ರಾಜಕೀಯ
ಮೈತ್ರಿ ಸರ್ಕಾರ ಉರುಳಿಸಲು 250 ಕೋಟಿ ರೂ ಹಂಚಿಕೆ ; “ರಾಜಿನಾಮೆ ಕೊಡ್ತೀವಿ ಆದ್ರೆ ಹಣ ವಾಪಸ್ ಕೊಡಲ್ಲ” ಎಂದ ಶಾಸಕರು

ಸುದ್ದಿದಿನ, ಬೆಂಗಳೂರು : ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ನಿವಾಸಕ್ಕೆ ಹೊರಟ ಕುಮಾರಸ್ವಾಮಿಯವರು ಕೆಲವೇ ಕ್ಷಣಗಳಲ್ಲಿ ಸಿದ್ದರಾಮಯ್ಯರನ್ನ ಭೇಟಿಯಾಗಲಿದ್ದಾರೆ. ಮಾಜಿ ಸಿಎಂ 12 ದಿನಗಳ ಫಾರಿನ್ ಟೂರ್ ಬಳಿಕ ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಸಿದ್ದು.
ಕಳೆದೊಂದು ವಾರದಿಂದ ಮೈತ್ರಿ ಸರ್ಕಾರದ ಬುಡ ಅಲುಗಾಡಿಸ್ತಿರೋ ಅತೃಪ್ತರ ಬಣ
ಈ ಬಗ್ಗೆ ಸಿದ್ದು ಜತೆ ಮಾತುಕತೆ ನಡೆಸಲು ಸಿಎಂ ಕುಮಾರಸ್ವಾಮಿ ಸಿದ್ದು ಮನೆಗೆ ಹೊರಟಿದ್ದಾರೆ.
ಈಗಾಗಲೇ ಸಿದ್ದರಾಮಯ್ಯ ನಿವಾಸದಲ್ಲಿ ವೇಣುಗೋಪಾಲ್, ದಿನೇಶ್ ಗುಂಡೂರಾವ್ ಹಾಗೂ ಈಶ್ವರ್ ಖಂಡ್ರೆ ಅವರು ಇದ್ದಾರೆ.
ಮೈತ್ರಿ ಸರ್ಕಾರ ಬೀಳೋದು ಗ್ಯಾರಂಟಿಯಂತೆ

ಇದು ರಾಜ್ಯ ರಾಜಕಾರಣದ ಸ್ಫೋಟಕ ಸ್ಟೋರಿ ಯಾಗಿದ್ದು ನಾಳೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವಾಗಲಿದೆ. ಯಾವುದೇ ಕಾರಣಕ್ಕೂ ಈ ಮೈತ್ರಿ ಸರ್ಕಾರ ಉಳಿಯಲ್ಲ ಎಂಬುದು ಬಿಜೆಪಿ ಮುಖಂಡರ ಸಾಮಾನ್ಯ ಹೇಳಿಕೆಯಾಗಿ್ದೆದೆ. ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ, ವೇಣುಗೋಪಾಲ್ ಏನೇ ಕಸರತ್ತು ಮಾಡಿದ್ರೂ ಸರ್ಕಾರ ಉಳಿಯಲ್ಲ. ಸಿದ್ದರಾಮಯ್ಯ ವಾಪಸ್ ಬಂದು ಏನೇ ಮ್ಯಾಜಿಕ್ ಮಾಡಿದ್ರೂ ಸರ್ಕಾರ ಪತನ ಪಕ್ಕಾ ಆಗಿದೆ. 25 ಕಾಂಗ್ರೆಸ್ ಶಾಸಕರ ಸಂಪರ್ಕದಲ್ಲಿರುವ ಬಿಜೆಪಿ ನಾಯಕರು –
ನಾಳೆ 20 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡೋದು ಗ್ಯಾರಂಟಿಯಾಗಿದೆ. ಇನ್ನೂ ಐವರು ಶಾಸಕರು ರಾಜೀನಾಮೆ ನೀಡುವ ಗೊಂದಲದಲ್ಲಿದ್ದಾರೆ. ನಾಳೆ ಬೆಳಗ್ಗೆ ಸಿದ್ದು ಆಶೀರ್ವಾದ ಪಡೆದು ರಾಜೀನಾಮೆ ನೀಡಲಿರೋ ಈ ಶಾಸಕರು
ಸೆಪ್ಟೆಂಬರ್ 23ಕ್ಕೆ ಯಡಿಯೂರಪ್ಪ ಸಿಎಂ ಆಗೋದು ಪಕ್ಕಾ ಆಗಿದೆ. ಹೀಗಾಗಿಯೇ ಇಂದು ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದ ಬಿಎಸ್ವೈ ಹೊಸ ಸರ್ಕಾರ ರಚನೆ ಬಗ್ಗೆ ಎಲ್ಲವೂ ಪ್ಲಾನ್ ಮಾಡಿಕೊಂಡಿದೆ ಬಿಜೆಪಿ.
ಬರೋಬ್ಬರಿ 250 ಕೋಟಿ ರೂ ಹಂಚಿಕೆ
ಹಾಗೇ ಮೈತ್ರಿ ಸರ್ಕಾರ ಬೀಳಿಸಲು ಬರೋಬ್ಬರಿ 250 ಕೋಟಿ ಹಂಚಲಾಗಿಯಂತೆ
ಈಗಾಗಲೇ ಕೆಲ ಶಾಸಕರಿಗೆ ತಲುಪಿದೆಯಂತೆ ಕೋಟಿ ಕೋಟಿ ಕಂತೆ ಹಣ. ಶಾಸಕರಿಗೆ ದುಡ್ಡು ತಲುಪಿರೋ ಬಗ್ಗೆ ಮುಖ್ಯಮಂತ್ರಿಗಳು ಬಹಿರಂಗ ಹೇಳಿಕೆ ಕೊಟ್ಟಿದ್ದಾರೆ. ರಾಜೀನಾಮೆ ಬೇಕಾದ್ರೆ ಕೊಡ್ತೇವೆ, ದುಡ್ಡು ವಾಪಸ್ ಕೊಡಲ್ಲ ಅಂತಿರೋ ಶಾಸಕರು. ಕಾಂಗ್ರೆಸ್ ನಾಯಕರು ಫೋನ್ಗಳನ್ನ ಸ್ವೀಕರಿಸುತ್ತಿಲ್ಲ ಈ 20 ಶಾಸಕರು. ಯಾರ ಕೈಗೂ ಸಿಗದೆ ನಾಳೆ ನೇರವಾಗಿ ಸಿದ್ದರಾಮಯ್ಯರನ್ನ ಭೇಟಿ ಮಾಡಲಿದ್ದಾರೆ ಶಾಸಕರು.
ಸಿದ್ದು ಭೇಟಿ ನಂತರ ನೇರವಾಗಿ ಸ್ಪೀಕರ್ ಬಳಿ ಹೋಗಿ ರಾಜೀನಾಮೆ ನೀಡಲಿರುವ ಶಾಸಕರು,
ಫುಲ್ ಕನ್ಫ್ಯೂಸ್ನಲ್ಲಿರುವ ಇನ್ನುಳಿದ ಐವರು ಕಾಂಗ್ರೆಸ್ ಶಾಸಕರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಹಣದುಬ್ಬರ, ಕೋವಿಡ್ ನಿಭಾಯಿಸುವ ಭಾರತೀಯ ಮಾದರಿಗೆ ವಿಶ್ವದ ಆರ್ಥಿಕ ತಜ್ಞರ ಪ್ರಶಂಸೆ: ಗೃಹ ಸಚಿವ ಅಮಿತ್ ಶಾ

ಸುದ್ದಿದಿನ ಡೆಸ್ಕ್ : ಆರ್ಥಿಕ ಪುನಶ್ಚೇತನಕ್ಕೆ ಪ್ರಧಾನಿ ನರೇಂದ್ರ ಮೋದಿ ( Narendra Modi ) ನೇತೃತ್ವದ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಪರಿಣಾಮಕಾರಿ ಕ್ರಮಗಳಿಂದಾಗಿ ಆರ್ಥಿಕ ಅಭಿವೃದ್ಧಿ ದರದಲ್ಲಿ ( GDP) ಭಾರತ ಜಾಗತಿಕವಾಗಿ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ( Amit Shah) ಹೇಳಿದ್ದಾರೆ.
ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ( Banglore) ನಿನ್ನೆ ನಡೆದ ’ಸಂಕಲ್ಪದಿಂದ ಸಿದ್ಧಿ’ ( Sankalp Se Siddhi )
ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಪ್ರಸ್ತುತ ಭಾರತದ ಅಭಿವೃದ್ಧಿ ದರ ಶೇಕಡ 7.4ರಷ್ಟಿದ್ದು, ಚೀನಾ ಶೇಕಡ 3.3ಮತ್ತು ಬ್ರೆಜಿಲ್ ಶೇಕಡ 1.7ರಷ್ಟು ಅಭಿವೃದ್ಧಿ ದರ ಹೊಂದಿವೆ ಎಂದು ತಿಳಿಸಿದರು.
ಕಳೆದ ಎಂಟು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾನವೀಯ ಮುಖವಿರುವ ಆರ್ಥಿಕತೆಯನ್ನು ಪರಿಚಯಿಸಿದ್ದು, ಸಮಾಜದ ಕಟ್ಟಕಡೆಯ ಜನರ ಏಳಿಗೆಗೆ ಹಲವಾರು ಕಲ್ಯಾಣ ಕ್ರಮಗಳನ್ನು ಕೈಗೊಂಡಿದ್ದಾರೆ. ಕೇಂದ್ರ ಸರ್ಕಾರದಿಂದ ಬಡವರಿಗೆ ಮನೆ, ಶೌಚಾಲಯ, ವಿದ್ಯುತ್, ಆರೋಗ್ಯ ವಿಮೆ, ನೀರಿನ ಸಂಪರ್ಕ ಮತ್ತು ಉಚಿತ ಪಡಿತರವನ್ನು ಒದಗಿಸುವ ಪ್ರಯತ್ನಗಳು ಮುಂದುವರೆದಿವೆ ಎಂದು ಅಮಿತ್ ಶಾ ತಿಳಿಸಿದರು.

ಕೋವಿಡ್ ಮತ್ತು ಹಣದುಬ್ಬರವನ್ನು ನಿಭಾಯಿಸುವ ಭಾರತೀಯ ಮಾದರಿಯನ್ನು ವಿಶ್ವದಾದ್ಯಂತ ಅರ್ಥಶಾಸ್ತ್ರಜ್ಞರು ಪ್ರಶಂಸೆ ಮಾಡಿದ್ದಾರೆ ಎಂದು ಗೃಹ ಸಚಿವರು ತಿಳಿಸಿದರು.
ಇದನ್ನೂ ಓದಿ | ಆಕಾಶವಾಣಿ, ಎಫ್ಎಂ, ದೂರದರ್ಶನ ಚಾನಲ್ಗಳಿಗೆ ಅತಿ ಹೆಚ್ಚು ಜನ ಮನ್ನಣೆ: ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್
ಇತರ ದೇಶಗಳು ಉದ್ಯಮಗಳಿಗೆ ಬೇಡಿಕೆಯನ್ನು ಹೆಚ್ಚಿಸುವ ಮತ್ತು ಪ್ಯಾಕೇಜ್ಗಳನ್ನು ಘೋಷಿಸುವತ್ತ ಗಮನಹರಿಸಿದಾಗ, ಪ್ರಧಾನಮಂತ್ರಿಗಳು ಪರಿಹಾರವನ್ನು ಹುಡುಕುವತ್ತ ಗಮನಹರಿಸಿದರು ಮತ್ತು ಲಸಿಕೆಯನ್ನು ಕಂಡುಹಿಡಿಯಲು ವಿಜ್ಞಾನಿಗಳನ್ನು ಪ್ರೋತ್ಸಾಹಿಸಿದರು ಎಂದು ಸಚಿವ ಅಮಿತ್ ಶಾ ತಿಳಿಸಿದರು.
ದೇಶದಲ್ಲಿ ವಿಶ್ವದ ಅತಿದೊಡ್ಡ ಲಸಿಕೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದ್ದು, ಮೇಕ್ ಇನ್ ಇಂಡಿಯಾ, ಆತ್ಮ ನಿರ್ಭರ್ ಭಾರತ್ ಅಭಿಯಾನಗಳ ಮೂಲಕ ಸ್ವದೇಶಿ ಸ್ವಾವಲಂಬನೆಗೆ ಒತ್ತು ನೀಡಲಾಗಿದೆ ಎಂದು ಅಮಿತ್ ಶಾ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು

ಬೆಳಗಿನ ಪ್ರಮುಖ ಸುದ್ದಿಗಳು
- ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯರಸ್ತೆಗಳ ಅಸುಪಾಸಿನಲ್ಲಿ ಅನಧಿಕೃತ ಕಟ್ಟಡ ನಿರ್ಮಿಸದಂತೆ ಲೋಕೋಪಯೋಗಿ ಇಲಾಖೆಯಿಂದ ಹೊಸ ನಿಯಮ ಜಾರಿಗೆ ತರಲಾಗಿದೆ ಎಂದು ಇಲಾಖೆ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ಹೆದ್ದಾರಿಗಳ ಇಕ್ಕೆಲೆಗಳ ಕಟ್ಟಡ ನಿರ್ಮಾಣ ಎಷ್ಟು ಪ್ರಮಾಣದ ಅಂತರ ಕಾಪಾಡಿಕೊಳ್ಳಬೇಕು ಎಂಬ ನಿಯಮ, ವಿವರ ನಮೂದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
- ಬೆಳಕು ಯೋಜನೆಯಡಿ ರಾಜ್ಯದಲ್ಲಿ ವಿದ್ಯುತ್ ರಹಿತ ಮನೆಗಳಿಗೆ ಸಂಪರ್ಕ ನೀಡಲಾಗಿದೆ. 24 ಗಂಟೆಯೊಳಗೆ ಟ್ರಾನ್ಸ್ಫರ್ಮರ್ ಬದಲಾವಣೆಗೆ ಕ್ರಮ ಕೈಗೊಳ್ಳಲಾಗಿದೆ.160ಕಡೆ ಟಿಸಿ ಬ್ಯಾಂಕ್ ಸ್ಥಾಪನೆ ಮಾಡಲಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಬಾಗಲಕೋಟೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ರೇಷ್ಮೆ ಉತ್ಪಾದನೆಗೆ ಆದ್ಯತೆ ನೀಡಲಾಗುವುದು ಎಂದು ಕರ್ನಾಟಕ ರೇಷ್ಮೆ ಕೈಗಾರಿಕಾ ನಿಗಮದ ನೂತನ ಅಧ್ಯಕ್ಷ ಗೌತಮ್ ಗೌಡ ರಾಮನಗರದಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಹಾಲಿ ಇರುವ 17 ರೇಷ್ಮೆ ಕೈಗಾರಿಕಾ ನಿಗಮದ ಮಾರಾಟ ಮಳಿಗೆಗಳನ್ನು ವಿನೂತನವಾಗಿ ನವೀಕರಿಸಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಮಾರ್ಪಾಡು ಮಾಡಲಾಗುವುದು ಎಂದು ಅವರು ತಿಳಿಸಿದರು.
- ಕರ್ನಾಟಕ ಪರಿಕ್ಷಾ ಪ್ರಾಧಿಕಾರದ ವತಿಯಿಂದ ಇದೇ 7ರಂದು ನಡೆಯಲಿರುವ ಕೆಪಿಟಿಸಿಎಲ್ ಸ್ಪರ್ಧಾತ್ಮಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ – ಇಸ್ರೋ, ತನ್ನ ಸಣ್ಣ ಉಪಗ್ರಹ ಉಡಾವಣಾ ವಾಹನ – ಎಸ್ಎಸ್ಎಲ್ವಿ ಮೂಲಕ ಇದೇ 7ರ ಭಾನುವಾರದಂದು ಪ್ರಥಮ ಉಡಾವಣೆ ಮಾಡಲಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಕಾಲಮಾನ ಭಾನುವಾರ ಬೆಳಿಗ್ಗೆ 9 ಗಂಟೆ 18 ನಿಮಿಷಕ್ಕೆ ಇಒಎಸ್-02ಉಪಗ್ರಹ ಉಡಾವಣೆಯಾಗಲಿದೆ ಎಂದು ಇಸ್ರೋ ತಿಳಿಸಿದೆ.
- 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ, ಕೈಮಗ್ಗ ಮತ್ತು ಜವಳಿ ಇಲಾಖೆ ನಾಳೆಯಿಂದ ಆಗಸ್ಟ್ (5 ರಿಂದ) 7ರವರೆಗೆ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಆಯೋಜಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಬೆಂಗಳೂರಿನಲ್ಲಿ ಪ್ರದರ್ಶನ ಉದ್ಘಾಟಿಸಲಿದ್ದಾರೆ.
- ರಾಜ್ಯದಲ್ಲಿ ಪಿಎಸ್ಐ ನೇಮಕಾತಿಯ ಮರು ಪರೀಕ್ಷೆ ಶೀಘ್ರದಲ್ಲಿಯೇ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕ್ರಿಯೆ ಮುಗಿದ ನಂತರ ಮರು ಪರೀಕ್ಷೆ ನಡೆಸುವ ಬಗ್ಗೆ ಪ್ರಕಟಣೆ ಹೊರಡಿಸಲಾಗುವುದು ಎಂದು ಸಚಿವರು ಹೇಳಿದರು.
- ರಾಜ್ಯ ಹೆದ್ದಾರಿ ಜಿಲ್ಲಾ ಮುಖ್ಯರಸ್ತೆಗಳ ಆಸುಪಾಸಿನಲ್ಲಿ ಅನಧಿಕೃತ ಕಟ್ಟಡ ನಿರ್ಮಿಸದಂತೆ ಲೋಕೋಪಯೋಗಿ ಇಲಾಖೆಯಿಂದ ಹೊಸ ನಿಯಮ ಜಾರಿಗೆ ತರಲಾಗಿದೆ ಎಂದು ಇಲಾಖೆ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ಸಿಟಿ ಕಾರ್ಪೋರೇಷನ್ ವ್ಯಾಪ್ತಿಯಲ್ಲಿ 12 ಮೀಟರ್ ದೂರದವರೆಗೆ ಅಂತರ ಪಾಲಿಸುವುದು ಕಡ್ಡಾಯವಾಗಿದೆ. ಪಟ್ಟಣ ಪಂಚಾಯತಿ, ನಗರಸಭೆ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ೬ ಮೀಟರ್ ಅಂತರ ಕಾಪಾಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.
- ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆ ’ಹರ್ ಘರ್ ತಿರಂಗ್’ ಕಾರ್ಯಕ್ರಮದ ಅಂಗವಾಗಿ ದಾವಣಗೆರೆ ಮಹಾನಗರ ಪಾಲಿಕೆಯಿಂದ ನಿನ್ನೆ ಕಾರ್ಮಿಕರಿಗೆ ತ್ರಿವರ್ಣ ಧ್ವಜ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆಗಸ್ಟ್ 13 ರಿಂದ 15 ರ ವರೆಗೆ ಎಲ್ಲರ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಿ, ರಾಷ್ಟ್ರ ಪ್ರೇಮವನ್ನು ಎಲ್ಲೆಡೆ ಪಸರಿಸಿ, ಭಾರತ ಮಾತೆಗೆ ಗೌರವ ಸಲ್ಲಿಸಲು ಅನುಕೂಲವಾಗುವಂತೆ ಅಂಗಡಿ ವರ್ತಕರು, ಹಾಗೂ ಅಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಧ್ವಜ ವಿತರಣೆ ಕಾರ್ಯಕ್ಕೆ ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸೋಗಿ ಶಾಂತಕುಮಾರ ಚಾಲನೆ ನೀಡಿದರು.
- 2021-22ರ ಸಾಲಿನಲ್ಲಿ 99.30 ಲಕ್ಷ ಮೆಟ್ರಿಕ್ ಟನ್ನಷ್ಟು ಸಕ್ಕರೆ ರಫ್ತು ಮಾಡಲಾಗಿದೆ ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ಸರಬರಾಜು ಖಾತೆ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ತಿಳಿಸಿದ್ದಾರೆ. ದೇಶದಲ್ಲಿ ಸಕ್ಕರೆ ಲಭ್ಯತೆ, ಮಾರಾಟ ಮತ್ತು ರಫ್ತು ವಹಿವಾಟನ್ನು ಸಚಿವಾಲಯ ನಿರಂತರವಾಗಿ ನಿಗಾ ವಹಿಸುತ್ತಿದೆ ಎಂದು ಅವರು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
- ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ 2 ದಿನಗಳ ಭೇಟಿಗಾಗಿ ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಕಳೆದ ರಾತ್ರಿ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಹಿರಿಯ ಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಆರಗ ಜ್ಞಾನೇಂದ್ರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು, ಅಮಿತ್ ಶಾ ಅವರನ್ನು ಸ್ವಾಗತಿಸಿದರು.
- ಇಂದು ಬೆಂಗಳೂರು ನಗರದಲ್ಲಿ ನಡೆಯಲಿರುವ 3ನೇ ಆವೃತ್ತಿಯ ’ಸಂಕಲ್ಪದಿಂದ ಸಿದ್ಧಿ’ ಕಾರ್ಯಕ್ರಮದಲ್ಲಿ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ಅನಂತರ ಅವರು, ದೇಶದಲ್ಲೇ ಅತಿ ದೊಡ್ಡ ಹಾಲಿನ ಘಟಕವೆಂದು ಖ್ಯಾತಿಗಳಿಸಿರುವ ಕರ್ನಾಟಕ ಹಾಲು ಒಕ್ಕೂಟ-ಕೆಎಂಎಫ್ಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ಭಾಗವಹಿಸಲಿದ್ದಾರೆ.
- ಹೈಕೋರ್ಟ್ನ ನ್ಯಾಯಮೂರ್ತಿ ಪಿ. ಕೃಷ್ಣಾಭಟ್ ಅವರು ಸೇವೆಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಅವರಿಗೆ ಹೈಕೋರ್ಟ್ನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿದೆ. ಹಂಗಾಮಿ ಮುಖ್ಯನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
- ಕೇಂದ್ರ ಸಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ 2022ನೇ ಸಾಲಿನ ವಯೋಶ್ರೇಷ್ಠ ಸಮ್ಮಾನ್ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
- ಗೃಹ ರಕ್ಷಕ ದಳ ಮತ್ತು ರಾಜ್ಯ ವಿಪ್ಪತ್ತು ಸ್ಪಂದನಾ ಪಡೆಯಿಂದ ಇಂದು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಆಯೋಜಿಸಲಾಗಿದೆ. ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ನಡೆಯುವ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತಿತರರು ಭಾಗವಹಿಸಲಿದ್ದಾರೆ.
- ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ತೇಜಸ್ವಿನಿ ಶಂಕರ್ ಅಥ್ಲೆಟಿಕ್ಸ್ನಲ್ಲಿ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ. ಪುರುಷರ ಹೈಜಂಪ್ ಫೈನಲ್ನಲ್ಲಿ ಅವರು, ಐತಿಹಾಸಿಕ ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ. ಭಾರತದ ವೇಟ್ಲಿಫ್ಟರ್ ಗುರ್ದಿಪ್ ಸಿಂಗ್ ಪುರುಷರ 109ಕೆಜಿ ವಿಭಾಗದಲ್ಲಿ ಕಂಚಿನ ಪದಕವನ್ನು ಜಯಿಸಿದ್ದಾರೆ. ಭಾರತದ ಜುಡೊ ಪಟು ತುಲಿಕಾ ಮಾನ್ ಮಹಿಳೆಯರ 78 ಕೆಜಿ ವಿಭಾಗದಲ್ಲಿ ಸ್ಕಾಟ್ಲ್ಯಾಂಡ್ನ ಆಟಗಾರ್ತಿ ವಿರುದ್ಧ ಗೆದ್ದು, ಬೆಳ್ಳಿ ಪದಕವನ್ನು ಸಂಪಾದಿಸಿದ್ದಾರೆ.ಇದರೊಂದಿಗೆ ಭಾರತ ಒಟ್ಟು 5 ಚಿನ್ನ, 6 ಬೆಳ್ಳಿ, ಮತ್ತು 7 ಕಂಚಿನ ಪದಕ ಸೇರಿ 18 ಪದಕಗಳನ್ನು ಗೆದ್ದದಂತಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತಮ್ಮ ಪ್ರೀತಿಗೆ ನಾನು ಚಿರಋಣಿ : ಸಿದ್ದರಾಮಯ್ಯ

ಸುದ್ದಿದಿನ, ದಾವಣಗೆರೆ : ದಾವಣಗೆರೆಯಲ್ಲಿ ( Davangere) ಇಂದು ನಡೆದ ನನ್ನ ಹುಟ್ಟು ಹಬ್ಬದ ಅಮೃತ ಮಹೋತ್ಸವ ಸಮಾರಂಭಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಬಂದಿರುವ ಜನತಾ ಜನಾರ್ದನರ ಪ್ರೀತಿ-ಅಭಿಮಾನಕ್ಕೆ ತುಂಬು ಹೃದಯದ ಕೃತಜ್ಞತೆಗಳು ಎಂದು ಸಿದ್ದರಾಮಯ್ಯ ಟ್ವೀಟ್ (Siddaramaiah) ( Tweet ) ಮಾಡಿದ್ದಾರೆ.
ಇಂದಿನ ನನ್ನ ಜನ್ಮದಿನಕ್ಕೆ ಶುಭ ಕೋರಿದ ನನ್ನೆಲ್ಲಾ ಹಿತೈಷಿಗಳಿಗೆ, ಅಭಿಮಾನಿಗಳಿಗೆ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಅನಂತ ಧನ್ಯವಾದಗಳು.
ತಾವು ತೋರಿದ ಪ್ರೀತಿ, ಅಭಿಮಾನ ಈ ದಿನವನ್ನು ಅವಿಸ್ಮರಣೀಯವಾಗಿಸಿದೆ.
ದಾವಣಗೆರೆಯಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ, ಶುಭ ಕೋರಿದ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರಿಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ಪದಾಧಿಕಾರಿಗಳು, ಶಾಸಕರು ಮತ್ತು ಮಾಜಿ ಶಾಸಕರಿಗೆ ಧನ್ಯವಾದಗಳು.
ಇಂದಿನ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿಗೆ ಕಾರಣ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿ, ಸಂತಸದ ಕ್ಷಣದಲ್ಲಿ ನನ್ನೊಂದಿಗೆ ಭಾಗಿಯಾದ ನನ್ನೆಲ್ಲಾ ಸಹೃದಯಿ ಮಿತ್ರರು. ತಮ್ಮ ಪ್ರೀತಿಗೆ ನಾನು ಚಿರಋಣಿ.

ಇದನ್ನೂ ಓದಿ | ಸಿದ್ದರಾಮೋತ್ಸವ ; ಇದು ಗೂಗ್ಲಿಯೂ ಹೌದು; ಮೊದಲ ಬಾಲಿಗೆ ಸಿಕ್ಸರೂ ಹೌದು!
ಈ ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ, ಯಶಸ್ವಿಯಾಗಿ ಅಯೋಜಿಸಿದ್ದ ಸಂಘಟನಾ ಸಮಿತಿಯ ಎಲ್ಲ ಪದಾಧಿಕಾರಿಗಳಿಗೆ ನಾನು ಕೃತಜ್ಞ.ನಿಮ್ಮೆಲ್ಲರ ಶ್ರಮಕ್ಕೆ ಸಾಗರದಂತೆ ಹರಿದುಬಂದ ಜನಸ್ತೋಮವೇ ಸಾಕ್ಷಿ.
ಈ ಸಮಾರಂಭದಲ್ಲಿ ಪಾಲ್ಗೊಂಡವರ ಅನುಕೂಲಕ್ಕಾಗಿ ಸಂಘಟಕರು ಶಕ್ತಿಮೀರಿ ವ್ಯವಸ್ಥೆಯನ್ನು ಮಾಡಿದ್ದರೂ ಲಕ್ಷಾಂತರ ಜನರ ಭಾಗವಹಿಸುವಿಕೆಯಿಂದಾಗಿ ಸಹಜವಾಗಿ ಒಂದಷ್ಟು ಅನಾನುಕೂಲವಾಗಿರಬಹುದು. ಅದಕ್ಕಾಗಿ ಕ್ಷಮೆ ಇರಲಿ.
ನನ್ನ ಹುಟ್ಟುಹಬ್ಬದ ಸಮಾರಂಭಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಸ್ವಂತ ಖರ್ಚಿನಲ್ಲಿ ವಾಹನಗಳನ್ನು ವ್ಯವಸ್ಥೆ ಮಾಡಿಕೊಂಡು ಬಂದಿದ್ದಾರೆ.ವಾಹನದಟ್ಟಣೆಯಿಂದಾಗಿ ಮುಖ್ಯವಾಗಿ ಉತ್ತರ ಕರ್ನಾಟಕದಿಂದ ಬಂದಿರುವ ಬಂಧುಗಳು ಸಮಾರಂಭದ ಸ್ಥಳಕ್ಕೆ ಬರಲಾಗದೆ ವಾಪಸು ಹೋಗಿದ್ದಾರೆ. ಇದಕ್ಕಾಗಿ ನಾನು ವಿಷಾದಿಸುತ್ತೇನೆ, ಪ್ರೀತಿ ಇರಲಿ. ಅಮೃತ ಮಹೋತ್ಸವ ಸಮಾರಂಭವನ್ನು ವರದಿ ಮಾಡಲು ಬಂದಿರುವ ಸಮಸ್ತ ಪತ್ರಕರ್ತ ಬಂಧುಗಳಿಗೆ ಧನ್ಯವಾದಗಳು. ವೈ-ಫೈ ಸಮಸ್ಯೆಯೂ ಸೇರಿದಂತೆ ಆಗಿರುವ ಅನಾನುಕೂಲತೆಗಳಿಗಾಗಿ ವಿಷಾದಿಸುತ್ತೇನೆ. ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು.
ಇಂದಿನ ಅಮೃತ ಮಹೋತ್ಸವ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿಗೆ ಕಾರಣ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿ, ಸಂತಸದ ಕ್ಷಣದಲ್ಲಿ ನನ್ನೊಂದಿಗೆ ಭಾಗಿಯಾದ ನನ್ನೆಲ್ಲಾ ಸಹೃದಯಿ ಮಿತ್ರರು.
ತಮ್ಮ ಪ್ರೀತಿಗೆ ನಾನು ಚಿರಋಣಿ.
4/8#ಅಮೃತಮಹೋತ್ಸವ pic.twitter.com/q6DDKTVyKL— Siddaramaiah (@siddaramaiah) August 3, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಮಳೆ ಅವಾಂತರ | ನವಿಲೇಹಾಳಿನಲ್ಲಿ ನಾಲ್ಕು ಮನೆಗಳು ನೆಲಸಮ
-
ಕ್ರೀಡೆ6 days ago
ಕಾಮನ್ ವೆಲ್ತ್ ಕ್ರೀಡಾಕೂಟ ; ಪುರುಷರ 73 ಕೆ.ಜಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಅಚಿಂತಾ ಶೆಯಿಲಿಗೆ ಸ್ವರ್ಣ ಪದಕ
-
ನಿತ್ಯ ಭವಿಷ್ಯ7 days ago
ಸೋಮವಾರ ರಾಶಿ ಭವಿಷ್ಯ-ಆಗಸ್ಟ್-1,2022 : ಈ ರಾಶಿಯವರಿಗೆ ತುಂಬಾ ಇಷ್ಟಪಟ್ಟವರು ನಿಲುಕದ ನಕ್ಷತ್ರ!
-
ದಿನದ ಸುದ್ದಿ6 days ago
ಹರಿಯಾಣದ ಚಾಂಡಿಮಂದಿರದಲ್ಲಿ ಇಂದಿನಿಂದ ಇದೇ 20ರವರೆಗೆ ಭಾರತ – ವಿಯೆಟ್ನಾಂ ಸೇನಾ ಸಮರಾಭ್ಯಾಸ
-
ದಿನದ ಸುದ್ದಿ6 days ago
ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ; ಮೇಲ್ವಿಚಾರಣೆಗೆ ಕಾರ್ಯಪಡೆ ರಚನೆ
-
ಕ್ರೀಡೆ6 days ago
ಸೇಂಟ್ ಕಿಟ್ಸ್ ನಲ್ಲಿಂದು ಭಾರತ – ವೆಸ್ಟ್ ಇಂಡೀಸ್ ನಡುವಣ 2ನೇ ಟಿ-20 ಕ್ರಿಕೆಟ್ ಪಂದ್ಯ
-
ದಿನದ ಸುದ್ದಿ6 days ago
ಕೋಲಾರ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಇಂದು ಸಂಜೆ ಪ್ರತಿಭಟನೆ
-
ದಿನದ ಸುದ್ದಿ6 days ago
ಮಂಕಿಪಾಕ್ಸ್ ಕುರಿತಂತೆ ನಾಳೆ ಮಹತ್ವದ ಸಭೆ : ಸಿ.ಎಂ ಬಸವರಾಜ್ ಬೊಮ್ಮಾಯಿ