ದಿನದ ಸುದ್ದಿ
11 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು : ಸಚಿವ ಬಿ.ಸಿ.ಪಾಟೀಲ್
ಸುದ್ದಿದಿನ, ದಾವಣಗೆರೆ : ದೇಶದ ರೈತರ ಅನುಕೂಲಕ್ಕಾಗಿ ಕೇಂದ್ರ, ರಸಗೊಬ್ಬರಗಳಿಗೆ 2ಲಕ್ಷದ 39 ಸಾವಿರ ಕೋಟಿ ರೂಪಾಯಿ ಸಹಾಯಧನ ನೀಡುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನಲ್ಲಿ ಹಾನಿಗೊಳಗಾದ ಜಮೀನುಗಳಿಗೆ ಭೇಟಿ ನೀಡಿ, ಬೆಳೆಗಳನ್ನು ವೀಕ್ಷಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಚೀಲ ಡಿಎಪಿ ಬೆಲೆ 3 ಸಾವಿರದ 851ರೂಪಾಯಿ ಇದ್ದು, ರೈತರಿಗೆ ಕೇವಲ 1 ಸಾವಿರದ 361 ರೂಪಾಯಿಗೆ ಮಾರಾಟ ಮಾಡುವ ಮೂಲಕ 2ಸಾವಿರದ 501ರೂಪಾಯಿ ಸಹಾಯಧನ ನೀಡುತ್ತಿದೆ ಎಂದರು.
ಚಿತ್ರದುರ್ಗದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಮತ್ತೊಂದು ಸಭೆಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ 11 ಲಕ್ಷಕ್ಕೂ ಹೆಚ್ಚು ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನಿದೆ. ಮಳೆಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ 240ಹೆಕ್ಟೇರ್ ತೋಟಗಾರಿಕೆ ಬೆಳೆ 40 ಹೆಕ್ಟೇರ್ ಕೃಷಿಬೆಳೆಗೆ ಹಾನಿಯಾಗಿದೆ ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243