ದಿನದ ಸುದ್ದಿ
ಗಣೇಶ ವಿಸರ್ಜನೆ; ಹರಪನಹಳ್ಳಿ ಬಜರಂಗದಳದ ಅಧ್ಯಕ್ಷ ಸಾವು

ಸುದ್ದಿದಿನ, ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಸಂಭವಿಸಿದ ಅವಘಡದಲ್ಲಿ ಬಜರಂಗದಳದ ಅಧ್ಯಕ್ಷ ಸಾವನಪ್ಪಿರುವ ಘಟನೆ ಹರಪನಹಳ್ಳಿಯಲ್ಲಿ ಸಂಭವಿಸಿದೆ. ಗಣೇಶ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ವಿದ್ಯುತ್ ತಗುಲಿ ಬಜರಂಗದಳದ ಅಧ್ಯಕ್ಷ ಹನುಮಂತಪ್ಪ ಸಾವನಪ್ಪಿದ್ದಾರೆ. ಟ್ರ್ಯಾಕ್ಟರ್ಗೆ ವಿದ್ಯುತ್ ತಂತಿ ತಗುಲಿದ ಕಾರಣ ದುರಂತ ಸಂಭವಿಸಿದೆ.
ಗಣೇಶ ಮೂರ್ತಿ ವಿಸರ್ಜನೆಗೆ ಭಾನುವಾರ ರಾತ್ರಿ ಕೆರೆಯ ಬಳಿ ಹೋಗುತ್ತಿದ್ದಾಗ ಟ್ರ್ಯಾಕ್ಟರ್ಗೆ ತಂತಿ ತಗುಲಿದ್ದು, 20 ಮಂದಿ ಕೆಳಗೆ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಆದರೆ ಹನುಮಂತಪ್ಪ ತೀವ್ರವಾಗಿ ಗಾಯಗೊಂಡಿದ್ದರು.ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ ಚಿಕಿತ್ಸೆ ಫಲಕಾರಿ ಆಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ದಿನದ ಸುದ್ದಿ
ಭಾರತ-ನೇಪಾಳ ನಡುವೆ ಆರು ಪ್ರಮುಖ ಒಪ್ಪಂದಗಳಿಗೆ ಅಂಕಿತ

ಸುದ್ದಿದಿನ ಡೆಸ್ಕ್ : ಭಾರತ ಮತ್ತು ನೇಪಾಳ ಇಂದು ಆರು ಮಹತ್ವದ ಒಡಂಬಡಿಕೆಗಳು ಮತ್ತು ಒಪ್ಪಂದಗಳಿಗೆ ಸಹಿ ಹಾಕಿ, ವಿನಿಮಯ ಮಾಡಿಕೊಂಡಿವೆ.
ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ತು ಮತ್ತು ಲುಂಬಿನಿ ಬೌದ್ಧ ವಿಶ್ವವಿದ್ಯಾಲಯದಲ್ಲಿ ಬೌದ್ಧ ಧರ್ಮದ ಕುರಿತು ಅಧ್ಯಯನ ನಡೆಸಲು ಡಾ. ಅಂಬೇಡ್ಕರ್ ಪೀಠ ಸ್ಥಾಪನೆ ಹಾಗೂ ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ತು ಮತ್ತು ಕಠ್ಮಂಡು ವಿಶ್ವವಿದ್ಯಾಲಯದಲ್ಲಿ ಭಾರತೀಯ ಅಧ್ಯಯನಗಳ ಕುರಿತು ಐಸಿಸಿಆರ್ ಪೀಠ ಸ್ಥಾಪನೆ ಸೇರಿದಂತೆ ಆರು ಒಡಂಬಡಿಕೆಗಳಿಗೆ ಅಂಕಿತ ಹಾಕಲಾಗಿದೆ.
ಸ್ನಾತಕೋತ್ತರ ಮಟ್ಟದಲ್ಲಿ ಜಂಟಿ ಪದವಿ ಕಾರ್ಯಕ್ರಮಕ್ಕಾಗಿ ಕಠ್ಮಂಡು ವಿಶ್ವವಿದ್ಯಾಲಯ ಮತ್ತು ಭಾರತೀಯ ತಂತ್ರಜ್ಞಾನ ಸಂಸ್ಥೆ ನಡುವೆ ಒಪ್ಪಂದ ಪತ್ರಕ್ಕೆ ಉಭಯ ದೇಶಗಳು ಸಹಿ ಹಾಕಿವೆ. ಅರುಣ್ ೪ ಯೋಜನೆ ಅಭಿವೃದ್ಧಿ ಮತ್ತು ಅನುಷ್ಠಾನಕ್ಕಾಗಿ ಎಸ್ಜೆವಿಎನ್ ಕಂಪನಿ ಮತ್ತು ನೇಪಾಳ ವಿದ್ಯುತ್ ಪ್ರಾಧಿಕಾರದ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರ ನಡುವೆ ದ್ವಿಪಕ್ಷೀಯ ಮಾತುಕತೆ ನಂತರ ಒಡಂಬಡಿಕೆಗಳು ಮತ್ತು ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಇದಕ್ಕೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ, ವೈಶಾಖ ಬುದ್ಧ ಪೂರ್ಣಿಮಾ ಅಂಗವಾಗಿ ನೇಪಾಳದ ಲುಂಬಿನಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಸಕ್ತ ಸಂದರ್ಭದಲ್ಲಿ ಜಗತ್ತಿನಲ್ಲಿ ಎದುರಾಗಿರುವ ಪರಿಸ್ಥಿತಿ ನಡುವೆ ಇಡೀ ಮಾನವ ಕುಲದ ಒಳಿತಿಗಾಗಿ ಭಾರತ ಮತ್ತು ನೇಪಾಳ ನಡುವಿನ ಮಿತ್ರತ್ವ ಮತ್ತು ನಿಕಟ ಬಾಂಧವ್ಯ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದರು.
ಬುದ್ಧನ ಆದರ್ಶಗಳೊಂದಿಗೆ ಜಾಗತಿಕ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಭಾರತ ಮತ್ತು ನೇಪಾಳದ ಸಂಬಂಧ ಸಹಕಾರಿಯಾಗಲಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು. ನೇಪಾಳದಲ್ಲಿ ಲುಂಬಿನಿ ವಸ್ತುಸಂಗ್ರಹಾಲಯ ನಿರ್ಮಾಣ ಮಾಡುತ್ತಿರುವುದು ಭಾರತ ಮತ್ತು ನೇಪಾಳದ ಸಹಕಾರಕ್ಕೆ ಉದಾಹರಣೆಯಾಗಿದೆ. ಲುಂಬಿನಿ ಬೌದ್ಧ ವಿಶ್ವವಿದ್ಯಾಲಯದಲ್ಲಿ ಬೌದ್ಧ ಧರ್ಮದ ಕುರಿತು ಅಧ್ಯಯನ ನಡೆಸಲು ಡಾ. ಅಂಬೇಡ್ಕರ್ ಪೀಠ ಸ್ಥಾಪನೆಗೆ ಎರಡೂ ದೇಶಗಳು ತೀರ್ಮಾನಿಸಿವೆ.
ಬುದ್ಧನ ಉಪದೇಶಗಳನ್ನು ಜಗತ್ತಿನಾದ್ಯಂತ ಪ್ರಚಾರ ಮಾಡುವಲ್ಲಿ ಭಾರತ ಮತ್ತು ನೇಪಾಳದ ಯುವಕರು ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ನರೇಂದ್ರ ಮೋದಿ ವ್ಯಕ್ತಪಡಿಸಿದರು.
ನೇಪಾಳಕ್ಕೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಸಂಜೆ ಖುಷಿನಗರಕ್ಕೆ ವಾಪಸ್ಸಾದರು. ಇದಕ್ಕೂ ಮುನ್ನ ಅವರು ನೇಪಾಳದಲ್ಲಿ ಮಹಾ ಪರಿನಿರ್ವಾಣ ಮಂದಿರದಲ್ಲಿ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ’ಚಿವರ್ ದನ್’ ಸಾಂಪ್ರದಾಯಿಕ ವಿಧಿಗಳನ್ನು ನಿರ್ವಹಿಸಿದರು. ಖುಷಿನಗರ ತಲುಪಿರುವ ನರೇಂದ್ರ ಮೋದಿ ಅವರು, ಅಲ್ಲಿಂದ ಲಖನೌಗೆ ಪ್ರಯಾಣ ಬೆಳೆಸಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
Today’s meeting with PM @SherBDeuba was excellent. We discussed the full range of relations between India and Nepal. Key MoUs were signed which will diversify and deepen cooperation. pic.twitter.com/UzchwOqCZp
— Narendra Modi (@narendramodi) May 16, 2022
Prayed at the Mahaparinirvana Stupa in Kushinagar. Our Government is making numerous efforts to boost infrastructure in Kushinagar so that more tourists and pilgrims can come here. pic.twitter.com/lWWFq8HCqs
— Narendra Modi (@narendramodi) May 16, 2022
My Nepal visit on Buddha Purnima has been a special one. I would like to thank PM @SherBDeuba, the wonderful people and Government of Nepal for the affection. https://t.co/6gWUidwftR
— Narendra Modi (@narendramodi) May 16, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಡೆಂಗ್ಯೂ ದಿನಾಚರಣೆಯ ಪ್ರಯುಕ್ತ ಕಾಲ್ನಡಿಗೆ ಜಾಥಾ

ಸುದ್ದಿದಿನ,ದಾವಣಗೆರೆ : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕೀಟಜನ್ಯ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಸೋಮವಾರ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಾಗೃತಿ ಜಾಥಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಮಹಾನಗರ ಪಾಲಿಕೆಯ ಮೇಯರ್ ಜಯಮ್ಮ ಗೋಪಿನಾಯ್ಕ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಜಾಥದಲ್ಲಿ “ಡೆಂಗೀ ತಡೆಗಟ್ಟಬಹುದು : ಬನ್ನಿ ಎಲ್ಲರೂ ಕೈ ಜೋಡಿಸೋಣ” ಎಂಬ ಪ್ರಸಕ್ತ ವರ್ಷದ ಘೋಷಣೆಯಂತೆ ಡೆಂಗ್ಯೂ ನಿಯಂತ್ರಣ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ಘೋಷಣೆಗಳನ್ನು ಕೂಗುತ್ತಾ ಜಾಥವು ಚಿಗಟೇರಿ ಜಿಲ್ಲಾ ಆಸ್ಪತ್ರೆಯಿಂದ ರಾಮ್ ಅಂಡ್ ಕೋ ಸರ್ಕಲ್ ಮಾರ್ಗವಾಗಿ ಚರ್ಚ್ ರಸ್ತೆಯ ದಾವಣಗೆರೆ ಒನ್ ಕೆಂದ್ರದವರೆಗೆ ಕಾಲ್ನಡಿಗೆ ಮೂಲಕ ಜರುಗಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗರಾಜ್, ಜಿಲ್ಲಾ ಮಲೇರಿಯಾಧಿಕಾರಿ ಡಾ. ಕೆ. ನಟರಾಜ್, ತಹಶೀಲ್ದಾರ್ ಬಸವನಗೌಡ ಕೊಟ್ಟೂರು ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಗೂ ಕಾಲೇಜು ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಇತರರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪರಿಶಿಷ್ಟ ಪಂಗಡದ ಪಟ್ಟಿಯಿಂದ ‘ನಾಯಕ’ ಪದ ಕೈಬಿಟ್ಟಿರುವುದನ್ನು ಖಂಡಿಸಿ ಚಿಗಟೇರಿಯಲ್ಲಿ ಪ್ರತಿಭಟನೆ

ಸುದ್ದಿದಿನ, ಹರಪನಹಳ್ಳಿ : ಪರಿಶಿಷ್ಟ ಪಂಗಡದ ಪಟ್ಟಿಯಿಂದ “ನಾಯಕ” ಪದ ಕೈಬಿಟ್ಟಿರುವುದನ್ನು ಕೂಡಲೇ ನಾಡ ಕಛೇರಿ (ಅಟಲ್ ಜೀ ಜನಸ್ನೇಹಿ) ಕೇಂದ್ರದ ಅಂತರ್ಜಾಲದಲ್ಲಿ ಸೇರಿಸಿ “ನಾಯಕ” (ಪರಿಶಿಷ್ಟ ಪಂಗಡ) ಪ್ರಮಾಣ ಪತ್ರ ನೀಡಲು ಒತ್ತಾಯಿಸಿ ಇಂದು ಹರಪನಹಳ್ಳಿ ತಾಲ್ಲೂಕಿನ,ಚಿಗಟೇರಿ ನಾಡ ಕಛೇರಿಯ ಉಪ-ತಹಶೀಲ್ದಾರರಿಗೆ ಪ್ರತಿಭಟನೆ ಮೂಲಕ ಸಲ್ಲಿಸುತ್ತಿರುವ ಮನವಿ ಸಲ್ಲಿಸಲಾಯಿತು.
ಕರ್ನಾಟಕದ ಬಳ್ಳಾರಿ, ವಿಜಯನಗರ, ಹಾಗೂ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ನಾಯ್ಕಡ ಬುಡಕಟ್ಟಿಗೆ ಸೇರಿದ ನಾಯಕ ಅಥವಾ ನಾಯ್ಕ ಪಂಗಡದವರಾದ ಮ್ಯಾಸ ನಾಯಕ ಅಥವಾ ಮ್ಯಾಸ ಬೇಡರಿಗೆ 1976 ಮತ್ತು 1991 ನೇ ಸಾಲಿನಿಂದ 2021ನೇ ಸಾಲಿನವರೆಗೂ ಪರಿಶಿಷ್ಟ ಪಂಗಡದ “ನಾಯಕ” ಪ್ರಮಾಣ ಪತ್ರ ಕೋರಿ ಅರ್ಜಿ ಸಲ್ಲಿಸಿದರೆ ಪರಿಶಿಷ್ಟ ಪಂಗಡದ “ನಾಯಕ” ಪ್ರಮಾಣ ಪತ್ರವನ್ನು ನೀಡಲಾಗುತ್ತಿತ್ತು. ಆದರೆ ಈಗ್ಗೆ ಸುಮಾರು 5-6 ತಿಂಗಳಿಂದ ನಾಡ ಕಛೇರಿ (ಅಟಲ್ ಜಿ ಜನಸ್ನೇಹಿ) ಕೇಂದ್ರದ ಅಂತರ್ಜಾಲದಲ್ಲಿ ಪರಿಶಿಷ್ಟ ಪಂಗಡದ “ನಾಯಕ “ ಎಂಬ ಪದವನ್ನು ಕೈ ಬಿಡಲಾಗಿದೆ ಮತ್ತು ನಾಯಕ ಎಂದು ಎಸ್ ಟಿ ಪ್ರಮಾಣ ಪತ್ರವನ್ನು ನೀಡುತ್ತಿಲ್ಲ.
ನಾಯಕ Nayaka ಬದಲಾಗಿ (Nayaka (Including Parivara and Talawara)) (ನಾಯಕ(ಪರಿವಾರ ತಳವಾರ ಸೇರಿದಂತೆ)) ಅಥವಾ ನಾಯಕ(ಪರಿವಾರ) ಅಥವಾ ನಾಯಕ(ತಳವಾರ) ಎಂದು ನೀಡಲಾಗುತ್ತಿದೆ. ಸರ್ಕಾರದ ಈ ಸಂವಿಧಾನ ವಿರೋಧಿ ಕ್ರಮವು ನಿಜವಾದ ನಾಯ್ಕಡ-ನಾಯಕ ಪಂಗಡದವರಿಗೆ ಕಾನೂನಿನ ಹಾನಿಯುಂಟು ಮಾಡಿದೆ. 1976ನೇ ಸಾಲಿನಿಂದಲೂ ನಾಯ್ಕಡ,ನಾಯಕ ಎಂಬುದು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಇರುತ್ತದೆ.
2020 ರಲ್ಲಿ ಭಾರತೀಯ ಸಂಸತ್ ಸೇರ್ಪಡೆ ಮಾಡಿರುವುದು ನಾಯಕ ಜೊತೆಯಲ್ಲಿ ಪರಿವಾರ ಮತ್ತು ತಳವಾರ ಸೇರಿರುತ್ತಾರೆ ಎಂದು ತಿದ್ದುಪಡಿ ಕಾಯ್ದೆ ಮಾಡಿರುತ್ತದೆ. ತಿದ್ದುಪಡಿ ಆದೇಶದ ಪ್ರಕಾರ ಸರ್ಕಾರ ಪರಿವಾರ ಮತ್ತು ತಳವಾರ ಎಂದು ನೀಡಬೇಕು. ನಾಯ್ಕಡ ನಾಯಕ ಪಂಗಡದ ಹೆಸರನ್ನು ಬದಲಾಯಿಸಲು ಸಂವಿಧಾನದಲ್ಲಿ ಅವಕಾಶವಿಲ್ಲ. 1991 ರಲ್ಲಿ ಭಾರತೀಯ ಸಂಸತ್ Naikda, Nayaka ಸಮಾನಾರ್ಥಕ ಪದಗಳಾಗಿ “Naik, Nayak, Beda, Bedar and Valmiki ಎಂಬ ಪದಗಳನ್ನು ಸೇರಿಸಿ ತಿದ್ದುಪಡಿ ಕಾಯ್ದೆಯನ್ನು ಮಾಡಿರುತ್ತದೆ. ಆ ಕಾಯ್ದೆ ಪ್ರಕಾರ ಮೂಲ ನಾಯ್ಕಡ,ನಾಯಕ ಎಂಬುದನ್ನು ಬದಲಾಯಿಸಿರುವುದಿಲ್ಲ.
ಆದರೆ ರಾಜ್ಯ ಸರ್ಕಾರವು ಕಾನೂನನ್ನು ತಪ್ಪಾಗಿ ಅರ್ಥೈಸಿ ತಳವಾರ ಮತ್ತು ಪರಿವಾರ ಜಾತಿಯವರಿಗೆ ನಾಯಕ ಎಂದು ಪ್ರಮಾಣ ಪತ್ರ ಕೊಡುತ್ತಿದ್ದಿರಿ ಇದು ಸಂವಿಧಾನ ಬಾಹಿರವಾಗಿರುತ್ತದೆ. ಮೂಲ ನಾಯಕ ಪಂಗಡದವರಾದ ನಮಗೆ ನಾಯಕ ಪ್ರಮಾಣ ಪತ್ರವನ್ನು ಕೊಡದೇ ಹೊಸ ಜಾತಿಯನ್ನು ಬರೆದುಕೊಳ್ಳುವಂತೆ ಮಾಡಿರುವುದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದರು.
ಕೂಡಲೇ ಸರ್ಕಾರ ನಾಯಕ (ಪರಿಶಿಷ್ಟ ಪಂಗಡ) ಎಂದು ಪ್ರಮಾಣ ಪತ್ರವನ್ನು ನೀಡುವಂತೆ ಕೋರುತ್ತೇವೆ. 1976 ರಿಂದ ಮ್ಯಾಸ ನಾಯಕರ ಬುಡಕಟ್ಟು ಲಕ್ಷಣಗಳನ್ನು ಆಧಾರಿಸಿ ಪರಿಶಿಷ್ಟ ಪಂಗಡಕ್ಕೆ ಸೇರಿದವರೆಂದು ಮ್ಯಾಸ ನಾಯಕರಿಗೆ “ನಾಯಕ” ಎಂದೇ ಎಸ್ ಟಿ ಪ್ರಮಾಣ ಪತ್ರ ಕೊಡಲಾಗುತ್ತಿತ್ತು. ಆದರೆ ನಮಗೆ ನಮ್ಮ ಪಂಗಡದ ಹೆಸರನ್ನೆ ಬದಲಾವಣೆ ಮಾಡಿ ನಾಯಕ (ಪರಿವಾರ ಮತ್ತು ತಳವಾರ) ಎಂದು ನಮೂದಿಸಿ ನಮ್ಮ ಬುಡಕಟ್ಟಿನ ಮೂಲ ಹೆಸರನ್ನೆ ಇಲ್ಲದಂತೆ ಮಾಡಿರುತ್ತೀರಿ ಎಂದು ಆರೋಪಿಸಿದರು.
ನಮಗೂ ಪರಿವಾರ ಮತ್ತು ತಳವಾರ ಜಾತಿಯವರಿಗೂ ಯಾವುದೇ ಸಂಬಂಧವಿರುವುದಿಲ್ಲ. ದುರುದ್ದೇಶದಿಂದ ಈ ರೀತಿ ಕಾನೂನನ್ನು ಮಾಡಿ ಮೂಲ ಬುಡಕಟ್ಟು ಜನರಿಗೆ ಕಾನೂನು ತೊಡಕನ್ನು ಉಂಟು ಮಾಡುತ್ತಿರುವುದಲ್ಲದೆ ನಮ್ಮ ಮೂಲ ಪಂಗಡದ ಹೆಸರನ್ನೆ ನಿರ್ನಾಮ ಮಾಡಲು ಹೊರಟಿರುತ್ತಿರಿ ಎಂದು ಕಿಡಿಕಾರಿದರು.
ಆದ್ದರಿಂದ ಮ್ಯಾಸ ನಾಯಕರಿಗೆ “ನಾಯಕ” ಎಂದೇ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರವನ್ನು ಮಾತ್ರ ನೀಡಲು ಒತ್ತಾಯಪೂರ್ವಕವಾಗಿ ವಿನಂತಿಸುತ್ತಿದ್ದೇವೆ. ನಮ್ಮ ಪರಿಶಿಷ್ಟ ಪಂಗಡದ “ನಾಯಕ” ಪ್ರಮಾಣ ಪತ್ರಗಳಲ್ಲಿ ತಳವಾರ ಮತ್ತು ಪರಿವಾರ ಎಂಬ ಹೆಸರಗಳನ್ನು ನಮೂದಿಸುವಂತಿಲ್ಲ. ಇತ್ತೀಚೇಗೆ ಸಂಸತ್ ನಲ್ಲಿ ಮಾಡಿರುವ The Counstitution (Scheduled Tribes) Order (Amendment) Act,2020ರ ಪ್ರಕಾರ ನಮ್ಮ ಮೂಲ ನಾಯ್ಕಡ,ನಾಯಕ ಪಂಗಡದ ಹೆಸರನ್ನು ಬದಲಾವಣೆ ಮಾಡುವ ಬಗ್ಗೆ ಯಾವುದೇ ಕಾನೂನನ್ನು ಮಾಡಿರುವುದಿಲ್ಲ.
ಆದರೂ ಸಹ ತಪ್ಪು ತಪ್ಪಾಗಿ ಕಾನೂನನ್ನು ಅರ್ಥೈಸಿ ಬುಡಕಟ್ಟು ಜನರ ಅಸ್ತಿತ್ವವನ್ನು ನಿರ್ನಾಮ ಮಾಡುತ್ತಾ ಹಕ್ಕುಗಳನ್ನು ಅಪಹರಿಸಲು ಸಂಚನ್ನು ಮಾಡಲಾಗುತ್ತಿದೆ. ಆದ್ದರಿಂದ ಎಲ್ಲಾ ರೀತಿಯಿಂದ ರಾಜ್ಯ ಸರ್ಕಾರದ ಈ ನಡೆಯನ್ನು ಪರಿವಾರ ಮತ್ತು ತಳವಾರ ಜಾತಿಯವರ ಕುಯಿಕ್ತಿಯಂತೆ ಮಾಡುತ್ತಿರುವುದು ನಮ್ಮ ಮ್ಯಾಸ ನಾಯಕರಿಗೆ ಬಾರಿ ಅನ್ಯಾವಾಗುತ್ತಿದೆ. ಆದ್ದರಿಂದ ಈ ಕೂಡಲೇ ಮೊದಲಿನ ರೀತಿಯಲ್ಲಿ ನಾಯಕ (ಪರಿಶಿಷ್ಟ ಪಂಗಡ) ಎಂದು ಮಾತ್ರ ಪ್ರಮಾಣ ಪತ್ರ ನೀಡಬೇಕು ಎಂದು ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸುತ್ತಿದ್ದೇವೆ ಎಂದರು.
ಬೇಡಿಕೆಗಳು
- ನಾಡ ಕಛೇರಿ ಅಂತರ್ಜಾಲದಲ್ಲಿ ಕೈಬಿಟ್ಟಿರುವ “ನಾಯಕ: ಪದವನ್ನು ಸೇರಿಸಿ ಈ ಕೂಡಲೇ ಮೊದಲಿನ ರೀತಿಯಲ್ಲಿ ನಾಯಕ (ಪರಿಶಿಷ್ಟ ಪಂಗಡ) ಎಂದು ಮಾತ್ರ ಪ್ರಮಾಣ ಪತ್ರ ನೀಡಬೇಕು.
- ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ “ನಾಯ್ಕಡ” “ನಾಯಕ” ಸಮಾನಾರ್ಥಕ ಪದಗಳಾಗಿ “ಮ್ಯಾಸ ನಾಯ್ಕ”, “ಮ್ಯಾಸ ನಾಯಕ”, “ಮ್ಯಾಸ ಬೇಡ”, “ಮ್ಯಾಸ ಬ್ಯಾಡ್ರು”, “ಮ್ಯಾಸ ಬೇಡರ”, “ಮ್ಯಾಸರು” ಎಂಬ ಪದಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಈ ಕೂಡಲೇ ಕ್ರಮ ಕೈಗೊಳ್ಳಬೇಕು.
- “ನಾಯಕ” ಪಂಗಡದ ನಿಜವಾದ ಸಮಾನಾರ್ಥಕ “ಮ್ಯಾಸ ನಾಯಕ” ಪದವನ್ನು ಸಂವಿಧಾನ ಬಾಹಿರವಾಗಿ ಓಬಿಸಿಪಟ್ಟಿಗೆ ಸೇರ್ಪಡೆ ಮಾಡಿರುವುದನ್ನು ಈ ಕೂಡಲೇ ತೆಗೆದುಹಾಕಿ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು.
- 1976 ನೇ ಸಾಲಿನಿಂದಲೂ “ನಾಯಕ” ಎಂಬುದು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಇರುತ್ತದೆ. ಭಾರತೀಯ ಸಂಸತ್ ಸೇರ್ಪಡೆ ಮಾಡಿರುವುದು ನಾಯಕ ಜೊತೆಯಲ್ಲಿ ಪರಿವಾರ ಮತ್ತು ತಳವಾರ ಸೇರಿರುತ್ತಾರೆ ಎಂದು ತಿದ್ದುಪಡಿ ಕಾಯ್ದೆ ಮಾಡಿರುತ್ತದೆ. ತಿದ್ದುಪಡಿ ಆದೇಶದ ಪ್ರಕಾರ ರಾಜ್ಯ ಸರ್ಕಾರ ಪರಿವಾರ ಮತ್ತು ತಳವಾರ ಎಂದು ನೀಡಬೇಕು.
ನಾಯ್ಕಡ ನಾಯಕ ಪಂಗಡದ ಹೆಸರನ್ನು ಬದಲಾಯಿಸಲು ಸಂವಿಧಾನದಲ್ಲಿ ಅವಕಾಶವಿಲ್ಲ. ಆದರೆ ರಾಜ್ಯ ಸರ್ಕಾರವು ಕಾನೂನನ್ನು ತಪ್ಪಾಗಿ ಅರ್ಥೈಸಿ ತಳವಾರ ಮತ್ತು ಪರಿವಾರದವರಿಗೆ ನಾಯಕ ಎಂದು ಪ್ರಮಾಣ ಪತ್ರ ಕೊಡುತ್ತಿದ್ದಿರಿ ಇದು ಸಂವಿಧಾನ ಬಾಹಿರವಾಗಿರುತ್ತದೆ.
ಈ ಸಂದರ್ಭದಲ್ಲಿ ಮ್ಯಾಸ ನಾಯಕ ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿ(ರಿ)ಯ ಸಂಚಾಲಕರುಗಳಾದ ಜಿ ನಾಗರಾಜ, ಗಾಮ ಪಂಚಾಯಿತಿ ಉಪಾಧ್ಯಕ್ಷರು, ಕೋಟೆ ನಾಗರಾಜ, ಎಂ ದ್ವಾರಕೇಶ,ವಕೀಲರಾದ ಬಿ.ಕರಿಯಪ್ಪ, ಡಿ.ನಾಗರಾಜ್ ಚಿಗಟೇರಿ ಗ್ರಾಮದ ಮುಖಂಡರುಗಳಾದ ಎಂ.ರಾಜಪ್ಪ, ಎಂ.ತಿಪ್ಪೇಸ್ವಾಮಿ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಗ್ರಾಮ ಪಂಚಾಯತಿ ಸದಸ್ಯರುಗಳಾದ ಎ.ಬಸವರಾಜ್, ಎಂ.ದುರುಗಪ್ಪ, ಜಿ. ಅಡವಿಪ್ಪ, ಬಿ. ನಾಗರಾಜ, ಎಸ್ ನಾಗೇಂದ್ರಪ್ಪ, ಜಿ.ಬಸಪ್ಪ, ಶೇಖರಪ್ಪ, ಎಂ ಹಾಲಪ್ಪ, ದುರುಗಪ್ಪ,ಮಂಜುನಾಥ್, ಎಸ್ ದಿವಾಕರ, ಎಂ.ಹೇಮಪ್ಪ, ಎಂ.ಮಾರಪ್ಪ, ಸುಖವಪ್ಪ, ಎಂ.ಬಸವರಾಜ, ಬಿ. ಮನ್ನೇಪ್ಪ, ಎ.ದಾಸಪ್ಪ, ಭೀಮಪ್ಪ ನಿವೃತ್ತ ಶಿಕ್ಷಕರು, ಹೆಚ್.ಕಂಪಾಲೆಪ್ಪ, ಎಂ.ಹಳ್ಳೆಪ್ಪ, ಎಂ ಸೂರಪ್ಪ, ಎಸ್.ಬೊಮ್ಮಪ್ಪ, ಎಂ.ಡಿ.ನಾಗರಾಜಪ್ಪ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಕ್ರೀಡೆ6 days ago
ಮಧ್ಯಾಹ್ನದ ಪ್ರಮುಖ ಸುದ್ದಿಗಳು
-
ಕ್ರೀಡೆ7 days ago
ಬೆಳಗಿನ ಪ್ರಮುಖ ಸುದ್ದಿಗಳು
-
ಸಿನಿ ಸುದ್ದಿ6 days ago
ವಿದ್ಯುತ್ ಶಾಕ್ ನಿಂದ ಜೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಸಾವು
-
ದಿನದ ಸುದ್ದಿ6 days ago
ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ : ಆಯೋಗದಿಂದ ವೇಳಾಪಟ್ಟಿ ಪ್ರಕಟ
-
ನಿತ್ಯ ಭವಿಷ್ಯ7 days ago
ಈ ರಾಶಿಯವರ ನಿಂತಿದ್ದ ಮದುವೆ ವಿಜೃಂಭಣೆಯಿಂದ ಚಾಲನೆ! ಈ ರಾಶಿವರ ಪ್ರೇಮ ವಿಚಾರದಲ್ಲಿ ಏರುಪೇರು ಸಂಭವ! ಮಂಗಳವಾರ ರಾಶಿ ಭವಿಷ್ಯ-ಮೇ-10,2022
-
ನಿತ್ಯ ಭವಿಷ್ಯ6 days ago
ಈ ರಾಶಿಯ ನವದಂಪತಿಗಳಿಗೆ ಘರ್ಷಣೆ ಸಾಧ್ಯತೆ! ಈ ರಾಶಿಯ ಉದ್ಯೋಗಿಗಳು ಎದುರಾಳಿಯ ಪಿತೂರಿಗಳು ಎದುರಿಸಬೇಕಾಗುವುದು! ಬುಧವಾರ ರಾಶಿ ಭವಿಷ್ಯ-ಮೇ-11,2022
-
ದಿನದ ಸುದ್ದಿ5 days ago
ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ರೂಪಿಸಿ ; ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೊಡಿ : ಸಿಎಂ ಬೊಮ್ಮಾಯಿ ಗೆ ಸಿದ್ದರಾಮಯ್ಯ ಆಗ್ರಹ
-
ದಿನದ ಸುದ್ದಿ7 days ago
ದಕ್ಷತೆ, ಸಮಯ ಬದ್ಧತೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಮುಖ್ಯಮಂತ್ರಿ ಸೂಚನೆ