Connect with us

ದಿನದ ಸುದ್ದಿ

ಕರ್ನಾಟಕದ ‘ಬೆಳ್ಳಿ’ ಮಿಂಚು ರಾಜೀವ್ ಗಾಂಧೀ ಆರೋಗ್ಯ ವಿವಿ..!

Published

on

  • ಡಾ.ಕೆ.ಸುಧಾಕರ್,ವೈದ್ಯಕೀಯ ಶಿಕ್ಷಣ ಸಚಿವರು,ಕರ್ನಾಟಕ ಸರ್ಕಾರ

ರ್ನಾಟಕದ ಹೆಮ್ಮೆಯ ವೈದ್ಯಕೀಯ ವಿಜ್ಞಾನಗಳ ಸಂಶೋಧನಾ ಶಿಕ್ಷಣ ಕೇಂದ್ರ ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಇಂದು 25 ವರ್ಷ ತುಂಬುತ್ತಿದೆ. ಇಡೀ ವಿಶ್ವದ ವೈದ್ಯಕೀಯ ಕ್ಷೇತ್ರಕ್ಕೆ ಕೊರೊನಾ ಸವಾಲಾಗಿರುವ ಸಂದರ್ಭದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ಮತ್ತು ಸಂಶೋಧನಾ ವಿಶ್ವವಿದ್ಯಾಲಯ ಬೆಳ್ಳಿ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ಒಂದು ವಿಶಿಷ್ಟ ಸಂದರ್ಭ.

ಕಾರಣ ಕೊರೊನಾ ವಿರುದ್ಧ ಕರ್ನಾಟಕ ರಾಜ್ಯ ಸಮರ ಸಾರಿ ಯಶಸ್ಸಿನ ಫಲ ಕಾಣಲು ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನ ಮತ್ತು ಸಂಶೋಧನಾ ವಿಶ್ವವಿದ್ಯಾಲಯ ಪ್ರಮುಖ ಪಾತ್ರವಹಿಸಿದೆ. ಇಡೀ ರಾಷ್ಟ್ರಮಟ್ಟದಲ್ಲಿ ರಾಜೀವ್‍ಗಾಂಧೀ ಆರೋಗ್ಯ ವಿವಿಯ ಕೊರೊನಾ ಸಾಂಕ್ರಾಮಿಕ ರೋಗದ ಚಿಕಿತ್ಸೆ ಮತ್ತು ನಿಯಂತ್ರಣದ ಕಾರ್ಯವಿಧಾನಗಳು ಮೆಚ್ಚುಗೆಗೆ ಪಾತ್ರವಾಗಿವೆ.

ಇಂತಹ ಸವಾಲಿನ ಸಂದರ್ಭದಲ್ಲಿ ಪ್ರತಿಷ್ಠಿತ ಆರೋಗ್ಯ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರಗಳಿಗೆ ಸಾಟಿಯಿಲ್ಲದಂತೆ ಕಾರ್ಯನಿರ್ವಹಿಸುತ್ತಿರುವ ನಮ್ಮ ರಾಜೀವ್ ಗಾಂಧೀ ಆರೋಗ್ಯ ವಿಶ್ವವಿದ್ಯಾಲಯ ಬೆಳ್ಳಿ ಮಹೋತ್ಸವಕ್ಕೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರೇ ಸಾಕ್ಷಿಯಾಗುತ್ತಿರುವುದು ಅವಿಸ್ಮರಣೀಯವೇ ಸರಿ.

1994ರ ಜೂನ್-1 ರಂದು ಕರ್ನಾಟಕ ವಿಜ್ಞಾನ ಕಾಯ್ದೆ ಅಡಿಯಲ್ಲಿ ಸ್ಥಾಪನೆಗೊಂಡ ಈ ವಿಶ್ವವಿದ್ಯಾಲಯದ 25 ವಸಂತಗಳ ಹೆಜ್ಜೆ ಗುರುತು ಅದ್ವಿತೀಯ. ಅಂದು ಬೆಂಗಳೂರಿನಲ್ಲಿ ಆರಂಭಗೊಂಡ ಈ ವಿಶ್ವ ವಿದ್ಯಾಲಯ ಬೆಂಗಳೂರು ಹೊರವಲಯದ ಭೀಮನಕುಪ್ಪೆಯಲ್ಲಿ ಮತ್ತಷ್ಟು ವಿಸ್ತರಣೆಗೊಳ್ಳುತ್ತಿದೆ. 50 ಎಕರೆಗೂ ಮೀರಿದ ಭೂ ಪ್ರದೇಶದಲ್ಲಿ ವಿಶಾಲ ಕ್ಯಾಂಪಸ್ ನಿರ್ಮಾಣಕ್ಕೆ ಜೂನ್-1 ರಂದು ಹಸಿರು ನಿಶಾನೆ ನೀಡಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿಯವರು, ರಾಜ್ಯಪಾಲ ವಜುಭಾಯಿವಾಲಾ ಅವರು, ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭಕ್ಕೆ ಸಾಕ್ಷಿಯಾಗಲಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವರಾಗಿ ನನ್ನ ಅವಧಿಯಲ್ಲಿ ಬೆಳ್ಳಿ ಮಹೋತ್ಸವ ನಡೆಯುತ್ತಿರುವುದು ಮತ್ತು ಹೊಸ ಕ್ಯಾಂಪಸ್ ನಿರ್ಮಾಣಕ್ಕೆ ಚಾಲನೆ ಸಿಗುತ್ತಿರುವುದು ನನ್ನ ಭಾಗ್ಯವೇ ಸರಿ.

ಪ್ರತಿವರ್ಷ 65 ಸಾವಿರ ವಿದ್ಯಾರ್ಥಿಗಳನ್ನು ರಾಜೀವ್‍ಗಾಂಧೀ ವಿವಿ ದಾಖಲಿಸಿಕೊಳ್ಳುತ್ತಿದೆ.ವಿವಿಯ ಅಡಿಯಲ್ಲಿ ಬರುವ ಶಿಕ್ಷಣ ಸಂಸ್ಥೆಗಳು ಸೇರಿದಂತೆ 2.50,000 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. 52 ಮೆಡಿಕಲ್ ಕಾಲೇಜುಗಳಲ್ಲಿ 6200 ಪದವಿ, 43 ಕಾಲೇಜುಗಳ 2506 ಸ್ನಾತಕೋತ್ತರ ವಿದ್ಯಾರ್ಥಿಗಳು, ದಂತ ವೈದ್ಯಕೀಯದಲ್ಲಿ 2780ಪದವಿ, 913 ಪಿಜಿ, ಆಯುರ್ವೇದಲ್ಲಿ 4405 ಪದವಿ, 985 ಸ್ನಾತಕ್ಕೋತ್ತರ ವಿದ್ಯಾರ್ಥಿಗಳು, ಹೋಮಿಯೋಪತಿಯಲ್ಲಿ 850 ಪದವಿ, 121 ಸ್ನಾತಕೋತ್ತರ, ಯುನಾನಿಯಲ್ಲಿ 290ಪದವಿ, 54 ಸ್ನಾತಕೋತ್ತರ, ನ್ಯಾಚುರೋಪತಿ ಮತ್ತು ಯೋಗದಲ್ಲಿ 340 ಪದವಿ, 35 ಸ್ನಾತಕೋತ್ತರ, ನರ್ಸಿಂಗ್‍ನಲ್ಲಿ 19355 ಪದವಿ, 3983ಸ್ನಾತಕೋತ್ತರ, ಬಿಎಸ್ಸಿ ನರ್ಸಿಂಗ್‍ನಲ್ಲಿ 9040 ಪದವಿ ವಿದ್ಯಾರ್ಥಿಗಳು, ಫಿಜಿಯೋಥೆರಫಿಯಲ್ಲಿ 2150 ಪದವಿ, 468 ಸ್ನಾತಕೋತ್ತರ, ಪ್ಯಾರಾಮೆಡಿಕಲ್‍ನಲ್ಲಿ 2920 ಪದವಿ, 468 ಸ್ನಾತಕೋತ್ತರ, ಫಾರ್ಮಸಿಯಲ್ಲಿ 3930ಪದವಿ ಮತ್ತು 1724 ಸ್ನಾತಕೋತ್ತರ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.

ಉತಾಹ್ ವಿವಿಯೊಂದಿಗೆ ರಾಜೀವ್ ಗಾಂಧಿ ವಿವಿ ಆರಂಭಿಸಿದ ಜೀವರಕ್ಷ ಕಾರ್ಯಕ್ರಮವು ಜೀವ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸಲು ವಿದ್ಯಾರ್ಥಿಗಳಿಗೆ ಅನುಕೂಲಕರ ಕಾರ್ಯವಾಗಿದೆ. 2015ರಲ್ಲಿ ವಿವಿ ಆರಂಭಿಸಿದ ಸಂಶೋಧನೆ ವಿಭಾಗ ಇಂದು ವೈದ್ಯಕೀಯ ಸಂಶೋಧನಾ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿದೆ. ಐಐಎಸ್‍ಸಿ, ಎನ್‍ಸಿಬಿಎಸ್, ಸಿಹೆಚ್‍ಜಿ ಮತ್ತು ಜೆಎನ್‍ಸಿಎಎಸ್ ಆರ್ ಜೊತೆ ಮಾಡಿಕೊಂಡ ಒಪ್ಪಂದಗಳಿಂದಾಗಿ ಸಂಶೋಧನೆಯಲ್ಲಿ ಮಹತ್ತರ ಸಾಧನೆಗೆ ಕಾರಣವಾಗಿದೆ.

ನ್ಯಾನೋ ಟೆಕ್ನಾಲಜಿ ಮತ್ತು ಮಾಲೇಕ್ಯೂಲರ್ ಬಯಾಲಜಿ ಕ್ಷೇತ್ರದಲ್ಲಿ ವಿವಿಯ ಸಂಶೋಧನಾ ವಿಭಾಗ ವಿನೂತನ ಹೆಜ್ಜೆಯನ್ನೇ ಇಟ್ಟಿದೆ. ವಿವಿಯ 3000ಕ್ಕೂ ಹೆಚ್ಚು ಬೋಧಕರಿಗೆ ಸಂಶೋಧನಾ ವಿಧಾನದ ತರಬೇತಿ ಶಿಬಿರಗಳನ್ನು ನಡೆಸಲಾಗಿದೆ. ಬಡವ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನದ ಮೂಲಕ ವಿವಿ ಪ್ರೋತ್ಸಾಹಿಸುತ್ತಿದೆ.

ಅತ್ಯಾಧುನಿಕ ವೈದ್ಯಕೀಯ ಶಿಕ್ಷಣ ತಂತ್ರಜ್ಞಾನಗಳ ಬಗ್ಗೆ ಪದವಿ ಮತ್ತು ಸ್ನಾತಕೋತ್ತರ ವಿಭಾಗದ ಅಧ್ಯಾಪಕರಿಗೆ ವಾರ್ಷಿಕ ತರಬೇತಿಗಳನ್ನು ನೀಡಲಾಗಿದೆ. ಇಂತಹ ಅನೇಕಲ ಸುಧಾನರಣೆಗಳಿಂದಾಗಿಯೇ ರಾಜೀವ್ ಗಾಂಧೀ ಆರೋಗ್ಯ ವಿವಿ ಸರಿ ಸುಮಾರು 143 ಸಂಶೋಧನೆ ಅನುದಾನಗಳಿಗೆ 5.99 ಕೋಟಿ ರೂಗಳನ್ನು ವೆಚ್ಚ ಮಾಡಿದೆ.

ಪಾರದರ್ಶಕ ಆನ್‍ಲೈನ್ ಪರೀಕ್ಷೆ

ರಾಜೀವ್ ಗಾಂಧೀ ವಿಶ್ವವಿದ್ಯಾಲಯವು ತನ್ನ ಪರೀಕ್ಷ ಉಪ ಕ್ರಮಗಳಿಂದಲೇ ಇಡೀ ದೇಶಕ್ಕೆ ಮಾದರಿ ಎನ್ನಿಸಿದೆ. ಆನ್‍ಲೈನ್ ಪ್ರಶ್ನೆ ಪತ್ರಿಕೆ ನೀಡುವ ಮೂಲಕ ಪರೀಕ್ಷೆ ನಡೆಸಿ ಅಕ್ರಮಗಳಿಗೆ ಕಡಿವಾಣ ಹಾಕಿದೆ. ಪರೀಕ್ಷೆ ಆರಂಭವಾಗುವ 30 ನಿಮಿಷಗಳ ಮುನ್ನ ಆನ್‍ಲೈನ್ ಮೂಲಕ ನಿರ್ಧಿಷ್ಟ ಪಾಸ್‍ವರ್ಡ್ ಮೂಲಕ ಓಪನ್ ಆಗುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗೆ ಕಳುಹಿಸಲಾಗುತ್ತದೆ. ಆನ್‍ಲೈನ್ ಪ್ರಶ್ನೆ ಪತ್ರಿಕೆಯನ್ನು ಪರಿಚಯಿಸಿದ ಮೊದಲ ಆರೋಗ್ಯ ವಿವಿ ಎನ್ನಿಸಿಕೊಂಡಿದೆ ರಾಜೀವ್ ಗಾಂಧೀ ಆರೋಗ್ಯ ವಿವಿ.

ಉತ್ತರ ಪತ್ರಿಕೆಗಳನ್ನು ಡಿಜಿಟಲ್ ವ್ಯವಸ್ಥೆ ಮೂಲಕ ಮೌಲ್ಯಮಾಪನ ಮಾಡಲಾಗುತ್ತಿದೆ. ಇದು ಮೌಲ್ಯಮಾಪನ ಪ್ರಕ್ರಿಯೆಯ ಅವಧಿಯನ್ನು ಕಡಿಮೆ ಮಾಡಿದೆ. ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಶೋಧನಾ ಪ್ರಬಂಧಗಳನ್ನು ಆನ್‍ಲೈನ್ ಮೂಲಕ ಮೌಲ್ಯಮಾಪನ ಮಾಡುವ ಪದ್ಧತಿ, ದಾಖಲೆಗಳ ಪರಿಶೀಲನೆ ಮತ್ತು ನೀಡುವ ವಿಧಾನ ಡಿಜಿಟಲೀಕರಣ ಪರೀಕ್ಷೆಗಳನ್ನು ವೆಬ್‍ಸ್ಟ್ರೀಮಿಂಗ್ ಮಾಡುವುದು, ಪಾರದರ್ಶಕತೆಗಾಗಿ ಮಾಹಿತಿ ತಂತ್ರಜ್ಞಾನ ಬಳಸಿ ಡಿಜಿಟಲ್ ವ್ಯವಸ್ಥೆಗೆ ತಂದಿರುವುದು ಮತ್ತೊಂದು ಸುಧಾರಣೆ. ಹೀಗೆ ಹಲವು ಶೈಕ್ಷಣೀಕ ಸುಧಾರಣೆಗಳ ಮೂಲಕ ಇಡೀ ದೇಶಕ್ಕೆ ಮಾದರಿಯಾಗಿರುವ ರಾಜೀವ್ ಗಾಂಧೀ ಆರೋಗ್ಯ ವಿವಿಯು ಇದೀಗ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಪರಿಣಾಮಕಾರಿಯಾದ ಪಾತ್ರವನ್ನು ವಹಿಸುತ್

ದೇಶಕ್ಕೆ ದೇಶವೇ ಕೊರೊನಾ ಆತಂಕಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಕರ್ನಾಟಕದ ಪಾಲಿಗೆ ಭರವಸೆ ಮೂಡಿಸಿದ್ದು ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನ ಮತ್ತು ಸಂಶೋಧನಾ ವಿಶ್ವವಿದ್ಯಾಲಯ. ಕೊರೊನಾ ಚಿಕಿತ್ಸೆಗಾಗಿ ಮೊದಲು ವಿಭಾಗ ಆರಂಭಗೊಂಡಿದ್ದೇ ರಾಜೀವ್‍ಗಾಂಧೀ ವಿವಿಯಲ್ಲಿ. ದಾಖಲಾದ ಸೋಂಕಿತರನ್ನು ಬಹುಬೇಗ ಗುಣಮುಖರನ್ನಾಗಿಸುವಲ್ಲಿ ದೇಶದ ಇತರೆ ಆಸ್ಪತ್ರೆಗಳಿಗೆ ವೈದ್ಯಕೀಯ ಸಂಸ್ಥೆಗಳಿಗೆ ಹೋಲಿಸಿದರೆ ರಾಜೀವ್ ಗಾಂಧೀ ವಿವಿಯ ಸಾಧನೆ ಮೆಚ್ಚುವಂತಹದ್ದು.

ಇದಿಷ್ಟೇ ಅಲ್ಲದೇ ಕೊರೊನಾ ನಿಯಂತ್ರಣದಲ್ಲಿ ಭಾಗಿಯಾದ 60,607 ವೈದ್ಯರು, 40,478 ನರ್ಸ್‍ಗಳು, 38,149 ಅನುದಾನಿತ ಆರೋಗ್ಯ ತಜ್ಞರು, 31,127 ಎನ್‍ಎಸ್‍ಎಸ್, ಪೊಲೀಸ್ ಮತ್ತು ಇತರೆ ಸಿಬ್ಬಂದಿಗೆ ಮೇ 30ರ ವರೆಗೆ ರಾಜೀವ್ ಗಾಂಧೀ ವಿವಿಯ ಮೂಲಕ ತರಬೇತಿ ನೀಡಲಾಗಿದೆ. ಒಟ್ಟಾರೆ 1,73,361 ಮಂದಿಗೆ ಕೊರೊನಾ ಚಿಕಿತ್ಸೆ ನಿಯಂತ್ರಣ ಸೋಂಕು ತಡೆ, ಸೋಂಕಿನಿಂದ ಪಾರಾಗುವುದು ಹೀಗೆ ನಾನಾ ರೀತಿಯ ತರಬೇತಿಗಳನ್ನ ವಿಶ್ವವಿದ್ಯಾನಿಲಯದ ತಜ್ಞರು ನೀಡಿದ್ದಾರೆ.

ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನನಗಳ ವಿಶ್ವವಿದ್ಯಾಲಯವು ನೀಡಿರುವ ಕೊಡುಗೆ ಅಪಾರ. ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ಸಚ್ಚಿದಾನಂದ ಅವರ ನೇತೃತ್ವದಲ್ಲಿ ಇಡೀ ವಿವಿಯ ಬೋಧಕ ಮತ್ತು ಬೋಧಕೇತರ ಸಮುದಾಯ ವಿವಿಯನ್ನು ಉತ್ತುಂಗಕ್ಕೆ ತರುವಲ್ಲಿ ಅವಿರತ ಪ್ರಯತ್ನ ಮಾಡುತ್ತಿದೆ.

ಡಾ.ಎಸ್.ಕಾಂತ ಅವರ ಮುಂದಾಳತ್ವದಲ್ಲಿ 1994ರಲ್ಲಿ ಆರಂಭಗೊಂಡ ಈ ವಿವಿಯ ಅಡಿಯಲ್ಲಿ ಈಗ 700ಕ್ಕು ಹೆಚ್ಚು ವೈದ್ಯಕಯ ಶಿಕ್ಷಣ ಸಂಸ್ಥೆಗಳಿವೆ. 2018ರಲ್ಲಿ ಡೆಂಘಿ ರೋಗದ ನಿಯಂತ್ರಣಕ್ಕೆ ವಿವಿ ವತಿಯಿಂದ ಸಂಶೋಧನೆಯನ್ನು ನಡೆಸಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ವಿವಿಯು ಪ್ರಮುಖ ಪಾತ್ರ ವಹಿಸಿತ್ತು. ದೇಶದಲ್ಲೇ ಮೊದಲ ಡೇಂಘಿ ಕ್ಲೀನಿಕಲ್ ಸ್ಯಾಂಪಲ್ ಬ್ಯಾಂಕ್ ಸ್ಥಾಪಿಸಿದ ಕೀರ್ತಿ ರಾಜೀವ್ ಗಾಂಧೀ ವಿವಿಗೆ ಸಲ್ಲುತ್ತದೆ.

ಒಟ್ಟಾರೆ 217 ಕ್ಲೀನಿಕಲ್ ಟೀಚಿಂಗ್ ಸಾಮಥ್ರ್ಯ ಹೊಂದಿರುವ ವಿಶ್ವವಿದ್ಯಾನಿಲಯ ಸಾಕಷ್ಟು ಗುರಿ ಹೊಂದಿದೆ. ಭೀಮನಕುಪ್ಪೆಯಲ್ಲಿ ಸಂಶೋಧನಾ ವಿಭಾಗ ತೆರೆಯುವುದು ವಿಶ್ವ ವಿದ್ಯಾಲಯದ ಪ್ರಾಧ್ಯಾಪಕ ಬಳಗ ಹೆಚ್ಚು ವಿಜ್ಞಾನ ಸಂಶೋಧನಾ ಲೇಖನಗಳನ್ನು ಪ್ರಕಟಿಸಲು ಉತ್ತೇಜಿಸುವುದು ಮತ್ತು ಸಂಶೋಧನೆ ನಡೆಸುವ ಪ್ರಕ್ರಿಯೆಗೆ ಪ್ರೋತ್ಸಾಹ ನೀಡುವ ಗುರಿಯನ್ನು ಹಾಕಿಕೊಂಡಿದೆ. ಈ ಬೆಳ್ಳಿ ಸಂಭ್ರಮದ ಸಂದರ್ಭದಲ್ಲಿ ರಾಜೀವ್ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಜಗತ್ತಿನ ಭೂಪಟದಲ್ಲಿ ಮಹತ್ತರ ಸ್ಥಾನಕ್ಕೆ ಕೊಂಡೊಯ್ಯುವ ಕಾರ್ಯದಲ್ಲಿ ನನ್ನದೂ ಕೂಡಾ ಚಿಕ್ಕ ಪಾತ್ರವಿದೆ ಎಂದು ಹೇಳಿಕೊಳ್ಳಲು ಹೆಮ್ಮೆ ಎನ್ನಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending