ದಿನದ ಸುದ್ದಿ
ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್ ಮಷಿನ್ಗಳು..!
ದೇಶದ ಐತಿಹಾಸಿಕ ಹೋರಾಟದಲ್ಲಿ ನಿರತರಾಗಿರುವ ರೈತರ ಜೊತೆಗೆ ಇಡೀ ದೇಶವೇ ನಿಂತಿದೆ. ಇಂತಹ ಒಂದು ಹೋರಾಟದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದಾರೆ. ಕಳೆದ 50 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಠಿಕಾಣಿ ಹೂಡಿರುವ ರೈತರ ಬಟ್ಟೆ ಸ್ವಚ್ಛಗೊಳಿಸಲು ಸುಮಾರು 500ಕ್ಕೂ ಹೆಚ್ಚು ವಾಷಿಂಗ್ ಮಷಿನ್ಗಳು ಕಾರ್ಯನಿರ್ವಹಿಸುತ್ತಿವೆ.
ಪ್ರತಿಭಟನಾ ಸ್ಥಳದಲ್ಲಿ ಖಾಲ್ಸಾ ಏಡ್ ಸೇರಿದಂತೆ ಹಲವು ಸಂಘ ಸಂಸ್ಥೆಗಳು, ರೈತರು ಮತ್ತು ಬೆಂಬಲಿಗರು ಇಲ್ಲಿ ವಾಷಿಂಗ್ ಮಷಿನ್ಗಳನ್ನು ಹಾಕಿದ್ದಾರೆ. ತಮ್ಮ ಕೈಯಲ್ಲಿ ಆದಷ್ಟು, ತಮ್ಮ ಶಕ್ತಿಗೆ ಮೀರಿದಷ್ಟು ಮಷಿನ್ಗಳನ್ನು ಇಲ್ಲಿಡುವ ಪ್ರಯತ್ನ ಮಾಡಿದ್ದಾರೆ.
ಖಾಲ್ಸಾ ಏಡ್ ಟಿಕ್ರಿ ಗಡಿಯೊಂದರಲ್ಲೇ 10 ಮಷಿನ್ಗಳನ್ನು ಬಳಕೆಯಲ್ಲಿವೆ. ಬೇರೆ ಬೇರೆ ಗಡಿಗಳಲ್ಲಿ ಕನಿಷ್ಠ ಆರು ವಾಷಿಂಗ್ ಮಷಿನ್ಗಳನ್ನು ಇದೊಂದೇ ಸಂಸ್ಥೆ ನೀಡಿದೆ. ಇದೆ ರೀತಿ ಪಂಜಾಬ್ನಿಂದ ಬಂದ ಇಬ್ಬರು ಯುವಕರ ತಂಡ ಸಿಂಘು ಗಡಿಯ ಆರಂಭದಲ್ಲೇ ಎರಡು ಮಷಿನ್ಗಳ ಮೂಲಕ ರೈತರ ಬಟ್ಟೆ ಒಗೆದು, ಒಣಗಿಸಿ ಕೊಡುವ ಕೆಲಸ ಮಾಡುತ್ತಿದ್ದಾರೆ.
ಗುರು ಕಾ ಲಂಗರ್ಗಳಲ್ಲಿ ಎರಡೆರಡು ವಾಷಿಂಗ್ ಮಷಿನ್ಗಳನ್ನು ಇಟ್ಟಿದ್ದಾಎಡ. ಈ ಮೂಲಕ ಲಂಗರ್ ಸೇವೆ ಮತ್ತು ಬಟ್ಟೆ ತೊಳೆದುಕೊಡುವ ಸೇವೆಯನ್ನು ಮಾಡಲಾಗುತ್ತಿದೆ.
ಪಂಜಾಬ್ನ ಲೂದಿಯಾನ ಮೂಲದ ಪ್ರಿನ್ಸ್ ಪಾಲ್ ಸಿಂಗ್ ಎಂಬುವರು ನಾಲ್ಕು ವಾಷಿಂಗ್ ಮಷಿನ್ಗಳನ್ನು ಸಿಂಘು ಗಡಿಯಲ್ಲಿ ಇಟ್ಟಿದ್ದು, ರೈತರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ದೆಹಲಿ ಚಲೋಗೆ ಸಾಥ್ ನೀಡಲು ಬಂದಿದ್ದ ಪ್ರಿನ್ಸ್ ಪಾಲ್ ಸಿಂಗ್ ಕೆಲ ದಿನಗಳು ಇಲ್ಲಿಯೇ ಟೆಂಟ್ ಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ.
ನಾವು ಇಲ್ಲಿಂದ 350 ಕಿಲೊಮೀಟರ್ ದೂರದಲ್ಲಿರುವ ಲೂದಿಯಾನದಿಂದ ಬಂದಿದ್ದೇವೆ. ಮೊದಲು ಇಲ್ಲಿಗೆ ಬಂದು ಟೆಂಟ್ ಹಾಕಿಕೊಂಡಿದ್ದ ಸಂದರ್ಭದಲ್ಲಿ ಬಟ್ಟೆ ಕೊಳೆಯಾಗಿತ್ತು. ಅವುಗಳನ್ನು ವಾಶ್ ಮಾಡಿಸಲು 350 ಕಿಲೋಮೀಟರ್ ದೂರ ಮತ್ತೆ ಪ್ರಯಾಣಿಸಬೇಕಾಯಿತು. ಸ್ವಂತ ಕಷ್ಟಕ್ಕೆ ಒಳಗಾದ ಮೇಲೆ ನನಗೆ ರೈತರ ಕಷ್ಟ ಅನುಭವಕ್ಕೆ ಬಂತು. ನಾನು ಮತ್ತೆ ಊರಿಗೆ ಹೋಗಿ ಅಲ್ಲಿಂದ ನಾಲ್ಕು ವಾಷಿಂಗ್ ಮಷಿನ್ಗಳನ್ನು ಕೊಂಡು ತಂದು ಇಲ್ಲಿ ಇಟ್ಟಿದ್ದೇನೆʼ ಎನ್ನುತ್ತಾರೆ.
ʼಮೊದಲಿಗೆ ನಾನೊಬ್ಬನೇ ಇದ್ದೆ. ಈಗ ಇಲ್ಲಿನ ಸ್ಥಳೀಯ ಪಂಕ್ಚರ್ ಅಂಗಡಿಯಲ್ಲಿ ಕೆಲಸ ಮಾಡುವ ಯುವಕರು ಸಹಾಯಕ್ಕೆ ಬಂದಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಇರುವ ಯುವಕರು ಸಾಥ್ ನೀಡುತ್ತಿದ್ದಾರೆ. ಪಕ್ಕದಲ್ಲಿರುವ ಮನೆ ಮಾಲೀಕ ಬಟ್ಟೆ ಒಗೆಯಲು ಬೇಕಾದ ನೀರು ಮತ್ತು ವಿದ್ಯುತ್ ಶಕ್ತಿ ವ್ಯವಸ್ಥೆಯನ್ನು ಉಚಿತವಾಗಿ ನೀಡಿದ್ದಾರೆʼ ಎಂದು ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ʼನಮ್ಮಗಳ ಜೊತೆಗೆ ಇಲ್ಲಿ ಹಲವು ಸಂಘಟನೆಗಳು ವಾಷಿಂಗ್ ಮಷಿನ್ ಹಾಕಿಕೊಂಡಿವೆ. ಅವರುಗಳನ್ನು ಹೊರತುಪಡಿಸಿ ನಮಗೆ ಪ್ರತಿದಿನ ಕನಿಷ್ಟ 300 ಜನ ರೈತರು ಬಟ್ಟೆ ನೀಡುತ್ತಾರೆ. ಬಟ್ಟೆ ವಾಶ್ ಮಾಡಿಕೊಡಲು 20 ನಿಮಿಷ ಸಮಯ ಕೇಳುತ್ತೇವೆ. ನಂತರ ಬಂದು ಕಲೆಕ್ಟ್ ಮಾಡಿಕೊಳ್ಳಲು ತಿಳಿಸಲಾಗುತ್ತದೆʼ.
ಇದೊಂದು ಸೇವೆ ಎಂದು ನಾವು ಪರಿಗಣಿಸಿದ್ದೇವೆ. ನಮ್ಮ ರೈತರ ಕಷ್ಟಕ್ಕೆ ನಾವು ನಿಲ್ಲಬೇಕು. ಇದು ದೇಶದ ಎಲ್ಲಾ ರೈತರ ಸಮಸ್ಯೆ ಇದು. ಕೇಂದ್ರ ಸರ್ಕಾರ ಮೂರು ಕಪ್ಪು ಕಾನೂನುಗಳನ್ನು ಪಾವಸ್ ಪಡೆಯುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ. ನಾನು ಇಲ್ಲಿ ಸೇವೆ ಸಲ್ಲಿಸುತ್ತಲೇ ಇರುತ್ತೇನೆʼ ಎಂದಿದ್ದಾರೆ ಪ್ರಿನ್ಸ್ ಪಾಲ್ ಸಿಂಗ್.
ಇದೇ ರೀತಿ ಹಲವು ವಾಷಿಂಗ್ ಮಷಿನ್ ಟೆಂಟ್ಗಳನ್ನು ಹಾಕಿರುವ ಜನ ಕೂಡ ಪ್ರತಿಭಟನೆ ಅಂತ್ಯವಾಗುವವರೆಗೂ ನಾವು ಸೇವೆ ಸಲ್ಲಿಸುತ್ತೇವೆ ಎನ್ನುತ್ತಾರೆ.
ಕೃಪೆ | ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ