಗ ರಾಜ್ದೀಪ್ ಸರ್ದೇಸಾಯಿ ಮತ್ತು ಸಿದ್ಧಾರ್ಥ್ ವರದರಾಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪರಿಸ್ಥಿತಿ ನೋಡುವಾಗ ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯ ಕೊನೆಗೊಳ್ಳುವುದೇ ಎಂಬ ಆತಂಕ ಎದುರಾಗಿದೆ.
ಸ್ವಾತಂತ್ರ್ಯದ ಕೂಗಿಗಿಂತ ಜೈಲಿನ ಗೋಡೆಗಳು ಎತ್ತರವಿರಲು ಸಾಧ್ಯವಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಯಾರು ಕಸಿಯಲು ಬಯಸುತ್ತಾರೋ ಅವರು ಇಡೀ ದೇಶವನ್ನು ಬಂಧನದಲ್ಲಿಡಲು ಬಯಸುತ್ತಾರೆ.
ಆತ್ಮೀಯ ಜೈಲರ್ ರವರೇ,
ಭಾರತದ ಇತಿಹಾಸವು ಈ ಕರಾಳ ದಿನಗಳ ಸುರಕ್ಷತೆಯನ್ನು ನಿಮಗೆ ವಹಿಸುತ್ತಿದೆ. ರಾತ್ರೋ ರಾತ್ರಿ “ಅವರ” ಪೊಲೀಸರು ಸ್ವಾತಂತ್ರ್ಯ ಬಯಸುವ ಪತ್ರಕರ್ತರನ್ನು ಬಂಧಿಸಿ ನಿಮ್ಮಲ್ಲಿಗೆ ಕರೆತರಬಹುದು. ಅದಕ್ಕಾಗಿಯೇ ದೂರದೂರುಗಳಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಒಂದು ನೆನಪಿರಲಿ, ಮುಂದೊಂದು ದಿನ ನಿಮ್ಮ ಮಕ್ಕಳು ಗೂಗಲ್ ಸರ್ಚ್ ಮಾಡಿ ನಿಮ್ಮನ್ನು ಪ್ರಶ್ನಿಸುತ್ತಾರೆ. ಆಗ ನಾನು ನೌಕರನಷ್ಟೇ ಆಗಿದ್ದೆ. ನಿಜವಾದ ಜೈಲರ್ ಬೇರೊಬ್ಬನಿದ್ದ ಎಂದು ನಿಮ್ಮ ಮಕ್ಕಳಿಗೆ ಹೇಳಿರಿ. ನೀವು ಐಎಎಸ್, ಐಪಿಎಸ್ ಅಧಿಕಾರಿಯಾಗಿದ್ದರೆ ನಿಮ್ಮ ಮಕ್ಕಳು ಪತ್ರಕರ್ತರಾಗದಂತೆ ನೋಡಿಕೊಳ್ಳಿ. ಪತ್ರಕರ್ತರಾಗಿ ಸತ್ಯ ಹೇಳಿದರೆ ಸಣ್ಣ ತಪ್ಪುಗಳನ್ನು ಹುಡುಕಿ ಜೈಲಿಗೆ ಹಾಕಲಾಗುತ್ತದೆ.
ಭಾರತ ಮಾತೆ ಎಲ್ಲವನ್ನೂ ವೀಕ್ಷಿಸುತ್ತಿದ್ದಾಳೆ. ಗೋದಿ ಮೀಡಿಯಾದ ಮುಖ್ಯಸ್ಥರಿಗೆ ಕಿರೀಟಧಾರಣೆ ಮಾಡಲಾಗುತ್ತಿದೆ ಮತ್ತು ಸ್ವತಂತ್ರ ಧ್ವನಿಗಳನ್ನು ಜೈಲಿಗೆ ಕಳುಹಿಸಲಾಗುತ್ತಿದೆ. ಸ್ವತಂತ್ರ ಪತ್ರಕರ್ತರು ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ರೈತ ಚಳವಳಿಯ ಸುದ್ದಿ ಯೂಟ್ಯೂಬ್ ಚಾನೆಲ್ ಮತ್ತು ಫೇಸ್ಬುಕ್ ಲೈವ್ ಮೂಲಕ ಗ್ರಾಮದಿಂದ ಗ್ರಾಮಕ್ಕೆ ತಲುಪಿರುವುದನ್ನು ರೈತರು ಗಮನಿಸಿದ್ದಾರೆ. ಅವುಗಳನ್ನು ತಡೆಯಲು, ಸಣ್ಣ ತಪ್ಪುಗಳನ್ನು ಹುಡುಕಿ ಅವರ ಮೇಲೆ ಎಫ್ಐಆರ್ ಮಾಡಲಾಗುತ್ತಿದೆ.
ಸ್ವತಂತ್ರ್ಯದ ಘೋಷಣೆ ಕೂಗುವ ಆ ಸ್ಥಳದ ಮೇಲೆ ಜೈಲರ್ ಕಣ್ಣು ಬಿದ್ದಿದೆ. ಜೈಲರ್ ರವರೇ, ನೀವು ಆ ಜೈಲರ್ ಅಲ್ಲ. ಜೈಲರ್ ಮತ್ತೊಬ್ಬರಿದ್ದಾರೆ. ಆ ಜೈಲರ್ ಈ ಬಾರಿಯ ಬಜೆಟ್ ನಲ್ಲಿ “ಪ್ರಧಾನಿ ಜೈಲು ಬಂಧನ ಯೋಜನೆ” ಪ್ರಾರಂಭಿಸಬಹುದು. ನರೇಗಾ ಯೋಜನೆಯಡಿ ಬರೋ ಗ್ರಾಮಗಳನ್ನು ಜೈಲನ್ನಾಗಿ ಮಾಡಬೇಕು.
ಗ್ರಾಮಗಳಲ್ಲಿ ಪ್ರಶ್ನೆ ಕೇಳುವವರನ್ನು ಮತ್ತು ಭಾಷಣ ಮಾಡುವವರನ್ನು ಜೈಲಿಗೆ ಹಾಕಬೇಕು. ಕೊನೆಗೆ ಜೈಲುಗಳನ್ನು ನಿರ್ಮಿಸಿದವನನ್ನು ಮತ್ತು ಜೈಲಿನತ್ತಾ ದಿಟ್ಟಿಸಿದವನನ್ನೂ ಜೈಲಿಗೆ ಹಾಕಬೇಕು. ಇಡೀ ದೇಶದ ಗ್ರಾಮ ಗ್ರಾಮವೇ ನಿಶ್ಯಬ್ದವಾಗಿರಬೇಕು. ಯಾಕೆಂದರೆ “ಪ್ರಧಾನಿ ಜೈಲು ಬಂಧನ ಯೋಜನೆ”ಯನ್ನು ಜೈಲರ್ ಪ್ರಾರಂಭಿಸಿದ್ದಾರೆ ಎಂದು ಘೋಷಿಸಬೇಕು.
ಪ್ರಶ್ನಿಸುವ ಪತ್ರಕರ್ತರನ್ನು ಜೈಲಿನಲ್ಲಿ ಇರಿಸಿದರೆ, ಎರಡು ಬೆಳವಣಿಗೆಗಳು ನಡೆಯಬಹುದು. ಮೊದಲನೆಯದಾಗಿ ಪತ್ರಿಕೆಗಳು ಜೈಲಿನಿಂದ ಹೊರಬರುತ್ತವೆ. ಎರಡನೆಯದಾಗಿ ಜೈಲಿನಿಂದ ಹೊರಗಿರುವ ಪತ್ರಿಕೆಗಳಲ್ಲಿ ಸಾಫ್ಟ್ ಸ್ಟೋರಿಗಳು ಬರಬಹುದು. ಇದು ವಿಶ್ವ ಗುರು ಭಾರತಕ್ಕೆ ಒಳ್ಳೆಯದೇ ? ಯೋಚಿಸಿ.
ಸಿದ್ಧಾರ್ಥ್ ವರದರಾಜನ್, ರಾಜ್ದೀಪ್ ಸರ್ದೇಸಾಯಿ, ಅಮಿತ್ ಸಿಂಗ್ ಸೇರಿದಂತೆ ಎಲ್ಲಾ ಪತ್ರಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಬೇಕೆಂದು ನಾನು ವಿನಂತಿಸುತ್ತೇನೆ. ಮಂದೀಪ್ ಪುನಿಯಾ ಬಿಡುಗಡೆ ಮಾಡಲೇಬೇಕು. ಪ್ರಶ್ನಿಸುವ ಪತ್ರಕರ್ತರ ವಿರುದ್ದ ನಡೆಯುವ ಎಫ್ಐಆರ್ ಆಟ ನಿಲ್ಲಬೇಕು.
ಅತ್ಯಂತ ಗಂಭೀರವಾಗಿ ಒಂದು ತಿಳಿದುಕೊಳ್ಳಿ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತದೆ ಎಂದು ಜನ ಅರ್ಥ ಮಾಡಿಕೊಳ್ಳುವ ದಿನ ಬಂದೇ ಬರುತ್ತದೆ. ಆ ದಿನ ಈ ದೇಶದ ಹಳ್ಳಿಗಳ ಗೋಡೆಗಳು, ವಿಮಾನಗಳು ನಿಲ್ದಾಣಗಳು, ಬುಲೆಟ್ ರೈಲುಗಳು, ತರಕಾರಿ ಮಂಡಿಗಳು, ಜಾತ್ರೆಗಳು, ಮಾರುಕಟ್ಟೆಗಳು ಮತ್ತು ಶೌಚಾಲಯ ಗೋಡೆಗಳ ಮೇಲೆ, ಟ್ರಾಕ್ಟರುಗಳು, ಬಸ್ಸುಗಳು ಮತ್ತು ಟ್ರಕ್ಗಳ ಹಿಂದೆ ಜನ ಬರೆಯಲು ಪ್ರಾರಂಭಿಸುತ್ತಾರೆ.
“ಗುಲಾಮಿ ಮಾಧ್ಯಮಗಳು ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಆ ದೇಶದಲ್ಲಿ ಸ್ವಾತಂತ್ರ್ಯ ಇರಲು ಸಾಧ್ಯವಿಲ್ಲ. ಗೋದಿ ಮಾಧ್ಯಮದಿಂದ ಮುಕ್ತವಾದರಷ್ಟೇ ಹೊಸ ಸ್ವಾತಂತ್ರ್ಯ ಬರಲು ಸಾಧ್ಯ”
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243