Connect with us

ದಿನದ ಸುದ್ದಿ

ಜಿಡಿಪಿ ಕುಸಿದಿದೆ, ನಿರುದ್ಯೋಗ 45 ವರ್ಷಗಳ ದಾಖಲೆ ಮುರಿದಿದೆ, ಇದು ಯಾವ ಟ್ರಿಲಿಯನ್ ಡಾಲರ್ ಆರ್ಥಿಕತೆ? : ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯ ತರಾಟೆ

Published

on

ಸುದ್ದಿದಿನ, ಬೆಂಗಳೂರು : 15ನೇ ಹಣಕಾಸು ಆಯೋಗದ ವರದಿಯ ಪ್ರಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ರೂ.8,887 ಕೋಟಿ ಮತ್ತು ಜಿ.ಎಸ್.ಟಿ ಪರಿಹಾರ ರೂ.3,000 ಕೋಟಿ ಕಡಿತವಾಗಿದೆ. ಒಟ್ಟು ರೂ.11,887 ಕೋಟಿ ಕೇಂದ್ರದಿಂದ ನಮಗೆ ಬರಬೇಕಾದ ಪಾಲು ಕಡಿಮೆಯಾದ ಮೇಲೆ ಬಜೆಟ್ ಗಾತ್ರವೂ ಕಡಿಮೆಯಾಗಬೇಕಿತ್ತಲ್ಲವೇ? ಏಕೆ ಕಡಿಮೆಯಾಗಿಲ್ಲ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ಸಂಬಳ, ಪಿಂಚಣಿ, ಬಡ್ಡಿ ಪಾವತಿ ಒಳಗೊಂಡ ರಾಜ್ಯದ ಕಮಿಟೆಡ್ ವೆಚ್ಚ ಈಗಾಗಲೇ 88% ಇದೆ, ಈ ಸಾಲಿನಲ್ಲಿ ರಾಜ್ಯದ ತೆರಿಗೆ ಸಂಗ್ರಹದಲ್ಲೂ ರೂ.5000 ಕೋಟಿ ಕೊರತೆಯಾಗುವ ನಿರೀಕ್ಷೆಯಿದೆ. ಹೀಗಾದರೆ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಎಲ್ಲಿದೆ? ಇದೇ ಕಾರಣಕ್ಕೆ ನಾನು ಈ ಸರ್ಕಾರಕ್ಕೆ ದಾರಿದ್ರ್ಯ ಹಿಡಿದಿದೆ ಅಂದದ್ದು. ರಾಜ್ಯದ ತೆರಿಗೆ ಪಾಲು ಈ ವರ್ಷ ರೂ.39,806 ಕೋಟಿ ಬರಬೇಕಿತ್ತು, ಪರಿಷ್ಕರಣೆಯ ನಂತರ ರೂ.30,919 ಕೋಟಿಗೆ ಇಳಿದಿದೆ. ಮುಂದಿನ ವರ್ಷ ರೂ.28,591 ಕೋಟಿ, 2021-22 ರಲ್ಲಿ ರೂ.31,164 ಕೋಟಿ, 2022-23 ರಲ್ಲಿ ರೂ.33,964 ಕೋಟಿ ಹಾಗೂ 2023-24 ರಲ್ಲಿ ರೂ.37,026 ಕೋಟಿ ಆಗಲಿದೆ. ಅಂದರೆ ನಮ್ಮ‌ ಈಗಿನ ಪಾಲಿಗಿಂತ ಕಡಿಮೆ ಎಂದರು.

14ನೇ ಹಣಕಾಸು ಆಯೋಗದ ವರದಿ ಪ್ರಕಾರ 4.7% ಇದ್ದ ರಾಜ್ಯದ ತೆರಿಗೆ ಪಾಲು, 15ನೇ ಹಣಕಾಸು ಆಯೋಗದ ವರದಿಯಂತೆ 3.64% ಗೆ ಇಳಿಕೆಯಾಗಿದೆ. ಆದರೆ ಬಿಹಾರ ರಾಜ್ಯ 10%, ಉತ್ತರ ಪ್ರದೇಶ 17% ರಂತೆ ನಮಗಿಂತ ಹೆಚ್ಚು ತೆರಿಗೆ ಪಾಲು ಪಡೆಯಲಿವೆ. ಸಮರ್ಪಕವಾಗಿ ಆರ್ಥಿಕ ನಿರ್ವಹಣೆ ಮಾಡುವ ನಮ್ಮ ರಾಜ್ಯಕ್ಕೆ ಯಾಕೆ ಈ ಬರೆ? ಜಿಎಸ್‌ಡಿಪಿ ಯ 25% ಗಿಂತ ಕಡಿಮೆ ಸಾಲ ಇರಬೇಕು ಎಂಬ ನಿಯಮವಿದೆ. 2021-22 ನೇ ಸಾಲಿನಿಂದ ಕೇಂದ್ರದಿಂದ ಬರುವ ಜಿ.ಎಸ್.ಟಿ ಪರಿಹಾರವೂ ಸ್ಥಗಿತವಾಗಲಿದೆ, ಇದರಿಂದ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚು ಸಾಲ ಮಾಡಬೇಕಾದ ಪರಿಸ್ಥಿತಿ ಎದುರಾಗಲಿದೆ ಎಂದು ಹೇಳಿದರು.

15ನೇ ಹಣಕಾಸು ಆಯೋಗ ನಮ್ಮ ರಾಜ್ಯಕ್ಕೆ ರೂ.5495 ಕೋಟಿ ವಿಶೇಷ ಅನುದಾನ ಶಿಫಾರಸು ಮಾಡಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆ ಶಿಫಾರಸ್ಸನ್ನು ತಿರಸ್ಕರಿಸಿದ್ದಾರೆ. ನಮ್ಮ ಪ್ರತಿನಿಧಿಯಾಗಿ ರಾಜ್ಯಸಭೆಯಲ್ಲಿ ಕೂತಿರುವ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಈ ರೀತಿ ಅನ್ಯಾಯ ಮಾಡಬಹುದೇ? ವಿಶೇಷ ಅನುದಾನ ರೂ.5495 ಕೋಟಿ ಸಿಕ್ಕಿದ್ದರೆ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಎಷ್ಟೊಂದು ನೆರವಾಗುತ್ತಿತ್ತಲ್ಲವೇ? ನಾನು ರಾಜಕೀಯ ಮಾತಾಡುತ್ತಿಲ್ಲ, ನನ್ನ ನೋವು ಹಂಚಿಕೊಳ್ಳುತ್ತಿದ್ದೇನೆ. ಈ ಅನ್ಯಾಯದ ವಿರುದ್ದ ಪ್ರತಿಭಟಿಸುವುದು ಬೇಡವೇ? ಎಂದು ಕಿಡಿಕಾರಿದರು.

15ನೇ ಹಣಕಾಸು ಆಯೋಗ, ತೆರಿಗೆ ಹಂಚಿಕೆ ಮತ್ತು ಜಿಎಸ್‌ಟಿ ಪರಿಹಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟಿಸುವುದು ಬೇಡವೇ? ಬಿಜೆಪಿಯ 25 ಎಂಪಿಗಳಿದ್ದೀರಿ, ದೆಹಲಿಗೆ ಹೋಗಿ ಪ್ರಧಾನಿ ಭೇಟಿ ಮಾಡಿ, ಆಗಿರುವ ಅನ್ಯಾಯ ಹೇಳಿ, ನ್ಯಾಯ ಕೇಳಿ. ಪ್ರಧಾನಿ ಜೊತೆ ಮಾತಾಡಲು ನಿಮಗೆ ಮುಜುಗರವಾದರೆ ನನ್ನನ್ನು ಕರ್ಕೊಂಡು ಹೋಗಿ, ನಾನು ಮಾತಾಡ್ತೇನೆ. ಸರ್ವಪಕ್ಷಗಳ ನಿಯೋಗ ಹೋಗೋಣ. ಹಣಕಾಸು ಆಯೋಗ ಒಂದು ವರ್ಷಕ್ಕೆ ಮಾತ್ರ ಶಿಫಾರಸು ಮಾಡಿದ್ದು. ಅನ್ಯಾಯ ಸರಿಪಡಿಸಲು ಇನ್ನೂ ಅವಕಾಶ ಇದೆ ಎಂದು ನುಡಿದರು.

ಆರ್ಥಿಕ ಕುಸಿತ, ಸಾಮಾಜಿಕ ಸಾಮರಸ್ಯದ ನಾಶ ಮತ್ತು ಕರೋನಾ ವೈರಸ್‌ನಿಂದಾಗಿ ದೇಶ ಕಷ್ಟಕ್ಕೆ ಸಿಲುಕಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿರುವುದು ಇಂದಿನ ದೇಶದ ದುಸ್ಥಿತಿಯ ಸರಿಯಾದ ವಿಶ್ಲೇಷಣೆ. ಪ್ರಧಾನಿ ಮೋದಿಯವರು ಮಾತೆತ್ತಿದರೆ 5 ಲಕ್ಷ ಕೋಟಿ ಡಾಲರ್ (5 ಟ್ರಿಲಿಯನ್ ಡಾಲರ್) ಆರ್ಥಿಕತೆ ಬಗ್ಗೆ ಮಾತಾಡುತ್ತಾರೆ. ಜಿಡಿಪಿ ಶೇಕಡಾ 4.5ಕ್ಕೆ ಕುಸಿದಿದೆ, ನಿರುದ್ಯೋಗ 45 ವರ್ಷಗಳ ದಾಖಲೆ ಮುರಿದಿದೆ, ಉದ್ಯಮಗಳು ಮುಚ್ಚುತ್ತಿವೆ, ಬ್ಯಾಂಕುಗಳು ದಿವಾಳಿಯಾಗುತ್ತಿವೆ. ಇದು ಯಾವ ಟ್ರಿಲಿಯನ್ ಡಾಲರ್ ಆರ್ಥಿಕತೆ?‌ಎಂದು ಪ್ರಶ್ನಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending