ದಿನದ ಸುದ್ದಿ
ಇದು ಭಂಡಗೆಟ್ಟ ಸರ್ಕಾರ, ಅಧಿಕಾರದ ಹೊರತಾಗಿ ಅವರಿಗೆ ಬೇರೇನೂ ಬೇಡ : ಬಿಜೆಪಿ ವಿರುದ್ಧ ಸಿದ್ದ ರಾಮಯ್ಯ ಕಿಡಿ

ಸುದ್ದಿದಿನ,ಬೆಂಗಳೂರು : ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆಂದು ಹೋದಾಗ ಅಲ್ಲಿನ ಸರ್ಕಾರ ಐದು ವರ್ಷ ಏನು ಅಭಿವೃದ್ಧಿ ಮಾಡಿದೆ ಎಂಬ ಬಗ್ಗೆ ಅನುಮಾನ ಮೂಡಿತು. ಹೈದರಾಬಾದ್- ಪೂನಾ ಹೆದ್ದಾರಿಯಲ್ಲಿ ವಾಹನ ಸಂಚರಿಸಲು ಪರದಾಡಬೇಕಿದೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ತವರು ರಾಜ್ಯದ ಸ್ಥಿತಿಯೇ ಹೀಗೆ. ಆದರೂ ಜನ ಬಿಜೆಪಿಗೆ ಮತ ನೀಡುತ್ತಾರೆಯೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬಿಜೆಪಿಯವರು ಇವಿಎಂ ದುರುಪಯೋಗ ಮಾಡಿಕೊಂಡು ಚುನಾವಣೆಯಲ್ಲಿ ಗೆಲ್ಲುತ್ತಿರುವ ಸಾಧ್ಯತೆಗಳೂ ಇರಬಹುದು. ಅಭಿವೃದ್ಧಿ ಕಾರ್ಯಗಳನ್ನೇ ಮಾಡದಿದ್ದರೂ ಹೇಗೆ ಚುನಾವಣೆ ಗೆಲ್ಲಲು ಸಾಧ್ಯ? ಅಧಿಕಾರ ಹಿಡಿಯಲು ಚುನಾವಣಾ ಆಯೋಗ ಸೇರಿದಂತೆ ಎಲ್ಲ ಸ್ವಾಯತ್ತ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳತ್ತಿದೆ. ಚುನಾವಣೆ ಘೋಷಣೆಯಾದ ದಿನದಿಂದ ನೀತಿಸಂಹಿತೆ ಜಾರಿಯಾಗಬೇಕು. ಆದರೆ ರಾಜ್ಯದಲ್ಲಿ 70 ದಿನ ಮುಂಚಿತವಾಗಿ ಚುನಾವಣೆಯ ದಿನವನ್ನು ಘೋಷಿಸಿದರೂ ಇನ್ನೂ ನೀತಿಸಂಹಿತೆ ಜಾರಿಯಾಗಿಲ್ಲ. ಇವೆಲ್ಲ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರುತ್ತಿರುವುದಕ್ಕೆ ಸ್ಪಷ್ಟ ನಿದರ್ಶನಗಳು. ಇವಿಎಂ ಯಂತ್ರಗಳು ನಂಬಿಕಾರ್ಹವಲ್ಲ ಎಂಬ ಕಾರಣದಿಂದ ಅಮೆರಿಕಾ, ಜಪಾನ್, ಜರ್ಮನಿಯಂತಹ ಮುಂದುವರೆದ ರಾಷ್ಟ್ರಗಳೇ ಸಾಂಪ್ರದಾಯಿಕ ಮತದಾನದ ಶೈಲಿಯಾದ ಮತಚೀಟಿ ಬಳಕೆಯನ್ನು ಮರು ಅಳವಡಿಕೆ ಮಾಡಿಕೊಂಡಿರುವಾಗ ಭಾರತ ಏಕೆ ಮಾಡಿಕೊಳ್ಳಬಾರದು? ಇಷ್ಟೊಂದು ಜನ ಇವಿಎಂ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನಿಸಿದರೂ ಅದರ ಮೇಲೆ ಬಿಜೆಪಿಗರ ಅತಿಯಾದ ಪ್ರೀತಿಗೆ ಕಾರಣವೇನು? ಎಂದಿದ್ದಾರೆ.
ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರಧನ ನೀಡಿಲ್ಲ, ತಾತ್ಕಾಲಿಕ ಶೆಡ್ ಹಾಕಿಕೊಟ್ಟಿಲ್ಲ, ಕೆಲವರಿಗೆ ಹತ್ತು ಸಾವಿರ ಕೊಟ್ಟಿದ್ದು ಬಿಟ್ಟರೆ ಇದುವರೆಗೂ ರಾಜ್ಯ ಸರ್ಕಾರ ಬೇರಾವ ಗಮನಾರ್ಹ ಕೆಲಸವನ್ನು ಮಾಡಿಲ್ಲ. ಈಗ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಸರ್ಕಾರ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಹೀಗಾದರೆ ಸಂತ್ರಸ್ತರ ಗತಿಯೇನು? ಯು.ಪಿ.ಎ ಅವಧಿಯಲ್ಲಿ ದೊರೆತ ಪರಿಹಾರಕ್ಕೂ, ಎನ್ಡಿಎ ಅವಧಿಯಲ್ಲಿ ದೊರೆತ ಪರಿಹಾರದ ಮೊತ್ತಕ್ಕು ತಾಳೆ ಹಾಕುವುದು ಮೂರ್ಖತನ. ಹಿಂದೆ ಸಂಭವಿಸಿದ ಪ್ರವಾಹಕ್ಕೂ, ಈ ಬಾರಿಯ ಪ್ರವಾಹಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಸಾವು, ನೋವು, ನಷ್ಟದ ಪ್ರಮಾಣ ಈ ಬಾರಿ ಅತಿ ಹೆಚ್ಚಾಗಿದೆ. ನಾನು ಮೊದಲ ಬಜೆಟ್ ಮಂಡಿಸಿದಾಗ ಒಂದು ಲಕ್ಷ ಕೋಟಿಯಿದ್ದ ಬಜೆಟ್ ಗಾತ್ರ, ಕೊನೆಯ ಬಜೆಟ್ಗೆ ರೂ.2 ಲಕ್ಷ ಕೋಟಿ ಮೀರಿತ್ತು. ಅಂದರೆ ಹಣದ ಮೌಲ್ಯ ಒಂದೇ ಪ್ರಕಾರವಾಗಿ ಇಲ್ಲ. ಹಾಗಾಗಿ ಕೇಂದ್ರ ನೀಡಿರುವ ಪರಿಹಾರ ಹಣದ ಪ್ರಮಾಣದಲ್ಲಿ ಸ್ವಲ್ಪ ಹೆಚ್ಚಿರಬಹುದು. ಹಾಗೆಂದ ಮಾತ್ರಕ್ಕೆ ಅಗತ್ಯ ಪ್ರಮಾಣದ ನೆರವು ದೊರೆತಿದೆ ಎಂದಲ್ಲ ಎಂದು ಹೇಳಿದ್ದಾರೆ.
ನೆರೆ ಪರಿಹಾರ ಕಾರ್ಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷವಾಗಿ ನಾವು ನಿತ್ಯವೂ ಸರ್ಕಾರವನ್ನು ಎಚ್ಚರಿಸುವ ಕಾರ್ಯ ಮಾಡುತ್ತಿದ್ದೇವೆ. ಆದರೆ ಇದು ಭಂಡಗೆಟ್ಟ ಸರ್ಕಾರ, ಅಧಿಕಾರದ ಹೊರತಾಗಿ ಅವರಿಗೆ ಬೇರೇನೂ ಬೇಡ. “ನಿದ್ರಿಸುತ್ತಿರುವವರನ್ನು ಎಬ್ಬಿಸಬಹುದು, ನಿದ್ರಿಸುತ್ತಿರುವಂತೆ ನಟಿಸುವವರನ್ನು ಎಬ್ಬಿಸುವುದು ಅಸಾಧ್ಯದ ಮಾತು” ಎಂದು ಕೆಂಡಾ ಮಂಡಲವಾಗಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡೀಲರ್ಶಿಪ್ಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಮಂಗಳೂರು ರೆಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ ಭಾರತ ಸರ್ಕಾರಿ ಸ್ವಾಮ್ಯದ ಕಂಪನಿಯಾಗಿದ್ದು, ರಿಟೇಲ್ ಔಟ್ಲೆಟ್ಗಳನ್ನು ತೆರೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ತಣಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಸ್ಹೆಚ್76 ರಸ್ತೆಯಲ್ಲಿ, ಜಗಳೂರು ಪಟ್ಟಣ ಪಂಚಾಯತಿ ವ್ಯಾಪ್ತಿಯ ಚಳ್ಳಕೆರೆ ಗೇಟ್ ಬಸ್ ನಿಲ್ದಾಣದ 2 ಕಿ.ಮಿ ಒಳಗೆ ಜಗಳೂರು ದಾವಣಗೆರೆ ಮಾರ್ಗದ ಎಸ್ಹೆಚ್ 65 ರಸ್ತೆಯಲ್ಲಿ ಮತ್ತು ಜಗಳೂರು-ಕೊಟ್ಟೂರು ಮಾರ್ಗದಲ್ಲಿನ 02 ಕಿ.ಮಿ ಒಳಗೆ ನೆಹರು ರಸ್ತೆಯಲ್ಲಿ, ಚನ್ನಗಿರಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಎನ್ಹೆಚ್ 369 ರಸ್ತೆಯಲ್ಲಿ.
ಇದನ್ನೂ ಓದಿ | ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಹಳೇಬಾತಿಯ ತುಂಗಭದ್ರ ಬಡಾವಣೆ ಹತ್ತಿರದಲ್ಲಿ, ಸವಳಂಗ ಪಂಚಾಯತ್ ವ್ಯಾಪ್ತಿಯ ಸವಳಂಗ-ನ್ಯಾಮತಿ ಎಸ್ಹೆಚ್ 52 ರಸ್ತೆಯಲ್ಲಿ, ಮುದಹದಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಮನೂರು-ಮಲೆಬೆನ್ನೂರು ರಸ್ತೆಯಲ್ಲಿ ರಿಟೇಲ್ ಔಟ್ಲೆಟ್ಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಏಪ್ರಿಲ್ 23 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.mrpl.co.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾ ಕಚೇರಿ ವತಿಯಿಂದ 2019-20ನೇ ಸಾಲಿನ ವಿಶೇಷ ಕೇಂದ್ರಿಯ ನೆರವಿನಡಿ (ಎಸ್ಸಿಎ ಯಿಂದ ಎಸ್ಸಿಎಸ್ಪಿ) ಜಿಲ್ಲೆಯ ಪರಿಶಿಷ್ಟ ಜಾತಿಯ ನಿರುದ್ಯೋಗ ವಿದ್ಯಾವಂತ ಯುವಕ-ಯುವತಿಯರಿಗೆ ಉಚಿತವಾಗಿ ತರಬೇತಿ ಕಾರ್ಯಕ್ರಮವನ್ನು ದಾವಣಗೆರೆಯ ಕಿಯೋನಿಕ್ಸ್ ಸಂಸ್ಥೆ ಕೇಂದ್ರದಲ್ಲಿ ಏರ್ಪಡಿಸಲಾಗಿದೆ.
ಅಕೌಂಟಿಂಗ್ ಮತ್ತು ಟ್ಯಾಲಿ, ಕಂಪ್ಯೂಟರ್ ಪ್ರೋಗ್ರಾಮರ್ ತರಬೇತಿ, ಕಾಲ್ಸೆಂಟರ್ ತರಬೇತಿ 50 ಅಭ್ಯರ್ಥಿಗಳಿಗೆ. ಕಂಪ್ಯೂಟರೈಸ್ಡ್ ಫ್ಯಾಷನ್ ಡಿಸೈನಿಂಗ್ ಹಾಗೂ ಟೈಲರಿಂಗ್ ತರಬೇತಿ 44 ಅಭ್ಯರ್ಥಿಗಳಿಗೆ. ಡಿಜಿಟಲ್ ಮಾರ್ಕೆಟಿಂಗ್ 110 ಜನ, ಸೈಬರ್ ಸೆಕ್ಯೂರಿಟಿ-100, ಹಾಗೂ 250 ಅಭ್ಯರ್ಥಿಗಳಿಗೆ ಆಂಡ್ರಾಯಿಡ್ ಟ್ರೈನಿಂಗ್ (ಸ್ಮಾರ್ಟ್ ಮೊಬೈಲ್ ಫೋನ್) ತರಬೇತಿ ಉಚಿತವಾಗಿ ಆಯೋಜಿಸಲಾಗಿದೆ.
ಇದನ್ನೂ ಓದಿ | ಸಾಮಾಜಿಕ ಸಂವರ್ಧನೆಗೆ ಸಾಹಿತ್ಯಿಕ ಚರ್ಚೆ ಅವಶ್ಯ : ಹಿರಿಯ ಸಾಹಿತಿ ಡಾ. ಎಂ. ಜಿ. ಈಶ್ವರಪ್ಪ
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಯನ್ನು ಏ.9 ರಂದು ಅಂಬೇಡ್ಕರ್ ನಿಗಮದ ಜಿಲ್ಲಾ ಕಚೇರಿಯಲ್ಲಿ ಉಚಿತವಾಗಿ ವಿತರಿಸಲಾಗುವುದು. ಭರ್ತಿ ಮಾಡಿದ ಅರ್ಜಿಯನ್ನು ಏ.30 ರೊಳಗೆ ಅಗತ್ಯ ಶೈಕ್ಷಣಿಕ ಅಂಕ ಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ನೊಂದಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ನಂ.337/16ಎ-16 ಗಣೇಶ್ ಲೇಔಟ್ 1ನೇ ಕ್ರಾಸ್, ಪಿ.ಬಿ.ರಸ್ತೆ, ದಾವಣಗೆರೆ. ದೂರವಾಣಿ ಸಂಖ್ಯೆ: 08192-258647 ಕ್ಕೆ ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾಮಾಜಿಕ ಸಂವರ್ಧನೆಗೆ ಸಾಹಿತ್ಯಿಕ ಚರ್ಚೆ ಅವಶ್ಯ : ಹಿರಿಯ ಸಾಹಿತಿ ಡಾ. ಎಂ. ಜಿ. ಈಶ್ವರಪ್ಪ

ಸುದ್ದಿದಿನ,ದಾವಣಗೆರೆ : ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಸಾಹಿತ್ಯದ ಕೊಡುಗೆ ಅಪಾರ. ಹಾಗಾಗಿ ಹೊಸತನದ ಹುಟ್ಟಿಗೆ ಮತ್ತು ಸಾಮಾಜಿಕ ಸಂವರ್ಧನೆಗೆ ಆಗಾಗ್ಗೆ ಆರೋಗ್ಯಕರ ಸಾಹಿತ್ಯಿಕ ಚರ್ಚೆ ನಡೆಯುತ್ತಿರಬೇಕು ಎಂದು ಹಿರಿಯ ಸಾಹಿತಿ, ಜಾನಪದ ವಿದ್ವಾಂಸರಾದ ಡಾ. ಎಂ.ಜಿ ಈಶ್ವರಪ್ಪ ಅಭಿಪ್ರಾಯಿಸಿದರು.
ದಾವಣಗೆರೆ ತಿಂಗಳ ಅಂಗಳ ಸಾಹಿತ್ಯ – ಸಾಂಸ್ಕೃತಿಕ ಬಳಗದ ವತಿಯಿಂದ ಕವಯಿತ್ರಿ ಶ್ರೀಮತಿ ಚಂದ್ರಿಕಾ ಜಗನ್ನಾಥ್ ಅವರ ಹುಟ್ಟು ಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ ಸವಿನೆನಪಿನಲ್ಲಿ ನಗರದ ತರಳಬಾಳು ಬಡಾವಣೆಯ ಚಂದ್ರಿಕಾ ಅವರ ನಿವಾಸದಲ್ಲಿ ಏಪ್ರಿಲ್ 17 ರ ಶನಿವಾರ ಸಂಜೆ 4 ಗಂಟೆಗೆ ಆಯೋಜಿಸಲಾಗಿದ್ದ ಕವಿ ಕಾವ್ಯ ಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಹಿತ್ಯ ಸರ್ವರ ಹಿತವನ್ನು ಬಯಸುತ್ತದೆ. ಸರ್ವ ರಂಗಗಳ ಅಭಿವೃದ್ಧಿಯನ್ನು ಆಶಿಸುತ್ತದೆ. ಆ ದಿಸೆಯಲ್ಲಿ ಸಾಹಿತ್ಯಿಕ ಕಾರ್ಯಕ್ರಮಗಳ ಆಯೋಜನೆ ಮನುಕುಲದ ಮನಪರಿವರ್ತನೆಗೆ ಪುಷ್ಠಿ ನೀಡುತ್ತದೆ. ಸುಂದರ ವ್ಯಕ್ತಿತ್ವಗಳ ಉದಯಕ್ಕೆ ನಾಂದಿ ಹಾಡುತ್ತದೆ. ಇಂತಹ ಉತ್ಕೃಷ್ಟ ಆಶಯಕ್ಕೆ ಪೂರಕವಾಗಿ ತಿಂಗಳ ಅಂಗಳ ಬಳಗ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.
” ಕನ್ನಡದ ಮಹಿಳಾ ಸಾಹಿತಿಗಳು ಮತ್ತು ಸ್ತ್ರೀ ಸಂವೇದನೆ ” ವಿಷಯ ಕುರಿತು ಮಾತನಾಡಿದ ಲೇಖಕಿ ಹಾಗೂ ವಾಗ್ಮಿ ಶ್ರೀಮತಿ ಸುಭಾಷಿಣಿ ಅವರು ಮಹಿಳಾ ಲೇಖಕಿಯರ ಸಾಹಿತ್ಯಿಕ ಒಳತೋಟಿಯನ್ನು ಸ್ವಾರಸ್ಯಕರವಾಗಿ ವಿವರಿಸಿದರು.
ಆಹ್ವಾನಿತ ಕವಿಮಿತ್ರರಾದ ರಾಜಶೇಖರ್ ಗುಂಡಗಟ್ಟಿ, ಮಹಾಂತೇಶ್ ಬಿ ನಿಟ್ಟೂರು, ಗಂಗಾಧರ ಬಿ ಎಲ್ ನಿಟ್ಟೂರ್, ತಾರೇಶ್ ಅಣಬೇರು, ಪಾಪುಗುರು, ಶ್ರೀ ವೀರೇಶ್ ಬಿ ಜಿ ಎಂ , ಅಂಜಿನಪ್ಪ, ಕೊಟ್ರೇಶ್ ಎನ್. ಕೆ, ಪ್ರಭು ಗೊಲ್ಲರಹಳ್ಳಿ, ಪರಮೇಶ್ ನೆಲ್ಲಿಕಟ್ಟೆ, ಶ್ರೀಮತಿ ಮಲ್ಲಮ್ಮ ನಾಗರಾಜ್ , ಶ್ರೀಮತಿ ಸಂಧ್ಯಾ ಸುರೇಶ್, ಶ್ರೀಮತಿ ಸುಕನ್ಯಾ ತ್ಯಾವಣಗಿ, ಶ್ರೀಮತಿ ಅನ್ನಪೂರ್ಣ ಪಾಟೀಲ್ , ಡಾ. ಅನಿತಾ ದೊಡ್ಡಗೌಡರ್, ಶ್ರೀಮತಿ ಬಿ. ಹೆಚ್. ಉಮಾ ಮಹೇಶ್ವರಿ, ಶ್ರೀಮತಿ ಶೋಭಾ ಮಂಜುನಾಥ್ , ಶ್ರೀಮತಿ ಉಮಾದೇವಿ ಹಿರೇಮಠ ಅವರು ಕನ್ನಡ ನಾಡಿನ ಹಿರಿಯ ಪ್ರಸಿದ್ಧ ಕವಿಗಳ ಕವನ ವಾಚನ ಮಾಡಿದರು.
ನಂತರ ಡಾ. ಎಂ. ಜಿ. ಈಶ್ವರಪ್ಪ ಹಾಗೂ ಆತಿಥ್ಯ ವಹಿಸಿದ್ದ ಶ್ರೀಮತಿ ಚಂದ್ರಿಕಾ ಜಗನ್ನಾಥ್ ಅವರಿಗೆ ತಿಂಗಳ ಅಂಗಳ ಬಳಗದಿಂದ ಗೌರವಿಸಿ ಸನ್ಮಾನಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಭಾವ ಭೈರಾಗಿ7 days ago
ಕವಿತೆ | ಅವಳು ಮಸಣ ಕಾಯುವ ಪಾರ್ವತಿ..!
-
ನೆಲದನಿ6 days ago
ನಮ್ಮ ಶಿವಮೊಗ್ಗ – ನಮ್ಮ ಹೆಮ್ಮೆ: ಕುವೆಂಪು
-
ದಿನದ ಸುದ್ದಿ6 days ago
ಕಾಡಿನಿಂದ ನಾಡಿಗೆ ಬಂದ ಲೋರಿಸ್ ‘ಪಾಪ’..!
-
ಬಹಿರಂಗ6 days ago
ಜ್ಯೋತಿರಾವ್ ಫುಲೆ : ವಸಾಹತು ಮತ್ತು ಮೇಲ್ವರ್ಗಗಳ ಪ್ರಾಬಲ್ಯವನ್ನು ಪ್ರಶ್ನಿಸಿಸುವ ನೆಲೆಗಳು
-
ನಿತ್ಯ ಭವಿಷ್ಯ6 days ago
ಈ ರಾಶಿಯವರಿಗೆ ಗುಡ್ ನ್ಯೂಸ್ ಬಯಸಿದ್ದೆಲ್ಲ ಸಿಗುವುದು ಮತ್ತು ಮುಟ್ಟಿದ್ದೆಲ್ಲ ಪ್ಲಾಟಿನಂ ಗೋಲ್ಡ್! ಸೋಮವಾರ ರಾಶಿ ಭವಿಷ್ಯ-ಏಪ್ರಿಲ್-12,2021
-
ರಾಜಕೀಯ6 days ago
ಮಸ್ಕಿ ಬಿಜೆಪಿ ಅಭ್ಯರ್ಥಿ ಪರ ಇಂದು ಸಿಂಗರ್ ಮಂಗ್ಲಿ ಪ್ರಚಾರ
-
ನಿತ್ಯ ಭವಿಷ್ಯ5 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ದಿನದ ಸುದ್ದಿ5 days ago
ಸಾರಿಗೆ ಮುಷ್ಕರ –ಕಾರ್ಮಿಕರ ಬದುಕು ಘನತೆಯ ಪ್ರಶ್ನೆ