ದಿನದ ಸುದ್ದಿ
ಆಸ್ಪತ್ರೆಯಲ್ಲಿ ಅಗ್ನಿಅವಘಡ : 16 ಕೊರೋನಾ ಸೋಂಕಿತರು ಸಜೀವ ದಹನ

ಸುದ್ದಿದಿನ,ಗಾಂಧಿನಗರ: ಗುಜರಾತ್ ನ ಭಾರುಚ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಸಂಭವಿಸಿದ್ದು ಘಟನೆಯಲ್ಲಿ ಸುಮಾರು 16 ಮಂದಿ ಕೊರೊನಾ ಸೋಂಕಿತರು ಸಜೀವ ದಹನವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಮೋಧ್ಯ ತಿಳಿಸಿದ್ದಾರೆ.
ಅಗ್ನಿ ಅವಘಢ ಹಾಗೂ ಹೊಗೆ ತುಂಬಿಕೊಂಡಿದ್ದರಿಂದ ಸೋಂಕಿತರು ಆಸ್ಪತ್ರೆಯ ಒಳಗಡೆಯೇ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಎಸ್ಪಿ ರಾಜೇಂದ್ರ ಸಿನ್ಹಾ ಅವರು ತಿಳಿಸಿದ್ದಾರೆ.
Gujarat: Fire broke out at a #COVID19 care centre in Bharuch last night. 16 people, including 14 patients, died in the incident. pic.twitter.com/gbbLZzML6I
— ANI (@ANI) May 1, 2021
ಇದು ನಾಲ್ಕು ಮಹಡಿಯ ಆಸ್ಪತ್ರೆಯಾಗಿದ್ದು, ಸುಮಾರು 70 ಪಡೆಯುತ್ತಿದ್ದರು. ಅಗ್ನಿ ಅವಘಡದ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಷ್ಟೇ ಅಲ್ಲದೆ ಆಸ್ಪತ್ರೆಯ ಒಳಗಡೆ ಸಿಕ್ಕಿಹಾಕಿಕೊಂಡಿದ್ದ ರೋಗಿಗಳನ್ನು ಕೂಡ ರಕ್ಷಣೆ ಮಾಡಿದ್ದಾರೆ. ಬಳಿಕ ಸ್ಥಳೀಯ ಆಸ್ಪತ್ರೆಗೆ ಅವರನ್ನು ಸ್ಥಳಾಂತರ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
It's an unfortunate incident not only for us but for entire Bharuch. With Police & admn's help, we could shift patients to other hospitals. 14 patients & 2 staff nurses lost their lives in the incident: Zuber Patel, trustee of the COVID care centre in Bharuch where fire broke out pic.twitter.com/O0Z3ClTXhv
— ANI (@ANI) May 1, 2021
Gujarat| Fire breaks out at a COVID-19 care centre in Bharuch. Affected patients are being shifted to nearby hospitals. Details awaited. pic.twitter.com/pq88J0eRXY
— ANI (@ANI) April 30, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 1 ಸಾವಿರದ 350 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಸುದ್ದಿದಿನ,ದಾವಣಗೆರೆ:ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆಯಲ್ಲಿಂದು 1 ಸಾವಿರದ 350 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿ-ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಹಣ ಇಲ್ಲದಿದ್ದರೆ ಇಷ್ಟೊಂದು ಅಭಿವೃದ್ಧಿ ಮಾಡಲು ಸಾಧ್ಯವೇ ಎಂದು ಪ್ರಶ್ನಸಿದರು.
ರಾಜ್ಯದಲ್ಲಿ ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಇದನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಲ-ಸಲ್ಲ್ಲದ ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶಾಮನೂರು ಶಿವಶಂಕರಪ್ಪ ಒಂದು ಕುಟುಂಬ, ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್

ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯ ಸುಮಾರು ₹1350 ಕೋಟಿ ರೂ. ಅನುದಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ವಿವಿಧ ಇಲಾಖಾ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು.
ದಾವಣಗೆರೆಯಲ್ಲಿ ನಡೆದ ಇಂದಿನ ಐತಿಹಾಸಿಕ ಕಾರ್ಯಕ್ರಮದಲ್ಲಿ ಉತ್ಸುಕದಿಂದ ಭಾಗಿಯಾಗಿದ್ದೇನೆ. ದಾವಣಗೆರೆ ಜಿಲ್ಲೆಯಲ್ಲಿ 6 ಶಾಸಕರು ಮತ್ತು ಒಬ್ಬ ಸಂಸದರನ್ನು ಆಯ್ಕೆ ಮಾಡಿ, ನಿಮ್ಮ ಸೇವೆಗೆ ಅವಕಾಶವನ್ನು ಮಾಡಿಕೊಟ್ಟಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದರು.
ನಿಮ್ಮೆಲ್ಲರ ಶಕ್ತಿಯಿಂದಾಗಿ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಇಡೀ ದೇಶಕ್ಕೆ ಸಂದೇಶವನ್ನು ಕಳುಹಿಸಿರುವುದು ನಮ್ಮ ಪುಣ್ಯ. ಬೆಲೆಯೇರಿಕೆಯಿಂದ ತತ್ತರಿಸಿದ ಸಾವಿರಾರು ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಯ ಮೂಲಕ ನೆರವಾಗುತ್ತಿದ್ದೇವೆ. ಹಲವು ವರ್ಷಗಳಿಂದ ದಾಖಲೆ ಇಲ್ಲದೇ ಅಲೆಯುತ್ತಿದ್ದವರಿಗೆ ‘ಭೂ ಗ್ಯಾರಂಟಿ’ ಯೋಜನೆ ಕೊಟ್ಟಿದ್ದೇವೆ. ಕಂದಾಯ ಇಲಾಖೆ ಮೂಲಕ ದರಖಾಸ್ತು ಪೋಡಿ ವಿತರಣೆ ಮಾಡಿದ್ದೇವೆ. ಈ ಹಿಂದೆ ಯಾವುದೇ ಸರ್ಕಾರವು ಇಂತಹ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಗಿಲ್ಲ. ದೇಶದಲ್ಲಿ, ರಾಜ್ಯದಲ್ಲಿ ಯಾವಾಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆಯೋ ಆ ಸಂದರ್ಭದಲ್ಲಿ ಬಡವರ ಬದುಕು ಬದಲಾಯಿಸುವ ಕಾರ್ಯಕ್ರಮವನ್ನು ರೂಪಿಸಿಕೊಂಡು ಬಂದಿದ್ದೇವೆ ಎಂದು ಹೇಳಿದರು.
ನಮ್ಮ ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರು ಮತ್ತು ಅವರ ಕುಟುಂಬ ಒಂದು ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ನಾನು ಬಂದಾಗ ಯಾರು ಸಹಾಯ ಮಾಡುವವರು ಇರಲಿಲ್ಲ. ಬಿಜೆಪಿ ಸರ್ಕಾರವಿದ್ದರೂ ಸಹಾಯ ಮಾಡಲಿಲ್ಲ. ಆಗ ಅವರು 10 ಕೋಟಿ ರೂ. ಹಣವನ್ನು ಕೊಟ್ಟು ಲಸಿಕೆಯನ್ನು ದಾವಣಗೆರೆ ಜನರಿಗಾಗಿ ಹಂಚಿ ಮಾನವೀಯತೆ ಮೆರೆದಿದ್ದರು. ಅಂತಹ ಹೃದಯ ಶ್ರೀಮಂತಿಕೆ ಇರುವವರು ನಮ್ಮ ಶಾಮನೂರು ಶಿವಶಂಕರಪ್ಪನವರು. ಇಂದು ಅವರ 95ನೇ ಜನ್ಮೋತ್ಸವ ಸಂಭ್ರಮ ಆಚರಿಸಿದ್ದೇವೆ. ಅಂದಿನಿಂದ ಇಂದಿನವರೆಗೆ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದವರು ಹಲವು ಕ್ಷೇತ್ರದಲ್ಲಿ ಸಾಧನೆಗೈದು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯನ್ನು ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ4 days ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ4 days ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ4 days ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ4 days ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ
-
ಅಂಕಣ1 day ago
ಕವಿತೆ | ಅವ ಸುಡುತ್ತಾನೆ
-
ದಿನದ ಸುದ್ದಿ4 days ago
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ
-
ದಿನದ ಸುದ್ದಿ45 minutes ago
ಶಾಮನೂರು ಶಿವಶಂಕರಪ್ಪ ಒಂದು ಕುಟುಂಬ, ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್