ರಾಜಕೀಯ
ರಾಜ್ಯ ರಾಜಕಾರಣದಲ್ಲಿ ಕೋಲಾಹಲ : ನಾಳೆ ದೆಹಲಿಗೆ ಸಿದ್ದು ಭೇಟಿ

ಸುದ್ದಿದಿನ ಡೆಸ್ಕ್ : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಿನ್ನಮತದ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನ ಕೆಲವು ಶಾಸಕರು ರಾಜೀನಾಮೆ ಕೊಡುವ ತೀರ್ಮಾನಕ್ಕೆ ಬಂದಿರುವ ವಿದ್ಯಾಮಾನ ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.
ಜಾರಕಿಹೊಳಿ ಬ್ರದರ್ಸ್ ರಿಂದ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ಉಂಟಾಗಿರುವ ಹಿನ್ನೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರೊಂದಿಗೆ ಸುಧೀರ್ಘ ಚರ್ಚೆಯನ್ನು ನಾಳೆ 11 ಗಂಟೆಗೆ ನಡೆಲಿದ್ದಾರೆ. ಜತೆಗೆ ಎಂ.ಎಲ್.ಸಿ ಚುನಾವಣೆಯ ಬಗ್ಗೆಯೂ ಚರ್ಚಿಸಲಿದ್ದು, ರಾಜ್ಯದ ಮೈತ್ರಿ ಸರ್ಕಾರದ ವಿದ್ಯಮಾನಗಳನ್ನು ರಾಹುಲ್ ಗಾಂಧಿಯವರಿಗೆ ತಿಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401


ದಿನದ ಸುದ್ದಿ
ಬಿಹಾರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ; ಬಿಜೆಪಿ ಮೈತ್ರಿ ತೊರೆದ ಜೆಡಿಯು ; ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಸುದ್ದಿದಿನ ಡೆಸ್ಕ್ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ (Politics Development ) ಬಿಹಾರ ಮುಖ್ಯಮಂತ್ರಿ (Bihar Chief minister ) ಹಾಗೂ ಜೆಡಿಯು ನಾಯಕ ನಿತೀಶ್ ಕುಮಾರ್ ( JDU – Nitish Kumar ) ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ (Resignation) ಸಲ್ಲಿಸಿದ್ದಾರೆ.
ಪಾಟ್ನಾದಲ್ಲಿನ ರಾಜಭವನಕ್ಕೆ ಇಂದು ಸಂಜೆ ತೆರಳಿದ ನಿತೀಶ್ ಕುಮಾರ್, ರಾಜ್ಯಪಾಲ ಫಗು ಚೌವ್ಹಾಣ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಬಿಜೆಪಿಯೊಂದಿಗಿನ ಮೈತ್ರಿಕೂಟದಿಂದ ಹೊರಬರುವ ಕುರಿತು ನಿತೀಶ್ ಕುಮಾರ್ ನೇತೃತ್ವದಲ್ಲಿ ಇಂದು ಬೆಳಿಗ್ಗೆ ನಡೆದ ಜೆಡಿಯು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧರಿಸಲಾಯಿತು.
ಈ ಮಧ್ಯೆ ನೂತನ ಸರ್ಕಾರ ರಚನೆಗೆ ಕಸರತ್ತು ನಡೆದಿದ್ದು, ನಿತೀಶ್ ಕುಮಾರ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಆರ್ಜೆಡಿ ಮತ್ತು ಕಾಂಗ್ರೆಸ್ ತಿಳಿಸಿವೆ. ಹಿಂದೂಸ್ಥಾನಿ ಅವಾಮ್ ಮೋರ್ಚಾ-ಹೆಚ್ಎಎಂ ಸಹ ಬೆಂಬಲ ನೀಡುವುದಾಗಿ ಘೋಷಿಸಿದೆ.

ಇದನ್ನೂ ಓದಿ | ಎನ್ಇಪಿ-2020ರ ಯಶಸ್ಸಿನಲ್ಲಿ ಗ್ರಂಥಪಾಲಕರ ಪಾತ್ರ ಮಹತ್ವದ್ದು : ಪ್ರೊ. ಪಿ ಎಸ್ ಯಡಪಡಿತ್ತಾಯ
243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ 77 ಶಾಸಕ ಬಲ ಹೊಂದಿದ್ದು, ಆರ್ಜೆಡಿ79 , ಜೆಡಿಯು 45 , ಕಾಂಗ್ರೆಸ್ 19, ಎಡಪಕ್ಷಗಳು 16, ಹಾಗೂ ಹೆಚ್ಎಎಂ 4 ಶಾಸಕ ಬಲ ಹೊಂದಿವೆ. ತಮಗೆ 164 ಶಾಸಕರ ಬೆಂಬಲವಿದೆ ಎಂದು ನಿತೀಶ್ ಕುಮಾರ್ ತಿಳಿಸಿದ್ದು, ನೂತನ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ರಾಜ್ಯಪಾಲರಿಗೆ ಹಕ್ಕು ಮಂಡಿಸಿದ್ದಾರೆ. ಈ ಮಧ್ಯೆ ಮೈತ್ರಿ ಕಡಿದುಕೊಳ್ಳುವ ಮೂಲಕ ಜೆಡಿಯು ಜನಾದೇಶಕ್ಕೆ ವಿರುದ್ಧವಾಗಿ ನಿರ್ಣಯ ಕೈಗೊಂಡಿದ್ದು, ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಂಜಯ್ ಜೈಸ್ವಾಲ್, ನಿತೀಶ್ ಕುಮಾರ್ ಅವರು ಮಾಡಿರುವ ವಿಶ್ವಾಸ ದ್ರೋಹವನ್ನು ಬಿಹಾರ ಜನತೆ ಎಂದೂ ಕ್ಷಮಿಸುವುದಿಲ್ಲ ಎಂದು ಟೀಕಿಸಿದರು.
2020ರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಭಾಗವಾಗಿದ್ದ ಜೆಡಿಯು ಕಡಿಮೆ ಸ್ಥಾನ ಪಡೆದು ಬಿಜೆಪಿ ಗಣನೀಯ ಸ್ಥಾನ ಪಡೆದಿದ್ದರೂ ಮುಖ್ಯಮಂತ್ರಿ ಸ್ಥಾನವನ್ನು ನಿತೀಶ್ ಕುಮಾರ್ ಅವರಿಗೆ ಬಿಟ್ಟುಕೊಡಲಾಗಿತ್ತು. ಇದೀಗ ಮೈತ್ರಿ ಕಡಿದುಕೊಳ್ಳೂವ ಮೂಲಕ ಅವರು, ಜನಾದೇಶ ಧಿಕ್ಕರಿಸಿದ್ದಾರೆ ಎಂದು ಜೈಸ್ವಾಲ್ ಆರೋಪಿಸಿದ್ದಾರೆ.
ಎಲ್ಜೆಪಿ ವರಿಷ್ಠ ಚಿರಾಗ್ ಪಾಸ್ವಾನ್ ಅವರು ಸಹ ನಿತೀಶ್ ಕುಮಾರ್ ನಿರ್ಧಾರವನ್ನು ಖಂಡಿಸಿದ್ದಾರೆ. ರಾಷ್ಟ್ರೀಯ ಲೋಕಜನಶಕ್ತಿ ಪಕ್ಷದ ನಾಯಕ ಮತ್ತು ಕೇಂದ್ರ ಸಚಿವ ಪಶುಪತಿ ಕುಮಾರ್ ಪರಸ್ ಅವರು ಜೆಡಿಯು ನಿರ್ಧಾರವನ್ನು ಟೀಕಿಸಿದ್ದು, ತಮ್ಮ ಪಕ್ಷ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದಲ್ಲಿ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹಣದುಬ್ಬರ, ಕೋವಿಡ್ ನಿಭಾಯಿಸುವ ಭಾರತೀಯ ಮಾದರಿಗೆ ವಿಶ್ವದ ಆರ್ಥಿಕ ತಜ್ಞರ ಪ್ರಶಂಸೆ: ಗೃಹ ಸಚಿವ ಅಮಿತ್ ಶಾ

ಸುದ್ದಿದಿನ ಡೆಸ್ಕ್ : ಆರ್ಥಿಕ ಪುನಶ್ಚೇತನಕ್ಕೆ ಪ್ರಧಾನಿ ನರೇಂದ್ರ ಮೋದಿ ( Narendra Modi ) ನೇತೃತ್ವದ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಪರಿಣಾಮಕಾರಿ ಕ್ರಮಗಳಿಂದಾಗಿ ಆರ್ಥಿಕ ಅಭಿವೃದ್ಧಿ ದರದಲ್ಲಿ ( GDP) ಭಾರತ ಜಾಗತಿಕವಾಗಿ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ( Amit Shah) ಹೇಳಿದ್ದಾರೆ.
ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ( Banglore) ನಿನ್ನೆ ನಡೆದ ’ಸಂಕಲ್ಪದಿಂದ ಸಿದ್ಧಿ’ ( Sankalp Se Siddhi )
ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಪ್ರಸ್ತುತ ಭಾರತದ ಅಭಿವೃದ್ಧಿ ದರ ಶೇಕಡ 7.4ರಷ್ಟಿದ್ದು, ಚೀನಾ ಶೇಕಡ 3.3ಮತ್ತು ಬ್ರೆಜಿಲ್ ಶೇಕಡ 1.7ರಷ್ಟು ಅಭಿವೃದ್ಧಿ ದರ ಹೊಂದಿವೆ ಎಂದು ತಿಳಿಸಿದರು.
ಕಳೆದ ಎಂಟು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾನವೀಯ ಮುಖವಿರುವ ಆರ್ಥಿಕತೆಯನ್ನು ಪರಿಚಯಿಸಿದ್ದು, ಸಮಾಜದ ಕಟ್ಟಕಡೆಯ ಜನರ ಏಳಿಗೆಗೆ ಹಲವಾರು ಕಲ್ಯಾಣ ಕ್ರಮಗಳನ್ನು ಕೈಗೊಂಡಿದ್ದಾರೆ. ಕೇಂದ್ರ ಸರ್ಕಾರದಿಂದ ಬಡವರಿಗೆ ಮನೆ, ಶೌಚಾಲಯ, ವಿದ್ಯುತ್, ಆರೋಗ್ಯ ವಿಮೆ, ನೀರಿನ ಸಂಪರ್ಕ ಮತ್ತು ಉಚಿತ ಪಡಿತರವನ್ನು ಒದಗಿಸುವ ಪ್ರಯತ್ನಗಳು ಮುಂದುವರೆದಿವೆ ಎಂದು ಅಮಿತ್ ಶಾ ತಿಳಿಸಿದರು.

ಕೋವಿಡ್ ಮತ್ತು ಹಣದುಬ್ಬರವನ್ನು ನಿಭಾಯಿಸುವ ಭಾರತೀಯ ಮಾದರಿಯನ್ನು ವಿಶ್ವದಾದ್ಯಂತ ಅರ್ಥಶಾಸ್ತ್ರಜ್ಞರು ಪ್ರಶಂಸೆ ಮಾಡಿದ್ದಾರೆ ಎಂದು ಗೃಹ ಸಚಿವರು ತಿಳಿಸಿದರು.
ಇದನ್ನೂ ಓದಿ | ಆಕಾಶವಾಣಿ, ಎಫ್ಎಂ, ದೂರದರ್ಶನ ಚಾನಲ್ಗಳಿಗೆ ಅತಿ ಹೆಚ್ಚು ಜನ ಮನ್ನಣೆ: ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್
ಇತರ ದೇಶಗಳು ಉದ್ಯಮಗಳಿಗೆ ಬೇಡಿಕೆಯನ್ನು ಹೆಚ್ಚಿಸುವ ಮತ್ತು ಪ್ಯಾಕೇಜ್ಗಳನ್ನು ಘೋಷಿಸುವತ್ತ ಗಮನಹರಿಸಿದಾಗ, ಪ್ರಧಾನಮಂತ್ರಿಗಳು ಪರಿಹಾರವನ್ನು ಹುಡುಕುವತ್ತ ಗಮನಹರಿಸಿದರು ಮತ್ತು ಲಸಿಕೆಯನ್ನು ಕಂಡುಹಿಡಿಯಲು ವಿಜ್ಞಾನಿಗಳನ್ನು ಪ್ರೋತ್ಸಾಹಿಸಿದರು ಎಂದು ಸಚಿವ ಅಮಿತ್ ಶಾ ತಿಳಿಸಿದರು.
ದೇಶದಲ್ಲಿ ವಿಶ್ವದ ಅತಿದೊಡ್ಡ ಲಸಿಕೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದ್ದು, ಮೇಕ್ ಇನ್ ಇಂಡಿಯಾ, ಆತ್ಮ ನಿರ್ಭರ್ ಭಾರತ್ ಅಭಿಯಾನಗಳ ಮೂಲಕ ಸ್ವದೇಶಿ ಸ್ವಾವಲಂಬನೆಗೆ ಒತ್ತು ನೀಡಲಾಗಿದೆ ಎಂದು ಅಮಿತ್ ಶಾ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು

ಬೆಳಗಿನ ಪ್ರಮುಖ ಸುದ್ದಿಗಳು
- ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯರಸ್ತೆಗಳ ಅಸುಪಾಸಿನಲ್ಲಿ ಅನಧಿಕೃತ ಕಟ್ಟಡ ನಿರ್ಮಿಸದಂತೆ ಲೋಕೋಪಯೋಗಿ ಇಲಾಖೆಯಿಂದ ಹೊಸ ನಿಯಮ ಜಾರಿಗೆ ತರಲಾಗಿದೆ ಎಂದು ಇಲಾಖೆ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ಹೆದ್ದಾರಿಗಳ ಇಕ್ಕೆಲೆಗಳ ಕಟ್ಟಡ ನಿರ್ಮಾಣ ಎಷ್ಟು ಪ್ರಮಾಣದ ಅಂತರ ಕಾಪಾಡಿಕೊಳ್ಳಬೇಕು ಎಂಬ ನಿಯಮ, ವಿವರ ನಮೂದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
- ಬೆಳಕು ಯೋಜನೆಯಡಿ ರಾಜ್ಯದಲ್ಲಿ ವಿದ್ಯುತ್ ರಹಿತ ಮನೆಗಳಿಗೆ ಸಂಪರ್ಕ ನೀಡಲಾಗಿದೆ. 24 ಗಂಟೆಯೊಳಗೆ ಟ್ರಾನ್ಸ್ಫರ್ಮರ್ ಬದಲಾವಣೆಗೆ ಕ್ರಮ ಕೈಗೊಳ್ಳಲಾಗಿದೆ.160ಕಡೆ ಟಿಸಿ ಬ್ಯಾಂಕ್ ಸ್ಥಾಪನೆ ಮಾಡಲಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಬಾಗಲಕೋಟೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ರೇಷ್ಮೆ ಉತ್ಪಾದನೆಗೆ ಆದ್ಯತೆ ನೀಡಲಾಗುವುದು ಎಂದು ಕರ್ನಾಟಕ ರೇಷ್ಮೆ ಕೈಗಾರಿಕಾ ನಿಗಮದ ನೂತನ ಅಧ್ಯಕ್ಷ ಗೌತಮ್ ಗೌಡ ರಾಮನಗರದಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಹಾಲಿ ಇರುವ 17 ರೇಷ್ಮೆ ಕೈಗಾರಿಕಾ ನಿಗಮದ ಮಾರಾಟ ಮಳಿಗೆಗಳನ್ನು ವಿನೂತನವಾಗಿ ನವೀಕರಿಸಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಮಾರ್ಪಾಡು ಮಾಡಲಾಗುವುದು ಎಂದು ಅವರು ತಿಳಿಸಿದರು.
- ಕರ್ನಾಟಕ ಪರಿಕ್ಷಾ ಪ್ರಾಧಿಕಾರದ ವತಿಯಿಂದ ಇದೇ 7ರಂದು ನಡೆಯಲಿರುವ ಕೆಪಿಟಿಸಿಎಲ್ ಸ್ಪರ್ಧಾತ್ಮಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ – ಇಸ್ರೋ, ತನ್ನ ಸಣ್ಣ ಉಪಗ್ರಹ ಉಡಾವಣಾ ವಾಹನ – ಎಸ್ಎಸ್ಎಲ್ವಿ ಮೂಲಕ ಇದೇ 7ರ ಭಾನುವಾರದಂದು ಪ್ರಥಮ ಉಡಾವಣೆ ಮಾಡಲಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಕಾಲಮಾನ ಭಾನುವಾರ ಬೆಳಿಗ್ಗೆ 9 ಗಂಟೆ 18 ನಿಮಿಷಕ್ಕೆ ಇಒಎಸ್-02ಉಪಗ್ರಹ ಉಡಾವಣೆಯಾಗಲಿದೆ ಎಂದು ಇಸ್ರೋ ತಿಳಿಸಿದೆ.
- 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ, ಕೈಮಗ್ಗ ಮತ್ತು ಜವಳಿ ಇಲಾಖೆ ನಾಳೆಯಿಂದ ಆಗಸ್ಟ್ (5 ರಿಂದ) 7ರವರೆಗೆ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಆಯೋಜಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಬೆಂಗಳೂರಿನಲ್ಲಿ ಪ್ರದರ್ಶನ ಉದ್ಘಾಟಿಸಲಿದ್ದಾರೆ.
- ರಾಜ್ಯದಲ್ಲಿ ಪಿಎಸ್ಐ ನೇಮಕಾತಿಯ ಮರು ಪರೀಕ್ಷೆ ಶೀಘ್ರದಲ್ಲಿಯೇ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕ್ರಿಯೆ ಮುಗಿದ ನಂತರ ಮರು ಪರೀಕ್ಷೆ ನಡೆಸುವ ಬಗ್ಗೆ ಪ್ರಕಟಣೆ ಹೊರಡಿಸಲಾಗುವುದು ಎಂದು ಸಚಿವರು ಹೇಳಿದರು.
- ರಾಜ್ಯ ಹೆದ್ದಾರಿ ಜಿಲ್ಲಾ ಮುಖ್ಯರಸ್ತೆಗಳ ಆಸುಪಾಸಿನಲ್ಲಿ ಅನಧಿಕೃತ ಕಟ್ಟಡ ನಿರ್ಮಿಸದಂತೆ ಲೋಕೋಪಯೋಗಿ ಇಲಾಖೆಯಿಂದ ಹೊಸ ನಿಯಮ ಜಾರಿಗೆ ತರಲಾಗಿದೆ ಎಂದು ಇಲಾಖೆ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ಸಿಟಿ ಕಾರ್ಪೋರೇಷನ್ ವ್ಯಾಪ್ತಿಯಲ್ಲಿ 12 ಮೀಟರ್ ದೂರದವರೆಗೆ ಅಂತರ ಪಾಲಿಸುವುದು ಕಡ್ಡಾಯವಾಗಿದೆ. ಪಟ್ಟಣ ಪಂಚಾಯತಿ, ನಗರಸಭೆ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ೬ ಮೀಟರ್ ಅಂತರ ಕಾಪಾಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.
- ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆ ’ಹರ್ ಘರ್ ತಿರಂಗ್’ ಕಾರ್ಯಕ್ರಮದ ಅಂಗವಾಗಿ ದಾವಣಗೆರೆ ಮಹಾನಗರ ಪಾಲಿಕೆಯಿಂದ ನಿನ್ನೆ ಕಾರ್ಮಿಕರಿಗೆ ತ್ರಿವರ್ಣ ಧ್ವಜ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆಗಸ್ಟ್ 13 ರಿಂದ 15 ರ ವರೆಗೆ ಎಲ್ಲರ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಿ, ರಾಷ್ಟ್ರ ಪ್ರೇಮವನ್ನು ಎಲ್ಲೆಡೆ ಪಸರಿಸಿ, ಭಾರತ ಮಾತೆಗೆ ಗೌರವ ಸಲ್ಲಿಸಲು ಅನುಕೂಲವಾಗುವಂತೆ ಅಂಗಡಿ ವರ್ತಕರು, ಹಾಗೂ ಅಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಧ್ವಜ ವಿತರಣೆ ಕಾರ್ಯಕ್ಕೆ ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸೋಗಿ ಶಾಂತಕುಮಾರ ಚಾಲನೆ ನೀಡಿದರು.
- 2021-22ರ ಸಾಲಿನಲ್ಲಿ 99.30 ಲಕ್ಷ ಮೆಟ್ರಿಕ್ ಟನ್ನಷ್ಟು ಸಕ್ಕರೆ ರಫ್ತು ಮಾಡಲಾಗಿದೆ ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ಸರಬರಾಜು ಖಾತೆ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ತಿಳಿಸಿದ್ದಾರೆ. ದೇಶದಲ್ಲಿ ಸಕ್ಕರೆ ಲಭ್ಯತೆ, ಮಾರಾಟ ಮತ್ತು ರಫ್ತು ವಹಿವಾಟನ್ನು ಸಚಿವಾಲಯ ನಿರಂತರವಾಗಿ ನಿಗಾ ವಹಿಸುತ್ತಿದೆ ಎಂದು ಅವರು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
- ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ 2 ದಿನಗಳ ಭೇಟಿಗಾಗಿ ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಕಳೆದ ರಾತ್ರಿ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಹಿರಿಯ ಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಆರಗ ಜ್ಞಾನೇಂದ್ರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು, ಅಮಿತ್ ಶಾ ಅವರನ್ನು ಸ್ವಾಗತಿಸಿದರು.
- ಇಂದು ಬೆಂಗಳೂರು ನಗರದಲ್ಲಿ ನಡೆಯಲಿರುವ 3ನೇ ಆವೃತ್ತಿಯ ’ಸಂಕಲ್ಪದಿಂದ ಸಿದ್ಧಿ’ ಕಾರ್ಯಕ್ರಮದಲ್ಲಿ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ಅನಂತರ ಅವರು, ದೇಶದಲ್ಲೇ ಅತಿ ದೊಡ್ಡ ಹಾಲಿನ ಘಟಕವೆಂದು ಖ್ಯಾತಿಗಳಿಸಿರುವ ಕರ್ನಾಟಕ ಹಾಲು ಒಕ್ಕೂಟ-ಕೆಎಂಎಫ್ಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ಭಾಗವಹಿಸಲಿದ್ದಾರೆ.
- ಹೈಕೋರ್ಟ್ನ ನ್ಯಾಯಮೂರ್ತಿ ಪಿ. ಕೃಷ್ಣಾಭಟ್ ಅವರು ಸೇವೆಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಅವರಿಗೆ ಹೈಕೋರ್ಟ್ನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿದೆ. ಹಂಗಾಮಿ ಮುಖ್ಯನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
- ಕೇಂದ್ರ ಸಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ 2022ನೇ ಸಾಲಿನ ವಯೋಶ್ರೇಷ್ಠ ಸಮ್ಮಾನ್ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
- ಗೃಹ ರಕ್ಷಕ ದಳ ಮತ್ತು ರಾಜ್ಯ ವಿಪ್ಪತ್ತು ಸ್ಪಂದನಾ ಪಡೆಯಿಂದ ಇಂದು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಆಯೋಜಿಸಲಾಗಿದೆ. ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ನಡೆಯುವ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತಿತರರು ಭಾಗವಹಿಸಲಿದ್ದಾರೆ.
- ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ತೇಜಸ್ವಿನಿ ಶಂಕರ್ ಅಥ್ಲೆಟಿಕ್ಸ್ನಲ್ಲಿ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ. ಪುರುಷರ ಹೈಜಂಪ್ ಫೈನಲ್ನಲ್ಲಿ ಅವರು, ಐತಿಹಾಸಿಕ ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ. ಭಾರತದ ವೇಟ್ಲಿಫ್ಟರ್ ಗುರ್ದಿಪ್ ಸಿಂಗ್ ಪುರುಷರ 109ಕೆಜಿ ವಿಭಾಗದಲ್ಲಿ ಕಂಚಿನ ಪದಕವನ್ನು ಜಯಿಸಿದ್ದಾರೆ. ಭಾರತದ ಜುಡೊ ಪಟು ತುಲಿಕಾ ಮಾನ್ ಮಹಿಳೆಯರ 78 ಕೆಜಿ ವಿಭಾಗದಲ್ಲಿ ಸ್ಕಾಟ್ಲ್ಯಾಂಡ್ನ ಆಟಗಾರ್ತಿ ವಿರುದ್ಧ ಗೆದ್ದು, ಬೆಳ್ಳಿ ಪದಕವನ್ನು ಸಂಪಾದಿಸಿದ್ದಾರೆ.ಇದರೊಂದಿಗೆ ಭಾರತ ಒಟ್ಟು 5 ಚಿನ್ನ, 6 ಬೆಳ್ಳಿ, ಮತ್ತು 7 ಕಂಚಿನ ಪದಕ ಸೇರಿ 18 ಪದಕಗಳನ್ನು ಗೆದ್ದದಂತಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days ago
ಚನ್ನಗಿರಿ | ಸರ್ಕಾರಿ ಹುದ್ದೆಗಳ ಅಕ್ರಮ ನೇಮಕಾತಿ ; ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ
-
ನಿತ್ಯ ಭವಿಷ್ಯ7 days ago
ಶನಿವಾರ ರಾಶಿ ಭವಿಷ್ಯ-ಆಗಸ್ಟ್-6,2022 : ಈ ರಾಶಿಯವರ ನಿಮ್ಮೆಲ್ಲ ಕನಸು ನನಸಾಗುವ ದಿನ ಬಂದಿದೆ!
-
ದಿನದ ಸುದ್ದಿ5 days ago
ಪ್ರತೀ ಮಗುವಿನ ಭವಿಷ್ಯವೂ ಮುಖ್ಯ: ಶಾಸಕ ರಿಜ್ವಾನ್ ಅರ್ಷದ್
-
ದಿನದ ಸುದ್ದಿ3 days ago
ಹದಡಿ ಕೆರೆ ಏರಿ ದುರಸ್ತಿಗೆ 1.70 ಕೋಟಿ ಮಂಜೂರು : ಸಚಿವ ಬೈರತಿ ಬಸವರಾಜ್
-
ನಿತ್ಯ ಭವಿಷ್ಯ6 days ago
ಭಾನುವಾರ- ರಾಶಿ ಭವಿಷ್ಯ ಆಗಸ್ಟ್-7,2022 : ಈ ರಾಶಿಯವರ ಪ್ರಯತ್ನಿಸಿದ ಕೆಲಸ ಕಾರ್ಯರೂಪಕ್ಕೆ ಬರಲಿದೆ! ಈ ರಾಶಿಯವರು ಇನ್ಮುಂದೆ ಆರ್ಥಿಕ ಸಂಕಷ್ಟದಿಂದ ಮುಕ್ತಿ!
-
ದಿನದ ಸುದ್ದಿ5 days ago
ಕರ್ನಾಟಕದಲ್ಲಿ ವ್ಯಾಪಕ ಮಳೆ; ತುರ್ತು ಪರಿಹಾರಕ್ಕೆ 200 ಕೋಟಿ ರೂಪಾಯಿ ಬಿಡುಗಡೆ
-
ನಿತ್ಯ ಭವಿಷ್ಯ5 days ago
ಸೋಮವಾರ ರಾಶಿ ಭವಿಷ್ಯ-ಆಗಸ್ಟ್-8,2022 : ಈ ರಾಶಿಯವರ ಜೊತೆ ಮದುವೆಯಾದರೆ ಸುಖವಾಗಿ ಇರಬಹುದು! ಈ ರಾಶಿಯಲ್ಲಿ ಶುಕ್ರನ ಪ್ರವೇಶದಿಂದ ನಿಮ್ಮ ಕಷ್ಟ ಪರಿಹಾರ!
-
ದಿನದ ಸುದ್ದಿ3 days ago
ಎನ್ಇಪಿ-2020ರ ಯಶಸ್ಸಿನಲ್ಲಿ ಗ್ರಂಥಪಾಲಕರ ಪಾತ್ರ ಮಹತ್ವದ್ದು : ಪ್ರೊ. ಪಿ ಎಸ್ ಯಡಪಡಿತ್ತಾಯ