ಕ್ರೀಡೆ
ಆರೋಪ ಮುಕ್ತ ಬೆನ್ ಸ್ಟೋಕ್ ಮರಳಿ ಟೀಂಗೆ

ಸುದ್ದಿದಿನ ಡೆಸ್ಕ್ | ಇಂಗ್ಲೆಂಡ್ ಕ್ರಿಕೆಟಿಗ, ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಬೆನ್ ಸ್ಟೋಕ್ಸ್ ಅವರು ಆಗಸ್ಟ್ 18 ರಿಂದ ನಡೆಯುವ ಮೊದಲೇ ಮೂರನೆಯ ಟೆಸ್ಟ್ನಲ್ಲಿ ಆಡಲು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇವರು ಕ್ಲಬ್ ಒಂದರಲ್ಲಿ ನಡೆದ ಗಲಾಟೆಯಲ್ಲಿ ಹಲ್ಲೆ ನಡೆಸಿದ ಆರೋಪವನ್ನು ಹೊತ್ತಿದ್ದರು. ಈ ಆರೋಪ ಮುಕ್ತವಾಗುತ್ತಿದ್ದಂತೆ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಬೆನ್ ಸ್ಟೋಕ್ಸ್ ಅವರನ್ನು 11ತಿಂಗಳುಗಳ ವಿಚಾರಣೆ ನಡೆಸಿ ನಂತರ ಅವರನ್ನು ಅಪರಾಧಿ ಎಂದು ಪರಿಗಣಿಸುವುದು ಕಷ್ಟವೆಂದು ನ್ಯಾಯಾಲಯವು ಆದೇಶ ನೀಡಿದ ನಂತರ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ
ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ ಡೇವಿಡ್ ವಾರ್ನರ್ ಮರಳಿ ತಂಡಕ್ಕೆ..!

ಸುದ್ದಿದಿನ ಡೆಸ್ಕ್: ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ಗುರುವಾರ ಮತ್ತೆ ಕ್ರಿಕೆಟ್ಗೆ ಮರಳಲಿದ್ದಾರೆ. ರಾಜ್ಯದ ನ್ಯೂ ಸೌತ್ ವೇಲ್ಸ್ನ ಏಕದಿನ ಪಂದ್ಯದಲ್ಲಿ ಅವರು ತೊಡೆಸಂದು ಒತ್ತಡದಿಂದ ಚೇತರಿಸಿಕೊಳ್ಳುತ್ತಿದ್ದಾರೆ.
ಜನವರಿಯಲ್ಲಿ ಗಬ್ಬಾದಲ್ಲಿ ನಡೆದ ಭಾರತ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ನಂತರ ಅನುಭವಿ ಎಡಗೈ ಆಟಗಾರ ಡೇವಿಡ್ ಆಡಲಿಲ್ಲ.ಕಾರಣ ನವೆಂಬರ್ನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಗಾಯಗೊಂಡಿದ್ದರು.
ಇದನ್ನೂ ಓದಿ | ಪ್ರತಿರೋಧದ ದನಿಗಳು ಸರ್ವಾಧಿಕಾರಕ್ಕೆ ಸದಾ ಅಪಥ್ಯವೇ
ಕಳೆದ ತಿಂಗಳು ಈ ತೊಡೆಯ ಗಾಯವು ಬೇಗ ಗುಣವಾಗುವುದು ಕಷ್ಟ ಎಂದು ಗುಣವಾಗುವುದು ಕಷ್ಟ ಎಂದು ಅವರು ಹೇಳಿದ್ದರು. ಆದರೆ ನ್ಯೂ ಸೌತ್ ವೇಲ್ಸ್ ತರಬೇತುದಾರ ಫಿಲ್ ಜಾಕ್ವೆಸ್ ಅವರು ಗುರುವಾರ ದೇಶೀಯ ಮಾರ್ಷ್ ಏಕದಿನ ಕಪ್ನಲ್ಲಿ ದಕ್ಷಿಣ ಆಸ್ಟ್ರೇಲಿಯಾವನ್ನು ಎದುರಿಸಲು ಯೋಗ್ಯರಾಗಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ಕ್ರೀಡಾ ವಿಜ್ಞಾನ ಸಂಸ್ಥೆಯಿಂದ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ

ಸುದ್ದಿದಿನ,ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಮಾರ್ಚ್ 2021ನೇ ಮಾಹೆಯಲ್ಲಿ ರಾಜ್ಯದ ಕ್ರೀಡಾ ವಿಜ್ಞಾನ ಸಂಸ್ಥೆಯಿಂದ (Sports Science) 8 ರಿಂದ 13 ವರ್ಷ ವಯೋಮಾನದೊಳಗಿನ ವಯೋಮಿತಿಯ ಬಾಲಕ/ಬಾಲಕಿಯರಿಗೆ ವೈಜ್ಞಾನಿಕವಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಗುರುತಿಸಲಿದ್ದಾರೆ.
ಜಿಲ್ಲೆಯಲ್ಲಿ ಮಾ.05 ರಂದು ಬೆಳಿಗ್ಗೆ 8.30 ರಿಂದ ಸಂಜೆ 5.30 ರವರೆಗೆ ಆಯ್ಕೆ ಪ್ರಕ್ರಿಯೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಸಂಘಟಿಸಲಾಗುವುದು. 08 ರಿಂದ 13 ವರ್ಷ ವಯೋಮಾನದೊಳಗಿನ ವಯೋಮಿತಿಯ ಬಾಲಕ/ಬಾಲಕಿಯರು ತಮ್ಮ ಜನ್ಮ ದಿನಾಂಕ, ಆಧಾರ್ ಕಾರ್ಡ್ ದಾಖಲೆ ಸಲ್ಲಿಸಬೇಕು. ಪ.ಜಾತಿ/ಪ.ಪಂ ಕ್ಕೆ ಸೇರಿದ ಕ್ರೀಡಾಪಟುಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕು. ಮಾ.03 ರೊಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಕಚೇರಿ ಅವಧಿಯಲ್ಲಿ ದಾಖಲೆಗಳನ್ನು ಸಲ್ಲಿಸಬೇಕು.
ಇದನ್ನೂ ಓದಿ | ಅತಿ ಕಡಿಮೆ ಪಂದ್ಯ ; 400 ವಿಕೆಟ್ : ದಾಖಲೆ ಬರೆದ ಸ್ಪಿನ್ನರ್ ಆರ್ ಅಶ್ವಿನ್
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ದೂ.ಸಂ: 08192-237480, ಮೊ.ಸಂ: 9480796263, 7019565606ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಅತಿ ಕಡಿಮೆ ಪಂದ್ಯ ; 400 ವಿಕೆಟ್ : ದಾಖಲೆ ಬರೆದ ಸ್ಪಿನ್ನರ್ ಆರ್ ಅಶ್ವಿನ್

ಸುದ್ದಿದಿನ,ಅಹಮದಾಬಾದ್: ಟೀಂ ಇಂಡಿಯಾದ ಸ್ಪಿನ್ನರ್ ಆರ್ ಅಶ್ವಿನ್ ಅವರು ಅತಿ ಕಡಿಮೆ ಪಂದ್ಯಗಳಲ್ಲಿ 400 ವಿಕೆಟ್ಗಳನ್ನು ಪಡೆದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಭಾರತದ ಪರ ಹೊಸ ದಾಖಲೆಯನ್ನು ಬರೆದಿದ್ದಾರೆ.
ಅಶ್ವಿನ್ 77ನೇ ಪಂದ್ಯವನ್ನು ಆಡುತ್ತಿದ್ದು ಇಂಗ್ಲೆಂಡಿನ ಎರಡನೇ ಇನ್ನಿಂಗ್ಸ್ನಲ್ಲಿ ಬೆನ್ ಸ್ಟೋಕ್ಸ್ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದು, ವಿಶ್ವದಲ್ಲಿ ಈ ಸಾಧನೆಯನ್ನು ಮಾಡಿದ ಆಟಗಾರರ ಪಟ್ಟಿಯಲ್ಲಿ ಅಶ್ವಿನ್ ಅವರು ಎರಡನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ಸ್ಪಿನ್ನರ್ ಮುತ್ತಯ್ಯ ಮುರುಳೀಧರನ್(72ಪಂದ್ಯ) ಮೊದಲ ಸ್ಥಾನದಲ್ಲಿದ್ದಾರೆ.
400 ವಿಕೆಟ್ ಗಡಿ ದಾಟಿದ ಭಾರತದ 4ನೇ ಬೌಲರ್ ಅಶ್ವಿನ್ ಆಗಿದ್ದು, ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ 619ವಿಕೆಟ್, ಕಪಿಲ್ ದೇವ್ 434ವಿಕೆಟ್, ಹರ್ಭಜನ್ ಸಿಂಗ್ 417 ವಿಕೆಟ್ಗಳನ್ನು ಪಡೆದಿದ್ದಾರೆ.
ಮೊದಲ ಇನ್ನಿಂಗ್ಸ್ನಲ್ಲಿ 3 ವಿಕೆಟ್, ಎರಡನೇ ಇನ್ನಿಂಗ್ಸ್ನಲ್ಲಿ ಅಶ್ವಿನ್ 4 ವಿಕೆಟ್ ಪಡೆದಿದ್ದಾರೆ. ಈ ಪಂದ್ಯಕ್ಕೂ ಮೊದಲು 76 ಪಂದ್ಯಗಳ 142 ಇನ್ನಿಂಗ್ಸ್ನಲ್ಲಿ ಬೌಲಿಂಗ್ ಮಾಡಿ 394 ವಿಕೆಟ್ಗಳನ್ನು ಪಡೆದಿದ್ದರು.
"PHENOMENAL" says one legend about the "modern day" legend 🔝👌🏻@anilkumble1074 showers praise on off-spinner @ashwinravi99 😃#TeamIndia #INDvENG #PinkBallTest @Paytm pic.twitter.com/PMAe3jTBtD
— BCCI (@BCCI) February 25, 2021
💬 This body is ageing, but I won't be surprised if I surpass myself in the future: @ashwinravi99 👌🏻
Confidence 💯 percent from the champion spinner 🔝#TeamIndia #INDvENG #PinkBallTest @Paytm pic.twitter.com/vTcdoUGTj7
— BCCI (@BCCI) February 25, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಸಿನಿ ಸುದ್ದಿ6 days ago
ಇಂದು ಕನ್ನಡ ಬಿಗ್ ಬಾಸ್ ಸೀಸನ್ 8 ಗ್ರ್ಯಾಂಡ್ ಓಪನಿಂಗ್ | ಒಂಟಿ ಮನೆಯಲ್ಲಿ ಯಾರೆಲ್ಲಾ ಇರಲಿದ್ದಾರೆ ಗೊತ್ತಾ..?
-
ಸಿನಿ ಸುದ್ದಿ6 days ago
ರಾಬರ್ಟ್ ನ ಫಸ್ಟ್ ವಿಡಿಯೋ ಸಾಂಗ್ ರಿಲೀಸ್ : ಬೇಬಿ ಡಾನ್ಸ್ ವಿಡಿಯೋ ನೀವೂ ನೋಡಿ..!
-
ಭಾವ ಭೈರಾಗಿ6 days ago
ಕವಿತೆ | ಕಾಮಧೇನು
-
ನಿತ್ಯ ಭವಿಷ್ಯ7 days ago
ಜ್ಯೋತಿಷ್ಯಶಾಸ್ತ್ರ | ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು..? ಕಂಕಣಬಲ ಕೂಡಿ ಬರಲು ಏನು ಮಾಡಬೇಕು..?
-
ನಿತ್ಯ ಭವಿಷ್ಯ7 days ago
ಭಾನುವಾರ ರಾಶಿ ಭವಿಷ್ಯ : ಈ ರಾಶಿಯವರಿಗೆ ಈ ವಾರದ ಒಳಗಡೆ ಹಣಕಾಸಿನ ಸುರಿಮಳೆ ಆಗಲಿದೆ..!
-
ನಿತ್ಯ ಭವಿಷ್ಯ6 days ago
ಸೋಮವಾರ ರಾಶಿ ಭವಿಷ್ಯ : ಕರೆ ಮಾಡಿ ಕಷ್ಟಗಳನ್ನು ಪರಿಹರಿಸಿಕೊಳ್ಳಿ
-
ನಿತ್ಯ ಭವಿಷ್ಯ6 days ago
ಮೂಲಾ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಅದರ ಮಾಹಿತಿ..!
-
ದಿನದ ಸುದ್ದಿ5 days ago
‘ಅನುಗ್ರಹ’ ಯೋಜನೆ ರಾಜ್ಯದಲ್ಲಿ ಮರುಜಾರಿಗೊಳಿಸದಿದ್ದರೆ ವಿಧಾನಸಭೆಯಲ್ಲಿ ಹೋರಾಟ : ಸಿದ್ದರಾಮಯ್ಯ ಎಚ್ಚರಿಕೆ