ಭಾವ ಭೈರಾಗಿ
ನನ್ನ ಕೆನ್ನೆಯಲ್ಲಿ ಗುಳಿಯಿಲ್ಲ ಕ್ಷಮಿಸಿಬಿಡು ಮಾರಾಯ್ತಿ

ಇಪ್ಪತ್ತೈದು ವರ್ಷ ಕಾಯಿಸಿದ್ದು ಸಾಲದೇ ಇನ್ನೂ ಪಕ್ಕದ ಖಾಲಿ ಜೋಕಾಲಿಗೆ ಉತ್ತರಕೊಡಲಾಗುತ್ತಿಲ್ಲ. ಗುಳಿಕೆನ್ನೆಯ ಹುಡಗನಿಗಾಗಿ ಸಾಕಷ್ಟು ಹುಡುಗಿಯರು ಕನಸು ಕಂಡಿರ್ತಾರೆ. ಹಾಗೇ ನೀನು ಕೂಡ ಕಂಡಿರಬಹುದು. ನಿನ್ನಾಣೆ ನಾನೇನು ಬೇಕು ಅಂತ ಕೆನ್ನಯ ಕುಳಿಯನ್ನ ಮುಚ್ಚಿಕೊಂಡವನಲ್ಲ. ಅದು ಪ್ರೊಡಕ್ಷನ್ ಮಿಸ್ಟೇಕು, ಅಪ್ಪ, ಅಮ್ಮನಿಗಿಲ್ಲದ ಕುಳಿ ನನ್ನ ಕೆನ್ನೆಗೆ ಅದೆಲ್ಲಿಂದ ಬಂದೀತು? ಈ ವಿಚಾರದಲ್ಲಿ ನಾನು ನಿಸ್ಸಹಾಯಕ. ಬೇಕಿದ್ರೆ ಒಂದು ಬೊಗಸೆ ಪ್ರೀತಿ ಹೆಚ್ಚಾಗಿ ಕೊಟ್ಟೇನು ಆದರೆ ಇಲ್ಲದ ಕುಳಿಯನ್ನ ಎಲ್ಲಿಂದ ತರಲಿ? ಆ ಕೋಪಕ್ಕೆ ನೀನು ಮುಂದೆ ದಿನಾ ನನ್ನ ಗುಂಡುಕೆನ್ನೆಗೆ ಹೊಡೆದು ಸೇಡು ತೀರಿಸಿಕೊಳ್ಳುವ ಹಟಕ್ಕೆ ಬಿದ್ರೆ ಅನ್ನೋ ಭಯಕ್ಕೆ ಈಗಲೇ ಹೇಳ್ತಿದೀನಿ.
ನನಗೆ ಲಾಲಿ ಹಾಡೋಕೆ ಬರೋಲ್ಲ ಹಾಗಂತ ನೀನು ತೊಡೆ ಮೇಲೆ ಮಲಗಿದಾಗ ನಿನ್ನ ತಲೆಯಲ್ಲಿ ಕೈಯ್ಯಾಡಿಸುತ್ತಾ ನಾಲ್ಕು ಮುದ್ದಮುದ್ದು ಮಾತಾಡದಷ್ಟು ಪೆದ್ದ ಏನಲ್ಲ. ಗುಳಿಕೆನ್ನೆ ಒಂದು ಬಿಟ್ಟು ನೀನು ಕನಸು ಕಂಡಿರಬಹುದಾದ ಎಲ್ಲದಕ್ಕಿಂತ ಒಂದು ಕೈ ಹೆಚ್ಚೇ ಪ್ರೀತಿ ಕೊಡಬಲ್ಲೆ. ಒಂಚೂರು ಜಾಸ್ತಿನೆ ಮುದ್ದು ಮಾಡುವ ಹುಡುಗ ನಾನು ಅದಕ್ಕಾಗಿ ಮೊದಲೇ ಸಾರಿ ಕೇಳಿಬಿಡ್ತೀನಿ. ನಿಮಪ್ಪನಿಗೆ ನನ್ ಪ್ರೀತಿಲಿ ಪಾಲು ಕೊಡು ಅಂತ ನೀನ್ ಮಾತ್ರ ಹಟ ಮಾಡ್ಬಾರ್ದು. ಅವರೇ ನಿನ್ ಫಸ್ಟ್ ಹೀರೋ ನಾನೇನಿದ್ರು ಸೆಕೆಂಡ್ ಅಂತ ನಂಗೊತ್ತು. ಕಳೆದ ಇಪ್ಪತ್ತು ವರ್ಷ ನಿನ್ನ ಪ್ರೀತಿಯಲ್ಲಿ ನಾನೇನು ಭಾಗ ಕೇಳಿದ್ನಾ ಇಲ್ವಲ್ಲಾ ಮುಂದೆ ಅವರು ಕೇಳಿದ್ರೆ ನಾನ್ ಕೊಡಲ್ಲ. ಹಾಗೆ ಕೊಡದೆನೂ ಇರಲ್ಲ. ಪಾಪ ಅಂತ ಒಂದ್ 30% ಕೊಡ್ತಿನಿ ಅದಕ್ಕಿಂತ ಜಾಸ್ತಿ ಪ್ರೀತಿ ಕೇಳಬಾರದು ಓಕೆನಾ..
ನಿಮ್ಮಪ್ಪನ ರೀತಿ ಹೆಗಲಮೇಲೆ ಹೊತ್ತು ಊರು ತಿರುಗಿಸಿ, ಜಾತ್ರೆಲಿ ಫ್ರಾಕು ಕೊಡಿಸೋ ಭಾಗ್ಯ ನನಗಿಲ್ಲ ಯಾಕಂದ್ರೆ ಈಗ ನೀನು ದೊಡ್ಡವಳಾಗಿದಿಯ. ಹಾಗಂತ ನಾನೇನು ಸುಮ್ನಿರಲ್ಲ, ನನ್ ಪಾಲಿಗೆ ನೀನ್ ಯಾವತ್ತೂ ಮಗೂನೆ, ಇರೋ ಬೈಕಲ್ಲೇ ಊರು ಸುತ್ತಿಸುವ, ಮತ್ತು ಈ ತೋಳಲ್ಲೇ ನಿನ್ನ ಹೊತ್ತು ಬೆಟ್ಟ ಹತ್ತುವ ಬೆಚ್ಚಗಿನ ಪ್ರೀತಿಯನ್ನಂತೂ ಕೊಡಬಲ್ಲೆ.
ಜಿಟಿಜಿಟಿ ಮಳೆಯಲ್ಲಿ ಲಾಲ್ ಭಾಗ್ ರಸ್ತೆ ಬದಿ ಒಬ್ಬನೇ ಕೂತು ಕಾಫಿ ಹೀರುವಾಗ ಈ ಎದೆತುಂಬೆಲ್ಲಾ ನಿನ್ನದೇ ನೆನಪು. ಹಾಳಾದ್ ಸಕಲೇಶಪುರದ ರಸ್ತೆ ತುಳಿದರೆ ಸಾಕು ಜೀವ ನಿನ್ನೊಬ್ಬಳನ್ನು ಬಿಟ್ಟು ಮತ್ತೇನನ್ನೂ ನೆನೆಯಲ್ಲ. ನನ್ನ ಬೈಕಿನ ಹಿಂಬದಿ ಸೀಟು ನನ್ನ ನೋಡಿ ಅಣಕಿಸೋದೆ ಅಂಥ ಟೈಮಲ್ಲಿ, ನಿನಗೆ ಕಾರ್ ಡ್ರೈವಿಂಗ್ ಬರದಿದ್ರೂ ಪರವಾಗಿಲ್ಲ, ನಾನ್ ನಿನಗೆ ಬೈಕ್ ರೈಡಿಂಗ್ ಕಲಿಸಿಕೊಡ್ತೇನೆ. ಅದೊಂದಿನ ಸುರಿವ ಮಳೆಯಲ್ಲಿ ಸಕಲೇಶಪುರದ ರಸ್ತೆ ರಸ್ತೆಯಲ್ಲಿ ನಿನ್ ಹಿಂದೆ ಕೂತು ಬೈಕ್ ರೈಡ್ ಮಾಡಿ ಮರ,ಗಿಡ, ರಸ್ತೆಗಳಿಗೆಲ್ಲಾ ಹೊಟ್ಟೆ ಉರಿಸಬೇಕಿದೆ. ಹಾ ಕಳೆದ ಬಾರಿ ಒಬ್ಬೊಂಟಿ ಅಂತ ನನ್ನ ರೇಗಿಸಿದ ಆ ಮರದ ಹನಿಗಳಿಗೂ ತಕ್ಕ ಉತ್ತರ ನೀಡಿಬರೋಣ.
ಅಂದ ಹಾಗೆ ನಮ್ಮಿಬ್ಬರ ಮೊದಲ ಭೇಟಿಯಲ್ಲಿ ಗಡ್ಡ ಬೋಳಿಸು ಮಾರಾಯ ಅಂತ ಮಾತ್ರ ಹೇಳಬೇಡ ಯಾಕಂದ್ರೆ ಈ ಗಡ್ಡ ಇಲ್ಲದಾಗ ಮುದ್ದುಮಾಡೋಕೆ ನೀನಿಲ್ಲ ಅಂತ ಎಷ್ಟು ಹೊಟ್ಟೆ ಉರ್ಕೊಂಡಿದ್ದೆ ಅಂತ ನನಗೆ ಮಾತ್ರ ಗೊತ್ತು. ನೀ ಬರುವ ದಾರಿ ಕಾಯುತ್ತಿದ್ದೇನೆ ಇಪ್ಪತ್ತೈದು ವರ್ಷ ಕಾಯಿಸಿದ್ದು ಸಾಕು ಬಂದುಬಿಡೆ ಪ್ಲೀಸ್,,,,
ಇತಿ
ದಾರಿ ಕಾಯುತ್ತಿರುವ ನಿನ್ನ ರಾಮ

ಭಾವ ಭೈರಾಗಿ
ಕವಿತೆ | ಕಿಚನ್ ವಕ್ತ್

- ಸಂಘಮಿತ್ರೆ ನಾಗರಘಟ್ಟ
ಎದ್ದ ತಕ್ಷಣ
ಎದ್ದೋ ಬಿದ್ದೋ ಎಂದು
ಫ್ರೆಶ್ ಆಗಲು ಬಾತ್ ರೂಂ
ನತ್ತ ಹೋಗುವುದೇ ತಡ
ಅಲ್ಲಿನ ಪುಟ್ಟ ಕನ್ನಡಿಯಲ್ಲಿ
ಹಿಡಿ ಮಾತ್ರದ ನನ್ನ ಮುಖ
ಥೇಟ್ ಆಟದ ರೋಬೋಟ್
ನಂತೆಯೇ ಕಾಣುತ್ತಿತ್ತು
ಒಳಗಿನಿಂದ ಕದ ತೆಗೆದು
ಆಚೆ ಹೆಜ್ಜೆಯಿಡುವ ಹೊತ್ತಿಗಾಗಲೇ
ಕಿಚನ್ ನಲ್ಲಿ ಆರ್ಡರ್ ಸಿದ್ಧ
ಬಿಸಿ ನೀರು ಒಬ್ಬರಿಗಾದರೆ
ಸ್ಟ್ರಾಂಗ್ ಕಾಫಿ ಇನ್ನೊಬ್ಬರಿಗೆ
ಅದನ್ನು ಕೊಡುವ ಗ್ಲಾಸ್
ಗಾಜಿನದೋ ಸ್ಟೀಲ್ ನದೋ
ಎಂಬ ಗೊಂದಲದಲ್ಲೇ
ಸ್ಟವ್ ಮೇಲಿನ ಹಾಲು
ಉಕ್ಕಿ ತನ್ನ ಹಿತ ಶತ್ರು
ಗ್ಯಾಸ್ ಟ್ಯುಬ್ ನತ್ತ ಹರಿಯುತ್ತಿತ್ತು
ಅದನ್ನು ಉಜ್ಜಿ ಕ್ಲೀನ್ ಮಾಡಿ
ಸಿಂಕ್ ನತ್ತ ನೋಡುತ್ತಿದ್ದಂತೆ
ಎಲ್ಲಾ ಪಾತ್ರೆ ಸೌಟು ಬಾಣಲೆಯಲ್ಲಿ
ತೇಲುತ್ತಿದ್ದ ಅನ್ನದ ಅಗುಳು
ಇನ್ನು ಅರೆಬರೆ ಖಾಲಿ ಆಗಿದ್ದ
ಹೊಟ್ಟೆ ಒಳಗಿನ ಕಲ್ಮಶದಂತಿತ್ತು
ರಾತ್ರಿ ,ಹಗಲು ಮಾಡುವ
ತಿಂಡಿ -ಕೆಲಸಗಳ ಚಿಂತೆಯಲ್ಲೇ
ನಿದ್ದೆ ಹೀರಿಕೊಂಡು ಮುಖ
ಹುಳಿ ಹಿಂಡಿದಂತಾಗಿತ್ತು….
ಇನ್ನೇನು ಎಲ್ಲಾ ಕೆಲಸ ಮುಗಿಸಿ
ಸೋಫಾ ದಲ್ಲಿ ಕುಳಿತು
ಸುದ್ದಿ ಫೀಡ್ ನೋಡುತ್ತಿದ್ದೆ
ಅಕ್ಕಿ ರಾಗಿಯ ಬೆಲೆ ಪಟ್ಟಿ ಏರಿತ್ತು
ಯಾಕೋ ಈಗಲೂ ದಾಸರಿರಬೇಕಿತ್ತು
ಸಮ ತೂಕ ಮಾಡಿ ಎರಡನ್ನೂ ಅಳೆದು
ನಮ್ಮವರ ಹೊಟ್ಟೆಯನ್ನೂ ತುಂಬಿಸಬೇಕೆನಿಸಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಭಾವ ಭೈರಾಗಿ
ಕವಿತೆ | ರೇಖೆಗಳು

- ಡಾ.ಪುಷ್ಪಲತ ಸಿ ಭದ್ರಾವತಿ
ಗಡಿ ದೇಶಗಳೇನೊ ಹಂಚಿಕೊಂಡಿರಿ
ಆದರೆ,
ಸೂರ್ಯ ಚಂದ್ರರ ಗತಿಯೇನು
ಉಸಿರಾಡುವ ಗಾಳಿಯು ಒಂದಿರುವಾಗ
ಪ್ರಾಣವಾಯುವಿಗೆ ಬಂಧನದಲ್ಲಿರಿಸಲಾದಿತೆ
ಹರಿಯುವ ನದಿಗಳಿಗೆ ನಾಮಕರಣವೇನೋ ಮಾಡಿದಿರಿ
ಆದರೆ,
ಜರಿಗಳು, ಹಳ್ಳಕೊಳ್ಳಗಳು ಮಾಡಿದಾದರೂ ಏನು
ಪೂಜಾರಿ ಕೊಟ್ಟಿದ್ದು ತೀರ್ಥವೆ
ಆಬೆಜಂಜಂ, ಹಾಲಿ ವಾಟರ್ ಎಲ್ಲವೂ ಜಲ
ಫಾದರ್,ಪೂಜಾರಿ,ಮೌಲ್ವಿ
ಎಲ್ಲರೂ ಕುಡಿದದ್ದು ನೀರು
ಕೊನೆಗೂ ಅದರ ಮೂಲರೂಪ ಬದಲಾಗಲಿಲ್ಲ
ಮನುಷ್ಯ ,ಪ್ರಾಣಿ,ಮರಗಿಡಗಳ
ತಳಿಗಳನ್ನು ಬೇರ್ಪಡಿಸುವವನು ಮೂರ್ಖನೇ ಇರಬೇಕು .
ದೇಹದಲ್ಲಿರುವ ನರಮಂಡಲವನೊಮ್ಮೆ ಬೇರ್ಪಡಿಸಿ
ಬದುಕಲಾದಿತೆ
ಏನು?
ಕ್ರಿಸ್ತನೇನಾದರು ಬಂದು ಮತಾಂತರ ಮಾಡಿದನೇ
ಅಲ್ಲಾನೇನಾದರು ಬಂದು ರಾಮಮಂದಿರ ಕೆಡವಿದನೇ
ಶಿವನೇನಾದರು ಬಂದು ಮಸೀದಿಯನ್ನು ಹೊಡೆದುರುಳಿಸಿದನೇ..!?
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇರುಳ ತಾರೆಗಳಂತೆ ಬೆಳಕೊಂದು ಮಿನುಗುವುದು..!

- ಪ್ರೀತಿ.ಟಿ.ಎಸ್, ದಾವಣಗೆರೆ
ಬೇಂದ್ರೆಯವರು “ಇರುಳ ತಾರೆಗಳಂತೆ ಬೆಳಕೊಂದು ಮಿನುಗುವುದು, ಕಳೆದ ದುಃಖಗಳಲ್ಲಿ ನೆನೆದಂತೆಯೆ” ಎಂದು ತಮ್ಮ ಸಖೀ ಗೀತದಲ್ಲಿ ಹಾಡುತ್ತಾರೆ. ಆದರೆ ಈ ಹೊಸ ವರ್ಷದಲ್ಲಿ ಕಹಿದಿನಗಳ ನೆನಪೇ ಬೇಡ, ಸಿಹಿ ಕಹಿ ಕನಸುಗಳನ್ನು ಕಂಡಂತಹ ಎಳೆತನದ, ಕೆಳೆತನದ ದಿನಗಳ ನೆನಪೇ ಸ್ಥಿರವಾಗಿರಲಿ; ಕಾಲನ ಹೊಡೆತಕ್ಕೆ ಆ ಕನಸುಗಳ ನೆನಪು ಮರೆಯಾಗದಿರಲಿ.
ಹೊಸ ವರ್ಷದಲ್ಲಿ ಇದೆಂತ ಬರಿತ್ತಿದ್ದಾರೆ ಅಂತೀರ! ನಿಮಗಿಂದು ಬರೀ ಹೊಸ ವರುಷ. ಆದರೆ ನನಗೋ ನನ್ನ ಜೀವನ ಪಾವನವಾಗಿಸುವ ದಿನ. ಯಾಕೇ ಗೊತ್ತಾ? ನನ್ನ ಸಾಹಿತ್ಯ ಕ್ಷೇತ್ರಕ್ಕೆ ಅನುಕರಿಣಿಸಿ, ಸಮಾಜ ಕ್ಷೇತ್ರದಲ್ಲಿ ನನ್ನನ್ನ ತೊಡಗುವಂತೆ ಮಾಡಿ, ಕಿಂಚಿತಾದರೂ ನನ್ನಲ್ಲಿ ದಯೆ, ಕರುಣೆ, ವಿಶ್ವಾಸ, ಪ್ರೀತಿ ಹೀಗೆ ಅನೇಕ ಭಾವಗಳನ್ನ ಚಿಕ್ಕಂದಿನಿಂದ ತಿದ್ದಿ ತೀಡಿದ ನನ್ನ ತಂದೆ ತಾಯಿಯ ಜನುಮ ದಿನ.
ಹೊಸ ವರುಷಕ್ಕಿಂತ ಇವರೀರ್ವರ ಜನುಮವೇ ಅದೇನೋ ಸಂಭ್ರಮ. ಅದೇನೋ ಸಡಗರ. ಹಳೆಯ ನೆನಪಿನ ಬುತ್ತಿಯನ್ನು ಮುಚ್ಚಿಟ್ಟು ಹೊಸ ಜೀವನದ ಪಯಣಕ್ಕೆ ಅದೇನೋ ಕಾತುರದಿಂದ ಗಡಿಬಿಡಿಯಾಗುವಾಗ ಅಪ್ಪಾಜಿ ಬಂದು ಹಾದಿಯಲ್ಲಿ ಕಲ್ಲು- ಮುಳ್ಳುಗಳಿರಬಹುದು ಎಚ್ಚರ! ಆದರೆ ಅದನ್ನು ಎದುರಿಸಿ ಮುನ್ನಡೆದಾಗಲೇ ಸುಖ ಸಾಗರ ಎಂಬ ಅವರ ಆಶಯದ ನುಡಿ ಮಾತುಗಳು ಬಹುಶಃ ಇಂದು ನನ್ನನ್ನು ಇಲ್ಲಿಯವರೆಗೂ ತಂದು ನಿಲ್ಲಿಸಿದೆ.
ಮಾಮೂಲೀ ವಾಟ್ಸ್ಆ್ಯಪ್, ಫೇಸ್ಬುಕ್, ಇನ್ಸ್ಟಾಗ್ರಾಮ್ ನಲ್ಲಿ ತಂದೆ-ತಾಯಿಯ ಪೋಸ್ಟ್ ಹಾಕಿ ವಿಶ್ ಮಾಡಿದ್ರೆ ಮುಗಿತಿತ್ತು. ಆದರೆ ಈ ಭಾರಿ, ನನಗಾಗುತ್ತಿರುವುದು ವಿಚಿತ್ರ ಅನುಭವ. ಸಾವಿರ ನೋವು, ದುಃಖ-ದುಮ್ಮಾನಗಳು ಎದೆಯಲ್ಲಿದ್ರು ನಮ್ಮ ಮುಂದೆ ತೋರಿಸದೆ ಮನಸ್ಸಲ್ಲೇ ಇಟ್ಟು ಕೊರಗುತ್ತ ಒಳ್ಳೆಯ ವಿದ್ಯಾಭ್ಯಾಸ ನೀಡಿ, ಸಂಸ್ಕೃತಿ, ನಾಡು-ನುಡಿ, ಸಂಸ್ಕಾರವನ್ನು ಭಿತ್ತುತ್ತ ಬಂದಿದ್ದಾರೆ. ಸುಖದಲ್ಲೆ ಬೆಳೆದ ನಮಗೆ ಕಹಿ ಜೀವನದ ಅನುಭವ ಕಡಿಮೆಯೇ!
ಅಪ್ಪಜಿ-ಅಮ್ಮನ ಆಸೆಯಂತೆ ಮಾಸ್ಟರ್ ಆಫ್ ಜರ್ನಲಿಸಂ ಅಲ್ಲಿ ಎರಡು ಬಂಗಾರದ ಪದಕ ಗೆದ್ದು ಅವರಿಗೆ ನೀಡಿ ಆಸೆ ತೀರಿಸಿದ ನಂತರವಷ್ಟೇ ತಿಳಿದ್ದದ್ದು. ಜೀವನದ ಆಳವೆಷ್ಟು ಎಂದು? ಅಪ್ಪಾಜಿ ಅಮ್ಮನನ್ನು ಬಿಟ್ಟು ಕೆಲಸ ಹುಡುಕುತ್ತ ಬೆಂಗಳೂರಿಗೆ ಬಂದಾಗ ನಿಜವಾದ ರೋಧನೆ, ನೋವು, ಒಂಟಿತನ, ಕಷ್ಟ, ಉಪವಾಸ, ಅನ್ನದ ಬೆಲೆ ಹೀಗೆ ಬದುಕಿನ ಅಷ್ಟು ಪಾಠಗಳು ತಿಳಿಯುತ್ತ ಹೋದದ್ದು. ಎಂತಹ ಒದ್ದಾಟದಲ್ಲೂ ನನ್ನ ತಂದೆ-ತಾಯಿಗೆ ತಿಳಿಸದೆ ನಗ್ತ ನಗ್ತ ಮಾತಾಡಿದ್ರು ಕ್ಷಣಮಾತ್ರದಲ್ಲಿ ಅಪ್ಪಜಿ ಮಾತ್ರ ನನ್ನ ನಗುವಿನ ಹಿಂದಿನ ದುಃಖನ ಗುರುತಿಸಿ, ಮತ್ತಷ್ಟು ಬಲ ತುಂಬುತ್ತ ಬಂದವರು.
ಜನವರಿ 1 ಬಂತೆಂದರೆ ಅಪ್ಪಾಜಿ ಅಮ್ಮನ ಹುಟ್ಟು ಹಬ್ಬ. ಈ ಭಾರಿ ನಾನು ನಿಮಗೆನೂ ಮಾಡಿದೇನು? ಕಡೆಪಕ್ಷ ಅವರ ಮುಂದೆ ಹೋಗಿ ನಿಂತು ಶುಭಾಶಯ ತಿಳಿಸಿ ಬಂದು ಬಿಡಲೇ ಎಂದರೆ ಕೈಯಲ್ಲಿ ಕಾಸಿಲ್ಲ. ಇಲ್ಲಿಂದಲೇ ಶುಭಾಶಯ ತಿಳಿಸಿ ಸುಮ್ಮನಾಗಿ ಬಿಡಲೇ ಎಂದರೆ ಮನಸ್ಸು ಒಪ್ಪುತ್ತಿಲ್ಲ. ಇದೀಗ ದುಡಿತ್ತಿದ್ದಿನಾದರು ಕಣ್ಣ ಮುಂದಿರುವ ಅಷ್ಟು ಹೊಣೆಗಾರಿಕೆಗಳು ನನ್ನನ್ನ ಕಟ್ಟಿಹಾಕ್ತಿದೆ. ಈ ಗೊಂದಲದ ನಡುವೇ ಈ ಲೇಖನ ನಿಮಗಾಗಿ.
ಅಪ್ಪಜಿ-ಅಮ್ಮ ಈ ಭಾರಿ ಹೊಸ ವರುಷದ ಹೊಸ ಆಚರಣೆ ಸಾಧ್ಯವಾಗದಿದ್ದರು ಬೇಸರಿಸದಿರಿ. ಯಾಕೆಂದರೆ ನಿಮಗಾಗಿ ನೀವು ಕಂಡ ಹೊಸ ಕನಸಿನ ಗೂಡೊಂದನ್ನ ಹೊತ್ತು ತರುತ್ತಿದ್ದೇನೆ. ತಂದ ದಿನವೇ ನಿಮ್ಮ ಈ ಜನುಮೋತ್ಸವವನ್ನು ಆಚರಿಸ್ತೇನೆ. ಇದನ್ನ ನಿಮ್ಮೊಡನೇ ಹೇಳಬಹುದಿತ್ತಾದರು, ನನ್ನ ಸಹಪಯಣಿಗರೊಡನೆ ಹಂಚಿಕೊಂಡ ಈ ಕನಸುಗಳು ನಮ್ಮ ಬಾಳಿನ ಮುಂದಿನ ಪಯಣದ ಬುತ್ತಿಯಾಗುತ್ತದೆ ಎಂಬುದು ನನ್ನ ಭಾವನೆ.
ಇಂತಹ ಅದೆಷ್ಟೋ ಅನುಭವಗಳು ಮನೆ ಬಿಟ್ಟು, ತಂದೆ ತಾಯಿಯ ಆಶಯವನ್ನು ನೆನಸಾಗಿಸೋ ಸಾವಿರ ಕನಸುಗಳನ್ನು ಹೊತ್ತು ಬಂದ ಅದೆಷ್ಟೋ ಮನಸ್ಸುಗಳಿಗೆ ಆಗಿರುತ್ತೆ. ಇನ್ನು ಕೆಲವರಿಗೆ ಇಡೀ ವರ್ಷದ ಶ್ರಮದಾಯಕ ದುಡಿಮೆ ಬಳಿಕ ಮನಸ್ಸು ಸ್ವಲ್ಪ ವಿಶ್ರಾಂತಿಯನ್ನು, ಮನೋರಂಜನೆಯನ್ನು ಬಯಸುತ್ತದೆ. ಕುಟುಂಬದ ಬಂಧವನ್ನು ಗಟ್ಟಿಗೊಳಿಸಲು ಮತ್ತು ಪ್ರೀತಿ, ಅನುಬಂಧವನ್ನು ಬಿತ್ತಲು ಹೊಸವರ್ಷವೊಂದು ಸುವರ್ಣಾವಕಾಶ. ನಮ್ಮ ಎಲ್ಲ ಕೆಲಸಕ್ಕೆ ಸ್ವಲ್ಪ ಸಮಯ ವಿಶ್ರಾಂತಿ ಕೊಟ್ಟು ರಿಲ್ಯಾಕ್ಸ್ ಮಾಡುವ ಮೂಲಕ ಸಂಭ್ರಮ, ಸಡಗರಕ್ಕೆ ಅಣಿಯಾಗೋಣ. ನಿಮ್ಮೆಲ್ಲರ ಆಸೆ, ನಿರೀಕ್ಷೆಗಳು ನೆರವೇರಲಿ ಎಂದು ಮನಸ್ಸಲ್ಲೆ ಪ್ರಾರ್ಥಿಸುತ್ತಾ, ಮುಸ್ಸಂಜೆ ಕವಿಯುತ್ತಿರುವಾಗಲೂ ಮರುದಿನದ ಬೆಳಗು ಆಶಾಕಿರಣವನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ6 days ago
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
-
ದಿನದ ಸುದ್ದಿ4 days ago
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ
-
ದಿನದ ಸುದ್ದಿ11 hours ago
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ10 hours ago
ನಟ ಮನದೀಪ್ ರಾಯ್ ನಿಧನ