ಸಿನಿ ಸುದ್ದಿ
ಶೃತಿ ಹರಿಹರನ್ ದೂರಿನಲ್ಲಿ ಏನಿದೆ ಗೊತ್ತಾ?
ಸುದ್ದಿದಿನ ದಾವಣಗೆರೆ: ಪ್ರಶಾಂತ್ ನಿಂಬರಗಿ, ಈ ನಟಿಗೆ ಮಾಡಿದ್ದಾದರೂ ಏನು? ಶೃತಿ ಹರಿಹರನ್ ಹಿಂದೂ ಧರ್ಮದ ವಿರೋಧಿ ಎಂದಿದ್ದ ಪ್ರಶಾಂತ್ ನಿಂಬರಗಿ ಅವರ ಆರೋಪಕ್ಕೆ ಇದು ಧರ್ಮವನ್ನು ಎತ್ತಿಕಟ್ಟುವ ಕೃತ್ಯ ಎಂದು ನಟಿ ಶೃತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹಾಗೇ ಶೃತಿಯ ಫೇಸ್ ಬುಕ್ ಖಾತೆ ಮೂರು ಕಡೆಗಳಲ್ಲಿ ನಿರ್ವಹಿಸಲ್ಪಡುತ್ತಿದ್ದು, ಐಪಿ ವಿಳಾಸವೂ ತಿಳಿದಿದೆ ಎಂದ ಸಂಬರಗಿ ಅವರ ಹೇಳಿದ್ದ ಹಿನ್ನೆಲೆ ಫೇಸ್ ಬುಕ್ ಮಾಹಿತಿ ಹ್ಯಾಕ್ ಮಾಡುವ ಮೂಲಕ ತನ್ನ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ದೂರಿದ್ದಾರೆ.
ವಿದೇಶಿ ಹಣವನ್ನು ಮಾಧ್ಯಮಗಳಿಗೆ ನೀಡಿ ಮಹಿಳಾ ಪರ ಸುದ್ದಿ ಮಾಡಿಸುತ್ತಿದ್ದಾಳೆ ಎಂದಿದ್ದ ಸಂಬರಗಿ ಅವರಿಗೆ ವಿದೇಶಿ ಹಣ ನನ್ನ ಖಾತೆಯಲ್ಲಿ ಇಲ್ಲವಾಗಿದ್ದು ಸುಳ್ಳು ಆರೋಪದ ಮೂಲಕ ನನ್ನ ಮತ್ತು ಮಾಧ್ಯಮಗಳ ತೇಜೋವಧೆ ಎಂದು ಶೃತಿ ದೂರಿದ್ದಾರೆ.
ನಾನು ಶೃತಿ ಹರಿಹರನ್ ಳನ್ನು ಬಿಡುವುದಿಲ್ಲ ಎಂದು ಧಮ್ಕಿ ಹಾಕಿದ್ದ ಪ್ರಶಾಂತ್ ಸಂಬರಗಿ ಅವರ ‘ನಾನು ಬಿಡುವುದಿಲ್ಲ ಎನ್ನುವುದು: ಕೊಲೆ ಬೆದರಿಕೆಯಾಗಿದೆ ಎಂದು ನಟಿ ಶೃತಿ ಹರಿಹರನ್ ದೂರು ನೀಡಿದ್ದಾರೆ.

ಸಿನಿ ಸುದ್ದಿ
ಫ್ರಾನ್ಸ್ನಲ್ಲಿ ನಾಳೆಯಿಂದ ಪ್ರತಿಷ್ಠಿತ ಕೇನ್ಸ್ ಚಲನಚಿತ್ರೋತ್ಸವ ಆರಂಭ

ಸುದ್ದಿದಿನ ಡೆಸ್ಕ್ : ಪ್ರತಿಷ್ಠಿತ ಕೇನ್ಸ್ ಚಲನಚಿತ್ರೋತ್ಸವ ಫ್ರಾನ್ಸ್ನಲ್ಲಿ ನಾಳೆ ಆರಂಭವಾಗಲಿದೆ. 75ನೇ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್ ನೇತೃತ್ವದ ನಿಯೋಗ ಪಾಲ್ಗೊಳ್ಳಲಿದೆ.
ನಿಯೋಗದಲ್ಲಿ ಎ.ಆರ್. ರೆಹಮಾನ್, ನವಾಜುದ್ದೀನ್ ಸಿದ್ದಿಖಿ ಸೇರಿದಂತೆ ಚಲನಚಿತ್ರರಂಗದ ಹಲವಾರು ಪ್ರಮುಖರು ಇರಲಿದ್ದಾರೆ. ಫ್ರಾನ್ಸ್ನ ಕೇನ್ಸ್ನಲ್ಲಿ ವಾರ್ಷಿಕವಾಗಿ ನಡೆಯಲಿರುವ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಜಗತ್ತಿನಾದ್ಯಂತ ನಿರ್ಮಾಣಗೊಂಡ ಸಾಕ್ಷ್ಯಚಿತ್ರಗಳೂ ಸೇರಿದಂತೆ ಹಲವಾರು ಹೊಸ ಚಲನಚಿತ್ರಗಳ ವಿಮರ್ಶೆ ನಡೆಯಲಿದೆ. 1946ರಲ್ಲಿ ಆರಂಭವಾದ ಈ ಚಿತ್ರೋತ್ಸವ ಪ್ರತಿ ವರ್ಷ ನಡೆಯುತ್ತದೆ.
At 75th #CannesFilmFestival the Indian Pavilion will focus on positioning India as the 'Content Hub of the World' .#IndiaAtCannes @IndiaembFrance @Festival_Cannes pic.twitter.com/gUuYEHrxJQ
— Office of Mr. Anurag Thakur (@Anurag_Office) May 16, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಸಿನಿ ಸುದ್ದಿ
ವಿದ್ಯುತ್ ಶಾಕ್ ನಿಂದ ಜೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಸಾವು

ಸುದ್ದಿದಿನ,ತುಮಕೂರು: ಜ್ಯೂನಿಯರ್ ರವಿಚಂದ್ರನ್, ಕ್ರೇಜಿ ಸ್ಟಾರ್ ಎಂದು ಖ್ಯಾತಿ ಪಡೆದಿದ್ದ ಸಂಗೀತ ಸಂಜೆ ಕಾರ್ಯಕ್ರಮದ ಕಲಾವಿದ ಲಕ್ಷ್ಮೀನಾರಾಯಣ್ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹೆರೂರು ಗ್ರಾಮದಲ್ಲಿ ವಿದ್ಯುತ್ ಶಾಕ್ನಿಂದ ಸಾವನ್ನಪ್ಪಿದ್ದಾರೆ.
ಸಂಪ್ಗೆ ನೀರು ತುಂಬಿಸಲು ಮೋಟರ್ ಆನ್ ಮಾಡಿದ ಸಂದರ್ಭ ವಿದ್ಯುತ್ ಸ್ಪರ್ಶಿಸಿ ಕಲಾವಿದ ಲಕ್ಷ್ಮೀನಾರಾಯಣ್ ಸಾವನ್ನಪ್ಪಿದ್ದಾರೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಮಧ್ಯಾಹ್ನದ ಪ್ರಮುಖ ಸುದ್ದಿಗಳು

ಮಧ್ಯಾಹ್ನದ ಪ್ರಮುಖ ಸುದ್ದಿಗಳು
-
- ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ಹೊರವಲಯದ ಪಾವಗಡ ರಸ್ತೆಯಲ್ಲಿ ಎ.ಹೆಚ್.ಪಿ ಯೊಜನೆಯಡಿ 48.2 ಎಕರೆಯಲ್ಲಿ ವಸತಿ ಸಮಯುಚ್ಚದ ನಿರ್ಮಾಣಕ್ಕೆ ವಸತಿ ಸಚಿವ ಸೊಮಣ್ಣ ಇಂದು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ನಗರ ಪ್ರದೇಶದಲ್ಲಿ ನೀವಶನ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪ್ರತಿ ಮನೆ ಮೇಲೆ ಎರಡು ಅಂತಸ್ಸಿನ ಮನೆಯನ್ನು ನಿರ್ಮಾಣ ಮಾಡಲು ಯೊಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.
- ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಹಲವಾರು ವರ್ಷಗಳಿಂದ ಬಗರ್ ಹುಕುಂ ಜಮೀನಿನಲ್ಲಿ ಕೃಷಿ ಮಾಡಿಕೊಂಡು ಬರುತ್ತಿರುವ ರೈತರಿಗೆ ಶಾಸಕ ಸಿ.ಟಿ ರವಿ ಇಂದು ತಮ್ಮ ಕಚೇರಿಯಲ್ಲಿ ಸಾಗುವಳಿ ಪತ್ರಗಳನ್ನು ವಿತರಣೆ ಮಾಡಿದರು. ಸುಮಾರು ೫೦ ಕ್ಕು ಹೆಚ್ಚು ಭೂ ಮಾಲೀಕರು ಈ ಸಂದರ್ಭದಲ್ಲಿ ಸಾಗುವಳಿ ಪತ್ರಗಳನ್ನು ಪಡೆದುಕೊಂಡರು.
- ಪುರಾಣದ ಪುಣ್ಯಕಥೆಗಳು, ಪವಾಡಗಳು, ಶಿವನ ಆರಾಧನೆಯನ್ನು ಬಾಲ್ಯದಿಂದಲೂ ಮೈಗೂಡಿಸಿಕೊಂಡು ಬೆಳೆದವರು ಮಲ್ಲಮ್ಮನವರು. ಮಹಾಸಾಧ್ವಿ ಶಿವಶರಣೆ ಮಲ್ಲಮ್ಮ ನವರು ವಚನಗಳನ್ನು ಬರೆಯಲಿಲ್ಲ ಅಥವಾ ಹೇಳಲಿಲ್ಲ ಮಲ್ಲಮ್ಮನವರ ಜೀವನವೇ ಒಂದು ಅಪೂರ್ವವಾದ ವಚನವಾಗಿದೆ ಎಂದು ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎನ್.ಉದಯ ಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿಂದು ಹೇಮರೆಡ್ಡಿ ಮಲ್ಲಮ್ಮ ರವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
- ಕಳೆದ 25ವರ್ಷಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಅಸ್ಸಾಂ ಪೊಲೀಸರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಗುವಾಹತಿಯಲ್ಲಿಂದು ರಾಷ್ಟ್ರಪತಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಅಸ್ಸಾಂ ಈ ಗೌರವವನ್ನು ಪಡೆದ ದೇಶದ 10ನೇ ರಾಜ್ಯವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ಅಸ್ಸಾಂನಲ್ಲಿ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆಯನ್ನು 1990ರಲ್ಲಿ ಜಾರಿಗೊಳಿಸಲಾಗಿತ್ತು. ಇದನ್ನು 7 ಬಾರಿ ವಿಸ್ತರಿಸಲಾಗಿತ್ತು. 8ವರ್ಷಗಳ ಪ್ರಧಾನಮಂತ್ರಿಯವರ ಆಡಳಿತದ ನಂತರ ರಾಜ್ಯದ 23 ಜಿಲ್ಲೆಗಳು ಕಾಯ್ದೆ ಮುಕ್ತವಾಗಿವೆ.
- ಬಂಗಾಳ ಕೊಲ್ಲಿಯಲ್ಲಿ ವಾಯುಬಾರ ಕುಸಿತದಿಂದ ತೀವ್ರಗೊಂಡಿರುವ ’ಅಸಾನಿ’ ಚಂಡಮಾರುತ ಎರಡು ದಿನಗಳಲ್ಲಿ ಪಶ್ಚಿಮ ಮಧ್ಯ ಭಾಗದಿಂದ ಪಶ್ಚಿಮ ವಾಯವ್ಯ ದಿಕ್ಕಿನತ್ತ ಚಲಿಸುವ ಸಾಧ್ಯತೆಯಿದ್ದು, ದುರ್ಬಲಗೊಳ್ಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಮಧ್ಯೆ, ಉತ್ತರ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಚಂಡಮಾರುತದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.
- ಕೋವಿಡ್-19 ವಿರುದ್ಧದ ಹೋರಾಟದ ಭಾಗವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ193 ಕೋಟಿ 53ಲಕ್ಷ ಕೋವಿಡ್ ಲಸಿಕಾ ಡೋಸ್ಗಳನ್ನು ಒದಗಿಸಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 18 ಕೋಟಿ 15ಲಕ್ಷ ಬಳಕೆಯಾಗದ ಲಸಿಕಾ ಡೋಸ್ಗಳು ಬಾಕಿ ಉಳಿದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
- ಅಫ್ಘಾನಿಸ್ತಾನದಲ್ಲಿ ಹತ್ಯೆಗೀಡಾಗಿದ್ದ ದಾನಿಶ್ ಸಿದ್ದಿಕಿ ಸೇರಿದಂತೆ ನಾಲ್ವರು ಭಾರತೀಯ ಛಾಯಾಗ್ರಾಹಕರು 2022ನೇ ಸಾಲಿನ ‘ಪುಲಿಟ್ಜರ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅದ್ನಾನ್ ಅಬಿದಿ, ಸನಾ ಇರ್ಷಾದ್ ಮಟ್ಟೂ ಹಾಗೂ ಅಮಿತ್ ದವೆ ಅವರು ‘ಪುಲಿಟ್ಜರ್’ ಪ್ರಶಸ್ತಿಗೆ ಭಾಜನರಾದ ಇತರ ಭಾರತೀಯ ಛಾಯಾಗ್ರಾಹಕರು. ‘ಫೀಚರ್ ಫೋಟೊಗ್ರಫಿ’ ವಿಭಾಗದಲ್ಲಿ ಇವರಿಗೆ ಪ್ರಶಸ್ತಿ ಲಭಿಸಿದೆ.
- ದೆಹಲಿ ವಿಭಾಗದ ಉತ್ತರ ರೈಲ್ವೆಯು, ತಾಯಂದಿರು ತಮ್ಮ ಶಿಶುಗಳೊಂದಿಗೆ ಆರಾಮವಾಗಿ ಮಲಗಲು ಅನುಕೂಲವಾಗುವಂತೆ ಆಯ್ದ ರೈಲುಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ’ಬೇಬಿ ಬರ್ತ್’ ಅನ್ನು ಪರಿಚಯಿಸಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
- ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತೀವ್ರಗೊಂಡಿರುವ ‘ಅಸಾನಿ’ ಚಂಡಮಾರುತ ಮುಂದಿನ ೪೮ ಗಂಟೆಗಳಲ್ಲಿ ಪಶ್ಚಿಮ ಮಧ್ಯ ಭಾಗದಿಂದ ಪಶ್ಚಿಮ ವಾಯವ್ಯ ದಿಕ್ಕಿನತ್ತ ಚಲಿಸುವ ಸಾಧ್ಯತೆಯಿದ್ದು, ದುರ್ಬಲಗೊಳ್ಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಇತರೆ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- ಜಕಾರ್ತದಲ್ಲಿ ನಡೆಯಲಿರುವ ಏಷ್ಯಾ ಕಪ್ ಹಾಕಿ ಟೂರ್ನಿಯಲ್ಲಿ ಹಿರಿಯ ಡ್ರ್ಯಾಗ್ ಫ್ಲಿಕ್ಕರ್ ರೂಪಿಂದರ್ ಪಾಲ್ ಸಿಂಗ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ವಿಶ್ವಕಪ್ ಅರ್ಹತಾ ಟೂರ್ನಿಗಳ ಪೈಕಿ ಒಂದಾಗಿರುವ ಏಷ್ಯಾ ಕಪ್ ಟೂರ್ನಿ ಮೇ 23ರಿಂದ ಜೂನ್ 1ರವರೆಗೆ ನಡೆಯಲಿದೆ. ಹಲವು ದಿನಗಳ ನಂತರ ಕರ್ನಾಟಕದ ಹಿರಿಯ ಆಟಗಾರ ಎಸ್.ವಿ. ಸುನಿಲ್ ತಂಡದಲ್ಲಿ ಮತ್ತೆ ಸ್ಥಾನ ಪಡೆದಿದ್ದಾರೆ.
- ಮುಂಬೈನಲ್ಲಿಂದು ರಾತ್ರಿ 7.30ಕ್ಕೆ ಆರಂಭವಾಗಲಿರುವ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಸಿನಿ ಸುದ್ದಿ7 days ago
ವಿದ್ಯುತ್ ಶಾಕ್ ನಿಂದ ಜೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಸಾವು
-
ದಿನದ ಸುದ್ದಿ7 days ago
ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ : ಆಯೋಗದಿಂದ ವೇಳಾಪಟ್ಟಿ ಪ್ರಕಟ
-
ನಿತ್ಯ ಭವಿಷ್ಯ7 days ago
ಈ ರಾಶಿಯ ನವದಂಪತಿಗಳಿಗೆ ಘರ್ಷಣೆ ಸಾಧ್ಯತೆ! ಈ ರಾಶಿಯ ಉದ್ಯೋಗಿಗಳು ಎದುರಾಳಿಯ ಪಿತೂರಿಗಳು ಎದುರಿಸಬೇಕಾಗುವುದು! ಬುಧವಾರ ರಾಶಿ ಭವಿಷ್ಯ-ಮೇ-11,2022
-
ದಿನದ ಸುದ್ದಿ6 days ago
ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ರೂಪಿಸಿ ; ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೊಡಿ : ಸಿಎಂ ಬೊಮ್ಮಾಯಿ ಗೆ ಸಿದ್ದರಾಮಯ್ಯ ಆಗ್ರಹ
-
ದಿನದ ಸುದ್ದಿ6 days ago
ದಾವಣಗೆರೆ | ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ-ಮನೆ ಭೇಟಿ
-
ದಿನದ ಸುದ್ದಿ6 days ago
ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಭಾರತಕ್ಕೆ ಪಲಾಯನ ಕುರಿತ ವರದಿ ನಿರಾಧಾರ : ಕೊಲಂಬೊದ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ
-
ದಿನದ ಸುದ್ದಿ6 days ago
15 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ; ಆದೇಶ ಪಾಲಿಸಲು ಕ್ರಮ : ಸಿಎಂ ಬೊಮ್ಮಾಯಿ
-
ದಿನದ ಸುದ್ದಿ7 days ago
ಅತ್ಯುನ್ನತ ಸಾಧನೆ ಮೆರೆದ ಸೇನಾಪಡೆ ಅಧಿಕಾರಿಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಶೌರ್ಯ ಪದಕ ಪ್ರದಾನ