ರಾಜಕೀಯ
ಅನರ್ಹತೆಯ “Extrapolation”
- ರಾಜಾರಾಮ್ ತಲ್ಲೂರ್
15ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆ ಫಲಿತಾಂಶ ಎಷ್ಟರ ಮಟ್ಟಿಗೆ ಆಳುವ ಸರ್ಕಾರದ ಪರವಾಗಿ “ಟೇಲರ್ ಮೇಡ್” ಇದೆಯೆಂದರೆ, ಬಿಜೆಪಿ ನಿರ್ಧಾರಕ ಗೆಲುವು ಸಾಧಿಸಿದೆ. ಗೋಕಾಕ , ಕೆ ಆರ್ ಪೇಟೆ, ಚಿಕ್ಕಬಳ್ಳಾಪುರಗಳಲ್ಲಿ ಮಾತ್ರ ಗೆದ್ದ ಅಭ್ಯರ್ಥಿಗೆ 50%ಗಿಂತ ಕಡಿಮೆ ಮತ ಬಂದಿದೆ ಅರ್ಥಾತ್ ಎದುರು ಪಕ್ಷಗಳ ಮತ ಚದುರಿಹೋಗಿ ಬಿಜೆಪಿ ಗೆದ್ದಿದೆ.
ಉಳಿದ ಕ್ಷೇತ್ರಗಳಲ್ಲಿ ಎಲ್ಲೆಡೆ ಬಿಜೆಪಿಯದು ನಿರ್ಧಾರಕ ಜಯ. ಅಥಣಿ (59.83), ಕಾಗವಾಡ್ (54.18), ಯೆಲ್ಲಾಪುರ (60.22), ಹಿರೇಕೆರೂರು (58.99), ರಾಣೆಬೆನ್ನೂರು (55.52), ವಿಜಯನಗರ(55.42), ಕೆ ಆರ್ ಪುರ (62.99), ಯಶವಂತಪುರ (50.86), ಮಹಾಲಕ್ಷ್ಮಿ ಲೇಔಟ್ (58.65).
ಗೋಕಾಕ (48.97), ಕೆ ಆರ್ ಪೇಟೆ (39.41), ಚಿಕ್ಕಬಳ್ಳಾಪುರ (48.53) ಗಳಲ್ಲಿ ಮಾತ್ರ ಬಿಜೆಪಿಗೆ 50%ಗಿಂತ ಕಡಿಮೆ ಮತ ಬಿದ್ದಿದ್ದೆಯಾದರೂ ಸೋತ ಅಭ್ಯರ್ಥಿಗಿಂತ ಕ್ರಮವಾಗಿ 29,006; 9731ಮತ್ತು 34801 ಮತಗಳ ಅಂತರದ ಜಯ ಸಿಕ್ಕಿದೆ. ಬಿಜೆಪಿ ಬಂಡಾಯ ಅಭ್ಯರ್ಥಿ ಗೆದ್ದಿರುವ ಹೊಸಕೋಟೆ (41.43)ಯಲ್ಲಿ, ಒಮ್ಮತದ ಅಭ್ಯರ್ಥಿ ಆಗಿರುತ್ತಿದ್ದರೆ ದೊಡ್ಡ ಜಯ ಬಿಜೆಪಿಗೆ ಸಿಗುತ್ತಿತ್ತು.
ಕಾಂಗ್ರೆಸ್ ಗೆದ್ದಿರುವ ಹುಣಸೂರು (50.45), ಶಿವಾಜಿನಗರ (53) ಕ್ಷೇತ್ರಗಳಲ್ಲಿ ಆ ಪಕ್ಷಕ್ಕೆ ಬಹುತೇಕ ನಿರ್ಣಾಯಕ ಜಯವೇ ಸಿಕ್ಕಿದೆ. ಆದರೆ ಇವೆರಡೂ ಸ್ಥಳೀಯ ರಾಜಕಾರಣದ ಒಳಸುಳಿಯ ಜಯಗಳೇ.
ಒಟ್ಟಿನಲ್ಲಿ ಫಲಿತಾಂಶ ಬಿಜೆಪಿಗೆ ಒಂದು ಕಂತಿನ ಸವಾಲು ಗೆದ್ದು ಎರಡನೇ ಕಂತಿನ (ಅಂದರೆ ಗೆದ್ದವರೊಂದಿಗೆ ಅಧಿಕಾರ ಹಂಚಿಕೊಳ್ಳುವ) ಸವಾಲಿನ ಬಾಗಿಲು ತೆರೆದಿದೆ. ಇತ್ತ ಕಾಂಗ್ರೆಸ್ ಗೆ ನೀವು ಸುಧಾರಿಸದಿದ್ದರೆ ನಿಮ್ಮನ್ನು ಮೂಸುವವರಿಲ್ಲ ಎಂಬ ಸ್ಪಷ್ಟ ಸಂದೇಶ ಕೊಟ್ಟಿದೆ. ಬಣರಾಜಕಾರಣ, ಲಾಭರಾಜಕಾರಣಗಳನ್ನು ಬಿಟ್ಟು ಸಿದ್ಧಾಂತ -ಸೇವೆಯ ರಾಜಕಾರಣಕ್ಕೆ ಹಿಂದಿರುಗದಿದ್ದರೆ ಕಾಂಗ್ರೆಸ್ ಪ್ರಸ್ತುತತೆ ಉಳಿಸಿಕೊಳ್ಳುವುದು ಸದ್ಯದ ಸ್ಥಿತಿಯಲ್ಲಿ ಕಷ್ಟ ಇದೆ.
ಕುದುರೆ ವ್ಯಾಪಾರದಂತಹ ಅಪ್ರಜಾತಾಂತ್ರಿಕ ಸಂಗತಿಯೊಂದನ್ನು “ಚುನಾವಣಾ ಇಷ್ಯೂ” ಆಗಿ ಹೊಂದಿದ್ದೂ ಮತದಾರರನ್ನು ಒಲಿಸಿಕೊಳ್ಳಲಾಗದಿರುವ ಕಾಂಗ್ರೆಸ್ಸಿಗೆ ಅದು ತಲುಪಿರುವ ದುರ್ಬಲ ಸ್ಥಿತಿ ಎಷ್ಟು ಆಳವಾಗಿದೆ ಎಂದು ಈ ಚುನಾವಣೆ ಮನದಟ್ಟು ಮಾಡಿಕೊಟ್ಟಿದೆ.
ದುಡ್ಡನ್ನು ದುಡ್ಡಿನಿಂದಲೇ ಎದುರಿಸುವ ಕಾಂಗ್ರೆಸ್ ತಂತ್ರವೇ ಈವತ್ತು ಕಾಂಗ್ರೆಸ್ ಪಕ್ಷವನ್ನು ಈ ಸ್ಥಿತಿಗೆ ದೂಡಿದೆ. ಹಳೆಯ ಕಾಂಗ್ರೆಸ್ಸಿನ ತಳಮಟ್ಟದ ಸೇವೆ ರಾಜಕಾರಣ ಈವತ್ತು ದುರ್ಬೀನು ಹಾಕಿ ಹುಡುಕಿದರೂ ಸಿಗುತ್ತಿಲ್ಲ. ಹೊಸ ದುಡ್ಡಿನ ರಾಜಕಾರಣಿಗಳು ಇಂದು ಕಾಂಗ್ರೆಸ್ ಜೊತೆಗಿಲ್ಲ. ಹಾಗಾಗಿ ಇಂದು ಕಾಂಗ್ರೆಸ್, ಅವರು ದುಡ್ಡು ಚೆಲ್ಲಿ ಗೆದ್ದರು ಎಂದು ಅಲವತ್ತುಕೊಂಡರೆ ಅದಕ್ಕೆ ಕೇಳುಗರು ಉಳಿದಿಲ್ಲ.
JDS ತನ್ನ ಕ್ಷಣಿಕ ಲಾಭಗಳಿಗಾಗಿ ರಾಜ್ಯದ ಒಟ್ಟು ಹಿತಾಸಕ್ತಿಗಳನ್ನು ಕಡೆಗಣಿಸದಿದ್ದರೆ ನಿರ್ಣಾಯಕ ಶಕ್ತಿಯಾಗಿ ನಿಲ್ಲುತ್ತಿತ್ತು. ಅದು ಅವಕಾಶ ಸಿಕ್ಕಾಗಲೆಲ್ಲ ಅದನ್ನು ಕೈಚೆಲ್ಲಿ ಈವತ್ತಿನ ಸ್ಥಿತಿ ತಲುಪಿದೆ.
ಇಷ್ಟಾಗಿ ಬಿಜೆಪಿ, ತನ್ನ ಪೂರ್ಣಾವಧಿಯನ್ನು ಬೇರೇನೂ ಗದ್ದಲ ಇಲ್ಲದೆ ಯಶಸ್ವಿಯಾಗಿ ಪೂರೈಸೀತೇ ಎಂಬುದೊಂದೇ ಈಗ ಉಳಿದಿರುವ ಕುತೂಹಲ.
ಇದಿಷ್ಟು ಈವತ್ತಿನ ಚುನಾವಣಾ ಫಲಿತಾಂಶಕ್ಕೆ ನನ್ನ ಆಬ್ಸರ್ವೇಷನ್ ಗಳು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
ಸುದ್ದಿದಿನ ಡೆಸ್ಕ್ : 2024ರ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಒಂದು ಕೋಟಿ 80 ಲಕ್ಷ ಹೊಸ ಮತದಾರರು ತಮ್ಮ ಅಮೂಲ್ಯ ಹಕ್ಕನ್ನು ಮೊದಲ ಬಾರಿಗೆ ಚಲಾಯಿಸಲಿದ್ದಾರೆ. ಇವರೆಲ್ಲ 18-19ರ ಪ್ರಾಯದವರು.
ಮೊದಲ ಬಾರಿಗೆ ಮತ ಚಲಾಯಿಸುವ ಯುವಕರಿಗೆ ಅವರ ಈ ಪವಿತ್ರ ಕರ್ತವ್ಯದ ಮಹತ್ವವನ್ನು ಮನಗಾಣಿಸುವ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ’ನಾನು ಖಂಡಿತ ಮತ ಚಲಾಯಿಸುತ್ತೇನೆ’ ಎನ್ನುವ ಪ್ರಚಾರ ಆಂದೋಲನಗಳು ನಡೆಯುತ್ತಿವೆ.
ಈ ಬಾರಿ ಚುನಾವಣೆಯಲ್ಲಿ ಭಾಗವಹಿಸುವ ಯುವ ಮತದಾರರ ಪೈಕಿ 20ರಿಂದ 29ವರ್ಷ ವಯೋಮಾನದ ಅಂದಾಜು 19 ಕೋಟಿ 74 ಲಕ್ಷ ಮತದಾರರು ಪಾಲ್ಗೊಳ್ಳಲಿದ್ದಾರೆ. 18 ವರ್ಷಕ್ಕೆ ಮತದಾನದ ಹಕ್ಕು ದೊರೆಯುವುದಾದರೂ ಈಗ 17 ವರ್ಷ ತುಂಬಿರುವ ಯುವಜನ ಸಮೂಹದಿಂದ 13.4ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಮುಂಚಿತವಾಗಿಯೇ ಸ್ವೀಕರಿಸಲಾಗಿದೆ.
ಕೇಂದ್ರ ಚುನಾವಣಾ ಆಯೋಗ ಯುವ ಜನರಿಗೆ ಮತದಾನಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸಚಿನ್ ತೆಂಡುಲ್ಕರ್ ಮತ್ತು ರಾಜಕುಮಾರ್ ರಾವ್ ಅವರಂತಹ ರಾಷ್ಟ್ರೀಯ ದಿಗ್ಗಜರಿಂದ ಸಂದೇಶಗಳನ್ನು ಪ್ರಸಾರ ಮಾಡುತ್ತಿದೆ. ಸಾಮಾಜಿಕ ಮಾಧ್ಯಮ ಅಭಿಯಾನಗಳು ಮತ್ತು ರೇಡಿಯೋ ಮೂಲಕವೂ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
ಸುದ್ದಿದಿನ,ಬೆಂಗಳೂರು : ದಕ್ಷಿಣ ಭಾರತದಲ್ಲಿ ಭಾರತೀಯ ಜನತಾಪಕ್ಷಕ್ಕೆ, ಕರ್ನಾಟಕ ಹೆಬ್ಬಾಗಿಲಿನಂತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬರಲಿರುವ ಮಹಾಚುನಾವಣೆಗೆ ಪಕ್ಷದ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಲಿರುವ ನೂತನ ಮಾಧ್ಯಮ ಕೇಂದ್ರದಲ್ಲಿ ಪಕ್ಷದ ರಾಜ್ಯ ನಾಯಕರು ಇಂದು ಬೆಳಿಗ್ಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ಜನಪರ ಆಡಳಿತ ನೀಡುವಲ್ಲಿ ಮತ್ತು ಬರಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಪಾದಿಸಿದರು.
ಜನವಿರೋಧಿ ಕ್ರಮಗಳಿಂದಾಗಿ ರಾಜ್ಯದ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಕಾರ್ಯತಂತ್ರ ರೂಪಿಸಲು ತನ್ನ 200ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕಾರ್ಯಾಗಾರ ನಡೆಸಲು ಬಿಜೆಪಿ ನಿರ್ಧರಿಸಿದೆ. ಈ ನಡುವೆ ಲೋಕಸಭಾ ಚುನಾವಣೆ ಕುರಿತಂತೆ ದೆಹಲಿಯಲ್ಲಿ ಇಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯ ಸಭೆ ನಡೆಯಲಿದೆ.
ಚುನಾವಣೆಗೆ ಪಕ್ಷದ ಕಾರ್ಯತಂತ್ರಗಳನ್ನು ಕುರಿತು ಸಮಾಲೋಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಚುನಾವಣಾ ಸಮಿತಿಯ ಸದಸ್ಯರು ಮತ್ತಿತರ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
"ವಿಕಸಿತ ಭಾರತಕ್ಕಾಗಿ
ಮತ್ತೊಮ್ಮೆ ಮೋದಿ ಸರ್ಕಾರ"ಮಲ್ಲೇಶ್ವರಂನ ಜಿ.ಎಂ. ರಿಜಾಯ್ಸ್ ಹೋಟೆಲ್ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ನೆರವೇರಿಸಲಾಯಿತು. ರಾಜ್ಯದೆಲ್ಲೆಡೆ ಪ್ರಧಾನಿ ಮೋದಿ ಜೀ ಅವರ ಪರವಾದ ಅಲೆ ವ್ಯಾಪಕವಾಗಿದ್ದು 'ಮೋದಿ ಮತ್ತೊಮ್ಮೆ' ಎಂಬುದು ಜನಸಾಮಾನ್ಯರ ಸಂಕಲ್ಪವಾಗಿದೆ. ದೇಶದಲ್ಲಿ 400 ಹಾಗೂ… pic.twitter.com/gYbNmo1Poo
— Vijayendra Yediyurappa (Modi Ka Parivar) (@BYVijayendra) March 23, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು