ದಿನದ ಸುದ್ದಿ
ಮರಿ ಕೋಗಿಲೆ ‘ಜೀವಿತಾ’ಳ ಕುಹೂ ಕುಹೂ!
“ಹಾಡು ಎಂದ ಕೂಡಲೇ ಹಾಡದು ಯಾವ ಕೋಗಿಲೆ” ಅಂತ ನಾದ ಬ್ರಹ್ಮ ಹಂಸಲೇಖ ಹೇಳ್ತಾರೆ. ಆದರೆ ಈ ಮರಿ ಕೋಗಿಲೆಯೊಂದು ಹಾಡು ಎಂದರೆ ಸಾಕು ಪರಮೋತ್ಸಾಹದೊಂದಿಗೆ ಒಂದರ ಮೇಲೊಂದರಂತೆ ಹಾಡಲು ಶುರು ಮಾಡುತ್ತೆ. ಹಾಡು ಕೇಳಿದವರಂತೂ ‘ನಿಲ್ಲಿಸು’ ಎಂಬ ಮಾತೇ ಮರೆತು ತಲೆತೂಗಿ, ಮುತ್ತಿಕ್ಕಿಸಿಕೊಂಡು ಹಾರೈಸಿಕೊಂಡುಬಿಡುತ್ತೆ ಈ ಮರಿ ಕೋಗಿಲೆ.
ಅಂದಹಾಗೆ ಯಾರೀ ಮರಿ ಕೋಗಿಲೆ ಎಂಬ ಕುತೂಹಲದ ಪ್ರಶ್ನೆ ನಿಮ್ಮಲ್ಲೀಗ ಮೂಡಿರ ಬಹುದು. ಅವರೇ ಬೆಣ್ಣೆ ನಗರಿಯ ಬೆಣ್ಣೆಯಂತಹ ದಾವಣಗೆರೆಯ ಜೀವಿತಾ ಮೌನೇಶ್.
ಆಡಿಕೊಂಡು ತುಂಟಾಟ ಮಾಡಿಕೊಂಡು, ಅಪ್ಪ ಅಮ್ಮಂದಿರಿಗೆ ಪ್ರೀತಿಯಿಂದ ಕಾಡುತ್ತಾ ಕುಣಿಯುವ ಈ ಚಿನಕುರುಳಿ ಮರಿಕೋಗಿಲೆಗಿನ್ನೂ ವಯಸ್ಸು ಐದು. ಇಲ್ಲಿನ ತರಳಬಾಳು ಶಾಲೆಯಲ್ಲಿ ಯುಕೆಜಿ ಓದುತ್ತಿದ್ದಾಳೆ.ಆಡುವುದರ ಜೊತೆಗೆ ಹಾಡುವ ಪ್ರತಿಭೆಯಾಗಿ, ಭವಿಷ್ಯದ ಭರವಸೆಯ ಗಾಯಕಿಯಾಗುವ ಎಲ್ಲ ಲಕ್ಷಣಗಳೂ ಈ ಮರಿ ಕೋಗಿಲೆಗಿವೆ.
“ ಈಕೆ ತನ್ನ ಎರಡು-ಮೂರನೇ ವಯಸ್ಸಿನಲ್ಲೇ ನಾವು ಹೇಳಿಕೊಡುವ, ಟಿವಿ, ಮೊಬೈಲ್ಗಳಲ್ಲಿ ಕೇಳುವ ಹಾಡುಗಳನ್ನು ತನಗಿಷ್ಟ ಬಂದಂತೆ ಮುದ್ದಾಗಿ ಹಾಡುವ ಗೀಳೊಂದನ್ನು ಬೆಳೆಸಿಕೊಂಡಳು. ಅದನ್ನು ಗುರುತಿಸಿ ನಾವು ಸಂಗೀತದ ಜಾಡಿನಲ್ಲಿಯೇ ಬೆಳೆಸುವ ಪ್ರಯತ್ನ ಮಾಡುತ್ತಿದ್ದೇವೆ.” ಎಂಬುದು ಜೀವಿತಾ ಮೌನೇಶ ಅವರ ತಾಯಿ ಶ್ವೇತಾ ಮೌನೇಶ್ ಹಾಗೂ ತಂದೆ ಡಾ.ಮೌನೇಶ್ ಆಚಾರ್ ಅವರ ಮನದ ಮಾತು.
ಈ ಮರಿಕೋಗಿಲೆಗೆ ಶಾಸ್ರ್ತೀಯ ಸಂಗೀತದ ಅಭ್ಯಾಸ ಬಹುಮುಖ್ಯವಾದ್ದರಿಂದ ‘ಮಾನಸ’ ಎಂಬ ಸಂಗೀತ ಗುರುಗಳಿಂದ ಕರ್ನಾಟಕ ಸಂಗೀತದ ಪಾಠ ಈಗಾಗಲೇ ಶುರುವಾಗಿದ್ದು, ಶ್ರದ್ಧೆಯಿಂದ ದಿನಕ್ಕೊಂದು ಗಂಟೆ ಅಭ್ಯಾಸ ಮಾಡುತ್ತಾಳಂತೆ ಜೀವಿತಾ.
ಜೀ ಟಿವಿಯ ಸರಿಗಮಪ ಲಿಟ್ಲ್ ಚಾಂಪ್ಸ್ 14 ನೇ ಸೀಸನ್ ನಲ್ಲಿ ಸಾವಿರಾರು ಅಭ್ಯರ್ಥಿಗಳೊಟ್ಟಿಗೆ ಸ್ಪರ್ಧಿಸಿ, ಟಾಪ್ 30ರವರೆಗೆ ಟಾಕು ಟೀಕಾಗಿ ಪ್ರವೇಶ ಮಾಡಿದ್ದಳು ಈ ಮರಿ ಕೋಗಿಲೆ ಜೀವಿತಾ ಮೌನೇಶ್.
ಇನ್ನೇನು ಸ್ಪರ್ಧೆ ಆಯ್ಕೆಯಾಗಬೇಕು ಅನ್ನುವಷ್ಟರಲ್ಲಿ ದಿಢೀರನೆ ಕಾಡಿದ ಜ್ವರದಿಂದ ಕರ್ನಾಟಕದ ಮರಿಕೋಗಿಲೆ ಎಂದು ಜನರ ಬಾಯ್ಮಾತಾಗುವಲ್ಲಿ ಸುವರ್ಣ ಅವಕಾಶವೊಂದು ತಪ್ಪಿ ಹೋಯಿತು. ಈ ಮರಿಕೋಗಿಲೆಯು ‘ಕನ್ನಡವೇ ನಮ್ಮಮ್ಮ’, ‘ಅಮ್ಮಾನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ’ ಹೇಳುವ ಹಾಡುಗಳಂತೂ ಕೇಳುಗರ ಕೈಕಾಲುಗಳು ತಮಗರಿವಿಲ್ಲದೇ ತಾಳ ಹಾಕಲು ಶುರುಮಾಡುತ್ತವೆ. ಅಂತಹದೊಂದು ತಾಕತ್ತು ಈ ಮರಿ ಕೋಗಿಲೆ ಜೀವಿತಾಳ ಧ್ವನಿಯಲ್ಲಿದೆ.
ದಾವಣಗೆರೆಯಲ್ಲಿ ನಡೆಯುವ ಸಂಗೀತ ಕಾರ್ಯಕ್ರಮಗಳಲ್ಲಿ ಈ ಮರಿ ಕೋಗಿಲೆ ಭಾಗವಹಿಸಿ ಹಾಡಲಿಲ್ಲವೆಂದರೆ ಆ ಕಾರ್ಯಕ್ರಮ ಅಪೂರ್ಣವೇ ಸರಿ. ನಗರದಲ್ಲಿ ಸುರೇಶ್ ಬಾಬು ಎಂಬುವವರು ಆಯೋಜಿಸಿದ್ದ, ‘ಕುಹೂ ಕುಹೂ’ ಕ್ಯಾರಿಯೋಕೆ ಸ್ಪರ್ಧೆಯಲ್ಲಿ ಮಧುರವಾಗಿ ಹಾಡಿ ಎರಡನೇ ಬಹುಮಾನಗಿಟ್ಟಿಸಿದ್ದಳು. ಜೀ ಟಿವಿ ಆಯೀಜಿಸಿದ್ದ ‘ದಸರಾ ವಿಶೇಷ’ ಕಾರ್ಯಕ್ರಮದಲ್ಲಿ ಈ ಮರಿ ಬೊಂಬೆ “ ಬೊಂಬೆ ಹೇಳುತೈತೆ” ಎಂಬ ಹಾಡೇಳಿ ಎದುರಿದ್ದವರನ್ನು ವೇದಿಕೆಮೇಲಿದ್ದವರನ್ನು ಮಂತ್ರ ಮುಗ್ಧಗೊಳಿಸಿ ಅವರೆನ್ನೆಲ್ಲಾ ಗಾನಲೋಕಕ್ಕೆ ಕರೆದ್ಯೊಯ್ದಿದ್ದಳು ಎಂದು ಜೀವಿತಾ ಆಭಿಮಾನಿಯೊಬ್ಬರು ಹೇಳುತ್ತಾರೆ.
ಹಾಗೇ, ಶಂಕರ ಹಾಗೂ ಆಯುಶ್ ಟಿವಿಯ ‘ಪ್ಲಾಟ್ ಫಾರಂ ಟು ಪರ್ಪಾರ್ಮ್’ ಎಂಬ ಕಾರ್ಯಕ್ರಮದಲ್ಲಿ ‘ಬಾನಿಗೊಂದು ಎಲ್ಲೆ ಎಲ್ಲಿದೆ’ ಹಾಡ ಹೇಳಿ ರಂಜಿಸಿದ್ದಾಳೆ. ನಂತರ ಚಿತ್ರದುರ್ಗದಲ್ಲಿ ನಡೆದಹಲವು ಸಂಗೀತ ಕಾರ್ಯಕ್ರಮಗಳಲ್ಲಿ ಮರಿ ಕೋಗಿಲೆ ಭಾಗವಹಿಸಿದ್ದಾಳೆ. ಅವೆಂದರೆ, ಪಿ.ಬಿ. ಶ್ರೀವಾಸ್ ಹಿಟ್ಸ್, ಕನ್ನಡ ರಾಜ್ಯೋತ್ಸವದ ಹಲವು ಕಾರ್ಯಕ್ರಮಗಳು, ಸಾಹಿತಿ ಚಂಪಾ ಹಾಗೂ ಮುರುಘಾ ಶರಣರ ಎದುರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಅವರ ಪ್ರೀತಿಯ ಮೆಚ್ಚುಗೆ ಪಡೆದವಳಾಗಿದ್ದಾಳೆ ಈ ಮರಿ ಕೋಗಿಲೆ ಜೀವಿತಾ.
ಒಟ್ಟಾರೆ ದಾವಣಗೆರೆಯ ಈ ಮರಿಕೋಗಿಲೆ ಜೀವಿತಾ ಮೌನೇಶ್ ಹಾಡಿಗೊಂದು ಹಾಡ ಹೇಳಿ, ಶೃತಿ, ತಾಳದೊಂದಿಗೆ ಬೆರೆತು ಭಾರತದ ಬಹುದೊಡ್ಡ ಗಾಯಕಿಯಾಗಲಿ ಎಂಬುದೇ ಈ ಕ್ಷಣದ ಅಂಬೋಣ.
ಜೀವಿತಾಳ ಹಾಡು ಮತ್ತು ನಟನೆಯ ವೀಡಿಯೋಗಳನ್ನು ಯೂಟ್ಯೂಬಿನಲ್ಲಿ ನೋಡಲು | jeevitha mounesh ಎಂದು type ಮಾಡಿ.
ಇದುವರೆಗೆ ಜೀವಿತಾ ನೀಡಿರುವ ಕಾರ್ಯಕ್ರಮಗಳು
- Zee Kannadaದಲ್ಲಿ ಬರುವ Sa Re Ga Ma Pa Season – 14 ರಲ್ಲಿ ದಾವಣಗೆರೆಯಲ್ಲಿ ನಡೆದ Audition ನಲ್ಲಿ ಸುಮಾರು 250 ಸ್ಪರ್ದಿಗಳೊಂದಿಗೆ ಭಾಗವಹಿಸಿ select ಆಗಿ, ಕರ್ನಾಟಕದಾದ್ಯಂತ 2.5 ಲಕ್ಷ ಸ್ಪರ್ದಿಗಳಲ್ಲಿ Top30 ವರೆಗೆ select ಆಗಿದ್ದರು.
- 16.6.2017 ರಲ್ಲಿ ನಡೆದ ಜಿಲ್ಲಾ ಮಟ್ಟದ “ಕುಹೂ ಕುಹೂ ದಾವಣಗೆರೆ ಕೋಗಿಲೆ” ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದಿರುತ್ತಾರೆ.
- 2.3.2018 ರಂದು ನಡೆದ ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 61ನೇ ಸ್ಮರಣೋತ್ಸವ 2018 ಹಾಗೂ ಶರಣ ಸಂಸ್ಕøತಿ ಉತ್ಸವದಲ್ಲಿ ಹಾಡಿ, ಡಾ|| ಶ್ರೀ ಶಿವಮೂರ್ತಿ ಮುರಘಾಶರಣರಿಂದ ಆಶಿರ್ವಾದ ಮತ್ತು ಗೌರವ ಸಮರ್ಪಣೆಯನ್ನು ಸ್ವೀಕರಿಸಿರುತ್ತಾರೆ.
- 20.11.2017 ರಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ದಾವಣಗೆರೆ ಇವರು ನಡೆಸಿದ “ಚಿಗುರು” ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಭಾವಗೀತೆ ಹಾಗೂ ಚಿತ್ರಗೀತೆ ಕಾರ್ಯಕ್ರಮ ನೀಡಿರುತ್ತಾರೆ.
- 1.12.2017 ರಂದು ದಾವಣಗೆರೆ ಜಿಲ್ಲೆ ಹೆಬ್ಬಾಳ ಮಠದಲ್ಲಿ ನಡೆದ 330ನೇ ಕಾರ್ತಿಕ ಮಹೋತ್ಸವದಲ್ಲಿ ವಚನ, ಭಾವಗೀತೆ ಹಾಗು ಚಿತ್ರಗೀತೆ ಕಾರ್ಯಕ್ರಮ ನೀಡಿರುತ್ತಾರೆ.
- 28.11.2017 ರಂದು ದಾವಣಗೆರೆ ಮಹಾನಗರ ಪಾಲಿಕೆ ಇವರು ನಡೆಸಿದ 62ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಚಿತ್ರಗೀತೆ ಹಾಡಿರುತ್ತಾರೆ.
- 12.8.2017 ರಂದು ಶಂಕರ ಹಾಗು ಆಯುಷ್ ಟಿವಿ ಯವರು ನಡೆಸಿದ Platform to Perform ನಲ್ಲಿ ಭಾಗವಹಿಸಿ ಚಿತ್ರಗೀತೆ ಹಾಡಿರುತ್ತಾರೆ.
- 21.9.2017 ರಂದು Zee Kannada ನಡೆಸಿದ ದಸರ ಪ್ರಯುಕ್ತ ವಿಶೇಷ ಕಾರ್ಯಕ್ರಮದಲ್ಲಿ ಚಿತ್ರಗೀತೆ ಹಾಡಿರುತ್ತಾರೆ.
- 2.2.2018 ರಂದು ವನಿತಾ ಸಮಾಜ ಪ್ರೇರಣಾ ರವರು ನಡೆಸಿದ ಕಾರ್ಯಕ್ರಮದಲ್ಲಿ ಚಿತ್ರಗೀತೆಗಳನ್ನು ಹಾಡಿರುತ್ತಾರೆ.
- 7.1.2018 ರಂದು “Davangere Expo 2018” ರಲ್ಲಿ ಚಿತ್ರಗೀತೆಗಳನ್ನು ಹಾಡಿರುತ್ತಾರೆ.
- 21.1.2018 ರಲ್ಲಿ Vasavi Cultural Academy, Chitradurga ಇವರು ಎರ್ಪಡಿಸಿದ ಪಿ.ಬಿ. ಶ್ರಿನಿವಾಸ್ ಹಿಟ್ಸ್ ಅಲ್ಲಿ ಹಾಡಿ ಜನರ ಮೆಚ್ಚುಗೆಯನ್ನ ಪಡೆದಿರುತ್ತಾರೆ.
- 28.12.2017 ರಲ್ಲಿ ದಾವಣಗೆರೆಯಲ್ಲಿ ಸಿ.ಅಶ್ವತ್ ಅವರ ಗೌರವಾರ್ಪಣೆ ಕಾರ್ಯಕ್ರಮ ಗುರುನಮನ ದಲ್ಲಿ ಭಾಗವಹಿಸಿದ ಅತೀ ಕಿರಿಯ ಗಾಯಕಿಯಾಗಿರುತ್ತಾರೆ.
- 26.11.2017 ರಂದು GMIT ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ “ನಂದಿತ” ರವರೊಂದಿಗೆ ಸ್ಟೆಜ್ ಶೇರ್ ಮಾಡಿ ಚಿತ್ರಗೀತೆಯನ್ನು ಹಾಡಿ ಅವರ ಮೆಚ್ಚುಗೆ ಪಡೆದಿರುತ್ತಾರೆ.
- ಶಾಲೆಯಲ್ಲಿ ನಡೆಯುವ ಎಲ್ಲಾ ಸಿಂಗಿಂಗ್ Competition ನಲ್ಲಿ ಪ್ರತೀ ಬಾರಿಯು ಮೊದಲ ಬಹುಮಾನ ಗಳಿಸಿರುತ್ತಾರೆ.
- 28.12.2016 ರಲ್ಲಿ ದಾವಣಗೆರೆಯಲ್ಲಿ ಸಿ.ಅಶ್ವತ್ ಅವರ ಗೌರವಾರ್ಪಣೆ ಕಾರ್ಯಕ್ರಮ ಗುರುನಮನ ದಲ್ಲಿ ಭಾಗವಹಿಸಿದ ಅತೀ ಕಿರಿಯ ಗಾಯಕಿಯಾಗಿರುತ್ತಾರೆ.
- ಇವರು ಹಾಡಿರುವ ಗೀತೆಗಳು facebook ನಲ್ಲಿ 1.7 ಸಾವಿರಕ್ಕೂ ಹೆಚ್ಚು view ಗಳು ಹಾಗು ಮೆಚ್ಚುಗೆಗಳು ಸಿಕ್ಕಿವೆ.
ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ |9986715401
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243