ದಿನದ ಸುದ್ದಿ
ಯುಗಾದಿ ಅಲ್ಲ ಉಗಾದಿ
ಉಗಾದಿ ಹಬ್ಬದ ದಿನ ಮಳವಳ್ಳಿಯ ಮಾಳವ ಜನಾಂಗದ ಕುಟುಂಬಗಳು ಧಾರ್ಮಿಕ ಮೆರವಣಿಗೆಯಲ್ಲಿ ತಮ್ಮೂರ ಅಮ್ಮನ ಗುಡಿಯಿ೦ದ ಬಹಳ ವರುಷಗಳಿ೦ದ ಗೊತ್ತು ಮಾಡಲಾದ ನೀರಿನ ಹೊ೦ಡ, ಕೆರೆ, ನದಿ, ಹಳ್ಳ, ಇಲ್ಲವೇ ಬಾವಿಗಳಿಗೆ ಹೊರಡುವ ಪದ್ಧತಿ ಬೆಳೆದು ಬಂದಿದೆ. ಅಲ್ಲಿಗೆ ತಲುಪಿದ ಮೇಲೆ ನೀರಿನ ಬಳಿ ಬಿ೦ದಿಗೆಗಳನ್ನು ಇಟ್ಟು ಅವುಗಳಿಗೆ ಪೂಜೆ ಮಾಡುತ್ತಾರೆ. ಉಗಾದಿ ಹಬ್ಬದಲ್ಲಿ ಮಾಳವರ ನಾಯಕನಾದ ಕುಲವಾಡಿ, ಚಕ್ರಿ, ನೀರಘಂಟಿ ಇಲ್ಲವೇ ಸಾಮಾನ್ಯವಾಗಿ ಆತನನ್ನು ಬೇರೆಯವರು ಕರೆಯುವ೦ತೆ ಊರ ಯಜಮಾನನಾದವನು ಉಗು ಮೆರವಣಿಗೆಗೆ ಪೂಜಾ ವಿಧಿವಿಧಾನಗಳನ್ನು ಸಲ್ಲಿಸಿ ಮೆರವಣಿಗೆಗೆ ಅಣಿಯಾದ ಎಲ್ಲ ಶೃದ್ಧಾಳುಗಳಿಗೂ ಒಂದೊಂದು ಬಿಂದಿಗೆ ಪವಿತ್ರ ನೀರನ್ನು ನೀರಿನ ಹೊರತೆಯಿ೦ದ ತೆಗೆದು ಕೊಡುತ್ತಾನೆ.
ನೀರು ತುಂಬಿದ ಬಿಂದಿಗೆಗಳನ್ನು ಪೂಜಿಸಿ ನೀರು ತು೦ಬಿಕೊ೦ಡ ಮೇಲೆ ಮಾಳವರು ಹಿ೦ತಿರುಗಿ ತಮ್ಮ-ತಮ್ಮ ಮನೆಗಳಿಗೆ ಪುನಃ ಮೆರವಣಿಗೆಯಲ್ಲಿ ಬಂದು ಮನೆಯ ದೇವರ ಕೋಣೆಯಲ್ಲಿ ಬಿ೦ದಿಗೆಗಳನ್ನು ಇಡುತ್ತಾರೆ. ಈ ಬಿಂದಿಗೆದುಂಬಿದ ನೀರನ್ನು ‘ಹೊಸನೀರು’ ಎಂದು ಕರೆಯಲಾಗುತ್ತದೆ. ಆ ಬಿ೦ದಿಗೆಗೆ ಪೂಜೆಸಲ್ಲಿಸಿ ಬಿಂದಿಗೆಯ ‘ಹೊಸನೀರ’ನ್ನು ಮನೆಯಲ್ಲಿ ತು೦ಬಿಟ್ಟು ಕೊ೦ಡಿರುವ ದಿನ ಬಳಕೆಯ ಹ೦ಡೆಗಳು, ತೊಟ್ಟಿಗಳು, ಬಿ೦ದಿಗೆಗಳು ಮತ್ತು ಬಕೇಟುಗಳ ನೀರಿಗೆ ತೊಟ್ಟು ಬೆರೆಸಿ ದಿನನಿತ್ಯದ ಅಡುಗೆ, ಸ್ನಾನ, ಪೂಜೆ ಪುನಸ್ಕಾರಾದಿ ಶುಭ ಕಾರ್ಯಗಳಿಗೆ ಬಳಸುವ ಪದ್ಧತಿ ಈಗಲೂ ಚಾಲ್ತಿಯಲ್ಲಿದೆ.
ಮಾಳವರು ಉಗಾದಿಯ ಸಾ೦ಯಕಾಲ ಮುಳುಗುವ ಸೂರ್ಯನಿಗೆ ಹಾಗೂ ಉದಯಿಸುವ ಚ೦ದ್ರನಿಗೆ ನಮಿಸುತ್ತಾರೆ. ಸುಮೇರಿಯನ್ ಭಾಷೆಯಲ್ಲಿ ‘ಉಗು’ ಎಂದರೆ ನೀರಾವರಿ ಭೂಮಿ. ಕರ್ನಾಟಕದ ಮಂಡ್ಯ ಜಿಲ್ಲೆ ಮಳವಳ್ಳಿ ಪ್ರದೇಶದ ಮಾಳವ ಜನಾಂಗದ ಭಾಷೆಯಲ್ಲಿಯೂ ಉಗು ಎಂದರೆ ಜಲ ಸಂಪನ್ನ ಭೂಮಿ. ‘ಉ’ ಎ೦ದರೆ ನೀರು. ಉಗಳು ಎ೦ದರೆ ಮಾನವನ ಬಾಯಿಯ ನೀರು. ಇಲ್ಲಿ ಗ ಅಥವಾ ಕ ಎ೦ದರೆ ಬಾಯಿ. ಳು ಎ೦ದರೆ ಮಾನವ ಅಥವಾ ವ್ಯಕ್ತಿ. ‘ಉಕು’ ಎಂಬ ಶಬ್ದದ ಅರ್ಥವೂ ನೀರಾವರಿ ಭೂಮಿ. ಉಕುರಗುಡ್ಡೆ ಹೊಲ ಎಂದರೆ ಬೆಟ್ಟದಂಚಿನಿಂದ ಸಮೃದ್ಧ ನೀರು ಪಡೆಯುವ ನೀರಾವರಿ ಜಮೀನು ಎಂದಾಗುತ್ತದೆ. ‘ಉಗುನಿ ಹಂಬು’ ನೀರಿನ ಮೇಲ್ಭಾಗದವರೆಗೆ ಬೆಳೆಯುವ ಹಚ್ಚಹಸುರು ಗಿಡಗಂಟಿಗಳೆಂದು ಸಹ ಅರ್ಥೈಸುವ ಹಾಗೆ ಇನ್ನಿತರ ಸಂಪ್ರದಾಯಗಳು ‘ಉಗು’ವಿನೊಂದಿಗೆ ಹೆಣೆದುಕೊಂಡಿವೆ.
ನೀರು, ಸೂರ್ಯ ಹಾಗೂ ಚಂದ್ರನನ್ನು ಪೂಜಿಸುವ ಹಬ್ಬವೇ ‘ಉಗಾದಿ’. ಮಾಳವರಲ್ಲಿ ‘ಆದಿ’ ಎಂದರೆ ಸೂರ್ಯನ ಹೆಸರು. ಉಗು ಮತ್ತು ಆದಿ ಸೇರಿದಾಗ ನೀರು ಮತ್ತು ಸೂರ್ಯ ಎಂದಾಗುತ್ತದೆ. ನಾಗಾ ಜನಾಂಗದ ನಾಗಧರ್ಮದ ಕಾಲದ ದಿನಗಳಲ್ಲೇ ಸಂಪ್ರದಾಯ ಹುಟ್ಟಿ ಬೆಳೆದಿರಬಹುದು. ಉಗ್,ಉಗಿ, ಉಗ್ಗು, ಉಪ್ಪು, ಉಮಾ, ಉಕ್ಕು, ಉ೦ಣು, ಉಕ್ಕಡ, ಉಕ್ಕಡಗಾತ್ರಿ ಮತ್ತು ಇತ್ಯಾದಿ ಪದಗಳು ‘ಉ’ ಅ೦ದರೆ ನೀರಿಗೆ ಅ೦ಟಿಕೊ೦ಡ ಪದಗಳಾಗಿವೆ. ಪ್ರಸ್ತುತ ಉಗಾದಿ ತನ್ನ ಮೂಲಾರ್ಥ ಕಳೆದುಕೊಂಡು ‘ಹೊಸವರ್ಷ ಪ್ರಾರಂಭ’ ಎಂದಷ್ಟೇ ಆಚರಿಸಲಾಗುತ್ತಿದೆ. ಭಾರತೀಯ ಸಂಸ್ಕ್ರತಿಯೂ ಹಳೆಯ ನಾಗಾ ಸಂಪ್ರದಾಯವನ್ನು ಮರೆಮಾಚಿ( ನುಂಗಿಕೊಂಡು) ಸಾಧ್ಯವಾದಷ್ಟು ಇಂದಿನ ಸಂಪ್ರದಾಯಗಳಿಗೆ ಒಗ್ಗಿಕೊಂಡಿದೆ. ಇದು ‘ಉಗಾದಿ’ ಹೊರತು ‘ಯುಗಾದಿ’ ಅಲ್ಲ. ಉಗಾದಿ ಎ೦ಬ ಪದ ಮೂಲ ದ್ರಾವಿಡ ಪದವೇ ಹೊರತು ಸ೦ಸ್ಕೃತದಿ೦ದ ಉದಯಿಸಿಲ್ಲ.
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243