ದಿನದ ಸುದ್ದಿ
ದಾವಣಗೆರೆ | ದೇಶ ಬಲಿಷ್ಟವಾಗಿರಬೇಕು ಎಂದರೆ ಅಲ್ಲಿ ಮಹಿಳೆಗೆ ಸಮಾನತೆ ಇರಬೇಕು : ಜಿ.ಪಂ ಸಿಇಓ ಡಾ.ವಿಜಯ ಮಹಾಂತೇಶ ಬಿ.ದಾನಮ್ಮನವರ್
ಸುದ್ದಿದಿನ, ದಾವಣಗೆರೆ : ಪುರಾತನ ಕಾಲದಿಂದಲೂ ಹೆಣ್ಣಿಗೆ ಪೂಜನೀಯ ಸ್ಥಾನ ನೀಡಲಾಗಿರುವ ಶ್ರೀಮಂತ ದೇಶ ನಮ್ಮದು. 12 ನೇ ಶತಮಾನದಲ್ಲಿ ಮಹಿಳೆಯರ ಸಮಾನತೆಗಾಗಿ ಬಸವಾದಿ ಶರಣದು ಹೋರಾಟ ಮಾಡಿದರು. 20 ನೇ ಶತಮಾನದಲ್ಲೂ ಈ ಹೋರಾಟ ಮುಂದುವರೆದಿದೆ. ನಮ್ಮ ನೆಲದ ಸಂವಿಧಾನದ ಆತ್ಮವಾಗಿರುವ ಮೂಲಭೂತ ಹಕ್ಕುಗಳ ಮೂಲಕ ಎಲ್ಲರಿಗೂ ಸಮಾನತೆ ಒದಗಿಸಲಾಗಿದೆ ಎಂದು ಜಿ.ಪಂ ಸಿಇಓ ಡಾ.ವಿಜಯಮಹಾಂತೇಶ ಬಿ.ದಾನಮ್ಮನವರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ದಾವಣಗೆರೆ ತಾಲ್ಲೂಕು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಒನ್ ಸ್ಟಾಪ್ ಸೆಂಟರ್(ಸಖಿ), ಮಹಿಳಾ ಶಕ್ತಿ ಕೇಂದ್ರ, ಸ್ತ್ರೀಶಕ್ತಿ ಒಕ್ಕೂಟ, ಮಹಿಳಾ ಸಹಾಯವಾಣಿ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2021 ಯಲ್ಲಿ ಅವರು ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಣ್ಣು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಹಲವಾರು ಕಾಯ್ದೆ, ಕಾನೂನುಗಳನ್ನು ಜಾರಿಗೆ ತಂದಿದೆ. ಹೆಣ್ಣು ಸಾಮಾಜಿಕವಾಗಿ, ಆರ್ಥಿಕವಾಗಿ ರಾಜಕೀಯವಾಗಿ ಸಬಲೀಕರಣ ಹೊಂದಲು ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ.
ಇದನ್ನೂ ಓದಿ | ದಾವಣಗೆರೆ | ಮಾ.10ರಂದು ಅಂಗವಿಕಲರಿಗೆ ಕಿಟ್ ವಿತರಣೆ
21ನೇ ಶತಮಾನದ ಆಧುನಿಕ ಯುಗದಲ್ಲಿ ಸಹ ಲಿಂಗ ತಾರತಮ್ಯವಿದ್ದು, ಹೆಣ್ಣು ಸ್ವತಂತ್ರವಾಗಿ ತಾನು ಇಚ್ಚೆ ಪಡುವ ಶಿಕ್ಷಣ, ಮದುವೆ, ಜೀವನಶೈಲಿ ಪಡೆಯುವುದು ಇನ್ನೂ ಕಷ್ಟ ಇದೆ. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಆತ್ಮಹತ್ಯೆಯಂತಹ ಪ್ರಕರಣಗಳು ಪ್ರತಿ ಸೆಕೆಂಡಿಗೆ ವರದಿಯಾಗುತ್ತಿರುವುದು ವಾಸ್ತವಿಕ ಸತ್ಯ. ದೆಹಲಿ ಮತ್ತು ಹೈದರಾಬಾದ್ ಅತ್ಯಾಚಾರ ಪ್ರಕರಣಗಳು ಇಡೀ ಮಾನವ ಸಂಕುಲ ದಿಗ್ಭ್ರಮೆಗೊಳಿಸುವಂತೆ ಮಾಡಿದ್ದು, ಇದಕ್ಕೆಲ್ಲಾ ಕಾರಣ ಹುಡುಕಬೇಕಿದೆ ಕಳವಳ ವ್ಯಕ್ತಪಡಿಸಿದರು.
ಮನೆಯಲ್ಲಿ ನಾವು ಹೆಣ್ಣು ಗಂಡನ್ನು ಬೆಳೆಸುವಲ್ಲಿ ತಾರತಮ್ಯ ಧೋರಣೆಯೋ, ಸಾಮಾಜಿಕ ಧೋರಣೆಯೋ ಅಥವಾ ಮಹಿಳೆಯನ್ನು ಕಮರ್ಷಿಯಲ್ ವಸ್ತುವಿನಂತೆ ಬಳಕೆ ಮಾಡುತ್ತಿರುವುದೋ, ಶಾಲೆಗಳಲ್ಲಿ ಮಾನವೀಯ ಮೌಲ್ಯಗಳನ್ನು ಹೇಳುವ ಕಾರ್ಯಕ್ರಮಗಳ ಕೊರತೆಯೋ, ಕಾನೂನಿನ ಕಠಿಣ ನಿಲುವಿಲ್ಲದಿರುವುದೋ ಹೀಗೆ ಕಾರಣ ಹುಡುಕುವ ಕೆಲಸ ಆಗಬೇಕು. ಈ ಬಗ್ಗೆ ಚರ್ಚೆ ಆಗಬೇಕು ಎಂದರು.
ಒಂದು ದೇಶ ಬಲಿಷ್ಟವಾಗಿರಬೇಕು ಎಂದರೆ ಅಲ್ಲಿ ಮಹಿಳೆಗೆ ಸಮಾನತೆ ಇರಬೇಕು. ಕುಟುಂಬದ ಮತ್ತು ಒಟ್ಟಾರೆ ಸಮಾಜದ ಏಳಿಗೆಗೆ ಮಹಿಳಾ ಸಮಾನತೆ ತಳಹದಿ ಎನ್ನುವುದನ್ನು ಪುರುಷರು ಅರ್ಥ ಮಾಡಿಕೊಳ್ಳಬೇಕು.
ನರೇಗಾ ಕಾರ್ಯಕ್ರಮದಡಿ ವಿಶೇಷವಾಗಿ ಈ ಬಾರಿ ಮಹಿಳಾ ಕಾಯಕೋತ್ಸವವನ್ನು ಆಯ್ದ ಗ್ರಾ.ಪಂ ಗಳಲ್ಲಿ ಮಾಡುತ್ತಿದ್ದು, ಮಹಿಳಾ ಪ್ರಧಾನ ಕುಟುಂಬಗಳ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸಬೇಕು. ಆಡಳಿತದಲ್ಲಿ ಮಹಿಳೆಯರ ಸಂಖ್ಯೆ ಮತ್ತು ಪಾತ್ರವನ್ನು ಹೆಚ್ಚಿಸಲು ಮಹಿಳಾಸ್ನೇಹಿ ಗ್ರಾ.ಪಂ ಅಭಿಯಾನ ಮತ್ತು ವಿಶೇಷ ಸಭೆಗಳನ್ನು ಕೈಗೊಂಡು ಮಹಿಳೆಯರ ಸಮಸ್ಯೆ ಮತ್ತು ಬೇಡಿಕೆಗಳ ಚರ್ಚೆ ಮತ್ತು ಪರಿಹಾರದ ಉದ್ದೇಶ ಹೊಂದಲಾಗಿದೆ ಎಂದರು.
ಮಹಿಳಾ ದಿನಾಚರಣೆಯನ್ನು ಕೇವಲ ಶುಭಾಶಯ, ಭಾಷಣಕ್ಕೆ ಸೀಮಿತವಾಗಿಸದೇ ಮಹಿಳಾ ಸಮಾನತೆ ಕುರಿತು ಚರ್ಚೆ, ವಿಮರ್ಶೆಗಳಾಗಬೇಕು. ಹೆಣ್ಣಿನ ಸುರಕ್ಷತೆ ಮತ್ತು ಭದ್ರತೆ ಬಗೆಗಿನ ಧ್ಯೇಯ ಮರು ನವೀಕರಣ ಆಗಬೇಕು. ಕೇವಲ ಕಾನೂನು ಕಾಯ್ದೆ ಮೂಲಕ ಹೆಣ್ಣನ್ನು ಮುಕ್ತಗೊಳಿಸಲು ಸಾಧ್ಯವಿಲ್ಲ. ನಾವೆಲ್ಲರೂ ಮಾನಸಿಕವಾಗಿ, ನೈತಿಕವಾಗಿ ಬದಲಾವಣೆಯಾಗಬೇಕು.
| ಡಾ.ವಿಜಯಮಹಾಂತೇಶ ಬಿ.ದಾನಮ್ಮನವರ, ಜಿ.ಪಂ ಸಿಇಓ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ