ದಿನದ ಸುದ್ದಿ
30 ಸಿ ಆರ್ ಪಿ ಎಫ್ ಯೋಧರ ಬಲಿಪಡೆದ ಉಗ್ರ

ಸುದ್ದಿದಿನ, ಶ್ರೀನಗರ : ಉರಿ ದಾಳಿಯ ನಂತರ ಅತ್ಯಂತ ದೊಡ್ಡ ಮಟ್ಟದ ದಾಳಿ ಕಣಿವೆ ರಾಜ್ಯದಲ್ಲಿ ನಡೆದಿದೆ. ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಉಗ್ರರು ಸಿ ಆರ್ ಪಿ ಎಫ್ ವಾಹನದ ಮೇಲೆ ಆತ್ಮಾಹುತಿ ದಾಳಿ ನಡೆಸಿ 30 ಯೋಧರನ್ನು ಬಲಿಪಡೆದಿದ್ದಾರೆ.
PM Modi: Spoke to Home Minister Rajnath Singh Ji and other top officials regarding the situation in the wake of the attack in Pulwama. https://t.co/qLtujgNosD
— ANI (@ANI) February 14, 2019
ಅತ್ಯಂತ ಯೋಜಿತವಾಗಿ ಈ ದುಷ್ಕ್ರತ್ಯವೆಸಗಿ 30 ಯೋಧರನ್ನು ಬಲಿ ಪಡೆದ ಉಗ್ರನನ್ನು ಆದಿಲ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ಜೈಶ್-ಎ-ಮೊಹಮ್ಮದ್ ಎಂಬ ಉಗ್ರಗಾಮಿ ಸಂಘಟನೆಯನ್ನು ಈತ ಕಳೆದ ವರ್ಷ ಸೇರಿಕೊಂಡಿದ್ದು, ಈ ಸಂಘಟನೆಯಲ್ಲಿ ‘ ಗಾಡಿ ಟಕರಾನೆವಾಲಾ’ ಎಂದೇ ವಿಖ್ಯಾತಿ ಗಳಿಸಿದ್ದ.
K Vijay Kumar, Advisor to J&K Governor: As far as the death toll is concerned I was told it was initially 18 and 3 people were taken to hospital in critical condition. So, it could be 20. But I am only basing on telephonic reports I am getting from the field. #PulwamaAttack pic.twitter.com/7WwBLSqBMu
— ANI (@ANI) February 14, 2019
ಈ ಆದಿಲ್ ಮೊಹಮ್ಮದ್ ಇಂದು ಸುಮಾರು 350 ಕೆಜಿ ತೂಕದ ಸ್ಪೋಟ ವಸ್ತುಗಳನ್ನು ಹೊತ್ತು ಅವಂತಿಪುರ್ ಪುಲ್ವಾಮಾ ಮಾರ್ಗಾ ಮದ್ಯೆ ಜಮ್ಮು- ಶ್ರೀನಗರ ಹೈವೇಯಲ್ಲಿ ಸಿ ಆರ್ ಪಿ ಎಫ್ ವಾಹನಕ್ಕೆ ಡಿಕ್ಕಿ ಹೊಡೆಸಿ 30 ಯೋಧರನ್ನು ಬಲಿ ಪಡೆದಿದ್ದಾನೆ.
12 CRPF jawans have lost their lives in an IED blast in Awantipora, Pulwama. Dozens injured. #JammuAndKashmir (visuals deferred) pic.twitter.com/bONkKeFFxt
— ANI (@ANI) February 14, 2019
ಯೋಧರ ಸಾವಿನ ಸಂಖ್ಯೆ ಕ್ಷಣ ಕ್ಷಣ ಕ್ಕೂ ಏರುತ್ತಿದೆ. ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ 13 ಯೋಧರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆಂದು ಮೂಲಗಳು ತಿಳಿಸಿವೆ.
Zulfiqar Hassan, IG CRPF(Operations) on Pulwama blast: J&K Police has taken up the investigation. The injured shifted to hospital. Post-blast analysis being done at the spot pic.twitter.com/BsOi2nJhfh
— ANI (@ANI) February 14, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ-ಇತರೆ ಸೌಲಭ್ಯ ಅರ್ಜಿ ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ :2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಸಲು ಏ.20 ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು. ಇದೀಗ ಈ ಅವಧಿಯನ್ನು ಏ.30 ರವರಗೆ ವಿಸ್ತರಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ವೆಬ್ಸೈಟ್ www.ssp.postmatric.karnataka.gov.in ,ಕಾರ್ಯಕ್ರಮದ ವಿವರ, ಹಾಗೂ ಹೆಚ್ಚಿನ ವಿವರಗಳಿಗೆ https://bcwd.karnataka.gov.in : [email protected] ತಂತ್ರಾಂಶ ದೋಷಗಳು ಮತ್ತು ಇತರೆ ಮಾಹಿತಿಗೆ[email protected]
ದೂರವಾಣಿ ಸಂಖ್ಯೆ 8050770005/8050770004/ 080-35254757 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಸ್.ಆರ್.ಗಂಗಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ| ವಾಟ್ಸಾಪ್ | 9980346243

ದಿನದ ಸುದ್ದಿ
ಹಳೇ ಕುಂದುವಾಡ ಮನಾ ಯುವ ಬ್ರಿಗೇಡ್, ಜರವೇ ನಾಲ್ಕನೇ ವಾರ್ಷಿಕೋತ್ಸವ | ಯುವಕರ ಸಮಾಜ ಮುಖಿ ಕೆಲಸಗಳು ಉತ್ತಮ ನಾಯಕತ್ವಕ್ಕೆ ಬುನಾದಿ : ಮೇಯರ್ ಎಸ್.ಟಿ.ವೀರೇಶ್

ಸುದ್ದಿದಿನ,ದಾವಣಗೆರೆ : ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಂಡರೆ ಉತ್ತಮ ನಾಯಕರು ಆಗಲು ಅದು ಬುನಾದಿ ಆಗುತ್ತದೆ ಎಂದು ಮೇಯರ್ ಎಸ್ ಟಿ ವೀರೇಶ್ ತಿಳಿಸಿದರು.
ನಗರದ ಹಳೇ ಕುಂದುವಾಡದಲ್ಲಿ ಮನಾ ಯುವ ಬ್ರಿಗೇಡ್, ಜರವೇ ನಾಲ್ಕನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಾಧಕರಿಗೆ ಸನ್ಮಾನ, ಕುಂದುವಾಡ ಯುವ ರತ್ನ ಪ್ರಶಸ್ತಿ, ಕೆಎಪಿಎಲ್ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದಿನ ಸಮಯದಲ್ಲಿ ಯುವಕರು ಬೇರೆ ಬೇರೆ ದಾರಿ ಕಡೇ, ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ, ಸಾಮಾಜಿಕ ಸೇವೆಗಳು, ಸಹಾಯ ಹಸ್ತ ಚಾಚುವಂತ ಯುವ ಮನಸ್ಸುಗಳು ಸಿಗುವುದೇ ವಿರಳವಾಗಿದೆ.
ಇಂತಹ ಕಾಲದಲ್ಲಿ ಮನಾ ಯುವ ಬ್ರಿಗೇಡ್ ಯುವಕರು, 44 ನೇ ವಾರ್ಡಿನಲ್ಲಿ ಅತ್ಯುತ್ತಮ ಸಾಮಾಜಿಕ ಸೇವೆ ಮಾಡುವ ಮೂಲಕ ಜವಾಬ್ದಾರಿ ಹೆಚ್ಚಿಸಿಕೊಂಡಿದ್ದಾರೆ.. ಯಾವುದೇ ಸಮಾಜ ಸೇವೆಗಳು ಮಾಡಬೇಕೆಂದರು ಸವಾಲುಗಳು ಜಾಸ್ತಿ, ಎಲ್ಲಾ ಸವಾಲು ಮೆಟ್ಟಿನಿಂತು ಯುವಕರು ಸಮಾಜ ಸೇವೆಗಳಲ್ಲಿ ತೊಡಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ದಿ. ಜೆಎಂ ಹನುಮಂತಪ್ಪ ಅವರಿಗೆ ಮರಣೋತ್ತರ ಕುಂದುವಾಡ ರತ್ನ ಪ್ರಶಸ್ತಿ ಹಾಗೂ ಸಿಆರ್ ಪಿಎಫ್ ಯೋಧ ಆನಂದ್ ಎಸ್ ಎಚ್, ಎಸ್ ಎಸ್ ಬಿ ಯೋಧ ಭರ್ಮಪ್ಪ, ಸಮಾಜ ಸೇವಕ ರಾಜು ಕರೂರು ಅವರಿಗೆ ಕುಂದುವಾಡ ಯುವ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮಾಜ ಸೇವಕರಿಗೆ ಸನ್ಮಾನಿಸಿ ಗೌರವಿಸಲಾಯಿತು, ಕೆಪಿಎಲ್ ಚಾಂಪಿಯನ್ ಪವರ್ ಫೈಟರ್ಸ್ ತಂಡಕ್ಕೆ ಟ್ರೋಫಿ ವಿತರಿಸಲಾಯಿತು..
ಈ ಸಂದರ್ಭದಲ್ಲಿ ವರ್ತಕರಾದ ರಾಘವೇಂದ್ರ ಎನ್ ದಿವಾಕರ್, ಪಾಲಿಕೆ ಮಾಜಿ ಸದಸ್ಯ ಹೆಚ್ ತಿಪ್ಪಣ್ಣ, ಮುಖಂಡರಾದ ಬಾಡದ ಆನಂದರಾಜ್, ನಾಗಭೂಷಣ್ ವಾಣಿ, ಮಿಟ್ಲಕಟ್ಟೆ ಚಂದ್ರಪ್ಪ, ಶಿವಪ್ಪ, ಜೆಸಿ ದೇವರಾಜ್, ಎನ್ ಟಿ ನಾಗರಾಜ್, ಸಣ್ಣಿಂಗಪ್ಪ, ಮಂಜಪ್ಪ, ಗಿರೀಶ್ ದೇವರಮನೆ, ಪತ್ರಕರ್ತ ಮಧುನಾಗರಾಜ್ ಕುಂದುವಾಡ ಸೇರಿದಂತೆ ಮತ್ತಿತರರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ನಿಧನ

ಸುದ್ದಿದಿನ, ಬೆಂಗಳೂರು : ನಾಡಿನ ಖ್ಯಾತ ಸಂಶೋದಕ, ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸೋಮವಾರ ರಾತ್ರಿ 1.15 ರ ವೇಳೆಗೆ ತಮ್ಮ ವಯೋ ಸಹಜ ಕಾರಣಗಳಿಂದ 108 ನೇ ವಯಸ್ಸಿನಲ್ಲಿ ನಿಧನರಾದರು.
ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ ಪ್ರಾಧ್ಯಾಪಕರು. ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸುವರ್ಣ ಪದಕದೊಡನೆ ಎಂ.ಎ. ಪದವಿ, ನಂತರ ಬಿ.ಟಿ. ಪದವಿ ಗಳಿಕೆ. ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿಯನ್ನು ಆರಂಭಿಸಿ, ನಂತರ ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಿನ್ಸಿಪಾಲರಾಗಿ, ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಕೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಶ್ರೀಯುತರದು.
ನಡೆದಾಡುವ ನಿಘಂಟು, ಶಬ್ಧ ಬ್ರಹ್ಮ ಎಂದು ಜನಜನಿತರಾಗಿರುವ ಶ್ರೀಯುತರು ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಕೆ. 50ಪುಸ್ತಕಗಳನ್ನು, 14 ನಿಘಂಟುಗಳನ್ನು ಪ್ರಕಟಗೊಳಿಸಿರುವುದಲ್ಲದೆ ‘ಇಗೋ ಕನ್ನಡ’ ಎಂಬ ಅಂಕಣದಿಂದ ನಾಡಿನಲ್ಲಿ ಮನೆಮಾತಾಗಿದ್ದಾರೆ.
ನಿಘಂಟು ಪರಿವಾರ, ಅಕ್ರೂರ ಚರಿತ್ರೆ (ಸಂಪಾದನೆ), ಇಗೋ ಕನ್ನಡ (ಸಾಮಾಜಿಕ ನಿಘಂಟು), ಗತಿ ಪ್ರಜ್ಞೆ, ಕನ್ನಡವನ್ನು ಉಳಿಸಿ ಬೆಳೆಸಿದವರು, ಅನುಕಲ್ಪನೆ, ಕರ್ಣ ಕರ್ಣಾಮೃತ ಮುಂತಾದವು ಪ್ರಮುಖ ಕೃತಿಗಳು. ಹಲವಾರು ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಆಹ್ವಾನಿತ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಶ್ರೀಯುತರ ಪಾಂಡಿತ್ಯಕ್ಕೆ ಸಂದ ಪ್ರಶಸ್ತಿ ಪುರಸ್ಕಾರಗಳು ಹಲವಾರು.
ಅವುಗಳಲ್ಲಿ ವಿದ್ಯಾಲಂಕಾರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಂಬಾ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ, ಕಾಯಕ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ವಿಶೇಷ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಪ್ರಶಸ್ತಿ, ಅಂತರಾಷ್ಟ್ರೀಯ ನಿಘಂಟು ಸಮ್ಮೇಳನಗಳಿಗೆ ಆಹ್ವಾನ ಮುಂತಾದವು ಮುಖ್ಯವಾದವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಬಹಿರಂಗ7 days ago
ಸಂವಿಧಾನ ನಿತ್ಯದ ಪಾಠವಾಗಲಿ..!
-
ಅಂತರಂಗ7 days ago
ಮಹಾ ಮಾನವತಾವಾದಿ ಅಂಬೇಡ್ಕರ್ ನೆನಪಿನಲ್ಲಿ..!
-
ಭಾವ ಭೈರಾಗಿ6 days ago
ಕವಿತೆ | ಯುಗಾದಿ ಪುರುಷ
-
ಲೈಫ್ ಸ್ಟೈಲ್5 days ago
ತರಕಾರಿ ಸಿಪ್ಪೆಯಿಂದ ಪೇಪರ್ ತಯಾರಿಸಿದ ಹತ್ತರ ಬಾಲೆ ಮಾನ್ಯ ಹರ್ಷ..!
-
ನಿತ್ಯ ಭವಿಷ್ಯ7 days ago
ಈ ರಾಶಿಯವರಿಗೆ ಶುಭಕಾರ್ಯ ನೆರವೇರಲಿದೆ..! ಬುಧವಾರ- ರಾಶಿ ಭವಿಷ್ಯ ಏಪ್ರಿಲ್-14,2021
-
ನಿತ್ಯ ಭವಿಷ್ಯ7 days ago
ಜನ್ಮ ಕುಂಡಲಿಯಲ್ಲಿ ಈ ಗ್ರಹಗಳು ಇದ್ದರೆ ಆಗರ್ಭ ಶ್ರೀಮಂತರು ; ಧನ ಯೋಗ ಪ್ರಾಪ್ತಿ
-
ನಿತ್ಯ ಭವಿಷ್ಯ6 days ago
ಈ ರಾಶಿಯವರು ಹೊಸ ಮನೆ ನಿರ್ಮಾಣ ಮಾಡಿ,ಮದುವೆ ಕಾರ್ಯ ಮಾಡುವಿರಿ..! ಗುರುವಾರ- ರಾಶಿ ಭವಿಷ್ಯ ಏಪ್ರಿಲ್-15,2021
-
ನಿತ್ಯ ಭವಿಷ್ಯ5 days ago
ಈ ರಾಶಿಯವರು ಕುಟುಂಬ ಸದಸ್ಯರೊಂದಿಗೆ “ಸಂತಾನದ” ಸಿಹಿಸುದ್ದಿ ಕೇಳಿ ಸಂತಸ ಹಂಚಿಕೊಳ್ಳುವಿರಿ! ಶುಕ್ರವಾರ-ಏಪ್ರಿಲ್-16,2021