ರಾಜಕೀಯ
ಬಾದಾಮಿಯಲ್ಲಿ ಸ್ಪರ್ಧಿಸಿ, ಅಲ್ಪಮತದಲ್ಲಿ ಗೆದ್ದು ಸಿದ್ದರಾಮಯ್ಯ ಮರ್ಯಾದೆ ಉಳಿಸಿಕೊಂಡಿದ್ದಾರೆ : ಬಿ.ಎಸ್.ವೈ ವ್ಯಂಗ್ಯ
ಸುದ್ದಿದಿನ ಡೆಸ್ಕ್ : ಮದ್ದೂರು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರವರಿಂದ ಬಾರಿ ಬಹಿರಂಗ ಪ್ರಚಾರಕ್ಕೆ ಚಾಲನೆ ನೀಡಿದರು. ಪಟ್ಟಣದ ನಗರಕೆರೆ ವೃತ್ತದ ಬಳಿ ಬಿಜೆಪಿ ಭಾರಿ ಬಹಿರಂಗ ಸಭೆಯನ್ನುದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಾತನಾಡಿದರು.
ರಾಜ್ಯದಲ್ಲಿ ಸಮ್ಮಿಶ್ರ ಸರಕಾರ
ಅಧಿಕಾರಕ್ಕೆ ಬಂದ ದಿನದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳೇ ಕುಂಠಿತಗೊಳ್ಳುತ್ತಿವೆ ರೈತರ ಆತ್ಮಹತ್ಯೆಗಳು ಹೆಚ್ಚಳವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆರೋಪಿಸಿದರು ಜಿಲ್ಲೆಯ ಜನ ಬದಲಾವಣೆ ಬಯಸುತ್ತಿದ್ದು ನರೇಂದ್ರ ಮೋದಿಯವರ ನಾಲ್ಕುವರೆ ವರ್ಷಗಳ ಉತ್ತಮ ಆಡಳಿತವನ್ನು ಕಂಡು ಬಿಜೆಪಿ ಪಕ್ಷವನ್ನು ಜಿಲ್ಲೆಯ ಜನ ಬೆಂಬಲಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಭಾವ ಗೊಳಿಸಿರುವ ಶನಿ ರಾಹು ಕೇತು ಒಂದಾಗಿದ್ದು ಬಾದಾಮಿಯಲ್ಲಿ ಸ್ಪರ್ಧಿಸಿ ಸ್ವಲ್ಪ ಅಂತರದಿಂದ ಗೆದ್ದು ತಮ್ಮ ಮರ್ಯಾದೆ ಉಳಿಸಿಕೊಂಡಿದ್ದಾರೆಂದು ದೂರಿದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಎಲ್ಲ ಮುಖಂಡರು ಪಕ್ಷದ ಅಭ್ಯರ್ಥಿ ಶಿವರಾಮೇಗೌಡ ಪರ ಮತಯಾಚನೆ ಮಾಡುತ್ತಿಲ್ಲವೆಂದು ತಿಳಿಸಿದರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕಾರ ವಹಿಸಿಕೊಂಡು ಆರು ತಿಂಗಳು ಕಳೆದರೂ ರೈತರ ಸಾಲ ಮನ್ನಾ ಮಾಡದೆ ಹಾಗೂ ಅಭಿವೃದ್ಧಿಯ ಕೈಗೊಳ್ಳದೇ ಜನರನ್ನು ವಂಚಿಸುತ್ತಿದ್ದಾರೆಂದು ಆರೋಪಿಸಿದರು.
ಚುನಾವಣೆಯನ್ನು ಹಣಬಲದಿಂದ ಜಾತಿ ವಿಷ ಬೀಜ ಬಿತ್ತುವ ಮೂಲಕ ಚುನಾವಣೆ ಗೆಲ್ಲಬಹುದೆಂದು ಹಗಲು ಕನಸು ಕಾಣುತ್ತಿರುವ ಸಮ್ಮಿಶ್ರ ಸರ್ಕಾರದ ಮುಖಂಡರಿಗೆ ಜಿಲ್ಲೆಯ ಜನರೇ ತಕ್ಕ ಬುದ್ಧಿ ಕಲಿಸಲಿದ್ದಾರೆ ಎಂದು ತಿಳಿಸಿದರು ತಮ್ಮ ಅಧಿಕಾರದ ಅವಧಿಯಲ್ಲಿ ಯಾವುದೇ ಜಾತಿ ಭೇದ ಮರೆತು ಎಲ್ಲಾ ಜನಾಂಗದವರಿಗೂ ಸಾವಿರಾರು ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಮೈಷುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನ ಹಜ್ ಭವನ ಭಾಗ್ಯಲಕ್ಷ್ಮಿ ಯೋಜನೆ ವಾಲ್ಮೀಕಿ ಭವನ ಸೇರಿದಂತೆ ಜಿಲ್ಲೆಗೆ ಸಾವಿರಾರು ಕೋಟಿ ರು ಅನುದಾನ ಬಿಡುಗಡೆಗೊಳಿಸಿರುವುದಾಗಿ ತಿಳಿಸಿದರು ಇತ್ತಿಚೆಗೆ ನಡೆದ ಸರ್ವೆಯಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲ್ಲಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
ಆದ್ದರಿಂದ ಈ ಬಾರಿ ಡಾ, ಸಿದ್ದರಾಮಯ್ಯ ರವರನ್ನು ಅತೀ ಹೆಚ್ಚಿನ ಮತಗಳನ್ನು ಕೊಟ್ಟು ಲೋಕಸಭೆಗೆ ಕಳುಹಿಸಿ ಕೊಡುವ ಮೂಲಕ ನರೇಂದ್ರ ಮೋದಿ ಯವರ ಕೈ ಬಲ ಪಡಿಸ ಬೇಕೆಂದು ವಿನಂತಿಸಿ ಕೊಂಡರು.
ಸಭೆಯಲ್ಲಿ ಡಿ.ಎಸ್. ವೀರಯ್ಯ ,ಸಿ.ಟಿ.ರವಿ, ಅಶ್ವಥ್ ನಾರಾಯಣ,ಆರ್.ಅಶೋಕ್, ರಾಜ್ಯ ಎಸ್.ಸಿ.ಮೋರ್ಚಾ ಸಂ.ಕಾ.ಆತ್ಮಾನಂದ , ಕೆಂಪ ಬೋರಯ್ಯ, ರವಿಕುಮಾರ್ , ಅರವಿಂದ್, ಹಾಗೂ ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾ|ವಾಟ್ಸಾಪ್|9986715401

ದಿನದ ಸುದ್ದಿ
ದಾವಣಗೆರೆ | ಮಾಜಿ ಸಚಿವ ಎಚ್ ಎಂ ರೇವಣ್ಣ ನೇತೃತ್ವದಲ್ಲಿ ಕುರುಬ ಸಮಾಜದ ಪೂರ್ವಭಾವಿ ಸಭೆ

ಸುದ್ದಿದಿನ,ದಾವಣಗೆರೆ : ಕುರುಬ ಸಮಾಜದ ಇತಿಹಾಸ ಕುರಿತು ಒಂದು ದಿನದ ಚಿಂತನ ಮಂಥನ ಕಾರ್ಯಾಗಾರವನ್ನು ಹಮ್ಮಿಕೊಳ್ಳಲು ಪೂರ್ವಭಾವಿ ಸಭೆಯನ್ನು ಮಾಜಿ ಸಚಿವ ಎಚ್ ಎಂ ರೇವಣ್ಣ ನೇತೃತ್ವದಲ್ಲಿ ನಡೆಯಿತು.
ದಾವಣಗೆರೆ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಇಂದು ನಡೆದ ಕುರುಬ ಸಮುದಾಯದ ಮುಖಂಡರ ಸಭೆ ನಡೆಸಿ ಮಾತನಾಡಿದ ಮಾಜಿ ಸಚಿವ ಹೆಚ್ ಎಂ ರೇವಣ್ಣ, ಕುರುಬ ಸಮಾಜದ ಇತಿಹಾಸ, ಸಂಪ್ರದಾಯ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಸಮಾಜದವರು ನಡೆದುಕೊಂಡು ಬಂದ ದಾರಿ ಕುರಿತ ಕುರುಬರ ಸಾಂಸ್ಕೃತಿಕ ಗ್ರಂಥಗಳನ್ನು ಕುರುಬರ ಸಾಂಸ್ಕೃತಿಕ ಪರಿಷತ್ ಬೆಂಗಳೂರು ಮತ್ತು ದಾವಣಗೆರೆ ಕುರುಬ ಸಮಾಜದ ಎಲ್ಲಾ ಸಂಘಟನೆಗಳು ಸಂಯುಕ್ತಾಶ್ರಯದಲ್ಲಿ ದಾವಣಗೆರೆ ನಗರದಲ್ಲಿ ಬಿಡುಗಡೆ ಕಾರ್ಯಕ್ರಮವನ್ನು ಜೂನ್ 10 ಮತ್ತು 11 ರಂದು ಅಥವಾ 24 ಅಥವಾ 25 ರಂದು ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಈ ಪುಸ್ತಕ ಪ್ರತಿಯೊಬ್ಬ ಕುರುಬ ಸಮಾಜದವರಿಗೆ ತಲುಪುವ ಅವಶ್ಯಕತೆ ಇದೆ. ಈ ಪುಸ್ತಕ ಹಲವು ಸಂಶೋಧಕರ ಶ್ರಮದಿಂದ ಹೊರ ಬಂದಿದೆ. ಇದರಲ್ಲಿ ಸಮಾಜದ ಇತಿಹಾಸ ಪುರುಷರ ಹಾಗೂ ಸಮಾಜದ ಮುಖಂಡರು ಕುರಿತು ಕೂಡ ಮಾಹಿತಿ ಇದೆ. ದಾವಣಗೆರೆ ಜಿಲ್ಲೆಯಲ್ಲಿ ನಡೆದ ಕುರುಬ ಸಮಾಜದ ಐತಿಹಾಸಿಕ ಸಭೆಗಳಿಂದ ರಾಜ್ಯ ಮಟ್ಟದಲ್ಲಿ ಸಮಾಜದ ಮಠ ಆಗಿದೆ, ಸಮಾಜದ ಮುಖಂಡರಾದ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರೂ ಹೀಗೆ ದಾವಣಗೆರೆಯಲ್ಲಿ ನಡೆದ ಹಲವು ಕಾರ್ಯಕ್ರಮಗಳು ರಾಜ್ಯದ ಇತಿಹಾಸ ಪುಟ ಸೇರಿವೆ ಎಂದು ನೆನಪಿಸಿದ ಮಾಜಿ ಸಚಿವ ರೇವಣ್ಣ ಈ ಕಾರ್ಯಕ್ರಮದ ಜೊತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬಾರದು ಎಂಬ ಸುಪ್ರೀಂ ಕೋರ್ಟ್ ಆದೇಶ ಕಳವಳಕಾರಿಯಾಗಿದೆ.
ಈ ಮೀಸಲಾತಿ ಕುರಿತು ಅಂದು ಮಧ್ಯಾಹ್ನ 2 ಗಂಟೆಯಿಂದ ವಿಚಾರ ಸಂಕೀರ್ಣ ಏರ್ಪಡಿಸಲಾಗುವುದು ಈ ಕಾರ್ಯಾಗಾರದಲ್ಲಿ ನಾಡಿನ ವಿಚಾರವಾದಿಗಳು ಭಾಗವಹಿಸುವರು ಈ ಕಾರ್ಯಕ್ರಮದಲ್ಲಿ ವಿದ್ಯಾವಂತರು ವಿಚಾರವಂತವರು ಭಾಗವಹಿಸ ಬೇಕೆಂದರು. ಇದೇ ಸಂಧರ್ಭದಲ್ಲಿ ಮಾತನಾಡಿದ ಹರಿಹರ ಶಾಸಕ ಎಸ್ ರಾಮಪ್ಪ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಮಾಜದ ಯುವಕರು ಮತ್ತು ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಮತ್ತು ಕಾರ್ಯಕ್ರಮದ ಯಶಸ್ವಿಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಮಾಜದ ಹಿರಿಯ ಮುಖಂಡ ಬಿ ಎಂ ಸತೀಶ್, ಸಮಾಜದಲ್ಲಿ ಯಾವುದೇ ಶುಭ ಕಾರ್ಯವಾದರೆ ಕುರುಬರಿಂದ ಉದ್ಘಾಟನೆ ಮಾಡಿಸುತ್ತಾರೆ, ಕಾರಣ ಸಮಾಜ ನಡೆದುಕೊಂಡು ಬಂದ ದಾರಿ ಇಂತಹ ವಿಷಯಗಳ ಕುರಿತು ತಿಳಿದುಕೊಳ್ಳುವ ಅವಶ್ಯಕತೆ ಇವತ್ತಿನ ಯುವಕರಿಗೆ ಇದೆ ಎಂದ ಅವರು, ಸ್ಥಳೀಯ ಸಾಹಿತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಮತ್ತು ಪ್ರಸ್ತುತ ಎದುರಾಗಿರುವ ಮೀಸಲಾತಿ ಸಮಸ್ಯೆ ಕುರಿತು ಚರ್ಚೆ ಮಾಡುವ ಅವಶ್ಯಕತೆ ಇದೆ ಎಂದ ಅವರು ಸಮಾಜದ ಏಳಿಗೆಗೆ ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮಗಳನ್ನು ವಿವರಿಸಿದರು.
ಇದೆ ವೇಳೆ ಸಭೆಯಲ್ಲಿ ನಡೆಯಲಿರುವ ವಿಚಾರ ಸಂಕೀರ್ಣ ಕಾರ್ಯಕ್ರಮಕ್ಕೆ ಸಮಿತಿ ರಚನೆ ಮಾಡಲಾಯಿತು. ಸಮಿತಿಯ ಗೌರವಧ್ಯಕ್ಷರಾಗಿ ಶಾಸಕ ಎಸ್ ರಾಮಪ್ಪ ಅವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸಮಾಜದ ಹಿರಿಯ ಮುಖಂಡ ಬಿ ಎಂ ಸತೀಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಸ್ ಎಸ್ ಗಿರೀಶ್. ಕಾರ್ಯಾಧ್ಯಕ್ಷರಾಗಿ ಪ್ರೊ. ಯಲ್ಲಪ್ಪ. ಹದಡಿ ಜೆ ಸಿ ನಿಂಗಪ್ಪ. ಉಪಾಧ್ಯಕ್ಷರಾಗಿ ದೇವೇಂದ್ರಪ್ಪ ಕುಣೆಬೆಳಕೆರೆ, ನಂದಿಗಾವಿ ಶ್ರೀನಿವಾಸ್ , ಬಳ್ಳಾರಿ ಷಣ್ಮುಖಪ್ಪ. ಮಾಜಿ ಮೆಯರ್ ಗೋಣೆಪ್ಪ, ರಾಜನಹಳ್ಳಿ ಶಿವಕುಮಾರ್. ಹಾಲೇಕಲ್ ಅರವಿಂದ, ಇಟ್ಟಿಗುಡಿ ಮಂಜುನಾಥ್, ಲಿಂಗರಾಜ್.
ಖಜಾಂಚಿಯಾಗಿ ಡಿ ಡಿ ಹಾಲೇಶಪ್ಪ, ಸಂಘಟನಾ ಕಾರ್ಯದರ್ಶಿಯಾಗಿ ಬಿ ಬಿ ಮಲ್ಲೇಶಪ್ಪ. ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಸನ್ನ ಬೆಳೆಕೆರೆ. ವಿನಯ್ ಜೋಗಪ್ಪನವರ್ ಆಯ್ಕೆಯಾಗಿದ್ದು ಇನ್ನೂ ಉಳಿದ ಪದಾಧಿಕಾರಿಗಳನ್ನು ಮುಂದಿನ ಸಭೆಯಲ್ಲಿ ಸಮಾಜದ ಎಲ್ಲಾ ಸಂಘಟನೆಗಳಿಂದ ಆಯ್ಕೆ ಮಾಡಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪ್ರದೇಶ ಕುರುಬ ಸಂಘದ ನಿರ್ದೇಶಕರಾದ ಪಿ ರಾಜಕುಮಾರ್, ರೇವಣ್ಣ.
ಜಿಲ್ಲಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕುಂಬಳೂರು ವಿರೂಪಾಕ್ಷಪ್ಪ, ಅಡಾಣಿ ಸಿದ್ದಪ್ಪ, ಪಿ ಗಂಗಾಧರ್. ವಕೀಲರಾದ ವಸಂತಕುಮಾರ್, ಹದಡಿ ಮಾಹಾಂತೇಶ್, ಹಾಗೂ ಕನಕ ನೌಕರರ ಸಂಘದ ಪದಾಧಿಕಾರಿಗಳಾದ ಗಣೇಶ್ ದಳವಾಯಿ, ಎಸ್ ಎಚ್ ಗುರುಮೂರ್ತಿ. ರಂಗನಾಥ್, ಬೀರೇಂದ್ರ. ಕುಬೇಂದ್ರ. ಸೇರಿದಂತೆ ಸಮಾಜದ ಇತರೆ ಮುಖಂಡರು ಭಾಗವಹಿಸಿದ್ದರು. ಸಭೆ ಆರಂಭದಲ್ಲಿ ಇತ್ತೀಚಿಗೆ ನಿಧನ ಹೊಂದಿದ ದಿವಂಗತ ಚನ್ನಯ್ಯ ಒಡೆಯರ್ ಪತ್ನಿ ಹಾಲಮ್ಮನವರಿಗೆ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ನಾಳೆ ಭಾರತದ ಆಯೋಗಗಳ ಮುಖ್ಯಸ್ಥರೊಂದಿಗೆ ಮಾತುಕತೆ

ಸುದ್ದಿದಿನ ಡೆಸ್ಕ್ : ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಅವರು ನಾಳೆ ಭಾರತದ ಆಯೋಗಗಳ ಮುಖ್ಯಸ್ಥರ ಗುಂಪಿನೊಂದಿಗೆ ಮಾತುಕತೆ ನಡೆಸಲಿದ್ದಾರೆ.
ನವದೆಹಲಿಯಲ್ಲಿ ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆಯಲಿರುವ ಈ ಸಂವಾದದಲ್ಲಿ 14ರಾಷ್ಟ್ರಗಳ ಆಯೋಗಗಳ ಮುಖ್ಯಸ್ಥರು ಪಾಲ್ಗೊಳ್ಳಲಿದ್ದಾರೆ. ಈ ಸಂವಾದವು ನಡ್ಡಾ ಅವರು ಚಾಲನೆ ನೀಡಿರುವ ಬಿಜೆಪಿ ಕುತಿರು ಅರಿಯಿರಿ ಉಪಕ್ರಮ ಕಾರ್ಯಕ್ರಮದ ಸರಣಿಗಳ ಒಂದು ಭಾಗವಾಗಿದೆ.
ವಿದೇಶಗಳಲ್ಲಿರುವ ಪ್ರೇಕ್ಷಕರನ್ನು ಉದ್ದೇಶಿಸಲು ಮತ್ತು ವಿಶ್ವದ 13 ದೇಶಗಳ ಆಯೋಗಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸುವ ಉದ್ದೇಶದಿಂದ ಈ ಉಪಕ್ರಮಕ್ಕೆ ಚಾಲನೆ ನೀಡಲಾಗಿತ್ತು.
ಸುದ್ದಿದಿನ.ಕಾಂ | ವಾಟ್ಸಾಪ್ | 9980346243

ದಿನದ ಸುದ್ದಿ
ಮಧ್ಯಾಹ್ನದ ಪ್ರಮುಖ ಸುದ್ದಿಗಳು

ಮಧ್ಯಾಹ್ನದ ಪ್ರಮುಖ ಸುದ್ದಿಗಳು
- ಉದ್ಘಾಟನೆಯಾದ ಕೇವಲ ಎರಡು ತಿಂಗಳಲ್ಲಿಯೇ ಕುಸಿದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ಚಾವಣಿ ಕುಸಿತಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ. ಕ್ರೀಡಾಂಗಣದ ರಚನೆಯಲ್ಲಿ ದೋಷವಿದೆಯೇ ಅಥವಾ ಬೇರೆ ಕಾರಣದಿಂದ ಕುಸಿತವಾಗಿಯೇ ಎಂಬುದನ್ನು ನಾವು ಇನ್ನೂ ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
- ಬೆಂಗಳೂರಿನ ನೆಲಮಂಗಲ ಸಮೀಪ ಇಂದು ಜೆಡಿಎಸ್ ಜನತಾ ಜಲಧಾರೆ ಸಮಾರೋಪ ಸಮಾವೇಶ ನಡೆಯಲಿದೆ. ಸಮಾವೇಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.
- ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪೂರ್ವಭಾವಿಯಾಗಿ ಬೆಂಗಳೂರಿನ ದೂರದರ್ಶನ ಕೇಂದ್ರದ ಆವರಣದಲ್ಲಿ ಇಂದು ದೂರದರ್ಶನ ಹಾಗೂ ಆಕಾಶವಾಣಿಯ ಸಿಬ್ಬಂದಿ ವರ್ಗಕ್ಕೆ ವಿಶೇಷ ಯೋಗ ಶಿಬಿರ ಆಯೋಜಿಸಲಾಗಿತ್ತು. ಯೋಗ ಗುರು ರಾಜೇಶ್ ಆಚಾರ್ಯ ಅವರ ನೇತೃತ್ವದಲ್ಲಿ ಯೋಗಾಭ್ಯಾಸ ನಡೆಯಿತು. ಚಿತ್ರನಟರಾದ ರಾಧಿಕಾ ನಾರಾಯಣ, ಸೂರಜ್ ಗೌಡ ಪಾಲ್ಗೊಂಡಿದ್ದರು.
- ತುರ್ತು ಕಾಮಗಾರಿ ಹಾಗೂ ಪಂಪ್ಹೌಸ್ನಲ್ಲಿ ದುರಸ್ಥಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ನಾಳೆ ನೀರಿನ ಪೂರೈಕೆಯ ವ್ಯತ್ಯಯ ಉಂಟಾಗಲಿದೆ ಎಂದು ಜಲಮಂಡಳಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
- ಪ್ರಸ್ತುತ ಕೈಗೊಂಡಿರುವ ಟ್ರಾನ್ಸ್ಫಾರ್ಮರ್ ನಿರ್ವಹಣಾ ಅಭಿಯಾನದ ಜೊತೆಗೆ ಬೆಂಗಳೂರು ನಗರ ಜಿಲ್ಲೆಯಲ್ಲಿ 2 ಸಾವಿರದ 500ಕ್ಕೂ ಹೆಚ್ಚು ವಿನೂತನ ವಿನ್ಯಾಸದ ಟ್ರಾನ್ಸ್ಫಾರ್ಮರ್ಗಳನ್ನು ಅಳವಡಿಸಲು ತಯಾರಿ ನಡೆಸಲಾಗಿದೆ. ಅತಿ ಶೀರ್ಘದಲ್ಲೇ ಈ ಕಾರ್ಯಾಚರಣೆ ಕೈಗೊತ್ತಿಕೊಳ್ಳಲಾಗುವುದು ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
- ಇತಿಹಾಸ ಪ್ರಸಿದ್ದ ಚಾಮರಾಜನಗರದ ಚಾಮರಾಜೇಶ್ವರ ನೂತನ ರಥ ಇಂದು ಚಾಮರಾಜನಗರಕ್ಕೆ ಬರಲಿದೆ. ಸುಮಾರು 1ಕೋಟಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಸ ರಥವನು ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಿರ್ಮಾಣ ಮಾಡಲಾಗಿದೆ. ಇಂದು ಚಾಮರಾಜನಗರದ ಆದಿಶಕ್ತಿ ದೇವಸ್ಥಾನದ ಬಳಿ ವಿವಿಧ ಕಲಾತಂಡಗಳೊಡನೆ ರಥ ಮೆರವಣಿಗೆ ಮೂಲಕ ಹೊರಡಲಿದೆ.
- ದೇಶದಲ್ಲಿ ಇದುವರೆಗೆ ಸುಮಾರು 190 ಕೋಟಿ 97 ಲಕ್ಷಕ್ಕೂ ಅಧಿಕ ಕೋವಿಡ್ ಲಸಿಕೆ ಡೋಸ್ಗಳನ್ನು ನೀಡಲಾಗಿದೆ ಹಾಗೂ ಒಂದೇ ದಿನದಲ್ಲಿ 12ಲಕ್ಷದ 15ಸಾವಿರ ಲಸಿಕೆ ಡೋಸ್ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.
- ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಾಚರಣೆ ಈಗಿನಿಂದಲೇ ಆರಂಭವಾಗಿದೆ. ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
- ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ತುಸು ಕಡಿಮೆಯಾಗಿದೆ. ಒಂದೇ ದಿನದಲ್ಲಿ 3 ಸಾವಿರದ 841ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಒಂದೇ ದಿನದಲ್ಲಿ ಮೂರು ಸಾವಿರದ 295ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
- ಬೆಂಗಳೂರಿನ ನೆಲಮಂಗಲ ಸಮೀಪ ಇಂದು ಜೆಡಿಎಸ್ ಜನತಾ ಜಲಧಾರೆ ಸಮಾರೋಪ ಸಮಾವೇಶ ನಡೆಯಲಿದೆ. ಸಮಾವೇಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.
- ರಾಜ್ಯದಲ್ಲಿರುವ ವಕ್ಫ್ ಆಸ್ತಿಗಳ ಸಮೀಕ್ಷೆಯನ್ನು ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಈ ಬಾರಿ ಡ್ರೋಣ್ ಮೂಲಕ ಸರ್ವೇ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. ಆಸ್ತಿಗಳ ನಕ್ಷೆಯನ್ನು ಗುರುತಿಸಿ, ಸಂರಕ್ಷಿಸಲು ಸರ್ಕಾರ 2.5 ಕೋಟಿ ಅನುದಾನ ಬಿಡುಗಡೆ ಮಾಡಲಿದೆ ಎಂದು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಎನ್.ಕೆ. ಮೊಹಮ್ಮದ್ ಶಾಫಿ ತಿಳಿಸಿದ್ದಾರೆ.
- ಸರ್ಕಾರಿ ನೌಕರರು ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕಿದೆ. ನಿವೃತ್ತಿಯ ಅಂಚಿನಲ್ಲಿದ್ದಾಗ ಕೆಲಸದ ಬಗ್ಗೆ ಹೆಮ್ಮೆ ಮೂಡುವಂತೆ ಇರಬೇಕು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ತಿಳಿಸಿದ್ದಾರೆ.
- ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಮುಂದುವರಿದೆ. ಕೊರೊನಾ ನಾಲ್ಕನೇ ಅಲೆಯ ಆತಂಕ ಕೊಂಚ ನಿವಾರಣೆಯಾಗುತ್ತಿರುವ ಬೆನ್ನಲ್ಲೇ ಕೊರೊನಾ ಲಸಿಕೆ ಅಭಿಯಾನವನ್ನು ಇನ್ನಷ್ಟು ಹೆಚ್ಚುಗೊಳಿಸಲಾಗಿದೆ. ದೇಶದಲ್ಲಿ ಇದುವರೆಗೆ ಸುಮಾರು 190ಕೋಟಿ 97ಲಕ್ಷಕ್ಕೂ ಅಧಿಕ ಕೋವಿಡ್ ಲಸಿಕೆ ಡೋಸ್ಗಳನ್ನು ನೀಡಲಾಗಿದೆ ಹಾಗೂ ಒಂದೇ ದಿನದಲ್ಲಿ 12 ಲಕ್ಷದ 15 ಸಾವಿರ ಲಸಿಕೆ ಡೋಸ್ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಕ್ರೀಡೆ6 days ago
ಮಧ್ಯಾಹ್ನದ ಪ್ರಮುಖ ಸುದ್ದಿಗಳು
-
ಕ್ರೀಡೆ7 days ago
ಬೆಳಗಿನ ಪ್ರಮುಖ ಸುದ್ದಿಗಳು
-
ದಿನದ ಸುದ್ದಿ6 days ago
ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ : ಆಯೋಗದಿಂದ ವೇಳಾಪಟ್ಟಿ ಪ್ರಕಟ
-
ಸಿನಿ ಸುದ್ದಿ6 days ago
ವಿದ್ಯುತ್ ಶಾಕ್ ನಿಂದ ಜೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಸಾವು
-
ನಿತ್ಯ ಭವಿಷ್ಯ7 days ago
ಈ ರಾಶಿಯವರ ನಿಂತಿದ್ದ ಮದುವೆ ವಿಜೃಂಭಣೆಯಿಂದ ಚಾಲನೆ! ಈ ರಾಶಿವರ ಪ್ರೇಮ ವಿಚಾರದಲ್ಲಿ ಏರುಪೇರು ಸಂಭವ! ಮಂಗಳವಾರ ರಾಶಿ ಭವಿಷ್ಯ-ಮೇ-10,2022
-
ನಿತ್ಯ ಭವಿಷ್ಯ6 days ago
ಈ ರಾಶಿಯ ನವದಂಪತಿಗಳಿಗೆ ಘರ್ಷಣೆ ಸಾಧ್ಯತೆ! ಈ ರಾಶಿಯ ಉದ್ಯೋಗಿಗಳು ಎದುರಾಳಿಯ ಪಿತೂರಿಗಳು ಎದುರಿಸಬೇಕಾಗುವುದು! ಬುಧವಾರ ರಾಶಿ ಭವಿಷ್ಯ-ಮೇ-11,2022
-
ದಿನದ ಸುದ್ದಿ7 days ago
ದಕ್ಷತೆ, ಸಮಯ ಬದ್ಧತೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಮುಖ್ಯಮಂತ್ರಿ ಸೂಚನೆ
-
ದಿನದ ಸುದ್ದಿ5 days ago
ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ರೂಪಿಸಿ ; ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೊಡಿ : ಸಿಎಂ ಬೊಮ್ಮಾಯಿ ಗೆ ಸಿದ್ದರಾಮಯ್ಯ ಆಗ್ರಹ