Connect with us

ದಿನದ ಸುದ್ದಿ

ಬಿವಿಬಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಟೆಕ್‌ಪಾರ್ಕ್ ಉದ್ಘಾಟನೆ | ಆರ್ ಆ್ಯಂಡ್ ಡಿ ಹೊಸನೀತಿ ರೂಪಿಸಲು ಕಾರ್ಯಪಡೆ ರಚನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published

on

ಸುದ್ದಿದಿನ,ಹುಬ್ಬಳ್ಳಿ: ಕರ್ನಾಟಕದ ಸಮಗ್ರ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ದೊಡ್ಡದು.ಯುವಕರಲ್ಲಿ ವಿದ್ಯೆ,ವ್ಯಕ್ತಿತ್ವ ನಿರ್ಮಾಣ ಮಾಡುವುದು ಸಂಸ್ಥೆ ,ಸರ್ಕಾರಗಳ ಜವಾಬ್ದಾರಿ. ಕಾಲೇಜಿನ ಹಳೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ ಸಂಸ್ಥೆಗೆ,ಸಮಾಜಕ್ಕೆ ಉತ್ತಮ ಮಾನವ ಸಂಪನ್ಮೂಲವಾಗಿ ಕೊಡುಗೆಗಳನ್ನು ಮರಳಿ ನೀಡಬೇಕು.

ಕೆಎಲ್‌ಇ ಸಂಸ್ಥೆಯ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜು ವಿವಿಧ ಬಹು ಅಧ್ಯಯನ ಶಿಸ್ತುಗಳಲ್ಲಿ ಮಾದರಿಯಾಗಿ ರೂಪುಗೊಂಡಿದೆ.ಕೃಷಿ,ತೈಲ,ಕೈಗಾರಿಕೆ ಮತ್ತಿತರ ಎಲ್ಲಾ ರಂಗಗಳಲ್ಲಿ ಇಂದು ಆರ್ ಆ್ಯಂಡ್ ಡಿ ಅಗತ್ಯವಾಗಿದೆ. ರಾಜ್ಯದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದ 180 ಆರ್ ಆ್ಯಂಡ್ ಡಿ ಕೇಂದ್ರಗಳಿವೆ.ಅದಕ್ಕೆ ಹೆಚ್ಚು ಮಹತ್ವ ನೀಡಿ,ಕೈಗಾರಿಕೆ,ಕೃಷಿ,ಆಹಾರ ರಂಗದಲ್ಲಿ ಆರ್ ಆ್ಯಂಡ್ ಡಿ ಬಳಕೆಗೆ ಹೆಚ್ಚು ಒತ್ತು ನೀಡಲು ಸರ್ಕಾರ ಉದ್ದೇಶಿಸಿದೆ.

ಹೊಸ ಆರ್ ಆ್ಯಂಡ್ ಡಿ ನೀತಿ ರಚನೆಗೆ ಕಾರ್ಯಪಡೆ ಅಧ್ಯಕ್ಷರನ್ನಾಗಿ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಉಪಕುಲಪತಿ ಡಾ.ಅಶೋಕ ಶೆಟ್ಟರ್ ಅವರನ್ನು ನೇಮಿಸಲು ಚಿಂತನೆ ನಡೆದಿದೆ.ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಕೆಎಲ್‌ಇ ಟೆಕ್‌ಪಾರ್ಕಿನ ಅಭಿವೃದ್ಧಿಗೆ ಅಗತ್ಯವಾಗಿರುವ ಇನ್ನೂ 2 ಕೋಟಿ ರೂ.ಗಳನ್ನು ಹಳೆಯ ವಿದ್ಯಾರ್ಥಿಗಳ ಸಂಘದ ಮೂಲಕ ಕ್ರೋಢೀಕರಿಸಿ ನೀಡಲಾಗುವುದು. ಸ್ಟಾರ್ಟ್ ಅಪ್‌ಗಳ ಉತ್ತೇಜನಕ್ಕಾಗಿ ಹುಬ್ಬಳ್ಳಿ ಮತ್ತು ಕಲಬುರ್ಗಿಯಲ್ಲಿ ಪ್ರಾದೇಶಿಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿನ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ 75 ನೇ ವರ್ಷಾಚರಣೆ ಹಾಗೂ ಕೆಎಲ್‌ಇ ಟೆಕ್‌ ಪಾರ್ಕ್ ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ ಸಂಪೂರ್ಣ ಸ್ವರೂಪವೇ ಬದಲಾಗಿದ್ದು, ಮತ್ತೊಮ್ಮೆ ವಿದ್ಯಾರ್ಥಿಯಾಗಿ ಪ್ರವೇಶಪಡೆಯಲು ಮನಸ್ಸಾಗುತ್ತಿದೆ ಎಂದು ತಮಗೆ ವಿದ್ಯೆ ನೀಡಿದ ಸರಸ್ವತಿ ದೇಗುಲದ ಬಗ್ಗೆ ಮನದುಂಬಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,ತಮಗೆ ಕಲಿಸಿದ ಪ್ರಾಧ್ಯಾಪಕರು,ಹಿರಿಯ-ಕಿರಿಯ ಸಹಪಾಠಿಗಳನ್ನು, ಹಾಜರಾಗದ ಪ್ರಯೋಗಾಲಯಗಳು,ಪುಸ್ತಕ ಪಡೆಯದಗ್ರಂಥಾಲಯಗಳು,ಹಾಸ್ಟೇಲು,ಕ್ಯಾಂಪಸ್,ಕ್ಯಾಂಟೀನ್ ಎಲ್ಲವನ್ನೂ ವಿನೋದವಾಗಿ ನೆನಪಿಸಿಕೊಂಡರು.

ಮುಖ್ಯಮಂತ್ರಿಯಾಗಿ ಕೈಗೊಳ್ಳುವ ಎಲ್ಲಾ ಜನಪರ ಕಾರ್ಯಗಳಲ್ಲಿ ಬಿವಿಬಿ ಕಾಲೇಜು ಕಲಿಸಿದ ಪಾಠಗಳ ಪಾತ್ರ ಇರುತ್ತದೆ. ಆಡಳಿತದಲ್ಲಿ ತಾಂತ್ರಿಕತೆ,ವೈಜ್ಞಾನಿಕತೆ ತರಲು ಉತ್ಸುಕನಾಗಿದ್ದೇನೆ.ಪ್ರತಿ ಹಂತದಲ್ಲಿಯೂ ನನ್ನ ಜ್ಞಾನವನ್ನು ಪ್ರಸ್ತುತ ಸಂಶೋಧನೆಗಳೊಂದಿಗೆ ತಾಳೆ ಮಾಡಿ ಪರೀಕ್ಷಿಸಿಕೊಳ್ಳುತ್ತಿರುತ್ತೇನೆ.

ಸಾರ್ವಜನಿಕ ಉಪಯೋಗ, ಸಂಕೇತಗಳ ರವಾನೆಗೆ ವೈರ್‌ಲೆಸ್ ತಂತ್ರಜ್ಞಾನ,ಇಲೆಕ್ಟ್ರಿಕಲ್,ಇಲೆಕ್ಟ್ರಾನಿಕ್ಸ್,ಸಾಫ್ಟವೇರ್ ಕ್ಷೇತ್ರಗಳ ಅತ್ಯಾಧುನಿಕ ವಿದ್ಯೆ ,ಸಂಶೋಧನೆಗಳಲ್ಲಿ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜು ಮಹತ್ವದ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಹಿಂದೆ ನಾನು ವಿದ್ಯಾರ್ಥಿಯಾಗಿದ್ದಾಗ ಕರ್ನಾಟಕ ವಿವಿ ಕುಲಪತಿಗಳಾಗಿದ್ದ ಡಾ.ಡಿ.ಎಂ.ನಂಜುಂಡಪ್ಪ ಅವರ ಕಾಠಿಣ್ಯ,ಶಿಸ್ತು,ಬದ್ಧತೆಯಿಂದ ನಮ್ಮ ವ್ಯಾಸಂಗ ಪೂರ್ಣವಾಗಲು ಸಾಧ್ಯವಾಯಿತು.

ಉತ್ತಮ ಭೂತಕಾಲವಷ್ಟೇ ಅಲ್ಲ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದು ಅಷ್ಟೇ ಮುಖ್ಯ. ರಾಜಕೀಯವೂ ಒಂದು ವಿಜ್ಞಾನವೇ ಆಗಿದೆ ಅಲ್ಲಿಯೂ ವೈಜ್ಞಾನಿಕ ವಿಧಾನಗಳಿವೆ.ತಾಂತ್ರಿಕ ಹಾಗೂ ವೈಜ್ಞಾನಿಕ ಸಂಶೋಧನೆಗಳನ್ನು ರಾಜತಾಂತ್ರಿಕವಾಗಿ ಬಳಸುವುದು ರಾಜಕೀಯ ವಿಜ್ಞಾನವಾಗಿದೆ.

ಎಲ್ಲಾ ದೇಶಗಳು ಈ ನೀತಿ ಪಾಲಿಸಬೇಕು‌.ಕರ್ತವ್ಯವನ್ನು ನೈತಿಕತೆಯ ತಳಹದಿಯೊಂದಿಗರವಕಾಯಕದ ರೀತಿಯಲ್ಲಿ ನಿರ್ವಹಿಸಬೇಕು.ದೇಶದ ಬಡತನ,ಆರೋಗ್ಯ,ಶಿಕ್ಷಣ,ಆರ್ಥಿಕ ಸವಾಲುಗಳನ್ನು ಅರಿಯಲು ನಾವು ಸದಾ ಕಾಲ ಜನರ ನಡುವೆ ಇರಬೇಕು,ಅದೇ ಜನರ,ಜನಪರ ರಾಜಕೀಯವಾಗಿದೆ.
ಪ್ರಧಾನಮಂತ್ರಿಗಳು ಸಕ್ಕರೆ ಕಾರ್ಖಾನೆಗಳಲ್ಲಿ ಇಥೆನಾಲ್ ಉತ್ಪಾದನೆಗೆ ಶೇ.20 ರಷ್ಟು ಅವಕಾಶ ನೀಡಿದ್ದಾರೆ.ಮುರುಗೇಶ್ ನಿರಾಣಿ ಅವರ ಇದರ ಸದುಪಯೋಗ ಪಡೆದವರಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದರು.

ಇದನ್ನೂ ಓದಿ |ಸರ್ಕಾರಿ ನೌಕರರ ವೇತನ ನಿಗದಿಗೆ ನೂತನ ಆಯೋಗ ರಚನೆಯಾಗಲಿದೆ

ಬೃಹತ್ ,ಮಧ್ಯಮ ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ ಮಾತನಾಡಿ,ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ಇಂದು ಮುಖ್ಯಮಂತ್ರಿಯವರೊಂದಿಗೆ ಹಂಚಿಕೊಳ್ಳುತ್ತಿರುವುದು, ತವರಿಗೆ ಬಂದಿರುವ ಸಂತಸದ ಭಾವನೆ ಮೂಡಿಸಿದೆ.ಕೆಎಲ್‌ಇ ಸಪ್ತರ್ಷಿಗಳ ಪ್ರಯತ್ನದಿಂದ ಈ ಭಾಗದಲ್ಲಿ ಶಿಕ್ಷಣದ ಕ್ರಾಂತಿಯಾಗಲು,ವಿಶೇಷವಾಗಿ ಮಹಿಳೆಯರು ತಾಂತ್ರಿಕ ಶಿಕ್ಷಣ ಪಡೆಯಲು ಸಾಧ್ಯವಾಗಿದೆ.

3-4 ದಶಕಗಳ ಹಿಂದೆ ಕೇವಲ ಸುಮಾರು 500 ರಿಂದ 600 ವಿದ್ಯಾರ್ಥಿಗಳಿದ್ದ ಈ ಕಾಲೇಜು ಇಂದು ಸಾಕಷ್ಟು ಅಭಿವೃದ್ಧಿ ಹೊಂದಿದೆ.ಸುಮಾರು 6 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಕೇವಲ ಉದ್ಯೋಗಿಗಳಾಗದೇ ಮತ್ತೊಬ್ಬರಿಗೆ ಕೆಲಸ ನೀಡುವ ಉದ್ಯಮಪತಿಗಳಾಗಬೇಕು .ಸರ್ಕಾರ ಅನೇಕ ಪ್ರೋತ್ಸಾಹಕ ಯೋಜನೆಗಳ ಪ್ರಯೋಜನ ಪಡೆಯಬೇಕು .ಅಕ್ಟೋಬರ್ 15 ರಿಂದ ತಮ್ಮ ನಿರಾಣಿ ಸಮೂಹ ಸಂಸ್ಥೆಗಳ ಉದ್ಯಮ ಘಟಕಗಳು ಪುನರಾರಂಭ ಮಾಡಲಿವೆ.ಕಾಲೇಜಿನ ವಿದ್ಯಾರ್ಥಿಗಳು ಅಲ್ಲಿಗೆ ಭೇಟಿ ನೀಡಿ ಸ್ಫೂರ್ತಿ ಪಡೆಯಲಿ ಎಂದರು.

ಸಮಾರಂಭದ ಅಧ್ಯಕ್ಷತೆವಹಿಸಿದ್ದ ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ ಮಾತನಾಡಿದರು. ಇದೇ ಸಂದರ್ಭದಲ್ಲಿ ಕೆಎಲ್ಇ ಸಂಸ್ಥೆ ಹಾಗೂ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದಿಂದ , ಸಂಸ್ಥೆಯ ಹಳೆಯ ವಿದ್ಯಾರ್ಥಿಗಳೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಮುರುಗೇಶ್ ನಿರಾಣಿ ಅವರನ್ನು ಸನ್ಮಾನಿಸಲಾಯಿತು.

ಕೈಮಗ್ಗ,ಜವಳಿ ,ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಂಕರ್ ಪಾಟೀಲ ಮುನೇನಕೊಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೆಎಲ್‌ಇ ತಾಂತ್ರಿಕ ವಿವಿ ಉಪಕುಲಪತಿ ಡಾ.ಅಶೋಕ ಶೆಟ್ಟರ್ ಸ್ವಾಗತಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending