Connect with us

ದಿನದ ಸುದ್ದಿ

ಜನತೆಯನ್ನು ಕಷ್ಟದ ಕಡಲಲ್ಲಿ ತೇಲಲು ಬಿಟ್ಟ ಮೋದಿ ; ಹುಸಿಯಾದ ಭರವಸೆ‌ : ಸಿದ್ದರಾಮಯ್ಯ ಕಿಡಿ

Published

on

ಸುದ್ದಿದಿನ, ಬೆಂಗಳೂರು : ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರು, ಕೂಲಿ ಕಾರ್ಮಿಕರು ಹಾಗೂ ಬಡವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಪರಿಹಾರ ಒದಗಿಸುತ್ತಾರೆ ಎಂಬ ಜನರ ನಿರೀಕ್ಷೆ ಹುಸಿಯಾಗಿದೆ. ಇತ್ತ ರಾಜ್ಯ ಸರ್ಕಾರವೂ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವಲ್ಲಿ ವಿಫಲವಾಗಿರುವುದರಿಂದ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂದು ಪ್ರಧಾನಿಯವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ದೇಶದ ಆರ್ಥಿಕ ಪರಿಸ್ಥಿತಿ ತೀರಾ ಕೆಳ ಮಟ್ಟಕ್ಕೆ ಹೋಗಿದೆ. ಇಂಥಹ ಸ್ಥಿತಿಯನ್ನು ಕಳೆದ ಮೂವತ್ತು ವರ್ಷಗಳಲ್ಲಿ ದೇಶ ಎಂದೂ ಕಂಡಿರಲಿಲ್ಲ. ದೇಶದ ಆರ್ಥಿಕ ಬೆಳವಣಿಗೆ 2.5 ಆಗಬಹುದು ಎಂದು ಅಂದಾಜು ಮಾಡಲಾಗಿದೆ. ಜನತೆ ಪ್ರಧಾನಿಯವರ ಕಡೆಗೆ ನಿರೀಕ್ಷೆಯ ನೋಟ ನೆಟ್ಟಿದ್ದರು. ಆದರೆ ಜನರ ಭರವಸೆ ಹುಸಿಯಾಗಿದೆ. ಯಾವುದೇ ನೆರವನ್ನು ಘೋಷಿಸದ ಮೋದಿಯವರು ಏಳು ಸೂತ್ರಗಳನ್ನು ಹೇಳಿ ಕೈ ತೊಳೆದುಕೊಂಡು, ಜನರನ್ನು ಕಷ್ಟದ ಕಡಲಲ್ಲಿಯೇ ತೇಲಲು ಬಿಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.

ಲಾಕ್‌ಡೌನ್ ನಿಂದ ಕೈಗಾರಿಕೆಗಳು ಮುಚ್ಚಿವೆ. ಕೃಷಿ ಕ್ಷೇತ್ರ ಬಡವಾಗಿದೆ. ಕಾರ್ಮಿಕರು ಕಂಗಾಲಾಗಿದ್ದಾರೆ. ಹಳ್ಳಿ ಜನರ ತೊಂದರೆ ಹೇಳತೀರದಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಧಾನಿಯವರು ಆರ್ಥಿಕವಾಗಿ ಚೈತನ್ಯ ತುಂಬುವ, ಕೃಷಿ ಕ್ಷೇತ್ರ ಮೇಲೆತ್ತುವ ಕೆಲಸ ಮಾಡಬೇಕಿತ್ತು. ಬಡವರು, ಕಾರ್ಮಿಕರಿಗೆ ಜೀವನದ ಭದ್ರತೆ ಒದಗಿಸಬೇಕಿತ್ತು. ಕೋಟ್ಯಂತರ ಮಂದಿ ವಲಸೆ ಕಾರ್ಮಿಕರು ಇಂದಿಗೂ ಬೀದಿಯಲ್ಲಿದ್ದಾರೆ. ಸರ್ಕಾರದ ಕಾರ್ಯಕ್ರಮಗಳು ಇದುವರೆಗೂ ಅವರನ್ನು ತಲುಪಿಲ್ಲ. ಇಂತಹ ಸಂದರ್ಭದಲ್ಲಿ ಜನರು ಪ್ರಧಾನಿಯವರ ಮೇಲೆ ಇಟ್ಟಿದ್ದ ನಿರೀಕ್ಷೆ ಹುಸಿಯಾಗಿದೆ. ಮೋದಿಯವರು ದೇಶವನ್ನು ಉದ್ದೇಶಿಸಿ ಕೇವಲ ರಾಜಕೀಯ ಭಾಷಣ ಮಾಡಿದ್ದಾರೆ ಅಷ್ಟೆ‌ ಎಂದು ಟೀಕಿಸಿದರು.

ರಾಜ್ಯ ಸರ್ಕಾರ ನೊಂದವರ ನೆರವಿಗೆ ನಿಲ್ಲುವ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡುತ್ತಿಲ್ಲ. ನಿತ್ಯವೂ ನೂರಾರು ಮಂದಿ ದೂರವಾಣಿ ಕರೆ ಮಾಡಿ ತಮ್ಮ ಕಷ್ಟ ಹೇಳಿಕೊಳ್ಳುತ್ತಾರೆ. ಅಸಂಘಟಿತ ವಲಯದ ಕಾರ್ಮಿಕರು, ರೈತರ ತೊಂದರೆ ನಿವಾರಣೆಯಾಗುತ್ತಿಲ್ಲ. ರೈತರು ಬೆಳೆದ ಉತ್ಪನ್ನಗಳಿಗೆ ಬೆಲೆ ಹಾಗೂ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಆಗಿಲ್ಲ. ಕೃಷಿ ಉತ್ಪನ್ನಗಳ ಸಾಗಣೆಗೂ ಸರ್ಕಾರ ಸೂಕ್ತ ಏರ್ಪಾಡು ಮಾಡುತ್ತಿಲ್ಲ. ಮಾವು ಹಾಗೂ ಕಲ್ಲಂಗಡಿ ಮಾರುಕಟ್ಟೆಗೆ ಬರಬೇಕಾದ ಕಾಲವಿದು. ಆದರೆ ಅವು ರೈತರ ಜಮೀನುಗಳಲ್ಲಿಯೇ ಕೊಳೆಯುತ್ತಿದೆ. ಅದನ್ನು ನಂಬಿದವರ ಬದುಕು ಮೂರಾಬಟ್ಟೆಯಾಗಿದೆ. ಉಚಿತವಾಗಿ ಕೊಡುತ್ತೇವೆ ಎಂದರೂ ಯಾರೂ ಖರೀದಿಸಲು ಮುಂದೆ ಬರುತ್ತಿಲ್ಲ ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಖಾಲಿಯಾಗಿರುವ ತನ್ನ ಖಜಾನೆ ಭರ್ತಿ ಮಾಡಲು ಬಿಡಿಎ ಕಾರ್ನರ್ ಸೈಟ್ ಗಳ ಹರಾಜಿಗೆ ಮುಂದಾಗಿದೆ. ಇದರ ಜೊತೆಗೆ ರಾಜೀವ್‍ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲೂ ಹಣ ಇದೆ. ಅದು ವೈದ್ಯರು ಮತ್ತು ಆಸ್ಪತ್ರೆಗಳಿಂದ ಬಂದಿರುವ ಹಣ. ಅದನ್ನೂ ಸರ್ಕಾರ ಬಳಕೆ ಮಾಡಿಕೊಳ್ಳಬಹುದು ಎಂಬುದು ನನ್ನ ಅಭಿಪ್ರಾಯ. ನಿಗಮ ಮಂಡಳಿಗಳಲ್ಲಿ ಅಧ್ಯಕ್ಷರಿಲ್ಲ. ಅಧಿಕಾರಿಗಳೇ ಅಲ್ಲಿ ದರ್ಬಾರು ನಡೆಸುತ್ತಿದ್ದಾರೆ. ಅಧ್ಯಕ್ಷರಿಗೆ ನಿಗದಿ ಮಾಡಿರುವ ಕಾರುಗಳನ್ನು ಕಚೇರಿ, ಮನೆ ಕೆಲಸಗಳಿಗೆ ಬಳಸುತ್ತಿದ್ದಾರೆ ಎಂದಿದ್ದಾರೆ.

ಆ ಕಾರುಗಳನ್ನು ವಾಪಸ್ ಪಡೆದುಕೊಂಡು ಅನಗತ್ಯ ವೆಚ್ಚಕ್ಕೆ ಕಡಿಹಾಣ ಹಾಕಬೇಕು. ಇದು ಒಂದು ಉದಾಹರಣೆ ಅಷ್ಟೆ. ಇಂತಹ ಅನೇಕ ಅನಗತ್ಯ ವೆಚ್ಚಗಳಿವೆ. ವಾಣಿಜ್ಯ ತೆರಿಗೆ, ನೋಂದಣಿ ಮತ್ತು ಮುದ್ರಾಂಕ ಶುಲ್ಕ, ಅಬಕಾರಿ, ಮೋಟಾರು ವಾಹನ ತೆರಿಗೆ ಸಂಗ್ರಹವಾಗುತ್ತಿಲ್ಲ. ವಿಶೇಷ ಪ್ಯಾಕೇಜ್ ಘೋಷಣೆ ಮಾಡದ ಹೊರತು ಆರ್ಥಿಕವಾಗಿ ಚೈತನ್ಯ ತುಂಬಲಾಗದು. ಹಣಕಾಸು ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸದಿರುವುದು, ಭ್ರಷ್ಟಾಚಾರ ನಿಯಂತ್ರಣ ಮಾಡದಿರುವುದು ಕೂಡ ಆರ್ಥಿಕ ದಿವಾಳಿಗೆ ಪ್ರಮುಖ ಕಾರಣ ಎಂದು ಕಿಡಿಕಾರಿದ್ದಾರೆ.

ನಾವು ಲಾಕ್‌ಡೌನ್ ವಿಸ್ತರಣೆಗೆ ವಿರೋಧ ಮಾಡುವುದಿಲ್ಲ. ಕೊರೊನಾ ಸೋಂಕು ಭಯಾನಕವಾಗಿದೆ. ಅದರ ಪ್ರಮಾಣ ಇನ್ನೂ ಕಡಿಮೆಯಾಗುತ್ತಿಲ್ಲ. ಆದ್ದರಿಂದ ವಿಸ್ತರಣೆಗೆ ನಮ್ಮ ಸಹಮತವೂ ಇದೆ. ಜನರೂ ಬೆಂಬಲ ನೀಡಬೇಕಾಗುತ್ತದೆ. ಈ ವಿಚಾರದಲ್ಲಿ ಸರ್ಕಾರಕ್ಕೆ ನಮ್ಮ ಪಕ್ಷ ಸಂಪೂರ್ಣ ಸಹಕಾರ ನೀಡುತ್ತದೆ‌ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending