Connect with us

ಬಹಿರಂಗ

ಭಾರತ ಸರ್ವಾಧಿಕಾರಿ ಆಡಳಿತದತ್ತ ಜಾರಿಕೆ : ಸ್ವಿಡನ್ ಸ್ವಾಯತ ಸಂಸ್ಥೆಯೊಂದರ ಸರ್ವೇಕ್ಷಣಾ ವರದಿ

Published

on

  • ಡಾ. ಜೆ ಎಸ್ ಪಾಟೀಲ

ಅಂತರಾಷ್ಟ್ರೀಯ ಸಂಸ್ಥೆಯೊಂದರ ಸರ್ವೇಕ್ಷಣಾ ವರದಿಯ ಪ್ರಕಾರ ಭಾರತವು ಪ್ರಜಾಪ್ರಭುತ್ವದಿಂದ ಸರ್ವಾಧಿಕಾರಿ ಆಡಳಿತಕ್ಕೆ ಜಾರುತ್ತಿರುವ ಜಗತ್ತಿನ ಹತ್ತು ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಭಾರತವು ಈಗ ಪಾಕಿಸ್ತಾನದಂತೆ ಸರ್ವಾಧಿಕಾರಿಯಾಗಿದೆ ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯು ಬಾಂಗ್ಲಾದೇಶಕ್ಕಿಂತ ಕೆಟ್ಟದಾಗಿದೆ ಎನ್ನುತ್ತದೆ ಸ್ವೀಡನ್ ಸಂಸ್ಥೆಯ ಒಂದು ಪ್ರಜಾಪ್ರಭುತ್ವ ವರದಿ.

ಫ್ರೀಡಂ ಹೌಸ್ ವರದಿಯು ಭಾರತವು ಈಗ ‘ಭಾಗಶಃ ಮುಕ್ತ ಸ್ವಾತಂತ್ರ ದೇಶವಾಗಿದೆ’ ಎಂದು ಹೇಳಿದ ನಂತರ, ವಿ-ಡೆಮ್ ಸಂಸ್ಥೆಯ ಪ್ರಜಾಪ್ರಭುತ್ವ ವರದಿಯು ಭಾರತವು ‘ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ಚುನಾವಣಾ ಸರ್ವಾಧಿಕಾರಿ ಆಡಳಿತ ವ್ಯವಸ್ಥೆಗೆ ಇಳಿಸಿದೆ ಎಂದಿದೆ*

ದಿ ಪ್ರಿಂಟ್ ಜಾಲತಾಣ ಮಾಧ್ಯಮದಲ್ಲಿ ಶುಭಂಗಿ ಮಿಶ್ರಾ ಎನ್ನುವ ಅಂಕಣಕಾರರು ಇದೇ 11 ಮಾರ್ಚ್ ರಂದು ಈ ಕುರಿತು ಒಂದು ರೋಚಕ ಮತ್ತು ಅಷ್ಟೇ ಭಯಾನಕ ವರದಿಯನ್ನು ಮಾಡಿದ್ದಾರೆ. ಸ್ವೀಡನ್‌ನ ವಿ-ಡೆಮ್ ಇನ್‌ಸ್ಟಿಟ್ಯೂಟ್‌ನ ಐದನೇ ವಾರ್ಷಿಕ ಪ್ರಜಾಪ್ರಭುತ್ವ ವರದಿಯು ಭಾರತದಲ್ಲಿ ‘ಸರ್ವಾಧಿಕಾರಿ ಆಡಳಿತೀಕರಣ ವೈರಲ್ ಆಗುತ್ತದೆ’ ಎಂಬ ಶೀರ್ಷಿಕೆಯ ಅಡಿಯಲ್ಲಿ ಪ್ರಸ್ತುತ ಆಡಳಿತವು ಭಾರತವನ್ನು “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ” ವ್ಯವಸ್ಥೆಯಿಂದ “ಚುನಾವಣಾ ಸರ್ವಾಧಿಕಾರ” ವ್ಯವಸ್ಥೆಗೆ ಇಳಿಸಿದೆ ಎಂದಿದೆಯಲ್ಲದೆ ಈಗ ಭಾರತದಲ್ಲಿ ಮಾಧ್ಯಮಗಳು ಗೊಂದಲದಲ್ಲಿದ್ದು ಸರಕಾರ ಅತಿಯಾಗಿ ಮಾನಹಾನಿ ಮತ್ತು ದೇಶದ್ರೋಹ ಕಾನೂನುಗಳ ದುರ್ಬಳಕೆ ಮಾಡುತ್ತಿರುವ ಕುರಿತು ವಿಸ್ತ್ರತವಾಗಿ ಟಿಪ್ಪಣಿ ಮಾಡಿದೆ.

ವಿ-ಡೆಮ್ (ವೈವಿಧ್ಯತೆಯ ಪ್ರಜಾಪ್ರಭುತ್ವ) 1789 ರಿಂದ 2020 ರವರೆಗೆ 202 ದೇಶಗಳಿಗೆ ಸುಮಾರು 30 ಮಿಲಿಯನ್ ಡಾಟಾ ಪಾಯಿಂಟ್‌ಗಳನ್ನು ಹೊಂದಿರುವ ಪ್ರಜಾಪ್ರಭುತ್ವದ ಅತಿದೊಡ್ಡ ಡೇಟಾಸೆಟ್ ಅನ್ನು ಉತ್ಪಾದಿಸುತ್ತದೆ ಎಂದು ಹೇಳಿಕೊಂಡಿದೆ. ಅಮೆರಿಕೆಯ ವಾಚ್‌ಡಾಗ್ ಫ್ರೀಡಂ ಹೌಸ್ ತನ್ನ ‘ವಿಶ್ವದ ಸ್ವಾತಂತ್ರ್ಯ’ ಎಂಬ ಸವಿವರ ವರದಿಯಲ್ಲಿ ಭಾರತದ ಸ್ಥಿತಿಯು “ಭಾಗಶಃ ಜನತಂತ್ರ ಮುಕ್ತ” ಕ್ಕೆ ಇಳಿದಿದೆ ಎಂದು ಪ್ರಕಟಿಸಿದ ಒಂದು ವಾರದೊಳಗೆ ವಿ-ಡೆಮ್ ಇನ್ಸ್ಟಿಟ್ಯೂಟ್ ನ ಈ ಅಘಾತಕಾರಿ ವರದಿ ಹೊರಬಿದ್ದಿದೆ.

ಇದನ್ನೂ ಓದಿ | ಶಿಷ್ಯವೇತನ | ಆನ್‍ಲೈನ್ ಅರ್ಜಿ ಅವಧಿ ವಿಸ್ತರಣೆ

ಭಾರತದ ಸ್ಕೋರ್ 2013 ರಲ್ಲಿ ಸಾರ್ವಕಾಲಿಕ ಗರಿಷ್ಠ 0.57 (0-1 ರ ಸ್ಕೇಲಿನಲ್ಲಿ) ಆಗಿರುತ್ತಿದ್ದು, 2020 ರ ಅಂತ್ಯದ ವೇಳೆಗೆ ಅದು 0.34 ಕ್ಕೆ ಕುಸಿದಿದೆ. ಅಂದರೆ ಏಳು ವರ್ಷಗಳಲ್ಲಿ 23 ಶೇಕಡ ಪಾಯಿಂಟ್‌ಗಳ ನಷ್ಟ ಅನುಭವಿಸಿದೆ. 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಮತ್ತು ಆ ಪಕ್ಷದ ಹಿಂದೂ ರಾಷ್ಟ್ರೀಯವಾದಿ ಗುಪ್ತ ಕಾರ್ಯಸೂಚಿಯ ಪರಿಣಾಮದಿಂದ ಭಾರತದಲ್ಲಿ ಜನತಂತ್ರ ವ್ಯವಸ್ಥೆಯು ಹೆಚ್ಚಿನ ಮಟ್ಟದಲ್ಲಿ ಕುಸಿತ ಕಂಡಿದೆ ಎಂದು ಈ ವರದಿ ಹೇಳುತ್ತದೆ.

ಭಾರತವು ಈ ದಿಶೆಯಲ್ಲಿ ಈಗ ಪಾಕಿಸ್ತಾನದಂತೆ ಧಾರ್ಮಿಕ ಉನ್ಮಾದವನ್ನು ಹುಟ್ಟಿಸುತ್ತ, ನಕಲಿ ದೇಶಭಕ್ತಿಯನ್ನು ಪ್ರತಿಪಾದಿಸಿ ಸರ್ವಾಧಿಕಾರಿಯಾಗಿ ಬದಲಾಗಿದೆ ಮತ್ತು ಭಾರತದ ಜನತಂತ್ರ ವ್ಯವಸ್ಥೆಯು ಅದರ ನೆರೆಯ ಮತ್ತೆರಡು ರಾಷ್ಟ್ರಗಳಾದ ಬಾಂಗ್ಲಾದೇಶ ಮತ್ತು ನೇಪಾಳಕ್ಕಿಂತ ಕೆಟ್ಟದಾಗಿದೆ. ಸಾಮಾನ್ಯವಾಗಿ, ಕಳೆದ ಏಳು ವರ್ಷಗಳ ಮೋದಿ ನೇತೃತ್ವದ ಸರ್ಕಾರವು ತನ್ನನ್ನು ಪ್ರಶ್ನಿಸುವ ಮತ್ತು ಸರಕಾರದ ಹುಳುಕುಗಳನ್ನು ಎತ್ತಿ ತೋರಿಸುವ ಜನರ ವಿರುದ್ಧ ದೇಶದ್ರೋಹ, ಮಾನಹಾನಿ ಮತ್ತು ಭಯೋತ್ಪಾದನಾ ನಿಗ್ರಹದ ಕಾನೂನುಗಳನ್ನು ಬಳಸುವ ಮೂಲಕ ಜನತಂತ್ರ ಹಾಗು ಅಭಿವ್ಯಕ್ತಿ ಸ್ವಾತಂತ್ರದ ಧ್ವನಿಯನ್ನು ಅಡಗಿಸಲು ಪ್ರಯತ್ನಿಸಿದೆ.

ಬಹುತೇಕ ಸ್ವತಂತ್ರ ಮತ್ತು ನಿರ್ಬಿಡೆಯ ಮಾಧ್ಯಮಗಳ ವರದಿಗಳನ್ನು ಸೆನ್ಸಾರ್ ಮಾಡಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಬಿಜೆಪಿ ಅಧಿಕಾರ ವಹಿಸಿಕೊಂಡ ನಂತರ 7,000 ಕ್ಕೂ ಹೆಚ್ಚು ಜನರ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗಿದೆ ಮತ್ತು ಹೆಚ್ಚಿನ ಆರೋಪಿಗಳು ಆಡಳಿತ ಪಕ್ಷದ ಕಟು ವಿಮರ್ಶಕರು ಎಂದು ವರದಿ ಹೇಳುತ್ತದೆ.

ಮೋದಿ ಸರಕಾರವು ಗರಿಷ್ಠ ಮಟ್ಟದಲ್ಲಿ ಮಾನಹಾನಿ ಕಾನೂನಿನ ದುರ್ಬಳಕೆಯನ್ನು ಸರಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ, ಮುಂತಾದ ಸಂಗತಿಗಳ ಕುರಿತು ನೈಜ ವರದಿ ಮಾಡುವ ಪತ್ರಕರ್ತರನ್ನು ದಮನಿಸಲು ಬಳಸಿದೆ. ಅದಲ್ಲದೆ, ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯ (ಯುಎಪಿಎ) ದುರ್ಬಳಕೆಯ ಮೂಲಕ ಮೋದಿ ಸರಕಾರ ನಾಗರಿಕ ಸಮಾಜದ ಮೇಲೆ ಅನೇಕ ಬಗೆಯ ನಿರ್ಬಂಧಗಳನ್ನು ಹೇರಿದೆ. ಸರಕಾರದ ಈ ದಮನಕಾರಿ ನಡೆಯು ದೇಶದ ಸಂವಿಧಾನದ ಬದ್ಧತೆ ಮತ್ತು ಜಾತ್ಯತೀತತೆಗೆ ವಿರುದ್ಧವಾಗಿದೆ ಎಂದು ಆ ವರದಿ ಹೇಳುತ್ತದೆ.

ಆಗಸ್ಟ್ 2019 ರಲ್ಲಿ ತಿದ್ದುಪಡಿ ಮಾಡಲಾದ ಕಾನೂನನ್ನು ರಾಜಕೀಯ ವಿರೋಧಿಗಳಿಗೆ ಹಣಿಯಲು, ಬೆದರಿಸಲು ಮತ್ತು ಬಂಧಿಸಲು ಬಳಸಲಾಗುತ್ತಿದೆ. ಜೊತೆಗೆ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪ್ರತಿಭಟಿಸುವ ಜನರನ್ನು ದಮನಿಸಲು ಬಳಸಲಾಗಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿನ ಭಿನ್ನಾಭಿಪ್ರಾಯಗಳ ಧ್ವನಿಯಡಗಿಸಲು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯ(ಯುಎಪಿಎ)ನ್ನು ದುರ್ಬಳಕೆ ಮಾಡಲಾಗುತ್ತಿದೆ.

ದೇಶದ ವಿಶ್ವವಿದ್ಯಾನಿಲಯಗಳಲ್ಲಿನ ವಿದ್ಯಾರ್ಥಿಗಳು ಮತ್ತು ಸಾಮಾನ್ಯ ನಾಗರಿಕರು ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ(ಸಿಎಎ) ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿದ್ದಾಗ ಸಾಮಾಜಿಕ ಕಾರ್ಯಕರ್ತರು ಮತ್ತು ವಿಶ್ವವಿದ್ಯಾಲಯಗಳಲ್ಲಿನ ವಿದ್ಯಾರ್ಥಿಗಳನ್ನು ಇದೇ ಕಾಯ್ದೆಯಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ಸರಕಾರ ಮತ್ತು ಸರಕಾರವನ್ನು ನಿಯಂತ್ರಿಸುತ್ತಿರುವ ಹಿಂದುತ್ವ ಸಿದ್ಧಾಂತದ ಸಂಘಟನೆ ಮತ್ತು ಅವುಗಳ ಅಪಾಯಕಾರಿ ಕಾರ್ಯಸೂಚಿಗಳೊಡನೆ ಹೊಂದಾಣಿಕೆ ಮಾಡಿಕೊಳ್ಳದ ವ್ಯಕ್ತಿ, ಸಂಸ್ಥೆಗಳು ಹಾಗು ದೇಶದ ಸಂವೇದನಾಶೀಲ ನಾಗರಿಕ ಸಮಾಜವು ಮೋದಿ ಸರಕಾರದ ಈ ದಮನಕಾರಿ ನೀತಿಯಿಂದ ಹೆಚ್ಚು ಗೊಂದಲಕ್ಕೊಳಗಾಗಿದೆ ಎಂದು ವರದಿ ಹೇಳುತ್ತದೆ.

ಸಿವಿಲ್ ಸೊಸೈಟಿ ಸಂಸ್ಥೆಗಳ (ಸಿಎಸ್ಒ) ಪ್ರವೇಶ, ನಿರ್ಗಮನ ಮತ್ತು ಕಾರ್ಯನಿರ್ವಹಣೆಯನ್ನು ನಿರ್ಬಂಧಿಸಲು ಬಿಜೆಪಿ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಯನ್ನು ಹೆಚ್ಚು ದುರ್ಬಳಕೆ ಮಾಡಿಕೊಂಡಿದೆ ಎಂದು ಈ ವರದಿ ಹೇಳಿದೆ.

ಸಂಘಟನೆಯ ಐದನೇ ವಾರ್ಷಿಕ ವರದಿಯು ಕಳೆದ ಒಂದು ದಶಕದಲ್ಲಿ ನಡೆದ ಜಾಗತಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿಶ್ವದ ಪ್ರಜಾಪ್ರಭುತ್ವ ರಾಷ್ಟ್ರಗಳ ಸ್ಥಿತಿಯು ಆತಂಕಕ್ಕೀಡು ಮಾಡಿದೆ ಎಂದಿದೆ. ಜಾಗತಿಕ ಮಟ್ಟದಲ್ಲಿ ಉದಾರವಾದಿ ಪ್ರಜಾಪ್ರಭುತ್ವ ರಾಷ್ಟ್ರಗಳ ಸಂಖ್ಯೆ ಕಳೆದ ಒಂದು ದಶಕದಲ್ಲಿ 41 ರಿಂದ 32 ಕ್ಕೆ ಕುಸಿದಿದೆ ಎಂದು ವರದಿ ಬಹಿರಂಗಗೊಳಿಸಿದೆ.

ಕಳೆದ ಒಂದು ದಶಕದ ಅವಧಿಯಲ್ಲಿ ಜಾಗತಿಕ ಜನತಂತ್ರದ ಕುಸಿತವು ತುಂಬಾ ಕಡಿದಾಗಿದೆ ಮತ್ತು 2020 ರಲ್ಲೂ ಅದು ಯಥಾಸ್ಥಿತಿಯಲ್ಲಿ ಮುಂದುವರೆದಿದೆ. ಈ ಜನತಂತ್ರದ ಕುಸಿತವು ವಿಶೇಷವಾಗಿ ಏಷ್ಯಾ-ಪೆಸಿಫಿಕ್ ಪ್ರದೇಶ, ಮಧ್ಯ ಏಷ್ಯಾ, ಪೂರ್ವ ಯುರೋಪ್ ಮತ್ತು ಲ್ಯಾಟಿನ್ ಅಮೆರಿಕಾದಲ್ಲಿ ಹೆಚ್ಚು ಗಮನ ಸೆಳೆದಿದೆ. 2020 ರಲ್ಲಿ ಸರಾಸರಿ ಜಾಗತಿಕ ನಾಗರಿಕರು ಅನುಭವಿಸಿದ ಪ್ರಜಾಪ್ರಭುತ್ವ ವ್ಯವಸ್ಥೆಯ ಮಟ್ಟವು 1990ರ ಸುಮಾರಿಗೆ ಕೊನೆಯದಾಗಿ ಕಂಡುಬಂದ ಮಟ್ಟಕ್ಕೆ ಕುಸಿದಿದೆ ಎಂದು ವರದಿ ಹೇಳುತ್ತದೆ.

ಈ ವರದಿಯು ವಿಶ್ವದ ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಜನರು ವಾಸಿಸುವ 25 ರಾಷ್ಟ್ರಗಳು ಆವರಿಸಿರುವ ವೇಗವರ್ಧಿತ ಸರ್ವಾಧೀಕರಣದ ಅಲೆಯನ್ನು ಸೂಚಿಸುತ್ತದೆ. ಅಂದರೆ 2.6 ಬಿಲಿಯನ್ ಜನರುˌ ಹಲವು ಜಿ 20 ರಾಷ್ಟ್ರಗಳಾದ ಬ್ರೆಜಿಲ್, ಭಾರತ, ಟರ್ಕಿ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಈ ದಿಕ್ಚ್ಯುತಿಯ ಭಾಗವಾಗಿದೆ ಎಂದು ವರದಿ ಹೇಳುತ್ತದೆ. ಜಾಗತಿಕ ಜನಸಂಖ್ಯೆಯ ಕೇವಲ 4 ಪ್ರತಿಶತದಷ್ಟು ಆತಿಥ್ಯ ವಹಿಸುವ ಪ್ರಜಾಪ್ರಭುತ್ವ ರಾಷ್ಟ್ರಗಳ ಸಂಖ್ಯೆ ಅರ್ಧದಷ್ಟು ಅಂದರೆ 16 ಕ್ಕೆ ಕುಸಿದಿದೆ ಎಂಬುದನ್ನು ಈ ವರದಿಯು ಗಮನಿಸಿದೆ.

ಈ ವರದಿಯಲ್ಲಿ ಇನ್ನೂ ಅನೇಕ ಸಂಗತಿಗಳ ಮೇಲೆ ಬೆಳಕು ಚೆಲ್ಲಲಾಗಿಲ್ಲ. ಕಳೆದ ಏಳು ವರ್ಷಗಳಲ್ಲಿ ಸ್ವಾಯತ ಮತ್ತು ತನಿಖಾ ಸಂಸ್ಥೆಗಳ ಗರಿಷ್ಠ ದುರುಪಯೋಗ ಮೋದಿ ಸರಕಾರ ಮಾಡಿದ್ದನ್ನು ನಾವು ಗಮನಿಸಬಹುದಾಗಿದೆ. ಯೋಜನಾ ಆಯೋಗ ಎನ್ನುವುದು ಈಗ ಅಕ್ಷರಶಃ ಮುಳುಗಿಹೋಗಿದೆ. ಚುನಾವಣಾ ಆಯೋಗವಂತೂ ಸರಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಇನ್ನು ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾ ಯಾವ ಸ್ವಾತಂತ್ರವನ್ನೂ ಹೊಂದಿಲ್ಲ.

ಆರ್ಬಿಐನಲ್ಲಿ ಹಿಂದಿನ ಸರಕಾರ ಇಡಲಾಗಿದ್ದ ಚಿನ್ನ ಮತ್ತು ಆಪತ್ಕಾಲಿನ ಫಂಡು ಸರಕಾರ ಯಾವ ಅಳುಕು ಇಲ್ಲದೆ ಎತ್ತಿಕೊಂಡು ನುಂಗಿ ನೀರು ಕುಡಿದಿದೆ. ಸರಕಾರದ ಕಾರ್ಯಕ್ಷಮತೆ ಮತ್ತು ಆರ್ಥಿಕ ಸ್ಥಿತಿಗತಿಯ ಸರ್ವೇಕ್ಷಣಾ ವರದಿ ಮಾಡುತ್ತಿದ್ದ ಮಹಾಲೇಖಾಪಾಲಕರ ವರದಿ ಈಗ ಸ್ಥಗಿತಗೊಂಡಿದೆ.

ಮೊದಲೆಲ್ಲ ವಾರ್ಷಿಕ 40-50 ಸಿಎಜಿ ರಿಪೋರ್ಟ್ ಸಲ್ಲಿಕೆಯಾಗುತ್ತಿತ್ತು. ಈಗ ಅವುಗಳ ಸಂಖ್ಯೆ 10-15 ಕ್ಕೆ ಕುಸಿದಿದೆ. ಇನ್ನು ನ್ಯಾಯಾಂಗವಂತೂ ಸಂಪೂರ್ಣ ಅಪಾರದರ್ಶಕ ಸ್ಥಿತಿ ತಲುಪಿದೆ. ಸಾಕ್ಷ್ಯಗಳ ಬದಲಿಗೆ ನಂಬಿಕೆ ಆಧಾರದ ಮೇಲೆ ನ್ಯಾಯ ತೀರ್ಪುಗಳು ಹೊರಬೀಳುತ್ತಿವೆ.

ಮೋದಿ ಆಡಳಿತದ ಜನ ವಿರೋಧಿ ನೀತಿಗಳನ್ನು ಮುಚ್ಚಿಟ್ಟು ಮೋದಿ ಭಜನೆಯಲ್ಲಿ ಮಾಧ್ಯಮಗಳು ತೊಡಗಿಕೊಂಡಿವೆ. ಬಹುತೇಕ ಎಲ್ಲ ಬಗೆಯ ಮಾಧ್ಯಮಗಳ ಒಡೆತನ ಕಾರ್ಪೋರೇಟ್ ಕಳ್ಳೋದ್ಯಮಿಗಳ ಕೈಯಲ್ಲಿದ್ದರೆ, ಅವುಗಳ ಸಂಪಾದಕ ಸ್ಥಾನಮಾನವು ಅರ್ಬನ್ ನಾಜಿಗಳು ವಶಪಡಿಸಿಕೊಂಡು ಕುಳಿತಿದ್ದಾರೆ.

ಒಟ್ಟಾರೆ ಮೋದಿ ನೇತ್ರತ್ವದ ಹಿಂದುತ್ವ ಪ್ರತಿಪಾದಿಸುವ ಯಥಾಸ್ಥಿತಿವಾದಿˌ ಸಂಪ್ರದಾಯವಾದಿˌ ಮೂಲಭೂತವಾದಿ ಸಂಘ ಪರಿವಾರ ನಿಯಂತ್ರಿತ ಬಿಜೆಪಿ ಸರಕಾರದ ಆಡಳಿತ ಕಾಲವು ಮೆಲ್ಲನೆ ದೇಶದ ಸಂವಿಧಾನದ ಆಶಯಗಳನ್ನು ಗಾಳಿಗೆ ತೂಳಿ ಜನತಂತ್ರವನ್ನು ಮುಗಿಸಿಬಿಡುವ ಕಾರ್ಯ ಮಾಡುತ್ತಿರುವುದು ಗಮನಿಸಬಹುದಾಗಿದೆ. ಇದು ದೇಶ ಸರ್ವಾಧಿಕಾರಿ ಆಡಳಿತದತ್ತ ಜಾರುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಇದನ್ನು ಅಂತರಾಷ್ಟ್ರೀಯ ಸಮುದಾಯ ಬಹಳ ಗಂಭೀರವಾಗಿ ಮತ್ತು ಆತಂಕದಿಂದ ಗಮನಿಸುತ್ತಿರುದುವು ನಾವು ನೋಡಬಹುದಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending