ದಿನದ ಸುದ್ದಿ
ಸಾವಿರ ರೂ. ಹೊಸ ನೋಟಲ್ಲಿ ಗುಜರಾತ್ ರಾಣಿ ಉದಯಮತಿ ಇತಿಹಾಸ ?

ಸುದ್ದಿದಿನ ಡೆಸ್ಕ್: ಹೊಸದಾಗಿ ಬಿಡುಗಡೆಯಾಗಲಿರುವ ಸಾವಿರ ರೂ.ನೋಟುಗಳಲ್ಲಿ ಗುಜರಾತ್ ರಾಣಿ ಉದಯಮತಿ ಇತಿಹಾಸ ಇದೆ ಎನ್ನುವ ವಿಷಯ ಈಗ ಜಾಅಲತಾಣಗಳಲ್ಲಿ ಹರಿದಾಡುತ್ತಿವೆ.
ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿರೋ 100 ರ ಹೊಸ ನೋಟಿಗೂ.. ಗುಜರಾತ್ನ ರಾಣಿಗೂ, ಪ್ರಧಾನಿ ಮೋದಿಗೂ ಒಂದು ಲಿಂಕ್ ಇದೆ. ಅದೇನಪ್ಪಾ ಅಂದ್ರೆ ರಿಲೀಸ್ ಆಗಲಿರೋ ಹೊಸ 100 ರ ನೋಟಿನಲ್ಲಿ ಗುಜರಾತ್ ರಾಣಿಯ ಇತಿಹಾಸವನ್ನ ಸಾರುವ ರಾಣಿ ಕಿ ವಾವ್ ಚಿತ್ರವನ್ನ ಸೇರಿಸಿದೆ.
ಈ ರಾಣಿ ಕಿ ವಾವ್ ಗುಜರಾತ್ನ ಪಠಾಣ್ನಲ್ಲಿರೋ ಪಾರಂಪರಿಕ ಸ್ಥಳ. ಯುನ್ಸ್ಕೋನ ವಿಶ್ವ ಪ್ರಸಿದ್ದ ಪಾರಂಪರಿಕ ಸ್ಥಳಗಳ ಪೈಕಿ ಇದೂ ಒಂದು.. ಈ ರಾಣಿ ಕಿ ವಿವಾ ತಲೆ ಕೆಳಗಾದ ದೇವಸ್ಥಾನವೂ ಹೌದು ಹಾಗೂ ಜಲ ಶೇಖರಣೆ ಮಾಡುವ ಮೆಟ್ಟಿಲಿನ ಬಾವಿಯೂ ಕೂಡ.. ನಿಜಕ್ಕೂ ಇದರ ನಿರ್ಮಾಣ ಅಚ್ಚರಿ ಆಗುತ್ತೆ. ಇಂತಹ ಒಂದು ಸ್ಮಾರಕವನ್ನ ನಿರ್ಮಿಸಿದ ಆ ರಾಣಿಯ ಹೆಸರು ಉದಯಮತಿ.
11 ನೇ ಶತಮಾನದಲ್ಲಿ ಚೌಲುಕ್ಯ ಸಾಮ್ರಾಜ್ಯದ ಭೀಮ ಮಹಾರಾಜನ ನೆನಪಿಗಾಗಿ ರಾಣಿ ಉದಯಮತಿ ಮತ್ತು ಮಗ ಕರ್ಣ ಈ ದೇವಾಲಯದ ಬಾವಿಯನ್ನ ನಿರ್ಮಿಸಿದ್ರು.. ಈ ದೇವಾಲಯದ ಪಕ್ಕದಲ್ಲೇ ಸರಸ್ವತಿ ನದಿ ಹರೀತಿರೋದ್ರಿಂದ ಅಲ್ಲಿನ ನೀರನ್ನ ಇಲ್ಲಿ ಶೇಖರಣೆ ಮಾಡಲಾಗ್ತಿತ್ತು.. ಈ ದೇವಾಲಯದಲ್ಲಿ ವಿಷ್ಣು, ರಾಮ, ಕೃಷ್ಣ, ನರಸಿಂಹ, ವಾಮನ ವರಾಹಿ ದೇವರುಗಳು ಸೇರಿದಂತೆ ಅನೇಕ ಶಿಲಾಕೃತಿಗಳನ್ನ ಕೆತ್ತಲಾಗಿದೆ.. ಏಳು ಗ್ಯಾಲರಿಗಳಲ್ಲಿ ಸುಮಾರು 800 ಕಲಾಕೃತಿಗಳಿರೋ ಈ ರಾಣಿ ಕಿ ವಾವ್ ಇವತ್ತಿಗೂ ತನ್ನ ಸೌಂದರ್ಯವನ್ನ ಕೆಡಿಸಿಕೊಳ್ಳದೇ ಪ್ರವಾಸಿಗರನ್ನ ಆಕರ್ಷಿಸುತ್ತಿದೆ..
ಸದ್ಯ ಈ ರಾಣಿ ಕಿ ವಾವ್ ಭಾರತದ ಮೆಟ್ಟಿಲಿನ ಭಾವಿ ಎಂದೇ ಖ್ಯಾತವಾಗಿದೆ. ಇದರ ತಳದಲ್ಲೊಂದು ಸುರಂಗಕ್ಕೆ ಬಾಗಿಲಿದ್ದು ಇಲ್ಲಿಂದ ಹೊರ ನಡೆದರೆ 30 ಕಿ.ಮೀ ದೂರದ ಸಿದ್ದಾಪುರಕ್ಕೆ ಸಂಪರ್ಕ ಕಲ್ಪಿಸುತ್ತದೆ.. ಇನ್ನು ಈ ದೇವಾಲಯದ ಸುತ್ತ ಮುತ್ತ 50-60 ವರ್ಷಗಳ ಹಿಂದೆ ಆಯುರ್ವೇದ ಔಷಧಿಗೆ ಸಂಬಂಧಿಸಿದ ಗಿಡಗಳಿದ್ದವಂತೆ. ಇದರ ಪರಿಣಾಮವೋ ಏನೋ ಈ ಬಾವಿಯಲ್ಲಿನ ನೀರು ಇಂದಿಗೂ ಔಷಧಿಯಾಗಿ ಬಳಸಲಾಗ್ತಿದ್ಯಂತೆ. ಜ್ವರ ಸೇರಿದಂತೆ ಹಲವಾರು ರೋಗಗಳಿಗೆ ಈ ಬಾವಿಯ ನೀರು ಮದ್ದಂತೆ..
ರಾಣಿ ಉದಯಮತಿ ತನ್ನ ಪತಿಗಾಗಿ ನಿರ್ಮಿಸಿದ ಈ ದೇವಾಲಯದ ಬಾವಿ ಮೋದಿ ಮನಸ್ಸನ್ನ ಸೂರೆಗೊಂಡಿದೆ. ಹಾಗಾಗಿ ಇದನ್ನ 2016 ರಲ್ಲಿ ಮೋದಿ ಅವರು ಸ್ವಚ್ಚ ಪಾರಂಪರಿಕ ತಾಣ ಎಂದು ಘೋಷಿಸಿದ್ದಾರೆ. ಅಷ್ಟೇ ಅಲ್ಲ ಮಹೇಶ ಬಾಬು ನಟಿಸಿರೋ ತೆಲಗಿನ ದೂಕುಡು ಚಿತ್ರದ ಶೂಟಿಂಗ್ ಕೂಡ ಇಲ್ಲೇ ನಡೆದಿದೆ. ಇದೀಗ ಮೋದಿ ಬಿಡುಗೆಡೆ ಮಾಡಲಿರೋ 100ರ ನೋಟಿನಲ್ಲೂ ಸ್ಥಾನ ಪಡೆದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕೋವಿಡ್-19 ವ್ಯಾಕ್ಸಿನ್ ಡೇಟಾ ಎಂಟ್ರಿಗೆ ಜನ ಮಾಹಿತಿ ನೀಡ್ತಿಲ್ಲ ; ಲಸಿಕೆ ಹಾಕಿಸಿಕೊಳ್ಳೋಕೆ ಒಪ್ತಿಲ್ಲ..!

ಸುದ್ದಿದಿನ,ಬೆಂಗಳೂರು: ಕೊರೋನಾ ಎರಡನೇ ಅಲೆಯ ಆತಂಕದ ಮಧ್ಯೆ ಸಾರ್ವಜನಿಕರಿಗೆ ಕೋವಿಡ್-19 ವ್ಯಾಕ್ಸಿನ್ ವಿತರಣೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಹೈ ರಿಸ್ಕ್ ಕೇಸ್ ಮತ್ತೆ 50 ವರ್ಷ ಮೇಲ್ಪಟ್ಟವರ ಪಟ್ಟಿಯನ್ನು ಸಿದ್ಧಗೊಳಿಸಲು ಆರೋಗ್ಯ ಇಲಾಖೆಯು ಹರಸಾಹಸ ಪಡುತ್ತಿದೆ.
ಮನೆ ಮನೆಗಳ ಸರ್ವೇ ವೇಳೆ ಕೋವಿಡ್-19 ವ್ಯಾಕ್ಸಿನ್ ಡೇಟಾ ಎಂಟ್ರಿಗೆ ಸಾರ್ವಜನಿಕರು ಮಾಹಿತಿ ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರಿಯಾದ ಮಾಹಿತಿ ಸಿಗದ ಆಶಾ ಕಾರ್ಯಕರ್ತೆಯರು ಆರೋಗ್ಯಾಧಿಕಾರಿಗಳ ಪರದಾಟವನ್ನು ಪಬ್ಲಿಕ್ ಕನ್ಮಡ ಖಾಸಗಿವಾಹಿನಿಯು ವರದಿ ಮಾಡಿದೆ.
ಸಾರ್ವಜನಿಕರಿಗೆ ಮಾರ್ಚ್ 1 ರಿಂದ ಕೊರೊನಾ ಲಸಿಕೆಯನ್ನು ವಿತರಿಸಲು ಆರೋಗ್ಯ ಇಲಾಖೆಯು ತಯಾರಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಮತ್ತು ಹಲವು ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆ ನೀಡಲು ಇಲಾಖೆ ನಿರ್ಧಾರ ಮಾಡಿದೆ.
ಸಾರ್ವಜನಿಕರು ಸರಿಯಾದ ಮಾಹಿತಿ ನೀಡ್ತಿಲ್ಲ
ರಾಜ್ಯದಲ್ಲಿ 50 ವರ್ಷ ಮೇಲ್ಪಟ್ಟವರು ಮತ್ತು ಹಲವು ಕಾಯಿಲೆಯಿಂದ ಬಳಲುತ್ತಿರುವ ಜನ ಎಷ್ಟಿದ್ದಾರೆ ? ಎಷ್ಟು ವ್ಯಾಕ್ಸಿನ್ ಕೊಡಬೇಕು? ಫಲಾನುಭವಿಗಳು ಎಷ್ಟು ಮಂದಿ ಆಗುತ್ತಾರೆ ಎಂದು ತಿಳಿಯಲು ಸರ್ಕಾರ ಸರ್ವೇ ನಡೆಸುತ್ತಿದೆ.
ಈ ಸರ್ವೇಯನ್ನು ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಸ್ವಯಂ ಸೇವಕರು ನಡೆಸುತ್ತಿದ್ದಾರೆ. ಆದರೆ ಸರ್ವೇ ವೇಳೆ ಸಾರ್ವಜನಿಕರು ಸರಿಯಾದ ಮಾಹಿತಿ ನೀಡುತ್ತಿಲ್ಲ. ಆರೋಗ್ಯ ಸಿಬ್ಬಂದಿ ಜೊತೆ ಶನಿವಾರ ಕನ್ನಡ ಸುದ್ದಿವಾಹಿನಿ ಸರ್ವೇಗೆ ಇಳಿದಾಗ ಅಲ್ಲಿನ ವಾಸ್ತವ ಬಯಲಾಗಿದೆ.
ಇದನ್ನೂ ಓದಿ | ಕೃಷಿ ಸಿಂಚಾಯಿ ಯೋಜನೆ | ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಪ್ಯಾಲೇಸ್ ಗುಟ್ಟಹಳ್ಳಿಯ ಜಟಕಾಸ್ಟಾಂಡ್ ವಸತಿ ಗೃಹದ ಸಂಕೀರ್ಣದ ಬಳಿ ಸುದ್ದಿವಾಹಿನಿ ಸರ್ವೇಗೆ ಇಳಿದಾಗ ಅಲ್ಲಿನ ಮನೆಯವರು ಸ್ಪಂದಿಸಿದ್ದಾರೆ. ಆರೋಗ್ಯ ಸಿಬ್ಬಂದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. ವ್ಯಾಕ್ಸಿನ್ ತೆಗೆದುಕೊಳ್ಳೋದು ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸುದ್ದಿವಾಹಿನಿ ವರದಿ ಮಾಡಿದೆ.
ಬಾಂಧವ್ಯ ನಗರದಲ್ಲಿ ಸರ್ವೆಗೆ ಅಂತಾ ಒಂದು ಮನೆಗೆ ಸುದ್ದಿವಾಹಿನಿ ತಂಡ ತೆರಳಿದೆ ಅಲ್ಲಿನ ನಿವಾಸಿ ನಿಮಗೆ ಎಷ್ಟು ವಯಸ್ಸು ಎಂದರೆ ಅವರು ಒಂದು ಬಾರಿ 49 ವರ್ಷ ಎನ್ನುತ್ತಾರೆ. ಮತ್ತೊಮ್ಮೆ 51 ವರ್ಷ ಎನ್ನುತ್ತಾರೆ.
ಮನೆಯಲ್ಲಿಯೇ ಇದ್ದ ಅವರು ಆಧಾರ್ ಕಾರ್ಡ್ ವೋಟರ್ ಐಡಿ ಕೇಳಿದ್ರೆ ಇಲ್ಲ ಅಂತಾರೆ. ವ್ಯಾಕ್ಸಿನ್ ಮಾತ್ರ ತೆಗೆದುಕೊಳ್ಳುತ್ತೇವೆ ಎಂದು ಹೇಳುತ್ತಾರೆ. ಕೆಲವರು ನಾವು ಆರೋಗ್ಯವಾಗಿದ್ದು, ಲಸಿಕೆ ಬೇಡ ಅಂತ ಹೇಳುತ್ತಾರೆ ಎಂದು ವರದಿಯಲ್ಲಿ ಸುದ್ದಿವಾಹಿನಿ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಗರದ ಬಾರ್ & ರೆಸ್ಟೋರೆಂಟ್ಗಳ ಮೇಲೆ ತಂಬಾಕು ನಿಯಂತ್ರಣ ಅಧಿಕಾರಿಗಳ ದಾಳಿ

ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರದ ಅಬಕಾರಿ ಇಲಾಖೆಯ ವಲಯ-01 ರ ಸಹಯೋಗದೊಂದಿಗೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸರ್ವೇಕ್ಷಣಾಧಿಕಾರಿ ಹಾಗೂ ಕಾರ್ಯಕ್ರಮಾಧಿಕಾರಿಂ ಡಾ.ರಾಘವನ್.ಜಿ.ಡಿ ಅವರನ್ನು ಒಳಗೊಂಡ ತಂಡ ಫೆ.25 ರಂದು ಬಾರ್ & ರೆಸ್ಟೋರೆಂಟ್ಗಳ ಮೇಲೆ ದಾಳಿ ನಡೆಸಿ, ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿದೆ.
30 ಕ್ಕಿಂತ ಹೆಚ್ಚು ಆಸನಗಳಿರುವ ಬಾರ್ & ರೆಸ್ಟೋರೆಂಟ್ಗಳಲ್ಲಿ ‘ನಿರ್ಧಿಷ್ಠ ಧೂಮಪಾನ ವಲಯವನ್ನು ಸ್ಥಾಪಿಸುವುದು ಹಾಗೂ ಬಾರ್ಗಳ ವ್ಯಾಪ್ತಿಯಲ್ಲಿ ಟೇಬಲ್ಗಳ ಮೇಲೆ ಬೆಂಕಿಪೊಟ್ಟಣ, ಲೈಟರ್, ಆ್ಯಶ್ಸ್ಟ್ರೇ ಮತ್ತು ಸಪ್ಲೇಯರ್ಸ ವತಿಯಿಂದ ಯಾವುದೇ ಸಿಗರೇಟು ಒದಗಿಸದಂತೆ ಮಾಲೀಕರು ಜವಾಬ್ದಾರಿಯಿಂದ ಎಚ್ಚರಿಕೆ ವಹಿಸಬೇಕು ಅಲ್ಲದೆ ಎಲ್ಲಾ ರೆಸ್ಟೋರೆಂಟ್ಗಳಲ್ಲಿರುವ ಕೆಲಸಗಾರರು ಕಡ್ಡಾಯವಾಗಿ ಪ್ರತಿ 15 ದಿನಕ್ಕೊಮ್ಮೆ ಕೋವಿಡ್-19 ಪರೀಕ್ಷೆಯನ್ನು ಮಾಡಿಸಬೇಕೆಂದು ಸೂಚಿಸಿದರು.
ಇದನ್ನೂ ಓದಿ |“ರೈತರ ಹಿತ ಕಾಯಲು ಸರ್ಕಾರ ಮಧ್ಯ ಪ್ರವೇಶಿಸುವ ಅತ್ಯಗತ್ಯ” ಕಾರ್ಯಗಾರ
ಕೋಟ್ಪಾ ಸೆಕ್ಷನ್-4 ರ ಅಡಿಯಲ್ಲಿ ನಿಯಮ ಉಲ್ಲಂಘನೆಯ 23 ಪ್ರಕರಣಗಳಿಗೆ ರೂ. 2300, ಸೆಕ್ಷನ್-6ಎ ಅಡಿಯಲ್ಲಿ 2 ಪ್ರಕರಣಕ್ಕೆ ರೂ. 200 ಸೇರಿದಂತೆ ಒಟ್ಟು 25 ಪ್ರಕರಣಗಳಿಗೆ 2500 ರೂ ದಂಡ ವಸೂಲಾಗಿದೆ ಎಂದರು.
ದಾಳಿಯಲ್ಲಿ ಅಬಕಾರಿ ನಿರೀಕ್ಷಕ ವಿನೋದ್.ಬಿ ಕಾಳಪ್ಪಗೋಳ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ್, ಸಮಾಜ ಕಾರ್ಯಕರ್ತ ದೇವರಾಜ್.ಕೆ.ಪಿ, ಅಬಕಾರಿ ಇಲಾಖೆಯ ಸಬ್ಇನ್ಸ್ಪೆಕ್ಟರ್ ಶಂಕರಪ್ಪ, ಕಾನ್ಸ್ಟೇಬಲ್ ಶಿವರಾಜ್ ಪಾಟೀಲ್ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
“ರೈತರ ಹಿತ ಕಾಯಲು ಸರ್ಕಾರ ಮಧ್ಯ ಪ್ರವೇಶಿಸುವ ಅತ್ಯಗತ್ಯ” ಕಾರ್ಯಗಾರ

ಸುದ್ದಿದಿನ,ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸರ್ಕಾರದ ಸಮರ್ಥ ಮಧ್ಯ ಪ್ರವೇಶವೂ ಅಗತ್ಯ. ಇದನ್ನು ರಾಜ್ಯದ ವಿವಿಧ ಭಾಗಗಳ ರೈತರಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಇಂದು ನಗರದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಒಂದು ದಿನದ ತಾಂತ್ರಿಕ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಪೃತ್ವಿ ಪ್ರತಿಷ್ಠಾನ, ಮಳೆ ಆಶ್ರಿತ ಕೃಷಿ ಪುನರುಜ್ಜೀವನ ಜಾಲ ಹಾಗೂ ಪರ್ಯಾಯ ಕಾನೂನು ವೇದಿಕೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ “ರೈತರ ಹಿತ ರಕ್ಷಣೆಗೆ ಸರ್ಕಾರದ ಮಧ್ಯ ಪ್ರವೇಶ ಅತ್ಯಗತ್ಯ” ಕಾರ್ಯಗಾರದಲ್ಲಿ ಕೃಷಿ ಆರ್ಥಿಕ ತಜ್ಞರಾದ ಡಾ. ಪ್ರಕಾಶ್ ಕಮ್ಮರಡಿ, ಕಾನೂನು ತಜ್ಞ ವಿನಯ್ ಶ್ರೀನಿವಾಸ್, ಕೃಷಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕಿ ಡಾ. ಗ್ರೇಸಿ ಸಿ.ಪಿ ಹಾಗೂ ರೈತ ಮುಖಂಡರಾದ ಕುರಬೂರು ಶಾಂತಕುಮಾರ್ ಮುಂತಾದವರು ಕಳೆದ ದಶಕಗಳಲ್ಲಿ ಕೃಷಿ ಕ್ಷೇತ್ರದಲ್ಲಾದ ಏರಿಳಿತಗಳು ಹಾಗೂ ರೈತರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ರೈತರೊಂದಿಗೆ ಚರ್ಚೆ ನಡೆಸಿದರು.
ಇದನ್ನೂ ಓದಿ | ಫೆ.28ಕ್ಕೆ ಎಫ್ ಡಿ ಎ ಪರೀಕ್ಷೆ | ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ
ಮೊದಲಿಗೆ ಕಾರ್ಯಗಾರದ ಪ್ರಸ್ತಾವನೆಯನ್ನು ಉದ್ದೇಶಿಸಿ ಮಾತನಾಡಿದ ಡಾ. ಟಿ. ಎನ್ ಪ್ರಕಾಶ್ ಕಮ್ಮರಡಿ. ಬೆಳೆಗೆ ಬೆಂಬಲ ಬೆಲೆಯನ್ನು ಕಾನೂನಿನ ಮೂಲಕ ಖಾತ್ರಿಗೊಳಿಸಬೇಕು. ಅವತ್ತಿನ ಕಾಲಕ್ಕೆ ಬೆಳೆ ಬೆಳಡಯುವುದು ಮಾತ್ರ ರೈತನ ಕೆಲಸವಾಗಿತ್ತು. ಮಾರುಕಟ್ಟೆಯ ಜವಾಬ್ದಾರಿಯನ್ನು ಸರ್ಕಾರ ನೋಡಿಕೊಳ್ಳುತ್ತಿತ್ತು. ಆಗ ಕಾಫಿ ಬೋರ್ಡ್, ಟೀ ಬೋರ್ಡ್ ಗಳು ಸಮೃದ್ಧವಾಗಿ, ಸಮರ್ಥವಾಗಿದ್ದವು. ಆದರೆ ಈಗ ಕೃಷಿಯಲ್ಲಿ ಸರ್ಕಾರದ ಮಧ್ಯ ಪ್ರವೇಶವಿಲ್ಲದೆ ಈ ಎಲ್ಲ ನಿಗಮಗಳು ದುರ್ಬಲವಾಗಿವೆ. ರೈತರ ವಿಚಾರದಲ್ಲಿ ತನ್ನ ಜವಾಬ್ದಾರಿಗಳಿಂದ ಜಾರಿಕೊಳ್ಳುವ ಸಲುವಾಗಿ ಸರ್ಕಾರ ಈ ಕಾಯ್ದೆಗಳನ್ನು ತರಲು ಹೊರಟಿದೆ ಎಂದರು.
ಇನ್ನು ತೋಟಗಾರಿಕಾ ಬೆಳೆಗಳು ಸೇರಿದಂತೆ ಇತರ ಪ್ರಮುಖ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು ಎಂಬುದರ ಬಗ್ಗೆ ಮಾತನಾಡಿದ ತಜ್ಞರು. ಕನಿಷ್ಟ ಬೆಂಬಲ ಬೆಲೆಗೆ ಕಾನೂನಿನ ರಕ್ಷಣೆ ನೀಡಿ ಲಾಭದಾಯಕ ಧಾರಣೆ ಖಾತರಿಗೊಳಿಸುವುದು ಕೂಡ ಅಗತ್ಯ ಎಂದು ಅಭಿಪ್ರಾಯ ಪಟ್ಟರು.
ಬೆಂಬಲ ಬೆಲೆಯನ್ನು ಕಾನೂನಿನ ವ್ಯಾಪ್ತಿಗೆ ತರುವಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಮನ್ವಯತೆ ಏರ್ಪಡಬೇಕು ಎಂಬ ಬಗ್ಗೆಯೂ ಚರ್ಚಿಸಲಾಯಿತು.
Courtesy : Mass Media Foundation, New Delhi
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್6 days ago
ವೀರ್ಯಾಣು ಬಲವೃದ್ಧಿಗೆ ಇಲ್ಲಿವೆ ಉಪಾಯಗಳು..!
-
ಅಂತರಂಗ6 days ago
ಅನಾಥರನ್ನಾಗಿಸದ ಅಂತಿಮ ಸಂಗಾತಿ
-
ದಿನದ ಸುದ್ದಿ6 days ago
ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ : ಸಿದ್ದರಾಮಯ್ಯ
-
ರಾಜಕೀಯ6 days ago
ಜನರನ್ನು ಕಷ್ಟಕ್ಕೆ ದೂಡಿ ಮೋದಿ ಸರ್ಕಾರ ಲಾಭಗಳಿಸುತ್ತಿದೆ : ಸೋನಿಯಾ ಗಾಂಧಿ ಕಿಡಿ
-
ಲೈಫ್ ಸ್ಟೈಲ್6 days ago
ಜಾನುವಾರುಗಳ ಲೋಹ ಕಾಯಿಲೆ
-
ದಿನದ ಸುದ್ದಿ5 days ago
ಗೋಮಾಂಸವನ್ನು ವಿದೇಶಕ್ಕೆ ರಫ್ತು ಮಾಡಬಹುದು ; ವಿದೇಶದಿಂದ ಬರುವ ಗೋಮಾಂಸವನ್ನು ತಿನ್ನಬಹುದು, ಬಿಜೆಪಿಯ ಈ ಎಡಬಿಡಂಗಿ ನಿಲುವಿನ ಹಿಂದಿನ ಮರ್ಮ ಏನು..? ಮಾಜಿ ಸಿಎಂ ಸಿದ್ದರಾಮಯ್ಯ
-
ರಾಜಕೀಯ7 days ago
ಮೋದಿಯವರ ನಿಜ ಬಣ್ಣ ಕಾಂಗ್ರೆಸ್ ಪಕ್ಷ ಬಯಲಿಗೆಳೆಯಲಿದೆ : ಸಿದ್ದರಾಮಯ್ಯ
-
ದಿನದ ಸುದ್ದಿ6 days ago
ಚನ್ನಗಿರಿ | ಲಂಚ ಸ್ವೀಕರಿಸಿದ್ದ ಗ್ರಾಮ ಲೆಕ್ಕಾಧಿಕಾರಿಗೆ 2 ವರ್ಷ ಜೈಲು