ದಿನದ ಸುದ್ದಿ
ರಾಮದುರ್ಗ : ಕೈಮಗ್ಗ ನೇಕಾರರ ಪ್ರತಿಭಟನೆ

ಸುದ್ದಿದಿನ ಡೆಸ್ಕ್ : ಕಳೆದ ಒಂದು ತಿಂಗಳುಗಳಿಂದ ತಮ್ಮಗೆ ನೇಯಲು ಕಚ್ಚಾ ಮಾಲು ಪೊರೈಕೆ ಯಾಗಿಲ್ಲವೆಂದು ಆಗ್ರಹಿಸಿ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಠ ಗ್ರಾಮದ ಕೆ.ಎಚ್.ಡಿ.ಸಿ ನೇಕಾರರು ಕೆಲಕಾಲ ಕೆ.ಎಚ್.ಡಿ.ಸಿ ಕಚೇರಿಯ ಮುಂದೆ ಪ್ರತಿಭಟನೆ ಮಾಡಿದ ಘಟನೆ ಸೋಮವಾರ ನಡೆದಿದೆ.
ಘಟನೆ ಹಿನ್ನೆಲೆ
ಕೈಮಗ್ಗ ನೇಕಾರರು ತಮ್ಮ ಮನವಿಯನ್ನು ಸಲ್ಲಿಸಲು ಶಿವಪೇಠ ಗ್ರಾಮದ ಕೆ.ಎಚ್.ಡಿ.ಸಿ ಹೋದಾಗ, ತಮ್ಮ ಮನವಿಯನ್ನು ತಾಲೂಕಾ ಅಧಿಕಾರಿಗಳಿಗೆ ನೀಡಬೇಕೆಂಬ ಮಹದಾಸೇಯಿಂದ, ತಾಲೂಕಾ ಅಧಿಕಾರಿಗಳನ್ನು ಕರೆಸುವಂತೆ ಶಿವಪೇಠ ಕೆ.ಎಚ್.ಡಿ.ಸಿ ಅಧಿಕಾರಿಗಳಲ್ಲಿ ವಿನಂತಿಸಿಕೊಂಡರು. ಶಿವಪೇಠ ಶಾಖೆಯ ಅಧಿಕಾರಿ ಮಾಟುರವರು ತಾಲೂಕಾ ಅಧಿಕಾರಿ ಜವಾಹರ ಹುಬ್ಬಳ್ಳಿ ಅವರನ್ನು ಪೋನ್ ಮೂಲಕ ಸಂಪರ್ಕಿಸಿದಾಗ ಅವರು ಆಫೀಸನ್ನು ಮುಚ್ಚಿಕೊಂಡು ಬರುವಂತೆ ಹೇಳಿದ್ದರ ಹಿನ್ನೆಲೆಯಲ್ಲಿ ಅದಕ್ಕೆ ಬೆಸತ್ತ ನೇಕಾರರು ದಿಢೀರ್ನೆ ಶಿವಪೇಠ ಗ್ರಾಮದ ಕೆ.ಎಚ್.ಡಿ.ಸಿ ಕಚೇರಿಯ ಸೆಟರ್ಸ ಎಳೆದು ಕೆಲಕಾಲ ಪ್ರತಿಭಟನೆ ಮಾಡಿದರು.
ಈ ಸುದ್ದಿ ತಿಳಿದ ತಕ್ಷಣವೇ ಸುರೇಬಾನ ಪೊಲೀಸ್ ಉಪ ಠಾಣೆಯ ಹವಾಲ್ದಾರ ಬಿ.ಕೆ.ರಂಗಣ್ಣವರ ಪ್ರತಿಭಟನೆ ನಡೆಸಿದ ಶಿವಪೇಠ ಗ್ರಾಮದ ಕೆ.ಎಚ್.ಡಿ.ಸಿ ನೇಕಾರರತ್ತ ಆಗಮಿಸಿ, ಕೆ.ಎಚ್.ಡಿ.ಸಿ ಹಿರಿಯ ಅಧಿಕಾರಿಗಳೊಂಗಿ ಚರ್ಚಿಸಿ, ನಿಮ್ಮ ಸಮಸ್ಯೆಯನ್ನು ನಾಳೆ ಮಂಗಳವಾರ ಬಗೆಹರಿಸುವುದಾಗಿ ನಿಮ್ಮ ರಾಮದುರ್ಗ ಕಚೇರಿಯ ಅಧಿಕಾರಿಗಳು ಹೇಳಿದ್ದಾರೆ. ಅದಕ್ಕೆ ತಾವು ತಮ್ಮ ಈ ಪ್ರತಿಭಟನೆಯನ್ನು ನಿಲ್ಲಿಸಿ ಎಂದು ವಿನಂತಿಸಿದಾಗ ನೇಕರರು ತಮ್ಮ ಮನವಿಯನ್ನು ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿಯೇ ಶಿವಪೇಠ ಕೆ.ಎಚ್.ಡಿ.ಸಿ ಅಧಿಕಾರಿಗಳಿಗೆ ಸಲ್ಲಿಸಿದರು.
ನಮ್ಮ ಈ ಸಮಸ್ಯೆ ನಾಳೆ ಬಗೆಹರಿಯದಿದ್ದರೆ ತಮ್ಮ ಕಚೇರಿಯ ಮುಂದೇ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಸುರೇಬಾನ ಪೊಲೀಸ್ ಉಪ ಠಾಣೆಯ ಹವಾಲ್ದಾರ ಬಿ.ಕೆ.ರಂಗಣ್ಣವರ ಅವರಿಗೆ ಎಚ್ಚರಿದರು.
ಈ ಪ್ರತಿಭಟನೆಯಲ್ಲಿ ಕೈಮಗ್ಗ ನೇಕಾರರ ಸಂಘದ ಜಿಲ್ಲಾ ಅಧ್ಯಕ್ಷ ಸುರೇಶ ಗಣಮುಖಿ, ನಾಗಪ್ಪ ದೇವನಾಳ, ಬಸಪ್ಪ ಕೊಣ್ಣೂರ, ಮಲ್ಲಪ್ಪ ಕಾತರಕಿ, ಬಸಪ್ಪ ಇಟಗಿ, ಶಂಕ್ರಪ್ಪ ದೇವನಾಳ, ಈರತಯ್ಯ ಹಿರೇಮಠ, ಈರಪ್ಪ ದೇವನಾಳ, ಸಿದ್ದಪ್ಪ ಕೊಣ್ಣೂರ, ಈರಪ್ಪ ಗಣಮುಖಿ, ಈರಪ್ಪ ಬಿಳಗಿ, ಶಂಕ್ರಪ್ಪ ಗೌಡರ, ಮಾಗುಂಡಪ್ಪ ಆಲೂರ, ಶಂಕ್ರಪ್ಪ ಚನ್ನಪ್ಪನವರ, ಜಗಧೀಶ ಗಣಮುಖಿ ಮತ್ತಿತರರು ಇದ್ದರು.
ಒಂದುವಾರದಲ್ಲಿ ನೇಕಾರರ ಇಗಿರುವ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಾನೇ ನಾಳೆ ಮಂಗಳವಾರ ಖುದ್ದಾಗಿ ಬೆಟಿನೀಡಿ ಕೈಮಗ್ಗ ನೇಕಾರರ ಸಮಸ್ಯೆಯನ್ನು ಆಲಿಸುತ್ತೇನೆ ಎಂದು ಕೆ.ಎಚ್.ಡಿ.ಸಿ ರಾಮದುರ್ಗ ತಾಲೂಕ್ ಅಧಿಕಾರಿ ಭರವಸೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
