ದಿನದ ಸುದ್ದಿ
ಚರಮೂರ್ತಿ ಕಾರಣೀಕ ಶ್ರೀ ಗುರು ಕಾಶೀಮಹಾಲಿಂಗ ಸ್ವಾಮೀಜಿಯವರ ಕರ್ತೃಗದ್ದುಗೆಗೆ ತರಳಬಾಳು ಶ್ರೀ ಜಗದ್ಗುರುವರ್ಯರ ಭಕ್ತಿ ಸಮರ್ಪಣೆ

ತರಳಬಾಳು ಶ್ರೀಗುರು ಪರಂಪರೆಯ ತಪಸ್ವೀಶಕ್ತಿ ನಿರಂಜನಗುರುವರ್ಯರಾಗಿ ಭಕ್ತರ ಬಯಕೆಯನ್ನು ತಮ್ಮ ನುಡಿಕಾರಣೀಕದಿಂದಲೆ ಸಿದ್ಧಿಸುವ ಅಧಮ್ಯ ಶಕ್ತಿಯಚೇತನಮಯರಾದ ಶ್ರಿ ಕಾಶೀಮಹಾಲಿಂಗ ಸ್ವಾಮಿಜಿಯವರಿಗೆ ಪ್ರತಿ ವರ್ಷದ ಪರಂಪರೆಯಂತೆ ನಿನ್ನೆ ಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಸಾಸ್ವಾಮೀಜಿಯವರ ಸಾನ್ನಿಧ್ಯದಿ ಶ್ರೀ ಗುರುವಿಗೆ ವಿಶೇಷ ಶ್ರದ್ಧಾ ಭಕ್ತಿಯಿಂದ ನಮನಗಳನ್ನು ಅರ್ಪಿಸಿ ಸಾವಿರರು ಶಿಷ್ಯ ಬಳಗಕ್ಕೆ ಅನ್ನಸಂತರ್ಪಣೆ ವಿನಿಯೋಗಿಸುವ ವಿಶೇಷ ಕಾರ್ಯಕ್ರಮ ಜರುಗಿತು.
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ವಿರಕ್ತ ಗುರುವರ್ಯರಾಗಿ ಯಾವ ಸೌಲಭ್ಯಗಳಿಲ್ಲದ ಕಷ್ಟಕಾಲದಲ್ಲಿ ಸಮಾಜವನ್ನು ಸಂಘಟಿಸಿದ ಅವರ ಕರ್ತವ್ಯ ಶಕ್ತಿಗೆ ಬೆರಗಾಗಲೇಬೇಕು.
‘ಸಿರಿಗೆರೆಗೆ ಬರ ಎಂದವರ ಬಾಯಲ್ಲಿ ಕೆರ’
ಎಂಬ ದೈವವಾಣಿಯನ್ನು ಮೊಟ್ಟ ಮೊದಲು ಅರ್ಥೈಸಿ ಈ ಭಾಗದ ರೈತಾಪಿ ಜನರ ಮನದಲ್ಲಿ ಶಕ್ತಿ ಸಂಪನ್ನವಾದ ಗುರುವೆಂದೇ ಸ್ಥಾನಪಡೆದಿದ್ದಾರೆ.
ಕೃಷಿ ಚಟುವಟಿಕೆಗಳಿಗೆ ಜೀವನಾಡಿಯಾದ ಮಳೆಯು ಕೈ ಕೊಟ್ಟ ಸಂದರ್ಭದಲ್ಲಿ ಶ್ರೀ ಕಾಶೀಮಹಾಲಿಂಗ ಸ್ವಾಮೀಜಿಯವರಿಗೆ ಭಕ್ತಿ ಶ್ರದ್ಧೆಯ ದಾಸೋಹ ಕೈಂಕರ್ಯ ಸಲ್ಲಿಸಿದರೆ ತತ್ ಕ್ಷಣವೇ ವರುಣ ಕಣ್ಣು ತೆರೆಯುತ್ತಾನೆ ಎನ್ನುವ ಧಾರ್ಮಿಕ ನಂಬಿಕೆ ಅಚಲವಾಗಿದ್ದು ಅದು ಸತ್ಯ ಎನ್ನುವಂತೆ ಭರ್ಜರಿ ಮಳೆಯಾಗಿರುವ ಉದಾಹರಣೆ ಹಲವಾರು ಬಾರಿ ಸಾಬೀತಾಗಿದೆ.
ತರಳಬಾಳು ಗುರುಪರಂಪರೆಯ ನಾಲ್ಕು ಜಗದ್ಗುರುವರ್ಯರ ಪಟ್ಟವಲ್ಲರಿಯ ಸಾಮಿಪ್ಯದಿ ಸಮಾಜ ಕಟ್ಟಿದ ಧೀಮಂತ ಚೇತನ, ಮಕ್ಕಳ ಪಾಲಿನ ಪ್ರೀತಿಯ ತಾತನಾಗಿ, ಇಂದಿನ ಪ್ರಸ್ತುತ ಶ್ರೀ ತರಳಬಾಳು ಜಗದ್ಗುರುವರ್ಯರ ಪೂರ್ವಾಶ್ರಮದ ನಾಮಕರಣ ಸಮಾರಂಭದಲ್ಲಿ ಆಕಸ್ಮಿಕ ದರ್ಶನಗೈದು ‘ಶಿವಮೂರ್ತಿ’ ಎಂದು ನಾಮಕರಣಗೈದು ತರಳಬಾಳು ಗುರು ಪರಂಪರೆಯು ವಿಶ್ವ ಮಟ್ಟದಿ ಪ್ರಜ್ವಲಿಸುವ ಭವಿಷ್ಯವನ್ನು ಎಲ್ಲರಿಗಿಂತಲೂ ಮೊದಲೇ ಅರಿತಿದ್ದ ಪ್ರಾಜ್ಞ ಕಾಲಜ್ಞಾನಿಗಳು. ಸರಳತೆ ,ಆದರ್ಶ, ಕಾಯಕವೇ ಶ್ರೀ ಗಳ ಬದುಕಾಗಿತ್ತೆಂದು ಇಂದು ಸಹ ಹಿರಿಯರು ಶ್ರೀ ಗಳ ಕುರಿತು ಗೌರವದ ಮಾಹಿತಿ ನೀಡುತ್ತಾರೆ.
ಅಂತಹ ಶಿವಯೋಗಿ ಶಕ್ತಿ ಸಂಪನ್ನರಾದ ಶ್ರೀ ಮನ್ನಿರಂಜನ ಪ್ರಣವ ಸ್ವರೂಪಿ ಶ್ರೀ ಕಾಶೀಮಹಾಲಿಂಗ ಸ್ವಾಮೀಜಿಯವರ ಅಂತರಾತ್ಮಕ್ಕೆ ಭಕ್ತಿ ಪೂರ್ವಕ ಪ್ರಣಾಮಗಳನ್ನು ಅರ್ಪಿಸುತ್ತಾ.ಶ್ರೀಗಳ ಆಶೀರ್ವಾದದ ಶ್ರೀ ರಕ್ಷೆ ಸಮಸ್ತ ಸಮಾಜದ ಮೇಲಿರಲೆಂಬುದೇ ನಮ್ಮಯ ಆಶಯ.
(-ಬಸವರಾಜ ಸಿರಿಗೆರೆ)

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243

-
ನಿತ್ಯ ಭವಿಷ್ಯ6 days ago
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
-
ದಿನದ ಸುದ್ದಿ4 days ago
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ
-
ದಿನದ ಸುದ್ದಿ11 hours ago
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ10 hours ago
ನಟ ಮನದೀಪ್ ರಾಯ್ ನಿಧನ