ದಿನದ ಸುದ್ದಿ
ಅಂಚೆ ಇಲಾಖೆಯಿಂದ ವಿಶೇಷ ಚಿತ್ರಾತ್ಮಕ ಮುದ್ರೆ ಬಿಡುಗಡೆ
ಸುದ್ದಿದಿನ,ದಾವಣಗೆರೆ : ಭಾರತೀಯ ಅಂಚೆ ಇಲಾಖೆಯು ಜೂ.21 ರಂದು ವಿಶ್ವ ಯೋಗ ದಿನಾಚರಣೆ ಅಂಗವಾಗಿ ಪ್ರಧಾನ ಅಂಚೆ ಕಚೇರಿಗಳಾದ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಸ್ವೀಕೃತವಾಗುವ ಹಾಗೂ ಬಟವಾಡೆಯಾಗುವ ಎಲ್ಲಾ ಪತ್ರಗಳಿಗೆ ವಿಶೇಷ ಚಿತ್ರಾತ್ಮಕ ಮುದ್ರೆ ಒತ್ತಲಾಗುವುದು. ಚಿತ್ರದುರ್ಗ ಮತ್ತು ದಾವಣಗೆರೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಚೆ ಚೀಟಿ ಸಂಗ್ರಹಿಸುವ ಹವ್ಯಾಸಿಗಳು ಮತ್ತು ವಿದ್ಯಾರ್ಥಿಗಳು ಹಾಗೂ ಆಸಕ್ತ ನಾಗರೀಕರು ಇದರ ಸದುಪಯೋಗ ಪಡೆದುಕೊಳ್ಳಬಹುದು.
ಚಿತ್ರದುರ್ಗ ಮತ್ತು ದಾವಣಗೆರೆ ಪ್ರಧಾನ ಅಂಚೆ ಕಚೇರಿಯಲ್ಲಿ ಈ ವಿಶೇಷ ಚಿತ್ರಾತ್ಮಕ ಮುದ್ರೆಯನ್ನು ಜೂ.21 ರಂದು ಕಾಯ್ದಿರಿಸಲಾಗಿದ್ದು, ವಿಶೇಷ ಚಿತ್ರಾತ್ಮಕ ಮುದ್ರೆ ಅಂತರಾಷ್ಟ್ರೀಯ ಯೋಗ ದಿನದಂದು ಚಿತ್ರಾತ್ಮಕ ವಿನ್ಯಾಸದೊಂದಿಗೆ ಬಿಡುಗಡೆಗೊಳ್ಳಲಿದೆ. ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ವಿಶೇಷ ಚಿತ್ರಾತ್ಮಕ ಮುದ್ರೆ ರೂಪಗೊಳಿಸಲಾಗುವುದರಿಂದ ಇಂತಹ ರದ್ದತಿಗಳು ಮೌಲ್ಯಯುತ ಸಂಗ್ರಹಣೆಗಳು ಮತ್ತು ಸಾಮಾನ್ಯವಾಗಿ ಅಂಚೆ ಚೀಟಿಗಳ ಸಂಗ್ರಹದ ವಿಷಯಗಳಾಗಿವೆ.
ಇದನ್ನೂ ಓದಿ | ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಇತ್ತೀಚಿನ ವರ್ಷಗಳಲ್ಲಿ ಸ್ಟಾಂಪ್ ಸಂಗ್ರಹದ ಉತ್ಸಾಹವು ಕುಸಿತ ಕಂಡಿದೆ. ಹಾಗಾಗಿ ಈ ಹವ್ಯಾಸ ಅಥವಾ ಕಲೆಯನ್ನು ಪುನರುಜ್ಜೀವನಗೊಳಿಸಲು, ಭಾರತೀಯ ಅಂಚೆ ಇಲಾಖೆಯು ಅಂಚೆ ಚೀಟಿಗಳ ಸಂಗ್ರಹವಾಗಿ ರೂ.200 ಠೇವಣಿ ಖಾತೆಯನ್ನು ತೆರೆಯುವ ಮೂಲಕ ಗೊತ್ತುಪಡಿಸಿದ ಪ್ರಧಾನ ಅಂಚೆ ಕಚೇರಿಗಳಲ್ಲಿ ಅಂಚೆ ಚೀಟಿಗಳು ಮತ್ತು ವಿಶೇಷ ಕವರ್ಗಳನ್ನು ಆಸಕ್ತರು ಪಡೆಯಬಹುದಾಗಿದೆ.
ಈ ವರ್ಷದ ಯೋಗ ದಿನಾಚರಣೆಯನ್ನು ಯೋಗದೊಂದಿಗೆ ಮನೆಯಲ್ಲಿರಿ ಎಂಬ ಘೋಷ ವಾಕ್ಯವನ್ನು ಪ್ರಚಾರ ಮಾಡುತ್ತಿದೆ. ದೇಶವು 2ನೇ ಅಲೆಯಿಂದ ಸಹಜ ಸ್ಥಿತಿಗೆ ಮರಳುತ್ತಿದ್ದು, 800 ಕ್ಕೂ ಹೆಚ್ಚು ಪ್ರಧಾನ ಅಂಚೆ ಕಚೇರಿಗಳಲ್ಲಿ ಜೂ.21 ರಂದು ವಿಶೇಷ ಚಿತ್ರಾತ್ಮಕ ಮುದ್ರೆಯನ್ನು ಬಿಡುಗಡೆಗೊಳಿಸುವ ಮೂಲಕ ಅಂಚೆಚೀಟಿಗಳ ಸಂಗ್ರಹ ಮಾಡುವ ಹವ್ಯಾಸವನ್ನು ಮತ್ತೆ ಹುರಿದುಂಬಿಸುವ ಕಾರ್ಯ ಮಾಡುತ್ತಿವೆ ಎಂದು ಅಂಚೆ ಅಧೀಕ್ಷಕ ಓ.ವಿರೂಪಾಕ್ಷಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243