Connect with us

ದಿನದ ಸುದ್ದಿ

ಇದು ‘ಆತ್ಮ ಬರ್ಬಾದ್’ ಬಜೆಟ್ : ಸಿದ್ದರಾಮಯ್ಯ ಲೇವಡಿ

Published

on

ಸುದ್ದಿದಿನ, ಬೆಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ ಪರಿಹಾರಕ್ಕಾಗಿ “ಆತ್ಮನಿರ್ಭರ’ ಹೆಸರಲ್ಲಿ ಮೂರು ಪ್ಯಾಕೇಜ್ ಗಳನ್ನು ನೀಡಿದ್ದರು. ಅದರ ಮುಂದುವರಿದ ಭಾಗವಾಗಿ ‘ಆತ್ಮಬರ್ಬರ’ ಬಜೆಟ್ ನೀಡಿದ್ದಾರೆ. ಇದೊಂದು ರೀತಿಯಲ್ಲಿ “ ಆತ್ಮ ಬರ್ಬಾದ್’ (ವಿನಾಶ) ಬಜೆಟ್ ಕೂಡಾ ಹೌದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶವ್ಯಕ್ತ ಪಡಿಸಿದರು.

ಬೆಂಗಳೂರಿನಲ್ಲಿ ಕೇಂದ್ರ ಬಜೆಟ್ ಮಂಡನೆ ಬಗ್ಗೆ ಅವರು ಪ್ದತಿಕ್ರಿಯಿಸಿದರು. ಕೊರೊನಾದಿಂದಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ನಷ್ಟವಾಗಿದೆ, ರೈತರು ಬೆಳೆಗೆ ಬೆಲೆ ಇಲ್ಲದೆ ದಿವಾಳಿಸ್ಥಿತಿಯಲ್ಲಿದ್ದಾರೆ, ಉದ್ಯಮಿಗಳು ಮಾರುಕಟ್ಟೆ ಇಲ್ಲದೆ ಕಷ್ಟದಲ್ಲಿದ್ದಾರೆ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ಯಾವ ನಿರ್ದಿಷ್ಠ ಕ್ರಮಗಳು 2021-22ರ ಸಾಲಿನ ಬಜೆಟ್ ನಲ್ಲಿ ಇಲ್ಲ ಎಂದರು.

ಕೊರೊನಾದಿಂದಾಗಿ ನೆಲಕಚ್ಚಿರುವ ಆರ್ಥಿಕತೆಯ ಚೇತರಿಕೆಗಾಗಿ ಜನರ ಕೈಗೆ ದುಡ್ಡು ಸೇರುವಂತೆ ಮಾಡಬೇಕೆಂಬುದು ನಮ್ಮ ದೇಶದ ಮತ್ತು ಅಂತರರಾಷ್ಟ್ರೀಯ ಆರ್ಥಿಕ ತಜ್ಞರೆಲ್ಲರೂ ಸೂಚಿಸಿದ್ದ ಸಾಮಾನ್ಯ ಪರಿಹಾರ. ಸೀತಾರಾಮನ್ ಜನರಿಂದ ಇನ್ನಷ್ಟು ಹಣವನ್ನು ಕಿತ್ತುಕೊಳ್ಳಲು ಹೊರಟಿದ್ದಾರೆಯೇ ಹೊರತು ಅವರ ಜೇಬಿಗೆ ಏನನ್ನೂ ಹಾಕಿಲ್ಲ.

ತೆರಿಗೆ ಎನ್ನುವುದು ಬಜೆಟ್ ಗಳ ಸಾಮಾನ್ಯ ಭಾಗ. ಪ್ರಮುಖವಾಗಿ ತೆರಿಗೆಗಳ ಮೂಲಕವೇ ಸರ್ಕಾರ ತನ್ನ ವೆಚ್ಚಕ್ಕೆ ಬೇಕಾದ ಸಂಪನ್ಮೂಲವನ್ನು ಕ್ರೋಡೀಕರಿಸುತ್ತದೆ. ಆದರೆ ನಿರ್ಮಲಾ ಸೀತಾರಾಮನ್ ಅವರು ನೇರವಾಗಿ ಹೆಚ್ಚು ತೆರಿಗೆ ವಿಧಿಸದೆ, ಕೃಷಿ ಮೂಲಸೌಕರ್ಯ ಸೆಸ್ ಹೇರಿ ರೈತರ ಹೆಸರಲ್ಲಿ ಪರೋಕ್ಷವಾಗಿ ಸಂಪನ್ಮೂಲ ಕ್ರೋಡಿಕರಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಪೆಟ್ರೋಲ್, ಡೀಸೆಲ್, ರಸಗೊಬ್ಬರ, ಕಲ್ಲಿದ್ದಲು, ಪಾಮ್ ಆಯಿಲ್, ಕಡಲೆ, ಬಟಾಣಿ, ಹತ್ತಿಯಿಂದ ಹಿಡಿದು ಸೇಬು,ಮದ್ಯದ ವರೆಗೆ ಎಲ್ಲದರ ಮೇಲೂ ಶೇಕಡಾ 2.5ರಿಂದ ಹಿಡಿದು ಶೇಕಡಾ ನೂರರ ವರೆಗೆ ಕೃಷಿ ಸೆಸ್ ಹೇರಲಾಗಿದೆ. ಇದರಿಂದಾಗುವ ಬೆಲೆ ಏರಿಕೆಗೆ ರೈತರೂ ಸೇರಿದಂತೆ ಎಲ್ಲರೂ ತಲೆಕೊಡಬೇಕಾಗುತ್ತದೆ.

ಕೃಷಿ ಮೂಲಸೌಕರ್ಯ ಸೆಸ್ ನಿಂದಾಗಿ ಬೆಲೆ ಏರಿಕೆಯಾದಾಗ ಜನ ಸರ್ಕಾರವನ್ನಲ್ಲ ರೈತರನ್ನು ದೂರತೊಡಗುತ್ತಾರೆ. ಈ ಮೂಲಕ ಬೆಲೆ ಏರಿಕೆಗೆ ಕೃಷಿ ಸೆಸ್ ಕಾರಣ ಎಂಬ ಜನಾಭಿಪ್ರಾಯವನ್ನು ಮೂಡಿಸಿ ಜನರನ್ನು ರೈತರ ವಿರುದ್ದ ಎತ್ತಿಕಟ್ಟುವ ಹೀನ ಕೃತ್ಯವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ವಾಗ್ದಾಳಿ ಮಾಡಿದರು.

ಕೃಷಿ ಮೂಲಸೌಕರ್ಯ ಸೆಸ್ ನಿಂದಾಗಿ ಸಂಗ್ರಹವಾಗುವ ಹಣ ಎಷ್ಟು? ಇದನ್ನು ಬಳಸಿಕೊಂಡು ಕೃಷಿಕ್ಷೇತ್ರದಲ್ಲಿ ಅನುಷ್ಠಾನಗೊಳ್ಳಲಿರುವ ಮೂಲಸೌಕರ್ಯಗಳ ಯೋಜನೆಗಳೇನು ಎಂಬ ಬಗ್ಗೆ 65 ಪುಟಗಳ ಬಜೆಟ್ ಭಾಷಣದಲ್ಲಿ ಎಲ್ಲಿಯೂ ಉಲ್ಲೇಖ ಇಲ್ಲ. ನೀರಾವರಿ, ಶೈತ್ಯಾಗಾರ, ದಾಸ್ತಾನು ಮಳಿಗೆ ಹೀಗೆ ಯಾವುದೇ ನಿರ್ದಿಷ್ಠ ಯೋಜನೆಗಳನ್ನು ಘೋಷಣೆ ಮಾಡಲಾಗಿಲ್ಲ.

ನೀರಾವರಿ ಯೋಜನೆಗಳು, ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿದಾಗ ಬೆಲೆ ರಕ್ಷಣೆಗೆ ಕ್ರಮಗಳು, ಕಡಿಮೆ ಬಡ್ಡಿದರದಲ್ಲಿ ಸಾಲ, ಕಡಿಮೆ ಬೆಲೆಯಲ್ಲಿ ಬೀಜ-ಗೊಬ್ಬರ ಸೇರಿದಂತೆ ರೈತರ ಅವಶ್ಯಕತೆಗಳನ್ನು ಪೂರೈಸುವ ಯಾವ ಯೋಜನೆಗಳೂ ಬಜೆಟ್ ನಲ್ಲಿ ಇಲ್ಲ.

ದೇಶಾದ್ಯಂತ ರೈತರು ಕಡಿಮೆ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡುವ ಯೋಜನೆಯ ಬಗ್ಗೆ ಒತ್ತಾಯಿಸುತ್ತಾ ಬಂದಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ದಿಯಾಗಬೇಕಾದರೆ ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯ ಸಿಗಬೇಕು. ಇದರ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾವ ಇಲ್ಲ ಎಂದರು.

ಇದೇ ರೀತಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕೃಷಿ ಸಾಲವನ್ನು ಮನ್ನಾ ಮಾಡಬೇಕೆಂಬ ಬೇಡಿಕೆಯನ್ನು ಕಳೆದ ಏಳು ವರ್ಷಗಳಿಂದ ರೈತರು ಮಾಡುತ್ತಾ ಬಂದಿದ್ದಾರೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕಾಂಗ್ರೆಸ್ ಸರ್ಕಾರ ಮಾಡಿದ್ದ ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾವೇ ಕೊನೆಯದ್ದು, ಅದರ ನಂತರ ಈ ಬ್ಯಾಂಕ್ ಗಳ ಸಾಲ ಮನ್ನಾ ಆಗಿಲ್ಲ. ಈ ಸಾಲಮನ್ನಾ ಮಾಡಿದ್ದರೆ ಸಂಕಷ್ಟದಲ್ಲಿರುವ ರೈತರು ಸ್ವಲ್ಪ ನಿರಾಳವಾಗುತ್ತಿದ್ದರು.

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ಚಾಲನೆ ನೀಡಿರುವುದು ರೈತರು ಸೇರಿದಂತೆ ಎಲ್ಲ ಜನವರ್ಗಗಳ ಮೇಲೆ ಇನ್ನೊಂದು ಹೊಡೆತ. ಖಾಸಗಿಕರಣಗೊಂಡರೆ ರೈತರಿಗೆ ಈಗ ಲಭ್ಯ ಇರುವ ಉಚಿತ ವಿದ್ಯುತ್ ಖಂಡಿತ ಕಡಿತ ಆಗಲಿದೆ. ಇದರ ಜೊತೆಗೆ ಸಾಮಾನ್ಯ ಜನರ ಮನೆ ಬಳಕೆಯ ವಿದ್ಯುತ್ ಕೂಡಾ ದುಬಾರಿಯಾಗಲಿದೆ. ಉದ್ಯಮಿಗಳ ಮೇಲೆಯೂ ಹೆಚ್ಚಿನ ಹೊರೆ.

ವಿಮಾ ಕ್ಷೇತ್ರದಲ್ಲಿ 74% ಖಾಸಗಿ ಬಂಡವಾಳ ಹೂಡಿಕೆಗೆ ಅವಕಾಶ ಅಪಾಯಕಾರಿಯಾದ ಬೆಳವಣಿಗೆ. ನಮ್ಮಲ್ಲಿ ಬಹಳ ದುರ್ಬಲವಾದ ಸಾಮಾಜಿಕ ಭದ್ರತಾ ವ್ಯವಸ್ಥೆಯಿದೆ. ವಯಸ್ಸಾದವರು ಮತ್ತು ನಿವೃತ್ತರು ತಮ್ಮ ಆರೋಗ್ಯ ಭದ್ರತೆಗಾಗಿ ವಿಮೆಯನ್ನು ನಂಬಿದ್ದಾರೆ. ಈ ಕ್ಷೇತ್ರದ ಖಾಸಗೀಕರಣದಿಂದಾಗಿ ವಿಮೆಯಿಂದಲೂ ಭದ್ರತೆ ಇಲ್ಲದಂತಾಗುವ ದಿನ ದೂರ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಸಂಸದರಾಗಿದ್ದರೂ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಮೆಟ್ರೋ ಮತ್ತು ಬೆಂಗಳೂರು-ಚೆನ್ನೈ ಕಾರಿಡಾರ್ ಗೆ ನೀಡಿರುವ ಅನುದಾನ ಹೊಸದೇನಲ್ಲ. ಉಳಿದಂತೆ ಹಣಕಾಸು ಸಚಿವರು ಒಮ್ಮೆಯೂ ಕರ್ನಾಟಕದ ಹೆಸರನ್ನೂ ಕೂಡಾ ಎತ್ತಿಲ್ಲ.

ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರಿಗೆ ಯಾವುದೇ ಪರಿಹಾರ ಬಜೆಟ್ನಿಂದ ಸಿಕ್ಕಿಲ್ಲ. ಚುನಾವಣೆ ನಡೆಯುವ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಅಸ್ಸಾಂ ರಾಜ್ಯಗಳಿಗೆ ಹೆಚ್ಚು ಹಣ ನೀಡಲಾಗಿದೆ. ಪ್ರತಿ ವರ್ಷ ಚುನಾವಣೆ ನಡೆಸಿದರೆ ನಮಗೂ ಹೆಚ್ಚಿನ ಅನುದಾನ ನೀಡಬಹುದು ಎಂದರು.

ವಿತ್ತೀಯ ಕೊರತೆ ಶೇ. 3.5ಕ್ಕೆ ತರುವುದಾಗಿ ಹೇಳಿದ್ದರು. ಈಗ ಶೇ. 9.7ಕ್ಕೆ ಏರಿದೆ. ಇದರಿಂದ ಹೆಚ್ಚು ಸಾಲ ಮಾಡಬೇಕಾಗುತ್ತದೆ. ನನ್ನ ಪ್ರಕಾರ ವಿತ್ತೀಯ ಕೊರತೆ ಶೇ.14-15 ಇದೆ. ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಜಿಡಿಪಿ ಬೆಳವಣಿಗೆ ಕುಸಿಯುತ್ತಲೇ ಇದೆ. ಡಾ. ಮನಮೋಹನಸಿಂಗ್ ಅವರ ಅವಧಿಯಲ್ಲಿ ಇದ್ದಿದುಕ್ಕಿಂತ ಕಡಿಮೆಯಾಗುತ್ತಿದೆ.

ಈ ವರ್ಷ ಕೊರೊನಾ ಸಂಕಷ್ಟ ಎದುರಾಗಿತ್ತು. ಆದರೆ, ಕಳೆದ ವರ್ಷ ಏನಾಗಿತ್ತು. ನಿರುದ್ಯೋಗ ಪ್ರಮಾಣ ನಗರದಲ್ಲಿ ಶೇ.9.2. ಇದರಿಂದ ಯುವಕರಿಗೆ ಉದ್ಯೋಗ ಎಲ್ಲಿ ಸಿಗುತ್ತದೆ. ಅವರು ಪಕೋಡಾ ಮಾರಲು ಹೋಗಬೇಕಾಗುತ್ತದೆ. ಈ ವರ್ಷ ಜಿಡಿಪಿ ಬೆಳವಣಿಗೆ -7.7% ಆಗಿದೆ.

2020-2021ನೇ ಸಾಲಿಗೆ ಜಿಡಿಪಿ ಬೆಳವಣಿಗೆಯನ್ನು ಶೇ. 11ಕ್ಕೆ ಏರಿಸುವುದಾಗಿ ಕೇಂದ್ರ ಘೋಷಣೆ ಮಾಡಿದೆ. ಇದು ನಂಬಲು ಸಾಧ್ಯವೇ ? ಇದು ಸುಳ್ಳಿನ ಕಂತೆ. ಅಂಕಿ-ಅಂಶಗಳನ್ನು ನೀಡದೆ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಇದಾಗಿದೆ. ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ವಿವರಗಳನ್ನು ಬಿಚ್ಚಿಟ್ಟದ್ದಕ್ಕಿಂತ ಮುಚ್ಚಿಟ್ಟದ್ದೇ ಹೆಚ್ಚು ಎಂದು ಆರೋಪಿಸಿದರು.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಮೇಲಿನ ಅಬಕಾರಿ ಸುಂಕ ಹೆಚ್ಚಿಸಲಾಗಿದೆ. 80 ಕೋಟಿ ಮಂದಿಗೆ ಅಂದರೆ ಶೇ. 80ರಷ್ಟು ಮಂದಿಗೆ ಪಡಿತರ ಚೀಟಿ ಮೂಲಕ ಆಹಾರ ಧಾನ್ಯ ನೀಡಲಾಗುತ್ತಿದೆ. ಶಾಂತಕುಮಾರ್ ಅವರ ಸಮಿತಿ ವರದಿ ಜಾರಿಗೆ ತಂದರೆ ಶೇ.20ರಷ್ಟು ಮಂದಿ ಮಾತ್ರ ಪಡಿತರ ಮೂಲಕ ಆಹಾರ ಧಾನ್ಯ ಪಡೆಯಲು ಅರ್ಹರಾಗುತ್ತಾರೆ.

ರೈಲ್ವೆ ನಿಲ್ದಾಣ, ಬಂದರು, ವಿಮಾನ ನಿಲ್ದಾಣಗಳನ್ನು ಅಂಬಾನಿ, ಅಂದಾನಿ ಮೊದಲಾದ ಉದ್ಯಮಿಗಳಿಗೆ ಮಾರಲು ಪ್ರಧಾನಿ ನರೇಂದ್ರ ಮೋದಿ ಹೊರಟಿದ್ದಾರೆ. ಇದರಿಂದ ದೇಶ ತನ್ನ ಆಸ್ತಿ ಕಳೆದುಕೊಳ್ಳುವುದಲ್ಲದೆ ತಳಸಮುದಾಯ ಮೀಸಲಾತಿ ಸೌಲಭ್ಯವನ್ನೂ ಕಳೆದುಕೊಳ್ಳಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending