ರಾಜಕೀಯ
ನಾಡಿನ ಹೆಮ್ಮೆಯ ಪುತ್ರ ಯೋಧ ಗುರು ಕುಟುಂಬದ ಶೋಕದಲ್ಲಿ ನಾವೆಲ್ಲ ಭಾಗಿಯಾಗಿದ್ದೇವೆ : ಸಿದ್ದರಾಮಯ್ಯ ನಮನ

ಸುದ್ದಿದಿನ ಬೆಂಗಳೂರು : ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೀಡಾಗಿ ವೀರಮರಣವನ್ನಪ್ಪಿದ ನಮ್ಮ ನಾಡಿನ ಹೆಮ್ಮೆಯ ಪುತ್ರ ಎಚ್.ಗುರು ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ. ಮಂಡ್ಯದ ಗುಡಿಗೆರೆ ನಿವಾಸಿಯಾದ ವೀರಯೋಧನ ಕುಟುಂಬದ ಶೋಕದಲ್ಲಿ ನಾವೆಲ್ಲ ಭಾಗಿಯಾಗಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮನ ಸಲ್ಲಿಸಿದ್ದಾರೆ.
ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೀಡಾಗಿ ವೀರಮರಣವನ್ನಪ್ಪಿದ ನಮ್ಮ ನಾಡಿನ ಹೆಮ್ಮೆಯ ಪುತ್ರ ಎಚ್.ಗುರು ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ. ಮಂಡ್ಯದ ಗುಡಿಗೆರೆ ನಿವಾಸಿಯಾದ ವೀರಯೋಧನ ಕುಟುಂಬದ ಶೋಕದಲ್ಲಿ ನಾವೆಲ್ಲ ಭಾಗಿಯಾಗಿದ್ದೇವೆ.#Pulwama @INCKarnataka
— Siddaramaiah (@siddaramaiah) February 15, 2019
May the soul of our proud son of our soil, H Guru who sacrificed his life in the unfortunate terror attack in Pulwama, rest in peace. My deepest condolences to his family members & well-wishers.#Pulwama#RIPBraveHearts pic.twitter.com/6wtj1Cd5Ed
— Siddaramaiah (@siddaramaiah) February 15, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401

ರಾಜಕೀಯ
ಮಸ್ಕಿ ಬಿಜೆಪಿ ಅಭ್ಯರ್ಥಿ ಪರ ಇಂದು ಸಿಂಗರ್ ಮಂಗ್ಲಿ ಪ್ರಚಾರ

ಸುದ್ದಿದಿನ,ರಾಯಚೂರು: ರಾಬರ್ಟ್ ಸಿನೆಮಾ ‘ಕಣ್ಣೆ ಅದಿರಿಂದಿ’ ಹಾಡಿನ ಮೂಲಕ ಭಾರೀ ಸದ್ದು ಮಾಡಿದ ಗಾಯಕಿ ಮಂಗ್ಲಿ ಮಸ್ಕಿ ಉಪ ಚುನಾವಣಾ ಅಖಾಡದಲ್ಲಿ ಮಂಗಳವಾರ ಬಿಜೆಪಿ ಪರವಾಗಿ ಪ್ರಚಾರ ಮಾಡಲಿದ್ದಾರೆ.
ಬಿಜೆಪಿಯು ಗಾಯಕಿ ಮಂಗ್ಲಿ ಅವರನ್ನ ಪ್ರಚಾರಕ್ಕೆ ಆಹ್ವಾನಿಸಿದ್ದು, ಇಂದು ಮಸ್ಕಿ ಕೆಲ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಮತಯಾಚಿಸಲಿದ್ದಾರೆ. ಆದರೆ ಚುನಾವಣಾ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.
ಇದೇ 17 ರಂದು ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೂರು ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಗೆಲುವಿಗೆ ಭರ್ಜರಿ ರಣತಂತ್ರವನ್ನು ಹೂಡಿದ್ದಾರೆ.
ಇದನ್ನೂ ಓದಿ | ಕವಿತೆ | ಅವಳು ಮಸಣ ಕಾಯುವ ಪಾರ್ವತಿ..! -ಪದ್ಮಶ್ರೀ ಗೋವಿಂದರಾಜು,ಭದ್ರಾವತಿ
ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದ ಸಿಎಂ ಯಡಿಯೂರಪ್ಪ ಅವರು, ಕಾಂಗ್ರೆಸ್ ನೆಲಸವಾಗುವುದು ನಿಶ್ಚಿತ. 3 ಕ್ಷೇತ್ರಗಳಲ್ಲೂ ದೊಡ್ಡ ಮತಗಳ ಅಂತರದಲ್ಲಿ ನಾವೇ ಗೆಲ್ಲುತ್ತೇವೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು. ಇತ್ತ ಮೂರು ಪಕ್ಷಗಳ ಮತಯಾಚನೆಯ ಕಾವು ಏರುತ್ತಲೇ ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಿ.ಜೆ.ಪಿ ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ ಮಾಡಲಿದೆ : ಸಿದ್ದರಾಮಯ್ಯ ಆಕ್ರೋಶ

ಸುದ್ದಿದಿನ, ಬೆಳಗಾವಿ: ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಳಗಾವಿ ಲೋಕಸಭೆ ಕ್ಷೇತ್ರದ ಸವದತ್ತಿಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರ ಪರ ಮತಪ್ರಚಾರ ನಡೆಸಿದ ಅವರು ಮಾತನಾಡಿದರು.
ಕೇಂದ್ರದ ರೈತ ಶತ್ರು ನರೇಂದ್ರ ಮೋದಿ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. 60 ರಷ್ಟು ಹೆಚ್ಚಿಸಿದೆ. ಡಿ.ಎ.ಪಿ ಗೊಬ್ಬರ ಏಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗುತ್ತಿದೆ. ಇದುವರೆಗೆ 2400 ರೂಪಾಯಿಗಳಿದ್ದ ಬೆಲೆ ಈಗ 3800 ರೂ ಗಳಾಗುತ್ತಿದೆ ಎಂದರು.
ಸಾರಜನಕ, ರಂಜಕ ಮತ್ತು ಪೊಟ್ಯಾಷ್ಗಳ ಮೇಲಿನ ಬೆಲೆ ಕ್ವಿಂಟಾಲ್ ಗೆ ರೂ.1250 ಹೆಚ್ಚಿಸಿದ್ದಾರೆ. ರೂ.2350 ಗೆ ಸಿಗುತ್ತಿದ್ದ ಗೊಬ್ಬರ ಈಗ ರೂ.3600ರಷ್ಟಾಗಿದ್ದು ರೈತರು ನಿಸ್ಸಂಶಯವಾಗಿ ದಿವಾಳಿಯಾಗಲಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಜಾಸ್ತಿಯಾಗಿದೆ, ಅದಕ್ಕೆ ಬೆಲೆ ಜಾಸ್ತಿ ಮಾಡಿದ್ದೇವೆ ಎಂಬ ಕೇಂದ್ರ ಸರ್ಕಾರದ ಸಬೂಬು ಶುದ್ಧ ಸುಳ್ಳು. ಕಳೆದ ವರ್ಷ ರೂ.1,33,947 ಕೋಟಿ ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು. ಈಗ ಅದು ರೂ.79,530 ಕೋಟಿಗೆ ಇಳಿಸಿದ್ದಾರೆ. ಆದ್ದರಿಂದಲೇ ಏಪ್ರಿಲ್ 1 ರಿಂದ ಬೆಲೆ ಹೆಚ್ಚಾಗಿದೆ.
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಬಿ.ಜೆ.ಪಿ ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ ಮಾಡಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ @BJP4Karnataka ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ @BJP4India ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ ಮಾಡಲಿದೆ.
5/5 #ಬೆಲೆಯೇರಿಕೆ— Siddaramaiah (@siddaramaiah) April 9, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಸಾರಿಗೆ ನೌಕರರಿಗೆ ವೇತನ ಭತ್ಯೆ ನೀಡಲು ಸಾಧ್ಯವಿಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ

ಸುದ್ದಿದಿನ, ಬೆಂಗಳೂರು : ’ರಾಜ್ಯದ ಒಟ್ಟು ಆದಾಯದ ಶೇ. 85 ರಷ್ಟು, ವೇತನ, ಭತ್ಯೆ, ಪಿಂಚಣಿ ಮತ್ತಿತರ ಯೋಜನೇತರ ವೆಚ್ಚಗಳಿಗೆ ವ್ಯಯವಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅಲ್ಪ ಆದಾಯ ಲಭ್ಯವಿರುತ್ತದೆ ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಲಿಂಕ್ ಮೇಲೆ ಕ್ಲಿಕ್ ಮಾಡಿ : ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ : ಯಡಿಯೂರಪ್ಪ ಫೇಸ್ ಬುಕ್ ಪೋಸ್ಟ್
ಬಜೆಟ್ ಅಧಿವೇಶನದಲ್ಲಿ ವಿಪಕ್ಷ ನಾಯಕರು ಪ್ರಸ್ತಾಪಿಸಿದ್ದಂತೆ, ಯೋಜನೇತರ ವೆಚ್ಚ ಈಗಾಗಲೇ ಅಧಿಕವಾಗಿದೆ. ಪ್ರಸಕ್ತ ಸಂದರ್ಭಗಳಲ್ಲಿ ಮತ್ತಷ್ಟು ಹೆಚ್ಚು ಅನುದಾನವನ್ನು ಯೋಜನೇತರ ವೆಚ್ಚಗಳಿಗೆ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.
ಜೊತೆಗೆ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಸಾರಿಗೆ ನೌಕರರ ಹಿತರಕ್ಷಣೆ ದೃಷ್ಟಿಯಿಂದ ಅವರಿಗೆ ವೇತನ ನೀಡಲು, ಸರ್ಕಾರ 2,300 ಕೋಟಿ ರೂ. ಗಳ ಅನುದಾನ ನೀಡಿದೆ. ಸವಾಲಿನ ಸಂದರ್ಭಗಳಲ್ಲಿಯೂ ಸಹ ಸಾರಿಗೆ ಸಂಸ್ಥೆಗಳ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಸರ್ಕಾರ ಈಗಾಗಲೇ ಈಡೇರಿಸಿದ್ದು, 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಭತ್ಯೆ ನೀಡಲು ಸಾಧ್ಯವಿರುವುದಿಲ್ಲ. ಆದ್ದರಿಂದ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ’. ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಭಾವ ಭೈರಾಗಿ7 days ago
ಕವಿತೆ | ಅವಳು ಮಸಣ ಕಾಯುವ ಪಾರ್ವತಿ..!
-
ನೆಲದನಿ6 days ago
ನಮ್ಮ ಶಿವಮೊಗ್ಗ – ನಮ್ಮ ಹೆಮ್ಮೆ: ಕುವೆಂಪು
-
ದಿನದ ಸುದ್ದಿ6 days ago
ಕಾಡಿನಿಂದ ನಾಡಿಗೆ ಬಂದ ಲೋರಿಸ್ ‘ಪಾಪ’..!
-
ಬಹಿರಂಗ6 days ago
ಜ್ಯೋತಿರಾವ್ ಫುಲೆ : ವಸಾಹತು ಮತ್ತು ಮೇಲ್ವರ್ಗಗಳ ಪ್ರಾಬಲ್ಯವನ್ನು ಪ್ರಶ್ನಿಸಿಸುವ ನೆಲೆಗಳು
-
ನಿತ್ಯ ಭವಿಷ್ಯ6 days ago
ಈ ರಾಶಿಯವರಿಗೆ ಗುಡ್ ನ್ಯೂಸ್ ಬಯಸಿದ್ದೆಲ್ಲ ಸಿಗುವುದು ಮತ್ತು ಮುಟ್ಟಿದ್ದೆಲ್ಲ ಪ್ಲಾಟಿನಂ ಗೋಲ್ಡ್! ಸೋಮವಾರ ರಾಶಿ ಭವಿಷ್ಯ-ಏಪ್ರಿಲ್-12,2021
-
ರಾಜಕೀಯ6 days ago
ಮಸ್ಕಿ ಬಿಜೆಪಿ ಅಭ್ಯರ್ಥಿ ಪರ ಇಂದು ಸಿಂಗರ್ ಮಂಗ್ಲಿ ಪ್ರಚಾರ
-
ನಿತ್ಯ ಭವಿಷ್ಯ5 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ದಿನದ ಸುದ್ದಿ5 days ago
ಸಾರಿಗೆ ಮುಷ್ಕರ –ಕಾರ್ಮಿಕರ ಬದುಕು ಘನತೆಯ ಪ್ರಶ್ನೆ