ರಾಜಕೀಯ
ಇದು ರಾಜ್ಯ ರಾಜಕಾರಣದ ಸ್ಫೋಟಕ ಸ್ಟೋರಿ ; ಜಾರಕಿಹೊಳಿ ಬ್ರದರ್ಸ್ 6 ಬೇಡಿಕೆ ಸಿಎಂ ಅಸ್ತು : ಬಿಜೆಪಿ ಕನಸು ಭಗ್ನ

ಸುದ್ದಿದಿನ ಡೆಸ್ಕ್ : ಜಾರಕಿಹೊಳಿ ಬ್ರದರ್ಸ್ -ಸಿಎಂ ಹೆಚ್ಡಿಕೆ ನಡುವೆ ನಡೆದ ಮಾತುಕತೆ ಏನು? ಜಾರಕಿಹೊಳಿ ಬ್ರದರ್ಸ್ ಕೇಳಿದ್ದೇನು? ಸಿಎಂ ಹೆಚ್ಡಿಕೆ ಹೇಳಿದ್ದೇನು? ಆ ಒಂದು ಗಂಟೆಯ ಮಾತುಕತೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು..? ಬಿಟಿವಿಯಲ್ಲಿ ಜಾರಕಿಹೊಳಿ ಬ್ರದರ್ಸ್-ಸಿಎಂ ಭೇಟಿಯ ಎಕ್ಸ್ಕ್ಲೂಸಿವ್ ಡೀಟೇಲ್ಸ್-
ಆ ಒಂದು ಗಂಟೆಯಲ್ಲಿ ಆಗಿದ್ದೇನು..?
ಇದು ರಾಜ್ಯ ರಾಜಕಾರಣದ ಸ್ಫೋಟಕ ಸ್ಟೋರಿ-
ಬಂಡಾಯ ಶಮನಕ್ಕೆ ಎಂಟ್ರಿಯಾದ ಸಿಎಂ ಹೆಚ್ಡಿ ಕುಮಾರಸ್ವಾಮಿ ಜಾರಕಿಹೊಳಿ ಬ್ರದರ್ಸ್ ಜತೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ತಾಜ್ವೆಸ್ಟೆಂಡ್ನಲ್ಲಿ ಒಂದು ಗಂಟೆ ಕಾಲ ನಡೆದ ಮಾತುಕತೆ ಫಲಪ್ರದವಾಗಿದ್ದು, ಸಿಎಂ ಭೇಟಿ ವೇಳೆ ರಮೇಶ್ ಜಾರಕಿಹೊಳಿ,ಸತೀಶ್ ಜಾರಕಿಹೊಳಿ, ನಾಗೇಂದ್ರ ಮತ್ತು ಹೆಚ್ಡಿ ರೇವಣ್ಣ ಹಾಜರಿದ್ದರು. ನಾವು ರಾಹುಲ್ ಗಾಂಧಿ ಬಳಿಗೆ ಹೋಗಲ್ಲ ನೀವೇ ಬಗೆಹರಿಸಿ ಎಂದರು ಜಾರಕಿಹೊಳಿ. ಜಾರಕಿಹೊಳಿಯ 6 ಪ್ರಮುಖ ಬೇಡಿಕೆಗಳಿಗೂ ಒಪ್ಪಿಗೆ ನೀಡಿದ ಸಿಎಂ ಕುಮಾರಸ್ವಾಮಿ ಅವರು ಸತೀಶ್ ಜಾರಕಿಹೊಳಿ ಹಾಗೂ ನಾಗೇಂದ್ರಗೆ ಸಚಿವ ಪಟ್ಟ ನೀಡಲು ಸಿಎಂ ಒಪ್ಪಿಗೆ ನೀಡಿದ್ದು, ರಮೇಶ್ ಜಾರಕಿಹೊಳಿಯ ಖಾತೆ ಬದಲಾವಣೆಗೆ ಓಕೆ ಎಂದಿದ್ದಾರೆ. ಬೆಳಗಾವಿ ಜಿಲ್ಲೆ ಸದ್ಯಕ್ಕೆ ವಿಭಜನೆ ಇಲ್ಲ, ಬೆಳಗಾವಿ ರಾಜಕಾರಣದಲ್ಲಿ ಯಾರ ಹಸ್ತಕ್ಷೇಪವೂ ಇರಲ್ಲ ಎಂದು ಎಲ್ಲಾ ಬೇಡಿಕೆಗಳಿಗೂ ಸಮ್ಮತಿ ನೀಡಿದ್ದಾರೆ ಸಿಎಂ ಕುಮಾರಸ್ವಾಮಿ.
ಜಾರಕಿಹೊಳಿ ಬ್ರದರ್ಸ್ 6 ಬೇಡಿಕೆ ಸಿಎಂ ಅಸ್ತು
ಬಿಜೆಪಿ ನಾಯಕರ ಆಪರೇಷನ್ ಕಮಲ ಠುಸ್ ಆಗಿದೆ. ಸಿಎಂ ಜತೆ ಜಾರಕಿಹೊಳಿ ಬ್ರದರ್ಸ್ ಮಾತುಕತೆ ಯಶಸ್ವಿಯದನಂತರ, ಜಾರಕಿಹೊಳಿ ಸಹೋದರರ ಎಲ್ಲಾ ಬೇಡಿಕೆಗಳಿಗೂ ಸಮ್ಮತಿಸಿದ್ದಾರೆ ಸಿಎಂ ಹೆಚ್ಡಿಕೆ.
ಬಿಜೆಪಿ ನಾಯಕರ ಎಲ್ಲಾ ಪ್ಲಾನ್ಗಳನ್ನು ಉಲ್ಟಾ ಮಾಡಿದ ಸಿಎಂ ಕುಮಾರಸ್ವಾಮಿ.
ತಾಜ್ವೆಸ್ಟೆಂಡ್ನಲ್ಲಿ ರಮೇಶ್ ಜಾರಕಿಹೊಳಿ ಭೇಟಿಗೆ ಸಜ್ಜಾಗಿದ್ದ ಬಿಜೆಪಿ ನಾಯಕರು
ಆಪರೇಷನ್ ಕಮಲಕ್ಕೆ ಅಂತಿಮ ತಯಾರಿ ಮಾಡಿಕೊಂಡಿದ್ದರು. ರಾಜನಾಥ್ ಸಿಂಗ್ ಬೆಂಗಳೂರಿಗೆ ಎಂಟ್ರಿ ಕೊಡ್ತಿದ್ದಂತೆ ಮಾತುಕತೆಗೆ ಸಿದ್ದವಾಗಿತ್ತು ವೇದಿಕೆ. ಅಷ್ಟರಲ್ಲೇ ತಾಜ್ ವೆಸ್ಟ್ ಎಂಡ್ಗೆ ಎಂಟ್ರಿ ಕೊಟ್ಟು ಬಿಜೆಪಿ ಕನಸು ಭಗ್ನ ಮಾಡಿದ ಸಿಎಂ. ಯಾವುದೇ ಕಾರಣಕ್ಕೂ ನಾವು ಬಿಜೆಪಿ ಜತೆ ಹೋಗಲ್ಲ ಎಂದರು ಜಾರಕಿಹೊಳಿ ಬ್ರದರ್ಸ್.
ಬಿಜೆಪಿ ಪ್ಲಾನ್ ಛಿದ್ರ ಮಾಡಿದ ಹೆಚ್ಡಿಕೆ
ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಟ್ವಿಸ್ಟ್
ಮುಂದುವರೆಯುತ್ತಲೇ ಇದೆ ಜಾರಕಿಹೊಳಿ ಬ್ರದರ್ಸ್-ಸಿಎಂ ಮಾತುಕತೆ. ತಾಜ್ ವೆಸ್ಟ್ಎಂಡ್ನಲ್ಲಿ ನಡೆಯುತ್ತಿರುವ ಸುದೀರ್ಘ ಮಾತುಕತೆ-
ಜಾರಕಿಹೊಳಿ ಬ್ರದರ್ಸ್ ಗೆ ಕೊನೆಗುಯ ಸಮಾಧಾನ ಪಡಿಸಿದ್ಸಾರೆ ಸಿಎಂ ಹೆಚ್ಡಿಕೆ.
ಇಂದು ಮಧ್ಯಾಹ್ನ ಜಾರಕಿಹೊಳಿ ಸೋದರರ ಭೇಟಿಯಾಗಲಿರುವ ಸಿದ್ದರಾಮಯ್ಯನವರು,
ಜಾರಕಿಹೊಳಿ ಭೇಟಿ ನಂತರ ಸಂಜೆ ದೆಹಲಿಗೆ ತೆರಳಲಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಮಾಡಲಿರುವ ಸಿದ್ದು. ಈಗಾಗಲೇ ದೆಹಲಿಯತ್ತ ಹೊರಟಿದ್ದಾರೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್. ಸಿಎಂ ಜತೆಗಿನ ಮಾತುಕತೆ ಫಲಪ್ರದ ಹಿನ್ನೆಲೆಯಲ್ಲಿ ಜಾರಕಿಹೊಳಿ ಬ್ರದರ್ಸ್ ದೆಹಲಿ ಪ್ರಯಾಣ ರದ್ದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243

ದಿನದ ಸುದ್ದಿ
ರಾಷ್ಟ್ರೀಯ ಯುವ ದಿನದ ಪ್ರಯುಕ್ತ ನಾಳೆ ರಾಜಾಜಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಬೈಕ್ ರ್ಯಾಲಿ : ಭವ್ಯ ನರಸಿಂಹಮೂರ್ತಿ

ಸುದ್ದಿದಿನ, ಬೆಂಗಳೂರು : ರಾಷ್ಟ್ರೀಯ ಯುವ ದಿನದ ಪ್ರಯುಕ್ತ ನಾಳೆ ರಾಜಾಜಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದು ಸ್ವಾಮಿ ವಿವೇಕಾನಂದರ 160ನೇ ಜನ್ಮದಿನದ ಅಂಗವಾಗಿ ಅವರ ತತ್ವ ಆದರ್ಶಗಳು ಹಾಗೂ ಯುವ ಜನತೆಗೆ ನೀಡಿರುವ ಸಂದೇಶಗಳನ್ನು ರಾಜಾಜಿನಗರ ವಿಧಾನ ಸಭಾ ಕ್ಷೇತ್ರದ ಎಲ್ಲಾ ಜನತೆಗೆ ತಲುಪುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ರಾಜಾಜಿನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿ ಭವ್ಯ ನರಸಿಂಹಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೈಕ್ ರ್ಯಾಲಿ ಬೆಳಿಗ್ಗೆ 09-00 ಕ್ಕೆ ರಾಜಾಜಿನಗರ Entrance Bridge ಇಂದ ಪ್ರಾರಂಭವಾಗಿ ನವರಂಗ ಚಿತ್ರಮಂದಿರ – ಶಂಕರ್ ಮಠ – ಹಾವನೂರ್ ಸರ್ಕಲ್ – ಹೌಸಿಂಗ್ ಬೋರ್ಡ್ – ಕಾಮಾಕ್ಷಿಪಾಳ್ಯ ಬಸ್ ಸ್ಟಾಂಡ್ – ಹಾವನೂರ್ – ಅಕ್ಷಯ ಉಪಹಾರ – ಮೋದಿ ಹಾಸ್ಪಿಟಲ್ – ನವರಂಗ ಬ್ರಿಡ್ಜ್ – ಗಿರಿಯಾಸ್ ಸಿಗ್ನಲ್ – 6th ಬ್ಲಾಕ್ – ಕೊನೆಯದಾಗಿ 12 ಗಂಟೆಗೆ ಭಾಷ್ಯಮ್ ಸರ್ಕಲ್ ನಲ್ಲಿ ಕೊನೆಗೊಳ್ಳುತ್ತದೆ.
ದಾರಿಯಲ್ಲಿ 4 ಕಡೆ ಸ್ವಾಮಿ ವಿವೇಕಾನಂದರಿಗೆ ಪೂಜೆ ಹಮ್ಮಿಕೊಳ್ಳಲಾಗಿದೆ. ಪೂಜೆಯ ನಂತರ ವಿವೇಕಾನಂದರ ತತ್ವ ಆದರ್ಶಗಳನ್ನೊಳಗೊಂಡ ಹತ್ತು ಸಾವಿರ ಪುಸ್ತಕಗಳನ್ನು ಕ್ಷೇತ್ರದಾದ್ಯಂತ ಉಚಿತವಾಗಿ ಹಂಚಲಾಗುವುದು ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿರುತ್ತದೆ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
